Tag: Kota shrinivas poojary

  • ಕೋಟ ಶ್ರೀನಿವಾಸ ಪೂಜಾರಿ ಸಿಎಂ ಆಗಲಿ: ಪ್ರಣವಾನಂದ ಸ್ವಾಮೀಜಿ

    ಕೋಟ ಶ್ರೀನಿವಾಸ ಪೂಜಾರಿ ಸಿಎಂ ಆಗಲಿ: ಪ್ರಣವಾನಂದ ಸ್ವಾಮೀಜಿ

    ಕಾರವಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ನಂತರ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ. ಬಿಜೆಪಿಯೂ ಹಿಂದುತ್ವವಾದಿ ಎಂದು ಹೇಳಿ ಜಾತಿ ಜಾತಿಗಳ ನಡುವೆ ಜಗಳ ಹುಟ್ಟುಹಾಕಲು ಹೊರಟಿದೆ. ಚಿಕ್ಕ ಸಮುದಾಯಕ್ಕೆ ನಿಗಮ ಮಂಡಳಿಯನ್ನು ಘೋಷಣೆ ಮಾಡುವ ಸರ್ಕಾರ ದೊಡ್ಡ ಸಮಾಜವಾದ ಆರ್ಯ ಈಡಿಗರ ಸಮುದಾಯಕ್ಕೆ ನಿಗಮ ಮಂಡಳಿಯನ್ನು ಘೋಷಣೆ ಮಾಡಿಲ್ಲ ಎಂದು ಕಿಡಿಕಾರಿದರು.

    ಆರ್ಯ ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿ, 500 ಕೋಟಿ ರೂ. ಬಿಡುಗಡೆ ಮಾಡಬೇಕು. ಈಡಿಗ ಸಮಾಜದ ಕುಲಕಸಬು ಶೇಂದಿ ಇಳಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರಾಯಚೂರು ಕೋರ್ಟ್ ಮುಂದೆ ಜನಜಂಗುಳಿ

    ದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕೇರಳ ರಾಜ್ಯ ಸರ್ಕಾರ ನಾರಾಯಣ ಗುರುಗಳ ಸ್ತಬ್ಧ ಚಿತ್ರ (ಟ್ಯಾಬ್ಲೋ) ಪ್ರದರ್ಶನಕ್ಕೆ ಅವಕಾಶ ಕೋರಿದರೂ, ಅದರ ಬದಲು ಆದಿ ಶಂಕರಾಚಾರ್ಯರ ಟ್ಯಾಬ್ಲೋ ಮಾಡುವಂತೆ ಸೂಚಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಈಡಿಗ ಸಮುದಾಯವನ್ನು ಅಪಮಾನ ಮಾಡುತ್ತಿದೆ ಎಂದರು. ಇದನ್ನೂ ಓದಿ:  ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!

     

  • ಮುಜರಾಯಿ ದೇಗುಲ ಆರ್‍ಎಸ್‍ಎಸ್‍ಗೆ ಕೊಡುವ ಹುನ್ನಾರ ಆರೋಪಕ್ಕೆ ಕೋಟ ಕಿಡಿ

    ಮುಜರಾಯಿ ದೇಗುಲ ಆರ್‍ಎಸ್‍ಎಸ್‍ಗೆ ಕೊಡುವ ಹುನ್ನಾರ ಆರೋಪಕ್ಕೆ ಕೋಟ ಕಿಡಿ

    ಚಿತ್ರದುರ್ಗ: ಮುಜರಾಯಿ ದೇಗುಲ ಆರ್‍ಎಸ್‍ಎಸ್‍ಗೆ ಕೊಡುವ ಹುನ್ನಾರ ಎಂಬ ಆರೋಪಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳು ಆಯಾ ಜನಾಂಗದವರಿಂದ ನಿರ್ವಹಿಸಲ್ಪಡುತ್ತಿವೆ. ಜೈನ, ಪಾರ್ಸಿ, ಮುಸ್ಲಿಂ ಜನಾಂಗದಿಂದ ಆಯಾ ಧಾರ್ಮಿಕ ಕೇಂದ್ರ ನಿರ್ವಹಿಸುತ್ತಿದ್ದಾರೆ. ಹಿಂದೂ ದೇಗುಲಗಳನ್ನು ಹಿಂದೂಗಳ ಕೈಗೆ ಕೊಡಿ ಎಂಬ ಬೇಡಿಕೆ ಸಿಎಂ ಬಸವರಾಜ ಬೊಮ್ಮಾಯಿಯವರದ್ದಾಗಿದ್ದು ಈ ಬಗ್ಗೆ ಮಾತನಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸುತ್ತಾರೆಂದು ಭಾವಿಸಿದ್ದೆವು. ನಮ್ಮ ಯಾವ ಕೆಲಸವೂ ಸ್ವಾಗತಿಸುವ ಮಾನಸಿಕತೆ ಅವರಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರತಿಷ್ಠಿತ ಕಾಗಿನೆಲೆ ಪೀಠದ ವಾರ್ಷಿಕ ಪ್ರಶಸ್ತಿ ಪ್ರಕಟ

    ಮೇಕೆದಾಟು ಹೋರಾಟಕ್ಕೆ ಸರ್ಕಾರದಿಂದ ಕಡಿವಾಣ ಆರೋಪ ವಿಚಾರವಾಗಿ ಮಾತನಾಡಿ, ತುರ್ತು ಪರಿಸ್ಥಿತಿ ವೇಳೆ ಕೆಲವರು ಪ್ರಯತ್ನ ಮಾಡಿರಬಹುದು. ನಾವು ಎಲ್ಲರ ಎಲ್ಲಾ ಹಕ್ಕುಗಳನ್ನು ಗೌರವಿಸುತ್ತೇವೆ. ಕೊರೊನಾ ಕಾರಣಕ್ಕೆ ಒಂದಷ್ಟು ನಿಯಂತ್ರಣಕ್ಕೆ ಒಳಪಡಬೇಕಾಗುತ್ತೆ. ಜೀವ ಹೋದರೂ ಹೋರಾಟ ನಿಲ್ಲಿಸಲ್ಲ ಅಂದರೆ ತಡೆಯೋರು ಯಾರು? ಸಿದ್ದರಾಮಯ್ಯ ಅವರ ಶೈಲಿಯಲ್ಲಿ ಅವರು ಮಾತಾಡುತ್ತಾರೆ. 144 ಸೆಕ್ಷನ್ ಹಾಕಿದ್ದರು ಪಾದಯಾತ್ರೆ ಮಾಡುತ್ತೇವೆ ಅಂದರೆ ಅವರೇ ತೀರ್ಮಾನಿಸಲಿ ಎಂದರು. ಇದನ್ನೂ ಓದಿ: ವಯೋಮಿತಿ ಏರಿಕೆ ಭೀತಿ- ಮುಸ್ಲಿಮರು ತರಾತುರಿ ಲಗ್ನ

    ಯಾರದ್ದೋ ಹೋರಾಟ ನಿಲ್ಲಿಸಲು ಕೊರೊನಾ ಬಂದಿದ್ದಲ್ಲ. ಸಿಎಂ ಸ್ಥಾನದಲ್ಲಿದ್ದವರು, ಸಿಎಂ ಆಗ್ತೀನಿ ಅನ್ನುವವರು ಗಮನಿಸಲಿ. ತುಂಬಾ ಜನ ಬುದ್ಧಿವಂತರು ಬೇರೆಯವರಿಗೆ ಬುದ್ಧಿ ಇಲ್ಲ ಅಂದುಕೊಂಡಿರುತ್ತಾರೆ. ಅದು ಅವರವರ ಮಾನಸಿಕತೆಗೆ ಸಂಬಂಧಪಟ್ಟ ವಿಚಾರವಾಗಿದೆ. ಕಟೀಲ್‍ಗೆ ರಾಜಕೀಯ ಬುದ್ಧಿ ಬೆಳೆದಿಲ್ಲ ಎಂದಿದ್ದ ಸಿದ್ದುಗೆ ಟಾಂಗ್ ನೀಡಿದರು.

  • ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

    ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

    ಮಡಿಕೇರಿ: ಎಷ್ಟೋ ಹಿಂದೂ ದೇವಾಲಯಗಳಲ್ಲಿ ಎಣ್ಣೆ – ಬತ್ತಿಗೂ ಹಣವಿಲ್ಲ. ದೇವಾಲಯಗಳನ್ನು ಭಕ್ತರ ಕೈಗೆ ಕೊಡುವುದರಲ್ಲಿ ತಪ್ಪೇನಿಲ್ಲ. ದೇವಸ್ಥಾನಗಳನ್ನು ಸ್ವತಂತ್ರಗೊಳಿಸಿದರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಕೊಡಗಿನ ಪಾಲಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ದೇವಾಲಯಗಳ ಆಸ್ತಿಯನ್ನು ಖಾಸಗೀಕರಣ ಮಾಡುವ ಉದ್ದೇಶದಿಂದ, ಸರ್ಕಾರದ ಹಿಡಿತದಿಂದ ಸ್ವಾತಂತ್ರಗೊಳಿಸಲಾಗುತ್ತಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದರು. ಹಿಂದೂ ದೇವಾಲಯಗಳನ್ನು ಸ್ವಾತಂತ್ರಗೊಳಿಸಿ ಎಂದು ಸಿದ್ದರಾಮಯ್ಯನವರು ಕೇಳಬೇಕಿತ್ತು. ಆದರೆ ಅವರು ಯಾಕೆ ವಿರೋಧ ಮಾಡುತ್ತಿದ್ದಾರೋ ತಿಳಿಯುತ್ತಿಲ್ಲ. ಮಸೀದಿ ಹಾಗೂ ಚರ್ಚ್ಗಳು ಆಯಾ ಸಮುದಾಯಗಳ ಆಡಳಿತದಲ್ಲಿದೆ. ಆದರೆ ಹಿಂದೂ ದೇವಾಲಯಗಳು ಸರ್ಕಾರದ ಆಡಳಿತದಲ್ಲಿದೆ ಎಂದರು. ಇದನ್ನೂ ಓದಿ: ಪಾದಯಾತ್ರೆ ಕಾಂಗ್ರೆಸ್ಸಿನ ಅತ್ಯಂತ ಹೀನಾಯ ರಾಜಕಾರಣ: ಕಟೀಲ್

    ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದಾಗ, ಆರ್ಥಿಕ ಅಪರಾಧಗಳಾದಾಗ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಆದರೆ ಕಾಂಗ್ರೆಸ್‌ನವರು ಈ ವಿಚಾರದಲ್ಲಿ ಯಾಕೆ ಭಯಗೊಳ್ಳುತ್ತಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಲಾಕ್‌ಡೌನ್ ಬಗ್ಗೆ ಮಾಹಿತಿ ನೀಡಿದ ಶ್ರೀನಿವಾಸ ಪೂಜಾರಿ, ಕೊಡಗು ಜಿಲ್ಲೆಯಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.೧ ಇದೆ. ಅದು ಶೇ.೫ ರಷ್ಟು ಆದರೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗುತ್ತದೆ. ಅಂತಹ ಸ್ಥಿತಿಗೆ ಜನರು ಅವಕಾಶ ಕೊಡಬಾರದು. ರಾಜ್ಯದ ಕೆಲವು ಕಡೆಗಳಲ್ಲಿ ಪಾಸಿಟಿವಿಟಿ ದರ ಶೇ.೧ ಕ್ಕಿಂತ ಜಾಸ್ತಿ ಇದೆ. ಅದು ಇನ್ನಷ್ಟು ಜಾಸ್ತಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‍ಡೌನ್ ಮಾಡೋ ಉದ್ದೇಶ ಸರ್ಕಾರಕ್ಕೆ ಇಲ್ಲ: ಬಿ.ಸಿ ಪಾಟೀಲ್

  • ಲೋಕಾಯುಕ್ತ ಮುಗಿಸಿದಂತೆ ಲೋಕಪಾಲ್ ಮುಗಿಸ್ತೀರಾ: ಖರ್ಗೆಗೆ ಶ್ರೀನಿವಾಸ ಪೂಜಾರಿ ಪ್ರಶ್ನೆ

    ಲೋಕಾಯುಕ್ತ ಮುಗಿಸಿದಂತೆ ಲೋಕಪಾಲ್ ಮುಗಿಸ್ತೀರಾ: ಖರ್ಗೆಗೆ ಶ್ರೀನಿವಾಸ ಪೂಜಾರಿ ಪ್ರಶ್ನೆ

    ಉಡುಪಿ: ಕರ್ನಾಟಕದಲ್ಲಿ ಲೋಕಾಯುಕ್ತ ಮುಗಿಸಿದಂತೆ ದೇಶದಲ್ಲಿ ಕಾಂಗ್ರೆಸ್ ಲೋಕಪಾಲನ್ನು ಮುಗಿಸ್ತೀರಾ ಅಂತ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ ಮಾಡಿದ್ದಾರೆ. ಲೋಕಪಾಲ್ ಆಯ್ಕೆ ಸಂಬಂಧ ಐದು ವರ್ಷದಲ್ಲಿ ಒಂದೇ ಒಂದು ಸಭೆಯಲ್ಲಿ ಪಾಲ್ಗೊಳ್ಳದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೋಟ ಗರಂ ಆಗಿದ್ದಾರೆ.

    ಉಡುಪಿಯಲ್ಲಿ ಮಾತಮಾಡಿದ ಕೋಟ, ಲೋಕಪಾಲ್ ಬಗ್ಗೆ ಅಣ್ಣಾ ಹಜಾರೆ ಧರಣಿ ಕುಳಿತು ದೊಡ್ಡ ಹೋರಾಟ ಕೊಟ್ಟಿದ್ದರು. ದೇಶದ ಜನರ ಕನಸು ಈಗ ನೆರವೇರಿದೆ. ಆದ್ರೆ ಲೋಕಪಾಲ್ ಬಿಲ್ ವಿಚಾರದಲ್ಲಿ ಕಾಂಗ್ರೆಸ್ ನಿಲುವೇನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಅಂತ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ ಮಾಡಿದ್ದಾರೆ. ಮಸೂದೆ ಅನುಷ್ಠಾನ ಕುರಿತು 5 ವರ್ಷದಲ್ಲಿ 7 ಮೀಟಿಂಗ್ ಆಗಿದೆ. ಮಲ್ಲಿಕಾರ್ಜುನ ಖರ್ಗೆ ವಿಪಕ್ಷ ನಾಯಕ ಅಲ್ಲದಿದ್ದರೂ ಅವರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಕಾಂಗ್ರೆಸ್ ಸಂಸದೀಯ ನಾಯಕನ ನೆಲೆಯಲ್ಲಿ ಖರ್ಗೆಗೆ ಮೋದಿ ಆಹ್ವಾನ ನೀಡಿದ್ದರು. ಆದರೆ ಒಂದು ಸಭೆಗೆ ಖರ್ಗೆ ಹಾಜರಾಗಲಿಲ್ಲ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಲೋಕಪಾಲ್ ಬಿಲ್ ಪರವೋ ವಿರುದ್ಧವೋ? ಗೊತ್ತಾಗುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಇದನ್ನು ಕೂಡಲೇ ಸ್ಪಷ್ಟಪಡಿಸಬೇಕು. ಅವರು ಏಳು ಬಾರಿಯೂ ಸಭೆಯನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಈಗ ಅವರು ಉತ್ತರಿಸಬೇಕು. ಲೋಕಪಾಲ್ ಮಸೂದೆಯನ್ನು ನಿರ್ಲಕ್ಷ್ಯ ಮಾಡುತ್ತೀರಾ ಎಂದು ಕೋಟ ಪ್ರಶ್ನೆ ಹಾಕಿದ್ದಾರೆ. ಕರ್ನಾಟಕದಲ್ಲಿ ಲೋಕಾಯುಕ್ತವನ್ನು ಮುಗಿಸಿದ್ದೀರಿ. ದೇಶದಲ್ಲಿ ಲೋಕಪಾಲ್ ಮುಗಿಸುವ ಆಲೋಚನೆಯಲ್ಲಿದ್ದೀರಾ ಅಂತ ಖರ್ಗೆ ಮತ್ತು ಕಾಂಗ್ರೆಸ್ ವಿರುದ್ಧ ಕೋಟ ಕುಟುಕಿದ್ದಾರೆ.

    ಖರ್ಗೆ ಗೈರಾಗಿದ್ದು ಯಾಕೆ?
    ಲೋಕಪಾಲರ ನೇಮಕ ಸಂಬಂಧ ಇರುವ ಸಮಿತಿಯಲ್ಲಿ ವಿರೋಧ ಪಕ್ಷ ನಾಯಕರು ಸದಸ್ಯರಾಗಿರುತ್ತಾರೆ. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಕ್ಕೆ ಬೇಕಾಗುವಷ್ಟು ಸ್ಥಾನಗಳನ್ನು ಯಾರು ಪಡೆಯದ ಕಾರಣ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿಪಕ್ಷ ನಾಯಕನ ಸ್ಥಾನವನ್ನು ನೀಡಿರಲಿಲ್ಲ. ಖರ್ಗೆ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು. ಲೋಕಪಾಲ್ ನೇಮಕ ಸಂಬಂಧ ಖರ್ಗೆ ಅವರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಲಾಗಿತ್ತು. ವಿಶೇಷ ಆಹ್ವಾನಿತರಾಗಿ ನಾನು ತೆರಳುವುದಿಲ್ಲ ಎಂದು ಹೇಳಿ ಖರ್ಗೆ ಲೋಕಪಾಲ್ ಆಯ್ಕೆ ಸಂಬಂಧ ಕರೆದಿದ್ದ ಸಭೆಗೆ ಗೈರು ಹಾಜರಿ ಹಾಕಿದ್ದರು.