Tag: Kollywood

  • ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಚಿತ್ರದ ಶೂಟಿಂಗ್ ಶುರು

    ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಚಿತ್ರದ ಶೂಟಿಂಗ್ ಶುರು

    ಸ್. ಶಂಕರ್ ನಿರ್ದೇಶನದ `ಇಂಡಿಯನ್ 2′ (Indian 2) ಚಿತ್ರದ ಶೂಟಿಂಗ್ ಇಂದಿನಿಂದ ಶುರುವಾಗಿದೆ. ಚಿತ್ರೀಕರಣಕ್ಕೆ ಸೂಪರ್ ಸ್ಟಾರ್ ಕಮಲ್ ಹಾಸನ್ (Kamal Hassan) ಹಾಜರ್ ಆಗಿದ್ದಾರೆ. ಸದ್ಯ ಈ ಫೋಟೋ ಮತ್ತು ವೀಡಿಯೋ ಸಖತ್ ವೈರಲ್ ಆಗುತ್ತಿದೆ.

    `ವಿಕ್ರಮ್’ ಚಿತ್ರದ ಸಕ್ಸಸ್ ನಂತರ `ಇಂಡಿಯನ್ 2′ ಚಿತ್ರವನ್ನ ಕಮಲ್ ಹಾಸನ್ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಇಂದಿನಿಂದ ಶುರುವಾಗಿದೆ. ಚಿತ್ರದ ಶೂಟಿಂಗ್‌ಗೆ ನಟ ಕಮಲ್ ಹಾಸನ್ ಕೂಡ ಭಾಗಿಯಾಗಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಫೋಟೋ ಶೇರ್‌ ಮಾಡುವ ಮೂಲಕ ಅಪ್‌ಡೇಟ್‌ ನೀಡಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಮನೆಗೆ ಬ್ರಹ್ಮಾಂಡ ಗುರೂಜಿ ಹೋದರೆ ಮಜವಾಗಿರತ್ತೆ ಅಂತಿದ್ದಾರೆ ನೆಟ್ಟಿಗರು

    ಎಸ್.ಶಂಕರ್ ನಿರ್ದೇಶನದ `ಇಂಡಿಯನ್ 2′ ಸಿನಿಮಾದಲ್ಲಿ ಡಿಫರೆಂಟ್ ಗೆಟಪ್‌ನಲ್ಲಿ ಕಮಲ್ ಹಾಸನ್ ಕಾಣಿಸಿಕೊಳ್ಳುತ್ತಿದ್ದಾರೆ. ಕಮಲ್‌ಗೆ ನಾಯಕಿಯರಾಗಿ ಕಾಜಲ್ ಅಗರ್‌ವಾಲ್, ರಾಕುಲ್ ಪ್ರೀತ್ ಸಿಂಗ್ ನಟಿಸಲಿದ್ದಾರೆ.

    ಬಹುನಿರೀಕ್ಷಿತ `ಇಂಡಿಯನ್ 2′ ಚಿತ್ರದ ಶೂಟಿಂಗ್‌ಗೆ ಚಾಲನೆ ಸಿಕ್ಕಿದೆ. ವಿಕ್ರಮ್‌ ಅವತಾರ ನೋಡಿದ ಅಭಿಮಾನಿಗಳು, ʻಇಂಡಿಯನ್‌ 2ʼ ಚಿತ್ರದಲ್ಲಿ ಕಮಲ್‌ ಹಾಸನ್ ನಟನೆ ನೋಡಲು ಫ್ಯಾನ್ಸ್‌ ಕ್ಯೂರಿಯಸ್‌ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪ್ಪು ನೆನಪಲ್ಲಿ `ಪೊನ್ನಿಯನ್ ಸೆಲ್ವನ್’ ತಂಡಕ್ಕೆ ನಿರೂಪಕಿ ಅನುಶ್ರೀ ವಿಶೇಷ ಗಿಫ್ಟ್

    ಅಪ್ಪು ನೆನಪಲ್ಲಿ `ಪೊನ್ನಿಯನ್ ಸೆಲ್ವನ್’ ತಂಡಕ್ಕೆ ನಿರೂಪಕಿ ಅನುಶ್ರೀ ವಿಶೇಷ ಗಿಫ್ಟ್

    ತಮಿಳಿನ ಬಹುನಿರೀಕ್ಷಿತ ಸಿನಿಮಾ `ಪೊನ್ನಿಯನ್ ಸೆಲ್ವನ್’ (Ponniyin Selvan) ತೆರೆಗೆ ಅಬ್ಬರಿಸಲು ಸಜ್ಜಾಗಿದೆ. ಚಿತ್ರದ ಪ್ರಚಾರ ಕಾರ್ಯ ಕೂಡ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ಈ ವೇಳೆ ಸ್ಯಾಂಡಲ್‌ವುಡ್ ನಟಿ ಕಮ್ ನಿರೂಪಕಿ ಅನುಶ್ರೀ (Anushree) ಅಪ್ಪು ಮುಖವಿರುವ ವಿಶೇಷ ನಾಣ್ಯವನ್ನ ಚಿತ್ರತಂಡಕ್ಕೆ ಗಿಫ್ಟ್ ಮಾಡಿದ್ದಾರೆ.

    `ಮಣಿರತ್ನಂ’ (Maniratnam) ನಿರ್ದೇಶನದ ನಿರೀಕ್ಷಿತ ಸಿನಿಮಾ `ಪೊನ್ನಿಯನ್ ಸೆಲ್ವನ್’ ಚಿತ್ರದಲ್ಲಿ ಐಶ್ವರ್ಯ ರೈ, ವಿಕ್ರಮ್, ಕಾರ್ತಿ, ತ್ರಿಷಾ, ಜಯಂ ರವಿ ಹೀಗೆ ದೊಡ್ಡ ತಾರಾ ಬಳಗವೇ ಈ ಚಿತ್ರದಲ್ಲಿ ನಟಿಸಿದ್ದಾರೆ. ಇದೇ ಸೆಪ್ಟೆಂಬರ್ 30ಕ್ಕೆ ತೆರೆಗೆ ಬರಲು ಈ ಚಿತ್ರ ರೆಡಿಯಾಗಿದೆ. ಹಾಗಾಗಿ ಈ ಚಿತ್ರದ ಪ್ರಚಾರ ಕಾರ್ಯ ಕೂಡ ಚೆನ್ನೈನಲ್ಲಿ ಕೂಡ ಭರ್ಜರಿ ನಡೆದಿದೆ. ಇನ್ನೂ ಈ ಚಿತ್ರತಂಡಕ್ಕೆ ಪುನೀತ್‌ ರಾಜ್‌ಕುಮಾರ್‌ ನೆನಪಿಗಾಗಿ ಕನ್ನಡದ ನಟಿ ಅನುಶ್ರೀ ವಿಶೇಷ ಉಡುಗೊರೆಯೊಂದನ್ನ ನೀಡಿ, ಎಲ್ಲರ ಗಮನ ಸೆಳೆದಿದ್ದಾರೆ. ಈ ಕುರಿತು ನಟ ವಿಕ್ರಮ್ ಪ್ರಭು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಸೋನಂ ಕಪೂರ್ ಮಗುವಿಗೆ ನಾಮಕರಣ: ಮುದ್ದು ಮಗನ ಹೆಸರೇನು ಗೊತ್ತಾ?

    ʻಅಪ್ಪು ಅಣ್ಣನ ಮುಖವಿರುವ ಬೆಳ್ಳಿ ನಾಣ್ಯವನ್ನು ನಮ್ಮ ಚಿತ್ರದ ಪ್ರಚಾರ ಕಾರ್ಯದಲ್ಲಿ ಕನ್ನಡ ಚಿತ್ರರಂಗದ ನಿರೂಪಕಿ ಅನುಶ್ರೀ ಅವರು ಮತ್ತು ಅವರ ತಂಡದಿಂದ ಅಪ್ಪು ಕುರಿತ ನಾಣ್ಯವನ್ನು ಪ್ರತಿಯೊಬ್ಬರಿಗೂ ಉಡುಗೊರೆಯಾಗಿ ನೀಡಿದ್ದರು. ಅಪ್ಪು ಎಂತಹ ಅದ್ಭುತ ವ್ಯಕ್ತಿ, ಅವರ ಪ್ರೀತಿ ಇನ್ನೂ ನಮ್ಮಲ್ಲಿ ಅನೇಕರ ನಡುವೆ ಇದೆ ಎಂದು ನಟ ವಿಕ್ರಮ್ ಪ್ರಭು ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Vikram Prabhu (@iamvikramprabhu)

    ಇನ್ನೂ ನಿರೂಪಕಿ ಅನುಶ್ರೀ ಅವರು ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದು, ಅವರ ನೆನಪಿಗಾಗಿ ಚಿತ್ರತಂಡಕ್ಕೆ ಅಪ್ಪು ನಾಣ್ಯ ನೀಡಿರುವ ಅನುಶ್ರೀ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರ ಪ್ರಶಸ್ತಿ ವಿಜೇತ ನಟಿಯನ್ನೇ ಬಿಡಲಿಲ್ಲ ಬಾಡಿ ಶೇಮಿಂಗ್‌ ಭೂತ

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿಯನ್ನೇ ಬಿಡಲಿಲ್ಲ ಬಾಡಿ ಶೇಮಿಂಗ್‌ ಭೂತ

    ಕಾಲಿವುಡ್‌ನ `ಸೂರರೈ ಪೋಟ್ರು’ (Surarai Potru) ಚಿತ್ರದ ಮೂಲಕ ಗಮನ ಸೆಳೆದ ನಟಿ ಅಪರ್ಣಾ ಬಾಲಮುರಳಿ(Aparna Balamurali) ಮತ್ತೆ ಸುದ್ದಿಯಲ್ಲಿದ್ದಾರೆ. `ಸೂರರೈ ಪೋಟ್ರು’ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿಯ ಗರಿ (National Award Winner) ಮುಡಿಗೇರಿಸಿಕೊಂಡಿದ್ದರು. ಈಗ ಬಾಡಿ ಶೇಮಿಂಗ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ದಪ್ಪಗಾಗಿದ್ದಾರೆ ಎಂದು ಟ್ರೋಲ್ ಮಾಡಿದವರಿಗೆ ಖಡಕ್ ಆಗಿ ನಟಿ ತಿರುಗೇಟು ನೀಡಿದ್ದಾರೆ.

    ತೆಲುಗು ಮತ್ತು ತಮಿಳು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟಿ ಅಪರ್ಣಾ ಬಾಲಮುರಳಿ ಅವರು ಸುಧಾ ಕೊಂಗರ ನಿರ್ದೇಶನದ `ಸೂರರೈ ಪೋಟ್ರು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಬಾಚಿಕೊಂಡರು. ಸೂರ್ಯ ಅವರ ಪತ್ನಿಯ ಪಾತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದರು. ಈಗ ಸಾಲು ಸಾಲು ಚಿತ್ರಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

    ಇನ್ನು ಮೊದಲಿಂದಲೂ ಗುಂಡಗಿದ್ದ ನಟಿ ಅಪರ್ಣಾ ಈಗ ಮತ್ತಷ್ಟು ದಪ್ಪಗಾಗಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಬಾಡಿ ಶೇಮಿಂಗ್ ಕಾಟ ಶುರುವಾಗಿದೆ. ಇತ್ತೀಚೆಗೆ `ನೀತಂ ಒರು ವಾನಂ’ ಅಪರ್ಣಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತೆಲುಗು ಮತ್ತು ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ರಿಲೀಸ್ ಆಗುತ್ತಿದೆ. ನಟಿಯ ಹುಟ್ಟುಹಬ್ಬ ಸಂದರ್ಭದಲ್ಲಿ ಲಂಗ ದಾವಣಿ ಲುಕ್‌ನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿರುವ ಪೋಸ್ಟರ್‌ವೊಂದನ್ನ ರಿಲೀಸ್ ಮಾಡಲಾಗಿತ್ತು. ಅಪರ್ಣಾ ಲುಕ್ ನೋಡಿ ಕೆಲ ನೆಟ್ಟಿಗರು, ಅದೆಷ್ಟು ದಪ್ಪಗಾಗಿದ್ದೀರಾ ನೀವು ಬರೀ ತಾಯಿಯ ಪಾತ್ರಕ್ಕೆ ಲಾಯಕ್ಕು ಎಂದು ನಟಿಗೆ ಟೀಕೆ ಮಾಡಿದ್ದಾರೆ. ಅವರ ಫೋಟೋಗಳನ್ನ ಕೂಟ ಟ್ರೋಲ್ ಮಾಡಿದ್ದಾರೆ. ಇದನ್ನೂ ಓದಿ:‘ಮೀಟು’ ಅನ್ನೋದು ಕಾಮನ್ ಆಗಿದೆ, ಊರು ಅಂದ್ಮೇಲೆ ಸಮಸ್ಯೆ ಇರುತ್ತೆ: ನಿರ್ದೇಶಕ ಶಶಾಂಕ್

    ಇದೀಗ ಟ್ರೋಲಿಗರಿಗೆ ನಟಿ ಅಪರ್ಣಾ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದೇಹದ ತೂಕಕ್ಕೂ ಟ್ಯಾಲೆಂಟ್‌ಗೂ ಯಾವುದೇ ಸಂಬಂಧವಿಲ್ಲ. ದೇಹದಲ್ಲಿನ ಕೆಲ ಸಮಸ್ಯೆಗಳಿಂದ ವ್ಯಕ್ತಿಯ ತೂಕ ಹೆಚ್ಚಿಸುತ್ತದೆ. ನನಗೆ ತಾಯಿ ಪಾತ್ರ ಮಾಡುವಷ್ಟು ವಯಸ್ಸಾಗಿಲ್ಲ. ತೆಳ್ಳಗಿರುವುದು ನಟಿಯಾಗಲು ಇರಬೇಕಾದ ಅರ್ಹತೆಗಳಲ್ಲಿ ಒಂದಲ್ಲ ಎಂದು ಅಪರ್ಣಾ ತಿರುಗೇಟು ನೀಡಿದ್ದಾರೆ. ನಟಿಯ ಪ್ರತಿಕ್ರಿಯೆ ಅಭಿಮಾನಿಗಳ  ಮೆಚ್ಚುಗೆಗೆ ಪಾತ್ರವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ತಮಿಳು ಸಿನಿಮಾ ನಿರ್ಮಾಪಕಿಯಾದ `ಗಾಳಿಪಟ 2′ ನಟಿ ಶರ್ಮಿಳಾ ಮಾಂಡ್ರೆ

    ತಮಿಳು ಸಿನಿಮಾ ನಿರ್ಮಾಪಕಿಯಾದ `ಗಾಳಿಪಟ 2′ ನಟಿ ಶರ್ಮಿಳಾ ಮಾಂಡ್ರೆ

    `ಗಾಳಿಪಟ 2′ (Galipata 2) ಸಕ್ಸಸ್ ನಂತರ ಶರ್ಮಿಳಾ ಮಾಂಡ್ರೆ (Sharmiela Mandre) ಮತ್ತೆ ಸುದ್ದಿಯಲ್ಲಿದ್ದಾರೆ. ಕನ್ನಡದ `ದಸರಾ’ ಚಿತ್ರದ ನಿರ್ಮಾಣದ ನಂತರ ತಮಿಳು ಸಿನಿಮಾ ನಿರ್ಮಾಪಕಿಯಾಗಿ ಶರ್ಮಿಳಾ ಕಾಲಿವುಡ್‌ನತ್ತ ಮುಖ ಮಾಡಿದ್ದಾರೆ.

    `ಸಜನಿ’ (Sajani) ಚಿತ್ರದ ಮೂಲಕ ಧ್ಯಾನ್‌ಗೆ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಲಗ್ಗೆಯಿಟ್ಟ ನಟಿ ಶರ್ಮಿಳಾ ಮಾಂಡ್ರೆ ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ನಾಯಕಿಯಾಗಿ ಗುರುತಿಸಿಕೊಂಡಿದ್ದ ನಟಿ, ದಸರಾ ಚಿತ್ರಕ್ಕೆ ನಿರ್ಮಾಣದ ಜತೆ ನಾಯಕಿಯಾಗಿ ಕೂಡ ನಟಿಸಿದ್ದಾರೆ. `ಗಾಳಿಪಟ 2′ ಚಿತ್ರದ ಸಕ್ಸಸ್ ನಂತರ ತಮಿಳು ಸಿನಿಮಾಗೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

    ತಮಿಳಿನ `ಕಾಧಲ್ ಕೊಂಜಂ ತೂಕಲ’ ಚಿತ್ರ ನಿರ್ಮಾಣಕ್ಕೆ ನಟಿ ಶರ್ಮಿಳಾ ಮಾಂಡ್ರೆ ಮುಂದಾಗಿದ್ದಾರೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಮಲಾ ಪೌಲ್ ನಟಿಸುತ್ತಿದ್ದಾರೆ. ಚಿತ್ರದ ಶೂಟಿಂಗ್ ಲಂಡನ್‌ನಲ್ಲಿ ನಡೆಯುತ್ತಿರುವುದು ವಿಶೇಷ. ಶರ್ಮಿಳಾ ನಿರ್ಮಾಣದ ಈ ಚಿತ್ರಕ್ಕೆ ಬಾಲಾಜಿ ಮೋಹನ್ ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ:ನಾಗಚೈತನ್ಯ- ಸಮಂತಾ ಬ್ರೇಕಪ್ ಬಗ್ಗೆ ಕೊನೆಗೂ ಮೌನ ಮುರಿದ ನಟ ನಾಗಾರ್ಜುನ್

    ಇನ್ನು ಸಿನಿಮಾ ನಿರ್ಮಾಣದ ಜೊತೆ ನಟನೆಯನ್ನು ಕೂಡ ಶರ್ಮಿಳಾ ಸರಿದೂಗಿಸಿಕೊಂಡು ಹೋಗಲಿದ್ದಾರೆ. ನಟಿಯಾಗಿ ಗುರುತಿಸಿಕೊಂಡಿದ್ದ ಶರ್ಮಿಳಾ, ನಿರ್ಮಾಪಕಿಯಾಗಿ ಕೂಡ ಸಕ್ಸಸ್ ಕಾಣುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ಧಾರ್ಥ್‌ ಜೊತೆ ಡ್ಯುಯೆಟ್‌ ಹಾಡಲು ಕಾಲಿವುಡ್‌ಗೆ ಹೊರಟ ಆಶಿಕಾ ರಂಗನಾಥ್

    ಸಿದ್ಧಾರ್ಥ್‌ ಜೊತೆ ಡ್ಯುಯೆಟ್‌ ಹಾಡಲು ಕಾಲಿವುಡ್‌ಗೆ ಹೊರಟ ಆಶಿಕಾ ರಂಗನಾಥ್

    ಸ್ಯಾಂಡಲ್‌ವುಡ್‌ನ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ (Ashika Rangnath) ಇದೀಗ ಕಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಚಂದನವನದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ಪಟಾಕಿ ಪೋರಿ ತಮಿಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷಗೆ ಇಳಿದಿದ್ದಾರೆ. ನಟ ಸಿದ್ಧಾರ್ಥ್‌(Siddarth) ನಾಯಕಿಯಾಗಿ ಆಶಿಕಾ ಎಂಟ್ರಿ ಕೊಡ್ತಿದ್ದಾರೆ.

    `ಕ್ರೇಜಿ ಬಾಯ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಆಶಿಕಾ ರಂಗನಾಥ್ ಎಂಟ್ರಿ ಕೊಟ್ಟರು. ಬಳಿಕ ಮುಗುಳುನಗೆ, ರ‍್ಯಾಂಬೋ 2, ಮದಗಜ, ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡರು. ಕನ್ನಡ ಚಿತ್ರರಂಗದಲ್ಲಿ ಸಖತ್ ನೇಮ್ ಫೇಮು ಇರುವಾಗಲೇ ಕಾಲಿವುಡ್‌ನಿಂದ(Kollywood) ಭರ್ಜರಿ ಆಫರ್ಸ್‌ ಆಶಿಕಾಗೆ ಅರಸಿ ಬಂದಿದೆ. ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್‌ಗೆ ನಾಯಕಿಯಾಗಿ ಪಟಾಕಿ ಪೋರಿ ಎಂಟ್ರಿ ಕೊಡ್ತಿದ್ದಾರೆ. ಇದನ್ನೂ ಓದಿ:‘ಜೊತೆ ಜೊತೆಯಲಿ’ ಸೀರಿಯಲ್ ಮತ್ತೊಂದು ಟ್ವಿಸ್ಟ್ : ಆರ್ಯವರ್ಧನ್ ಕೊಲ್ಲಿಸೋಕೆ ಅನುನೇ ಕೊಟ್ಳು ಸುಪಾರಿ

    ಎನ್. ರಾಜಶೇಖರ್ ನಿರ್ದೇಶನದ ಹೆಸರಿಡದ ಹೊಸ ಚಿತ್ರದಲ್ಲಿ ಸಿದ್ಧಾರ್ಥ್‌ಗೆ ಜೋಡಿಯಾಗಿ ಆಶಿಕಾ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮುಹೂರ್ತ ಕೂಡ ಇಂದು (ಸೆ.15) ಚೆನ್ನೈನಲ್ಲಿ ನೆರವೇರಿದೆ. ಸದ್ಯದಲ್ಲೇ ಈ ಚಿತ್ರದ ಶೂಟಿಂಗ್‌ ಶುರುವಾಗಲಿದೆ. ಈ ಸಂತಸದ ಸುದ್ದಿಯನ್ನು ಫೋಟೋ ಶೇರ್ ಮಾಡುವ ಮೂಲಕ ಸ್ವತಃ ಆಶಿಕಾ, ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ನಟ ಸಿದ್ಧಾರ್ಥ್ ಮತ್ತು ಚಿತ್ರತಂಡದ ಜತೆ ಖುಷಿಯಿಂದ ಆಶಿಕಾ ಕ್ಯಾಮೆರಾಗೆ ಪೋಸ್ ಮಾಡಿದ್ದಾರೆ. ನೆಚ್ಚಿನ ನಟಿಗೆ ಫ್ಯಾನ್ಸ್‌ ಶುಭಹಾರೈಸಿದ್ದಾರೆ.

     

    View this post on Instagram

     

    A post shared by Ashika Ranganath (@ashika_rangnath)

    ಭಿನ್ನ ಕಥೆಯ ಮೂಲಕ ತಮಿಳು ಚಿತ್ರರಂಗದಲ್ಲೂ ಮಿಂಚಲು ಕನ್ನಡದ ನಟಿ ಆಶಿಕಾ ಸಜ್ಜಾಗಿದ್ದಾರೆ. ಪರಭಾಷೆಯ ಚಿತ್ರರಂಗದಲ್ಲೂ ಹವಾ ಕ್ರಿಯೇಟ್ ಮಾಡುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ನಟ ನರೇಶ್ ಮನೆಯಲ್ಲೇ ರಮ್ಯಾ ವಾಸ್ತವ್ಯ: ಪವಿತ್ರಾ ಲೋಕೇಶ್ ನಿಂದ ಪತಿಯ ದೂರ ಮಾಡಲು ತಂತ್ರ

    ನಟ ನರೇಶ್ ಮನೆಯಲ್ಲೇ ರಮ್ಯಾ ವಾಸ್ತವ್ಯ: ಪವಿತ್ರಾ ಲೋಕೇಶ್ ನಿಂದ ಪತಿಯ ದೂರ ಮಾಡಲು ತಂತ್ರ

    ತೆಲುಗಿನ ಖ್ಯಾತ ನಟ ನರೇಶ್ (Naresh) ಮತ್ತು ಬೆಂಗಳೂರಿನ ರಮ್ಯಾ ದಾಂಪತ್ಯ ಜೀವನದ ರಾದ್ಧಾಂತ ಸ್ವಲ್ಪ ತಿಂಗಳ ಮಟ್ಟಿಗೆ ತಣ್ಣಗಾಗಿತ್ತು. ಬೆಂಗಳೂರಿನಲ್ಲಿ ಇಬ್ಬರೂ ಮಾಡಿದ ಆರೋಪ ಪ್ರತ್ಯಾರೋಪದ ನಂತರ ನರೇಶ್ ಮತ್ತು ಪವಿತ್ರಾ ಲೋಕೇಶ್ ಮೈಸೂರಿನ ಲಾಡ್ಜ್ ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಅಲ್ಲಿಂದ ಪ್ರಕರಣಕ್ಕೆ ಬೇರೆ ತಿರುವು ಸಿಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ನರೇಶ್ ಮತ್ತು ಪವಿತ್ರಾ ಲೋಕೇಶ್ ಹೈದರಾಬಾದ್ಗೆ (Hyderabad) ಶಿಫ್ಟ್ ಆದರು.

    ಇತ್ತ ರಮ್ಯಾ (Ramya) ಅವರ ತಾಯಿಗೆ ಹುಷಾರಿಲ್ಲದ ಕಾರಣಕ್ಕಾಗಿ ಮತ್ತು ನರೇಶ್ ಈ ಎಲ್ಲ ಪ್ರಕರಣವನ್ನು ಕೋರ್ಟಿನಲ್ಲೇ ನೋಡಿಕೊಳ್ಳುತ್ತೇನೆ ಎಂದು ಪರಿಣಾಮ ಇಡೀ ಪ್ರಕರಣ ಕೆಲವು ತಿಂಗಳ ಮಟ್ಟಿಗೆ ತಣ್ಣಗಾಗಿತ್ತು. ಇಬ್ಬರೂ ತಮ್ಮ ಪಾಡಿಗೆ ತಾವು ಇದ್ದುಕೊಂಡು ಕೋರ್ಟ್ ನಲ್ಲಿ ಫೈಟ್ ಮಾಡುತ್ತಾರೆ ಎಂದುಕೊಳ್ಳುವಷ್ಟರಲ್ಲಿ ದಿಢೀರ್ ಅಂತ ನರೇಶ್ ಮನೆಯಲ್ಲಿ ರಮ್ಯಾ ಕಾಣಿಸಿಕೊಂಡಿದ್ದಾರೆ. ಆಗಿದೆಲ್ಲ ಸರಿ ಮಾಡಿ, ಗಂಡನ ಜೊತೆಯೇ ಇರುವುದಾಗಿ ಅವರು ಅಲ್ಲಿಗೆ ಹೋಗಿದ್ದಾರೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

     

    ಇತ್ತ ಪವಿತ್ರಾ ಲೋಕೇಶ್ (Pavithra Lokesh) ಜೊತೆ ತೋಟದ ಮನೆಯಲ್ಲಿ ನರೇಶ್ ಇದ್ದಾರೆ ಎಂದು ಹೇಳಲಾಗುತ್ತಿದೆ. ರಮ್ಯಾ ಮನೆಗೆ ಬಂದ ಹಿನ್ನೆಲೆಯಲ್ಲಿ ನರೇಶ್ ಗೊಂದಲಕ್ಕೀಡಾಗಿದ್ದಾರೆ. ಅಲ್ಲದೇ, ಪವಿತ್ರಾ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ರಮ್ಯಾ ತಾಕೀತು ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮತ್ತೆ ಗಂಡನ ಜೊತೆ ಬದುಕು ಮಾಡುತ್ತೇನೆ ಎಂದು ನರೇಶ್ ಕುಟುಂಬಕ್ಕೆ ತಿಳಿಸಿದ್ದಾರೆ ಎನ್ನುವುದು ಸದ್ಯಕ್ಕಿರುವ ವರ್ತಮಾನ. ರಮ್ಯಾ ವಾಪಸ್ಸು ಮನೆಗೆ ಬರುತ್ತಿದ್ದಂತೆಯೇ ಪವಿತ್ರಾ ಕೂಡ ಗಲಿಬಿಲಿಗೊಂಡಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ‘ವಿಡುದಲೈ’ ಸಿನಿಮಾದ ಭರ್ಜರಿ ಆ್ಯಕ್ಷನ್ ದೃಶ್ಯಗಳ ಶೂಟಿಂಗ್ ನಲ್ಲಿ ವಿಜಯ್ ಸೇತುಪತಿ

    ‘ವಿಡುದಲೈ’ ಸಿನಿಮಾದ ಭರ್ಜರಿ ಆ್ಯಕ್ಷನ್ ದೃಶ್ಯಗಳ ಶೂಟಿಂಗ್ ನಲ್ಲಿ ವಿಜಯ್ ಸೇತುಪತಿ

    ಕಾಲಿವುಡ್ (Kollywood) ನ ಜನಪ್ರಿಯ ನಿರ್ದೇಶಕ ವೆಟ್ರಿಮಾರನ್ (Vetrimaran) ನಿರ್ದೇಶನದ ‘ವಿಡುದಲೈ’ (Vidudalai) ಚಿತ್ರವು ಎರಡು ಭಾಗಗಳಲ್ಲಿ ನಿರ್ಮಾಣವಾಗಲಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದಷ್ಟೇ ಹೊರಬಿದ್ದಿತ್ತು. ಈಗ ಈ ಚಿತ್ರಕ್ಕಾಗಿ ಕೊಡೈಕೆನಾಲ್ನಲ್ಲಿ ವಿಜಯ್ ಸೇತುಪತಿ (Vijay Sethupathi), ಸೂರಿ ಮತ್ತು ನೂರಾರು ಫೈಟರ್ಗಳ ಅಭಿನಯದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಆರ್‌ಎಸ್ ಇನ್ಫೋಟೈನ್‌ಮೆಂಟ್ನಡಿ ಎಲ್ಡ್ರೆಡ್ ಕುಮಾರ್ ಅವರು ‘ವಿಡುದಲೈ’ ಚಿತ್ರವನ್ನು ನಿರ್ಮಿಸುತ್ತಿದ್ದು, ರೆಡ್ ಜೈಂಟ್ ಮೂವೀಸ್ನ  ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.

    ಅದ್ಧೂರಿ ನಿರ್ಮಾಣಕ್ಕಾಗಿ ಸಾಕಷ್ಟು ಸುದ್ದಿಯಾಗಿರುವ ಈ ಚಿತ್ರಕ್ಕಾಗಿ ಇತ್ತೀಚೆಗೆ ಪೀಟರ್ ಹೇಯ್ನ್ ಅವರ ನೇತೃತ್ವದಲ್ಲಿ ಮೈನವಿರೇಳಿಸುವಂತಹ ಸಾಹಸ ಸನ್ನಿವೇಶಗಳನ್ನು ಚಿತ್ರೀಕರಿಸಲಾಗಿದೆ. ಈ ಸಾಹಸ ದೃಶ್ಯಗಳಿಗಾಗಿಯೇ ಬಲ್ಗೇರಿಯಾದಿಂದ ಫೈಟರ್ಗಳನ್ನು ಕರೆಸಲಾಗಿರುವುದು ವಿಶೇಷ. ಕೊಡೈಕೆನಾಲ್‌ನ ಪೂಂಬರೈನ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ಈ ಸನ್ನಿವೇಶಗಳು ಚಿತ್ರದ ಹೈಲೈಟ್ ಆಗಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಹೆರಿಗೆಯ ನಂತರ ಬದಲಾಯ್ತು ಪ್ರಣಿತಾ ಸುಭಾಷ್ ಲುಕ್

    ‘ವಿಡುದಲೈ’ ಚಿತ್ರವು ಈಗಾಗಲೇ ತನ್ನ ಅದ್ಭುತ ತಾರಾಗಣ, ತಾಂತ್ರಿಕ ವರ್ಗ, ಮೇಕಿಂಗ್ ಮತ್ತು ಫಸ್ಟ್ಲುಕ್ ಪೋಸ್ಟರ್ಗಳಿಂದ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಆಡಿಯೋ, ಟ್ರೈಲರ್ ಮತ್ತು ಚಿತ್ರ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸಲಾಗುತ್ತದೆ.

    ‘ವಿಡುದಲೈ’ ಚಿತ್ರದ ತಾರಾಬಳಗದಲ್ಲಿ ವಿಜಯ್ ಸೇತುಪತಿ, ಸೂರಿ (Suri), ಭವಾನಿ ಶ್ರೀ, ಪ್ರಕಾಶ್ ರಾಜ್, ಗೌತಮ್ ವಾಸುದೇವ್ ಮೆನನ್, ರಾಜೀವ್ ಮೆನನ್, ಚೇತನ್ ಮತ್ತು ಅನೇಕ ಪ್ರಮುಖ ನಟರು ನಟಿಸಿದ್ದು,  ಇಸೈಜ್ಞಾನಿ ಇಳಯರಾಜ (Ilayaraja) ಸಂಗೀತ ಸಂಯೋಜಿಸುತ್ತಿದ್ದಾರೆ. ವೇಲ್ರಾಜ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವೆಟ್ರಿಮಾರನ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಮಲ್ ಹಾಸನ್ ಸಿನಿಮಾ ಸೆಟ್‌ಗೆ ಆಗಮಿಸಿದ್ದಕ್ಕೆ ಬ್ರಿಟಿಷರ ಕೆಂಗಣ್ಣಿಗೆ ಗುರಿಯಾಗಿದ್ದ ರಾಣಿ ಎಲಿಜಬೆತ್

    ಕಮಲ್ ಹಾಸನ್ ಸಿನಿಮಾ ಸೆಟ್‌ಗೆ ಆಗಮಿಸಿದ್ದಕ್ಕೆ ಬ್ರಿಟಿಷರ ಕೆಂಗಣ್ಣಿಗೆ ಗುರಿಯಾಗಿದ್ದ ರಾಣಿ ಎಲಿಜಬೆತ್

    ಇಂಗ್ಲೆಂಡ್ ರಾಣಿ ಎಲಿಜಬೆತ್ (Queen Elizabeth) ನಿನ್ನೆ ತಡರಾತ್ರಿ ವಿಧಿವಶರಾಗಿದ್ದಾರೆ. ಸಾಕಷ್ಟು ವರ್ಷಗಳಿಂದ ರಾಣಿಯಾಗಿದ್ದ ಎಲಿಜಬೆತ್ ಬಗ್ಗೆ ಇದೀಗ ಅಚ್ಚರಿಯ ವಿಚಾರವೊಂದು ಹೊರ ಬಿದ್ದಿದೆ. ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ರಾಣಿ ಎಲಿಜಬೆತ್ ತಮ್ಮ ಅಧಿಕಾರದ ಅವಧಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಕಮಲ್ ಹಾಸನ್ (Kamal Hassan) ನಟನೆಯ ಹೊಸ ಸಿನಿಮಾ ಸೆಟ್‌ಗೆ ಭೇಟಿ ನೀಡಿದ್ದು, ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಭಾರೀ ಟೀಕೆಗೂ ಗುರಿಯಾಗಿದ್ದರು.

    1997ರಲ್ಲಿ ಕಮಲ್ ಹಾಸನ್ ನಿರ್ದೇಶಿಸಿ, ನಿರ್ಮಿಸಿ, ನಟಿಸುತ್ತಿದ್ದ `ಮರುದನಯಾಗಂ’ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ಸೆಟ್‌ಗೆ ರಾಣಿ ಎಲಿಜಬೆತ್ ಭೇಟಿ ನೀಡಿದ್ದರು. ಸುಮಾರು 20 ನಿಮಿಷಗಳ ಕಾಲ ಸಿನಿಮಾ ಸೆಟ್‌ನಲ್ಲಿ ಕಾಲ ಕಳೆದರು. ಕಮಲ್ ಹಾಸನ್ ಹಾಗೂ ಇತರ ಗಣ್ಯರೊಟ್ಟಿಗೆ ಮಾತನಾಡಿದ್ದರು. ಆದರೆ ಈ ಭೇಟಿ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಟೀಕೆಗೆ ಗುರಿ ಮಾಡಿತ್ತು. ಚೆನ್ನೈನ ಎಂಜಿಆರ್ ಸ್ಟುಡಿಯೋದಲ್ಲಿ ಯುದ್ಧದ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಾಣಿ ಎಲಿಜಬೆತ್(Queen Elizabeth) ಚಿತ್ರೀಕರಣ ಸೆಟ್‌ಗೆ ಆಗಮಿಸಿ, ಕಮಲ್ ಹಾಸನ್ ಅವರೊಟ್ಟಿಗೆ ಮಾತುಕತೆ ನಡೆಸಿದರು. ಕತೆಯ ಬಗ್ಗೆ ತಿಳಿದುಕೊಂಡರು. ಕಮಲ್‌ರ ಆಗಿನ ಪತ್ನಿ ಸಾರಿಕ ಜೊತೆಗೂ ಮಾತನಾಡಿದರು. ಇದನ್ನೂ ಓದಿ:ಸೆಟ್ಟೇರಿತು ಭಾವನಾ ಮೆನನ್- ವಿಜಯ್ ರಾಘವೇಂದ್ರ ನಟನೆಯ `ಕೇಸ್ ಆಫ್ ಕೊಂಡಾಣ’ ಚಿತ್ರ

    ಈ ಭೇಟಿ ಯಾವ ರೀತಿ ಸುದ್ದಿ ಮಾಡಿತ್ತು ಎಂದರೆ, ಬ್ರಿಟಿಷರ ವಿರುದ್ಧ ದ್ವೇಷ ಸಾರುವ ಕಥೆ, ನಮ್ಮವರನ್ನು ಕೆಟ್ಟವರೆಂದು ಬಿಂಬಿಸುವ ಸಿನಿಮಾ ಸೆಟ್‌ಗೆ ಭೇಟಿ ನೀಡಿದ್ದಾರೆ ಎಂದು ದೊಡ್ಡ ಮಟ್ಟದಲ್ಲಿ ವರದಿಯಾಗಿತ್ತು. ಈ ಸಿನಿಮಾಗೆ ಭೇಟಿ ನೀಡಿರುವುದು ಬ್ರಿಟಿಷರ ಗೌರವಕ್ಕೆ ಎಲಿಜಬೆತ್ ಧಕ್ಕೆ ತಂದಿದ್ದಾರೆ ಎಂದು ಭಾರೀ ವಿವಾದಕ್ಕೆ ಗುರಿಯಾಗಿದ್ದರು. ಯಾವುದೇ ಟೀಕೆಗೂ ರಾಣಿ ಎಲಿಜಬೆತ್ ಪ್ರತಿಕ್ರಿಯೆ ನೀಡಿರಲಿಲ್ಲ.

    ಇನ್ನು ಕಮಲ್ ಹಾಸನ್ ನಟನೆಯ `ಮರುದನಯಾಗಂ’ ಸಿನಿಮಾ 85 ಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿತ್ತು. ಇನ್ನೂ ಈ ಚಿತ್ರದ ಅತಿಯಾದ ಬಜೆಟ್‌ನಿಂದಲೇ ಈ ಚಿತ್ರ ನಿಂತಿಹೋಗಿತ್ತು.

    Live Tv
    [brid partner=56869869 player=32851 video=960834 autoplay=true]

  • ರವೀಂದರ್ ಮದುವೆಗೂ ಮುನ್ನ ಸಹ ನಟನೊಂದಿಗೆ ಮಹಾಲಕ್ಷ್ಮಿಗೆ ಸಂಬಂಧವಿತ್ತು: ಸ್ಪೋಟಕ ಹೇಳಿಕೆ ನೀಡಿದ ನಟನ ಪತ್ನಿ

    ರವೀಂದರ್ ಮದುವೆಗೂ ಮುನ್ನ ಸಹ ನಟನೊಂದಿಗೆ ಮಹಾಲಕ್ಷ್ಮಿಗೆ ಸಂಬಂಧವಿತ್ತು: ಸ್ಪೋಟಕ ಹೇಳಿಕೆ ನೀಡಿದ ನಟನ ಪತ್ನಿ

    ಳೆದ ನಾಲ್ಕೈದು ದಿನದಿಂದ ತಮಿಳು ನಾಡು ಮಾಧ್ಯಮಗಳಲ್ಲಿ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಮದುವೆಯದ್ದೇ ಸುದ್ದಿ. ಇಬ್ಬರದ್ದೂ ಎರಡನೆಯ ಮದುವೆ ಅಂತಾದರೆ, ಮತ್ತೊಂದು ಮಿಸ್ ಮ್ಯಾಚ್ ಮದುವೆ ಎಂಬ ಟ್ರೋಲ್. ಅಲ್ಲದೇ, ರವೀಂದರ್ ಬಳಿ ಇರುವ ಆಸ್ತಿಗಾಗಿ ಮಹಾಲಕ್ಷ್ಮಿ ಮದುವೆಯಾಗಿದ್ದಾರೆ ಎನ್ನುವ ಆರೋಪ. ಈ ನಡುವೆ ಮಹಾಲಕ್ಷ್ಮಿ ಬಗ್ಗೆ ಹಿಂದೆ ನಡೆದಿದೆ ಎನ್ನಲಾದ ಸ್ಪೂಟಕ ವಿಷಯವೊಂದು ಮತ್ತೆ ಮುನ್ನೆಲೆಗೆ ಬಂದಿದೆ.

    ಮಹಾಲಕ್ಷ್ಮಿಗೆ ಈ ಮೊದಲೇ ಮದುವೆ ಆಗಿತ್ತು. ಎರಡು ಮಕ್ಕಳು ಕೂಡ ಇವೆ. ಮೊದಲ ಗಂಡನಿಂದ ಡಿವೋರ್ಸ್ ಪಡೆದ ನಂತರ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನ ರಾತ್ರಿಯೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನಟಿ ರಿಚಾ ಚಡ್ಡಾ, ಅಲಿ ಫಜಲ್

    ರವೀಂದರ್ ಚಂದ್ರಶೇಖರನ್ ಜೊತೆ ಮಹಾಲಕ್ಷ್ಮಿ ಮದುವೆ ಆಗುತ್ತಿದ್ದಂತೆಯೇ ಈ ವಿಷಯ ತಮಿಳು ಮಾಧ್ಯಮದಲ್ಲಿ ಮತ್ತೆ ಪ್ರಮುಖ ಸುದ್ದಿಯಾಗಿದೆ. ಮಹಾಲಕ್ಷ್ಮಿ ಮತ್ತು ಈಶ್ವರ್ ಲವ್ವಿ ಡವ್ವಿ ವಿಚಾರ ರವೀಂದರ್ ಅವರಿಗೂ ಗೊತ್ತಿತ್ತು ಎಂದು ವರದಿಯಾಗಿದೆ. ಎಲ್ಲ ಗೊತ್ತಿದ್ದರೂ ಮಹಾಲಕ್ಷ್ಮಿಯನ್ನು ರವೀಂದರ್ ಮದುವೆ ಆಗಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗುತ್ತಿದೆ. ಮದುವೆ ಅವರ ಸ್ವಂತ ವಿಚಾರ. ಅಷ್ಟಕ್ಕೂ ಇಬ್ಬರೂ ಕಾನೂನು ಬದ್ಧವಾಗಿಯೇ ಮದುವೆಯಾಗಿದ್ದಾರೆ. ಆದರೂ, ಜಯಶ್ರೀ ಆರೋಪ ಇದೀಗ ಮುನ್ನೆಲೆಗೆ ಬಂದಿದೆ.

    ರವೀಂದರ್ ಮತ್ತು ಮಹಾಲಕ್ಷ್ಮಿ ಮದುವೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದರೂ, ಈ ಜೋಡಿ ಇದೀಗ ಹನಿಮೂನ್ ಗೆ ಹೊಗಲು ಸಿದ್ಧತೆ ಮಾಡಿಕೊಂಡಿದೆ. ಪರಸ್ಪರ ಇಬ್ಬರೂ ಗೌರವದ ಮಾತುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾ ಒಂದು ಚಿಕ್ಕ ಕುಟುಂಬ, ಇಲ್ಲಿ ಅಸೂಯೆಗೆ ಜಾಗವಿಲ್ಲ: ಕಮಲ್ ಹಾಸನ್

    ಸಿನಿಮಾ ಒಂದು ಚಿಕ್ಕ ಕುಟುಂಬ, ಇಲ್ಲಿ ಅಸೂಯೆಗೆ ಜಾಗವಿಲ್ಲ: ಕಮಲ್ ಹಾಸನ್

    ಕಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ `ಪೊನ್ನಿಯನ್ ಸೆಲ್ವನ್'(Ponniyin Selvan) ಚಿತ್ರ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಈ ಚಿತ್ರದ ಅದ್ದೂರಿ ಇವೆಂಟ್‌ನಲ್ಲಿ ರಜನಿಕಾಂತ್(Rajanikanth) ಮತ್ತು ಕಮಲ್ ಹಾಸನ್ (Kamal Haasan) ಕೂಡ ಭಾಗವಹಿಸಿ, ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ.

    ಮಣಿರತ್ನಂ (Mani Ratnam) ನಿರ್ದೇಶನದ `ಪೊನ್ನಿಯನ್ ಸೆಲ್ವನ್’ ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ರಜನಿಕಾಂತ್ ಮತ್ತು ಕಮಲ್ ಹಾಸನ್ ಹೈಲೈಟ್ ಆಗಿದ್ದರು. ಈ ವೇಳೆ ರಜನಿಕಾಂತ್ ಜತೆಗಿನ ಸ್ನೇಹ ಮತ್ತು ಸಿನಿಮಾ ಕುಟುಂಬವನ್ನ ಉದ್ದೇಶಿಸಿ ಕಮಲ್ ಹಾಸನ್ ಮಾತನಾಡಿದ್ದಾರೆ. ಇದನ್ನೂ ಓದಿ:`ಪೊನ್ನಿಯನ್ ಸೆಲ್ವನ್’ ಇವೆಂಟ್‌ನಲ್ಲಿ ಬ್ಲ್ಯಾಕ್ ಬ್ಯೂಟಿಯಾಗಿ ಮಿಂಚಿದ ಐಶ್ವರ್ಯಾ ರೈ

    40 ವರ್ಷಗಳಿಂದ ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರು ಸ್ನೇಹಿತರು. ನಮ್ಮ ನಡುವೆ ಅಸೂಯೆಗೆ ಜಾಗವಿಲ್ಲ. ಸಿನಿಮಾ ಒಂದು ಕುಟುಂಬ, ಇಲ್ಲಿ ಅಸೂಯೆಗೆ ಜಾಗವಿಲ್ಲ ಎಂದು ನಟ ಕಮಲ್ ಮಾತನಾಡಿದ್ದಾರೆ. ಇನ್ನು 30 ವರ್ಷಗಳ ಹಿಂದೆಯೇ `ಪೊನ್ನಿಯನ್ ಸೆಲ್ವನ್’ ಚಿತ್ರವನ್ನು ಕಮಲ್ ಮತ್ತು ರಜನಿಕಾಂತ್ ಒಟ್ಟಿಗೆ ಮಾಡಲು ನಿರ್ಧರಿಸಲಾಗಿತ್ತು ಎಂಬ ವಿಚಾರ ಈ ಇವೆಂಟ್‌ನಲ್ಲಿ ಬಹಿರಂಗಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]