Tag: Kollywood

  • ಹೆಬ್ಬುಲಿ ಬೆಡಗಿಯಿಂದ ಟಾಪ್‍ಲೆಸ್ ಫೋಟೋ ಪೋಸ್ಟ್

    ಹೆಬ್ಬುಲಿ ಬೆಡಗಿಯಿಂದ ಟಾಪ್‍ಲೆಸ್ ಫೋಟೋ ಪೋಸ್ಟ್

    ಚೆನ್ನೈ: ಹೆಬ್ಬುಲಿ ಬೆಡಗಿ ನಟಿ ಅಮಲಾ ಪೌಲ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಟಾಪ್‍ಲೆಸ್ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

    ನಟಿ ಅಮಲಾ ಸದ್ಯಕ್ಕೆ ಚಿತ್ರದಿಂದ ಬ್ರೇಕ್ ತೆಗೆದುಕೊಂಡಿದ್ದು, ಇಂಡೋನೇಷ್ಯಾದ ಬಾಲಿಯಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲದೆ ಅಲ್ಲಿ ಸೆರೆ ಹಿಡಿದ ಫೋಟೋಗಳನ್ನೆಲ್ಲಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈಗ ಅವರು ಟಾಪ್‍ಲೆಸ್ ಫೋಟೋ ಹಂಚಿಕೊಂಡಿದ್ದು, ಇದೀಗ ಅದು ವೈರಲ್ ಆಗುತ್ತಿದೆ.

    ಅಮಲಾ ತಮ್ಮ ಇನ್‍ಸ್ಟಾದಲ್ಲಿ ಬಾತ್‍ಟಬ್‍ನಲ್ಲಿ ಅರೆ ನಗ್ನವಾಗಿರುವ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಈ ಫೋಟೋ 2 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದುಕೊಂಡಿದೆ. ಜೊತೆಗೆ ಸಾವಿರಾರು ಮಂದಿ ಕಮೆಂಟ್ ಮಾಡುವ ಮೂಲಕ ಹಾಟಾಗಿ ಕಾಣುತ್ತಿದ್ದೀರ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ತಮಿಳಿನ ‘ಅದಾಯಿ’ ಚಿತ್ರಕ್ಕಾಗಿ ಅಮಲಾ ಪೌಲ್ ಸಂಪೂರ್ಣ ಬೆತ್ತಲಾಗಿದ್ದರು. ಸಿನಿಮಾಕ್ಕಾಗಿ ಬೆತ್ತಲಾಗಿದ್ದ ಅಮಲಾ ಈಗ ನಿಜಜೀವನದಲ್ಲಿ ಟಾಪ್‍ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಸದ್ಯಕ್ಕೆ ಅಮಲಾ ತಮಿಳಿನಲ್ಲಿ ಎರಡು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಜೊತೆಗೆ ಹಿಂದಿಯ `ಲಸ್ಟ್ ಸ್ಟೋರಿಸ್’ ರಿಮೇಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  • ರಜನಿಕಾಂತ್‍ರಿಂದ ನೆರೆ ಸಂತ್ರಸ್ತರಿಗೆ ಮನೆ ವಿತರಣೆ

    ರಜನಿಕಾಂತ್‍ರಿಂದ ನೆರೆ ಸಂತ್ರಸ್ತರಿಗೆ ಮನೆ ವಿತರಣೆ

    ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯ ಹಸ್ತವನ್ನು ಚಾಚಿದ್ದಾರೆ.

    ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ನಿಂದ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್ ಅವರು ನೆರೆ ಸಂತ್ರಸ್ತರಿಗೆ ಉಚಿತವಾಗಿ ಮನೆಗಳನ್ನು ನಿರ್ಮಿಸಿ ಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ರಜನಿಕಾಂತ್ ಅವರು ಇಂದು ತಮ್ಮ ಕಚೇರಿಯಲ್ಲಿ ನೆರೆ ಸಂತ್ರಸ್ತರಿಗೆ ಮನೆಯ ಹಕ್ಕು ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ರಜನಿಕಾಂತ್ ಸಂತ್ರಸ್ತರಿಗೆ ಮನೆಯ ಪತ್ರಗಳನ್ನು ನೀಡುತ್ತಿರುವ ಫೋಟೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ರಜನಿಕಾಂತ್ ಅವರ ಈ ಕೆಲಸ ನೋಡಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಇತ್ತೀಚೆಗೆ ತಮ್ಮನ್ನು ಹೀರೋ ಮಾಡಿದ ನಿರ್ಮಾಪಕರಿಗೆ ಒಂದು ಕೋಟಿ ಮೌಲ್ಯದ ಮನೆಯನ್ನು ಉಡುಗೊರೆಯಾಗಿ ನೀಡಿದ್ದರು. ರಜನಿಕಾಂತ್ ಮೊದಲ ಬಾರಿಗೆ 1978ರಲ್ಲಿ `ಭೈರವಿ’ ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾವೂ ಸೂಪರ್ ಹಿಟ್ ಆಗಿದ್ದು, ನಿರ್ಮಾಪಕ ಕಲೈಜ್ಞಾನಂ ಚಿತ್ರವನ್ನು ನಿರ್ಮಿಸಿದ್ದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಕೆಲಸ ಮಾಡಿದರೂ ಕಲೈಜ್ಞಾನಂ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದರು. ಹಾಗಾಗಿ ರಜನಿಕಾಂತ್ ನಿರ್ಮಾಪಕರಿಗೆ ಮನೆಯನ್ನು ಗಿಫ್ಟ್ ಆಗಿ ನೀಡಿದ್ದರು.

  • ಚೆನ್ನೈನಲ್ಲಿ ರಶ್ಮಿಕಾ ಕುರಿ ಕಾಯುತ್ತಿರುವ ಫೋಟೋ ವೈರಲ್

    ಚೆನ್ನೈನಲ್ಲಿ ರಶ್ಮಿಕಾ ಕುರಿ ಕಾಯುತ್ತಿರುವ ಫೋಟೋ ವೈರಲ್

    ಚೆನ್ನೈ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಚೆನ್ನೈನಲ್ಲಿ ಕುರಿ ಕಾಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ರಶ್ಮಿಕಾ ಹಳ್ಳಿ ಹುಡುಗಿಯಂತೆ ಲಂಗ ದಾವಣಿ ಧರಿಸಿ, ಕೈಯಲ್ಲಿ ಉದ್ದನೆಯ ಕೋಲು ಹಿಡಿದು ಕುರಿಗಳನ್ನು ಕಾಯುತ್ತಿದ್ದಾರೆ. ಈ ವೇಳೆ ಅವರು ಕೈಯಲ್ಲಿ ಕೋಲು ಹಿಡಿದುಕೊಂಡು ಕ್ಯಾಮೆರಾಗೆ ಪೋಸ್ ಕೂಡ ನೀಡಿದ್ದಾರೆ.

    ತಮಿಳು ಚಿತ್ರಕ್ಕಾಗಿ ರಶ್ಮಿಕಾ ಕುರಿ ಕಾಯುತ್ತಿದ್ದಾರೆ. ಈ ಮೂಲಕ ಸಿನಿಮಾದ ಪಾತ್ರಕ್ಕಾಗಿ ರಶ್ಮಿಕಾ ಸಂಪೂರ್ಣ ಬದಲಾಗಿದ್ದಾರೆ. ಈ ಫೋಟೋ ನೋಡುತ್ತಿದ್ದರೆ ಚಿತ್ರದಲ್ಲಿ ರಶ್ಮಿಕಾ ಡಿ ಗ್ಲಾಮ್ ಪಾತ್ರದಲ್ಲಿ ಮಿಂಚುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಕುರಿ ಕಾಯುತ್ತಿರುವ ಫೋಟೋಗಳ ಜೊತೆಗೆ ರಶ್ಮಿಕಾ ತರಕಾರಿ ಮಾರುವ ಫೋಟೋ ಕೂಡ ರಿವೀಲ್ ಆಗಿದೆ. ಅಭಿಮಾನಿಗಳಿಗೆ ತಮಿಳು ಚಿತ್ರದಲ್ಲಿ ರಶ್ಮಿಕಾ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲವಿತ್ತು. ಆದರೆ ಈಗ ರಿವೀಲ್ ಆಗಿರುವ ಫೋಟೋಗಳ ಮೂಲಕ ರಶ್ಮಿಕಾ ಸಿನಿಮಾದಲ್ಲಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ಮಿಂಚಲಿದ್ದಾರೆ.

    ತಮಿಳು ನಟ ಕಾರ್ತಿಗೆ ರಶ್ಮಿಕಾ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ `ಸುಲ್ತಾನ್’ ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ಭಾಗ್ಯರಾಜ್  ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

  • ಇರ್ಫಾನ್ ಪಠಾಣ್ ಚಿತ್ರದಲ್ಲಿ ಕೆಜಿಎಫ್ ನಟಿ ಶ್ರೀನಿಧಿ ನಾಯಕಿ

    ಇರ್ಫಾನ್ ಪಠಾಣ್ ಚಿತ್ರದಲ್ಲಿ ಕೆಜಿಎಫ್ ನಟಿ ಶ್ರೀನಿಧಿ ನಾಯಕಿ

    ಬೆಂಗಳೂರು: ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಕಾಲಿವುಡ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    ಶ್ರೀನಿಧಿ ತಮಿಳಿನ ಖ್ಯಾತ ನಟ ವಿಕ್ರಂ ಅವರ ಜೊತೆ ‘ವಿಕ್ರಂ 58’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಕ್ರಂ 25 ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮತ್ತೊಂದು ವಿಶೇಷವೆನೆಂದರೆ ಈ ಚಿತ್ರದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಕೂಡ ನಟಿಸುತ್ತಿದ್ದಾರೆ.

    ಇರ್ಫಾನ್ ಪಠಾಣ್ ಈ ಚಿತ್ರದಲ್ಲಿ ಟರ್ಕಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಶ್ರೀನಿಧಿ ನಟಿಸುತ್ತಾರೆ ಎಂಬ ಗಾಸಿಪ್ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿತ್ತು. ಆದರೆ ಈ ಬಗ್ಗೆ ಶ್ರೀನಿಧಿ ಶೆಟ್ಟಿ ಟ್ವೀಟ್ ಮಾಡುವ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಲಿವುಡ್‍ಗೆ ಹರ್ಭಜನ್, ಇರ್ಫಾನ್ ಎಂಟ್ರಿ

    ಶ್ರೀನಿಧಿ ತಮ್ಮ ಟ್ವಿಟ್ಟಿರಿನಲ್ಲಿ, ವಿಕ್ರಂ 58ರಲ್ಲಿ ನಟಿಸುತ್ತಿರುವುದ್ದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಈ ಅವಕಾಶ ನೀಡಿದ ಅಜಯ್ ಜ್ಞಾನಮುತ್ತು ಹಾಗೂ ಲಲಿತ್ ಕುಮಾರ್ ಗೆ ಧನ್ಯವಾದಗಳು. ವಿಕ್ರಂ ಸರ್ ಅವರ ಜೊತೆ ನಟಿಸಲು ಪುಣ್ಯ ಮಾಡಿದ್ದೇನೆ. ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ತುಂಬಾ ಉತ್ಸುಕಳಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಸೆವೆನ್ ಸ್ಟುಡಿಯೋ ಬ್ಯಾನರ್ ನಡಿ ಈ ಚಿತ್ರವನ್ನು ಲಲಿತ್ ಕುಮಾರ್ ನಿರ್ಮಿಸುತ್ತಿದ್ದು, ಅಜಯ್ ಜ್ಞಾನಮುತ್ತು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಶುರುವಾಗಲಿದೆ. ಇನ್ನು ಚಿತ್ರದಲ್ಲಿ ನಟಿಸುತ್ತಿರುವ ಉಳಿದ ಕಲಾವಿದರ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.

    ಅಕ್ಟೋಬರ್ 14 ರಂದು ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ಹೊಸ ಕೆಲಸ ಮತ್ತು ಹೊಸ ಸವಾಲಿಗೆ ಸಿದ್ಧವಾಗಿದ್ದೇನೆ” ಎಂದು ಬರೆದು ಒಂದು ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು ತಮ್ಮ ಕ್ರಿಕೆಟ್ ವೃತ್ತಿಜೀವನದ ಅಂಕಿ ಅಂಶಗಳನ್ನು ತಿಳಿಸಿದ್ದರು.

  • ನಟ ವಿಶಾಲ್ ಮದ್ವೆ ಬ್ರೇಕಪ್ ಬಗ್ಗೆ ತಂದೆ ಸ್ಪಷ್ಟನೆ

    ನಟ ವಿಶಾಲ್ ಮದ್ವೆ ಬ್ರೇಕಪ್ ಬಗ್ಗೆ ತಂದೆ ಸ್ಪಷ್ಟನೆ

    ಚೆನ್ನೈ: ತಮಿಳು ನಟ ವಿಶಾಲ್ ಹಾಗೂ ತೆಲುಗಿನ `ಅರ್ಜುನ್ ರೆಡ್ಡಿ’ ಖ್ಯಾತಿಯ ಅನಿಶಾ ಅಲ್ಲ ಮದುವೆ ಮುರಿದು ಬಿದ್ದಿದೆ ಎಂಬ ಸುದ್ದಿ ದಕ್ಷಿಣ ಚಿತ್ರರಂಗದಲ್ಲಿ ಹರಿದಾಡುತ್ತಿತ್ತು. ಆದರೆ ಇದೀಗ ಈ ಬಗ್ಗೆ ಸ್ವತಃ ವಿಶಾಲ್ ತಂದೆ ಸ್ಪಷ್ಟನೆ ನೀಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ವಿಶಾಲ್ ತಂದೆ, “ನನ್ನ ಮಗನ ನಿಶ್ಚಿತಾರ್ಥ ಮುರಿದು ಬಿದ್ದಿಲ್ಲ. ಸದ್ಯದಲ್ಲೇ ಮದುವೆ ದಿನಾಂಕ ನಿಗದಿ ಪಡಿಸುತ್ತೇವೆ. ನಾವು ನಾಡಿಗರ್ ಸಂಘದ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಇದು ಕೋರ್ಟಿನಲ್ಲಿರುವ ಕಾರಣ ಮದುವೆ ತಡವಾಗುವ ಸಾಧ್ಯತೆ ಇದೆ. ಜೊತೆಗೆ ನಾಡಿಗರ್ ಸಂಘದ ಬಿಲ್ಡಿಂಗ್ ಕೆಲಸ ಕೂಡ ನಡೆಯುತ್ತಿದೆ. ಈ ಎಲ್ಲಾ ಕೆಲಸಗಳು ಮುಗಿದ ಬಳಿಕ ವಿಶಾಲ್ ಮದುವೆ ದಿನಾಂಕ ನಿಗದಿ ಮಾಡುಸುತ್ತೇವೆ” ಎಂದು ತಿಳಿಸಿದ್ದಾರೆ.

    ಈ ಹಿಂದೆ ವಿಶಾಲ್ ಹಾಗೂ ಅನಿಶಾ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದರ ಮೂಲಕ ಪರಸ್ಪರ ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಬಳಿಕ ಅನಿಶಾ ನಟ ವಿಶಾಲ್ ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದನ್ನು ನೋಡಿದ ಅಭಿಮಾನಿಗಳು ಇವರ ಮದುವೆ ಕ್ಯಾನ್ಸಲ್ ಆಗಿದೆ ಎಂದು ಮಾತನಾಡಿಕೊಳ್ಳುತ್ತಿದ್ದರು. ಹೀಗೆ ಈ ಸುದ್ದಿ ದಕ್ಷಿಣ ಚಿತ್ರರಂಗದಲ್ಲಿ ಹರಿದಾಡಲು ಶುರು ಮಾಡಿತ್ತು.

    ವಿಶಾಲ್ ಹಾಗೂ ಅನಿಶಾ ಪರಸ್ಪರ ಪ್ರೀತಿಸಿ ಮನೆಯವರ ಒಪ್ಪಿಗೆ ಮೆರಿಗೆ ಮಾರ್ಚ್ ತಿಂಗಳಿನಲ್ಲಿ ಹೈದರಾಬಾದ್‍ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಲ್ಲದೆ ಆಗಸ್ಟ್ ತಿಂಗಳಿನಲ್ಲಿ ಚೆನ್ನೈನ ನದಿಗರ್ ಸಂಗಮ್‍ನಲ್ಲಿ ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಷ್ಟರಲ್ಲೇ ಇಬ್ಬರ ಮದುವೆ ಮುರಿದು ಬಿದ್ದಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಗಾಸಿಪ್‍ಗಳ ಬಗ್ಗೆ ವಿಶಾಲ್ ಎಲ್ಲಿಯೂ ಮಾತನಾಡಿರಲಿಲ್ಲ. ಈಗ ಅವರ ತಂದೆ ಜಿ.ಕೆ ರೆಡ್ಡಿ ಮೊದಲ ಬಾರಿಗೆ ಮಾತನಾಡಿ ನಿಶ್ಚಿತಾರ್ಥ ಮುರಿದು ಬಿದ್ದಿದೆ ಎನ್ನುವ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.

  • ನಾನು ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ, ವಿಸ್ಕಿ ವ್ಯಸನಿಯಾಗಿದ್ದೆ: ಶ್ರುತಿ ಹಾಸನ್

    ನಾನು ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ, ವಿಸ್ಕಿ ವ್ಯಸನಿಯಾಗಿದ್ದೆ: ಶ್ರುತಿ ಹಾಸನ್

    ಚೆನ್ನೈ: ಕಾಲಿವುಡ್ ನಟಿ ಶ್ರುತಿ ಹಾಸನ್ ಅವರು ಎರಡು ವರ್ಷ ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ ಎಂಬ ಹೇಳಿಕೆ ನೀಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

    ಶ್ರುತಿ ಹಾಸನ್ ಅವರಿಗೆ ಆರೋಗ್ಯ ಸರಿಯಿಲ್ಲ, ಹೀಗಾಗಿ ಅವರು ಚಿತ್ರರಂಗದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ಬಗ್ಗೆ ಮಾತನಾಡಿದ ಶ್ರುತಿ, “ನಾನು ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ. ಹೀಗಾಗಿ ಆರೋಗ್ಯ ಕೈಕೊಟ್ಟಿತ್ತು” ಎಂದು ಸ್ಪಷ್ಟನೆ ನೀಡಿದ್ದಾರೆ. ಶ್ರುತಿ ಅವರ ಈ ಹೇಳಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.

    ಟಾಲಿವುಡ್ ನಟಿ ಮಂಚು ಲಕ್ಷ್ಮಿ ಖಾಸಗಿ ವಾಹಿನಿಯಲ್ಲಿ ಕಾರ್ಯಕ್ರಮವೊಂದನ್ನು ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಶ್ರುತಿ ಭಾಗವಹಿಸಿ, “ನಾನು ವಿಸ್ಕಿ ಬಾಟಲಿಗೆ ವ್ಯಸನಿಯಾಗಿದ್ದೆ. ಎರಡು ವರ್ಷ ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ. ಹೀಗಾಗಿ ನಾನು ಅನಾರೋಗ್ಯದಿಂದ ಬಳಲುತ್ತಿದ್ದೆ. ಆದರೆ ಈಗ ಎಲ್ಲವನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ. ಜೊತೆಗೆ ನನ್ನ ಜೀವನದಲ್ಲಿ ಹೊಸ ಬದಲಾವಣೆಯಾಗಿದೆ” ಎಂದು ಹೇಳಿದ್ದಾರೆ.

    ನಾನು ಅನಾರೋಗ್ಯದಿಂದ ಬಳಲುತ್ತಿದ್ದದ್ದು ಯಾರಿಗೂ ತಿಳಿದಿಲ್ಲ. ಇದು ನನ್ನ ವೈಯಕ್ತಿಕ ವಿಷಯವಾಗಿದ್ದರಿಂದ ಎಂದು ನನ್ನ ಸ್ನೇಹಿತರಿಗೂ ಹೇಳಿಲ್ಲ. ಕೊನೆಗೆ ನಾನು ಚಿಕಿತ್ಸೆಗೆ ಪಡೆದು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ತುಂಬಾ ಸಮಯ ಬೇಕಾಯಿತು. ಇದರಿಂದ ನಾನು ಸಿನಿಮಾಗಳಿಂದ ದೂರವಾದೆ. ಸದ್ಯಕ್ಕೆ ವೃತ್ತಿ ಬದುಕಿನ ಕಡೆಗೆ ದೃಷ್ಟಿ ಹರಿಸಿದ್ದೇನೆ ಎಂದು ಹೇಳಿದ್ದಾರೆ

    ಶ್ರುತಿ ಹಾಸನ್ ಕೊನೆಯದಾಗಿ `ಕಾಟಮರಾಯುಡು’ ಸಿನಿಮಾದಲ್ಲಿ ನಟಿಸಿದ್ದರು. ಈಗ ನಟ ರವಿತೇಜ ಸಿನಿಮಾ ಮೂಲಕ ರೀ-ಎಂಟ್ರಿ ಕೊಡುತ್ತಿದ್ದಾರೆ. ಇದೇ ವೇಳೆ ತಮ್ಮ ಗೆಳೆಯ ಮೈಕೇಲ್ ಕೋರ್ಸೆಲ್ ಜೊತೆಗಿನ ಸಂಬಂಧ ಮುರಿದುಬಿದ್ದ ಬಗ್ಗೆಯೂ ಮಾತನಾಡಿದ್ದಾರೆ.

  • ಬೈಕಿನಲ್ಲಿ ಹೋಗ್ತಿದ್ದಾಗಲೇ ಸಂಯುಕ್ತಾ ಹೆಗ್ಡೆ ಲಿಪ್ ಲಾಕ್

    ಬೈಕಿನಲ್ಲಿ ಹೋಗ್ತಿದ್ದಾಗಲೇ ಸಂಯುಕ್ತಾ ಹೆಗ್ಡೆ ಲಿಪ್ ಲಾಕ್

    ಬೆಂಗಳೂರು: ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಅವರು ಲಿಪ್‍ಲಾಕ್ ಮಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಸಂಯುಕ್ತಾ ತಮಿಳಿನಲ್ಲಿ ನಟಿಸಿರುವ ‘ಪಪ್ಪಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಟ್ರೈಲರ್ ನಲ್ಲಿ ಸಂಯುಕ್ತಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಲಿಪ್‍ಲಾಕ್ ದೃಶ್ಯಗಳಲ್ಲಿ ಅಭಿನಯಿಸಿದ್ದು, ಜೊತೆಗೆ ಕೆಲವು ಹಾಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪಪ್ಪಿ ಚಿತ್ರದಲ್ಲಿ ಸಂಯುಕ್ತಾ, ಹೀರೋ ವರುಣ್ ಜೊತೆ ಬೈಕಿನಲ್ಲಿ ಹೋಗುವಾಗ ಲಿಪ್‍ಲಾಕ್ ಮಾಡುವ ದೃಶ್ಯಗಳು ವೈರಲ್ ಆಗಿವೆ.

    ಮೊರಟ್ಟು ಸಿಂಗಲ್ `ಪಪ್ಪಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಂಯುಕ್ತಾ ಇದೀಗ ತಮಿಳಿನಲ್ಲಿ ಲಿಪ್‍ಲಾಕ್ ಮಾಡಿದ್ದಕ್ಕೆ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಏಕೆಂದರೆ ಈ ಹಿಂದೆ ಕನ್ನಡದ `ಮೈ ನೇಮ್ ಈಸ್ ರಾಜ್’ ಸಿನಿಮಾದಲ್ಲಿ ಸಂಯುಕ್ತಾ ಅಭಿನಯಿಸಬೇಕಿತ್ತು. ಆದರೆ ಚಿತ್ರದಲ್ಲಿ ಲಿಪ್‍ಲಾಕ್ ದೃಶ್ಯಗಳು ಇವೆ ಎಂದು ಚಿತ್ರವನ್ನು ರಿಜೆಕ್ಟ್ ಮಾಡಿದ್ದರು ಎಂದು ಚಿತ್ರತಂಡ ತಿಳಿಸಿತ್ತು.

    ಸಂಯುಕ್ತಾ ಈ ಹಿಂದೆ ತಮಿಳಿನ ‘ಕೋಮಲಿ’ ಚಿತ್ರದಲ್ಲಿ ನಟಿಸಿದ್ದರು. ಇತ್ತೀಚೆಗಷ್ಟೆ ಈ ಸಿನಿಮಾ ಬಿಡುಗಡೆಯಾಗಿದ್ದು, ಸಂಯುಕ್ತಾ ಶಾಲಾ ವಿದ್ಯಾರ್ಥಿನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಂಯುಕ್ತಾ ಸಾಮಾಜಿಕ ಜಾಲತಾಣದಲ್ಲೂ ಹಾಟ್ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಆದರೆ ಈಗ ಬೈಕ್ ಮೇಲೆ ಲಿಪ್‍ಲಾಕ್ ಮಾಡುವ ಮೂಲಕ ಇದೀಗ ಸುದ್ದಿಯಲ್ಲಿದ್ದಾರೆ.

  • ಅಭಿಮಾನಿಗಳಲ್ಲಿ ನಟ ಸೂರ್ಯ ಕಳಕಳಿಯ ಮನವಿ

    ಅಭಿಮಾನಿಗಳಲ್ಲಿ ನಟ ಸೂರ್ಯ ಕಳಕಳಿಯ ಮನವಿ

    ಚೆನ್ನೈ: ಕಾಲಿವುಡ್ ನಟ ಸೂರ್ಯ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ನಟ ಸೂರ್ಯ ಅವರು ತಮ್ಮ ಅಭಿಮಾನಿಗಳಲ್ಲಿ, “ತಮಿಳುನಾಡಿನ ಯಾವುದೇ ಭಾಗದಲ್ಲಿ ನನ್ನ ಕಟೌಟ್ ಅಥವಾ ಬ್ಯಾನರ್ ಹಾಕಬೇಡಿ. ದಯವಿಟ್ಟು ಆ ಹಣವನ್ನು ಶಾಲೆಗಳಿಗೆ ದಾನ ಮಾಡಿ” ಎಂದು ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಟನ ಮಾತು ಕೇಳಿದ ಅಭಿಮಾನಿಗಳು ಅವರ ‘ಕಾಪ್ಪನ್’ ಚಿತ್ರದ ಬಿಡುಗಡೆಯ ದಿನ ಕಟೌಟ್ ಹಾಗೂ ಬ್ಯಾನರ್ ಹಾಕುವ ಬದಲು 200 ಜನರಿಗೆ ಹೆಲ್ಮೆಟ್ ನೀಡುವುದಾಗಿ ನಿರ್ಧರಿಸಿದ್ದಾರೆ.

    ಆಗಿದ್ದೇನು?
    ಕಳೆದ ಶುಕ್ರವಾರ ಟೆಕ್ಕಿ ಶುಭಾಶ್ರೀ(23) ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಕ್ರಮವಾಗಿ ಹಾಕಲಾಗಿದ್ದ ಎಐಎಡಿಎಂಕೆಯ ಬ್ಯಾನರ್ ಆಕೆಯ ತಲೆಯ ಮೇಲೆ ಬಿದ್ದಿತ್ತು. ಪರಿಣಾಮ ಶುಭಾಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದಳು. ಇದೇ ವೇಳೆ ಹಿಂಬದಿಯಿಂದ ಲಾರಿಯೊಂದು ಯುವತಿಯ ಮೇಲೆ ಹರಿದು ಹೋಗಿತ್ತು. ಈ ಅಪಘಾತದಲ್ಲಿ ಶುಭಾಶ್ರೀ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಶುಭಾಶ್ರೀ ಮೃತಪಟ್ಟಿದ್ದಳು.

    ಬ್ಯಾನರ್ ಬಿದ್ದು ಶುಭಾಶ್ರೀ ಮೃತಪಟ್ಟ ಪರಿಣಾಮ ಸಾರ್ವಜನಿಕರು ರಾಜಕೀಯ ವ್ಯಕ್ತಿಗಳ ವಿರುದ್ಧ ಹಾಗೂ ಸಿನಿಮಾ ಕಲಾವಿದರ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದರು. ಈ ಕಾರಣಕ್ಕಾಗಿ ಸೂರ್ಯ ಅವರು ತಮಿಳುನಾಡಿನ ಯಾವುದೇ ಭಾಗದಲ್ಲಿ ತಮ್ಮ ಬ್ಯಾನರ್ ಹಾಗೂ ಕಟೌಟ್ ಹಾಕದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

    2017ರಲ್ಲಿ ಮದ್ರಾಸ್ ಹೈಕೋರ್ಟ್ ತಮಿಳುನಾಡಿನಾದ್ಯಂತ ಎಲ್ಲಾ ರೀತಿಯ ಬ್ಯಾನರ್ ಗಳು, ಹೋರ್ಡಿಂಗ್‍ಗಳು ಹಾಗೂ ಜಾಹೀರಾತುಗಳನ್ನು ನಿಷೇಧಿಸುವ ಆದೇಶವನ್ನು ನೀಡಿತ್ತು. ಹೈಕೋರ್ಟ್ ಹಲವು ಬಾರಿ ಎಚ್ಚರಿಕೆ ಹಾಗೂ ಆದೇಶ ನೀಡಿದರು ಸಹ ರಾಜಕೀಯ ಪಕ್ಷಗಳು ಹಾಗೂ ಅವರ ಬೆಂಬಲಿಗರು ಇಂತಹ ಅಕ್ರಮ ಬ್ಯಾನರ್ ಹಾಕುವ ಮೂಲಕ ಜನರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ.

  • ಕೆಜಿಎಫ್‍ಗೆ ಎಂಟ್ರಿ ಕೊಟ್ಟ ತಮಿಳು ನಟ ಸರಣ್!

    ಕೆಜಿಎಫ್‍ಗೆ ಎಂಟ್ರಿ ಕೊಟ್ಟ ತಮಿಳು ನಟ ಸರಣ್!

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್2 ಮೊದಲ ಭಾಗವನ್ನು ಮೀರಿಸುವಂತೆ ಸದ್ದು ಮಾಡುತ್ತಿರೋದು ಸುಳ್ಳಲ್ಲ. ಅದರಲ್ಲಿಯೂ ತಾರಾಗಣಕ್ಕೆ ಘಟಾನುಘಟಿ ನಟರು ಬಂದು ಸೇರಿಕೊಳ್ಳುವ ಮೂಲಕವೂ ಈ ಚಿತ್ರ ಸುದ್ದಿಯಾಗುತ್ತಿದೆ. ಇತ್ತೀಚೆಗಷ್ಟೇ ಅಧೀರನಾಗಿ ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಆಗಮನವಾಗಿದೆ. ಅವರ ಭಾಗದ ಚಿತ್ರೀಕರಣವೂ ನಡೆಯುತ್ತಿದೆ. ಇದೇ ಹೊತ್ತಲ್ಲಿ ತಮಿಳು ನಟ ಸರಣ್ ಕೂಡಾ ಆಗಮಿಸಿದ್ದಾರೆ.

    ಸರಣ್ ಕೆಜಿಎಫ್ ಚಿತ್ರತಂಡ ಸೇರಿಕೊಂಡಿರೋದರ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಖುಷಿಯಿಂದ ಕೆಲ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಯಶ್ ಎಂಬ ಅದ್ಭುತ ವ್ಯಕ್ತಿತ್ವದ ಅದ್ಭುತ ನಟನೊಂದಿಗೆ ನಟಿಸಲು ಅವಕಾಶ ಸಿಕ್ಕ ಬಗ್ಗೆ ಖುಷಿಗೊಂಡಿರೋ ಸರಣ್, ಯಶ್ ತೆರೆಯ ಮುಂದೆ ಮಾತ್ರವಲ್ಲದೇ ತೆರೆಯ ಹಿಂದೆಯೂ ಸ್ಫೂರ್ತಿದಾಯಕ ವ್ಯಕ್ತಿತ್ವ ಹೊಂದಿರುವವರೆಂದು ಕೊಂಡಾಡಿದ್ದಾರೆ. ಅಂದಹಾಗೆ ಈ ಸರಣ್ ತಮಿಳಿನಲ್ಲಿ ಕಾದಲ್, ವಿಶ್ವರೂಪಂ, ವಾಡಾಚೆನ್ನೈ ಮುಂತಾದ ಚಿತ್ರಗಳಲ್ಲಿ ನಟಿಸೋ ಮೂಲಕ ಪ್ರಸಿದ್ಧಿ ಹೊಂದಿರುವ ನಟ. ಅವರಿಗೆ ಕೆಜಿಎಫ್‍ನಲ್ಲಿಯೂ ಖದರ್ ಹೊಂದಿರೋ ಪಾತ್ರವೇ ಸಿಕ್ಕಿದೆಯಂತೆ.

    ಕೆಜಿಎಫ್ ಚಿತ್ರೀಕರಣ ಕೋಲಾರದ ಕೆಜಿಎಫ್ ಗೋಲ್ಡ್ ಫೀಲ್ಡ್‍ನಲ್ಲಿ ಸಾಂಗವಾಗಿ ನೆರವೇರುತ್ತಿತ್ತು. ಆದರೆ ಈ ಚಿತ್ರೀಕರಣದಿಂದ ಪರಿಸರಕ್ಕೆ ಹಾನಿಯಾಗಿ ಸ್ಥಳೀಯರಿಗೂ ತೊಂದರೆಯಾಗಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ದೂರು ದಾಖಲಿಸಿದ್ದರು. ಈ ಸಂಬಂಧವಾಗಿ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಆದರೆ ಕೆಜಿಎಫ್ ಭಾಗ ಒಂದರ ಹಂತದಲ್ಲಿಯೇ ಹಲವಾರು ಅಡೆತಡೆಗಳನ್ನು ಮೀರಿಕೊಂಡು ಬಂದಿರೋ ಚಿತ್ರತಂಡ ಈ ಕಂಟಕವನ್ನೂ ಸಮರ್ಥವಾಗಿ ಎದುರಿಸೋದರಲ್ಲಿ ಸಂಶಯವೇನಿಲ್ಲ. ಇದೆಲ್ಲದರ ನಡುವೆಯೇ ಸಂಜಯ್ ದತ್ ನಂತರ ಸರಣ್ ಆಗಮನವಾಗಿದೆ. ಇನ್ನೂ ಒಂದಷ್ಟು ಕಲಾವಿದರು ಹೀಗೆಯೇ ಕೆಜಿಎಫ್ ತಂಡ ಸೇರಿಕೊಳ್ಳಲಿದ್ದಾರೆ.

  • ಮುರಿದು ಬಿತ್ತು ನಟ ವಿಶಾಲ್ ಮದುವೆ?

    ಮುರಿದು ಬಿತ್ತು ನಟ ವಿಶಾಲ್ ಮದುವೆ?

    ಚೆನ್ನೈ: ತಮಿಳು ನಟ ವಿಶಾಲ್ ಹಾಗೂ ತೆಲುಗಿನ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಅನಿಶಾ ಅಲ್ಲ ಮದುವೆ ಮುರಿದು ಬಿದ್ದಿದೆ ಎಂಬ ಸುದ್ದಿ ಸೌತ್ ಚಿತ್ರರಂಗದಲ್ಲಿ ಹರಿದಾಡುತ್ತಿದೆ.

    ವಿಶಾಲ್ ಹಾಗೂ ಅನಿಶಾ ಪರಸ್ಪರ ಪ್ರೀತಿಸಿ ಮನೆಯವರ ಒಪ್ಪಿಗೆ ಮೆರಿಗೆ ಮಾರ್ಚ್ ತಿಂಗಳಿನಲ್ಲಿ ಹೈದರಾಬಾದ್‍ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಲ್ಲದೆ ಅಗಸ್ಟ್ ತಿಂಗಳಿನಲ್ಲಿ ಚೆನ್ನೈನ ನದಿಗರ್ ಸಂಗಮ್‍ನಲ್ಲಿ ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಷ್ಟರಲ್ಲೇ ಇಬ್ಬರ ಮದುವೆ ಮುರಿದು ಬಿದ್ದಿದೆ ಎಂಬ ಸುದ್ದಿ ಹರಿದಾಡುತ್ತಿದೆ.

    ಈ ಹಿಂದೆ ವಿಶಾಲ್ ಹಾಗೂ ಅನಿಶಾ ಫೋಟೋ ಹಾಕುವುದರ ಮೂಲಕ ಪರಸ್ಪರ ಪ್ರೀತಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು. ಆದರ ಈಗ ಅನಿಶಾ ನಟ ವಿಶಾಲ್ ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಇವರ ಮದುವೆ ಕ್ಯಾನ್ಸಲ್ ಆಗಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

    ಈ ಮೊದಲು  ಅಂದರೆ ಜನವರಿ 16ರಂದು ವಿಶಾಲ್ ತಮ್ಮ ಟ್ವಿಟ್ಟರಿನಲ್ಲಿ, “ಹೌದು. ನಾನು ತುಂಬಾ ಖುಷಿಯಾಗಿದ್ದೇನೆ. ಈಕೆಯ ಹೆಸರು ಅನಿಶಾ ಅಲ್ಲ ಹಾಗೂ ಆಕೆ ನನಗೆ ಯೆಸ್ ಎಂದು ಹೇಳಿದ್ದಾರೆ. ಈಗ ಇದು ಖಚಿತವಾಗಿದೆ. ಇದು ನನ್ನ ಜೀವನದ ಅತ್ಯಂತ ದೊಡ್ಡ ಪರಿವರ್ತನೆ. ಶೀಘ್ರದಲ್ಲೇ ದಿನಾಂಕವನ್ನು ನಿಗದಿ ಪಡಿಸುತ್ತೇವೆ” ಎಂದು ಟ್ವೀಟ್ ಮಾಡಿ ಅಭಿಮಾನಿಗಳಿಗೆ ತಿಳಿಸಿದ್ದರು.

    ಅನಿಶಾ ಕೂಡ ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಶಾಲ್ ಜೊತೆಯಿರುವ ಫೋಟೋವನ್ನು ಹಾಕಿ ಅದಕ್ಕೆ, “ಜೀವನದಲ್ಲಿ ಈಗ ಒಂದು ಹೊಸ ವಿಷಯ ಶುರುವಾಗುತ್ತಿದೆ. ನೀವು ನನಗೆ ಎಲ್ಲವನ್ನು ನೀಡಿದ್ದಕ್ಕೆ ಧನ್ಯವಾದಗಳು. ನನ್ನ ಬೆಳವಣಿಗೆ, ನನ್ನ ಕಲಿಕೆ, ನನ್ನ ಸ್ಫೂರ್ತಿ, ನನ್ನ ಸತ್ಯ, ನನ್ನ ನೋವು, ನನ್ನ ಶಕ್ತಿ ಎಲ್ಲದರಲ್ಲೂ ಭಾಗಿಯಾಗಿದ್ದೀರಿ. ಹಾಗಾಗಿ ನಾನು ಈ ಸ್ಥಾನದಲ್ಲಿದ್ದೇನೆ” ಎಂದು ಪೋಸ್ಟ್ ಮಾಡಿದ್ದರು.

    ಸದ್ಯ ಮದುವೆ ಕ್ಯಾನ್ಸಲ್ ಆಗಿರುವ ಬಗ್ಗೆ ವಿಶಾಲ್ ಆಗಲಿ, ಅನಿಶಾ ಆಗಲಿ ಯಾವುದೇ ಸ್ಪಷ್ಟನೆ ನೀಡಿಲ್ಲ.