Tag: Kollywood

  • ಕಾನೂನಿನಲ್ಲಿ ಅವಕಾಶವಿದೆ, ನಾವು ಮದ್ವೆಯಾಗೋಣ – ತ್ರಿಷಾ, ಚಾರ್ಮಿ ಮದ್ವೆಗೆ ಪರಸ್ಪರ ಒಪ್ಪಿಗೆ

    ಕಾನೂನಿನಲ್ಲಿ ಅವಕಾಶವಿದೆ, ನಾವು ಮದ್ವೆಯಾಗೋಣ – ತ್ರಿಷಾ, ಚಾರ್ಮಿ ಮದ್ವೆಗೆ ಪರಸ್ಪರ ಒಪ್ಪಿಗೆ

    ಚೆನ್ನೈ: ಶನಿವಾರ ಕಾಲಿವುಡ್ ನಟಿ ತ್ರಿಷಾ ಕೃಷ್ಣನ್ 36ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ನಟಿ ಚಾರ್ಮಿ ಕೌರ್ ನನ್ನನ್ನು ಮದುವೆಯಾಗುತ್ತೀಯಾ ಎಂದು ಕೇಳಿದ್ದು, ಇದಕ್ಕೆ ತ್ರಿಷಾ ಒಪ್ಪಿಗೆ ನೀಡಿದ್ದಾರೆ.

    ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತ್ರಿಷಾ ತನ್ನನ್ನು ಚುಂಬಿಸುತ್ತಿರುವ ಫೋಟೋವನ್ನು ಹಾಕಿ, “ಬೇಬಿ ಐ ಲವ್ ಯೂ ಟುಡೇ, ಫರೆವರ್. ನನ್ನ ಮೊಣಕಾಲ ಮೇಲೆ ಕುಳಿತು ನಿನ್ನ ಸಮ್ಮತಿಯನ್ನು ನಿರೀಕ್ಷೆ ಮಾಡುತ್ತೇನೆ. ನಾವು ಮದುವೆಯಾಗೋಣವೇ? ಈಗ ಕಾನೂನಿನಲ್ಲಿ ಅವಕಾಶ ಇದೆ” ಎಂದು ಹ್ಯಾಪಿ ಬರ್ತ್‍ಡೇ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

    ಈ ಟ್ವೀಟ್ ಗೆ ತ್ರಿಷಾ “ಧನ್ಯವಾದಗಳು, ನಾನು ನಿನಗೆ ಈಗಾಗಲೇ ಓಕೆ ಹೇಳಿದ್ದೇನೆ” ಎಂದು ಪ್ರತಿಕ್ರಿಯಿಸಿದ್ದಾರೆ. ಚಾರ್ಮಿ 2015, 2017ರಲ್ಲೂ ಈ ರೀತಿಯ ಟ್ವೀಟ್ ಮಾಡಿದ್ದರು.

    ಚಾರ್ಮಿ ಕಳೆದ ಕೆಲವು ವರ್ಷಗಳಿಂದ ನಟನೆಯಿಂದ ಹಿಂದೆ ಸರಿದಿದ್ದಾರೆ. 2015ರಲ್ಲಿ ಮಂತ್ರ, ಜ್ಯೋತಿಲಕ್ಷ್ಮಿ ಸಿನಿಮಾಗಳಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದ ಚಾರ್ಮಿ ನಂತರ ನಿರ್ಮಾಪಕಿಯಾಗಿ ಬದಲಾಗಿದ್ದಾರೆ. ರೋಗ್, ಪೈಸಾ ವಸೂಲ್, ಮೆಹಬೂಬಾ ಚಿತ್ರಗಳನ್ನು ನಿರ್ಮಿಸಿದ ಸದ್ಯಕ್ಕೆ ಇಸ್ಮಾರ್ಟ್ ಶಂಕರ್, ರೊಮ್ಯಾಂಟಿಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

    https://twitter.com/trishtrashers/status/1124646755117613057

     

  • ನಿರ್ದೇಶಕನ ಜೊತೆ ನಟಿ ನಯನತಾರಾ ನಿಶ್ಚಿತಾರ್ಥ!

    ನಿರ್ದೇಶಕನ ಜೊತೆ ನಟಿ ನಯನತಾರಾ ನಿಶ್ಚಿತಾರ್ಥ!

    ಚೆನ್ನೈ: ಲೇಡಿ ಸೂಪರ್ ಸ್ಟಾರ್ ನಯನತಾರಾ ನಿರ್ದೇಶಕ ವಿಗ್ನೇಶ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    ನಯನತಾರಾ ತನ್ನ ಬಹುದಿನದ ಗೆಳೆಯ, ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ಕೆಲವೇ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಅಲ್ಲದೆ 2020ರಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕಾಲಿವುಡ್‍ನಲ್ಲಿ ಹರಿದಾಡುತ್ತಿದೆ.

    ನಯನತಾರಾ ಹಾಗೂ ವಿಗ್ನೇಶ್ ಕುಟುಂಬದವರು ಇವರಿಬ್ಬರು ಬೇಗ ಮದುವೆ ಆಗಲಿ ಎಂದು ಅಭಿಮಾನಿಗಳು ಇಚ್ಛಿಸುತ್ತಿದ್ದಾರೆ. ನಯನತಾರಾ ಗೆಳೆಯ ವಿಗ್ನೇಶ್ ಜೊತೆ ಹಲವು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಹಾಲಿ ಡೇ ಟ್ರಿಪ್ ಸಹ ಎಂಜಾಯ್ ಮಾಡಿದ್ದಾರೆ.

    ಇಬ್ಬರು ನಿಶ್ಚಿತಾರ್ಥ ಆಗುತ್ತಿರುವ ವಿಷಯ ಕಾಲಿವುಡ್‍ನಲ್ಲಿ ಸದ್ಯ ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ನಯನತಾರಾ ಆಗಲಿ ವಿಗ್ನೇಶ್ ಆಗಲಿ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

    ಸದ್ಯ ನಯನತಾರಾ ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೊತೆ ‘ದರ್ಬಾರ್’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೆ ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಜೊತೆ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

  • ಅಪಘಾತದಲ್ಲಿ ಗಾಯಗೊಂಡ ನಟ ವಿಶಾಲ್

    ಅಪಘಾತದಲ್ಲಿ ಗಾಯಗೊಂಡ ನಟ ವಿಶಾಲ್

    ಚೆನ್ನೈ: ಇತ್ತೀಚೆಗಷ್ಟೇ ತಮ್ಮ ಬಹುದಿನಗಳ ಗೆಳತಿ ಅಶಿಷಾ ರೆಡ್ಡಿರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತಮಿಳು ನಟ ವಿಶಾಲ್ ಸಿನಿಮಾ ಶೂಟಿಂಗ್ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಸದ್ಯ ವಿಶಾಲ್ ಅವರ ಮುಂದಿನ ಸಿನಿಮಾದ ಶೂಟಿಂಗ್ ಟರ್ಕಿಯಲ್ಲಿ ನಡೆಯುತ್ತಿದ್ದು, ಸಹಾಸ ದೃಶ್ಯ ಚಿತ್ರೀಕರಣದ ವೇಳೆ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ವಿಶಾಲ್ ಅವರ ಎಡಗೈ ಹಾಗೂ ಎಡಗಾಲಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆದ ಬಳಿಕ ಕನಿಷ್ಠ 2 ವಾರಗಳ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಸಿನಿಮಾ ಶೂಟಿಂಗ್ ಪೂರ್ಣಗೊಂಡ ಬಳಿಕವೇ ಚಿತ್ರತಂಡ ವಾಪಸ್ ಆಗಲಿದ್ದು, ಬಹುತೇಕ ಚೇತರಿಸಿಕೊಳ್ಳುವ ನಿರೀಕ್ಷೆಯನ್ನು ಚಿತ್ರತಂಡ ವ್ಯಕ್ತಪಡಿಸಿದೆ. ಇತ್ತ ತಮ್ಮ ನೆಚ್ಚಿನ ನಟ ಬಹುಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಟ್ವೀಟ್ ಮಾಡಿ ಪ್ರಾರ್ಥನೆ ಮಾಡಿದ್ದಾರೆ.

    ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 1 ಸಿನಿಮಾವನ್ನು ನಟ ವಿಶಾಲ್ ತಮಿಳುನಾಡಿನಲ್ಲಿ ವಿತರಣೆ ಮಾಡಿದ್ದರು. ಆ ವೇಳೆಯೇ ಇಬ್ಬರು ನಟನ ನಡುವಿನ ಸ್ನೇಹಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಟಾಲಿವುಡ್ ಜೂನಿಯರ್ ಎನ್‍ಟಿಆರ್ ನಟನೆಯ ಟೆಂಪರ್ ಸಿನಿಮಾ ತಮಿಳು ರಿಮೇಕ್ ‘ಅಯೋಗ್ಯ’ ಸಿನಿಮಾದಲ್ಲಿ ವಿಶಾಲ್ ನಟಿಸಿದ್ದು, ಬಿಡುಗಡೆಗೆ ಸಿದ್ಧವಾಗಿದೆ.

  • ತಲೈವಿ ಜಯಲಲಿತಾ ಪಾತ್ರದಲ್ಲಿ ಬಾಲಿವುಡ್ ಕ್ವೀನ್

    ತಲೈವಿ ಜಯಲಲಿತಾ ಪಾತ್ರದಲ್ಲಿ ಬಾಲಿವುಡ್ ಕ್ವೀನ್

    ಮುಂಬೈ: ಮಣಿಕರ್ಣಿಕಾ ಸಿನಿಮಾದ ಯಶಸ್ಸಿನ ಖುಷಿಯಲ್ಲಿರೋ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೀಗ ತಮಿಳುನಾಡಿನ ಮಾಜಿ ಸಿಎಂ, ಪುರುಚ್ಚಿ ತಲೈವಿ ಜಯಲಲಿತಾರ ಜೀವನಾಧಾರಿತ ಸಿನಿಮಾದಲ್ಲಿ ಕಂಗನಾ ನಟಿಸಲಿದ್ದಾರೆ. ಈಗಾಗಲೇ ಜಯಲಲಿತಾರ ಪಾತ್ರದಲ್ಲಿ ನಟಿಸಲು ಕಂಗನಾ ಸಿದ್ಧತೆ ನಡೆಸುತ್ತಿದ್ದಾರೆ.

    ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿನಿಮಾ ತೆರೆಕಾಣಲಿದ್ದು, ತಮಿಳಿನಲ್ಲಿ ‘ತಲೈವಿ’ ಮತ್ತು ಹಿಂದಿಯಲ್ಲಿ ‘ಜಯಾ’ ಎಂದು ಟೈಟಲ್ ಅಂತಿಮಗೊಳಿಸಲಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ವಿಜಯ್ ಸಾರಥ್ಯದಲ್ಲಿ ಸಿನಿಮಾ ಮೂಡಿಬರಲಿದೆ. ಜಯಲಲಿತಾ ಮೇಡಂ ದೇಶ ಕಂಡ ಪ್ರಮುಖ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. ಅಂತಹ ಧೀಮಂತ ನಾಯಕಿಯ ಕಥೆಯನ್ನು ತೆರೆಯ ಮೇಲೆ ತರಲು ಉತ್ಸುಕನಾಗಿದ್ದೇನೆ. ಜಯಲಲಿತಾರ ಸಿನಿಮಾ ಮಾಡಲು ಹೊರಟ ನನ್ನ ಮೇಲೆ ಹಲವು ಜವಾಬ್ದಾರಿಗಳಿದ್ದು, ಪ್ರಾಮಾಣಿಕವಾಗಿ ಚಿತ್ರವನ್ನು ತೆರೆಯ ಮೇಲೆ ತರುತ್ತೇನೆ. ಕಂಗನಾ ರಣಾವತ್ ಅಂತಹ ಟ್ಯಾಲೆಂಟೆಡ್ ನಟಿ ಜೊತೆ ಕೆಲಸ ಮಾಡಲು ಹೆಮ್ಮೆಯಾಗುತ್ತಿದೆ. ಪ್ರಸಿದ್ಧ ನಟಿಯಾಗಿ ರಾಜಕೀಯದಲ್ಲಿ ಇತರರಿಗೆ ಮಾದರಿಯಾದ ಜಯಲಲಿತಾ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ವಿಜಯ್ ಹೇಳಿದ್ದಾರೆ.

    ಬಾಹುಬಲಿ ಮತ್ತು ಮಣಿಕರ್ಣಿಕಾ ಸಿನಿಮಾದ ಕಥೆಗಾರ ಕೆ.ವಿ.ವಿಜಯೇಂದ್ರ ಪ್ರಸಾದ್ ಅವರ ಲೇಖನಿಯಲ್ಲಿ ತಿರುಚ್ಚಿಯವರ ಕಥೆ ಮೂಡಿಬರಲಿದೆ. ವಿಷ್ಣು ಪ್ರಸಾದ್ ಇಂದೂರಿ ಹಾಗೂ ಶೈಲೇಶ್ ಆರ್. ಸಿಂಗ್ ನಿರ್ಮಾಣದಲ್ಲಿ ವಿಬ್ರಿ ಮತ್ತು ಕರ್ಮಾ ಮೀಡಿಯಾ & ಎಂಟರ್‍ಟೈನ್‍ಮೆಂಟ್ ಬ್ಯಾನರ್ ನಲ್ಲಿ ಸಿನಿಮಾ ತೆರೆಕಾಣಲಿದೆ.

    ಕಂಗನಾ ಜೊತೆ ಇದು ನನ್ನ ಐದನೇ ಸಿನಿಮಾವಾಗಿದ್ದು, ಪ್ರತಿಬಾರಿಯೂ ಕಂಗನಾರ ಜೊತೆ ಕೆಲಸ ಮಾಡುವಾಗ ಹೊಸ ಅನುಭವ ಪಡೆಯುತ್ತೇವೆ. ವಿಷ್ಣು ಪ್ರಸಾದ್ ಇಂದೂರಿ ಅವರ ಜೊತೆಯಾಗಿ ನಿರ್ಮಾಣ ಕೆಲಸ ಮಾಡುತ್ತಿರೋದು ಸಂತೋಷ ತಂದಿದೆ ಎಂದು ನಿರ್ಮಾಪಕ ಶೈಲೇಶ್ ಆರ್.ಸಿಂಗ್ ಹೇಳುತ್ತಾರೆ.

    ದೇಶ ಕಂಡ ಮಹಿಳಾ ಸಾಧಕಿಯರಲ್ಲಿ ಜಯಲಲಿತಾ ಸಹ ಒಬ್ಬರಾಗಿದ್ದಾರೆ. ಜಯಲಲಿತಾ ಸೂಪರ್ ಸ್ಟಾರ್ ನಟಿಯಾಗೋದರ ಜೊತೆಗೆ ಮಾದರಿಯ ರಾಜಕಾರಣಿಯಾಗಿದ್ದರು. ಇಂತಹ ಸಾಧನೆಯ ಕಥೆಯನ್ನು ಬೆಳ್ಳಿಪರದೆಯ ಮೇಲೆ ತರುವುದು ಸವಾಲಿನ ಕೆಲಸವಾಗಿದೆ. ಜಯಲಲಿತಾರ ಸಿನಿಮಾದಲ್ಲಿ ನಾನು ಒಂದು ಭಾಗವಾಗುತ್ತಿರೋದು ಖುಷಿ ತಂದಿದೆ ಎಂದು ಕಂಗನಾ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

  • ನಾನು ಹುಡ್ಗ ಆಗಿದ್ರೆ ತಮನ್ನಾಳನ್ನ ಮದ್ವೆಯಾಗ್ತಿದ್ದೆ: ಶ್ರುತಿ ಹಾಸನ್

    ನಾನು ಹುಡ್ಗ ಆಗಿದ್ರೆ ತಮನ್ನಾಳನ್ನ ಮದ್ವೆಯಾಗ್ತಿದ್ದೆ: ಶ್ರುತಿ ಹಾಸನ್

    ಚೆನ್ನೈ: ನಾನು ಹುಡುಗ ಆಗಿ ಹುಟ್ಟಿದ್ದರೆ, ನಾನು ತಮನ್ನಾ ಭಾಟಿಯಾನನ್ನು ಮದುವೆಯಾಗುತ್ತಿದ್ದೆ ಎಂದು ಬಹುಬಾಷಾ ನಟಿ ಶ್ರುತಿ ಹಾಸನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

    ಇತ್ತೀಚೆಗೆ ಶ್ರುತಿ ಹಾಸನ್ ಫೀಲ್ಮ್ ಫೇರ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಸಂದರ್ಶಕಿ ನೀವು ಹುಡುಗ ಆಗಿ ಹುಟಿದ್ದರೆ, ಯಾರನ್ನು ಡೇಟ್ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆಗ ಶ್ರುತಿ ಹಾಸನ್ ನಾನು ಹುಡುಗ ಆಗಿದ್ದರೆ ತಮನ್ನಾಳನ್ನು ಮದುವೆ ಆಗುತ್ತಿದ್ದೆ ಎಂದು ಉತ್ತರಿಸಿದ್ದಾರೆ.

    ನಾನು ಹುಡುಗ ಆಗಿದಿದ್ರೆ ತಮನ್ನಾಳನ್ನು ಡೇಟ್ ಮಾಡುತ್ತಿದೆ. ಅಲ್ಲದೇ ನಾನು ಆಕೆಯನ್ನೇ ಮದುವೆಯಾಗುತ್ತಿದ್ದೆ. ಏಕೆಂದರೆ ಆಕೆ ಒಳ್ಳೆಯ ಹುಡುಗಿ ಹಾಗೂ ನಾನು ಆಕೆಯನ್ನು ಬಿಟ್ಟುಕೊಡಲು ಇಷ್ಟಪಡುವುದಿಲ್ಲ ಎಂದು ಶ್ರುತಿ ಹಾಸನ್ ಸಂದರ್ಶನದಲ್ಲಿ ಹೇಳಿದ್ದಾರೆ.

    ಶ್ರುತಿ ಹಾಸನ್ ಅವರು ನಟಿಸಿದ ‘ಕಟಮರಾಯುಡು’ ಚಿತ್ರ ಫ್ಲಾಪ್ ಆಗಿತ್ತು. ಇದು ಅವರ ಸಿನಿಮಾ ವೃತ್ತಿಯಲ್ಲಿ ಫ್ಲಾಪ್ ಆದ ದೊಡ್ಡ ಚಿತ್ರ. ಈ ಚಿತ್ರದ ಸೋಲಿನ ನಂತರ ಶ್ರುತಿ ಈಗ ತಮಿಳು ಹಾಗೂ ತೆಲುಗು ಚಿತ್ರರಂಗದಿಂದ ದೂರ ಇದ್ದಾರೆ. ಅಲ್ಲದೇ ಅವರು ಈಗ ಸಿನಿಮಾಗಳನ್ನು ಆಯ್ಕೆ ಮಾಡುವಾಗ ಯೋಚಿಸಿ ಒಪ್ಪಿಕೊಳ್ಳುತ್ತಿದ್ದಾರೆ.

    ಶ್ರುತಿ ಹಾಸನ್ ಈ ಹಿಂದೆ ಪವನ್ ಕಲ್ಯಾಣ್ ಜೊತೆ ‘ಗಬ್ಬರ್ ಸಿಂಗ್’, ರಾಮ್ ಚರಣ್ ಜೊತೆ ‘ಎವಡು’ ಹಾಗೂ ಅಲ್ಲು ಅರ್ಜುನ್ ಜೊತೆ ‘ರೇಸ್ ಗುರಂ’ ಚಿತ್ರಗಳಲ್ಲಿ ನಟಿಸಿದ್ದರು. ಈ ಚಿತ್ರಗಳೆಲ್ಲಾ ಅವರ ಸಿನಿಮಾ ವೃತ್ತಿಯಲ್ಲಿ ಹಿಟ್ ಆಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಮಿಳು ನಟ ಕಾರ್ತಿ ಜೊತೆ ನಟನೆ – ರಶ್ಮಿಕಾ ಸ್ಪಷ್ಟನೆ

    ತಮಿಳು ನಟ ಕಾರ್ತಿ ಜೊತೆ ನಟನೆ – ರಶ್ಮಿಕಾ ಸ್ಪಷ್ಟನೆ

    ಬೆಂಗಳೂರು: ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ ಅವರು ಕಾಲಿವುಡ್‍ಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಈಗ ಸ್ವತಃ ರಶ್ಮಿಕಾ ಅವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

    ಬುಧವಾರ ತಮಿಳು ಸಿನಿಮಾದ ಮುಹೂರ್ತ ಕಾರ್ಯಕ್ರಮ ಮಾಡುವ ಮೂಲಕ ತಮಿಳಿನ ಎಂಟ್ರಿ ಬಗ್ಗೆ ರಶ್ಮಿಕಾ ಖಚಿತಪಡಿಸಿದ್ದಾರೆ. ಈ ಬಗ್ಗೆ ರಶ್ಮಿಕಾ ತಮಿಳು ನಟ ಕಾರ್ತಿ ಅವರ ಜೊತೆ ಸಿನಿಮಾ ಮಾಡುತ್ತಿರುವುದಾಗಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಜೊತೆಗೆ ಸಿನಿಮಾದ ಮುಹೂರ್ತದ ಫೋಟೊಗಳನ್ನು ರಶ್ಮಿಕಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

    ರಶ್ಮಿಕಾ “ನನಗೆ ಕನ್ನಡ ಮತ್ತು ತೆಲುಗು ಜನರು ತುಮಬಾ ಬೆಂಬಲ ನೀಡಿದ್ದಾರೆ. ನಂತರ ನೀವು ತಮಿಳಿಗೆ ಯಾವಾಗ ಬರುತ್ತೀರಿ ಎಂದು ಕೇಳುತ್ತಿದ್ದರು. ಈಗ 2019ರಲ್ಲಿ ಕೊನೆಗೂ ನಾನು ಕಾಲಿವುಡ್‍ಗೆ ಎಂಟ್ರಿ ಕೊಡುತ್ತಿದ್ದೇನೆ. ತಮಿಳು ಸಿನಿಮಾ ತಂಡದ ಜೊತೆಗೆ ಸಿನಿಮಾ ಮಾಡುತ್ತಿರುವುದರಿಂದ ನನಗೆ ತುಂಬಾ ಸಂತೋಷವಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.

    ಈ ಹಿಂದೆ ರಶ್ಮಿಕಾ ತಮಿಳು ನಟ ವಿಜಯ್ ಜೊತೆ ಅಭಿನಯಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಈಗ ಇದಕ್ಕೆ ತೆರೆ ಬಿದ್ದಿದೆ. ರಶ್ಮಿಕಾ ಅವರ ತಮಿಳಿನ ಮೊದಲ ಸಿನಿಮಾಗೆ ಭ್ಯಾಗ್ಯರಾಜ್ ಕಣ್ಣನ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ರಶ್ಮಿಕಾ ತೆಲುಗಿನಲ್ಲಿ ‘ಚಲೋ’ ಮತ್ತು ‘ಗೀತಾ ಗೋವಿಂದಂ’ ಸಿನಿಮಾದ ಮೂಲಕ ಅಭಿಮಾನಗಳ ಮೆಚ್ಚುಗೆಯನ್ನು ಗಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪೋರ್ನ್ ಸ್ಟಾರ್ ಆದ ಬಾಹುಬಲಿಯ ಶಿವಗಾಮಿ ನಟಿ ರಮ್ಯಾಕೃಷ್ಣ

    ಪೋರ್ನ್ ಸ್ಟಾರ್ ಆದ ಬಾಹುಬಲಿಯ ಶಿವಗಾಮಿ ನಟಿ ರಮ್ಯಾಕೃಷ್ಣ

    ಚೆನ್ನೈ: ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಪಾತ್ರದಲ್ಲಿ ನಟಿಸಿದ ರಮ್ಯಾಕೃಷ್ಣ ಈಗ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ರಮ್ಯಾಕೃಷ್ಣ ಮೊದಲ ಬಾರಿಗೆ ಪೋರ್ನ್  ಸ್ಟಾರ್ ಆಗಿ ನಟಿಸುತ್ತಿದ್ದಾರೆ.

    ತಮಿಳಿನಲ್ಲಿ ತ್ಯಾಗರಾಜನ್ ಕುಮಾರರಾಜ್ ನಿರ್ದೇಶನ ಮಾಡುತ್ತಿರುವ ‘ಸೂಪರ್ ಡಿಲೆಕ್ಸ್’ ಚಿತ್ರದಲ್ಲಿ ರಮ್ಯಾಕೃಷ್ಣ ಮೊದಲ ಬಾರಿಗೆ ನೀಲಿತಾರೆ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಲೀಲಾ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ.

    ಇತ್ತೀಚೆಗೆ ರಮ್ಯಾಕೃಷ್ಣ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿ, “ನನಗೆ ಈ ಪಾತ್ರ ಮಾಡುವಾಗ ಮೊದಲು ತುಂಬಾ ಮುಜುಗರ ಆಯಿತು. ಈ ಪಾತ್ರ ತುಂಬಾ ಚಾಲೆಂಜಿಂಗ್ ಆಗಿದೆ. ಏಕೆಂದರೆ ಈ ಚಿತ್ರದ ಕಥೆಯಲ್ಲಿ ತುಂಬಾ ತಾಕತ್ ಇದೆ. ನಾನು ಈ ಪಾತ್ರವನ್ನು ಹಣಕ್ಕಾಗಿ ಮಾಡಿಲ್ಲ” ಎಂದು ಹೇಳಿದ್ದಾರೆ.

    ಈ ಚಿತ್ರದ ಸೀನ್‍ವೊಂದು ಓಕೆ ಮಾಡಲು ನಿರ್ದೇಶಕರಿಗಾಗಿ ನಾನು ಎರಡು ದಿನ ಬರೋಬ್ಬರಿ 37 ರೀ-ಟೇಕ್ ತೆಗೆದುಕೊಂಡಿದ್ದೇನೆ. ನಾನು ರೀ-ಟೇಕ್ ತೆಗೆದುಕೊಂಡು ಅಭಿನಯಿಸುವಾಗ ಅಲ್ಲಿದ್ದ ಸಹಾಯಕರು ಅದನ್ನು ನೋಡಿ ಆಶ್ಚರ್ಯಪಟ್ಟರು ಎಂದರು.

    ಈ ಚಿತ್ರದ ಪಾತ್ರಕ್ಕಾಗಿ ರಮ್ಯಾಕೃಷ್ಣ ಅವರ ಬದಲು ಹಿರಿಯ ನಟಿ ನಾದಿಯಾ ಅವರನ್ನು ಸಂಪರ್ಕಿಸಲಾಗಿತ್ತು. ಬಳಿಕ ಈ ಪಾತ್ರಕ್ಕೆ ರಮ್ಯಾಕೃಷ್ಣ ಅವರೇ ಸೂಕ್ತ ಎಂದು ಸ್ವತಃ ಚಿತ್ರದ ನಿರ್ದೇಶಕ ತ್ಯಾಗರಾಜನ್ ಕುಮಾರರಾಜ್ ಹೇಳಿದ್ದಾರೆ.

    ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಇದೇ ತಿಂಗಳು 29ರಂದು ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ತಾಯಿಗೆ ಮೆಸೇಜ್ ಮಾಡಿ ಕಿರುತೆರೆ ನಟಿ ಆತ್ಮಹತ್ಯೆ

    ತಾಯಿಗೆ ಮೆಸೇಜ್ ಮಾಡಿ ಕಿರುತೆರೆ ನಟಿ ಆತ್ಮಹತ್ಯೆ

    ಚೆನ್ನೈ: ತಮಿಳಿನ ಖ್ಯಾತ ನಟಿ ಯಶಿಕಾ ತನ್ನ ತಾಯಿಗೆ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಚೆನ್ನೈನಲ್ಲಿರುವ ಪೆರಾವಲೂರ್ ನಲ್ಲಿ ನಡೆದಿದೆ.

    ಯಶಿಕಾ ಮೂಲ ಹೆಸರು ಮೇರಿ ಶೀಲಾ ಜೀಬ್ರಾನಿ ಆಗಿದ್ದು, ವದಪಾಲಾನಿಯ ಹಾಸ್ಟೆಲ್‍ವೊಂದರಲ್ಲಿ ವಾಸಿಸುತ್ತಿದ್ದರು. ಈ ವೇಳೆ ಆಕೆ ಮೋಹನ್ ಬಾಬು ಅಲಿಯಾಸ್ ಅರವಿಂದ್‍ನನ್ನು ಪ್ರೀತಿಸಲು ಶುರು ಮಾಡಿದ್ದರು.

    ಯಶಿಕಾ ಹಾಗೂ ಮೋಹನ್ ಇಬ್ಬರು ಪ್ರೀತಿಸಲು ಶುರು ಮಾಡಿ ಕೆಲವೇ ತಿಂಗಳಿನಲ್ಲಿ ಪೇರವಲೂರ್ ನ ಜಿಕೆಎಮದ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ಲಿವಿಂಗ್ ರಿಲೇಶನ್‍ಶಿಪ್‍ನಲ್ಲಿದ್ದರು. ಇತ್ತೀಚೆಗೆ ಇವರಿಬ್ಬರ ನಡುವೆ ಜಗಳವಾಗಿ ಮೋಹನ್ ಮನೆ ಬಿಟ್ಟು ಹೋಗಿದ್ದನು ಎಂದು ಹೇಳಲಾಗುತ್ತಿದೆ.

    ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಯಶಿಕಾ ತನ್ನ ತಾಯಿಗೆ ವಾಟ್ಸಾಪ್‍ನಲ್ಲಿ ಮೆಸೇಜ್ ಮಾಡಿದ್ದು, ಮೋಹನ್ ಬಾಬು ನನ್ನನ್ನು ಮದುವೆ ಆಗಲು ನಿರಾಕರಿಸಿದ್ದಾನೆ. ಅಲ್ಲದೇ ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ. ಆತನಿಗೆ ಸರಿಯಾದ ಶಿಕ್ಷೆ ನೀಡಬೇಕು ಎಂದು ತಿಳಿಸಿದ್ದಾರೆ.

    ನಾವು ಮೋಹನ್ ಬಾಬು ವಿರುದ್ಧ ದೂರನ್ನು ದಾಖಲಿಸಿಕೊಂಡು ಆತನಿಗಾಗಿ ಹುಡುಕಾಡುತ್ತಿದ್ದೇವೆ. ಆತ ಸಿಕ್ಕಿದ ಮೇಲೆ ಯಶಿಕಾ ಸಾವಿನ ರಹಸ್ಯ ಗೊತ್ತಾಗುತ್ತದೆ. ಯಶಿಕಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೆರಾವಲೂರ್ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಜಿನಿಕಾಂತ್ ಮಗಳು

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಜಿನಿಕಾಂತ್ ಮಗಳು

    ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ರಜನಿಕಾಂತ್ ಅವರು ಇಂದು ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಚೆನ್ನೈನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಸೌಂದರ್ಯ ಅವರು ಉದ್ಯಮಿ ವಿಶಾಖನ್ ಅವರ ಜೊತೆ ಇಂದು ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿದ್ದಾರೆ. ಇವರ ಮದುವೆಗೆ ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ನಟ ಕಮಲ್ ಹಾಸನ್ ಆಗಮಿಸಿದ್ದರು. ಶುಕ್ರವಾರ ಸೌಂದರ್ಯ ಅವರ ಮೆಹೆಂದಿ ಹಾಗೂ ಸಂಗೀತ್ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ರಜಿನಿಕಾಂತ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಈ ಕಾರ್ಯಕ್ರಮದ ನಂತರ ಸೌಂದರ್ಯ ತಮ್ಮ ತಂದೆ, ಮಗ ಹಾಗೂ ಪತಿ ಜೊತೆ ಇರುವ ಫೋಟೋ ಹಾಕಿ, “ನನ್ನ ಜೀವನದ ಮುಖ್ಯ ಪುರುಷರು” ಎಂದು ಟ್ವೀಟ್ ಮಾಡಿದ್ದರು.

    ಈ ಹಿಂದೆ 2010ರಲ್ಲಿ ಸೌಂದರ್ಯಾ ಉದ್ಯಮಿ ಅಶ್ವಿನ್ ಅವರನ್ನು ವರಿಸಿದ್ದರು. ಈ ದಂಪತಿಗೆ ಗಂಡು ಮಗು ಜನಿಸಿದ್ದು `ವೇದ್’ ಎಂದು ಹೆಸರನ್ನಿಟ್ಟಿದ್ದರು. ದಂಪತಿ ಮಧ್ಯೆ ಹೊಂದಾಣಿಕೆಯಾಗದ ಕಾರಣ 2017 ರಲ್ಲಿ ವಿಚ್ಛೇದನ ಪಡೆದಿದ್ದರು. ವಿಶಾಖನ್ ಪತ್ರಿಕಾ ಸಂಪಾದಕಿಯಾಗಿದ್ದ ಕನಿಕಾ ಅವರನ್ನು ಈ ಹಿಂದೆ ಮದುವೆಯಾಗಿದ್ದರು. ಇಬ್ಬರ ಮಧ್ಯೆ ದಾಂಪತ್ಯ ಜೀವನ ಸರಿ ಹೋಗದ ಕಾರಣ ಅವರು ವಿಚ್ಛೇದನ ಪಡೆದಿದ್ದರು. ಪ್ರಸಿದ್ಧ ಉದ್ಯಮಿ ವನಂಗಮುಡಿ ಅವರ ಪುತ್ರರಾಗಿರುವ ವಿಶಾಖನ್ ಔಷಧಿ ವ್ಯವಹಾರವನ್ನು ನಡೆಸುತ್ತಿದ್ದಾರೆ. 2018ರಲ್ಲಿ ಬಿಡುಗಡೆಯಾಗಿದ್ದ `ವಂಜಗರ್ ಉಗಾಗಂ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ವಿಶಾಖನ್ ನಟಿಸಿದ್ದರು.

    ಅಭಿಮಾನಿಗಳು ಈ ಹಿಂದೆ ವಿಚ್ಛೇದನ ಕುರಿತಂತೆ ಪ್ರಶ್ನೆ ಕೇಳಿದ್ದಕ್ಕೆ ಸೌಂದರ್ಯಾ, ನನ್ನ ಮದುವೆ ವಿಚಾರಕ್ಕೆ ಸಂಬಂಧಿಸಿದ ಎಲ್ಲ ಸುದ್ದಿಗಳು ಸತ್ಯವಾಗಿದೆ. ಕೆಲ ವರ್ಷಗಳಿಂದ ನಾವಿಬ್ಬರು ಪ್ರತ್ಯೇಕವಾಗಿ ವಾಸವಾಗಿದ್ದೇವೆ. ವಿಚ್ಛೇದನ ವಿಚಾರ ಪ್ರಕ್ರಿಯೆಯಲ್ಲಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದರು. ಸೌಂದರ್ಯಾ ತಂದೆ ರಜಿನಿಕಾಂತ್ ಅವರಿಗಾಗಿ ಕೊಚಾಡಿಯನ್ ಸಿನಿಮಾವನ್ನು ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ಅಭಿನಯಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತೆಲುಗು ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನಟ ವಿಶಾಲ್

    ತೆಲುಗು ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನಟ ವಿಶಾಲ್

    ಚೆನ್ನೈ: ತಮಿಳು ನಟ ವಿಶಾಲ್ ಕೃಷ್ಣ ಅವರು ತಲುಗಿನ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಅನಿಶಾ ಅಲ್ಲ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ಈ ಬಗ್ಗೆ ವಿಶಾಲ್ ತಮ್ಮ ಟ್ವಿಟ್ಟರಿನಲ್ಲಿ, “ಹೌದು. ನಾನು ತುಂಬಾ ಖುಷಿಯಾಗಿದ್ದೇನೆ. ಈಕೆಯ ಹೆಸರು ಅನಿಶಾ ಅಲ್ಲ ಹಾಗೂ ಆಕೆ ನನಗೆ ಯೆಸ್ ಎಂದು ಹೇಳಿದ್ದಾರೆ. ಈಗ ಇದು ಖಚಿತವಾಗಿದೆ. ಇದು ನನ್ನ ಜೀವನದ ಅತ್ಯಂತ ದೊಡ್ಡ ಪರಿವರ್ತನೆ. ಶೀಘ್ರದಲ್ಲೇ ದಿನಾಂಕವನ್ನು ನಿಗದಿ ಪಡಿಸುತ್ತೇವೆ” ಎಂದು ಟ್ವೀಟ್ ಮಾಡಿ ಅಭಿಮಾನಿಗಳಿಗೆ ಈ ಸಿಹಿ ಸುದ್ದಿ ನೀಡಿದ್ದಾರೆ.

    ಅನಿಶಾ ಕೂಡ ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಶಾಲ್ ಜೊತೆಯಿರುವ ಫೋಟೋವನ್ನು ಹಾಕಿ ಅದಕ್ಕೆ, “ಜೀವನದಲ್ಲಿ ಈಗ ಒಂದು ಹೊಸ ವಿಷಯ ಶುರುವಾಗುತ್ತಿದೆ. ನೀವು ನನಗೆ ಎಲ್ಲವನ್ನು ಮಾಡಿದ್ದಕ್ಕೆ ಧನ್ಯವಾದಗಳು. ನನ್ನ ಬೆಳವಣಿಗೆ, ನನ್ನ ಕಲಿಕೆ, ನನ್ನ ಸ್ಫೂರ್ತಿ, ನನ್ನ ಸತ್ಯ, ನನ್ನ ನೋವು, ನನ್ನ ಶಕ್ತಿ ಎಲ್ಲದರಲ್ಲೂ ಭಾಗಿಯಾಗಿದ್ದೀರಿ. ಹಾಗಾಗಿ ನಾನು ಈ ಸ್ಥಾನದಲ್ಲಿದ್ದೇನೆ” ಎಂದು ಪೋಸ್ಟ್ ಮಾಡಿದ್ದಾರೆ.

     

    View this post on Instagram

     

    Happy Sankranti! To the start of something new. Thank you all for everything you’ve done; Been a part of my growth, my learning, my observations, my inspiration, my truth, my hurt, my strength, my reason or all that has brought me to where I am today, who I am today. Soon enough, I will be on a new journey and I yearn to live up to all of my dreams and goals and the challenges I have put up for myself. I finally found somebody to go down the path of life with, loving him and life with true passion. I look up to this man for all that he stands for and for all of his heart. I vow to give back to him, the families and the people around with this step forward. I vow to be the best that I can be, intention towards collective learning, love and moral value. #LoveAlways

    A post shared by Anisha Alla (@bluewatermelon17) on

    ತಮ್ಮ ಮದುವೆ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ವಿಶಾಲ್, “ನಿಶ್ಚಿತಾರ್ಥದ ಹಾಗೂ ಮದುವೆಯ ದಿನಾಂಕ ಇನ್ನೂ ನಿಗದಿ ಆಗಿಲ್ಲ. ಆದರೆ ಈ ವರ್ಷದಲ್ಲೇ ನಾವು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದೇವೆ. ಶುಕ್ರವಾರ ನಮ್ಮಿಬ್ಬರ ಕುಟುಂಬದವರು ಒಟ್ಟಿಗೆ ಸೇರಿ ನಮ್ಮ ಮದುವೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅದಾದ ಬಳಿಕವೇ ನಾನು ನನ್ನ ಮದುವೆಯ ದಿನಾಂಕವನ್ನು ಘೋಷಿಸುತ್ತೇನೆ” ಎಂದು ಹೇಳಿದ್ದಾರೆ.

    ಅನಿಶಾ ಅಲ್ಲ ಕೇವಲ 2 ಚಿತ್ರಗಳಲ್ಲಿ ಮಾತ್ರ ನಟಿಸಿದ್ದಾರೆ. 2016ರಲ್ಲಿ ಬಿಡುಗಡೆಯಾದ ‘ಪೆಳ್ಳಿ ಚೂಪುಲು’ ಚಿತ್ರದಲ್ಲಿ ಅನಿಶಾ ನಟಿಸಿದ್ದರು. ಇದಾದ ಬಳಿಕ 2017ರಲ್ಲಿ ಬಿಡುಗಡೆ ಆಗಿದ್ದ ‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv