Tag: Kollywood

  • ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ತಲೈವಾ: ರಾಜಕೀಯ ಎಂಟ್ರಿಯ ಬಗ್ಗೆ ಚರ್ಚೆ

    ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ತಲೈವಾ: ರಾಜಕೀಯ ಎಂಟ್ರಿಯ ಬಗ್ಗೆ ಚರ್ಚೆ

    ಕಾಲಿವುಡ್ ಸೂಪರ್ ಸ್ಟಾರ್ ರಜನೀಕಾಂತ್ ಬತ್ತಳಿಕೆಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಈ ಮಧ್ಯೆ ತಲೈವಾ ರಾಜಕೀಯ ಎಂಟ್ರಿಯ ಕುರಿತು ಸಖತ್ ಸುದ್ದಿಯಾಗ್ತಿರುವ ಬೆನ್ನಲ್ಲೇ ರಾಜಕೀಯ ಅಖಾಡಕ್ಕೆ ಬರುವ ಕುರಿತು ಸ್ವತಃ ತಲೈವಾ ಸ್ಪಷ್ಟನೆ ನೀಡಿದ್ದಾರೆ.

    71ರ ವಯಸ್ಸಿನಲ್ಲೂ ಚಿತ್ರರಂಗದಲ್ಲಿ ಆಕ್ಟೀವ್ ಇರುವ ಸೂಪರ್ ಸ್ಟಾರ್ ರಜನೀಕಾಂತ್‌ಗೆ ಬ್ಯಾಕ್ ಟು ಬ್ಯಾಕ್ ಸಿನಿಮಾ ಅವಕಾಶಗಳು ಅರಸಿ ಬರುತ್ತಿವೆ. ಜತೆಗೆ ರಾಜಕೀಯ ರಂಗದಲ್ಲೂ ಭಾಗಿಯಾಗಲು ತಲೈವಾಗೆ ಬುಲಾವ್ ಬಂದಿದೆ. ರಜನೀಕಾಂತ್ ಮತ್ತೆ ರಾಜಕೀಯ ಅಖಾಡದಲ್ಲಿ ಆಕ್ಟೀವ್ ಆಗುತ್ತಾರೆ ಎಂಬ ವದಂತಿಯ ಬೆನ್ನಲ್ಲೇ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್ ರವಿ ಅವರನ್ನು ತಲೈವಾ ಭೇಟಿಯಾಗಿದ್ದಾರೆ. ಇದನ್ನೂ ಓದಿ:ಇನ್ನೊಂದು ವೀಡಿಯೋ ಇದೆ, ಯಾವಾಗ ಬಿಡುತ್ತಾನೋ ನನಗೆ ಗೊತ್ತಿಲ್ಲ: ಸೋನು ಗೌಡ

    ರಾಜ್ಯಪಾಲರಾದ ಆರ್.ಎನ್ ರವಿ ಭೇಟಿಯಾದ ಬೆನ್ನಲ್ಲೇ ತಾವು ರಾಜಕೀಯ ಬರುವುದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ಪಕ್ಷ ಪ್ರಾರಂಭಿಸುವ ವಿಚಾರಕ್ಕೆ ಅಂತ್ಯ ಹಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಶ್ಮಿಕಾ ಮಂದಣ್ಣ ನಟನೆಯ `ಸೀತಾ ರಾಮಂ’ ಸಿನಿಮಾ ಹಲವು ದೇಶಗಳಲ್ಲಿ ಬ್ಯಾನ್

    ರಶ್ಮಿಕಾ ಮಂದಣ್ಣ ನಟನೆಯ `ಸೀತಾ ರಾಮಂ’ ಸಿನಿಮಾ ಹಲವು ದೇಶಗಳಲ್ಲಿ ಬ್ಯಾನ್

    `ಸೀತಾ ರಾಮಂ’ ಚಿತ್ರದ ಮೂಲಕ ರಶ್ಮಿಕಾ ಮಂದಣ್ಣ ಮಾಲಿವುಡ್‌ಗೆ ಲಗ್ಗೆ ಇಡ್ತಿದ್ದಾರೆ. ಮಲಯಾಳಂ ಮೊದಲ ಸಿನಿಮಾಗೆ ರಿಲೀಸ್ ಆಗದಂತೆ ತಡೆ ನೀಡಲಾಗಿದೆ. ರಶ್ಮಿಕಾ ಸಿನಿಮಾಗಾಗಿ ಕಾಯ್ತಿದ್ದ ಅಭಿಮಾನಿಗಳಿಗೆ ಶಾಕ್ ಕೊಟ್ಟಂತೆ ಆಗಿದೆ.

    `ಪುಷ್ಪ’ ಬ್ಯೂಟಿ ರಶ್ಮಿಕಾ ಮಂದಣ್ಣ ಮೇಲೆ ದಿನದಿಂದ ದಿನಕ್ಕೆ ಕ್ರೇಜ್ ಜಾಸ್ತಿಯಾಗುತ್ತಲೇ ಇದೆ. ಸೂಪರ್‌ಸ್ಟಾರ್‌ಗಳ ಸಿನಿಮಾಗೆ ನಾಯಕಿಯಾಗಿ, ಅವಕಾಶ ಬಾಚಿಕೊಳ್ಳುತ್ತಲೇ ಇದ್ದಾರೆ. `ಪುಷ್ಪ’ ಚಿತ್ರದಿಂದ ಬಿಗ್ ಬ್ರೇಕ್ ಸಿಕ್ಕದ ಮೇಲೆ ಮಾಲಿವುಡ್‌ನತ್ತ ನಟಿ ಮುಖ ಮಾಡಿದ್ದರು. ಸೀತಾ ರಾಮಂ ಚಿತ್ರದಲ್ಲಿ ದುಲ್ಕರ್ ಸಲ್ಮಾನ್, ಮೃಣಾಲ್ ಜತೆ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಮೇಲೆ ಫ್ಯಾನ್ಸ್‌ಗೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ. ಆದರೆ ಈ ಚಿತ್ರವನ್ನ ಹಲವು ರಾಷ್ಟ್ರಗಳಲ್ಲಿ ಬ್ಯಾನ್ ಮಾಡಲಾಗಿದೆ. ಇದನ್ನೂ ಓದಿ:ಪತಿ ಪಾದದ ಬಳಿ ಕೂತು ಪೂಜಿಸಿದಕ್ಕೆ ಟ್ರೋಲ್ ಆದ ನಟಿ ಪ್ರಣಿತಾ

    ಹನು ರಾಘವಪುಡಿ ನಿರ್ದೇಶನದ `ಸೀತಾ ರಾಮಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಆಫ್ರೀನ್ ಎಂಬ ಮುಸ್ಲಿಂ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಫಸ್ಟ್ ಲುಕ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದರು. ಆದರೆ ಅವರು ಬುರ್ಕಾ ಧರಿಸಿ ಕಾಣಿಸಿಕೊಂಡಿದ್ದು ಅನೇಕರಿಗೆ ಅಚ್ಚರಿ ಮೂಡಿಸಿತ್ತು. ಈ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಅಂಶಗಳಿವೆ ಎಂದು ಆರೋಪಿಸಿ ಅರಬ್ ರಾಷ್ಟ್ರಗಳಲ್ಲಿ ಈ ಚಿತ್ರದ ರಿಲೀಸ್‌ಗೆ ನಿಷೇಧಿಸಿದೆ.

    ಬಹ್ರೇನ್, ಓಮನ್, ಕುವೈತ್, ಖತಾರ್, ಸೌದಿ ಅರೇಬಿಯಾ ಮುಂತಾದ ರಾಷ್ಟ್ರಗಳಲ್ಲಿ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಸದಸ್ಯರ ಅಭಿಪ್ರಾಯದ ಮೇರೆಗೆ ಈ ಚಿತ್ರವನ್ನು ಬ್ಯಾನ್ ಮಾಡಲಾಗಿದೆ. ಚಿತ್ರತಂಡದವರು ಮತ್ತೊಮ್ಮೆ ಸೆನ್ಸಾರ್‌ಗೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ಎರಡು ಕಾಲಘಟ್ಟದ ಕಥೆಯಿದ್ದು, ಚಿತ್ರದ ಲುಕ್ ಮತ್ತು ಟ್ರೈಲರ್ ಮೂಲಕ ಸೌಂಡ್ ಮಾಡುತ್ತಿದೆ. ಇದೇ ಆಗಸ್ಟ್ 5ಕ್ಕೆ ತೆರೆಗೆ ಬರಲಿದೆ. ಈ ಎಲ್ಲಾ ಅಡೆ ತಡೆ ದಾಟಿ ಕಲೆಕ್ಷನಲ್ಲಿಯೂ ಸಿನಿಮಾ ಸೌಂಡ್ ಮಾಡುತ್ತಾ ಅಂತಾ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್: 4 ಚಿನ್ನದ ಪದಕ ಗೆದ್ದ ಅಜಿತ್ ಕುಮಾರ್

    ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್: 4 ಚಿನ್ನದ ಪದಕ ಗೆದ್ದ ಅಜಿತ್ ಕುಮಾರ್

    ಕಾಲಿವುಡ್ ಸ್ಟಾರ್ ಅಜಿತ್ ಕುಮಾರ್ ತೆರೆಯ ಮೇಲೆ ಮಾತ್ರ ಹೀರೋ ಅಲ್ಲ. ತೆರೆಮರೆಯಲ್ಲಿ ಕೂಡ ರಿಯಲ್ ಹೀರೋ ಎಂಬುದನ್ನ ಅಜಿತ್ ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. 47ನೇ ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ, 4 ಚಿನ್ನದ ಪದಕವನ್ನ ಅಜಿತ್ ಗೆದ್ದಿದ್ದಾರೆ.

    ತಮಿಳು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದ ನಟ ಅಜಿತ್ ಕುಮಾರ್‌ಗೆ ತಮಿಳುನಾಡಿನ ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಟ ಅಜಿತ್ ಮತ್ತು ತಂಡ ಭಾಗವಹಿಸಿ, ನಾಲ್ಕು ಚಿನ್ನ ಮತ್ತು ಎರಡು ಕಂಚಿನ ಪದಕವನ್ನು ಗೆದ್ದಿದ್ದಾರೆ. ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಜಿತ್ ಆ್ಯಂಡ್ ಟೀಮ್ ಸೆಂಟರ್ ಫೈರ್ ಪಿಸ್ತೂಲ್ ಮೆನ್, ಸ್ಟ್ಯಾಂಡರ್ಡ್‌ ಪಿಸ್ತೂಲ್ ಮಾಸ್ಟರ್ ಮೆನ್, 50 ಮೀಟರ್ ಪಿಸ್ತೂಲ್ ಮಾಸ್ಟರ್ ಮೆನ್, ಸ್ಟ್ಯಾಂಡರ್ಡ್‌ ಪಿಸ್ತೂಲ್ ಮಾಸ್ಟರ್ ಮೆನ್, ಹೀಗೆ ಈ  ನಾಲ್ಕು ವಿಭಾಗಗಳಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಇದನ್ನೂ ಓದಿ:ಅಫೇರ್ ಆರೋಪ ನಂತರ `ಅಣ್ಣ-ತಂಗಿ’ ಆಗಿಬಿಟ್ರಾ ನರೇಶ್-ಪವಿತ್ರಾ!

    ಜೊತೆಗೆ 50 ಮೀಟರ್ ಉಚಿತ ಪಿಸ್ತೂಲ್ ಮೆನ್, ಸ್ಟ್ಯಾಂಡರ್ಡ್‌ ಪಿಸ್ತೂಲ್ ಪುರುಷರ ವಿಭಾಗದಲ್ಲಿ 2 ಕಂಚಿನ ಪದಕವನ್ನ ಅಜಿತ್‌ ಮತ್ತು ತಂಡ ಗೆದ್ದಿದ್ದಾರೆ. ತಿರುಚ್ಚಿ ರೈಫೆಲ್ ಕ್ಲಬ್‌ನಲ್ಲಿ ಈ ಚಾಂಪಿಯನ್‌ಶಿಪ್ ನಡೆದಿದ್ದು, ನೆಚ್ಚಿನ ನಟನನ್ನು ನೋಡಲು ಅಪಾರ ಅಭಿಮಾನಿಗಳು ಜಮಾಯಿಸಿದ್ದರು. ಇನ್ನು ಕಳೆದ 46ನೇ ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಜಿತ್ ಕುಮಾರ್ ಭಾಗವಹಿಸಿ, ಸಾಕಷ್ಟು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು

    ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು

    ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಜಿ.ಎಂ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.

    1986ರಲ್ಲಿ `ಅರುವಾಡೈ ನಾಲ್’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಮೂಲಕ ತಮಿಳು ಚಿತ್ರರಂಗಕ್ಕೆ ಜಿ.ಎಂ ಕುಮಾರ್ ಪಾದಾರ್ಪಣೆ ಮಾಡಿದ್ದರು. ಸಾಕಷ್ಟು ಸಿನಿಮಾಗಳಿಗೆ ನಿರ್ದೇಶನ ಮಾಡಿದ ಬಳಿಕ ನಂದಿ ಪ್ರಶಸ್ತಿಗೂ ಪಾತ್ರರಾಗಿದ್ದರು. ಇದೀಗ ಜಿ.ಎಂ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ:ಅನುರಾಗ್ ಕಶ್ಯಪ್ ನಿರ್ದೇಶನದ ಸಿನಿಮಾದಲ್ಲಿ ಸನ್ನಿ ಲಿಯೋನ್

    ನಟ ಜಿ.ಎಂ ಕುಮಾರ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ನಟ ಚಿಕಿತ್ಸೆಗೆ ಸ್ಪಂದಿಸುವವರೆಗೂ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಕಾಲಿವುಡ್ ಸೂಪರ್ ಸ್ಟಾರ್ ಕಮಲ್ ಹಾಸನ್ `ವಿಕ್ರಮ್’ ಚಿತ್ರದ ಮೂಲಕ ಗ್ರ್ಯಾಂಡ್ ಆಗಿ ಕಂಬ್ಯಾಕ್ ಆದರು. `ವಿಕ್ರಮ್’ ಚಿತ್ರದ ಸಕ್ಸಸ್ ಅಲೆಯಲ್ಲಿರುವ ಕಮಲ್ ಹಾಸನ್ ಮುಂದಿನ ನಡೆ ಬಗ್ಗೆ ಅಭಿಮಾನಿಗಳಿಗೆ ಕ್ಯೂರಿಯಾಸಿಟಿ ಇದೆ. ಈಗ ಕಮಲ್ ಹಾಸನ್ ಮುಂದಿನ ಚಿತ್ರದ ಬಗ್ಗೆ ರಿವೀಲ್ ಕೂಡ ಆಗಿದೆ. ಸಿನಿಮಾ ರಿಲೀಸ್ ಅಪ್‌ಡೇಟ್ ಕೂಡ ಸಿಕ್ಕಿದೆ.

    `ವಿಕ್ರಮ್’ ಸಿನಿಮಾ ಕಮಲ್ ಹಾಸನ್ ಕೆರಿಯರ್‌ಗೆ ಒಂದೊಳ್ಳೆಯ ಟರ್ನಿಂಗ್ ಪಾಯಿಂಟ್ ಕೊಟ್ಟಿದೆ. ಸಕ್ಸಸ್ ಖುಷಿಯಲ್ಲಿರುವ ನಟ ಕಮಲ್ ಅಭಿನಯದ ಮುಂದಿನ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. `ಇಂಡಿಯನ್ 2′ ಕಮಲ್ ಹಾಸನ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ರೆಡ್ ಕಲರ್ ಲೆಹೆಂಗಾದಲ್ಲಿ ಪಡ್ಡೆಹುಡುಗರ ಕಣ್ಣು ಕುಕ್ಕುವಂತೆ ಮಿಂಚಿದ ರಶ್ಮಿಕಾ ಮಂದಣ್ಣ

    ಎಸ್. ಶಂಕರ್ ನಿರ್ದೇಶನದ `ಇಂಡಿಯನ್ 2′ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜತೆಗೆ ಎಂದೂ ಮಾಡಿರದ ಪಾತ್ರದಲ್ಲಿ ಕಮಲ್ ಹಾಸನ್ ಕಾಣಿಸಿಕೊಂಡಿದ್ದಾರೆ. ಸೆಪ್ಟೆಂಬರ್‌ನಲ್ಲಿ ತೆರೆ ಕಾಣಲಿದೆ ಈ ಸಿನಿಮಾ. ತೆರೆಮರೆಯಲ್ಲಿ ಚಿತ್ರದ ರಿಲೀಸ್‌ಗೆ ತಯಾರಿ ಕೂಡ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಚಿತ್ರೀಕರಣದ ವೇಳೆ ಸಂಯುಕ್ತಾ ಹೆಗ್ಡೆಗೆ ಭಾರಿ ಪೆಟ್ಟು

    ಚಿತ್ರೀಕರಣದ ವೇಳೆ ಸಂಯುಕ್ತಾ ಹೆಗ್ಡೆಗೆ ಭಾರಿ ಪೆಟ್ಟು

    ಸ್ಯಾಂಡಲ್‌ವುಡ್‌ಗೆ `ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಪರಿಚಿತರಾದ ನಟಿ ಸಂಯುಕ್ತಾ ಹೆಗ್ಡೆಗೆ, ಸಿನಿಮಾ ಚಿತ್ರೀಕರಣದ ವೇಳೆ ಭಾರಿ ಪೆಟ್ಟಾಗಿದೆ. ಫೈಟಿಂಗ್ ಸೀಕ್ವೆನ್ಸ್ ಮಾಡುವ ಸಂದರ್ಭದಲ್ಲಿ ನಟಿ ಸಂಯುಕ್ತಾಗೆ ಈ ಅವಘಡ ನಡೆದಿದೆ.

    ಕನ್ನಡ ಮತ್ತು ಸೌತ್ ಸಿನಿಮಾರಂಗದಲ್ಲಿ ಛಾಪೂ ಮೂಡಿಸುತ್ತಿರುವ ನಟಿ ಸಂಯುಕ್ತ ಹೆಗ್ಡೆಗೆ `ಕ್ರೀಮ್’ ಚಿತ್ರೀಕರಣದ ವೇಳೆ ಭಾರಿ ಪೆಟ್ಟಾಗಿದೆ. ಫೈಟಿಂಗ್ ಸೀಕ್ವೆನ್ಸ್ ಚಿತ್ರೀಕರಿಸುವಾಗ ಈ ಅವಘಡ ನಡೆದಿದೆ. ಡ್ಯೂಪ್ ಬಳಸಿ ಚಿತ್ರೀಕರಣ ಮಾಡೋಣ ಎಂದು ಚಿತ್ರತಂಡ ಒತ್ತಾಯಿಸಿದರೂ ಸಂಯುಕ್ತಾ ಒಪ್ಪದಿದ್ದ ಕಾರಣ ಚಿತ್ರೀಕರಣ ವೇಳೆ ನಟಿಗೆ ಪೆಟ್ಟಾಗಿದೆ. ಸಂಯುಕ್ತಾ ಕಾಲು ಟ್ವಿಸ್ಟ್ ಆಗಿದೆ. ಇದೀಗ ನಟಿಗೆ ಹೆಚ್ಚುವರಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ:ವಿಕ್ರಾಂತ್ ರೋಣ ಶೋ ಸಂಖ್ಯೆ ಹೆಚ್ಚಳ: ವಿಶ್ವದಾದ್ಯಂತ 9500 ಶೋ, 2500 ಸ್ಕ್ರೀನ್ ಗಳಲ್ಲಿ ಪ್ರದರ್ಶನ

    ಅಭಿಷೇಕ್ ಬಸಂತ್ ನಿರ್ದೇಶನದ ʻಕ್ರೀಮ್ʼ ಚಿತ್ರದಲ್ಲಿ ಸಂಯುಕ್ತಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕ ಡಿ ಕೆ. ದೇವೇಂದ್ರ, ಫೈಟ್ ಮಾಸ್ಟರ್ ಪ್ರಭು ಹಾಗೂ ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ರವರು ಡ್ಯೂಪ್ ಬಳಸಲು ಒತ್ತಾಯಿಸಿದರೂ ನಾಯಕಿ ಒಪ್ಪಲಿಲ್ಲ ಇದರ ಪರಿಣಾಮ ನಾಯಕಿ ಸಂಯುಕ್ತಾ ಕಾಲು ಟ್ವಿಸ್ಟ್ ಆಗಿದೆ. ಈ ಸಿನಿಮಾದ ಚಿತ್ರೀಕರಣವನ್ನು ಮುಂದೂಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • `ವಿಕ್ರಾಂತ್ ರೋಣ’ ಚಿತ್ರದ ನಂತರ ಹೊಸ ಸಿನಿಮಾಗೆ ಕಿಚ್ಚ ಸುದೀಪ್ ಗ್ರೀನ್ ಸಿಗ್ನಲ್

    `ವಿಕ್ರಾಂತ್ ರೋಣ’ ಚಿತ್ರದ ನಂತರ ಹೊಸ ಸಿನಿಮಾಗೆ ಕಿಚ್ಚ ಸುದೀಪ್ ಗ್ರೀನ್ ಸಿಗ್ನಲ್

    ಚಿತ್ರರಂಗದಲ್ಲಿ ಸದ್ಯ ಸಿಕ್ಕಾಪಟ್ಟೆ ಹೈಫ್ ಕ್ರಿಯೇಟ್ ಮಾಡಿರುವ ಚಿತ್ರ `ವಿಕ್ರಾಂತ್ ರೋಣ’. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ಕಿಚ್ಚ ಸುದೀಪ್ ಸಂದರ್ಶನವೊಂದರಲ್ಲಿ, ಈ ವೇಳೆ ತಮ್ಮ ಮುಂದಿನ ಚಿತ್ರದ ಬಗ್ಗೆ ರಿವೀಲ್ ಮಾಡಿದ್ದಾರೆ. ಇಂಡಿಯನ್ ಫಿಲ್ಮ್ಂ ಮೇಕರ್ ವೆಂಕಟ್ ಪ್ರಭು ಜತೆ ಸುದೀಪ್ ಸಾಥ್ ನೀಡಲಿದ್ದಾರೆ.

    ಸಿನಿಮಾರಂಗದಲ್ಲಿ ಅಭಿನಯ ಚಕ್ರವರ್ತಿ ಆಗಿ ರಾರಾಜಿಸುತ್ತಿರುವ ಕಿಚ್ಚ ಸುದೀಪ್ ಗಾಂಧಿನಗರದಲ್ಲಿ ಮಾತ್ರವಲ್ಲ ಪರಭಾಷೆ, ಹೊರದೇಶದಲ್ಲೂ ಅಪಾರ ಅಭಿಮಾನಿಗಳಿದ್ದಾರೆ. ಗಡಿ ದಾಟಿ ಬೆಳೆದಿರುವ ಬಹುಮುಖ ಪ್ರತಿಭೆ ಕಿಚ್ಚ ಸುದೀಪ್ ಸದ್ಯ ʻವಿಕ್ರಾಂತ್ ರೋಣʼ ಗ್ರ್ಯಾಂಡ್‌  ಆಗಿ ರಿಲೀಸ್ ಆಗುವುದಕ್ಕೆ ದಿನಗಣನೆ ಶುರುವಾಗಿದೆ. ೩ಡಿ ರೂಪದಲ್ಲಿ ಬಹುಭಾಷೆಗಳಲ್ಲಿ ಇದೇ ಜುಲೈ 28ಕ್ಕೆ ತೆರೆಗೆ ಬರಲಿದೆ. `ವಿಕ್ರಾಂತ್ ರೋಣ’ ಚಿತ್ರದ ನಂತರ ಕಿಚ್ಚನ ಮುಂದಿನ ಸಿನಿಮಾ ಯಾವುದು ಎಂಬುದಕ್ಕೆ ಸ್ವತಃ ಸುದೀಪ್ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.

    ತಮಿಳಿನ ಸಾಕಷ್ಟು ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ವೆಂಕಟ್ ಪ್ರಭು ಈಗ ಕಿಚ್ಚ ಸುದೀಪ್‌ಗೆ ಡೈರೆಕ್ಷನ್ ಮಾಡಲು ರೆಡಿಯಾಗಿದ್ದಾರೆ. ಸೌತ್ ಸಿನಿಮಾರಂಗದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನ ನೀಡಿರುವ ವೆಂಕಟ್ ಪ್ರಭು ಈಗ ಭಿನ್ನ ಕಥೆಯೊಂದನ್ನ ರೆಡಿ ಮಾಡಿ, ಈಗಾಗಲೇ ಕಿಚ್ಚನಿಗೆ ಸ್ಟೋರಿ ಹೇಳಿದ್ದಾರೆ. ಕಥೆ ಕೇಳಿ ಸುದೀಪ್ ಕೂಡ ಓಕೆ ಅಂದಿದ್ದಾರೆ. ಇದನ್ನೂ ಓದಿ:ರಾಕೇಶ್ ಬಾಪಟ್ ಜೊತೆ ಬ್ರೇಕಪ್ ಮಾಡಿಕೊಂಡ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ

    ʻವಿಕ್ರಾಂತ್ ರೋಣʼ ರಿಲೀಸ್‌ಗೆ ರೆಡಿಯಿದೆ ಇದಾದ ಬಳಿಕ ಬಿಗ್ ಬಾಸ್ ಶೋ ಆಗಸ್ಟ್ 6ರಿಂದ ಶುರುವಾಗಲಿದೆ. ಬಳಿಕ ವೆಂಕಟ್ ಪ್ರಭು ನಿರ್ದೇಶನದ ಹೊಸ ಚಿತ್ರಕ್ಕೆ ಸುದೀಪ್ ಸೇರಿಕೊಳ್ಳಲಿದ್ದಾರೆ.ಅಕ್ಟೋಬರ್‌ನಲ್ಲಿ ಶೂಟಿಂಗ್‌ ಶುರುವಾಗಲಿದೆ. ಜತೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಕಿಚ್ಚನ ಕೈಯಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ ಎಂದ ತಲೈವಾ: ಮಗಳ ಡಿವೋರ್ಸ್‌ ವಿಚಾರದಲ್ಲಿ ಕುಗ್ಗಿದ್ರಾ ರಜನಿಕಾಂತ್

    10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ ಎಂದ ತಲೈವಾ: ಮಗಳ ಡಿವೋರ್ಸ್‌ ವಿಚಾರದಲ್ಲಿ ಕುಗ್ಗಿದ್ರಾ ರಜನಿಕಾಂತ್

    ಕಾಲಿವುಡ್ ಸೂಪರ್‌ಸ್ಟಾರ್ ರಜನಿಕಾಂತ್ ವಯಸ್ಸು 71 ಆದ್ದರು. ಚಿತ್ರರಂಗದಲ್ಲಿ ಇವರ ಮೇಲಿರುವ ಕ್ರೇಜ್ ಒಂದಚೂರು ಕಡಿಮೆಯಾಗಿಲ್ಲ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟನ ಬದುಕಿನಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲ ಅಂತಾ ಇತ್ತೀಚಿನ ಸಂದರ್ಶನವೊಂದರಲ್ಲಿ ರಜನೀಕಾಂತ್ ಹೇಳಿರುವುದು ಇದೀಗ ಸಖತ್ ವೈರಲ್ ಆಗಿದೆ.

    ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ತಲೈವಾ ಕಾಲ್‌ಶೀಟ್‌ಗಾಗಿ ಕಾದು ಕೂರುವವರಿದ್ದಾರೆ. ಹಣ, ಆಸ್ತಿ, ಕೀರ್ತಿ ಜತೆಗೆ ಸಾಕು ಅನ್ನೋವಷ್ಟು ಸಿನಿಮಾ ಅವಕಾಶಗಳಿದ್ದರು. ರಜನೀಕಾಂತ್ ವೈಯಕ್ತಿಕ ಜೀವನದಲ್ಲಿ ಕಿಂಚಿಂತೂ ನೆಮ್ಮದಿ ಇಲ್ಲವಂತೆ. ಹಾಗಂತ ಅಚ್ಚರಿಯ ಹೇಳಿಕೆಯೊಂದನ್ನ ನೀಡಿದ್ದಾರೆ. ಇದನ್ನೂ ಓದಿ:68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿಯಲ್ಲಿ ಸನ್ಮಾನ

    ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಜೀವನದಲ್ಲಿ 10 ಪರ್ಸೆಂಟ್‌ನಷ್ಟು ನೆಮ್ಮದಿ ಇಲ್ಲಾ ಅಂತಾ ಹೇಳಿಕೊಂಡಿದ್ದಾರೆ. ಐಶ್ವರ್ಯ ಮತ್ತು ಧನುಷ್ ಡಿವೋರ್ಸ್ ನಂತರ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಗಳ ಡಿವೋರ್ಸ್ ಮನಸ್ಸಿಗೆ ಮತ್ತಷ್ಟು ಘಾಸಿ ಮಾಡಿದ್ಯಾ, ಎಲ್ಲಾ ಇದ್ದು ಮಕ್ಕಳ ಜೀವನ ಹಳಿ ದಾಟಿ ಹೋಗಿರುವುದು ರಜನಿಕಾಂತ್ ಆರೋಗ್ಯಕ್ಕೆ ಮತ್ತಷ್ಟು ಘಾಸಿ ಮಾಡಿದ್ಯ ಅಂತಾ ಅಭಿಮಾನಿಗಳ ವಲಯದಲ್ಲಿ ಸಖತ್ ಚರ್ಚೆ ಆಗುತ್ತಿದೆ.

    ಮಕ್ಕಳ ಜೀವನವೇ ಮನಸ್ಸಿನಲ್ಲಿಕೊಂಡು ಈ ಮಾತು ಹೇಳಿದ್ರಾ ರಜನಿಕಾಂತ್. ಒಟ್ನಲ್ಲಿ ಸಕ್ಸಸ್‌ಫುಲ್ ಆಕ್ಟರ್ ಆಗಿದ್ದರು. ಖುಷಿ, ನೆಮ್ಮದಿ ಇಲ್ಲದೇ ಬದುಕುವುದು ಕಷ್ಟ. ನೆಚ್ಚಿನ ನಟನ ಈ ಕಾಮೆಂಟ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

    2020ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್‌ಗೆ 30 ಭಾಷೆಗಳಲ್ಲಿ 400ಕ್ಕೂ ಅಧಿಕ ಸಿನಿಮಾಗಳ ಅರ್ಜಿ ಸಲ್ಲಿಸಿದ್ದವು. ಇಂದು ನವದೆಹಲಿಯಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    1954ರಿಂದ ರಾಷ್ಟ್ರ ಪ್ರಶಸ್ತಿ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈಗ 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಭಾರತ ಸರ್ಕಾರವು ಚಲನಚಿತ್ರೋತ್ಸವ ಜವಬ್ದಾರಿ ಹೊತ್ತುಕೊಂಡಿದೆ. ಕೋವಿಡ್‌ನಿಂದ ರಾಷ್ಟ್ರ ಪ್ರಶಸ್ತಿ ಕಾರ್ಯವನ್ನ ಮುಂದೂಡಲಾಗಿತ್ತು. 2020ರ ಸಾಲಿನಲ್ಲಿ ಸಾಧನೆ ಮಾಡಿದ ಪ್ರತಿಭೆಗೆ ಗುರುತಿಸಿ, ಗೌರವಿಸಲಾಗಿದೆ. ಇದನ್ನೂ ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಚಲನಚಿತ್ರ ನಿರ್ಮಾಪಕರಾದ ವಿಪುಲ್ ಶಾ ಮತ್ತು ಅನುರಾಗ್ ಠಾಕೂರ್ ಅವರನ್ನ ಭೇಟಿ ಮಾಡಿ, 68ನೇ ರಾಷ್ಟ್ರ ಪ್ರಶಸ್ತಿಯ ಕುರಿತು ವರದಿ ಸಲ್ಲಿಸಲಾಯಿತು. ಯಾರಿಗೆಲ್ಲಾ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಕುರಿತ ಡಿಟೈಲ್ಸ್ ಇಲ್ಲಿದೆ.

    ಅತ್ಯುತ್ತಮ ಚಲನಚಿತ್ರ: ಸೂರರೈ ಪೋಟ್ರು

    ಅತ್ಯುತ್ತಮ ನಿರ್ದೇಶಕ: ಸಚಿ, ಅಯ್ಯಪ್ಪನಂ ಕೊಶಿಯಮ್

    ಅತ್ಯುತ್ತಮ ಮನರಂಜನೆ ಚಿತ್ರ: ತಾನ್ಹಾಜಿ

    ಅತ್ಯುತ್ತಮ ನಟ: ಸೂರ್ಯ (ಸೂರರೈ ಪೋಟ್ರು)
    ಅಜಯ್ ದೇವಗನ್ ( ತಾನ್ಹಾಜಿ)

    ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ( ಸೂರರೈ ಪೋಟ್ರು)

    ಅತ್ಯುತ್ತಮ ಪೋಷಕ ನಟಿ: ಬಿಜು ಮೆನನ್( ಅಯ್ಯಪ್ಪನಂ ಕೋಶಿಯಂ)

    Live Tv
    [brid partner=56869869 player=32851 video=960834 autoplay=true]

  • 71,000 ರೂ. ಸೀರೆಯುಟ್ಟು ಬಂದ ಹನ್ಸಿಕಾ ಮೋಟ್ವಾನಿ

    71,000 ರೂ. ಸೀರೆಯುಟ್ಟು ಬಂದ ಹನ್ಸಿಕಾ ಮೋಟ್ವಾನಿ

    ಸೌತ್ ಚಿತ್ರರಂಗದ ಮುದ್ದು ಚೆಲುವೆ ಹನ್ಸಿಕಾ ಮೋಟ್ವಾನಿ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ತಮಿಳಿನ `ಮಹಾ’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ಹನ್ಸಿಕಾಗೆ ಈ ಸಿನಿಮಾ ತುಂಬಾನೇ ಸ್ಪೆಷಲ್ ಏಕೆಂದರೆ ಹನ್ಸಿಕಾ ನಟನೆಯ 50ನೇ ಸಿನಿಮಾ ಇದಾಗಿದ್ದು, ಪ್ರಚಾರದಲ್ಲಿ ಕಾರ್ಯದಲ್ಲಿ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ದುಬಾರಿ ಸೀರೆಯುಟ್ಟು ನಟಿ ಮಿಂಚಿದ್ದಾರೆ.

     

    View this post on Instagram

     

    A post shared by Hansika Motwani (@ihansika)

    ಬಾಲನಟಿಯಾಗಿ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ಪ್ರಸ್ತುತ ನಾಯಕಿಯಾಗಿ ಫಿಲ್ಮಿಂ ದುನಿಯಾದಲ್ಲಿ ಮಿಂಚ್ತಿದ್ದಾರೆ. ಕನ್ನಡದ `ಬಿಂದಾಸ್’ ಚಿತ್ರದಲ್ಲಿ ಪುನೀತ್‌ಗೆ ನಾಯಕಿಯಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ರಿಲೀಸ್ ಆಗಿರುವ ತಮಿಳಿನ `ಮಹಾ’ ಚಿತ್ರ ಹನ್ಸಿಕಾ ನಟನೆಯ 50ನೇ ಚಿತ್ರವಾಗಿದೆ. ಹಾಗಾಗಿ ದುಬಾರಿ ಸೀರೆಯಲ್ಲಿ ಧರಿಸಿ ಬಂದಿದ್ದಾರೆ. 71000 ಸಾವಿರದ ಈ ದುಬಾರಿ ಸೀರೆಯಲ್ಲಿ ಮಿರ ಮಿರ ಅಂತಾ ಮಿಂಚಿದ್ದಾರೆ. ನಟಿಯ ಸ್ಯಾರಿಯ ಫೋಟೋ ಜತೆ ಸೀರೆ ಬೆಲೆ ಕೂಡ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಸೀರೆಯಲ್ಲಿ ಸಿಂಪಲ್‌ ಡಿಸೈನ್‌ಯಿದ್ದು, ಕಮ್ಮಿ ತೂಕವಿರುವ ಸೀರೆಯಾಗಿದೆ. ಇದನ್ನೂ ಓದಿ:ರಣ್‌ವೀರ್ ಸಂಪೂರ್ಣ ಬೆತ್ತಲೆ:ಕಣ್ಣುಮುಚ್ಚಿಕೊಂಡ ದೀಪಿಕಾ

     

    View this post on Instagram

     

    A post shared by Hansika Motwani (@ihansika)

    ಕಾಫಿ ಮತ್ತು ಕಪ್ಪು ಬಣ್ಣದ ಸ್ಲೀವ್‌ಲೆಸ್ ಸೀರೆಯಲ್ಲಿ ಹನ್ಸಿಕಾ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ತಮಿಳಿನ `ಮಹಾ’ ಚಿತ್ರದ ಆಡಿಯೋ ಲಾಂಚ್‌ನಲ್ಲಿ 71000 ಸಾವಿರದ ದುಬಾರಿ ಸೀರೆಯಲ್ಲಿ ಬಹುಭಾಷಾ ನಟಿ ಹನ್ಸಿಕಾ ಕಾಣಿಸಿಕೊಂಡಿದ್ದಾರೆ. ನಟಿಯ ಲುಕ್ ಜತೆ ಸೀರೆ ಬೆಲೆ ಕೂಡ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]