Tag: Komal

  • 1.72 ಕೋಟಿ ರೂ. ಸ್ವೆಟರ್ ಹಗರಣಕ್ಕೆ ಹೊಸ ಟ್ವಿಸ್ಟ್

    1.72 ಕೋಟಿ ರೂ. ಸ್ವೆಟರ್ ಹಗರಣಕ್ಕೆ ಹೊಸ ಟ್ವಿಸ್ಟ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕೋಮಲ್ ಹೆಸರು ಕೇಳಿಬರುತ್ತೀರುವ ಸ್ವೆಟರ್ ಹಗರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

    ನಟ ಕೋಮಲ್ ವಿರುದ್ಧ ಕೇಳಿ ಬರುತ್ತಿರುವ ಹಗರಣಕ್ಕೆ ಸಂಬಂಧಿಸಿದ ಸ್ಫೋಟಕ ವೀಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. 1.72 ಕೋಟಿ ರೂ. ಸ್ವೆಟರ್ ಹಗರಣಕ್ಕೆ ತಿರುವು ಸಿಕ್ಕಿದ್ದು, ಹಂಚಿಕೆ ಹಗರಣ ಕೈ ಬಿಡುವಂತೆ ಒತ್ತಡ ಹೇರಲಾಗಿದೆ. ಆರೋಪ ಕೇಳಿ ಬಂದ ಬಳಿಕ ಸಂಧಾನ ಸಭೆ ನಡೆಸಲಾಗಿದೆ. ಬಿಬಿಎಂಪಿ ಶಿಕ್ಷಣ ಸಹಾಯಕ ಆಯುಕ್ತ ಹನುಮಂತಪ್ಪ ಸಂಧಾನದಲ್ಲಿ ಭಾಗಿಯಾಗಿದ್ದರು. ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಡಾ.ಸಿಎಸ್ ರಘು ಜೊತೆ ಬಿಬಿಎಂಪಿ ದಲಿತ ನೌಕರರ ಸಂಘದ ಕಚೇರಿಯಲ್ಲಿ ಸಂಧಾನ ನಡೆಸಲಾಗಿದೆ. ಸಂಧಾನಕ್ಕೆ ಶಿಕ್ಷಣ ಸಹಾಯಕ ಆಯುಕ್ತ ಹನುಮಂತಪ್ಪ ಆಹ್ವಾನಿಸಿದ್ದರು.

    ಸಹೋದರ ಕೋಮಲ್ ಪರ ನಟ ಜಗ್ಗೇಶ್ ಬೆದರಿಕೆಯನ್ನು ಹಾಕಿ ಬಿಬಿಎಂಪಿ ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಸ್ವೆಟರ್ ಟೆಂಡರ್‍ನಲ್ಲಿ ಹಣ ಬಿಡುಗಡೆ ಮಾಡುವಂತೆ ಒತ್ತಡವನ್ನು ಹೇರಿದ್ದರು. ನಟ ಜಗ್ಗೇಶ್, ನಟ ಕೋಮಲ್‍ರಿಂದ ರಾಜಕೀಯ ಒತ್ತಡ ಮಾಡಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದ ಆರೋಪ ಕೇಳಿ ಬಂದಿದೆ.

    ಕೋಮಲ್ ಅವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದಾರೆ. ಜಗ್ಗೇಶ್ ಅವರು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ ಎಂದು ಸಂಧಾನ ಸಭೆಯಲ್ಲಿ ನಡೆದಿರುವ ವೀಡಿಯೋದಲ್ಲಿ ಹೇಳಿದ್ದಾರೆ. ಇದನ್ನೂ ಓದಿ:  ನಟ ಕೋಮಲ್ ವಿರುದ್ಧ ಸ್ವೆಟರ್ ಹಗರಣ ಆರೋಪ

    2020-21 ಸಾಲಿನಲ್ಲಿ ಪಾಲಿಕೆ ಶಾಲೆಗಳಿಗೆ ಸ್ವೆಟರ್ ಪೂರೈಕೆ ಮಾಡಲು ನಿರ್ಧಾರ ಮಾಡಲಾಗಿತ್ತು. ತರಾತುರಿಯಲ್ಲಿ ಸ್ವೆಟರ್ ಪೂರೈಕೆ ಮಾಡ್ಬೇಕಾಗಿರೋದ್ರಿಂದ ಟೆಂಡರ್ ಕರೆಯದೇ 4ಜಿ ವಿನಾಯಿತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್‍ಗಳನ್ನು ಸರಬರಾಜು ಮಾಡಲು ಆದೇಶವೂ ಆಗಿತ್ತು. ಆದರೆ ಅದನ್ನು ದುರುಪಯೋಗ ಮಾಡಿಕೊಳ್ಳಲಾಗಿದ್ದು, ಬಿಬಿಎಂಪಿಗೆ ನಟ ಕೋಮಲ್ ಸಹ ಸಾಥ್ ನೀಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಆರೋಪ ಮಾಡಿದೆ.

  • ನಟ ಕೋಮಲ್ ವಿರುದ್ಧ ಸ್ವೆಟರ್ ಹಗರಣ ಆರೋಪ

    ನಟ ಕೋಮಲ್ ವಿರುದ್ಧ ಸ್ವೆಟರ್ ಹಗರಣ ಆರೋಪ

    ಬೆಂಗಳೂರು: ಸದಾ ಒಂದಿಲ್ಲೊಂದು ಭ್ರಷ್ಟಾಚಾರ ಕೂಪದ ಮೂಲಕ ಹೆಸರು ವಾಸಿಯಾಗಿರುವ ಬಿಬಿಎಂಪಿಗೆ ಇದೀಗ ಮತ್ತೊಂದು ಭ್ರಷ್ಟಾಚಾರ ಸುತ್ತಿಕೊಂಡಿದ್ದು, ಈ ಹಗರಣಕ್ಕೆ ಹಾಸ್ಯ ನಟ ಕೋಮಲ್ ಸಾಥ್ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

    2020-21 ಸಾಲಿನಲ್ಲಿ ಪಾಲಿಕೆ ಶಾಲೆಗಳಿಗೆ ಸ್ವೆಟರ್ ಪೂರೈಕೆ ಮಾಡಲು ನಿರ್ಧಾರ ಮಾಡಲಾಗಿತ್ತು. ತರಾತುರಿಯಲ್ಲಿ ಸ್ವೆಟರ್ ಪೂರೈಕೆ ಮಾಡ್ಬೇಕಾಗಿರೋದ್ರಿಂದ ಟೆಂಡರ್ ಕರೆಯದೇ 4ಜಿ ವಿನಾಯಿತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್‍ಗಳನ್ನು ಸರಬರಾಜು ಮಾಡಲು ಆದೇಶವೂ ಆಗಿತ್ತು. ಆದರೆ ಅದನ್ನು ದುರುಪಯೋಗ ಮಾಡಿಕೊಳ್ಳಲಾಗಿದ್ದು, ಬಿಬಿಎಂಪಿಗೆ ನಟ ಕೋಮಲ್ ಸಹ ಸಾಥ್ ನೀಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಆರೋಪ ಮಾಡಿದೆ. ಇದನ್ನೂ ಓದಿ: ತಟ್ಟೆಯಲ್ಲಿ ಪೌಡರ್ ಹಾಕಿ ಎಟಿಎಂ ಕಾರ್ಡ್‍ನಿಂದ ಉಜ್ಜಿ ಕೊಕೇನ್ ಸೇವಿಸಿದ್ದ ರಾಗಿಣಿ 

    ದಲಿತ ಸಂಘರ್ಷದ ರಾಜ್ಯಾಧ್ಯಕ್ಷ ರಘು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಷ್ಟು ದಿನ ಕೇವಲ ಬಿಬಿಎಂಪಿ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗುತ್ತಿದ್ದರು. ಆದ್ರೆ ಈ ಬಾರಿ ಪಾಲಿಕೆಯ ಭ್ರಷ್ಟಚಾರ ಸ್ಯಾಂಡಲ್‍ವುಡ್‍ಗೆ ಅಂಟಿಕೊಂಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16,167 ಮಕ್ಕಳಿಗೆ ಸ್ವೆಟರ್ ಪೂರೈಕೆ ಮಾಡುವ ಜವಾಬ್ದಾರಿಯನ್ನು ನಟ ಜಗ್ಗೇಶ್ ತಮ್ಮ ಕೋಮಲ್ ಹೊತ್ತಿದ್ದರು. ಅವರಿಗೆ 1.75 ಕೋಟಿ ರೂ. ಹಣ ಬಿಡುಗಡೆ ಆಗಿದೆ. ಆರ್ ಅಶೋಕ್, ನಟ ಜಗ್ಗೇಶ್ ಅವರು ಒತ್ತಡ ಹಾಕಿಸಿ ಹಣ ಬಿಡುಗಡೆ ಮಾಡಿಸಿದ್ದರು. ಆದರೆ ಕೋವಿಡ್ ಕಾರಣದಿಂದ ಕಳೆದ ವರ್ಷ ತರಗತಿಗಳೇ ನಡೆದಿಲ್ಲ. ಸ್ವೆಟರ್ ಹಂಚಿಕೆ ಮಾಡದೆಯೇ 1.75 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ನಮ್ಮನ್ನು ಬಿಟ್ಟುಬಿಡಿ ಎಂದು ಕಣ್ಣೀರಿಟ್ಟ ಸಂಜನಾ ತಾಯಿ

    ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ನಟ ಕೋಮಲ್, ನನ್ನ ಮೇಲೆ ಬಂದಿರೋ ಆರೋಪಗಳೆಲ್ಲವೂ ಸುಳ್ಳು. ಅಸಲಿಗೆ ನಾನು ಟೆಂಡರ್ ಪಡೆದೇ ಇಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

    ಹಾಸ್ಯ ನಟ ಕೋಮಲ್ ಇತ್ತೀಚೆಗೆ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾಗ ಚಿಕಿತ್ಸೆಗೆ ಹಣದ ಅವಶ್ಯಕತೆ ಇತ್ತು. ಆದರೆ ಟೆಂಡರ್ ಪಡೆದ ಕೋಮಲ್ ಅವರಿಗೆ ಹಣ ನೀಡೋಕೆ ಬಿಬಿಎಂಪಿ ಅಧಿಕಾರಿಗಳು ಲಂಚ ಕೇಳ್ತಿದ್ದಾರೆ ಎಂದು ನಟ ಜಗ್ಗೇಶ್ ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಬರೆದುಕೊಂಡಿದ್ದರು. ಇದಾದ ಬಳಿಕ ತಮ್ಮ ಪ್ರಭಾವ ಬಳಸಿ, ಕಂದಾಯ ಸಚಿವ ಆರ್ ಅಶೋಕ್ ಅವರ ಮೂಲಕ ಮತ್ತು ಬಿಬಿಎಂಪಿ ವಿಶೇಷ ಆಯುಕ್ತರ ಮೂಲಕ ಒತ್ತಡ ಹಾಕಿಸಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

  • ನನ್ನ ಬೇಡಿಕೆಗೆ ರಾಯರು ಬೃಂದಾವನದಿಂದ ಎದ್ದು ಬಂದು ತಮ್ಮನ ಉಳಿಸಿಬಿಟ್ರು: ಜಗ್ಗೇಶ್

    ನನ್ನ ಬೇಡಿಕೆಗೆ ರಾಯರು ಬೃಂದಾವನದಿಂದ ಎದ್ದು ಬಂದು ತಮ್ಮನ ಉಳಿಸಿಬಿಟ್ರು: ಜಗ್ಗೇಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನವರಸನಾಯಕ ಜಗ್ಗೇಶ್ ಅವರ ಸಹೋದರನಿಗೆ ಕೊರೊನಾ ಪಾಸಿಟಿವ್ ಬಂದು ತಾವು ಪಟ್ಟ ಕಷ್ಟವನ್ನು ನಟ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

    ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಜಗ್ಗೇಶ್, ನಾನು ಇಷ್ಟುದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು. ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ. ಅದು ಒಂದೆ ರಾಯರೆ ನಾನು ಕಾಯವಾಚಮನ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗೂ ಕೇಡು ಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗೂ ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆ-ತಾಯಿಯನ್ನು ನೋಹಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಠೆಯಿಂದ ಮಾಡಿದ್ದರೆ, ಕಾಯಕ ಮಾಡುವ ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದರೆ ಸಾವಿನ ಮನೆ ಕದತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು.

    ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದು ಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು. ಕೋಮಲ್ ಈಸ್ ಸೇಫ್. ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ. ಆದರೆ ಇತ್ತೀಚೆಗೆ ತನಗೆ ಬರಬೇಕಾದ ಬಿಲ್‍ಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು. ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೊನಾ ಮಾರಿ ಮೈಸೇರಿ ತುಂಬಾ ಸೀರಿಯಸ್ ಆಗಿಬಿಟ್ಟ. ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ. ಅವನಿಗೆ ಸಹಾಯ ಮಾಡಿದ ಡಾ. ಮಧುಮತಿ, ನಾದನಿ ಡಾ ಲಲಿತ ನರ್ಸ್ ಗಳ ಪಾದಕ್ಕೆ ನನ್ನ ನಮನ, ರಾಯರೆ ಎಂದು ಜಗ್ಗೇಶ್ ಸರಣಿ ಟ್ವೀಟ್ ಮಾಡಿದ್ದಾರೆ.

  • ಕೋಮಲ್ ಮೇಲೆ ದಾದಾಗಿರಿ ಮಾಡಿದೋರನ್ನ ಖಂಡಿತಾ ಸುಮ್ಮನೆ ಬಿಡಲ್ಲ: ಜಗ್ಗೇಶ್

    ಕೋಮಲ್ ಮೇಲೆ ದಾದಾಗಿರಿ ಮಾಡಿದೋರನ್ನ ಖಂಡಿತಾ ಸುಮ್ಮನೆ ಬಿಡಲ್ಲ: ಜಗ್ಗೇಶ್

    ಬೆಂಗಳೂರು: ನಟ ಕೋಮಲ್ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯಿಸಿ, ಅವನು ಪಾಪದವನು, ಯಾರು ಈ ಹಲ್ಲೆ ನಡೆಸಿದ್ದಾರೆ ಎಂದು ಗೊತ್ತಿಲ್ಲ. ಆದರೆ ಈ ರೀತಿ ದಾದಾಗಿರಿ ಮಾಡಿದವರನ್ನು ಖಂಡಿತಾ ಸುಮ್ಮನೆ ಬಿಡಲ್ಲ ಎಂದು ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ತಮ್ಮ ಮಗಳನ್ನು ಟ್ಯೂಶನ್ ಗೆ ಬಿಡಲಿಕ್ಕೆ ಹೋಗ್ತಾ ಇದ್ದ. ಶ್ರೀರಾಮಪುರ ರೈಲ್ವೇ ಅಂಡರ್ ಪಾಸ್ ಬಳಿ ಬರುತ್ತಿದಾಗ ಈ ಘಟನೆ ನಡೆದಿದೆ. ನಾಲ್ಕು ಜನ ಬೈಕ್ ಸವಾರರು ಸೈಡ್ ಕೊಟ್ಟಿಲ್ಲ ಎನ್ನುವ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಈ ವೇಳೆ ಮೂವರು ಕೋಮಲ್ ನನ್ನು ಹಿಡಿದುಕೊಂಡಿದ್ದಾರೆ. ಇನ್ನೊಬ್ಬ ಕೋಮಲ್ ಮೇಲೆ ಹಲ್ಲೆ ಮಾಡಿದ್ದಾನೆ. ನಾಲ್ಕು ಜನ ಕುಡಿದು ಹೊಡೆದಿದ್ದಾರೆ. ಈ ರೀತಿ ದಾದಾಗಿರಿ ಮಾಡುವವರನ್ನು ಪೊಲೀಸರು ಸುಮ್ಮನೆ ಬಿಡಬಾರದು. ಹಲ್ಲೆ ನಡೆಸಿದವರನ್ನು ಖಂಡಿತಾ ನಾನು ಸುಮ್ಮನೆ ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ರೀತಿಯ ಘಟನೆಗಳು ಬೆಂಗಳೂರಿನಲ್ಲಿ ಆಗಬಾರದು. ನನ್ನ ತಮ್ಮ ಅಥವಾ ನಟ ಮೇಲೆ ಹಲ್ಲೆ ನಡೆದಿದೆ ಎಂದು ನಾನು ಈ ಮಾತು ಹೇಳುತ್ತಿಲ್ಲ. ಯಾರಿಗೂ ಕೂಡ ಹೀಗೆ ಆಗಬಾರದು. ಕುಡಿದು, ಗಾಂಜಾ ಸೇವಿಸಿ ನಶೆಯಲ್ಲಿ ಪುಂಡರು ಈ ರೀತಿ ಬೆಂಗಳೂರು ನಗರದಲ್ಲಿ ಗಲಾಟೆ ಮಾಡಿದರೆ ಏನು ಅರ್ಥ? ಯಾರು ಏನ್ ಮಾಡಿದ್ದಾರೆ ಎಂದು ನನಗೆ ಗೊತ್ತಾಗುತ್ತೆ. ಇಂಡಸ್ಟ್ರಿಯವರು ಮಾಡಿದ್ದಾರಾ ಅಥವಾ ಬೇರೆಯವರು ಹಲ್ಲೆ ಮಾಡಿದ್ದಾರ ಗೊತ್ತಿಲ್ಲ ಎಂದರು.

    ನಾನು ಮುವತ್ತು ವರ್ಷದಿಂದ ಇಂಡಸ್ಟ್ರಿಯಲ್ಲೇ ಇದ್ದೇನೆ. ನನಗೆ ಅವಾಚ್ಯ ಪದಗಳಲ್ಲಿ ಬೈಯೋದು ಗೊತ್ತು. ಆದರೆ ಕೋಮಲ್ ಪಾಪದವನು, ಅವನಿಗೆ ಇವೆಲ್ಲಾ ಗೊತ್ತಾಗಲ್ಲ. ಅಂತ ಅಮಾಯಕನ ಮೇಲೆ ಹಲ್ಲೆ ಮಾಡಿದ್ದಾರೆ ಅವರನ್ನು ಸುಮ್ಮನೆ ಬಿಡಲ್ಲ. ಅವರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಆಗಲೇಬೇಕು ಎಂದು ಹರಿಹಾಯ್ದರು.

  • ತಮ್ಮನ ಬಗ್ಗೆ ಹೆಮ್ಮೆಯ ಮಾತಾಡಿದರು ನವರಸ ನಾಯಕ!

    ತಮ್ಮನ ಬಗ್ಗೆ ಹೆಮ್ಮೆಯ ಮಾತಾಡಿದರು ನವರಸ ನಾಯಕ!

    ಬೆಂಗಳೂರು: ಪ್ರತಿಭಾವಂತ ನಟ ಕೋಮಲ್ ಎಲ್ಲಿ ಹೋದರು ಎಂಬ ಪ್ರಶ್ನೆಯೊಂದು ವರ್ಷಾಂತರಗಳಿಂದ ಅವರನ್ನು ಅಭಿಮಾನಿಸುವ, ಮೆಚ್ಚಿಕೊಳ್ಳುವವರನ್ನೆಲ್ಲ ಕಾಡುತ್ತಲೇ ಇದೆ. ಕೆಂಪೇಗೌಡ 2 ಚಿತ್ರದ ಮೂಲಕ ಭಿನ್ನ ಗೆಟಪ್ಪಿನಲ್ಲಿ ಕೋಮಲ್ ಮತ್ತೆ ಮರಳೋ ಸೂಚನೆ ನೀಡಿದಾಗ ಎಲ್ಲರೂ ಖುಷಿಗೊಂಡಿದ್ದರು. ಆದರೆ ಅದಾದ ನಂತರವೂ ಒಂದು ದೊಡ್ಡ ಗ್ಯಾಪಿನ ನಂತರ ಕೋಮಲ್ ಕೆಂಪೇಗೌಡನಾಗಿ ಅಬ್ಬರಿಸಿದ್ದಾರೆ. ಯೂಟ್ಯೂಬ್ ನಲ್ಲಿ ಈ ಸಿನಿಮಾ ಟ್ರೈಲರ್ ಈಗ ಮಿಲಿಯನ್ನುಗಟ್ಟಲೆ ವೀವ್ಸ್ ಪಡೆಯೋ ಮೂಲಕ ವಿರಾಟ್ ರೂಪ ಪ್ರದರ್ಶಿಸಿದೆ.

    ಕೆಂಪೇಗೌಡ2 ಚಿತ್ರದ ಟ್ರೈಲರ್ ಗೆ ಈ ಪಾಟಿ ಜನಬೆಂಬಲ ಸಿಕ್ಕಿರೋದರಿಂದ ಕೋಮಲ್ ಕೂಡಾ ಖುಷಿಗೊಂಡಿದ್ದಾರೆ. ಹೊಸಾ ಗೆಟಪ್ಪಿನಲ್ಲಿ ಮರಳಿದಾಗ ಈ ಥರದ ಸ್ವಾಗತ ಸಿಕ್ಕರೆ ಯಾವ ನಟನಿಗೇ ಆದರೂ ಅದಕ್ಕಿಂತಲೂ ಖುಷಿಯ ಸಂಗತಿ ಬೇರೊಂದಿರಲು ಸಾಧ್ಯವಿಲ್ಲ. ಹೀಗೆ ತಮ್ಮನ ಚಿತ್ರ ಗೆಲ್ಲುವ ಸ್ಪಷ್ಟ ಸೂಚನೆ ಸಿಕ್ಕಿರುವಾಗ ಅಣ್ಣ ಜಗ್ಗೇಶ್ ಅವರಿಗೆ ಖುಷಿಯಾಗದಿರಲು ಸಾಧ್ಯವೇ?

    ಆರಂಭದಿಂದ ಇಲ್ಲಿಯವರೆಗೂ ಸಹೋದರ ಕೋಮಲ್ ಅವರಿಗೆ ಬೆನ್ನೆಲುಬಾಗಿ ಸಾಥ್ ನೀಡುತ್ತಾ ಬಂದಿರುವವರು ಜಗ್ಗೇಶ್. ಅವರೀಗ ಕೆಂಪೇಗೌಡ 2 ಚಿತ್ರದ ಟ್ರೈಲರಿಗೆ ಸಿಕ್ಕಿರೋ ಅಭೂತಪೂರ್ವ ಬೆಂಬಲದಿಂದ ಥ್ರಿಲ್ ಆಗಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕವೇ ಇದಕ್ಕೆ ಕಾರಣರಾದ ಕನ್ನಡ ಕುಲಕೋಟಿಗೆ ಧನ್ಯವಾದ ಸಮರ್ಪಿಸಿದ್ದಾರೆ. `ಕೆಂಪೇಗೌಡ2 ಚಿತ್ರಕ್ಕೆ ಒಂದು ಮಿಲಿಯನ್ ವೀಕ್ಷಣೆ ಸಿಗುವಂತೆ ಮಾಡಿದ ಕನ್ನಡ ಕುಲಕೋಟಿಗೆ ಧನ್ಯವಾದಗಳು. ಇದೀಗ ಈ ಸಿನಿಮಾಗೆ ಡಿಐ ನಡೆಯುತ್ತಿದೆ. ಈ ರಾ ಸಿನಿಮಾ ನೋಡಿಯೇ ನನಗೆ ರೋಮಾಂಚನವಾಗಿದೆ. ಬೆಸ್ಟ್ ಕಮರ್ಶಿಯಲ್ ಮೂವಿಗಳ ಸಾಲಿಗೆ ಈ ಚಿತ್ರ ಸೇರಲಿದೆ ಎಂದು ಮನ ಹೇಳಿತು. ಅಣ್ಣನಾಗಿ ಹೆಮ್ಮೆಯಾಯಿತು’ ಅಂತ ಜಗ್ಗೇಶ್ ಬರೆದುಕೊಂಡಿದ್ದಾರೆ.

    ಶಂಕರ್ ಗೌಡ ನಿರ್ದೇಶನದ ಈ ಚಿತ್ರದಲ್ಲಿ ಕೋಮಲ್ ಈವರೆಗಿನ ಇಮೇಜನ್ನೇ ಬದಲಾಯಿಸಿಕೊಳ್ಳುವಂಥಾ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ಕ್ರಿಕೆಟರ್ ಶ್ರೀಶಾಂತ್ ಖಳ ನಟನಾಗಿ ನಟಿಸಿದ್ದಾರೆ. ಲೂಸ್ ಮಾದ ಯೋಗಿ ಕೂಡಾ ಸ್ಪೆಷಲ್ ರೋಲ್ ಒಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಕೋಮಲ್ ಪಾಲಿಗೆ ಮರುಹುಟ್ಟಿನಂಥಾ ರೀ ಎಂಟ್ರಿ. ಈ ಸಾಸದಲ್ಲಿ ದೊಡ್ಡ ಮಟ್ಟದಲ್ಲಿಯೇ ಗೆಲ್ಲುವ ಸೂಚನೆ ಟ್ರೈಲರಿಗೆ ಸಿಗುತ್ತಿರೋ ಬೆಂಬಲದ ಮೂಲಕವೇ ಸ್ಪಷ್ಟವಾಗುತ್ತದೆ.

  • 4 ವರ್ಷಗಳ ನಂತ್ರ ಕೆಂಪೇಗೌಡರಾಗಿ ಬಂದ ಕೋಮಲ್

    4 ವರ್ಷಗಳ ನಂತ್ರ ಕೆಂಪೇಗೌಡರಾಗಿ ಬಂದ ಕೋಮಲ್

    ಬೆಂಗಳೂರು: ಕಾಮಿಡಿಯ ಮೂಲಕ ಪ್ರೇಕ್ಷಕರನ್ನು ನಗಿಸುತ್ತಿದ್ದ ನಟ ಕೋಮಲ್ ಕುಮಾರ್ ಅವರು ಸುದೀರ್ಘ ನಾಲ್ಕು ವರ್ಷಗಳ ನಂತರ ತೆರೆ ಮೇಲೆ ಬಂದಿದ್ದಾರೆ.

    ನಟ ಕೋಮಲ್ ಅಭಿನಯದ ‘ಕೆಂಪೇಗೌಡ-2′ ಸಿನಿಮಾದ ಟ್ರೇಲರ್ ಇಂದು ಬಿಡುಗಡೆಯಾಗಿದ್ದು, ಕಾಮಿಡಿ ಬಿಟ್ಟು ಆ್ಯಕ್ಷನ್ ಅವತಾರ ತಾಳಿ ಅಭಿಮಾನಿಗಳ ಮುಂದು ಅಬ್ಬರಿಸಿದ್ದಾರೆ. ಕಳೆದ ದಿನವೇ ಕೋಮಲ್ ಸಹೋದರ ನಟ ಜಗ್ಗೇಶ್ ಅವರು ಟ್ರೇಲರ್ ಬಿಡುಗಡೆಗೆ ಶುಭಕೋರಿದ್ದರು. “ಕೆಂಪೇಗೌಡ-2’ ಸಿನಿಮಾದಲ್ಲಿ ಅವನ ಎರಡು ವರ್ಷದ ಶ್ರಮವಿದೆ. ಆಶೀರ್ವದಿಸಿ” ಎಂದು ಇಂದು ಕೂಡ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

    ನಟ ಕೋಮಲ್ ಅವರು ಈ ಸಿನಿಮಾದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಚಿತ್ರದಲ್ಲಿ ಖಡಕ್ ಲುಕ್, ಫೈಟ್‍ಗಳನ್ನು ಕಾಣಬಹುದಾಗಿದೆ. ಒಂದು ಕೊಲೆ ರಹಸ್ಯ, ಅದರ ಹಿಂದೆ ಇರುವ ರಾಜಕಾಣಿಗಳು ಮತ್ತು ದೊಡ್ಡ-ದೊಡ್ಡ ಅಧಿಕಾರಿಗಳ ಬಣ್ಣ ಬಯಲು ಮಾಡಲು ಹೋರಾಡುವ ಪೊಲೀಸ್ ಅಧಿಕಾರಿಯಾಗಿ ಕೋಮಲ್ ಮಿಂಚಿದ್ದಾರೆ. ಸಿನಿಮಾ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ನಿಂದ ಕೂಡಿದ್ದು, ಆ್ಯಕ್ಷನ್ ಜೊತೆ ಪ್ರೀತಿ-ಪ್ರೇಮವೂ ಇದೆ.

    ಈ ಸಿನಿಮಾವನ್ನು ಶಂಕರೇಗೌಡ ನಿರ್ದೇಶನ ಮಾಡಿದ್ದು, ಕೋಮಲ್ ಅವರಿಗೆ ಕನ್ನಡದಲ್ಲಿ ಮೊದಲ ಬಾರಿಗೆ ರಿಶಿಕಾ ಶರ್ಮ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಅಂದರೆ 2012ರಲ್ಲಿ ನಟ ಕಿಚ್ಚ ಸುದೀಪ್ ಮತ್ತು ರಾಗಿಣಿ ದ್ವಿವೇದಿ ಅಭಿನಯದ ಕೆಂಪೇಗೌಡ ಸಿನಿಮಾ ರಿಲೀಸ್ ಆಗಿತ್ತು. ಈಗ ನಟ ಕೋಮಲ್ ‘ಕೆಂಪೇಗೌಡ-2’ ಸಿನಿಮಾದ ಮೂಲಕ ತೆರೆಮೇಲೆ ಮರಳಿದ್ದಾರೆ.

    https://www.youtube.com/watch?v=sPkMNv-lI6s

  • ಕೆಂಪೇಗೌಡ-2 ಸಿನಿಮಾ ಚಿತ್ರೀಕರಣದ ವೇಳೆ ಅವಘಢ: ಯೋಗಿ, ಕೋಮಲ್ ಗೆ ಗಾಯ

    ಕೆಂಪೇಗೌಡ-2 ಸಿನಿಮಾ ಚಿತ್ರೀಕರಣದ ವೇಳೆ ಅವಘಢ: ಯೋಗಿ, ಕೋಮಲ್ ಗೆ ಗಾಯ

    ಚೆನ್ನೈ: ಕನ್ನಡದ ಕೆಂಪೇಗೌಡ-2 ಸಿನಿಮಾದ ಚಿತ್ರೀಕರಣ ವೇಳೆ ಅವಘಡ ಸಂಭವಿಸಿದೆ. ನಟರಾದ ಲೂಸ್ ಮಾದ ಯೋಗಿ ಮತ್ತು ಕೋಮಲ್ ಗಾಯಗೊಂಡಿದ್ದು, ಅದೃಷ್ಟವಶಾತ್ ಇಬ್ಬರೂ ನಟರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ತಮಿಳುನಾಡಿನ ಮಹಾಬಲಿಪುರಂ ಬಳಿ ಕೆಂಪೇಗೌಡ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಸಾಹಸ ದೃಶ್ಯದ ಚಿತ್ರೀಕರಣಕ್ಕಾಗಿ ಅಲ್ಬೇರಿಯನ್ ಬೈಕ್ ಬಳಸಿಕೊಳ್ಳಲಾಗಿತ್ತು. ಈ ವೇಳೆ ಕೆಳಮಟ್ಟದಿಂದ ಬೈಕ್ ವೀಲಿಂಗ್ ಮಾಡುವಾಗ ವಾಹನ ಉಲ್ಟಾ ಬಿದ್ದಿದೆ. ಪರಿಣಾಮ ಯೋಗಿ ಹಾಗೂ ಕೋಮಲ್‍ಗೆ ಗಾಯವಾಗಿದೆ.

    ಕೆಂಪೇಗೌಡ ಸಿನಿಮಾದಲ್ಲಿ ಕೋಮಲ್ ಮತ್ತು ಯೋಗಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಸ್ಥಳದಲ್ಲಿ ನಿರ್ಮಾಪಕ ಶಂಕರೇಗೌಡ ಹಾಜರಿದ್ದು, ಗಾಯಗೊಂಡಿರುವ ಕೋಮಲ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.