Tag: Kollywood

  • ಆ ರೀತಿಯಾಗಿ ಹೇಳಬಾರದಿತ್ತು, ನಾನು ಮಿಸ್ಟೇಕ್ ಮಾಡಿದ್ದೇನೆ: ರಾಜಮೌಳಿ

    ಆ ರೀತಿಯಾಗಿ ಹೇಳಬಾರದಿತ್ತು, ನಾನು ಮಿಸ್ಟೇಕ್ ಮಾಡಿದ್ದೇನೆ: ರಾಜಮೌಳಿ

    ಹೈದರಾಬಾದ್: ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಅವರು ನಾನು ಮಿಸ್ಟೇಕ್ ಮಾಡಿದ್ದೇನೆ. ಶ್ರೀದೇವಿ ಅವರ ಬಗ್ಗೆ ನಾನು ಆ ರೀತಿಯ ಪ್ರತಿಕ್ರಿಯೆ ನೀಡಬಾರದಿತ್ತು ಎಂದು ಹೇಳಿದ್ದಾರೆ.

    ಶ್ರೀದೇವಿ ಅವರು ದೊಡ್ಡ ಸಿನಿಮಾ ತಾರೆ, ಅವರ ಬಗ್ಗೆ ನಾನು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ್ದು ತಪ್ಪು ಎಂದು ರಾಜಮೌಳಿ ಪತ್ರಿಕೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

    ಬಾಹುಬಲಿಯ ಶಿವಗಾಮಿ ಪಾತ್ರಕ್ಕೆ ಶ್ರೀದೇವಿ ಅವರನ್ನು ಸಂಪರ್ಕಿಸಲಾಗಿತ್ತು, ಆದರೆ ಅವರು ಭಾರೀ ಸಂಭಾವನೆಯ ಬೇಡಿಕೆಯನ್ನು ಇಟ್ಟಿದ್ದರು. ಅಷ್ಟೇ ಅಲ್ಲದೇ ಹೈಫೈ ವ್ಯವಸ್ಥೆಯನ್ನು ಕೇಳಿದ್ದರು. ಅವರು ಸಿನಿಮಾಗೆ ಒಪ್ಪದೇ ಇದ್ದದ್ದು ನಮ್ಮ ಅದೃಷ್ಟ ಎಂದು ರಾಜಮೌಳಿ ಹೇಳಿದ್ದಾರೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.

    ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಮಾಧ್ಯಮಗಳು ಶ್ರೀದೇವಿ ಅವರನ್ನು ಪ್ರಶ್ನಿಸಿದ್ದಾಗ, ಅಷ್ಟೊಂದು ದೊಡ್ಡ ಮೊತ್ತವನ್ನು ಕೇಳಿದ್ದರೆ ಚಿತ್ರರಂಗದಿಂದಲೇ ನನ್ನನ್ನು ಮನೆಗೆ ಕಳುಹಿಸುತ್ತಿದ್ದರು. ರಾಜಮೌಳಿ ಅವರು ಆ ರೀತಿ ಹೇಳಿದ್ದು ನನಗೆ ಬೇಸರವಾಗಿದೆ ಎಂದು ಪ್ರತಿಕ್ರಿಯಿಸಿದ್ದರು.

    ಇದನ್ನೂ ಓದಿ: ಪ್ರಭಾಸ್, ರಾಣಾ, ಅನುಷ್ಕಾ, ತಮನ್ನಾ, ರಮ್ಯಕೃಷ್ಣಗೆ ಎಷ್ಟು ಸಂಭಾವನೆ ಸಿಕ್ಕಿದೆ?

    ಇದೀಗ ರಾಜಮೌಳಿ ಪ್ರತಿಕ್ರಿಯಿಸಿ, ಯಾರು ಸರಿ ಯಾರು ತಪ್ಪು ಎನ್ನುವುದನ್ನು ಜನರೇ ನಿರ್ಧರಿಸಲಿ. ಆದರೆ ನಾನು ಆ ರೀತಿಯಾಗಿ ಪ್ರತಿಕ್ರಿಯೆ ನೀಡಬಾರದಿತ್ತು. ಹಲವು ವರ್ಷಗಳಿಂದ ದಕ್ಷಿಣ ಭಾರತ ಸಿನಿಮಾದದಲ್ಲಿ ನಟಿಸುತ್ತಿರುವ ಶ್ರೀದೇವಿ ಅವರ ಬಗ್ಗೆ ನನಗೆ ಗೌರವವಿದೆ. ಅವರಿಗೆ ನಾನು ಶುಭಾಶಯ ಕೋರುತ್ತೆನೆ ಅಷ್ಟೇ ಅಲ್ಲದೇ ಅವರ ಮಾಮ್ ಸಿನಿಮಾದ ಟ್ರೇಲರ್ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು ಅವರು ತಿಳಿಸಿದರು.

    ಇದನ್ನೂ ಓದಿ: ರಾಜಮೌಳಿ ಬಗ್ಗೆ ಶ್ರೀದೇವಿ ಹೇಳಿದ್ದು ಏನು ಇಲ್ಲಿದೆ ಪೂರ್ಣ ಸುದ್ದಿ

     

  • ಡಿಸೆಂಬರ್ 12ಕ್ಕೆ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ?

    ಡಿಸೆಂಬರ್ 12ಕ್ಕೆ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ?

    ಚೆನ್ನೈ: ಸೂಪರ್‍ಸ್ಟಾರ್ ರಜನಿಕಾಂತ್ ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಆಗುವುದು ಪಕ್ಕಾ ಎಂದು ಹಿಂದೂ ಮಕ್ಕಳ ಕಚ್ಚಿ(ಎಚ್‍ಎಂಕೆ) ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಅರ್ಜುನ್ ಸಂಪತ್ ಹೇಳಿದ್ದಾರೆ.

    ಸೋಮವಾರ ಬೆಳಗ್ಗೆ ಅರ್ಜುನ್ ಸಂಪತ್ ರಜನಿಕಾಂತ್ ಅವರನ್ನು ಪೋಯಸ್ ಗಾರ್ಡನ್ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿಯಾದ ಬಳಿಕ ಮಾತನಾಡಿದ ಅವರು, ದ್ರಾವಿಡ ಪಕ್ಷಗಳಿಂದ ಮುಕ್ತವಾಗಲು ರಜನಿಕಾಂತ್ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಎಂದು ತಿಳಿಸಿದರು.

    ಕಳೆದ 50 ವರ್ಷಗಳಿಂದ ತಮಿಳುನಾಡು ದ್ರಾವಿಡ ಪಕ್ಷಗಳ ಆಡಳಿತದಿಂದ ನಲುಗಿ ಹೋಗಿದೆ. ಹೀಗಾಗಿ ನಾನು ರಾಜ್ಯದ ಜನರ ಒಳಿತಿಗಾಗಿ ರಾಜಕೀಯ ಪ್ರವೇಶ ಮಾಡಬೇಕೆಂದು ಮನವಿ ಮಾಡಿದೆ ಎಂದು ಅವರು ತಿಳಿಸಿದರು.

    ಮಾತುಕತೆ ವೇಳೆ, ವ್ಯವಸ್ಥೆ ಈಗ ಭ್ರಷ್ಟವಾಗಿದೆ. ಒಂದು ವೇಳೆ ನಾನು ಏನು ಮಾಡದೇ ಇದ್ದರೆ ಅಪರಾಧಿ ಭಾವನೆ ನನ್ನನ್ನು ಕಾಡಲಿದೆ. ಹಿಮಾಲಯದಿಂದ ಹಿಡಿದು ದಕ್ಷಿಣದವರೆಗಿನ ನದಿಗಳ ಜೋಡಣೆ ಮಾಡುವ ಕನಸಿನ ಯೋಜನೆ ಪೂರ್ಣಗೊಳ್ಳಬೇಕಾದರೆ ರಾಜಕೀಯಕ್ಕೆ ಬಂದರೆ ಮಾತ್ರ ಅದು ಸಾಧ್ಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು ಎಂದು ತಿಳಿಸಿದರು.

    ರಾಜಕೀಯ ಅಲ್ಲದೇ ಆಧ್ಯತ್ಮದ ಬಗ್ಗೆ ನಾವು ಚರ್ಚೆ ನಡೆಸಿದ್ವಿ. ತಮಿಳಿನ ಸಂತರಾದ ನಯನಾರ ಮತ್ತು ಆಲ್ವರರ ಬಗ್ಗೆ ಮಾತನಾಡಿದ್ದೇವು. ಸ್ವಾಮಿ ಸಚ್ಚಿದಾನಂದ ಸರಸ್ವತಿ ಮತ್ತು ದಯಾನಂದ ಸರಸ್ವತಿ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ನಾನು ದಯಾನಂದರ ಶಿಷ್ಯ ಎಂದು ರಜನಿ ಹೇಳಿದರು ಎಂದರು.

    ಅರ್ಜುನ್ ಸಂಪತ್ ಜೊತೆಗಿನ ಭೇಟಿ ಬಳಿಕ ಈಗ ರಜನಿಕಾಂತ್ ಡಿಸೆಂಬರ್ 12ರ ತಮ್ಮ 67ನೇ ಹುಟ್ಟುಹಬ್ಬದಂದು ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿ ಮೂಲಗಳಿಂದ ಸಿಕ್ಕಿದೆ. ರಜನೀಕಾಂತ್ ಈಗ ಇರುವ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗದೇ ತಮ್ಮದೇ ಹೊಸ ಪಕ್ಷವನ್ನು ಸ್ಥಾಪಿಸಲಿದ್ದಾರೆ. ಕಾಲಾ ರಜನಿ ಅವರ ಕೊನೆಯ ಚಿತ್ರವಾಗಲಿದ್ದು, ಮುಂದಿನ ವರ್ಷದಿಂದ ಅವರು ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ನನ್ನನ್ನು ನಿಜವಾದ ತಮಿಳಿಗನಾಗಿ ಮಾಡಿದ್ದಕ್ಕೆ ನಿಮಗೆ ಧನ್ಯವಾದ: ರಜನೀಕಾಂತ್

    ನನ್ನನ್ನು ನಿಜವಾದ ತಮಿಳಿಗನಾಗಿ ಮಾಡಿದ್ದಕ್ಕೆ ನಿಮಗೆ ಧನ್ಯವಾದ: ರಜನೀಕಾಂತ್

    ಚೆನ್ನೈ: ನನ್ನನ್ನು ನಿಜವಾದ ತಮಿಳಿಗನಾಗಿ ರೂಪಿಸಿದ್ದಕ್ಕೆ ನಿಮಗೆ ಧನ್ಯವಾದಗಳು ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.

    4ನೇ ದಿನದ ಸಂವಾದದಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ಅವರು, ನನಗೆ ಈಗ 67 ವರ್ಷ, ನಾನು 23 ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದ್ದೆ. 43 ವರ್ಷಗಳ ಕಾಲ ತಮಿಳುನಾಡಿನಲ್ಲಿ ನಾನು ನೆಲೆಸಿದ್ದೇನೆ. ನಿಮ್ಮ ಜೊತೆಯಲ್ಲೇ ಈಗ ಬೆಳೆದಿದ್ದೇನೆ. ನೀವು ನನ್ನನ್ನು ಸ್ವಾಗತಿಸಿ ನಿಜವಾದ ತಮಿಳಿಗನಾಗಿ ಬೆಳೆಸಿದ್ದೀರಿ. ಜಗತ್ತಿನಲ್ಲಿ ನಾನು ಎಲ್ಲಿಯಾದರೂ ನೆಲೆ ನಿಲ್ಲುವುದೇ ಆದರೆ ಅದು ತಮಿಳುನಾಡಿನಲ್ಲಿ ಮಾತ್ರ ಎಂದು ಅವರು ಈ ವೇಳೆ ತಿಳಿಸಿದರು.

    ಒಂದು ವರ್ಷದ ಹಿಂದೆ ಶರತ್ ಕುಮಾರ್ ಅವರು ರಜನೀಕಾಂತ್ ಅವರನ್ನು ಹೊರಗಿನ ವ್ಯಕ್ತಿ. ಕರ್ನಾಟಕದ ಇವರು ಕೆಲಸಕ್ಕಾಗಿ ತಮಿಳುನಾಡಿಗೆ ಬಂದಿದ್ದಾರೆ ಎಂದು ಹೇಳಿದ್ದಕ್ಕೆ ಇಂದು ರಜನೀಕಾಂತ್ ಸಂವಾದಲ್ಲಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

    ಈ ಸಂವಾದ ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದ ಎಲ್ಲ ಪೊಲೀಸ್ ಮತ್ತು ಅಧಿಕಾರಿಗಳಿಗೆ ಧನ್ಯವಾದಗಳು. ಹಲವು ವರ್ಷಗಳಿಂದ ನನ್ನನ್ನು ಬೆಂಬಲಿಸುತ್ತಿರುವ ಅಭಿಮಾನಿಗಳಿಗೆ ಧನ್ಯವಾದ ಎಂದು ರಜನೀಕಾಂತ್ ಹೇಳಿದರು.

    ರಜನಿ ದರ್ಬಾರ್ ಕಾರ್ಯಕ್ರಮ ಮೇ 15ರಿಂದ ಆರಂಭಗೊಂಡಿತ್ತು. 9 ವರ್ಷಗಳ ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ರಜನಿಕಾಂತ್ ಅವರ ಆಯ್ದ ಅಭಿಮಾನಿ ಸಂಘಗಳ ಸದಸ್ಯರಿಗೆ ಮಾತ್ರ ಈ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು.

    ಇದನ್ನೂ ಓದಿ: ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ? ಅಭಿಮಾನಿಗಳ ಪ್ರಶ್ನೆಗೆ ರಜನೀಕಾಂತ್ ಉತ್ತರಿಸಿದ್ದು ಹೀಗೆ

    ಇದನ್ನೂ ಓದಿ: ರಾಜಮೌಳಿ ದೇವರು ಕೊಟ್ಟ ಮಗು: ಬಾಹುಬಲಿಗೆ ಗಣ್ಯರ ವಿಮರ್ಶೆ ಹೀಗಿದೆ ನೋಡಿ

  • ಪ್ರಭಾಸ್, ರಾಣಾ ಫೈಟಿಂಗ್, ಅನುಷ್ಕಾ ರೋಮ್ಯಾಂಟಿಕ್ ಸೀನ್: ಬಾಹುಬಲಿ ಟ್ರೇಲರ್ ರಿಲೀಸ್

    ಪ್ರಭಾಸ್, ರಾಣಾ ಫೈಟಿಂಗ್, ಅನುಷ್ಕಾ ರೋಮ್ಯಾಂಟಿಕ್ ಸೀನ್: ಬಾಹುಬಲಿ ಟ್ರೇಲರ್ ರಿಲೀಸ್

    ಹೈದರಾಬಾದ್: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

    ದೇಶದ ಪ್ರಮುಖ ನಗರದ ಥಿಯೇಟರ್‍ಗಳಲ್ಲಿ ಬಾಹುಬಲಿ-2 ಚಿತ್ರದ ಆಫೀಶಲ್ ಟ್ರೇಲರನ್ನು ರಾಜಮೌಳಿ ಸಾರಥ್ಯದ ಚಿತ್ರತಂಡ ರಿಲೀಸ್ ಮಾಡಿದೆ. ಇಂದು ಸಂಜೆ 5 ಅಥವಾ 6ಗಂಟೆಗೆ ಬಾಹುಬಾಲಿ-2 ಟ್ರೈಲರ್ ಯುಟ್ಯೂಬ್‍ನಲ್ಲಿ ಅಪ್‍ಲೋಡ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ಬೆಳಗ್ಗೆಯೇ ಟ್ರೇಲರ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ.

    ಕಟ್ಟಪ್ಪ ಬಾಹುಬಲಿಯನ್ನು ಕೊಲ್ಲುತ್ತಿರುವ ದೃಶ್ಯ, ಅನುಷ್ಕಾ ಶೆಟ್ಟಿ ಪ್ರಭಾಸ್ ರೊಮ್ಯಾಂಟಿಕ್ ಸೀನ್, ರಾಣಾ ದಗ್ಗುಬಾಟಿ ಜೊತೆಗಿನ ಯುದ್ದದ ದೃಶ್ಯ ಟ್ರೇಲರ್ ನಲ್ಲಿದೆ.

    ಬಾಹುಬಾಲಿಯ ಮೊದಲ ಭಾಗದ ಟ್ರೇಲರ್ ಪ್ರಾಮುಖ್ಯತೆಯನ್ನು ಇದಕ್ಕೂ ನೀಡಲಾಗಿದೆ. ಮೊದಲ ಭಾಗದ ಚಿತ್ರದ ಟ್ರೇಲರ್ ಗೆ ಬಳಸಿದ ತಂತ್ರಜ್ಞಾನ ಮತ್ತು ಫ್ಯಾಶನ್ ಈ ಟ್ರೇಲರ್ ನಲ್ಲಿ ಬಳಸಿದ್ದೇವೆ ಎಂದು ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಹೇಳಿದ್ದಾರೆ.

    ಮಹಾಶಿವರಾತ್ರಿ ಪ್ರಯುಕ್ತ ಬಾಹುಬಲಿ ಕನ್ ಕ್ಲೂಷನ್ ಟೀಸರ್ ಬಿಡುಗಡೆಯಾಗಿತ್ತು.‘ಬಲಿ ಬಲಿ ಬಲಿ ರಾ ಬಲಿ ಸಾಹೋರೆ ಬಾಹುಬಲಿ’ ಅನ್ನೋ ಹಾಡಿನ ತುಣುಕು ಹೊಂದಿರುವ ಟೀಸರ್ ವಿಡಿಯೋವನ್ನು ರಾಜಮೌಳಿ ಟ್ವೀಟ್ ಮಾಡಿದ್ದರು. ಈ ಟೀಸರ್‍ನಲ್ಲಿ ಪ್ರಭಾಸ್ ಆನೆಯ ಮೇಲೆ ನಿಂತುಕೊಂಡಿರುವ ದೃಶ್ಯವಿತ್ತು.

    ಇದ್ನನೂ ಓದಿ: ಬಾಹುಬಲಿಯನ್ನು ಕೊಂದಿದ್ದು ಯಾಕೆ: ಕೊನೆಗೂ ಉತ್ತರ ಹೇಳಿದ ಕಟ್ಟಪ್ಪ!

    ಜನವರಿ 26ರಂದು ರಾಜಮೌಳಿ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಒಟ್ಟಿಗೆ ನಿಂತುಕೊಂಡು ಬಾಣ ಬಿಡುತ್ತಿರುವ ಪೋಸ್ಟರ್ ಬಿಡುಗಡೆ ಮಾಡಿದ್ದರು. ಇದಕ್ಕೂ ಮೊದಲು ರಾಣಾ ದಗ್ಗುಬಾಟಿ ಮತ್ತು ಪ್ರಭಾಸ್ ಅವರ ಪೋಸ್ಟರ್ ಬಿಡುಗಡೆ ಮಾಡಿದ್ದರು.

    ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಬರೆದ ಕಥೆಯಾಧರಿತ ಬಾಹುಬಲಿ ಭಾಗ 2 ಚಿತ್ರದಲ್ಲಿ ಪ್ರಭಾಸ್, ರಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ಸತ್ಯರಾಜ್, ತಮನ್ನಾ, ರಮ್ಯಕೃಷ್ಣ ಅಭಿನಯಿಸಿದ್ದು ತೆಲುಗು, ತಮಿಳು, ಹಿಂದಿ ಹಾಗೂ ಮಲೆಯಾಳಂ ಭಾಷೆಗಳಲ್ಲಿ ವಿಶ್ವದಾದ್ಯಂತ ಏಪ್ರಿಲ್ 28 ರಂದು ತೆರೆಕಾಣಲಿದೆ.

    ಬಾಹುಬಲಿ ದಿ ಬಿಗಿನಿಂಗ್ ಚಿತ್ರ 2015ರ ಜುಲೈ 10ರಂದು ಬಿಡುಗಡೆಯಾಗಿತ್ತು. ಅಂದಾಜು 120 ಕೋಟಿ ಬಜೆಟ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 650 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿತ್ತು.

    ಸಿನಿಮಾಗಳಿಗೆ‌ ಟ್ರೇಲರ್ ರಿಲೀಸ್ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಟ್ರೇಲರ್ ರಿಲೀಸ್ ಗೆ ರಾಜಮೌಳಿ ಸಣ್ಣ ಪ್ರೋಮೋ ರಿಲೀಸ್ ಮಾಡಿದ್ದರು. ಟ್ರೇಲರ್ ಗೆ ಪ್ರೋಮೋ ರಿಲೀಸ್ ಮಾಡಿದ್ದು ಭಾರತೀಯ ಚಿತ್ರರಂಗದಲ್ಲಿ ಮೊದಲು ಎಂದು ಹೇಳಲಾಗುತ್ತಿದೆ. ಹೀಗಾಗಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡುತ್ತಿರುವ ಬಾಹುಬಲಿ ಟ್ರೇಲರ್ ಅನ್ನು ನೀಡಲಾಗಿದೆ.