Tag: Kollywood

  • ಕುವೈತ್‌ನಲ್ಲಿ ದಳಪತಿ ವಿಜಯ್ ನಟನೆಯ `ಬೀಸ್ಟ್’ ಸಿನಿಮಾ ಬ್ಯಾನ್

    ಕುವೈತ್‌ನಲ್ಲಿ ದಳಪತಿ ವಿಜಯ್ ನಟನೆಯ `ಬೀಸ್ಟ್’ ಸಿನಿಮಾ ಬ್ಯಾನ್

    ಕಾಲಿವುಡ್‌ನ ಸೂಪರ್‌ಸ್ಟಾರ್ ದಳಪತಿ ವಿಜಯ್ ನಟನೆಯ `ಬೀಸ್ಟ್’ ಇದೇ ಏಪ್ರಿಲ್ 13ಕ್ಕೆ ತೆರೆಯಲ್ಲಿ ಅಬ್ಬರಿಸಲು ಸಿದ್ದವಾಗಿದೆ. ಈಗಾಗಲೇ ಚಿತ್ರದ ಟ್ರೇಲರ್ ಮೂಲಕ ಸಿಕ್ಕಾಪಟ್ಟೆ ಹೈಪ್ ಕ್ರಿಯೆಟ್ ಮಾಡಿದೆ. ರಿಲೀಸ್‌ಗೂ ಮುಂಚೆನೇ ಒಂದಲ್ಲ ಒಂದು ವಿಚಾರವಾಗಿ ಸೌಂಡ್ ಮಾಡ್ತಿರೋ `ಬೀಸ್ಟ್’ ಇದೀ ಮತ್ತೊಂದು ಕಾರಣಕ್ಕಾಗಿ ಸುದ್ದಿ ಆಗಿದೆ. ಈಗ `ಬೀಸ್ಟ್’ ಚಿತ್ರಕ್ಕೆ ಹೊಸ ಸಂಕಷ್ಟವೊಂದು ಎದುರಾಗಿದ್ದು, ಕುವೈತ್‌ನಲ್ಲಿ ವಿಜಯ್ ನಟನೆಯ `ಬೀಸ್ಟ್’ ಚಿತ್ರದ ರಿಲೀಸ್ ಅನ್ನು ಬ್ಯಾನ್ ಮಾಡಲಾಗಿದೆ.

    ಇತ್ತೀಚಿಗಷ್ಟೇ `ಬೀಸ್ಟ್’ ಚಿತ್ರದ ಟ್ರೇಲರ್‌ ರಿಲೀಸ್ ಆಗಿತ್ತು. ಕಥೆಯ ಕುರಿತು ಚಿತ್ರತಂಡ ಒಂದಿಷ್ಟು ಹಿಂಟ್ ಬಿಟ್ಟುಕೊಟ್ಟಿತ್ತು. ಭಯೋತ್ಪಾದಕರು ಮಾಲ್ ಒಂದನ್ನು ಹೈಜಾಕ್ ಮಾಡುತ್ತಾರೆ. ನಾಯಕ ಮಾಲ್ ಒಳಗಡೆಯಿರುತ್ತಾನೆ. ಹೇಗೆ ಅಲ್ಲಿನ ಜನರನ್ನು ರಕ್ಷಿಸುತ್ತಾನೆ ಅನ್ನುವುದು ಚಿತ್ರದ ತಿರುಳು. ಇದೇ ವಿಚಾರವಾಗಿ ಕುವೈತ್ `ಬೀಸ್ಟ್’ ಸಿನಿಮಾವನ್ನು ಬ್ಯಾನ್ ಮಾಡಿದೆ.

    ಚಿತ್ರದಲ್ಲಿ ಪಾಕಿಸ್ತಾನ ಕುರಿತ ವಿಚಾರಗಳು, ಭಯೋತ್ವಾದನೆಯ ಚಿತ್ರಣ `ಬೀಸ್ಟ್’ನಲ್ಲಿದೆ. ಹಾಗಾಗಿಯೇ ಕುವೈತ್ ಮಾಹಿತಿ ಸಚಿವಾಲಯ ಈ ಚಿತ್ರವನ್ನು ನಿಷೇಧ ಮಾಡಿದೆ. ಕುವೈತ್‌ನಲ್ಲಿ ಬ್ಯಾನ್ ಆಗಿರೋ ಚಿತ್ರಗಳಲ್ಲಿ `ಕುರುಪ್’ ಮತ್ತು `ಎಫ್‌ಐಆರ್’ ಚಿತ್ರಗಳು ಬ್ಯಾನ್ ಆಗಿವೆ. ಕುವೈತ್ ಸೆನ್ಸಾರ್ ಮಂಡಳಿ ಚಿತ್ರಗಳ ವಿಚಾರದಲ್ಲಿ ಕಠಿಣ ಹೆಜ್ಜೆ ಇಟ್ಟಿದೆ. ಭಯೋತ್ಪಾದನೆ ಚಿತ್ರಕಥೆಯಿರೋ ಚಿತ್ರಗಳನ್ನು ಕುವೈತ್ ಪ್ರೋತ್ಸಾಹಿಸೋದಿಲ್ಲ. ಇದನ್ನು ಓದಿ: ತೆರೆ ಮೇಲೆ ಮತ್ತೆ ಒಂದಾಗಲಿದ್ದಾರಂತೆ ಸಮಂತಾ-ನಾಗಚೈತನ್ಯ ಜೋಡಿ!

    ದಳಪತಿ ವಿಜಯ್‌ಗೆ ವಿಶ್ವದ ಮೂಲೆ ಮೂಲೆಯಲ್ಲೂ ಅಭಿಮಾನಿಗಳಿದ್ದಾರೆ. ಹಾಗೆಯೇ ಕುವೈತ್‌ಯಲ್ಲೂ ಕೂಡ. `ಬೀಸ್ಟ್’ ಸಿನಿಮಾವನ್ನ ನೋಡಬೇಕು ಅಂತಾ ಕಾತರದಿಂದ ಕಾಯುತ್ತಿದ ಕುವೈತ್ ಸಿನಿರಸಿಕರಿಗೆ ನಿರಾಸೆಯಾಗಿದೆ.

  • ಕೊರಟಾಲ ಶಿವ ಸಿನಿಮಾದಲ್ಲಿ ಒಂದಾಗ್ತಾರಾ ದಕ್ಷಿಣದ ಸ್ಟಾರ್ಸ್ ?

    ಕೊರಟಾಲ ಶಿವ ಸಿನಿಮಾದಲ್ಲಿ ಒಂದಾಗ್ತಾರಾ ದಕ್ಷಿಣದ ಸ್ಟಾರ್ಸ್ ?

    ಬ್ಬರು ಟಾಲಿವುಡ್‌ನ ಐಕಾನ್ ಸ್ಟಾರ್, ಇನ್ನೊಬ್ಬರು ತಮಿಳಿನ ಮಾಸ್ ಮಾರಿ, ಈ ಇಬ್ಬರು ಸ್ಟಾರ್‌ಗಳು ಒಂದೇ ಸ್ಕ್ರೀನ್ ನಲ್ಲಿ ಕಾಣಿಸಿಕೊಂಡರೆ, ಅಭಿಮಾನಿಗಳ ಕಣ್ಣಿಗೆ ಹಬ್ಬವೋ ಹಬ್ಬ. ಯೆಸ್..`ಪುಷ್ಪ’ ಸ್ಟಾರ್ ಅಲ್ಲು ಅರ್ಜುನ್ ಮತ್ತು ತಮಿಳಿನ ರೌಡಿ ಬೇಬಿ ಖ್ಯಾತಿಯ ಧನುಷ್ ಈ ಇಬ್ಬರೂ ನಟರು ಸೌತ್ ಸಿನಿರಂಗದ ಬಹುಬೇಡಿಕೆಯ ನಟರು. ಈ ಇಬ್ಬರೂ ಸ್ಟಾರ್‌ಗಳು ಒಂದೇ ಚಿತ್ರದಲ್ಲಿ ಒಟ್ಟಿಗೆ ನಟಿಸುವುದಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಸಿದ್ದಾರೆ. ಹಾಗಾಗಿ ಬರಲಿರುವ ಅವರ ಈ ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ದುಪ್ಪಟಾಗಿದೆ. ಇದನ್ನೂ ಓದಿ : ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ಸದ್ಯ, ಈ ಇಬ್ಬರೂ ಸ್ಟಾರ್‌ಗಳು ಒಟ್ಟಿಗೆ ಚಿತ್ರ ಮಾಡೋ ಸುದ್ದಿಯಂತೂ ಟಾಲಿವುಡ್ ಗಲ್ಲಿ ಗಲ್ಲಿಯಲ್ಲೂ ಸೌಂಡ್ ಮಾಡುತ್ತಿದೆ. ಬಾಕ್ಸ್ಆಫೀಸ್ ಉಡೀಸ್ ಮಾಡೋ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಮತ್ತು ಬಾಲಿವುಡ್, ಹಾಲಿವುಡ್ ಅಂತಾ ಸೌಂಡ್ ಮಾಡ್ತಿರೋ ಧನುಷ್ ಒಂದೇ ಚಿತ್ರದಲ್ಲಿ ತೋರಿಸೋಕೆ ಹೊರಟಿದ್ದಾರೆ ನಿರ್ದೇಶಕ ಕೊರಟಾಲ ಶಿವ. ಈ ನಟರಿಗಾಗಿಯೇ ಅವರು ಡಿಫರೆಂಟ್ ಸಬ್‌ಜೆಕ್ಟ್ ಹುಡುಕಿದ್ದಾರಂತೆ. ಹಾಗಂತ ಚಿತ್ರತಂಡದಿಂದ ಟೈಟಲ್ ಆಗಲಿ, ಈ ಚಿತ್ರದ ಬಗ್ಗೆ ಮಾಹಿತಿ ಆಗಲಿ ಅಧಿಕೃತವಾಗಿ ರಿವೀಲ್ ಆಗಿಲ್ಲ. ಆದ್ರೆ ಈ ಇಬ್ಬರೂ ಸ್ಟಾರ್‌ಗಳು ಒಟ್ಟಿಗೆ ಬರೋ ಸುದ್ದಿಯಂತೂ ಅವರವರ ಫ್ಯಾನ್ಸ್ ಗೆ ಥ್ರಿಲ್ ನೀಡಿದೆ. ಇದನ್ನೂ ಓದಿ : ಜುಲೈ 28ರಂದು ಗುಮ್ಮನ ಕಥೆ – ಯುಗಾದಿ ದಿನ ಡಬಲ್ ಖುಷಿ ಕೊಟ್ಟ ‘ವಿಕ್ರಾಂತ್ ರೋಣ’ ಟೀಮ್

    ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರ ಆಗಿರಲಿದ್ದು, ಈ ಮಲ್ಟಿಸ್ಟಾರ್ ಮೂವ್ಹಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗಲಿದೆ. ನಿರ್ದೇಶಕ ಕೊರಟಾಲ ಶಿವ ಸದ್ಯ `ಆಚಾರ್ಯ’ ಚಿತ್ರದ ರಿಲೀಸ್‌ನಲ್ಲಿ ಬ್ಯುಸಿ ಆಗಿದ್ದರೆ, ಅತ್ತ ಅಲ್ಲು ಅರ್ಜುನ್ `ಪುಷ್ಪ ಪಾರ್ಟ್ ೨’ನಲ್ಲಿ ಬ್ಯುಸಿಯಾಗಿದ್ದಾರೆ. ನಟ ಧನುಷ್ ಕೂಡ ಬಾಲಿವುಡ್, ಹಾಲಿವುಡ್ ಚಿತ್ರ ಅಂತಾ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಒಟ್ನಲ್ಲಿ ಈ ಸುದ್ದಿ ಕೇಳಿರೋ ಅಭಿಮಾನಿಗಳಂತೂ ಸುದ್ದಿ ನಿಜವಾಗಲಿ ಎಂದು ಹಾರೈಸಿದ್ದಾರೆ.

  • ಪುರಿ ಜಗನ್ನಾಥ್ ಜೊತೆ ವಿಜಯ್ ದೇವರಕೊಂಡ ಮತ್ತೊಂದು ಸಿನಿಮಾ

    ಪುರಿ ಜಗನ್ನಾಥ್ ಜೊತೆ ವಿಜಯ್ ದೇವರಕೊಂಡ ಮತ್ತೊಂದು ಸಿನಿಮಾ

    ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ ಜಗನ್ನಾಥ್ ಜೋಡಿ JGM ಎಂಬ ಆಕ್ಷನ್ ಡ್ರಾಮಾ ಸಿನಿಮಾ ಉಣಬಡಿಸಲು ತಯಾರಾಗುತ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇವತ್ತು ಮುಂಬೈನಲ್ಲಿ ಅದ್ಧೂರಿಯಾಗಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಜನಗಣಮನ ಸಿನಿಮಾಗೆ ಮುನ್ನುಡಿ ಬರೆಯಲಾಯಿತು.

    JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಡೈಲಾಗ್ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ನಡಿ ಚಾರ್ಮಿ ಕೌರ್, ವಂಶಿ ಪಡಿಪೆಲ್ಲಿ ಬಂಡವಾಳ ಹೂಡ್ತಿದ್ದು, ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

    ನಮ್ಮ ಮುಂದಿನ ಸಿನಿಮಾ JGM  ಬಗ್ಗೆ  ಮಾಹಿತಿ ಹಂಚಿಕೊಂಡಿರುವುದು ಖುಷಿಯಾಗ್ತಿದೆ. ವಿಜಯ್ ಜೊತೆ ಮತ್ತೆ ಕೈ ಜೋಡಿಸಿದ್ದೇನೆ. ಇದು ಪಕ್ಕಾ ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

    ವಿಜಯ್ ದೇವರಕೊಂಡ, ಪುರಿ ಪ್ರಾಜೆಕ್ಟ್ ಭಾಗವಾಗಿರೋದು ಖುಷಿಯಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆಯಾಗಿದ್ದು, ಚಾರ್ಮಿ ಹಾಗೂ ಇಡೀ ತಂಡದ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ವಂಶಿ ಪಡಿಪೆಲ್ಲಿ, JGM ಅದ್ಭುತ ಕಥೆಯಾಗಿದ್ದು, ಇದು ಭಾರತೀಯರ ಮನತಟ್ಟುತ್ತದೆ. ವಿಜಯ್, ಪುರಿ, ಚಾರ್ಮಿ ಜೊತೆ ಪ್ರಾಜೆಕ್ಟ್ ಕೆಲಸ‌ ಮಾಡುತ್ತಿರುವುದು ಖುಷಿಕೊಟ್ಟಿದೆ ಎಂದರು. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ವಿದೇಶದ ನಾನಾ ಭಾಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ಹಾಕಿದ್ದು, ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಕ್ಷನ್ ಎಂಟರ್ ಟೈನರ್ ಕಥಾನಕ ಹೊಂದಿರುವ JGM ಸಿನಿಮಾ ಆಗಸ್ಟ್ 3 2023 ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ.

  • ಮುನುಸ್ವಾಮಿ ಬಲಿ ಪಡೆದ ಕಾಲಿವುಡ್ ಖ್ಯಾತ ನಟ ಸಿಂಬು ಕಾರು

    ಮುನುಸ್ವಾಮಿ ಬಲಿ ಪಡೆದ ಕಾಲಿವುಡ್ ಖ್ಯಾತ ನಟ ಸಿಂಬು ಕಾರು

    ಕಾಲಿವುಡ್ ಖ್ಯಾತ ನಟ ಸಿಂಬು ಒಡೆತನದ ಐಶಾರಾಮಿ ಕಾರು ಮಾ.18 ರಂದು ವ್ಯಕ್ತಿಯೋರ್ವನನ್ನು ಬಲಿ ಪಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತಕ್ಕೀಡಾದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಮುನುಸ್ವಾಮಿ ಎಂದು ಗುರುತಿಸಲಾಗಿದ್ದು, 70ರ ವಯಸ್ಸಿನ ಇವರು ತೇನಂಪೇಟೆ ಪ್ರದೇಶದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಕೆಲವೇ ದಿನಗಳ ಹಿಂದೆ ಅವರಿಗೆ ಕಾಲಿಗೆ ಪೆಟ್ಟಾಗಿದ್ದರಿಂದ, ತೆವಳುತ್ತಾ ರಸ್ತೆ ದಾಟುತ್ತಿದ್ದರು ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಸಿಂಬು ಹೆಸರಿನಲ್ಲಿರುವ ಕಾರು ಮುನುಸ್ವಾಮಿ ಮೇಲೆ ಹರಿದಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳಿಯರು ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

     

    ಅಪಘಾತಕ್ಕೀಡಾದ ತಕ್ಷಣವೇ ಕಾರಿನಲ್ಲಿದ್ದವರು ಪರಾರಿ ಆಗಿದ್ದಾರೆ. ಹಾಗಾಗಿ ಯಾರೆಲ್ಲ ಕಾರಿನಲ್ಲಿ ಇದ್ದರು ಎಂದು ಇನ್ನೂ ಪತ್ತೆ ಆಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಚಾಲಕ ಸೆಲ್ವಂ ಎಂಬುವವರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದು, ಹಚ್ಚಿನ ವಿಚಾರಣೆ ನಡೆಸಿದ್ದಾರೆ ಎನ್ನಲಾಗುತ್ತಿದೆ.  ಸಿಲೆಬ್ರಿಟಿಗಳ ಈ ವರ್ತನೆಗೆ ಖಂಡನೆ ವ್ಯಕ್ತವಾಗುತ್ತಿದೆ.

  • ರೌಡಿಗಳಿಗೆ ಉತ್ತೇಜನ ಕಾರಣಕ್ಕೆ ನಯನತಾರಾ ಮೇಲೆ ದೂರು ದಾಖಲು

    ರೌಡಿಗಳಿಗೆ ಉತ್ತೇಜನ ಕಾರಣಕ್ಕೆ ನಯನತಾರಾ ಮೇಲೆ ದೂರು ದಾಖಲು

    ಮಿಳಿನ ಸ್ಟಾರ್ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಇದೀಗ ಸಂಕಷ್ಟ ಎದುರಿಸುವಂತಾಗಿದೆ. ಪ್ರಣಯದ ಹಕ್ಕಿಗಳಂತೆ ಎಲ್ಲಿಂದರಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿಯ ಮೇಲೆ ದೂರು ದಾಖಲಾಗಿದ್ದು, ದೂರಿನಲ್ಲಿ ಇವರು ರೌಡಿಗಳಿಗೆ ಉತ್ತೇಜಿಸುತ್ತಾರೆ ಎಂದು ಬರೆಯಲಾಗಿದೆ.

    ನಯನತಾರಾ ಮತ್ತು ವಿಘ್ವೇಶ್ ಶಿವನ್ ಸದ್ಯದಲ್ಲಿಯೇ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿಯಿದೆ. ಇಬ್ಬರೂ ಈಗಾಗಲೇ ಎರಡು ವರ್ಷದಿಂದ ಲೀವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ತಮ್ಮ ಪ್ರೀತಿಯ ನೆನಪಾಗಾಗಿ ಅವರು ‘ರೌಡಿ ಪಿಕ್ಚರ್ಸ್’ ಸಂಸ್ಥೆಯನ್ನು ಶುರು ಮಾಡಿದ್ದರು. ಈ ಸಂಸ್ಥೆಯಿಂದ ಭೂಗತ ಜಗತ್ತಿನ ಕಥೆಗಳನ್ನೇ ಸಿನಿಮಾ ಮಾಡುತ್ತಿದ್ದಾರೆ ಎಂದು ದೂರು ದಾರರು ಆರೋಪ ಮಾಡಿದ್ದಾರೆ. ಇವರ ಚಿತ್ರಗಳಿಂದಾಗಿ ರೌಡಿಗಳಿಗೆ ಮತ್ತಷ್ಟು ಉತ್ತೇಜನ ಸಿಗುತ್ತಿದೆ ಎಂದೂ ದೂರಲಾಗಿದೆ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ರೌಡಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಂತಹ ಬಹುತೇಕ ಸಿನಿಮಾಗಳು ರೌಡಿಸಂ ಹಿನ್ನೆಲೆಯ ಕಥೆಯನ್ನೇ ಒಳಗೊಂಡಿವೆ. ಅಲ್ಲದೇ ವಿಘ್ನೇಶ್ ಶಿವನ್ ನಿರ್ದೇಶನದ, ವಿಜಯ್ ಸೇತುಪತಿ ನಟನೆಯ ‘ರೌಡಿಧಂ’ ಸಿನಿಮಾ ಕೂಡ ಅಂಥದ್ದೇ ಕಥೆಯನ್ನು ಹೊಂದಿತ್ತು. ಈ ಸಿನಿಮಾದಲ್ಲಿ ನಯನತಾರಾ ಕೂಡ ನಟಿಸಿದ್ದರು. ಇಲ್ಲಿಯೇ ನಯನತಾರಾಗೂ ಮತ್ತು ವಿಘ್ನೇಶ್ ಗೂ ಪ್ರೇಮಾಂಕುರವಾಗಿತ್ತು.

  • ಹೆಂಡತಿ ಜೊತೆ ರೋಮ್ಯಾಂಟಿಕ್ ಮೂಡ್‍ನಲ್ಲಿ ತಲಾ ಅಜಿತ್

    ಹೆಂಡತಿ ಜೊತೆ ರೋಮ್ಯಾಂಟಿಕ್ ಮೂಡ್‍ನಲ್ಲಿ ತಲಾ ಅಜಿತ್

    ಕಾಲಿವುಡ್ ನಟ ತಲಾ ಅಜಿತ್ ಮತ್ತು ಶಾಲಿನಿ ಕ್ಯಾಮೆರಾ ಮುಂದೆ ಅಷ್ಟಾಗಿ ಕಾಣಿಸಿಕೊಳ್ಳದಿದ್ದರೂ ಈ ದಂಪತಿಯ ಕ್ಯೂಟ್ ಫೋಟೋಗಳು ಮಾತ್ರ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಸದ್ಯ ಈ ಜೋಡಿಯ ರೋಮ್ಯಾಂಟಿಕ್ ಫೋಟೋವೊಂದನ್ನು ಶಾಲಿನಿ ಅವರ ಸಹೋದರಿ ಶಾಮ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಅಜಿತ್ ಹಾಗೂ ಶಾಲಿನಿ ಅವರದ್ದು ಲವ್ ಮ್ಯಾರೇಜ್. ಕೇರಳ ಮೂಲದ ಶಾಲಿನಿ ಅವರನ್ನು ಅಜಿತ್ 2000ರ ಏಪ್ರಿಲ್ 24ರಂದು ವಿವಾಹವಾದರು. ಸದ್ಯ ಈ ಜೋಡಿ ಮದುವೆಯಾಗಿ 23 ವರ್ಷ ಕಳೆದಿದ್ದು, ಇವರ ವಿವಾಹ ವಾರ್ಷಿಕೋತ್ಸವಕ್ಕೆ ಶಾಲಿನಿ ಅವರ ಸಹೋದರಿ ಶಾಮ್ಲಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ಶುಭಕೋರಿದ್ದಾರೆ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

     

    View this post on Instagram

     

    A post shared by Shamlee (@shamlee_official)

    ಫೋಟೋದಲ್ಲಿ ಅಜಿತ್ ಶಾಲಿನಿ ಅವರನ್ನು ಹಿಂದಿನಿಂದ ತಬ್ಬಿಕೊಂಡು ರೋಮ್ಯಾಂಟಿಕ್ ಆಗಿ ಶಾಲಿನಿ ಅವರ ಕೆನ್ನೆಗೆ ಚುಂಬಿಸುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಈ ಫೋಟೋ ಜೊತೆಗೆ ಕ್ಯಾಪ್ಷನ್‍ನಲ್ಲಿ 23 ವರ್ಷಗಳ ಒಗ್ಗಟ್ಟಿನ ದಾಂಪತ್ಯ ಎಂದು ಶಾಮ್ಲಿ ಬರೆಯಲಾಗಿದೆ.

    ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳಿಂದ ಸಾಕಷ್ಟು ಲೈಕ್ಸ್ ಹಾಗೂ ಕಾಮೆಂಟ್‍ಗಳ ಸುರಿಮಳೆಯೇ ಹರಿದು ಬಂದಿದೆ. ಅಜಿತ್ ಹಾಗೂ ಶಾಲಿನಿಗೆ ಅನುಷ್ಕಾ ಕುಮಾರ್, ಅದ್ವಿಕ್ ಕುಮಾರ್ ಎಂಬ ಮುದ್ದಾದ ಮಕ್ಕಳಿದ್ದಾರೆ.  ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

  • ಕನ್ನಡದ ‘ದಸರಾ’ ವರ್ಸಸ್ ತೆಲುಗಿನ ‘ದಸರಾ’: ಯಾರಿಗೆ ಸಿಗತ್ತೆ ದಸರಾ ಟೈಟಲ್?

    ಕನ್ನಡದ ‘ದಸರಾ’ ವರ್ಸಸ್ ತೆಲುಗಿನ ‘ದಸರಾ’: ಯಾರಿಗೆ ಸಿಗತ್ತೆ ದಸರಾ ಟೈಟಲ್?

    ಪ್ಯಾನ್ ಇಂಡಿಯಾ ಸಿನಿಮಾ ಅಂದಾಕ್ಷಣ ಏನೆಲ್ಲ ಸಮಸ್ಯೆಗಳು ಎದುರಾಗುತ್ತವೆ ಎನ್ನುವುದಕ್ಕೆ ಈ ಪೋಸ್ಟರ್ ಮೊದಲ ಬಾರಿಗೆ ಸಾಕ್ಷಿಯಾಗಿ ನಿಂತಿದೆ. ಒಂದು ತೆಲುಗಿನ ನಾನಿ ನಟನೆಯ ಚಿತ್ರ. ಇದಕ್ಕೆ ತೆಲುಗು ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಇವರು ಇಟ್ಟಿರುವ ಹೆಸರು ‘ದಸರಾ’. ಮತ್ತೊಂದು ಅಪ್ಪಟ ಕನ್ನಡದ್ದೆ ಚಿತ್ರ. ನೀನಾಸಂ ಸತೀಶ್ ನಾಯಕನಾಗಿ ನಟಿಸುತ್ತಿರುವ ಚಿತ್ರ. ಈ ಸಿನಿಮಾಗೂ ‘ದಸರಾ’ ಎಂದೇ ಹೆಸರಿಡಲಾಗಿದೆ.

    ಎರಡೂ ಚಿತ್ರಗಳೂ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿವೆ. ಹೀಗಾಗಿ ಯಾರಿಗೆ ಈ ಟೈಟಲ್ ಉಳಿಯುತ್ತದೆ ಎನ್ನುವ ಚರ್ಚೆ ಶುರುವಾಗಿದೆ. ನೀನಾಸಂ ಸತೀಶ್ ನಟನೆಯ ‘ದಸರಾ’ ಸಿನಿಮಾದ ಶೂಟಿಂಗ್ ಈಗಾಗಲೇ ಕಂಪ್ಲಿಟ್ ಆಗಿದೆ. ತೆಲುಗಿನ ‘ದಸಾರ’ ಕೇವಲ ಫಸ್ಟ್ ಲುಕ್ ಮಾತ್ರ ಬಿಡುಗಡೆ ಮಾಡಿದೆ. ಹಾಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಯಾರ ಪರವಾಗಿ ನಿಲ್ಲುತ್ತದೆ ಎನ್ನುವ ಪ್ರಶ್ನೆ ಎದ್ದಿದೆ. ಇದನ್ನೂ ಓದಿ : ಸುದೀಪ್, ಉಪ್ಪಿ ಕಾಂಬಿನೇಷನ್ ‘ಕಬ್ಜ’ ಚಿತ್ರಕ್ಕೆ ಇಬ್ಬರು ದಕ್ಷಿಣ ತಾರೆಯರ ಎಂಟ್ರಿ

    ಯಾರೇ ಸಿನಿಮಾ ಮಾಡಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರನ್ನು ನೋಂದಾಯಿಸಬೇಕು ಎನ್ನುವ ನಿಯಮವಿದೆ. ಯಾರು ಮೊದಲು ಹೆಸರನ್ನು ನೋಂದಾಯಿಸಿಕೊಳ್ಳುತ್ತಾರೋ ಅವರಿಗೆ ಶೀರ್ಷಿಕೆಗಳು ಸಿಗುತ್ತವೆ. ‘ದಸರಾ’ ಸಿನಿಮಾವನ್ನು ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಿರ್ಮಾಪಕಿ, ನಟಿ ಶರ್ಮಿಳಾ ಮಾಂಡ್ರೆ ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ನಿಯಮದ ಪ್ರಕಾರ ಇದೇ ತಂಡಕ್ಕೆ ‘ದಸರಾ’ ಟೈಟಲ್ ಬಳಸಿಕೊಳ್ಳುವ ಹಕ್ಕಿದೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ನಾನಿ ನಟನೆಯ ತೆಲುಗಿನ ಸಿನಿಮಾ ಡಬ್ ಆಗಿ ಕನ್ನಡದಲ್ಲೂ ರಿಲೀಸ್ ಆಗಲಿದೆ. ಹಾಗಾಗಿ ಕನ್ನಡದಲ್ಲಿ ತಮ್ಮ ಸಿನಿಮಾದ ಟೈಟಲ್ ಅನ್ನು ಬದಲಿಸುವುದು ಅನಿವಾರ್ಯವಾಗಬಹುದು. ಅದನ್ನು ಸಿನಿಮಾ ತಂಡ ಒಪ್ಪಿಕೊಳ್ಳುತ್ತಾ ಅಥವಾ ಕಾನೂನಿನಲ್ಲಿ ಮತ್ತೊಂದು ದಾರಿಯೂ ಇದೆ. ಅದನ್ನು ಬಳಸಿಕೊಳ್ಳುತ್ತಾ ಅನ್ನುವುದು ಸದ್ಯಕ್ಕಿರುವ ಪ್ರಶ್ನೆ. ಇದನ್ನೂ ಓದಿ : ಸರ್ರಂತ ಸುಡುವ ಜ್ವಾಲಾಗ್ನಿ ಆಗಿ ಬಂದ ಈ ತೂಫಾನ್: ಕೆಜಿಎಫ್ 2 ಫಸ್ಟ್ ಲಿರಿಕಲ್ ಹಾಡು ರಿಲೀಸ್

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿರುವ ಎಷ್ಟೋ ಶೀರ್ಷಿಕೆಯನ್ನು ಸೆನ್ಸಾರ್ ಮಂಡಳಿ ಒಪ್ಪಿಕೊಂಡಿಲ್ಲ. ಕೆಲವು ಬಾರಿ ಕೋರ್ಟಿಗೂ ಹೋಗಿ ತಮಗಿಷ್ಟದ ಟೈಟಲ್ ಪಡೆದುಕೊಂಡ ಉದಾಹರಣೆಯೂ ಇದೆ. ಯಾರ ಸಿನಿಮಾ ಮೊದಲು ಸೆನ್ಸಾರ್ ಆಗುತ್ತದೆಯೋ, ಆ ಟೈಟಲ್ ಗೆ ಮೊದಲ ಆದ್ಯತೆ ಎನ್ನುವ ಮತ್ತೊಂದು ನಿಯಮವಿದೆ. ಈ ಎಲ್ಲ ಗೊಂದಲಗಳ ಮಧ್ಯೆ ಯಾವ ಚಿತ್ರತಂಡಕ್ಕೆ ‘ದಸರಾ’ ಟೈಟಲ್ ಸಿಗುತ್ತದೆಯೋ ಕಾದು ನೋಡಬೇಕು.

  • ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ದೇ ಮೊದಲ ಬಾರಿಗೆ ತೆಲುಗಿನ ಇಬ್ಬರೂ ಸ್ಟಾರ್ ನಟರು ಒಂದಾಗಿ ‘ಆರ್.ಆರ್.ಆರ್’ ಸಿನಿಮಾ ಮಾಡಿದ್ದಾರೆ. ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಈ ಇಬ್ಬರೂ ಕಲಾವಿದರ ಅಭಿಮಾನಿಗಳಿಗೆ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ, ರಾಜಮೌಳಿ ಈ ಸಿನಿಮಾದಲ್ಲಿ ಇಬ್ಬರನ್ನೂ ಒಟ್ಟಾಗಿಸಿಕೊಂಡು ಸಿನಿಮಾ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಯಾರು ಹೀರೋ, ಯಾರು ವಿಲನ್ ಎಂಬ ಚರ್ಚೆ ಶುರುವಾಗಿದೆ.

    ಇಂದು ಆರ್.ಆರ್.ಆರ್ ಚಿತ್ರತಂಡ ಕರ್ನಾಟಕಕ್ಕೆ ಆಗಮಿಸಿದೆ. ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಪ್ರಿ  ರಿಲೀಸ್ ಇವೆಂಟ್ ನಲ್ಲಿ ಭಾಗವಹಿಸುತ್ತಿದೆ. ಅದಕ್ಕೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಚಿತ್ರತಂಡ ಹಲವು ವಿಷಯಗಳನ್ನು ಹಂಚಿಕೊಂಡಿದೆ. ಈ ಸಿನಿಮಾದಲ್ಲಿ ಇಬ್ಬರೂ ನಾಯಕರಾ? ಅಥವಾ ಒಬ್ಬರು ವಿಲನ್ ಮತ್ತೊಬ್ಬರು ಹೀರೋನಾ ಎಂಬ ಪ್ರಶ್ನೆ ನಿರ್ದೇಶಕರಿಗೆ ಎದುರಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಸಿನಿಮಾದ ಟ್ರೇಲರ್ ನೋಡಿದರೆ, ಒಬ್ಬರು ಖಳನಟರಂತೆ ಮತ್ತೊಬ್ಬರು ನಟರಂತೆ ಬಿಂಬಿಸಲಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಯಾರು, ಯಾವ ಪಾತ್ರ ಮಾಡಿದ್ದಾರೆ ಎನ್ನುವ  ಕುತೂಹಲ ಹೆಚ್ಚಾಗಿದೆ. ಹೀಗಾಗಿ ನಿರ್ದೇಶಕ ರಾಜಮೌಳಿಗೆ ಮಾಧ್ಯಮದವರು ಈ ಪ್ರಶ್ನೆಯನ್ನು ಕೇಳಿದರು. ಅದಕ್ಕೆ ನಿರ್ದೇಶಕರಿಂದ ಬಂದ ಉತ್ತರ ಮಜವಾಗಿದೆ. ಈ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? ಎಂದು ಕೇಳಲಾದ ಪ್ರಶ್ನೆಗೆ, ಜಾಣತನದಿಂದಲೇ ಉತ್ತರ ನೀಡಿದ್ದಾರೆ ರಾಜಮೌಳಿ. ‘ಈ ಪ್ರಶ್ನೆಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರೇ ಉತ್ತರಿಸಬೇಕು’ ಎಂದು ಜಾರಿಕೊಂಡರು.

    ಕೂಡಲೇ ಈ ಪ್ರಶ್ನೆಗೆ ಉತ್ತರಸಿದ ಜೂನಿಯರ್ ಎನ್.ಟಿ.ಆರ್. ನಾವಿಬ್ಬರೂ ವಿಲನ್. ಜತೆಗೆ ರಾಜಮೌಳಿ ಅವರೂ ವಿಲನ್ ಎಂದು ಹಾಸ್ಯ ಚಟಾಕಿ ಹಾರಿಸಿದರು. ಅಲ್ಲಿಗೆ ಇಬ್ಬರಲ್ಲ ಒಬ್ಬರು ನೆಗೆಟಿವ್ ಶೇಡ್ ರೀತಿಯ ಪಾತ್ರವನ್ನು ಮಾಡಿದ್ದಾರೆ ಎನ್ನುವುದು ಖಾತ್ರಿಯಾಗಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

    ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

    ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ತಮ್ಮ ಆರ್.ಆರ್.ಆರ್ ಸಿನಿಮಾದ ಕಾರ್ಯಕ್ರಮಕ್ಕಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಆತ್ಮೀಯ ಸ್ನೇಹಿತರಾದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನೋಡುವುದಕ್ಕೆ ಆಗಿಲ್ಲ. ಆರ್.ಆರ್.ಆರ್ ಸಿನಿಮಾದ ಬಿಡುಗಡೆಯ ಬ್ಯುಸಿಯಲ್ಲಿರುವೆ. ಇದು ಸಿನಿಮಾ ರಿಲೀಸ್ ಆದ ತಕ್ಷಣವೇ ಜೇಮ್ಸ್ ಸಿನಿಮಾ ನೋಡುವೆ’ ಎಂದಿದ್ದಾರೆ ಜ್ಯೂನಿಯರ್.

    ಜ್ಯೂ.ಎನ್ಟಿಆರ್ ಮತ್ತು ಪುನೀತ್ ರಾಜ್ ಕುಮಾರ್ ಸ್ನೇಹ ಗಾಢವಾದದ್ದು. ಗೆಳೆತನದ ಕಾರಣಕ್ಕಾಗಿ ಪುನೀತ್ ಅವರ ಚಿತ್ರಕ್ಕೆ ಜೂ.ಎನ್.ಟಿ.ಆರ್ ಹಾಡು ಹೇಳಿದ್ದರು. ಇವರ ಕಾರ್ಯಕ್ರಮಕ್ಕಾಗಿ ಹಲವು ಬಾರಿ ಪುನೀತ್ ರಾಜ್ ಕುಮಾರ್ ಹೈದರಾಬಾದ್ ಗೆ ಹೋಗಿದ್ದಾರೆ. ಅಷ್ಟೊಂದು ಸ್ನೇಹ ಇವರಲ್ಲಿತ್ತು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಪುನೀತ್ ಸಿನಿಮಾ ಬಿಡುಗಡೆಯ ಬೆನ್ನಲ್ಲೇ ಜ್ಯೂನಿಯರ್ ಚಿತ್ರವೂ ರಿಲೀಸ್ ಆಗುತ್ತಿದೆ. ಜೇಮ್ಸ್ ಒಳ್ಳೆಯ ಓಪನಿಂಗ್ ಪಡೆದಿದೆ. ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ವಿಚ್ಛೇದನದ ನಂತರ ಪತ್ನಿಗೆ ‘ಸ್ನೇಹಿತೆ ಐಶ್ವರ್ಯ’ ಎಂದು ಟ್ವಿಟ್ ಮಾಡಿದ ಸ್ಟಾರ್ ನಟ ಧನುಷ್

    ವಿಚ್ಛೇದನದ ನಂತರ ಪತ್ನಿಗೆ ‘ಸ್ನೇಹಿತೆ ಐಶ್ವರ್ಯ’ ಎಂದು ಟ್ವಿಟ್ ಮಾಡಿದ ಸ್ಟಾರ್ ನಟ ಧನುಷ್

    ರಡು ತಿಂಗಳ ಹಿಂದೆಯಷ್ಟೇ ತಮ್ಮ ವಿಚ್ಛೇದನದ ವಿಷಯ ತಿಳಿಸಿ ಅಸಂಖ್ಯಾತ ಅಭಿಮಾನಿಗಳಿಗೆ ಶಾಕ್ ಕೊಟ್ಟವರು ತಮಿಳಿನ ಹೆಸರಾಂತ ನಟ ಧನುಷ್ ಮತ್ತು ರಜನಿಕಾಂತ್ ಪುತ್ರಿ, ನಿರ್ದೇಶಕಿ ಐಶ್ವರ್ಯ ರಜನಿಕಾಂತ್. ಇವರ ಈ ನಿರ್ಧಾರಕ್ಕೆ ರಜನಿಕಾಂತ್ ಅಭಿಮಾನಿಗಳು, ಧನುಷ್ ಅಭಿಮಾನಿಗಳು ಮತ್ತು ಐಶ್ವರ್ಯ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದರು. ಇಬ್ಬರನ್ನೂ ಕೂರಿಸಿಕೊಂಡು ಮತ್ತೆ ಒಂದಾಗುವ ಪ್ರಯತ್ನಗಳು ನಡೆದರೂ, ಅವು ಫಲ ಕೊಡಲಿಲ್ಲ. ಸದ್ಯ ದೂರವಾಗಿ ತಮ್ಮ ಪಾಡಿಗೆ ತಾವು ಕೆಲಸದಲ್ಲಿ ಬ್ಯುಸಿ ಆಗಿರುವ ಧನುಷ್ ಮತ್ತು ಐಶ್ವರ್ಯ ಪರಸ್ಪರ ಶುಭಾಶಯಗಳನ್ನು ಹೇಳಿಕೊಂಡಿದ್ದಾರೆ. ಮಾಜಿ ಪತ್ನಿಗೆ ‘ಸ್ನೇಹಿತೆ ಐಶ್ವರ್ಯ’ ಎಂದು ಬರೆದು ಧನುಷ್ ಪ್ರೀತಿ ತೋರಿದ್ದಾರೆ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್

    ಐಶ್ವರ್ಯ ಅವರು ನಿರ್ದೇಶನ ಮಾಡಿರುವ ಒಂದು ಮ್ಯೂಸಿಕ್ ವಿಡಿಯೋ ಯೂಟ್ಯೂವೊಂದರಲ್ಲಿ ರಿಲೀಸ್ ಆಗಿದೆ. ಆ ಲಿಂಕ್ ಅನ್ನು ಅವರು ಶೇರ್ ಕೂಡ ಮಾಡಿದ್ದಾರೆ. ಆ ವಿಡಿಯೋ ಆಲ್ಬಂ ನೋಡಿರುವ ಧನುಷ್ ‘ಹೊಸ ಮ್ಯೂಸಿಕ್ ವಿಡಿಯೋ ಮಾಡಿರುವ ನನ್ನ ಪ್ರೀತಿಯ ಫ್ರೆಂಡ್ ಐಶ್ವರ್ಯಗೆ ಶುಭಾಶಯಗಳು’ ಎಂದು ಧನುಷ್ ಟ್ವಿಟ್ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಐಶ್ವರ್ಯ ಕೂಡ ಅಷ್ಟೇ ಕೂಲ್ ಆಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

    2004ರಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ಐಶ್ವರ್ಯ ಮತ್ತು ಧನುಷ್, 18 ವರ್ಷಗಳ ದಾಂಪತ್ಯ ಜೀವನದಲ್ಲಿ ಒಟ್ಟಾಗಿ ನಡೆದವರು. ಈಗಷ್ಟೇ ಅವರು ದೂರವಾಗಿದ್ದಾರೆ. ತಮ್ಮ ಈ ಖಾಸಗಿ ವಿಷಯವನ್ನು ಗೌರವಿಸಿ ಎಂದು ಹೇಳುವ ಮೂಲಕ ತಾವು ವಿಚ್ಛೇದನಕ್ಕೆ ಅರ್ಜಿ ಹಾಕಿರುವ ವಿಷಯವನ್ನು ಬಹಿರಂಗ ಪಡಿಸಿದ್ದರು. ಆದರೆ, ಈ ಪ್ರೀತಿ ನಿರಂತರವಾಗಿ ಇಬ್ಬರ ಮಧ್ಯೆಯೂ ಇರಲಿದೆ ಎಂದು ಮಾತು ಕೊಟ್ಟಿದ್ದರು. ಆ ಮಾತನ್ನು ಧನುಷ್ ಇದೀಗ ಉಳಿಸಿಕೊಂಡಿದ್ದಾರೆ.