Tag: Koratagere

  • ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

    ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

    ತುಮಕೂರು: ಅಲ್ಲಾನ (Allah) ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಬಂದಿದೆ. ನಿಮ್ಮ ಆಶೀರ್ವಾದದಿಂದ ನಾನು ಗೃಹಸಚಿವನಾಗಿದ್ದೇನೆ. ಆ ದೇವರ ಆಶೀರ್ವಾದ ಇಲ್ಲದೇ ಇದ್ದರೆ ನಾನು ಶಾಸಕನಾಗುತ್ತಿರಲಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದ್ದಾರೆ.

    ಗುರುವಾರ ಮುಸ್ಲಿಂ ಭಾಂಧವರ ಬಕ್ರಿದ್ (Bakrid) ಹಬ್ಬದ ಹಿನ್ನೆಲೆಯಲ್ಲಿ ಕೊರಟಗೆರೆ (Koratagere) ಪಟ್ಟಣದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂ (Muslim) ಬಾಂಧವರಿಗೆ ಶುಭ ಕೋರಿದರು. ಈ ವೇಳೆ ಧಾರ್ಮಿಕ ಮುಖಂಡರು ಪರಮೇಶ್ವರ್ ಅವರಿಗೆ ಟೋಪಿ ಧಾರಣೆ ಮಾಡಿ ಸಿಎಂ ಆಗಲಿ ಎಂದು ಶುಭಹಾರೈಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಶಕ್ತಿ ಪ್ರದರ್ಶನ – ಜುಲೈ 13, 14ಕ್ಕೆ ಸಭೆ

    ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಬಕ್ರಿದ್ ಹಬ್ಬ ತ್ಯಾಗ ಬಲಿದಾನದ ಸಂಕೇತ. ಅಲ್ಲಾ ಬೇರೆ ಬೇರೆ ರೀತಿಯಲ್ಲಿ ಪರೀಕ್ಷೆ ಮಾಡುತ್ತಾನಂತೆ. ತನ್ನ ಮಗನನ್ನೂ ಬಲಿ ಕೊಡಬೇಕು ಎನ್ನುವ ತ್ಯಾಗ ದೊಡ್ಡದು. ರಂಜಾನ್ ವೇಳೆ ಇಲ್ಲಿಗೆ ಬಂದಿದ್ದೆ. ಆಗ ಚುನಾವಣೆ ಇತ್ತು. ಈ ಸಂದರ್ಭ ನಾನು ಬಂದು ಮತ ಕೇಳಿದ್ದೆ. ನನ್ನನ್ನು ಗೆಲ್ಲಿಸಿದ್ದೀರಿ ಎಂದರು. ಇದನ್ನೂ ಓದಿ: ಅಕ್ಕಿಗೆ ಕಲ್ಲು ಹಾಕಿದ್ರಿ, ಈಗ ಹಣ ಕೊಡೋದ್ರಲ್ಲೂ ಜನ್ರ ಮನಸ್ಸು ಕೆಡಿಸ್ಬೇಡಿ: ಹೆಚ್‌ಕೆ ಪಾಟೀಲ್

    ಮಹಮ್ಮದ್ ಇಬ್ರಾಹಿಂ ತನ್ನ ಮಗನನ್ನೇ ಅಲ್ಲಾನಿಗೆ ಬಲಿ ಕೊಟ್ಟಿದ್ದ. ಅಂತಹ ಮಹಾನ್ ಬಲಿದಾನದ ಸಂಕೇತ ಬಕ್ರಿದ್. ಎಲ್ಲರಿಗೂ ಶುಭಕಾಮನೆ ಹೇಳಿದ್ದೇನೆ. ಭಾರತ ಶಾಂತಿ ನಂಬಿದ ದೇಶ. ಸಂವಿಧಾನದಲ್ಲೇ ಅದನ್ನು ಅಳವಡಿಸಿಕೊಂಡಿದ್ದೇವೆ ಎಂದರು. ಈ ಬಾರಿಯ ಚುನಾವಣೆಯಲ್ಲಿ (Election) ಕಾಂಗ್ರೆಸ್‌ಗೆ ಮುಸ್ಲಿಂ ಬಾಂಧವರ ಬಹುಪಾಲು ಮತದ ವಿಚಾರವಾಗಿ ಮಾತನಾಡಿದ ಅವರು, ಎಲ್ಲೋ ಒಂದುಕಡೆ ಮುಸ್ಲಿಮರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು. ಭಯದ ವಾತಾವರಣ ಇತ್ತು. ಅದೆಲ್ಲವನ್ನೂ ಬಿಟ್ಟು ಕಾಂಗ್ರೆಸ್‌ಗೆ ಮತಹಾಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯಗೆ ನೋಟಿಸ್

    ಕಾಂಗ್ರೆಸ್ ಜ್ಯಾತ್ಯಾತೀತ ಪಕ್ಷ. ಹಾಗಾಗಿ ಅವರು ನಮ್ಮ ಜೊತೆ ನಿಂತಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಅಭಿವೃದ್ಧಿಯ ಜೊತೆಗೆ ಶಾಂತಿ ಕಾಪಡಬೇಕಿದೆ. ಗೃಹ ಸಚಿವನಾಗಿ ಶಾಂತಿ ಕಾಪಾಡುವ ಕೆಲಸ ಮಾಡುತ್ತೇನೆ. ದ್ವೇಷ ಸಾಧಿಸಲು ಹೋಗುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ – ಯಾವ ದೇವಾಲಯದ ಆದಾಯ, ಖರ್ಚು ಎಷ್ಟು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಾರಿಗೆ ಕಾರು ಡಿಕ್ಕಿ – ಇಬ್ಬರ ಸಾವು, ಐವರು ಗಂಭೀರ

    ಲಾರಿಗೆ ಕಾರು ಡಿಕ್ಕಿ – ಇಬ್ಬರ ಸಾವು, ಐವರು ಗಂಭೀರ

    ತುಮಕೂರು: ಕಾರು ಮತ್ತು ಲಾರಿ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡ ಘಟನೆ ತುಮಕೂರು-ಮಧುಗಿರಿ (Tumakuru – Madhugiri) ರಸ್ತೆಯ ಕೊರಟಗೆರೆಯ (Koratagere) ಜಟ್ಟಿ ಅಗ್ರಹಾರದ ಬಳಿ ನಡೆದಿದೆ.

    ಮೃತರನ್ನು ಮಧುಗಿರಿಯ ಕೊಡಿಗೇನಹಳ್ಳಿಯ ಪರಮೇಶ್ (32), ದಾವಣಗೆರೆಯ ಶಿವನಾಯ್ಕ(30) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸಿದ್ದೇಶ್, ನಾಗೇಶ್, ವೆಂಕಟೇಶ ಬಾಬು, ಮೋಹನ್ ಮತ್ತು ನಾಗೇಶ ಗಾಯಗೊಂಡವರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆಯಿಲ್ಲ : ಸಿದ್ದರಾಮಯ್ಯ ವಾಗ್ದಾಳಿ

    ದಾಬಸ್‍ಪೇಟೆಯಲ್ಲಿ ಸ್ನೇಹಿತನ ಮದುವೆ ಕಾರ್ಯ ಮುಗಿಸಿ, ತುಮಕೂರಿನ ಸ್ನೇಹಿತನನ್ನು ಮನೆಗೆ ಬಿಟ್ಟು ಕೊಡಗೇನಹಳ್ಳಿಗೆ ಮರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸಿಪಿಐ ಕೆ.ಸುರೇಶ್, ಪಿಎಸ್‍ಐ ಜಿ.ಚೇತನ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕು, ಕೇಂದ್ರ ಕೊಡಲ್ಲ ಅಂತಾ ಹೇಳ್ತಿದೆ – ಸಿಎಂ ಕಿಡಿ

  • ತುಮಕೂರಿನ ಈ ಪುಟ್ಟ ಕ್ಷೇತ್ರದಲ್ಲಿ ಯಾರಾಗ್ತಾರೆ ಸಾಮ್ರಾಟ?

    ತುಮಕೂರಿನ ಈ ಪುಟ್ಟ ಕ್ಷೇತ್ರದಲ್ಲಿ ಯಾರಾಗ್ತಾರೆ ಸಾಮ್ರಾಟ?

    ತುಮಕೂರು: ತುಮಕೂರು (Tumakuru) ಜಿಲ್ಲೆಯಲ್ಲೇ ಕೊರಟಗೆರೆ ಅತಿ ಚಿಕ್ಕ ಕ್ಷೇತ್ರ. ಈ ವಿಧಾನಸಭಾ ಕ್ಷೇತ್ರ ಚಿಕ್ಕದಾದರೂ ಚುನಾವಣೆ ಹಾಗೂ ರಾಜಕೀಯ ವಿಚಾರದಲ್ಲಿ ರಾಜ್ಯದ ಗಮನ ಸೆಳೆಯುತ್ತಲೇ ಬಂದಿದೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿರುವ ಕೊರಟಗೆರೆಯಲ್ಲಿ (Koratagere) ಪ್ರಸ್ತುತ ಚುನಾವಣಾ ರಾಜಕೀಯ ಬೆಳವಣಿಗೆ ಹೇಗಿದೆ ಎಂಬುದನ್ನು ನೋಡೋಣ.

    ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ನಡುವೆ ನೇರಾನೇರ ಫೈಟ್ ಇದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಹಾಗೂ ಮಾಜಿ ಡಿಸಿಎಂ ಜಿ.ಪರಮೇಶ್ವರ (G.Parameshwara) ಹಾಗೂ ಜೆಡಿಎಸ್ ಮಾಜಿ ಶಾಸಕ ಸುಧಾಕರ್ ಲಾಲ್ (Sudhakar Lal) ನಡುವೆ ಹಣಾಹಣಿ ನಡೆಯಲಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್‌ಗೆ (Anil Kumar) ಬಿಜೆಪಿ (BJP) ಟಿಕೆಟ್‌ ನೀಡಿದ್ದು, ಜಿ.ಪರಮೇಶ್ವರ ನಿರಾಯಾಸ ಗೆಲುವಿಗೆ ತೊಡಕಾಗಿದೆ. ಇದನ್ನೂ ಓದಿ: ಸಕ್ಕರೆ ನಾಡು ಮೀಸಲು ಕ್ಷೇತ್ರದಲ್ಲಿ ಕೈ, ಕಮಲ, ತೆನೆ ಪೈಪೋಟಿ

    ಅನಿಲ್ ಕುಮಾರ್ ಎಡಗೈ ಸಮುದಾಯಕ್ಕೆ ಸೇರಿದವರಾಗಿದ್ದು, ಆ ಸಮುದಾಯದ ಸುಮಾರು 40,000 ಮತಗಳಿವೆ. ಆದರೆ ಜಿ.ಪರಮೇಶ್ವರ ಬಲೈಗೆ ಸಮುದಾಯಕ್ಕೆ ಸೇರಿದ್ದು, ಕೇವಲ 4-5 ಸಾವಿರ ಮತಗಳು ಮಾತ್ರ ಇದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಹೆಚ್ಚು ಮತಗಳನ್ನು ಪಡೆದರೆ ಅದು ಜಿ.ಪರಮೇಶ್ವರರಿಗೆ ಮುಳುವಾಗಬಹುದು. ಈ ಹಿಂದಿನ ಚುನಾವಣೆಗಳಲ್ಲಿ ಎಡಗೈ ಸಮುದಾಯದವರು ಹೆಚ್ಚಿನದಾಗಿ ಪರಮೇಶ್ವರ ಕೈ ಹಿಡಿಯುತ್ತಿದ್ದರು. ಆದರೀಗ ತಮ್ಮದೇ ಸಮುದಾಯದ ಪ್ರಬಲ ವ್ಯಕ್ತಿ ಸ್ಪರ್ಧೆಗೆ ಇಳಿದಿರುವುದರಿಂದ ಎಡಗೈ ಸಮುದಾಯದ ಬಹುಪಾಲು ಮತಗಳು ಬಿಜೆಪಿ ಅಭ್ಯರ್ಥಿ ಕಡೆಗೆ ವಾಲಿ ಪರಮೇಶ್ವರಗೆ ಹಿನ್ನಡೆ ಆಗಬಹುದು. ಇದರ ಲಾಭ ಜೆಡಿಎಸ್‌ಗೆ ಆಗಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ. ಆದರೂ ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಅಷ್ಟೊಂದು ಪ್ರಚಾರದಲ್ಲಿ ತೊಡಗಿಲ್ಲ. ಜಿ.ಪರಮೇಶ್ವರ ಅವರು ಕಾಲಿಗೆ ಚಕ್ರಕಟ್ಟಿಕೊಂಡು ಮತದಾರರನ್ನು ತಲುಪುತ್ತಿದ್ದಾರೆ. ಜೆಡಿಎಸ್ ಇದೇ ರೀತಿ ಕ್ಷೀಣವಾಗಿದ್ದರೆ ಕಾಂಗ್ರೆಸ್‌ಗೆ ಗೆಲುವಿನ ಹಾದಿ ಸುಗಮವಾಗಲಿದೆ.

    ವೈಯಕ್ತಿಕ ವರ್ಚಸ್ಸು, ಅಭಿವೃದ್ಧಿ ಕೆಲಸ ಪರಮೇಶ್ವರ್‌ ‘ಕೈ’ ಹಿಡಿಯುತ್ತಾ?
    ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಿ.ಪರಮೇಶ್ವರ ಪ್ರಬಲರಾಗಿದ್ದಾರೆ. ಪರಮೇಶ್ವರಗೆ ತನ್ನದೇ ಆದ ವರ್ಚಸ್ಸಿದೆ. ಸಚಿವರಾಗಿ, ಡಿಸಿಎಂ ಆಗಿ ಕೆಲಸ ಮಾಡಿದವರು. ಅಲ್ಲದೇ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿದ್ದು, ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಗಳ ಲಿಸ್ಟ್‌ನಲ್ಲಿದ್ದಾರೆ. ಕಳೆದ ಎರಡು ವರ್ಷದಿಂದಲೇ ಚುನಾವಣೆ ತಯಾರಿ ಮಾಡಿಕೊಂಡಿರುವ ಜಿ‌.ಪರಮೇಶ್ವರ, ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಈ ಹಿಂದಿನದಕ್ಕಿಂತಲೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿರುವುದು ಚುನಾವಣೆಯಲ್ಲಿ ಅವರ ಕೈ ಹಿಡಿಯಬಹುದು. ಇದನ್ನೂ ಓದಿ: ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ – ಇನ್ನು ಅವ್ರ ದಾರಿ ಅವರಿಗೆ ನಮ್ಮ ದಾರಿ ನಮಗೆ: ಬಿಎಸ್‌ವೈ

    ಇನ್ನೊಂದು ದೃಷ್ಟಿಕೋನದಲ್ಲಿ ನೋಡುವುದಾದರೆ, ಜಿ.ಪರಮೇಶ್ವರ ಸಮುದಾಯದ ಮತ ಅತಿ ಕಡಿಮೆ ಇದೆ. ಈ ಬಾರಿ ಪರಮೇಶ್ವರರನ್ನೇ ಟಾರ್ಗೆಟ್‌ ಮಾಡಿರುವ ಬಿಜೆಪಿ ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಎಡಗೈ ಸಮುದಾಯದ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ. ಇದು ಪರಮೇಶ್ವರರಿಗೆ ಹೊಡೆತ ಕೊಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಹಿಂದೇಟು ಹಾಕಿದ್ದು ಸಹ ಈ ಬಾರಿ ಕೊರಟಗೆರೆ ಕ್ಷೇತ್ರದ ಚುನಾವಣೆಯಲ್ಲಿ ಪರಿಣಾಮ ಬೀರಬಹುದು. ಪರಮೇಶ್ವರ ವೈಟ್ ಕಾಲರ್ ರಾಜಕಾರಣಿ ಎಂಬ ಹಣೆಪಟ್ಟಿ ಕೂಡ ಹೊತ್ತಿರುವುದು ಪಕ್ಷಕ್ಕೆ ಹಿನ್ನಡೆ ತಂದೊಡ್ಡಬಹುದು ಎಂಬುದು ರಾಜಕೀಯ ತಜ್ಞರ ವಿಶ್ಲೇಷಣೆ.

    ಜೆಡಿಎಸ್‌ ಪರಿಸ್ಥಿತಿ ಹೇಗಿದೆ?
    ಜೆಡಿಎಸ್‌ ಅಭ್ಯರ್ಥಿಯಾಗಿರುವ ಪಿ.ಆರ್‌.ಸುಧಾಕರ್‌ ಲಾಲ್‌ ಅವರು 2013ರಲ್ಲಿ ಪರಮೇಶ್ವರ ವಿರುದ್ಧವೇ ಜಯಭೇರಿ ಸಾಧಿಸಿ ಶಾಸಕರಾಗಿದ್ದರು. ಮೂರು ಬಾರಿ ಜಿಪಂ ಸದಸ್ಯರಾಗಿ, ಒಂದು ಬಾರಿ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಸ್ಥಳೀಯವಾಗಿ ಕ್ಷೇತ್ರದ ಜನರಿಗೆ ಲಭ್ಯ ಇರುವ ವ್ಯಕ್ತಿ ಎಂದೂ ಸಹ ಹೇಳಲಾಗುತ್ತಿದೆ. ಲಂಬಾಣಿ ಸಮುದಾಯಕ್ಕೆ ಸೇರಿದವರಾದರೂ, ಜೆಡಿಎಸ್‌ ಅಭ್ಯರ್ಥಿಯಾಗಿರುವುದರಿಂದ ಒಕ್ಕಲಿಗ ಸಮುದಾಯದ ಸುಮಾರು 40,000 ಮತ ಗಟ್ಟಿಯಾಗಿದೆ. ಇದು ಜೆಡಿಎಸ್‌ ಪಕ್ಷಕ್ಕೆ ವರದಾನವಾಗಬಹುದು ಎಂದು ಹೇಳಲಾಗಿದೆ. ಮತ್ತೊಂದು ದಿಕ್ಕಿನಲ್ಲಿ ನೋಡುವುದಾದರೆ, ಆರ್ಥಿಕ ಬಲ ಇಲ್ಲದಿರುವುದು, ರಾಜ್ಯಮಟ್ಟದ ನಾಯಕರ ಸಂಪರ್ಕ ಅಷ್ಟೊಂದು ಇಲ್ಲದಿರುವುದು, ಪ್ರಚಾರದಲ್ಲಿ ಹಿಂದೆ ಉಳಿದಿರುವುದು ಪಕ್ಷಕ್ಕೆ ಹಿನ್ನಡೆಯಾಗಲು ಕಾರಣವಾಗಬಹುದು. ಅಲ್ಲದೇ ಸಮುದಾಯದ ಮತ ಕೇವಲ 7,000 ಇದೆ. ಇದು ಜೆಡಿಎಸ್‌ ಪಕ್ಷಕ್ಕೆ ಮೈನಸ್‌ ಪಾಯಿಂಟ್‌ನಂತಿದೆ. ಇದನ್ನೂ ಓದಿ: ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ: ರಮೇಶ್ ಜಾರಕಿಹೊಳಿ

    ಜಾತಿ‌ ಲೆಕ್ಕಾಚಾರ ಏನು?
    ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,02,977 ಇದೆ. ಜಾತಿ ಲೆಕ್ಕಾಚಾರದಲ್ಲಿ ನೋಡುವುದಾದರೆ, ಎಸ್ಸಿ-60,009, ಎಸ್ಟಿ- 20,000, ಒಕ್ಕಲಿಗರು-36,000, ಲಿಂಗಾಯತರು- 35,000, ಗೊಲ್ಲರು- 15,000, ಮುಸ್ಲಿಂ- 18,000, ಕುರುಬರು- 15,000, ಬ್ರಾಹ್ಮಣರು- 3,000, ಬಲಿಜ- 4,000 ಇದ್ದಾರೆ.

  • ಹಣೆಬರಹ ಸರಿ ಇದ್ದಿದ್ರೆ 2013ರಲ್ಲೇ ಸಿಎಂ ಆಗ್ತಿದ್ದೆ: ಪರಮೇಶ್ವರ್ ಬೇಸರ

    ಹಣೆಬರಹ ಸರಿ ಇದ್ದಿದ್ರೆ 2013ರಲ್ಲೇ ಸಿಎಂ ಆಗ್ತಿದ್ದೆ: ಪರಮೇಶ್ವರ್ ಬೇಸರ

    ತುಮಕೂರು: ಕ್ಷೇತ್ರದ ಜನ 2 ಬಾರಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಆದರೆ ಒಳ್ಳೆ ಟೈನಲ್ಲಿ ಪಲ್ಟಿ ಹೊಡೆಸಿದ್ದಾರೆ. ಹಣೆಬರಹ ಸರಿ ಇದ್ದಿದ್ದರೇ ನಾನು ಸಿಎಂ ಆಗುತ್ತಿದ್ದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (G Parameshwara) ಬೇಸರ ವ್ಯಕ್ತಪಡಿಸಿದರು.

    ಕೊರಟಗೆರೆಯ (Koratagere) ತೋವಿನಕೆರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2013ರಲ್ಲಿ ಒಂದೇ ಒಂದು ಓಟ್‍ನಲ್ಲಿ ಗೆದ್ದಿದ್ದರೇ ಈ ರಾಜ್ಯದ ಮುಖ್ಯಮಂತ್ರಿ (Chief Minister) ಆಗುವ ಅವಕಾಶ ಇತ್ತು. ಆದರೆ ನನ್ನದು ಹಣೆಬರಹ ಇರಬೇಕಲ್ಲಾ ಬರೇ ನಿಮ್ಮದೇ ಹೇಳಿದ್ರೆ ಸರಿಯಾಗಲ್ಲ. ಹಣೆ ಬರಹ ಬಹುಶಃ ನನಗಿರಲಿಲ್ಲ ಅಂತಾ ಕಾಣಿಸುತ್ತೆ ಎಂದು ಮುಖ್ಯಮಂತ್ರಿ ಆಗುವ ಆಸೆ ನನಸಾಗದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಆಜಾದ್ ನಗರದಲ್ಲಿ ಕಾರು ಜಖಂ – ಹರ್ಷ ಸಹೋದರಿ ಅಶ್ವಿನಿ ವಿರುದ್ಧ FIR

    ಇಂದು ನನ್ನ ಕೈಲಾದ ಕೆಲಸ ಮಾಡಿದ್ದೇನೆ ಎನ್ನುವ ಅತ್ಮತೃಪ್ತಿ ನನಗಿದೆ. ತಮಗೆ ಇದೆಯೋ ಇಲ್ವೋ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕಾರ್ಗಿಲ್ ಯುದ್ಧಭೂಮಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಜಗ್ಗೇಶ್ ಅಭಿಮಾನಿಗಳಿಂದ ಪುನೀತ್ ಹೆಸರಲ್ಲಿ ವೃದ್ಧೆಗೆ ಸೂರು

    ಜಗ್ಗೇಶ್ ಅಭಿಮಾನಿಗಳಿಂದ ಪುನೀತ್ ಹೆಸರಲ್ಲಿ ವೃದ್ಧೆಗೆ ಸೂರು

    ತುಮಕೂರು: ಪವರ್‌ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ ಒಂದು ತಿಂಗಳು ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಮಾತ್ರ ಅಭಿಮಾನಿಗಳಲ್ಲಿ ಇನ್ನು ಹೆಚ್ಚಾಗುತ್ತಿದೆ. ಇದಕ್ಕೆ ಉದಾಹರಣೆ ಎಂದರೆ ನವರಸ ನಾಯಕ ಜಗ್ಗೇಶ್ ಅಭಿಮಾನಿಗಳು ಅಪ್ಪು ಅವರ ಹೆಸರಲ್ಲಿ ವೃದ್ಧೆಗೆ ಮನೆಯೊಂದನ್ನು ಕಟ್ಟಿಕೊಟ್ಟು ‘ಪರಮಾತ್ಮ’ನನ್ನು ಕಾಣುತ್ತಿದ್ದಾರೆ.

    ಕನ್ನಡಿಗರ ಕಣ್ಮಣಿ, ಪುನೀತ್ ರಾಜ್‍ಕುಮಾರ್ ಮೇಲಿನ ಅಭಿಮಾನ ನಿರಂತರವಾಗಿ ವಿವಿಧ ಆಯಾಮದಲ್ಲಿ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಎಲ್ಲ ನಾಯಕ ನಟರ ಅಭಿಮಾನಿಗಳು ಅಪ್ಪು ಅಗಲಿಕೆಗೆ ಕಂಬನಿ ಮಿಡಿದಿದ್ದು ನಮ್ಮ ಕಣ್ಣ ಮುಂದೆ ಇದೆ. ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿ ಜಗ್ಗೇಶ್ ಅವರ ಅಭಿಮಾನಿಗಳು ಪುನೀತ್ ಅವರ ಹೆಸರಲ್ಲಿ ಅನಾಥ ವೃದ್ಧೆಗೆ ಸೂರೊಂದನ್ನು ಕಲ್ಪಿಸಿ ಕೊಟ್ಟು ಅಪ್ಪು ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿಗಳು ಸೇರಿ ರಂಗಮ್ಮ ವೃದ್ಧೆಗೆ ಪುಟ್ಟ ಮನೆಯೊಂದನ್ನು ಕಟ್ಟಿಕೊಟ್ಟಿದ್ದಾರೆ. ಈ ಮನೆಗೆ ‘ಪುನೀತ್ ನಿಲಯ’ ಎಂದು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ.

    ಗಿರಿನಗರ ನಿವಾಸಿ ರಂಗಮ್ಮ ಅವರು ಗುಡಿಸಲಿನಲ್ಲಿ ವಾಸ ಮಾಡುತ್ತಾ ಶೋಚನೀಯ ಸ್ಥಿತಿಯಲ್ಲಿ ಇದ್ದರು. ಇದನ್ನು ಮನಗಂಡ ಜಗ್ಗೇಶ್ ಅಭಿಮಾನಿಗಳು ಹಣ ಹೊಂದಿಸಿ ಸ್ವತಃ ತಾವೇ ಶ್ರಮದಾನ ಮಾಡಿ ರಂಗಮ್ಮಗೆ ಸೂರು ಕಲ್ಪಿಸಿ ಕೊಟ್ಟಿದ್ದಾರೆ. ಈ ಸೂರಿಗೆ ಪುನೀತ್ ನಿಲಯ ಎಂದು ಹೆಸರಿಟ್ಟು ಅಪ್ಪು ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾರೆ.

    ಮನೆ ನಿರ್ಮಾಣ ಕಳೆದ ನಾಲ್ಕು ತಿಂಗಳ ಹಿಂದೆಯೇ ಶುರುವಾದರೂ ಕೆಲ ಕಾರಣಗಳಿಂದ ಅರ್ಧಕ್ಕೆ ನಿಂತಿತ್ತು. ಅಪ್ಪು ಸಾವಿನ ಬಳಿಕ ಜಗ್ಗೇಶ್ ಅಭಿಮಾನಿಗಳು ಮತ್ತೆ ಕಾರ್ಯಪ್ರವರ್ತರಾದರು. ಅಪ್ಪು ಹೆಸರಲ್ಲಿ ಮನೆ ಕಟ್ಟಿ ಬಿಡೋಣ ಎಂದು ಅವರ ನಾಮಸ್ಮರಣೆ ಮಾಡುತ್ತಾ ಈ ಮನೆ ಸಂಪೂರ್ಣ ಮಾಡಿದರು. ಒಂದು ತಿಂಗಳಲ್ಲಿ ಮನೆ ನಿರ್ಮಾಣದ ಎಲ್ಲ ಕೆಲಸ ಮುಗಿಸಿ, ಸಿದ್ದರಬೆಟ್ಟ ವೀರಭದ್ರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಇಂದು ಗೃಹ ಪ್ರವೇಶ ಮಾಡಲಾಯಿತು. ಇದನ್ನೂ ಓದಿ:  ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

    ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿ ಸಂಘದಲ್ಲಿ ಸರಿಸುಮಾರು 800ಕ್ಕೂ ಹೆಚ್ಚು ಸದಸ್ಯರಿದ್ದಾರೆ. ಅವರಲ್ಲಿ ಗಾರೆ ಕೆಲಸ, ಎಲೆಕ್ಟ್ರಿಕ್, ಪ್ಲಂಬಿಂಗ್ ಹೀಗೆ ಎಲ್ಲ ಕೆಲಸ ಮಾಡುವ ಸದಸ್ಯರಿದ್ದಾರೆ. ಅವರೆಲ್ಲರೂ ತಮ್ಮ-ತಮ್ಮ ಪಾಲಿನ ಕೆಲಸ ಮಾಡಿ, ದಾನಿಗಳಿಂದ ಹಣ ಸಂಗ್ರಹಿಸಿ ಕಡಿಮೆ ಅವಧಿ ಮತ್ತು ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಟ್ಟಿದ್ದಾರೆ. 15*20 ಸುತ್ತಳತೆಯ ಸೈಟಿನಲ್ಲಿ ಮನೆಕಟ್ಟಿದ್ದಾರೆ. ಒಂದು ಹಾಲ್, ಅಡುಗೆ ಕೋಣೆ, ಅಟ್ಯಾಚ್ ಬಾತ್ ರೂಂ ಅನ್ನು ವ್ಯವಸ್ಥೆ ಮಾಡಿಕೊಡಲಾಗಿದೆ.

  • ಸಮಯ ಪ್ರಜ್ಞೆ ಮೆರೆದ KSRTC ಚಾಲಕ – 50ಕ್ಕೂ ಅಧಿಕ ಮಂದಿ ಪ್ರಯಾಣಿಕರು ಪಾರು

    ಸಮಯ ಪ್ರಜ್ಞೆ ಮೆರೆದ KSRTC ಚಾಲಕ – 50ಕ್ಕೂ ಅಧಿಕ ಮಂದಿ ಪ್ರಯಾಣಿಕರು ಪಾರು

    ತುಮಕೂರು: ಕೊರಟಗೆರೆಯಲ್ಲಿ KSRTC ಬಸ್ ಚಾಲಕನ ಜಾಗರೂಕತೆಯಿಂದ 50ಕ್ಕೂ ಅಧಿಕ ಮಂದಿ ಪ್ರಯಾಣಿಕರ ಪ್ರಾಣ ಉಳಿದಿದೆ.

    ಇಂದು ಮುಂಜಾನೆ ಕೊರಟಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ KSRTC ಬಸ್ ಹಾಗೂ ಮುಂಬದಿಯಿಂದ ಬಂದ ಐ ಟೆನ್ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಪ್ರಪಾತಕ್ಕೆ ಇಳಿಯಬೇಕಾಗಿದ್ದ ಬಸ್, ಚಾಲಕನ ಜಾಗೃತೆಯಿಂದಾಗಿ ಹೊಲಕ್ಕೆ ಇಳಿದು ಹೆಚ್ಚಿನ ಅನಾಹುತ ತಪ್ಪಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಐವತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಸ್ ನಿರ್ವಾಹಕಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಇದನ್ನೂ ಓದಿ:  ಕೋವಿಡ್ ಭೀತಿ ಮರೆತು ಕೋಟೆನಾಡಲ್ಲಿ ಮಟನ್ ಖರೀದಿಸಲು ಮುಗಿಬಿದ್ದ ಮಾಂಸ ಪ್ರಿಯರು 

    ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊರಟಗೆರೆ-ಬೆಂಗಳೂರು ಮಾರ್ಗದ ತಣ್ಣೇನಹಳ್ಳಿ ಬಳಿ ಘಟನೆ ನಡೆದಿದೆ. ಈ ಘಟನೆ ಕುರಿತು ಕೆಎಸ್‍ಆರ್‍ಟಿಸಿ ಬಸ್ ಚಾಲಕ ಮಾತನಾಡಿದ್ದು, ನಾನು ಎಷ್ಟೇ ಬಾರಿ ಶಬ್ಧ ಮಾಡಿದರೂ ಕೇಳಿಸದೆ ವೇಗವಾಗಿ ಬಂದ ಕಾರು ಹತ್ತಿರಕ್ಕೆ ಬಂದು ಬಿಟ್ಟಿತ್ತು. ಆದ್ದರಿಂದ ನಮ್ಮ ಬಸ್ ಗೆ ತಗುಲಿದ್ದರೆ ಕಾರಿನಲ್ಲಿ ಯಾರೂ ಕೂಡ ಬದುಕುತ್ತಿರಲಿಲ್ಲ. ಆದಷ್ಟು ನನ್ನ ಜಾಗರೂಕತೆಯಿಂದ ನಾನು ಬಸ್‍ನ್ನು ಎಡಗಡೆಗೆ ತಿರುಗಿಸಿದೆ ಎಂದರು. ಇದನ್ನೂ ಓದಿ: ಹದಗೆಟ್ಟ ರಸ್ತೆಯ ತಾತ್ಕಾಲಿಕ ದುರಸ್ತಿಗೆ ಗ್ರಾಮದ ಯುವಕರ ಶ್ರಮದಾನ

    ಈ ಪರಿಣಾಮ ಬಸ್ ಪಕ್ಕದ ಜಮೀನಿನ ಕಡೆ ಉರುಳಿತು. ಬಸ್ಸಿನಲ್ಲಿದ್ದವರಿಗೂ ಹಾಗೂ ಕಾರಿನಲ್ಲಿದ್ದವರಿಗೂ ಯಾವುದೇ ರೀತಿಯ ತೊಂದರೆಯಾಗಿಲ್ಲ. ಕಾರಿನ ಮಾಲೀಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಬಸ್ಸನ್ನು ಕ್ರೇನ್ ಮೂಲಕ ಮೇಲಕ್ಕೆತ್ತಿ ಕೊಡಲು ಒಪ್ಪಿಕೊಂಡಿದ್ದಾರೆ. ನಿರ್ವಾಹಕಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ನೀಟ್ ಪರೀಕ್ಷೆ – ಲಾಠಿ ಹಿಡಿದು ಪೋಷಕರನ್ನು ಚದುರಿಸಿದ ಪೊಲೀಸರು

    ಸ್ಥಳೀಯರೊಬ್ಬರು ಈ ಕುರಿತು ಪ್ರತಿಕ್ರಿಯಿಸಿದ್ದು, ಇದರಲ್ಲಿ ಕಾರಿನ ಚಾಲಕನದ್ದೇ ತಪ್ಪು. ನಾನು ಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದೆ. ನೋಡು ನೋಡುತ್ತಲೇ ಬಸ್ ಹಾಗೂ ಕಾರು ಡಿಕ್ಕಿ ಹೊಡೆಯಬೇಕಿತ್ತು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಅಪಾಯಕಾರಿ ಅಪಘಾತ ತಪ್ಪಿದೆ. ಸ್ವಲ್ಪ ಯಾಮಾರಿದ್ದರೆ ಪಕ್ಕದ ಟ್ರಾನ್ಸ್ ಫರ್ಮ್ ಗೆ ಡಿಕ್ಕಿ ಹೊಡೆದು ದೊಡ್ಡ ಅವಘಡವೇ ಜರುಗುತ್ತಿತ್ತು. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿಸಿದರು.

  • ಮಗನ ಸಾವಿನ ಬಳಿಕ ಸೊಸೆಗೆ ಕಿರುಕುಳ- ಅತ್ತೆ ವಿರುದ್ಧ ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ

    ಮಗನ ಸಾವಿನ ಬಳಿಕ ಸೊಸೆಗೆ ಕಿರುಕುಳ- ಅತ್ತೆ ವಿರುದ್ಧ ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ

    ತುಮಕೂರು: ಪತಿ ಸತ್ತರೂ ಹಠದಿಂದ ಬದುಕು ನಡೆಸುತ್ತಿದ್ದ ಮಹಿಳೆಯೋರ್ವಳು ತನ್ನ ಅತ್ತೆಯ ಕಾಟಕ್ಕೆ ಆತ್ಮಹತ್ಯೆ ಶರಣಾದ ಘಟನೆ ಕೊರಟಗೆರೆ ತಾಲೂಕಿನ ಬೊಮ್ಮಲದೇವಿಪುರದಲ್ಲಿ ನಡೆದಿದೆ.

    ಬೊಮ್ಮಲದೇವಿಪುರದ ಪುಷ್ಪಾ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪುಷ್ಪಾ ಬೊಮ್ಮಲದೇವಿಪುರದ ನರಸಿಂಹಮೂರ್ತಿ ಜೊತೆಗೆ 8 ವರ್ಷಗಳ ಹಿಂದೆ ಮದುವೆಯಾಗಿದ್ದಳು. ಚೆನ್ನಾಗಿಯೇ ಸಂಸಾರ ಮಾಡಿಕೊಂಡಿದ್ದ ಇಬ್ಬರೂ ಸಂತೋಷವಾಗಿ ಬದುಕು ನಡೆಸುತ್ತಿದ್ದರು. ಆದರೆ ಪುಷ್ಪಾಳ ಹಣೆಬರಹಕ್ಕೆ ಪತಿ ನರಸಿಂಹಮೂರ್ತಿ ಅನಾರೋಗ್ಯದಿಂದ ಬಳಲಿ ಮೂರು ವರ್ಷದ ಹಿಂದೆ ಸಾವನ್ನಪ್ಪಿದ್ದಾನೆ.

    ಪತಿ ನರಸಿಂಹಮೂರ್ತಿ ಸತ್ತ ದಿನದಿಂದಲೂ ಪುಷ್ಪಾ ಬದುಕು ದುಸ್ಥರವಾಗಿ ಹೋಗಿದೆ. ಎರಡು ಮಕ್ಕಳನ್ನೂ ಸಾಕಿ ತಾನೇ ದುಡಿದು ಬದುಕು ಸಾಗಿಸುತ್ತಿದ್ದ ಪುಷ್ಪಾಳಿಗೆ ತನ್ನ ಅತ್ತೆಯೇ ಯಮನಾಗಿ ಕಾಡಿದ್ದಾಳೆ.

    ಪುಷ್ಪಾ ಗಂಡ ಸತ್ತ ಬಳಿಕ ಅಂಗನವಾಡಿಯಲ್ಲಿ ಕೆಲಸ ಮಾಡಿಕೊಂಡು ಮಕ್ಕಳನ್ನೂ ಸಾಕಿಕೊಂಡು ಬದುಕು ನಡೆಸುತ್ತಿದ್ದಳು. ಜೊತೆಗೆ ಸರ್ಕಾರದಿಂದ ಮನೆಯನ್ನೂ ಮಂಜೂರು ಮಾಡಿಸಿಕೊಂಡು ಸಾಕಿ ಸಲಹುತ್ತಿದ್ದಳು. ಆದರೆ ಪುಷ್ಪಾಳ ಅತ್ತೆ ಕಾಮಲಕ್ಷ್ಮಮ್ಮ ನೀಡುತ್ತಿದ್ದ ಕಾಟಕ್ಕೆ ಪುಷ್ಪಾ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಮಗನ ಸಾವಿನ ಬಳಿಕ ಸೊಸೆ ಪುಷ್ಪಾಳಿಗೆ ಇನ್ನಿಲ್ಲದ ಕಾಟ ನೀಡುತ್ತಿದ್ದ ಕಾಮಲಕ್ಷ್ಮಮ್ಮ, ಮನೆ ಬಿಟ್ಟು ಹೋಗುವಂತೆ ಅನೇಕ ಬಾರಿ ಜಗಳ ಮಾಡಿದ್ದಳಂತೆ. ನಿತ್ಯವೂ ತನ್ನ ಹೆಣ್ಣುಮಕ್ಕಳೊಂದಿಗೆ ಸೇರಿ ಪುಷ್ಪಾಳನ್ನು ಥಳಿಸಿ, ಮನೆ ಬಿಟ್ಟುಹೋಗುವಂತೆ ಕಾಟ ನೀಡುತ್ತಿದ್ದಳಂತೆ. ಊರಿನ ಹಿರಿಯರು ಸೇರಿ ಅನೇಕ ಬಾರಿ ಜಗಳ ಬಗೆಹರಿಸಿ ಬುದ್ಧಿ ಹೇಳಿದ್ದರಂತೆ. ಕೊನೆಗೆ ಎಲ್ಲಾ ಭರವಸೆ ಕಳೆದುಕೊಂಡ ಪುಷ್ಪಾ, ತನ್ನ ಸಾವಿಗೆ ಅತ್ತೆ ಹಾಗೂ ನಾದಿನಿಯರ ಕಿರುಕುಳವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಅತ್ತೆ ಕಾಮಲಕ್ಷ್ಮಮ್ಮ ಹಾಗೂ ನಾದಿನಿಯರೇ ಸೇರಿ ಈಕೆಯನ್ನ ಕೊಲೆಮಾಡಿದ್ದಾರೆ ಅಂತ ಪುಷ್ಪಾಳ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

    ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

    ತುಮಕೂರು: ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರದ ಬಳಿ ಇಂದು ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಖಾಸಗಿ ಬಸ್ ಒಂದು ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ.

    ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗೇರಹಳ್ಳಿ ನಿವಾಸಿ ಇಮ್ರಾನ್ (18), ಹೊಳವನಹಳ್ಳಿ ನಿವಾಸಿ ಅಕ್ರಂಪಾಷ (28), ಕೊರಟಗೆರೆ ನಿವಾಸಿ ಮೊಹಮ್ಮದ್ ಸಾಜದ್ (19), ಮಧುಗಿರಿಯ ಪುಲುಮಾಚಿಹಳ್ಳಿ ನಿವಾಸಿ ಶಿವಕುಮಾರ್ (27) ಹಾಗೂ ಕೊಡಿಗೇನಹಳ್ಳಿ ನಿವಾಸಿ ಶ್ರೀನಿವಾಸ್ (40) ಮೃತ ದುರ್ದೈವಿಗಳು. ಗಾಯಗೊಂಡ 29 ಮಂದಿ ಪ್ರಯಾಣಿಕರಿಗೆ ತುಮಕೂರು ಜಿಲ್ಲಾಸ್ಪತ್ರೆ ಹಾಗೂ ಕೊರಟಗೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಪ್ಯಾಸೆಂಜರ್ ಆಟೋ ಒಂದು ಬರಕ ಗ್ರಾಮದಿಂದ ತುಮಕೂರು ಹೆದ್ದಾರಿ ಕಡೆಗೆ ಏಕಾಏಕಿ ನುಗ್ಗಿತ್ತು. ಅತಿ ವೇಗವಾಗಿ ಬರುತ್ತಿದ್ದ ವಿಜಯಲಕ್ಷ್ಮಿ ಬಸ್ ಚಾಲಕ ಆಟೋಗೆ ಡಿಕ್ಕಿಹೊಡೆಯುವುದನ್ನು ತಪ್ಪಿಸಿಸಲು ಯತ್ನಿಸಿದ್ದ. ಆದರೆ ಚಾಲಕನ ನಿಯಂತ್ರಣ ಕಳೆದು ಬಸ್ ಮೂರು ಪಲ್ಟಿಯಾಗಿ ಮುಗುಚಿಬಿದಿದ್ದೆ. ಅಲ್ಲೇ ಇದ್ದ ಗ್ರಾಮಸ್ಥರು ಕೂಡಲೇ ಧಾವಿಸಿ, ಬಸ್‍ನ ಗಾಜು ಒಡೆದು ಪ್ರಯಾಣಿಕರನ್ನ ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಲ್ಲಿ ಶ್ರಮಿಸಿದ್ದಾರೆ.

    ಬಸ್‍ನ ಎಡಬದಿಯಲ್ಲಿದ್ದ ಐವರು ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನುಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಮಧುಗಿರಿಯ ಸುಜಾತ ಜಗನ್ನಾಥ್ ಅವರ ಮಾಲೀಕತ್ವದ ಬಸ್ ಇದಾಗಿದ್ದು, ಮಾಲೀಕರ ವಿರುದ್ಧ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಸ್ ಚಾಲಕ ಮತ್ತು ಕಂಡಕ್ಟರ್ ಪರಾರಿಯಾಗಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆಸಿ ಮಾಧುಸ್ವಾಮಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಐಜಿ ಶರತ್ ಚಂದ್ರ ಭೇಟಿ ನೀಡಿ, ಘಟನೆಯ ಮಾಹಿತಿ ಪಡೆದಿದ್ದಾರೆ. ಕೊರಟಗೆರೆ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿ.ಪರಮೇಶ್ವರ್ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಐದು ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

  • ಕೆರೆಗಾಗಿ ಜೋಳಿಗೆ ಹಿಡಿದ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಶ್ರೀಗಳು!

    ಕೆರೆಗಾಗಿ ಜೋಳಿಗೆ ಹಿಡಿದ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಶ್ರೀಗಳು!

    ತುಮಕೂರು: ಕೆರೆಗಳನ್ನು ಹೂಳೆತ್ತಲು ಸ್ವಾಮೀಜಿಯೊಬ್ಬರು ಜೋಳಿಗೆ ಹಿಡಿದು ಜನರ ಸಹಕಾರ ಕೇಳಿದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

    ಕೊರಟಗೆರೆ ತಾಲೂಕಿನ ಕೆರೆಗಳ ಪುನಶ್ಚೇತನಕ್ಕಾಗಿ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಶ್ರೀಗಳು ಈ ಹೆಜ್ಜೆಯಿಟ್ಟಿದ್ದಾರೆ. ಕೆರೆ ಹೂಳೆತ್ತುವುದಕ್ಕಾಗಿ ಪಣತೊಟ್ಟ ಶ್ರೀಗಳು ಹಣ ಸಂಗ್ರಹಿಸಲು ಜೋಳಿಗೆ ಹಿಡಿದು ಊರೂರು ಸುತ್ತುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮಿ ಜಲತರು ಸಂವರ್ಧನಾ ಸಮಿತಿ ಮೂಲಕ ಕೆರೆಗಳ ಉಳಿವಿಗಾಗಿ ಈ ರೀತಿಯ ಹೋರಾಟ ಆರಂಭಿಸಿದ್ದಾರೆ.

    ಒಂದು ಕೆರೆ ಹೂಳೆತ್ತಲು ಸರಿಸುಮಾರು 2 ಕೋಟಿ ರೂ. ಬೇಕಾಗುತ್ತದೆ. ಹೀಗೆ ತಾಲೂಕಿನ 134 ಕೆರೆ ಹೂಳೆತ್ತಲು ಸರಿಸುಮಾರು 300 ಕೋಟಿ ರೂ. ಗಳ ಅವಶ್ಯಕತೆ ಇದೆ. ಭಕ್ತಾಧಿಗಳು ಕೂಡಾ ಸಾಧ್ಯವಾದಷ್ಟು ಧನಸಹಾಯ ಮಾಡುತ್ತಿದ್ದಾರೆ.

    ಈಗಾಗಲೇ ಜಿಲ್ಲೆಯ ಮಣುವಿನಕುರಿಕೆ ಗ್ರಾಮದ ಕೆರೆ ಹೂಳೆತ್ತುವ ಕಾರ್ಯ ಭರದಿಂದ ಸಾಗಿದೆ. ಸುಮಾರು 180 ಎಕರೆ ಪ್ರದೇಶದಲ್ಲಿರುವ ಈ ಕೆರೆ ಅರ್ಧದಷ್ಟು ಹೂಳೆತ್ತಲಾಗಿದೆ. ಊರಿನ ಜನರು ಕೂಡಾ ಶ್ರೀಗಳಿಗೆ ಹಣಕಾಸಿನ ನೆರವಿನ ಜೊತೆಗೆ ಹೂಳೆತ್ತಲೂ ಸಹಾಯ ಮಾಡುತ್ತಿದ್ದಾರೆ. ತಮ್ಮ ಟ್ರಾಕ್ಟರ್, ಎತ್ತಿನ ಗಾಡಿ ತಂದು ಮಣ್ಣು ಸಾಗಿಸುತ್ತಿದ್ದಾರೆ. ಕೆರೆಗಳನ್ನು ಉಳಿಸುವ ದೃಷ್ಟಿಯಿಂದ ಶ್ರೀಗಳು ಕೈಗೊಂಡಿರುವ ಈ ಕಾರ್ಯವನ್ನು ಸಾರ್ವಜನಿಕರು ಮುಕ್ತವಾಗಿ ಸ್ವಾಗತಿಸಿದ್ದಾರೆ.

  • ಪುರುಷರಿಗೆ ನಾವೂ ಸೆಕ್ಯೂರಿಟಿ ಇದ್ದ ಹಾಗೆ: ಉಮಾಶ್ರೀ ಮಾತಿಗೆ ನಗೆಗಡಲಲ್ಲಿ ತೇಲಾಡಿದ ಜನ

    ಪುರುಷರಿಗೆ ನಾವೂ ಸೆಕ್ಯೂರಿಟಿ ಇದ್ದ ಹಾಗೆ: ಉಮಾಶ್ರೀ ಮಾತಿಗೆ ನಗೆಗಡಲಲ್ಲಿ ತೇಲಾಡಿದ ಜನ

    ತುಮಕೂರು: ಜಿಲ್ಲೆಯ ಕೊರಟಗೆರೆ ಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಸಮಾರಂಭದಲ್ಲಿ ನೆರೆದಿದ್ದ ಜನರನ್ನು ನಗೆಗಡಲಲ್ಲಿ ತೇಲಿಸಿದ್ದಾರೆ.

    ಸಮಾರಂಭದಲ್ಲಿ ಮಹಿಳೆಯರ ದಿನನಿತ್ಯದ ಕಾರ್ಯಕ್ರಮಗಳಲ್ಲಿ ಶ್ರಮವಹಿಸುವ ಕುರಿತು ಮತನಾಡಿದ ಅವರು, ನಾವು ಮಹಿಳೆಯರು ಇಲ್ಲದೆ ಇದ್ರೆ ಏನೂ ಆಗಲ್ಲ. ಪುರುಷರಿಗೆ ನಾವೂ ಸೆಕ್ಯೂರಿಟಿ ಇದ್ದ ಹಾಗೆ. ಬೆಳಗ್ಗೆ ಬ್ರೆಷ್, ಟೂತ್ ಪೇಸ್ಟ್ ಕೊಡುವುದರಿಂದ ಹಿಡಿದು ನಾವು ಪುರುಷರ ಸೇವೆ ಆರಂಭಿಸಬೇಕು. ಒಂದು ದಿನ ನಮ್ಮನ್ನು ಬಿಟ್ಟು ನೀವು ನಿಮ್ಮ ಕೆಲಸ ಮಾಡಿಕೊಳ್ಳಿ ಅಣ್ಣ ಎಂದು ವೇದಿಕೆ ಮೇಲಿದ್ದ ಜಿ.ಪರಮೇಶ್ವರ್, ಸಚಿವ ಟಿಬಿ ಜಯಚಂದ್ರರತ್ತ ನೋಡಿ ಹೇಳಿದರು. ಉಮಾಶ್ರೀ ಅವರ ಮಾತಿನಿಂದ ಏನು ಹೇಳಲು ಆಗದೇ ವೇದಿಕೆ ಮೇಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಿದರು.

    ಇದೇ ವೇಳೆ ಮಾಜಿ ಪ್ರಧಾನಿ ದೇವೆಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇವೇಗೌಡರು ಅನ್ನ ಭಾಗ್ಯ ರದ್ದು ಮಾಡಲು ಹೋರಟಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯನ್ನು ರದ್ದು ಪಡಿಸುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಬಡವರ ತಲೆ ಮೇಲೆ ಚಪ್ಪಡಿ ಕಲ್ಲು ಇಡಲು ಹೊರಟಿದ್ದಾರೆ. ಅನ್ನ ನೀಡುವ ಕೈಗೆ ಕನ್ನ ಹಾಕಲು ಜೆಡಿಎಸ್ ಹೊರಟಿದೆ ಎಂದು ಆರೋಪಿಸಿದರು.