Tag: Kollywood

  • `ಪೊನ್ನಿಯನ್ ಸೆಲ್ವನ್’ ಇವೆಂಟ್‌ನಲ್ಲಿ ಬ್ಲ್ಯಾಕ್ ಬ್ಯೂಟಿಯಾಗಿ ಮಿಂಚಿದ ಐಶ್ವರ್ಯಾ ರೈ

    `ಪೊನ್ನಿಯನ್ ಸೆಲ್ವನ್’ ಇವೆಂಟ್‌ನಲ್ಲಿ ಬ್ಲ್ಯಾಕ್ ಬ್ಯೂಟಿಯಾಗಿ ಮಿಂಚಿದ ಐಶ್ವರ್ಯಾ ರೈ

    ಬಾಲಿವುಡ್ ಬ್ಯೂಟಿ ಐಶ್ವರ್ಯಾ ರೈ(Aishwarya rai) ಇದೀಗ ಮತ್ತೆ ಕಾಲಿವುಡ್‌ನತ್ತ ಮುಖ ಮಾಡಿದ್ದಾರೆ. `ಪೊನ್ನಿಯನ್ ಸೆಲ್ವನ್’ ಚಿತ್ರದ ಮೂಲಕ ಐಶ್ವರ್ಯ ರೈ ಸೌಂಡ್ ಮಾಡ್ತಿದ್ದಾರೆ. ಸದ್ಯ ಈ ಚಿತ್ರದ ಇವೆಂಟ್‌ನಲ್ಲಿ ರಾಣಿ ನಂದಿನಿ ಬ್ಲ್ಯಾಕ್ ಬ್ಯೂಟಿ ಆಗಿ ಮಿಂಚಿದ್ದಾರೆ.

    ಬಿಟೌನ್‌ನ ಬಟ್ಟಲು ಕಂಗಳ ಸುಂದರಿ ಐಶ್ವರ್ಯಾ ರೈ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಸದ್ಯ ಮಣಿರತ್ನಂ (Mani Ratnam) ನಿರ್ದೇಶನದ `ಪೊನ್ನಿಯನ್ ಸೆಲ್ವನ್’ (Ponniyin Selvan) ಚಿತ್ರದಲ್ಲಿ ರಾಣಿ ನಂದಿನಯಾಗಿ ಮಿಂಚ್ತಿದ್ದಾರೆ. ಐಶ್ ಫಸ್ಟ್ ಲುಕ್ ರಿವೀಲ್ ಆದಾಗಲೇ ನೋಡುಗರ ಗಮನ ಸೆಳೆದಿತ್ತು. ಇದೀಗ ಈ ಚಿತ್ರದ ಟ್ರೈಲರ್ ಲಾಂಚ್‌ನಲ್ಲೂ ಐಶ್ವರ್ಯ ರೈ ಬ್ಲ್ಯಾಕ್ ಬ್ಯೂಟಿ ಆಗಿ ಕಂಗೊಳಿಸಿದ್ದಾರೆ.

    ಈ ಚಿತ್ರದ ಟ್ರೈಲರ್ ಲಾಂಚ್‌ನಲ್ಲಿ ಎಲ್ಲರ ಕಣ್ಣು ಕುಕ್ಕುವಂತೆ ಐಶ್ವರ್ಯಾ ರೈ ಕಾಣಿಸಿಕೊಂಡಿದ್ದಾರೆ. ಬ್ಲ್ಯಾಕ್ ಕಲರ್ ಸೆಲ್ವಾರ್ ಧರಿಸಿ, ಕಪ್ಪು ಬಣ್ಣದ ಬಿಂದಿ ಧರಿಸಿದ್ದಾರೆ. ಹಸಿರು ಬಣ್ಣದ ಗ್ರ್ಯಾಂಡ್ ಬಳೆ ಹಾಕಿದ್ದಾರೆ. ಸಿಂಪಲ್ ಮೇಕಪ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಒಟ್ನಲ್ಲಿ ಐಶ್ ಲುಕ್ ಈಗ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನೂ ಓದಿ:ರಾಕೇಶ್‌ಗಾಗಿ ಬಿಗ್ ಬಾಸ್ ಮನೆನಾ ಎರಡು ಮನೆ ಮಾಡಬೇಕಾ: ಸೋನು ವಿರುದ್ಧ ಗುರೂಜಿ ಗರಂ

     

    View this post on Instagram

     

    A post shared by ???????????????????? (@aishposts)

    ಮಣಿರತ್ನಂ ನಿರ್ದೇಶನದ `ಪೊನ್ನಿಯನ್ ಸೆಲ್ವನ್’ ಸೆಪ್ಟೆಂಬರ್ 30ಕ್ಕೆ ತೆರೆಗೆ ಅಪ್ಪಳಿಸಲಿದೆ. ವಿಕ್ರಮ್, ತ್ರಿಶಾ, ಐಶ್ವರ್ಯಾ ರೈ, ಕಾರ್ತಿ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಮಂತ ಪಾತ್ರಕ್ಕೆ ಡಬ್ ಮಾಡಲಾರೆ ಎಂದು ಘೋಷಿಸಿದ ಗಾಯಕಿ ಚಿನ್ಮಯಿ ಶ್ರೀಪಾದ್

    ಸಮಂತ ಪಾತ್ರಕ್ಕೆ ಡಬ್ ಮಾಡಲಾರೆ ಎಂದು ಘೋಷಿಸಿದ ಗಾಯಕಿ ಚಿನ್ಮಯಿ ಶ್ರೀಪಾದ್

    ಮಿಳು ಸಿನಿಮಾ ರಂಗದ ಖ್ಯಾತ ಗಾಯಕಿ, ಡಬ್ಬಿಂಗ್ ಕಲಾವಿದ ಚಿನ್ಮಯಿ ಶ್ರೀಪಾದ್, ತಮಿಳು ಸಿನಿಮಾ ರಂಗದಲ್ಲಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಈ ಹಿಂದೆ ಸ್ಟಾರ್ ನಟ ನಟಿಯರ ಖಾಸಗಿ ಸಂಗತಿಗಳನ್ನು ಆಚೆ ಹಾಕಿ, ಸಿನಿಮಾ ರಂಗದಲ್ಲೇ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ಚಿನ್ಮಯಿ ಹಲವು ದಿನಗಳಿಂದ ಸಮಂತಾ ಜೊತೆಗೆ ಮುಸುಕಿನ ಗುದ್ದಾಟ ನಡೆಸಿದ್ದರು. ಇದೀಗ ಶಾಶ್ವತವಾದ ಸಂಬಂಧವನ್ನು ಕಳೆದುಕೊಳ್ಳಲು ಅವರು ನಿರ್ಧಾರಿಸಿದ್ದಾರೆ.

    ಸಮಂತಾ ಶರೀರವಾದರೆ, ಚಿನ್ಮಯಿ ಶ್ರೀಪಾದ್ ಶಾರೀರದಂತಿದ್ದರು. ಸಮಂತಾ ಅವರ ಬಹುತೇಕ ಪಾತ್ರಗಳಿಗೆ ಚಿನ್ಮಯಿ ಅವರೇ ಡಬ್ ಮಾಡುತ್ತಿದ್ದರು. ಹಾಗಾಗಿ ಸಮಂತಾ ಪಾತ್ರಗಳಿಗೆ ಬೇರೆಯದ್ದೇ ತೂಕ ಇರುತ್ತಿತ್ತು. ಇದೀಗ ಚಿನ್ಮಯಿ ಅವರು ಸಮಂತಾ ಮೇಲೆ ಕೋಪ ಮಾಡಿಕೊಂಡಿದ್ದು, ಇನ್ಮುಂದೆ ಸಮಂತಾ ಪಾತ್ರಕ್ಕೆ ತಾವು ಡಬ್ ಮಾಡುವುದಿಲ್ಲಿ ಎಂದು ಘೋಷಿಸಿದ್ದಾರೆ. ಅಲ್ಲದೇ, ಇನ್ಮುಂದೆ ಯಾವುದೇ ರೀತಿಯ ಕಾಂಟ್ಯಾಕ್ಟ್ ಕೂಡ ಇಟ್ಟುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಯಶ್ರೀ ಆರಾಧ್ಯ

    ಹಲವು ತಿಂಗಳುಗಳಿಂದ ಸಮಂತಾ ಮತ್ತು ಚಿನ್ಮಯಿ ಹಲವು ಕಾರಣಗಳಿಂದಾಗಿ ಮನಸ್ತಾಪ ಮಾಡಿಕೊಂಡಿದ್ದರಂತೆ. ಅದು ಮತ್ತೆ ಸರಿ ಹೊಂದದ ಹಾಗೆ ಆಗಿದೆಯಂತೆ. ಹಾಗಾಗಿ ಚಿನ್ಮಯಿ ಇಂಥದ್ದೊಂದು ಖಡಕ್ ನಿರ್ಧಾರ ತಗೆದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಸಮಂತಾ ಸಿನಿಮಾದಲ್ಲಿ ಕೆಲಸ ಮಾಡಲಾರೆ ಎಂದು ಚಿನ್ಮಯಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ನನ್ನ ಹೃದಯ ಕದ್ದಿದ್ದೀಯಾ, ಜೋಪಾನವಾಗಿಡು ಕಳ್ಳ’ ಎಂದು ಪತಿಗೆ ಹೇಳಿದ ನಟಿ ಮಹಾಲಕ್ಷ್ಮಿ

    ‘ನನ್ನ ಹೃದಯ ಕದ್ದಿದ್ದೀಯಾ, ಜೋಪಾನವಾಗಿಡು ಕಳ್ಳ’ ಎಂದು ಪತಿಗೆ ಹೇಳಿದ ನಟಿ ಮಹಾಲಕ್ಷ್ಮಿ

    ದುವೆ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಯದ್ವಾತದ್ವಾ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಹೇಗೆ ಜೊತೆಯಾದರು ಎನ್ನುವ ಬಗ್ಗೆ ನಟಿ ಮಹಾಲಕ್ಷ್ಮಿ ರೊಮ್ಯಾಂಟಿಕ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮೊದಲು ಯಾರು, ಯಾರ ಹೃದಯ ಕದ್ದರು ಎನ್ನುವುದನ್ನೂ ಅವರು ಬಹಿರಂಗ ಪಡಿಸಿದ್ದಾರೆ. ಕದ್ದ ಹೃದಯವನ್ನು ಜೋಪಾನವಾಗಿ ಕಾಪಾಡಿಕೊಳ್ಳುವಂತೆಯೂ ತಿಳಿಸಿದ್ದಾರೆ.

    ಮಹಾಲಕ್ಷ್ಮಿ ಅವರು ದುಡ್ಡಿನ ಆಸೆಗೆ ರವೀಂದರ್ ಅವರನ್ನು ಮದುವೆಯಾಗಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿತ್ತು. ಮಹಾಲಕ್ಷ್ಮಿ ಅವರೇ ಪ್ರಪೋಸ್ ಮಾಡಿರಬಹುದು ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಇವೆಲ್ಲವಕ್ಕೂ ಉತ್ತರ ಕೊಟ್ಟಿರುವ ನಟಿ, ಮೊದಲು ಪ್ರಪೋಸ್ ಮಾಡಿದ್ದು ರವೀಂದರ್ ಎಂದು ಹೇಳಿದ್ದಾರೆ. ಹಾಗಾಗಿ ‘ನನ್ನ ಹೃದಯವನ್ನು ಕದ್ದಿದ್ದೀರಿ. ಅದನ್ನು ಜೋಪಾನವಾಗಿ ನೋಡಿಕೊಳ್ಳಿ’ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ- ಸುಹಾಸ್

    ತಮಿಳು ಸಿನಿಮಾ ರಂಗದಲ್ಲಿ ನಿರ್ಮಾಪಕ ರವೀಂದ‍ರ್ ಮತ್ತು ನಟಿ ಮಹಾಲಕ್ಷ್ಮಿ ಮದುವೆ ವಿಚಾರ ಸಖತ್ ಸದ್ದು ಮಾಡಿದೆ. ಈ ಜೋಡಿಯ ಬಗ್ಗೆ ನಾನಾ ರೀತಿಯ ನೆಗೆಟಿಗ್ ಕಾಮೆಂಟ್ ಗಳು ಹರಿದು ಬರುತ್ತಿವೆ. ಇದೊಂದು ದುಡ್ಡಿನ ಆಸೆಗೆ ಆಗಿರುವ ವಿವಾಹ ಎಂದು ಗಾಸಿಪ್ ಹಬ್ಬಿಸಲಾಗಿದೆ. ಏನೇ ಗಾಸಿಪ್ ಗಳು ಬಂದರೂ, ದಂಪತಿ ಮಾತ್ರ ಖುಷಿ ಖುಷಿಯಾಗಿ ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಧಮ್ಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ತೆಲುಗಿನ ಪ್ರತಿಭಾನ್ವಿತ ನಟ ವಿಶ್ವಕ್ ಸೇನ್

    ‘ಧಮ್ಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ತೆಲುಗಿನ ಪ್ರತಿಭಾನ್ವಿತ ನಟ ವಿಶ್ವಕ್ ಸೇನ್

    ತೆಲುಗು ಚಿತ್ರರಂಗದ ಯಂಗ್ ಅಂಡ್ ಪ್ರಾಮಿಸಿಂಗ್ ಹೀರೋ ವಿಶ್ವಕ್ ಸೇನ್ ಫಲಕ್ನುಮಾ ದಾಸ್ ಸಿನಿಮಾ ಮೂಲಕ ತಾವೊಬ್ಬ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ ಅನ್ನೋದನ್ನು ಸಾಬೀತುಪಡಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದು ಗೆದ್ದಿರುವ ವಿಶ್ವಕ್ ಸೇನ್ ಇದೀಗ ಧಮ್ಕಿ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮೆರವಣಿಗೆ ಹೊರಡಲು ಸಜ್ಜಾಗಿದ್ದಾರೆ.

    ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚಿರುವ ಅವರು ನಿರ್ದೇಶಕನಾಗಿಯೂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮನ್ಮಯೆ ಕ್ರಿಯೇಷನ್ಸ್ ಮತ್ತು ವಿಶ್ವಕ್ ಸೇನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕರಾಟೆ ರಾಜು ನಿರ್ಮಾಣ ಮಾಡ್ತಿರುವ ಧಮ್ಕಿ ಚಿತ್ರಕ್ಕೆ ಪ್ರಸನ್ನ ಕುಮಾರ್ ಬೆಜವಾಡ ಕಥೆ ಮತ್ತು ಸಂಭಾಷಣೆ ಬರೆದಿದ್ದು, ವಿಶ್ವಕ್ ಸೇನ್ ಗೆ ಜೋಡಿಯಾಗಿ ನಿವೇತಾ ಪೇತುರಾಜ್ ನಟಿಸುತ್ತಿದ್ದಾರೆ. ಇದನ್ನೂ ಓದಿ:ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ- ಸುಹಾಸ್

    ಧಮ್ಕಿ ರೋಮ್ಯಾಂಟಿಕ್ ಕಾಮಿಡಿ, ಆಕ್ಷನ್ ಥ್ರಿಲ್ಲರ್ ಕಂಟೆಂಟ್ ಒಳಗೊಂಡಿದ್ದು, ಸಂಪೂರ್ಣ ಮನರಂಜನೆ ಜೊತೆಗೆ ಪಕ್ಕ ಆಕ್ಷನ್ ಪ್ರೇಮಿಗಳಿಗೆ ಸಿನಿಮಾ ಥ್ರಿಲ್ ನೀಡಲಿದೆ. ಈಗಾಗಲೇ 95ರಷ್ಟು ಶೂಟಿಂಗ್ ಮುಗಿಸಿರುವ ಚಿತ್ರತಂಡ ಉಳಿದ ಭಾಗದ ಚಿತ್ರೀಕರಣವನ್ನೂ ಈ ವಾರದಲ್ಲಿ ಮುಗಿಸಲು ಯೋಜನೆ ಹಾಕಿಕೊಂಡಿದೆ. ಹೈದ್ರಾಬಾದ್ ಸಾರಥಿ ಸ್ಟುಡಿಯೋದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಸಲು ಅದ್ಧೂರಿ ಸೆಟ್ ಹಾಕಿದೆ. ಆದಷ್ಟು ಬೇಗ ಉಳಿದ ಶೂಟಿಂಗ್ ಮುಗಿಸಿ ಬೆಳಗಿನ ಹಬ್ಬ ದೀಪಾವಳಿಗೆ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಮುನ್ನುಡಿ ಬರೆಯಲಿದೆ.ರಾವ್ ರಮೇಶ್, ಹೈಪರ್ ಆದಿ, ರೋಹಿಣಿ ಮತ್ತು ಪೃಥ್ವಿರಾಜ್ ಸೇರಿದಂತೆ ಇತರ ತಾರಾಗಣ ಚಿತ್ರದಲ್ಲಿ. ದಿನೇಶ್ ಕೆ ಬಾಬು ಛಾಯಾಗ್ರಹಣ, ಲಿಯಾನ್ ಜೇಮ್ಸ್ ಸಂಗೀತ ಮತ್ತು ಅನ್ವರ್ ಅಲಿ ಸಂಕಲನ ಚಿತ್ರಕ್ಕಿದೆ..

    Live Tv
    [brid partner=56869869 player=32851 video=960834 autoplay=true]

  • ವಿಜಯ್ ಸೇತುಪತಿ ಅಭಿಮಾನಿಗಳಿಗೆ ಡಬಲ್ ಧಮಾಕಾ: ‘ವಿಡುದಲೈ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್

    ವಿಜಯ್ ಸೇತುಪತಿ ಅಭಿಮಾನಿಗಳಿಗೆ ಡಬಲ್ ಧಮಾಕಾ: ‘ವಿಡುದಲೈ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್

    ವಿಜಯ್​ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುದಲೈ’ ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರವನ್ನು ರೆಡ್​ ಜಯಂಟ್​ ಮೂವಿಸ್​ನಡಿ ಉದಯನಿಧಿ ಸ್ಟಾಲಿನ್​ ಅರ್ಪಿಸಿದರೆ, ಆರ್​.ಎಸ್​. ಇನ್ಫೋಟೈನ್​ಮೆಂಟ್​ನಡಿ ಎಲ್ರೆಡ್​ ಕುಮಾರ್​ ನಿರ್ಮಿಸುತ್ತಿದ್ದಾರೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕರಲ್ಲಿ ವೆಟ್ರಿಮಾರನ್​ ಪ್ರಮುಖರು. ಕೆಲವು ತಿಂಗಳುಗಳ ಹಿಂದೆ ಅವರು ‘ವಿಡುದಲೈ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿರುವುದಾಗಿ ಘೋಷಿಸಿದಾಗಲೇ, ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಕ್ರಮೇಣ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ನರು ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ, ಈ ಚಿತ್ರದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ.

    ಸದ್ಯ, ‘ವಿಡುದಲೈ’ ಚಿತ್ರದ ಭಾಗ ಒಂದರ ಚಿತ್ರೀಕರಣ ಸಂಪೂರ್ಣವಾಗಿದ್ದು, ಪೋಸ್ಟ್​ಪ್ರೊಡಕ್ಷನ್​ ಕೆಲಸಗಳು ಪ್ರಗತಿಯಲ್ಲಿವೆ. ಎರಡನೆಯ ಭಾಗದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು ಸಿರುಮಲೈ, ಕೊಡೈಕೆನಾಲ್​ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಈ ಎರಡು ಚಿತ್ರಗಳು ದೊಡ್ಡ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿದ್ದು, ತಮಿಳಿನ ಕಾಸ್ಟ್ಲಿ ಚಿತ್ರಗಳ ಪೈಕಿ ‘ವಿಡುದಲೈ’ ಸಹ ಸೇರ್ಪಡೆಯಾಗಲಿದೆ. ಈ ಚಿತ್ರವನ್ನು ಕೋಟ್ಯಂತರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಿಸಲಾಗಿದ್ದು, ಚಿತ್ರಕ್ಕಾಗಿ ವಿಶೇಷವಾಗಿ 10 ಕೋಟಿ ರೂ. ವೆಚ್ಚದ ರೈಲು ಮತ್ತು ರೈಲ್ವೇ ಸೇತುವೆಯ ಸೆಟ್​ ನಿರ್ಮಾಣ ಮಾಡಲಾಗಿದೆ. ನಿಜವಾದ ರೈಲ್ವೆ ಬೋಗಿಗಳು ಮತ್ತು ಸೇತುವೆಯನ್ನು ನಿರ್ಮಿಸುವುದಕ್ಕೆ ಬಳಸಲಾಗುವ ಪರಿಕರಗಳನ್ನೇ ಈ ಸೆಟ್​ ನಿರ್ಮಾಣಕ್ಕೂ ಬಳಸಲಾಗಿರುವುದು ವಿಶೇಷ. ಇದಲ್ಲದೆ, ಸಿರುಮಲೈ ಬಳಿ ಜಾಕಿ ಅವರ ಕಲಾ ನಿರ್ದೇಶನದಲ್ಲಿ ಒಂದು ಹಳ್ಳಿಯನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಮತ್ತೆ ಶುರುವಾಯ್ತು ಬಾಲಿವುಡ್ ಬಾಯ್‌ಕಾಟ್ ಟ್ರೆಂಡ್: `ಬ್ರಹ್ಮಾಸ್ತ್ರʼ ಚಿತ್ರಕ್ಕೆ ವಿರೋಧ

    ಸದ್ಯ ಕೊಡೈಕೆನಾಲ್​ನಲ್ಲಿ ಪೀಟರ್​ ಹೇನ್ಸ್​ ನಿರ್ದೇಶನದಲ್ಲಿ ಸಾಹಸಮಯ ದೃಶ್ಯಗಳನ್ನು ಚಿತ್ರೀಕರಿಸುವುದಕ್ಕೆ ತಯಾರಿ ನಡೆಸಲಾಗಿದ್ದು, ಇದಕ್ಕಾಗಿ ಬಲ್ಗೇರಿಯಾದಿಂದ ಸಾಹಸ ಕಲಾವಿದರನ್ನು ಕರೆಸಲಾಗಿದೆ. ಈ ಆಕ್ಷನ್​ ದೃಶ್ಯಗಳಲ್ಲಿ ಬಲ್ಗೇರಿಯಾದ ಸಾಹಸ ಕಲಾವಿದರು ಸಹ ಭಾಗವಹಿಸುತ್ತಿರುವುದು ವಿಶೇಷ. ವಿಡುದಲೈ’ ಚಿತ್ರದಲ್ಲಿ ವಿಜಯ್​ ಸೇತುಪತಿ, ಸೂರಿ, ಭವಾನಿ ಶ್ರೀ, ಪ್ರಕಾಶ್​ ರಾಜ್​, ಗೌತಮ್​ ವಾಸುದೇವ ಮೆನನ್, ರಾಜೀವ್​ ಮೆನನ್​ ಮುಂತಾದವರು ನಟಿಸುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ‘ಇಸೈಜ್ನಾನಿ’ ಇಳಯರಾಜ ಈ ಚಿತ್ರದ ಸಂಗೀತದ ಜವಾಬ್ದಾರಿ ಹೊತ್ತಿದ್ದು, ವೇಲ್​ರಾಜ್​ ಛಾಯಾಗ್ರಹಣ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸದ್ದಿಲ್ಲದೆ ಹಸೆಮಣೆ ಏರಿದ್ರಾ ʻಗ್ರಾಮಾಯಣʼ ಚಿತ್ರದ ನಾಯಕಿ ಅಮೃತಾ ಅಯ್ಯರ್

    ಸದ್ದಿಲ್ಲದೆ ಹಸೆಮಣೆ ಏರಿದ್ರಾ ʻಗ್ರಾಮಾಯಣʼ ಚಿತ್ರದ ನಾಯಕಿ ಅಮೃತಾ ಅಯ್ಯರ್

    ಹುಭಾಷಾ ನಟಿ ಅಮೃತಾ ಅಯ್ಯರ್ ದಕ್ಷಿಣದ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದಾರೆ. ಇದೀಗ `ಗ್ರಾಮಾಯಣ’ ಚಿತ್ರದ ಮೂಲಕ ಈಗಾಗಲೇ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು ಸದಾ ಸಿನಿಮಾ ವಿಷ್ಯವಾಗಿ ಸುದ್ದಿಯಲ್ಲಿರುತ್ತಿದ್ದ ನಟಿ ಈಗ ಸದ್ದಿಲ್ಲದೆ ಹಸೆಮಣೆ ಏರಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳನ್ನ ಕಾಡುತ್ತಿದೆ.

     

    View this post on Instagram

     

    A post shared by Amritha – Thendral (@amritha_aiyer)

    ಬೆಂಗಳೂರು ಮೂಲದ ನಟಿ ಅಮೃತಾ ಅಯ್ಯರ್ ಕಾಲಿವುಡ್ ಮತ್ತು ಟಾಲಿವುಡ್ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದಾರೆ. ತಮಿಳಿನ `ಬಿಗಿಲ್’ ಮತ್ತು ಸೂಪರ್ ಸ್ಟಾರ್ ರಜನೀಕಾಂತ್ ಜತೆ ಲಿಂಗಾ ಚಿತ್ರದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಕಳೆದರೆಡು ದಿನಗಳಿಂದ ನಟಿ ಅಮೃತಾಗೆ ಮದುವೆ ಆಗಿದೆ ಎಂದು ಅನ್ನುವ ಗುಸು ಗುಸು ಶುರುವಾಗಿದೆ. ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ವೆಡ್ಡಿಂಗ್ ಫೋಟೋ ಕೂಡ ವೈರಲ್ ಆಗಿದೆ. ಈ ಕುರಿತು ನಟಿ ಸ್ಪಷ್ಟನೆ ನೀಡಿದ್ದಾರೆ.

     

    View this post on Instagram

     

    A post shared by Amritha – Thendral (@amritha_aiyer)

    ದಕ್ಷಿಣ ಭಾರತದ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ಕನ್ನಡತಿಗೆ ಇದೀಗ ತಮ್ಮ ಮದುವೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ. ವಣಕಂ ಡಾ ಮಾಪಿಳೈ ಸಿನಿಮಾದ ಫೋಟೋಗಳು ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಟಿಯ ಪೋಸ್ಟ್‌ಗೆ ಫ್ಯಾನ್ಸ್ ಕೂಡ ರಿಯಾಕ್ಟ್ ಮಾಡಿದ್ದು, ಈಗಲೇ ಮದುವೆ ಬೇಡ, ನಟಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಬುದ್ದಿಮಾಂದ್ಯ ಮಗನ ನೆನೆದು ಕಣ್ಣೀರಿಟ್ಟ ಮಾಳವಿಕಾ ಅವಿನಾಶ್

     

    View this post on Instagram

     

    A post shared by Amritha – Thendral (@amritha_aiyer)

    `ವಣಕಂ ಡಾ ಮಾಪಿಳೈ’ ಚಿತ್ರದಲ್ಲಿ ಅಮೃತಾ ಮದುವೆಯಾಗುವ ಸನ್ನಿವೇಶವೊಂದಿತ್ತು. ಆ ಫೋಟೊದಲ್ಲಿರುವ ವರನ ಫೋಟೋವನ್ನು ಕ್ರಾಪ್ ಮಾಡಿ ಬರೀ ಅಮೃತಾ ಫೊಟೊವನ್ನು ಯಾರೋ ಶೇರ್ ಮಾಡಿದ್ದಾರೆ. ಇದನ್ನು ನೋಡಿ ನಿಜವಾಗಿಯೂ ಅಮೃತಾಗೆ ಮದುವೆ ಆಗಿದೆ ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಹಾಗಾಗಿ ಈ ಫೋಟೊಗಳು ಸಖತ್ ವೈರಲ್ ಆಗಿತ್ತು. ಆಕೆಯ ಸ್ನೇಹಿತೆಯರು ಶುಭಾಶಯ ಕೋರಲು ಶುರು ಮಾಡಿದ ಮೇಲೆ ಎಚ್ಚೆತ್ತುಕೊಂಡು ನಟಿ ಮದುವೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ.

    ಇನ್ನು ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾಗಿ, `ಗ್ರಾಮಾಯಣ’ ಚಿತ್ರದಲ್ಲಿ ನಟಿ ಅಮೃತಾ ಅಯ್ಯರ್ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಭಿಮಾನಿಗಳಿಗೆ ಶಾಕಿಂಗ್‌ ನ್ಯೂಸ್‌ ಕೊಟ್ರು ನಯನತಾರಾ

    ಅಭಿಮಾನಿಗಳಿಗೆ ಶಾಕಿಂಗ್‌ ನ್ಯೂಸ್‌ ಕೊಟ್ರು ನಯನತಾರಾ

    ಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಯನತಾರಾ, ನಟನೆಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಕಾಲಿವುಡ್ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ. ಮದುವೆಯ ಬಳಿಕ ನಟನೆಯ ಜತೆ ವೈಯಕ್ತಿಕ ಜೀವನಕ್ಕೂ ಸಮಯ ಕೊಡುತ್ತಿರುವ ನಯನತಾರಾ, ಇನ್ಮುಂದೆ ಫುಲ್ ಟೈಮ್ ಖಾಸಗಿ ಜೀವನದತ್ತ ಗಮನ ಕೊಡಲು ನಟಿ ನಿರ್ಧರಿಸಿದ್ದಾರಂತೆ.

    ಸೌತ್‌ನ ಸಾಕಷ್ಟು ಸಿನಿಮಾಗಳ ಮೂಲಕ ಲೇಡಿ ಸೂಪರ್ ಸ್ಟಾರ್ ಅಭಿಮಾನಿಗಳ ಮನದಲ್ಲಿ ಗಟ್ಟಿ ನೆಲೆ ಗಟ್ಟಿಸಿಕೊಂಡವರು ನಯನತಾರಾ, ಇತ್ತೀಚೆಗಷ್ಟೇ ನಿರ್ದೇಶಕ ವಿಘ್ನೇಶ್ ಶಿವನ್ ಜತೆ ಹಸೆಮಣೆ ಏರಿದ್ದರು. ಬಳಿಕ ನಟನೆ ಮಾಡುತ್ತಲೇ ಪತಿಯ ಜತೆ ಫಾರಿನ್ ಪ್ರವಾಸದಲ್ಲಿ ಬ್ಯುಸಿಯಾದರು. ಇದೀಗ ನಯನತಾರಾ ನಟನೆಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    ತಮ್ಮ ಮದುವೆಗೂ ಮುಂಚೆ ಒಪ್ಪಿಕೊಂಡ ಚಿತ್ರಗಳನ್ನ ಮುಗಿಸಿದ ಬಳಿಕ ಚಿತ್ರರಂಗಕ್ಕೆ ಸಂಪೂರ್ಣವಾಗಿ ನಟಿ ಗುಡ್ ಬೈ ಹೇಳಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಸದ್ಯ ಈ ಸುದ್ದಿ ಕೇಳಿ, ನಯನತಾರಾ ಫ್ಯಾನ್ಸ್ ಶಾಕ್ ಆಗಿದ್ದಾರೆ. ಇದನ್ನೂ ಓದಿ:ಜನಾರ್ದನ್ ರೆಡ್ಡಿ ಮಗನ ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಸರ್ಪ್ರೈಸ್ ವಿಸಿಟ್

    ಇನ್ನೂ ನಟಿಯ ಕೈಯಲ್ಲಿ ಶಾರುಖ್ ಖಾನ್ ಜತೆ `ಜವಾನ್’, ಪೃಥ್ವಿರಾಜ್ ಜತೆ `ಗೋಲ್ಡ್’, ಚಿರಂಜೀವಿ ಜತೆಯಲಿ `ಗಾಡ್ ಫಾದರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಎಲ್ಲಾ ಪ್ರಾಜೆಕ್ಟ್ ಪೂರ್ಣಗೊಂಡ ಮೇಲೆ ನಯನತಾರಾ, ನಟನೆಗೆ ಫುಲ್ ಸ್ಟಾಪ್ ಇಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಯನತಾರಾ ನಟಿಸುತ್ತಾರಾ ಅಥವಾ ಬಣ್ಣದ ಲೋಕಕ್ಕೆ ಬೈ ಹೇಳುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ʻಪೊನ್ನಿಯನ್ ಸೆಲ್ವನ್’ ಚಿತ್ರದ ಗಾಯಕ ಬಂಬಾ ಬಕ್ಯಾ ನಿಧನ

    ʻಪೊನ್ನಿಯನ್ ಸೆಲ್ವನ್’ ಚಿತ್ರದ ಗಾಯಕ ಬಂಬಾ ಬಕ್ಯಾ ನಿಧನ

    ಕಾಲಿವುಡ್ ಗಾಯಕ ಬಂಬಾ ಬಕ್ಯಾ ವಿಧಿವಶರಾಗಿದ್ದಾರೆ. ಶುಕ್ರವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಗಾಯಕ ಬಂಬಾ ಬಕ್ಯಾ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

    ತಮಿಳು ಸೇರಿದಂತೆ ಸಾಕಷ್ಟು ಭಾಷೆಗಳಲ್ಲಿ ಹಾಡಿರುವ ಬಂಬಾ ಬಕ್ಯಾ ನಿಧನರಾಗಿದ್ದಾರೆ. ಸಾಕಷ್ಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 49 ವಯಸ್ಸಿಗೆ ಬಂಬಾ ವಿಧಿವಶರಾಗಿದ್ದಾರೆ. ಇದನ್ನೂ ಓದಿ:ಜನಾರ್ದನ್ ರೆಡ್ಡಿ ಮಗನ ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಸರ್ಪ್ರೈಸ್ ವಿಸಿಟ್

    ಎ.ಆರ್ ರೆಹಮಾನ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಸಾಕಷ್ಟು ಹಾಡುಗಳಿಗೆ ಬಂಬಾ ಬಕ್ಯಾ ಧ್ವನಿ ನೀಡಿದ್ದಾರೆ. ರಜನೀಕಾಂತ್ ಅವರ `2.0′ ಸಿನಿಮಾ ಮತ್ತು ಮಣಿರತ್ನಂ ನಿರ್ದೇಶನದ `ಪೊನ್ನಿಯನ್ ಸೆಲ್ವನ್’ ಚಿತ್ರದಲ್ಲಿ ಕೂಡ ಬಂಬಾ ಹಾಡಿದ್ದಾರೆ. ಇದೀಗ ಪ್ರತಿಭಾವಂತ ಗಾಯಕ ಬಂಬಾ ಬಕ್ಯಾ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

    Live Tv
    [brid partner=56869869 player=32851 video=960834 autoplay=true]

  • ಮಿಸ್ ಮ್ಯಾಚ್ ಜೋಡಿ: ಅತೀ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್

    ಮಿಸ್ ಮ್ಯಾಚ್ ಜೋಡಿ: ಅತೀ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್

    ರಡು ದಿನಗಳ ಹಿಂದೆಯಷ್ಟೇ ಹೊಸ ಬದುಕಿಗೆ ಕಾಲಿಟ್ಟಿರುವ ತಮಿಳಿನ ಖ್ಯಾತ ಕಿರುತೆರೆ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಇದೀಗ ಸಖತ್ ಟ್ರೋಲ್ ಆಗುತ್ತಿದ್ದಾರೆ. ಅದರಲ್ಲೂ ಮಿಸ್ ಮ್ಯಾಚ್ ಜೋಡಿ ಎಂದು ಕಾಮೆಂಟ್ ಮಾಡುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಈ ಜೋಡಿಯನ್ನು ಟ್ರೆಂಡ್ ಮಾಡಲಾಗುತ್ತಿದೆ. ಏನೇ ಟ್ರೋಲ್ ಮಾಡಿದರೂ, ಈ ದಂಪತಿ ತಲೆಕೆಡಿಸಿಕೊಳ್ಳದೇ ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.

    ನಟಿ ಮಹಾಲಕ್ಷ್ಮಿ ತುಂಬಾ ಸುಂದರವಾಗಿದ್ದಾರೆ. ಅಲ್ಲದೇ, ತೂಕ ಕೂಡ ಕಡಿಮೆಯಿದೆ. ಮಹಾಲಕ್ಷ್ಮಿಗಿಂತ ನಾಲ್ಕು ಪಟ್ಟು ತೂಕವಾಗಿದ್ದಾರೆ ರವೀಂದರ್. ಇದೇ ಕಾರಣಕ್ಕಾಗಿ ಕೆಲವರು ಇವರನ್ನು ಟ್ರೋಲ್ ಮಾಡಿ, ಅಪಹಾಸ್ಯ ಮಾಡುತ್ತಿದ್ದಾರೆ. ಆದರೆ, ಬಹುತೇಕರು ಈ ಜೋಡಿಗೆ ಶುಭ ಹಾರೈಸಿದ ಕಾಮೆಂಟ್ ಗಳನ್ನೂ ಹಾಕುತ್ತಿದ್ದಾರೆ. ಇಬ್ಬರ ವೈವಾಹಿಕ ಜೀವನ ಚೆನ್ನಾಗಿರಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ:ಸುದೀಪ್ ಹುಟ್ಟು ಹಬ್ಬಕ್ಕೆ ಯಾಕೆ ಸಿನಿಮಾ ಘೋಷಣೆ ಇಲ್ಲ?: ಅನುಮಾನ ಮೂಡಿಸಿದ ಕಿಚ್ಚನ ನಡೆ

    ಮಹಾಲಕ್ಷ್ಮಿಗೂ ಇದು ಎರಡನೇ ಮದುವೆ. ರವೀಂದರ್ ಕೂಡ ಈ ಹಿಂದೆ ಡಿವೋರ್ಸ್ ತಗೆದುಕೊಂಡವರು. ಇಬ್ಬರಿಗೂ ಇದು ಎರಡನೇ ಮದುವೆ ಆದ ಕಾರಣವು ಕೂಡ ಟ್ರೋಲ್ ಗೆ ಆಹಾರವಾಗಿದೆ. ಅಲ್ಲದೇ, ಮಿಸ್ ಮ್ಯಾಚ್ ಜೋಡಿಗೆ ಕಾರಣ ಹಣದ ದಾಹವೂ ಆಗಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇದೆಲ್ಲ ಏನೇ ಇರಲಿ, ಪ್ರೀತಿಗೆ ಯಾವುದೂ ಕೌಂಟ್ ಆಗಲ್ಲ ಎನ್ನುವಂತೆ ಈ ಜೋಡಿ ಹಸೆಮಣೆ ತುಳಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಮಂತಾ ಮನೆಯಲ್ಲಿ 2ನೇ ಮದುವೆಗೆ ಒತ್ತಾಯ: ಕೆಟ್ಟ ನಿರ್ಧಾರ ತಗೆದುಕೊಂಡಿದ್ದಾರಂತೆ ಸ್ಯಾಮ್

    ಸಮಂತಾ ಮನೆಯಲ್ಲಿ 2ನೇ ಮದುವೆಗೆ ಒತ್ತಾಯ: ಕೆಟ್ಟ ನಿರ್ಧಾರ ತಗೆದುಕೊಂಡಿದ್ದಾರಂತೆ ಸ್ಯಾಮ್

    ನಾಗ ಚೈತನ್ಯರಿಂದ ಡಿವೋರ್ಸ್ ಪಡೆದ ನಂತರ ಸಮಂತಾ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗೆಳೆತಿಯರ ಜೊತೆ ದೇಶ ಸುತ್ತುತ್ತಿದ್ದಾರೆ. ತಮಗೆ ಹೇಗೆ ಬೇಕೋ ಹಾಗೆ ಬದುಕುತ್ತಾ ಇರುವ ಸ್ಯಾಮ್ ಗೆ ಮನೆಯಲ್ಲಿ ಮದುವೆ ಒತ್ತಡ ಶುರುವಾಗಿದೆಯಂತೆ. ಡಿವೋರ್ಸ್ ಆಗಿರುವುದರಿಂದ ಮತ್ತೊಂದು ಮದುವೆ ಆಗಲು ಸಮಂತಾಗೆ ಅವರ ಕುಟುಂಬ ಒತ್ತಡ ಹೇರುವುದಕ್ಕೆ ಶುರು ಮಾಡಿದೆಯಂತೆ.

    ಸಮಂತಾಗೆ ಎರಡನೇ ಮದುವೆ ಒತ್ತಡ ಹೇರುವ ಸುದ್ದಿ ತೆಲುಗು ಸಿನಿಮಾ ರಂಗದಲ್ಲಿ ಬೇರೊಂದು ರೀತಿಯ ಆಯಾಮ ಪಡೆದುಕೊಂಡಿದೆ. ತಾವು ಮುಂದೆ ಮತ್ತೆ ಮದುವೆ ಆಗಬಾರದು ಎನ್ನುವ ಕಾರಣಕ್ಕಾಗಿ ಮಕ್ಕಳು ಆಗದೇ ಇರುವಂತ ಚಿಕಿತ್ಸೆಗೆ ಸಮಂತಾ ಒಳಗಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇದು ತೆಲುಗು ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡಿದೆ. ಇದನ್ನೂ ಓದಿ:ಕಿಚ್ಚ ಸುದೀಪ್ ಮನೆ ಮುಂದೆ ಅಭಿಮಾನಿಗಳ ಮಹಾಸಾಗರ: ಹ್ಯಾಪಿ ಬರ್ತ್‌ ಡೇ ಕಿಚ್ಚ

    ಮತ್ತೊಂದು ಮದುವೆಗೆ ಇಷ್ಟವಿರದೇ ಇರುವ ಕಾರಣಕ್ಕಾಗಿ ಸಮಂತಾ ಇಂಥದ್ದೊಂದು ನಿರ್ಧಾರ ತಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದು ನಿಜವೋ ಗಾಸಿಪ್ ಇರಬಹುದೋ? ಒಟ್ಟಿನಲ್ಲಿ ತೆಲುಗು ಸಿನಿಮಾ ರಂಗದಲ್ಲಿ ಈ ಸುದ್ದಿ ಬುಸುಗುಡುತ್ತಿದೆ. ಸಮಂತಾ ಹಾಗೆ ಮಾಡಿಕೊಳ್ಳುವುದಕ್ಕೆ ಸಾಧ್ಯವೆ? ಎನ್ನುವ ಮಾತೂ ಕೇಳಿ ಬರುತ್ತಿವೆ. ಸತ್ಯವೋ ಸುಳ್ಳೋ ಸಮಂತಾ ಯಾವುದೇ ಕಾರಣಕ್ಕೂ ಹಾಗೆ ಮಾಡಿಕೊಳ್ಳಲಾರರು ಎನ್ನುತ್ತಾರೆ ಅವರ ಅಭಿಮಾನಿಗಳು.

    Live Tv
    [brid partner=56869869 player=32851 video=960834 autoplay=true]