Tag: koragajja

  • ದೈವಾರಾಧನೆ ಕುರಿತು ಸಿನಿಮಾ ಮಾಡಿದರೆ ವಿರೋಧ: ದೈವಾರಾಧಕರು

    ದೈವಾರಾಧನೆ ಕುರಿತು ಸಿನಿಮಾ ಮಾಡಿದರೆ ವಿರೋಧ: ದೈವಾರಾಧಕರು

    ತುಳುನಾಡ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿದ್ದಾರೆ. ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆ ನಡೆಸಿದವರು, ಮುಂದೊಂದು ದಿನ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ದೈವಾರಾಧಕರು ತಿಳಿಸಿದ್ದಾರೆ. ದೈವಾರಾಧನೆ ಸಿನಿಮಾ ಮಾಡಿದರೆ, ಮುಲಾಜಿಲ್ಲದೇ ವಿರೋಧಿಸಲಾಗುವುದು ಎಂದಿದ್ದಾರೆ.

    ದೈವದ ಕೋಲಾ (Buta Kola), ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದಾರೆ ಎಂದು ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಿವೆ. ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ಕರಾವಳಿ (Karavali) ಹೊರಗಿನ ದೈವಾರಾಧನೆ ವಿರುದ್ಧ ಮಂಗಳೂರಿನ ಜನ ಸಿಡಿದೆದ್ದಿದ್ದಾರೆ. ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ (Koragajja) ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು (Mangaluru) ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ಮೈಸೂರು ಮೂಲದ ಕೆಲ ಭಕ್ತರೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

    ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ಮಾಡುತ್ತಿರೋದು ವ್ಯವಹಾರದ ಉದ್ದೇಶ. ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಿನಿಮಾ ಮತ್ತು ಸಾಮಾಜಿಕ ತಾಣಗಳ ಕಾರಣದಿಂದ ಈ ದಂಧೆ ನಡೀತಾ ಇದೆ. ಇದನ್ನ ನಿಲ್ಲಿಸದೇ ಇದ್ದರೇ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೈಸೂರು, ಬೆಂಗ್ಳೂರಿನಲ್ಲಿ ಕೊರಗಜ್ಜ ದೈವದ ಹೆಸರಲ್ಲಿ ದಂಧೆ – ಆರೋಪ

    ಮೈಸೂರು, ಬೆಂಗ್ಳೂರಿನಲ್ಲಿ ಕೊರಗಜ್ಜ ದೈವದ ಹೆಸರಲ್ಲಿ ದಂಧೆ – ಆರೋಪ

    ಮಂಗಳೂರು: ಮೈಸೂರು (Mysuru), ಬೆಂಗಳೂರಿನಲ್ಲಿ (Bengaluru) ಕೊರಗಜ್ಜ ದೈವದ ಹೆಸರಲ್ಲಿ ದಂಧೆ ನಡೆಸುತ್ತಿರುವುದಾಗಿ ಕರಾವಳಿಯ ದೈವಾರಾಧಕರು ಆರೋಪಿಸಿದ್ದಾರೆ.

    ದೈವದ ಕೋಲಾ (Buta Kola), ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದಾರೆ ಎಂದು ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಿವೆ. ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋತ ಬಳಿಕ ರಾಜ್ಯದಲ್ಲಿ ಇರಲ್ಲ – ಓಡಿ ಹೋಗ್ತಾರೆ: ಆರ್.ಅಶೋಕ್

    ಕರಾವಳಿ (Karavali) ಹೊರಗಿನ ದೈವಾರಾಧನೆ ವಿರುದ್ಧ ಮಂಗಳೂರಿನ ಜನ ಸಿಡಿದೆದ್ದಿದ್ದಾರೆ. ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ (Koragajja) ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು (Mangaluru) ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ಮೈಸೂರು ಮೂಲದ ಕೆಲ ಭಕ್ತರೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋತ ಬಳಿಕ ರಾಜ್ಯದಲ್ಲಿ ಇರಲ್ಲ – ಓಡಿ ಹೋಗ್ತಾರೆ: ಆರ್.ಅಶೋಕ್

    ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ಮಾಡುತ್ತಿರೋದು ವ್ಯವಹಾರದ ಉದ್ದೇಶ. ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಿನಿಮಾ ಮತ್ತು ಸಾಮಾಜಿಕ ತಾಣಗಳ ಕಾರಣದಿಂದ ಈ ದಂಧೆ ನಡೀತಾ ಇದೆ. ಇದನ್ನ ನಿಲ್ಲಿಸದೇ ಇದ್ದರೇ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿಗೂ ಶಿಫ್ಟ್- ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ?

    ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿಗೂ ಶಿಫ್ಟ್- ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ?

    ಬೆಂಗಳೂರು: ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ.

    ಕಾಂತಾರ ಸಿನಿಮಾ ಅಬ್ಬರದ ಓಟದ ಹಿಂದೆ ದೈವಶಕ್ತಿಯ ಪ್ರೇರಣೆ ಇದೆ ಅನ್ನೋದು ಚಿತ್ರತಂಡದ ಮಾತು. ಕರಾವಳಿಯ ಭಾಗದ ದೈವಾರಾಧನೆ ಸಂಸ್ಕೃತಿ ಈಗ ಇಡಿ ದೇಶಕ್ಕೆ ಚಿರಪರಿಚಿತವಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ಮಾತ್ರ ಹೊಸ ದೈವದ ವಿಚಾರದಲ್ಲಿ ದೊಡ್ಡ ಸಮರ ಶುರುವಾಗಿದೆ.

    ಹೌದು ಬೆಂಗಳೂರಿನ ದೊಡ್ಡಬಳ್ಳಾಪುರ (Doddaballapur) ದಲ್ಲಿ ಈಗ ಕೊರಗಜ್ಜನ ದೈವಸ್ಥಾನ (Koragajja) ಶುರುವಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಇದೇ ಭಾನುವಾರ ದೈವಕೋಲವೂ ನಡೆಯಲಿದೆ ಅಂತಾ ಆಮಂತ್ರಣ ಪತ್ರಿಕೆಯೂ ಶುರುವಾಗಿದೆ. ಇಲ್ಲಿ ಕೊರಗಜ್ಜನನ್ನು ಪ್ರತಿಷ್ಠಾಪಿಸಿದ ಕುಟುಂಬ ನಮಗೆ ಕೊರಗಜ್ಜ ಕನಸಲ್ಲಿ ಬಂದು ಇಲ್ಲಿ ನೆಲೆಯಾಗುತ್ತೇನೆ ಅಂತಾ ಹೇಳಿದ್ದು, ಕಲ್ಲು ಸಿಕ್ಕಿದೆ ಅನ್ನುತ್ತಿದ್ದಾರೆ. ಆದರೆ ಇದೆಲ್ಲವೂ ದುಡ್ಡಿನ ಬ್ಯುಸಿನೆಸ್ ಆಗಬಾರದು. ಕರಾವಳಿಯಲ್ಲಿ ದೈವಸ್ಥಾನ, ಭೂತಕೋಲ ನಡೆಯೋದು. ಅದನ್ನು ಬಿಟ್ಟು ಬೇರೆ ಕಡೆ ದುಡ್ಡಿಗಾಗಿ ದೈವ, ಕರಾವಳಿಯ ಭಕ್ತಿಯನ್ನು ಮಾರಾಟ ಮಾಡಲಾಗುತ್ತಿದೆ ಅಂತಾ ಕರಾವಳಿಯ ದೈವವನ್ನು ನಂಬುವ ಜನ ಕಿಡಿಕಾರುತ್ತಿದ್ದಾರೆ. ಹೀಗಾಗಿ ಕೊರಗಜ್ಜನನ್ನು ಪ್ರತಿಷ್ಠಾಪಿಸಿದ ಮಹಿಳೆಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

    ನಾಗಾರಾಧನೆ ಮತ್ತು ದೈವರಾದನೆಗಳು ತುಳುನಾಡಿ (Tulunadu) ನಲ್ಲಿ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆ. ಕಾಂತಾರ ಚಿತ್ರದ ನಂತರ ಮೈಸೂರು ಬೆಂಗಳೂರು ಭಾಗಗಳಲ್ಲೂ ದೈವಾರಾಧನೆ ಆರಂಭವಾಗಿದೆ. ಈ ವಿಚಾರ ಈಗ ಬಹು ಚರ್ಚೆಯಲ್ಲಿದೆ. ಕರಾವಳಿಯ ಮಣ್ಣಿನ ಸಂಸ್ಕೃತಿಯನ್ನು ದುರುಪಯೋಗಪಡಿಸಲಾಗುತ್ತಿದೆ ಎಂಬ ಕೂಗು ಎದ್ದಿದೆ. ನೀತಿ ನಿಯಮ ಸಂಪ್ರದಾಯ ಮತ್ತು ಕಟ್ಟುಕಟ್ಟಲೆಯನ್ನು ಮೀರಿ ಘಟ್ಟದ ಮೇಲೆ ಆಚರಣೆಗಳನ್ನು ನಡೆಸಬಾರದು. ಆಯಾಯ ಊರಿನ ಸಂಪ್ರದಾಯಗಳನ್ನು ಆ ಭಾಗದ ಜನರು ಆಚರಣೆ ಮಾಡಬೇಕು ಎಂದು ದೈವರಾದಕ ಮೋಹನ್ ಭಟ್ ಹೇಳಿದ್ದಾರೆ. ಇದನ್ನೂ ಓದಿ: ರಿಷಬ್‌ ನಟನೆಯ ʻಕಾಂತಾರʼ ಚಿತ್ರಕ್ಕೆ ಗೋವಾ ಸಿಎಂ ಮೆಚ್ಚುಗೆ

    ಒಟ್ಟಿನಲ್ಲಿ ದೈವಕೋಲ ದೈವನರ್ತನ ಕರಾವಳಿಯಲ್ಲಿ ನಡೆಯಬೇಕು, ಅದನ್ನು ಹೊರತುಪಡಿಸಿ ಬೇರೆ ಕಡೆ ನಡೆದ್ರೇ ದೈವದ ಪವಾಡ ನಡೆಯಲ್ಲ. ಅದ್ರ ಶುದ್ಧತೆಗೆ ಧಕ್ಕೆ ಬರುತ್ತದೆ ಅನ್ನೋದು ಕರಾವಳಿ ದೈವ ಆರಾಧನೆ ಮಾಡುವವರ ಆಕ್ರೋಶವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ನಂತರ ಕೊರಗಜ್ಜ ದೈವದ ನೈಜಕಥೆ

    ‘ಕಾಂತಾರ’ ನಂತರ ಕೊರಗಜ್ಜ ದೈವದ ನೈಜಕಥೆ

    ತ್ರಿವಿಕ್ರಮ್ ಸಪಲ್ಯ  ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು  ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ  ಬಳ್ಳಮಂಜದ ಇತಿಹಾಸ ಪ್ರಸಿದ್ಧ  ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು. ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು ವರ್ಷಗಳಿಂದ  ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು  ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು. ಇದೀಗ ಸುಧೀರ್ ಅತ್ತಾವರ್ ಕೊರಗಜ್ಜ ನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ  ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.

    ಇತ್ತೀಚೆಗೆ  ಸುಧೀರ್ ನಿರ್ದೇಶನದ ಮರಾಠಿ -ಕನ್ನಡ ಸಿನಿಮಾ ಶೂಟಿಂಗ್ ಸಂಪೂರ್ಣ ಗೊಂಡು, ಅರೇಬಿಕ್- ಇಂಗ್ಲಿಷ್ ಸಿನೆಮ ಸಿನಿಮಾ “ಗುಲೇ ಬಕಾವಲಿ” ಮತ್ತು ಮರಾಠಿ-ಕನ್ನಡ ಸಿನಿಮಾ  “ಅಗೋ ಳಿ ಮಂಜಣ್ಣ” ಫ್ಲೋರ್ ನಲ್ಲಿ ಇರುವ ಮಧ್ಯೆಯೇ ಇದೀಗ ಸುಧೀರ್ ಮತ್ತೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು  ಡೊಳ್ಳು -ತಮಟೆಗಳ ಸ ವಿಶೇಷ  ಪೂಜೆಯನ್ನು ಶ್ರೀ ಸುಂದರ ಬೆಳುವಾಯಿ, ಶ್ರೀ ಬಾಬು ಪಾಂಗಳ, ಶ್ರೀ ಬಲ್ ರಾಜ್, ಶ್ರೀ ರಮೇಶ್ ಮೊದಲಾದ ಮಹನೀಯರು ಮತ್ತು ಗುರಿಕಾರರು ಹಳೆಯ ಶೈಲಿಯ ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸಿನೆಮಾಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ: ಅಜ್ಞಾತ ಸಖಿ ಸಹವಾಸ, ಲಕ್ಷ ಲಕ್ಷ ಗೋತ – ಬಣ್ಣದ ಮಾತಿನಿಂದ 41 ಲಕ್ಷ ಪೀಕಿದ ಮಾಯಾಂಗನೆ!

    ಖ್ಯಾತ ಹಾಲಿವೂಡ್-ಬಾಲಿವೂಡ್ ನಟ  ಕಬೀರ್ ಬೇಡಿ ಯವರು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ.  ಭರತ್ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಎಂಟುನೂರು ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಕ್ಯಾಮರಾ, ಸುಧೀರ್- ಕ್ರಷ್ಣ ರವಿ ಸಂಗೀತ, ಸುಧೀರ್ ಅತ್ತಾವರ್ ಕಲೆ ಚಿತ್ರಕ್ಕಿದೆ.  ತ್ರಿವಿಕ್ರಮ ಬೆಳ್ತಂಗಡಿ ನಿರ್ಮಾಣದ  ನಾಲ್ಕನೆಯ ಸಿನೆಮಾ

    Live Tv
    [brid partner=56869869 player=32851 video=960834 autoplay=true]

  • ದೈವಿ ಕ್ಷೇತ್ರಗಳಿಗೆ ಕಾಂತಾರ ನಟಿ ಭೇಟಿ : ಕೊರಗಜ್ಜ, ಗುಳಿಗ ಸನ್ನಿಧಿಯಲ್ಲಿ ಸಪ್ತಮಿ

    ದೈವಿ ಕ್ಷೇತ್ರಗಳಿಗೆ ಕಾಂತಾರ ನಟಿ ಭೇಟಿ : ಕೊರಗಜ್ಜ, ಗುಳಿಗ ಸನ್ನಿಧಿಯಲ್ಲಿ ಸಪ್ತಮಿ

    ದೈವ ಶಕ್ತಿಯ ಮೂಲಕವೇ ಅಪಾರ ಜನಮನ್ನಣೆ ಪಡೆದಿರುವ ಮತ್ತು ರಾಷ್ಟ್ರದಾದ್ಯಂತ ಯಶಸ್ಸಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಸಿನಿಮಾದ ನಟಿ ಸಪ್ತಮಿ ಗೌಡ, ತಮ್ಮ ಸಿನಿಮಾದ ಗೆಲುವಿಗೆ ಕಾರಣರಾದ ದೈವಗಳಿಗೆ ಭೇಟಿ ನೀಡಿ, ಅವರ ಆಶೀರ್ವಾದ ಪಡೆದಿದ್ದಾರೆ. ತಮ್ಮ ಬಿಡುವಿಲ್ಲದ ಸಮಯದ ನಡುವೆಯೂ ಮಂಗಳೂರಿನ ದೈವೀ ಕ್ಷೇತ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

    ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೇವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿರುವ ಅವರು, ಕೆಲ ಸಮಯ ಅಲ್ಲಿಯೇ ಇದ್ದು ಪೂಜೆ ಸಲ್ಲಿಸಿದ್ದಾರೆ. ಇವರ ಜೊತೆ ಸಿನಿಮಾದಲ್ಲಿ ಕೆಲಸ ಮಾಡಿದ ಹಲವು ಸದಸ್ಯರು ಮತ್ತು ಸಪ್ತಮಿ ಕುಟುಂಬ ಕೂಡ ಈ ಸಂದರ್ಭದಲ್ಲಿ ಹಾಜರಿತ್ತು. ಕ್ಷೇತ್ರದ ಸಮಿತಿಯವರು ನಟಿಯನ್ನು ಬರಮಾಡಿಕೊಂಡು, ಕ್ಷೇತ್ರದ ಮಹಿಮೆಯನ್ನು ತಿಳಿಸಿದರು. ಇದನ್ನೂ ಓದಿ:ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಈ ಸಂದರ್ಭದಲ್ಲಿ ಮಾತನಾಡಿದ ಸಪ್ತಮಿ, ತುಳು ನಾಡಿನ ದೈವಗಳ ಆಶೀರ್ವಾದದಿಂದ ತಮ್ಮ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ದೈವಗಳ ಮೇಲೆ ನನಗೂ ನಂಬಿಕೆ ಇದೆ. ಈ ಕಾರಣದಿಂದಾಗಿಯೇ ನನ್ನನ್ನು ಕಾಂತಾರ ಸಿನಿಮಾದ ಮೂಲಕ ನಾಡಿಗೆ ಪರಿಚಯವಾದೆ. ಇದಕ್ಕೆಲ್ಲ ದೈವಗಳ ಆಶೀರ್ವಾದವೇ ಕಾರಣ. ಸಿನಿಮಾ ಮಾಡಲುವಾಗಲೇ ಅಷ್ಟೇ ಶ್ರದ್ಧೆಯಿಂದ ಕೆಲಸ ಮಾಡಿದೆ. ಈಗಲೂ ಅದೇ ಶ್ರದ್ಧೆಯಿಂದ ಇಲ್ಲಿಗೆ ಬಂದಿರುವೆ ಎಂದರು.

    ಕಾಂತಾರ ಸಿನಿಮಾದ ನಂತರ ಸಪ್ತಮಿ ಗೌಡ ಅವರಿಗೆ ಹಲವು ಆಫರ್ಸ್ ಬರುತ್ತಿದ್ದು, ಈಗಾಗಲೇ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಒಂದು ಸಿನಿಮಾದ ಸ್ಕ್ರೀಪ್ಟ್ ರೀಡಿಂಗ್ ಕೂಡ ನಡೆಯುತ್ತಿದೆ ಎಂದು ಅವರೇ ಸ್ವತಃ ಹೇಳಿಕೊಂಡಿದ್ದಾರೆ. ಈ ಸಿನಿಮಾದಿಂದಾಗಿ ಅವರು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಸಕ್ಸಸ್ ಅನ್ನು ಸದ್ಯ ಸಪ್ತಮಿ ಎಂಜಾಯ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಗನ ಅನಾರೋಗ್ಯ ನಿವಾರಿಸಿದ ಕೊರಗಜ್ಜನಿಗೆ ಉಕ್ರೇನ್ ಕುಟುಂಬದಿಂದ ಅಗೆಲು ಸೇವೆ

    ಮಗನ ಅನಾರೋಗ್ಯ ನಿವಾರಿಸಿದ ಕೊರಗಜ್ಜನಿಗೆ ಉಕ್ರೇನ್ ಕುಟುಂಬದಿಂದ ಅಗೆಲು ಸೇವೆ

    ಮಂಗಳೂರು: ತುಳುನಾಡಿನ ಆರಾದ್ಯ ದೈವ ಕೊರಗಜ್ಜ (Koragajja) ನ ಪವಾಡ ಮತ್ತೊಮ್ಮೆ ಸುದ್ದಿಯಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇದೀಗ ಆ ಕುಟುಂಬ ಅಜ್ಜನಿಗೆ ಹರಕೆಯನ್ನು ತೀರಿಸಿದೆ.

    ಹೌದು. ಕೆಲ ದಿನಗಳ ಹಿಂದೆ ಉಕ್ರೇನ್ (Ukraine) ನ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಭಾರತ ಪ್ರವಾಸ ಕೈಗೊಂಡಿದ್ದು, ಅಂತೆಯೇ ಉಡುಪಿಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಗೋಶಾಲೆಯೊಂದಕ್ಕೆ ಭೇಟಿ ಕೊಟ್ಟಾಗ ಅಲ್ಲಿ ನಾಡಿ ನೋಡಿ ಔಷಧಿ ಕೊಡುವ ಭಕ್ತಿಭೂಷಣ್ ದಾಸ್ ಪ್ರಭುಜಿ ಅವರನ್ನು ಕುಟುಂಬ ಭೇಟಿಯಾಗಿದೆ. ಇದೇ ವೇಳೆ ಆ್ಯಂಡ್ರೂ ತಮ್ಮ ಮನಗ ಅನರೋಗ್ಯ (Health) ದ ಬಗ್ಗೆ ಅವರಿಗೆ ತಿಳಿಸಿದ್ದರು. ಇದನ್ನೂ ಓದಿ: ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್

    ಆ್ಯಂಡ್ರೂ ಕಷ್ಟ ಅರಿತ ಪ್ರಭುಜಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದರು. ಅಂತೆಯೇ ಕುಟುಂಬ ಬಂಟ್ವಾಳದ ಕೊಡ್ಮಾಣ್ ಸಮೀಪದ ಗೋವಿನ ತೋಟದ ಶ್ರೀರಾಧಾ ಸುರಭೀ ಗೋ ಮಂದಿರಲ್ಲಿ ವಾಸ್ತವ್ಯ ಹೂಡಿತ್ತು. ಜೊತೆಗೆ ಮಗನಿಗೆ ದೇಸಿ ದನದ ವಿಹಾರದ ಜೊತೆಗೆ ನಾಟಿ ಚಿಕಿತ್ಸೆ ಆರಂಭಿಸಲಾಯಿತು.

    ಇಷ್ಟು ಮಾತ್ರವಲ್ಲದೆ ಇತ್ತ ಕೊರಗಜ್ಜನ ಮುಂದೆ ಚಿಕಿತ್ಸೆಯಿಂದ ಮಗನನ್ನು ಸಂಪೂರ್ಣ ಗುಣಮುಖನಾಗುವಂತೆ ಮಾಡಲು ಕೋರಲಾಯಿತು. ಇದೀಗ ಮಗನ ಆರೋಗ್ಯದಲ್ಲಿ ಚೇತರಿಕೆ ಕಂಡ ಬೆನ್ನಲ್ಲೇ ಕುಟುಂಬ ಕೊರಗಜ್ಜನಿಗೆ ಅಗೆಲು ಸೇವೆ ನೀಡಿತು. ಇದನ್ನೂ ಓದಿ: ಕೊರಗಜ್ಜನಿಗೆ ನೈವೇದ್ಯ ರೂಪದಲ್ಲಿಟ್ಟ ಮದ್ಯ ಎಗರಿಸಿದ ಭೂಪ

    ಕೊರಗಜ್ಜನಿಗೆ ಅಗೆಲು ಕೊಡುವ ಸಂದರ್ಭದಲ್ಲಿ ಭಕ್ತಿಭೂಷಣ್ ದಾಸ್ ಪ್ರಭುಜಿ, ಪದ್ಮನಾಭ ಗೋವಿನ ತೋಟ, ನವೀನ್ ಮಾರ್ಲ, ಯಾದವ ಕೊಡಂಗೆ ಮೊದಲಾದವರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮುತಾಲಿಕ್ ಬರುವುದಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು

    ಮುತಾಲಿಕ್ ಬರುವುದಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು

    ಉಡುಪಿ: ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಉಡುಪಿ ಜಿಲ್ಲಾ ಪ್ರವೇಶಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ನಡೆದಿದೆ.

    ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ ಮೊರೆಹೋಗಿದ್ದಾರೆ. ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಏಳು ಕಿಲೋಮೀಟರ್ ಪಾದಯಾತ್ರೆ ಮಾಡಿ ಕೊರಗಜ್ಜನಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆಗೆ ಹೆಚ್ಚಿದ ಒತ್ತಡ: ಬಿಜೆಪಿಯಲ್ಲಿ ಭಿನ್ನ ನಿಲುವು

    ಹಿಂದೂ ಜಾಗರಣ ವೇದಿಕೆಯಿಂದ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಪೂಜೆಯ ಧಾರ್ಮಿಕ ಸಭೆಯಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸಬೇಕಿದ್ದರು. ಆದರೆ ಸರ್ಕಾರ ಮುತಾಲಿಕ್ ಜಿಲ್ಲೆಗೆ ಬರದಂತೆ ನಿಷೇಧಾಜ್ಞೆ ಹೊರಡಿಸಿತ್ತು. ಅಲ್ಲದೆ ಮುತಾಲಿಕ್ ಬಂದರೆ ಶಾಂತಿ ಕದಡುತ್ತದೆ ಎಂದು ಜಿಲ್ಲಾಡಳಿತ ಹೇಳಿತ್ತು.

    ಆ ಬಳಿಕ ಮುತಾಲಿಕ್ ಆಗಮನಕ್ಕೆ ತಡೆ ಒಡ್ಡಿದವರ ವಿರುದ್ಧ ಹಿಂದೂ ಕಾರ್ಯಕರ್ತರಲ್ಲಿ ಆಕ್ರೋಶ ಹೊರಹಾಕಿದ್ದರು. ಮುತಾಲಿಕ್ ನಿಷೇಧದ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಅವರನ್ನು ಕೊರಗಜ್ಜನೇ ಶಿಕ್ಷಿಸಲಿ ಎಂದು ಕಾರ್ಯಕರ್ತರು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ – ಹಾಕದಿದ್ದರೆ 500 ರೂ. ದಂಡ

  • ಹಿಂದೂ ಸಮಾಜದ ಐಕ್ಯತೆಗಾಗಿ ಹಿಂದೂಗಳ ಬೃಹತ್ ಪಾದಯಾತ್ರೆ

    ಹಿಂದೂ ಸಮಾಜದ ಐಕ್ಯತೆಗಾಗಿ ಹಿಂದೂಗಳ ಬೃಹತ್ ಪಾದಯಾತ್ರೆ

    ಮಂಗಳೂರು: ರಾಜ್ಯ ಕರಾವಳಿಯಲ್ಲಿ ಹಿಜಬ್ ವಿವಾದದ ಬಳಿಕ ಗೊಂದಲದ ವಾತವರಣ ನಿರ್ಮಾಣವಾಗಿದೆ. ಈ ನಡುವೆ ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿನಲ್ಲಿ ಬೃಹತ್ ಪಾದಯಾತ್ರೆ ನಡೆದಿದೆ. ಕರಾವಳಿಯ ಕಾರ್ನಿಕ ದೈವ ಕೊರಗಜ್ಜನ ಆದಿಕ್ಷೇತ್ರಕ್ಕೆ 10 ಸಾವಿರಕ್ಕೂ ಹೆಚ್ಚು ಭಕ್ತರು ಹದಿನೈದು ಕಿ.ಮೀ. ಪಾದಯಾತ್ರೆ ಮಾಡಿದ್ದಾರೆ.

    ಹಿಜಬ್ ಕುರಿತು ಬಂದ ಕೋರ್ಟ್ ತೀರ್ಪು ವಿರೋಧಿಸಿ ಎರಡು ದಿನಗಳ ಹಿಂದೆ ಮುಸ್ಲಿಂ ಸಮುದಾಯದವರು ಒಂದು ದಿನದ ಬಂದ್ ಆಚರಿಸಿದ್ದರು. ಈ ಬಂದ್ ಬಳಿಕ ಸೋಷಿಯಲ್ ಮೀಡಿಯಾ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆ ಶುರುವಾಗಿದೆ. ಹಿಂದೂ ಸಮಾಜ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವಂತೆಯೂ ಕರೆ ನೀಡಲಾಗುತ್ತಿದೆ. ಈ ನಡುವೆ ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಹಿಂದೂ ಸಮಾಜದ ಐಕ್ಯತೆಗಾಗಿ ಭಾನುವಾರ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ಕುರಾನ್,ಬೈಬಲ್ ಎಲ್ಲರನ್ನು ಕೊಲ್ಲು ಎಂದು ಹೇಳುತ್ತಿದೆ:  ಕಲ್ಲಡ್ಕ ಪ್ರಭಾಕರ ಭಟ್

    ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಮಂಗಳೂರು ಹೊರವಲಯದ ಕುತ್ತಾರು ಬಳಿ ಇರುವ ಕಾರ್ನಿಕ ದೈವ ಕೊರಗಜ್ಜನ ಆದಿಕ್ಷೇತ್ರಕ್ಕೆ ಕದ್ರಿ ಶ್ರೀಮಂಜುನಾಥ ದೇವಸ್ಥಾನದಿಂದ ಪಾದಯಾತ್ರೆ ನಡೆಯಿತು. ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರು 15 ಕಿ.ಮೀ. ದೂರ ಬರಿಗಾಲಿನಲ್ಲಿ ಪಾದಯಾತ್ರೆ ಮಾಡಿದರು. ಕೊರಗಜ್ಜ ಕ್ಷೇತ್ರದಲ್ಲಿ ನಡೆದ ಸಮಾರೋಪದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಭಾಗವಹಿಸಿ ಜಾಗೃತಿ ಭಾಷಣ ಮಾಡಿದರು ಹಾಗೂ ಪ್ರತ್ಯೇಕವಾದದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಕಾಂಗ್ರೆಸ್‌ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಮುಂದೆ ಒಂದಲ್ಲಾ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜ ಆಗಬಹುದು ಎಂಬ ವಿಶ್ವಾಸವನ್ನು ಪ್ರಭಾಕರ್ ಭಟ್ ವ್ಯಕ್ತಪಡಿಸಿದರು. ಆಕ್ರಮಣ ಆದಾಗ ಹಿಂದೂ ಸಮಾಜ ಪ್ರತಿರೋಧ ತೋರಿಸುತ್ತದೆ. ಶಾಂತಿ, ಸಾಮರಸ್ಯದ ಜೀವನ ದೌರ್ಬಲ್ಯ ಅಂದುಕೊಂಡರೆ ಅದು ಹೆಚ್ಚು ದಿನ ನಡೆಯಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಹಿಜಬ್‌ ತೀರ್ಪು- ಹೈಕೋರ್ಟ್‌ ಜಡ್ಜ್‌ಗಳಿಗೆ ʼವೈʼ ಭದ್ರತೆ

    ಮುಸಲ್ಮಾನರು ಹಿಜಬ್ ಹೆಸರಿನಲ್ಲಿ ಕೋರ್ಟ್ಗೆ ಹೋದರು. ತೀರ್ಪು ಬಂದ ಬಳಿಕ ಅದನ್ನು ಅವರು ಒಪ್ಪಲಿಲ್ಲ. ಅದು ಬಿಟ್ಟು ಪ್ರತಿಭಟನೆ ಮತ್ತು ನ್ಯಾಯಾಂಗ ನಿಂದನೆ ಮಾಡಿದರು. ಮುಸಲ್ಮಾನ ಸಾಮ್ರಾಜ್ಯ ನಿರ್ಮಾಣವೇ ಅವರ ಗುರಿ. ಇದಕ್ಕಾಗಿ ಹಿಂದೂ ಸಮಾಜ ಒಗ್ಗಟ್ಟಾಗಲು ಈ ನಡಿಗೆ ಎಂದು ಪ್ರಭಾಕರ್ ಭಟ್ ಹೇಳಿದರು.

    ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಭಟ್, ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದಲ್ಲಿ ಹಿಂದೂಗಳಾದ ನಮ್ಮೆಲ್ಲರ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

  • ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್

    ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್

    ಮಂಗಳೂರು: ಕಳೆದ ಕೆಲ ದಿನಗಳ ಹಿಂದೆ ವರನೊಬ್ಬ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಉಮರುಲ್ಲಾ ಬಾಷಿತ್ ಎಂದು ಗುರುತಿಸಲಾಗಿದೆ. ಈತ ಮಂಗಳೂರು ಕೊರಗಜ್ಜನ ಹೋಲುವ ವೇಷ ಧರಿಸಿ ಅವಮಾನ ಮಾಡಿ, ಸುದ್ದಿಯಾಗುತ್ತಿದ್ದಂತೆಯೇ ಎಸ್ಕೇಪ್ ಆಗಿದ್ದ. ಪ್ರಕರಣ ಸಂಬಂಧ ಈ ಹಿಂದೆಯೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಾಷಿತ್ ನನ್ನು ವಿಟ್ಲ ಠಾಣೆಯ ಪೊಲೀಸರು ಕೇರಳದ ಕೊಚ್ಚಿಯ ನೆಡುಂಬನ್ ಶೇರಿ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಅಲ್ಲಿನ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. 
    ಇದನ್ನೂ ಓದಿ: ಮದುವೆ ಮನೆಯಲ್ಲಿ ಕೊರಗಜ್ಜನಿಗೆ ಅವಮಾನ – ಇಬ್ಬರು ಅರೆಸ್ಟ್, ಮದುಮಗ ನಾಪತ್ತೆ

    ಏನಿದು ಘಟನೆ..?
    ಉಪ್ಪಳದ ಯುವಕ ಉಮರುಲ್ಲಾ ಬಾಷಿತ್ ಜೊತೆ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ವಧುವಿನ ಮನೆಗೆ ರಾತ್ರಿ ವರನ ಸ್ನೇಹಿತರ ಬಳಗ ಆಗಮಿಸಿತ್ತು. ಈ ವೇಳೆ ವರ ಕೊರಗಜ್ಜನ ವೇಷ-ಭೂಷಣ ಧರಿಸಿ ಬಂದಿದ್ದ. ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ಬಂದಿದ್ದ. ವರ ಹಾಗೂ ತಂಡ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿತ್ತು. ಈ ಕೃತ್ಯದಿಂದ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಹಿಂದೂ ಹಾಗೂ ಮುಸ್ಲಿಂ ಎರಡೂ ಸಮುದಾಯದವರಿಂದಲೂ ಆಕ್ರೋಶ ಹೊರಬಿದ್ದಿತ್ತು. ಅಲ್ಲದೆ ಕೃತ್ಯವನ್ನು ಖಂಡಿಸಿರುವ ಆಡಿಯೋ ಸಹ ವೈರಲ್ ಆಗಿತ್ತು.

    ಇತ್ತ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ವರ ಎಸ್ಕೇಪ್ ಆಗಿದ್ದನು. ಅಲ್ಲದೆ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿ ವೀಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದನು. ಘಟನೆ ಸಂಬಂಧ ವರ ಹಾಗೂ ಆತನ ಸ್ನೇಹಿತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ವರನಿಂದ ಅವಮಾನ!

  • ಮದುವೆ ಮನೆಯಲ್ಲಿ ಕೊರಗಜ್ಜನಿಗೆ ಅವಮಾನ – ಇಬ್ಬರು ಅರೆಸ್ಟ್, ಮದುಮಗ ನಾಪತ್ತೆ

    ಮದುವೆ ಮನೆಯಲ್ಲಿ ಕೊರಗಜ್ಜನಿಗೆ ಅವಮಾನ – ಇಬ್ಬರು ಅರೆಸ್ಟ್, ಮದುಮಗ ನಾಪತ್ತೆ

    ಮಂಗಳೂರು: ಮದುವೆ ಮನೆಯಲ್ಲಿ ಕೊರಗಜ್ಜನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಮದುಮಗ ನಾಪತ್ತೆಯಾಗಿದ್ದಾನೆ.

    ಮಂಗಲ್ಪಾಡಿ ನಿವಾಸಿ ಅಹ್ಮದ್ ಮುಜಿತಾಬು(28) ಹಾಗೂ ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಬಂಧಿತ ಆರೋಪಿಗಳಾಗಿದ್ದು, ಮದುಮಗ ಉಮರುಲ್ ಬಾತಿಷ್ ಸದ್ಯ ತಲೆಮರೆಸಿಕೊಂಡಿದ್ದಾನೆ. ಇದನ್ನೂ ಓದಿ: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ವರನಿಂದ ಅವಮಾನ!

    ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಮರುಲ್ ಬಾತಿಷ್ ಕೊರಗಜ್ಜ ದೈವ ಹೋಲುವ ವೇಷ ಧರಿಸಿದ್ದ. ವೀಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಮಂದಿ ಆಕ್ರೋಶ ಹೊರ ಹಾಕಿದ್ದರು.

    ವಧುವಿನ ಮನೆಗೆ ರಾತ್ರಿ ವರನ ಬಳಗದವರು ಆಗಮಿಸಿದ್ದು, ಸ್ನೇಹಿತರೊಂದಿಗೆ ಬಾತಿಷ್ ಕೊರಗಜ್ಜ ದೈವ ಹೋಲುವ ವೇಶ ಧರಿಸಿ ಕುಣಿದಿದ್ದ. ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ಕುಣಿದಿದ್ದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಘಟನೆಯಿಂದ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಆರತಿ ತಟ್ಟೆ ಹಿಡಿದು ಪೂಜೆಗಾಗಿ ಎರಡು ಕುಟುಂಬಗಳ ನಡುವೆ ಕಿತ್ತಾಟ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ವರ ಬಾತಿಷ್ ಹಾಗೂ ಆತನ ಸ್ನೇಹಿತರ ವಿರುದ್ಧ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.