Tag: kota srinivas poojary

  • ಗೊಂದಲಕ್ಕೆ ತೆರೆ – ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ಎಲ್ಲ ಭಕ್ತರಿಗೆ ಅವಕಾಶ

    ಗೊಂದಲಕ್ಕೆ ತೆರೆ – ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ಎಲ್ಲ ಭಕ್ತರಿಗೆ ಅವಕಾಶ

    – ಕೋವಿಡ್‌ ನಿಯಮ ಪಾಲನೆ ಕಡ್ಡಾಯ
    – ಪುಣ್ಯ ಸ್ನಾನ ಮಾಡಲು ಅವಕಾಶ ಇಲ್ಲ‌

    ಮಡಿಕೇರಿ: ಪವಿತ್ರ ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ತಲಕಾವೇರಿ ಕ್ಷೇತ್ರಕ್ಕೆ ಎಲ್ಲ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದೆಂದು ಕೊಡಗು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

    ಕಳೆದ ಶನಿವಾರ ತೀರ್ಥೋದ್ಭವಕ್ಕೆ ತಲಕಾವೇರಿಗೆ ಬರುವ ಭಕ್ತರು ಭಗಮಂಡಲದಿಂದ ಕಾಲ್ನನಡಿಗೆಯಲ್ಲಿ ಬರಬೇಕು. ವಾಹನಗಳನ್ನು ಭಾಗಮಂಡಲದಲ್ಲಿ ನಿಲ್ಲಿಸಬೇಕು, ಕೋವಿಡ್ ವರದಿ ಮತ್ತು ವ್ಯಾಕ್ಸಿನೇಷನ್‌ ಕಡ್ಡಾಯ ಮಾಡಲಾಗಿತ್ತು.

    ಈ ನಿಯಮದ ವಿರುದ್ಧ ಕೊಡಗಿನ ಮೂಲ ನಿವಾಸಿಗಳು ತಿರುಗಿ ಬಿದ್ದಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ತಂದ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಗೊಂಡಿದ್ದು ಕೊಡಗಿನ ನಿವಾಸಿಗಳ ಜೊತೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡಲಾಗಿದೆ.

    ಭಕ್ತರು ಕೋವಿಡ್ ನಿಯಮ ಪಾಲನೆ‌ಮಾಡಬೇಕು. ತೀರ್ಥೋದ್ಬವ ಅಗುವ ಸಮಯದಲ್ಲಿ ಕಾವೇರಿ ಭಕ್ತರಿಗೆ ಮುಕ್ತ ಅವಕಾಶ ಇದೆ ಇರುತ್ತದೆ ಎಂದು ಹೇಳುವ ಮೂಲಕ ಎದ್ದಿದ್ದ ಗೊಂದಲಕ್ಕೆ ಶ್ರೀನಿವಾಸ್ ಪೂಜಾರಿ ತೆರೆ ಎಳೆದಿದ್ದಾರೆ. ಇದನ್ನೂ ಓದಿ: RSS ಇಲ್ಲವೆಂದಿದ್ದರೆ ಭಾರತ, ಪಾಕಿಸ್ತಾನ ಆಗ್ತಿತ್ತು: ಪ್ರಭು ಚವ್ಹಾಣ್ 

    ಕೊಡಗಿನ ಭಕ್ತರ ಭಾವನೆಗೆ ಸರ್ಕಾರ ಗೌರವ ನೀಡಿದ್ದು, ಪವಿತ್ರ ತೀರ್ಥ ಕೊಂಡೊಯ್ಯಲು ಮುಕ್ತ ಅವಕಾಶ ನೀಡಲಾಗಿದೆ. ಆದರೆ ಈ ಬಾರಿ ತಲಕಾವೇರಿಯ ಕುಂಡಿಕೆ ಬಳಿ ಇರುವ ಕೊಳದಲ್ಲಿ ಪುಣ್ಯ ಸ್ನಾನ ಮಾಡಲು ಅವಕಾಶ ಇಲ್ಲ‌ ಎಂದು ಸಚಿವರು ಹೇಳಿದ್ದಾರೆ. ಅ.17 ರಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಪವಿತ್ರ ಕಾವೇರಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

  • ಡ್ರಗ್ಸ್ ದಂಧೆ ಜೊತೆಗೆ ಕುಹಕ ಮಾಡುವವರನ್ನೂ ಮಟ್ಟ ಹಾಕುತ್ತೇವೆ: ಕೋಟಾ

    ಡ್ರಗ್ಸ್ ದಂಧೆ ಜೊತೆಗೆ ಕುಹಕ ಮಾಡುವವರನ್ನೂ ಮಟ್ಟ ಹಾಕುತ್ತೇವೆ: ಕೋಟಾ

    ಮಡಿಕೇರಿ: ರಾಜ್ಯದಲ್ಲಿ ಡ್ರಗ್ಸ್ ದಂಧೆ ಜೊತೆಗೆ ನಮ್ಮನ್ನು ಕುಹಕ ಮಾಡುವವರನ್ನು ಸಹ ಮಟ್ಟ ಹಾಕುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

    ಮಡಿಕೇರಿಯಲ್ಲಿ ಕೋವಿಡ್ ನಿರ್ವಹಣೆ ಮತ್ತು ನಿಫಾ ವೈರಸ್ ತಡೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿಷಯದಲ್ಲಿ ಬಿಜೆಪಿಯವರನ್ನು ಮೊದಲು ಪರೀಕ್ಷಿಸಬೇಕು ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಸಾಮಾಜಿಕ ಜವಾಬ್ದಾರಿ ವಿಷಯಗಳಿಗೆ ಯಾರೋ ಕುಹಕದ ಮಾತುಗಳನ್ನಾಡಿದರೆ ಅದಕ್ಕೆ ಉತ್ತರಿಸುವ ಅಗತ್ಯವಿಲ್ಲ ಎಂದರು.

    ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಾಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಗೃಹ ಮಂತ್ರಿಯಾಗಿದ್ದರು. ಆಗ ಅವರೇ ಕಠಿಣ ನಿರ್ಧಾರ ತೆಗೆದುಕೊಂಡಿದ್ದರು. ಈಗ ಸಿಎಂ ಆಗಿದ್ದು, ಯಾವುದೇ ಕಾರಣಕ್ಕೂ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕದೇ ಬಿಡುವುದಿಲ್ಲ ಎಂದರು. ಇದನ್ನೂ ಓದಿ: ಲಾರಿ, ಬೈಕ್ ಡಿಕ್ಕಿ – ಬಾಗಿನ ಕೊಟ್ಟು ಬರ್ತಿದ್ದ ತಂದೆ, ಮಗಳ ಸಾವು

    ನಟಿ, ನಿರೂಪಕಿ ಅನುಶ್ರಿ ಅವರ ವಿಷಯದಲ್ಲಿ ಸಾಫ್ಟ್ ಕಾರ್ನರ್ ತೋರಿಸಲಾಗುತ್ತಿದೆಯಾ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಯಾರಿಗೂ ಯಾವುದೇ ಕಾರಣಕ್ಕೂ ಸಾಫ್ಟ್ ಕಾರ್ನರ್ ತೋರಿಸುವ ಪ್ರಶ್ನೆಯೇ ಇಲ್ಲ. ಈ ಕುರಿತು ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 0.5ಗೆ ಬಂದಿದೆ. ಹೀಗಾಗಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ಸರ್ಕಾರ ಚಿಂತಿಸಿದೆ. ಇಂದು ಸಂಜೆ ಒಳಗೆ ಕಂದಾಯ ಸಚಿವರು ಈ ಕುರಿತು ಆದೇಶ ಹೊರಡಿಸಬಹುದು. ಬಳಿಕ ವೀಕೆಂಡ್ ಕರ್ಫ್ಯೂ ತೆರವು ಮಾಡಲು ನಾವು ನಿರ್ಧಾರ ಮಾಡುತ್ತೇವೆ. ಕೇರಳದಲ್ಲಿ ನಿಫಾ ವೈರಸ್ ಆತಂಕ ಹಿನ್ನೆಲೆ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಶೇ.83ರಷ್ಟು ವ್ಯಾಕ್ಸಿನ್ ಆಗಿದೆ. ಮುಂದಿನ 15 ದಿನಗಳಲ್ಲಿ ಶೇ.100ರಷ್ಟು ವಾಕ್ಸಿನ್ ಮಾಡಲಾಗುವುದು.

  • ಉಡುಪಿಯ ವಾರಾಂತ್ಯ ಕರ್ಫ್ಯೂ ಬಗ್ಗೆ ಸಿಎಂ ಪುನರ್ ಪರಿಶೀಲಿಸಲಿ- ಸಚಿವ ಕೋಟ

    ಉಡುಪಿಯ ವಾರಾಂತ್ಯ ಕರ್ಫ್ಯೂ ಬಗ್ಗೆ ಸಿಎಂ ಪುನರ್ ಪರಿಶೀಲಿಸಲಿ- ಸಚಿವ ಕೋಟ

    ಉಡುಪಿ: ಈ ವಾರಾಂತ್ಯದಿಂದ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ನಿರ್ಧಾರ ಪುನರ್ ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಗೆ ಕೋಟ ಶ್ರೀನಿವಾಸ್ ಪೂಜಾರಿ ವಿನಂತಿಸಿದ್ದಾರೆ.

    ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರದಲ್ಲಿ ಮಾಧ್ಯಮಗಳು ಮಾತನಾಡಿದರು. ಕೊರೊನಾ ಪಾಸಿಟಿವ್ ರೇಟ್ ಗಮನಿಸಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಉನ್ನತ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುತ್ತೇವೆ ಜನಸಾಮಾನ್ಯರಿಗೆ ಇದರಿಂದ ಸಮಸ್ಯೆಯಾಗುತ್ತದೆ ಎನ್ನುವುದು ಸತ್ಯ ಎಂದರು. ಇದನ್ನೂ ಓದಿ: ಘೋಲ್ ಮೀನು ಹಿಡಿದು ಒಂದೇ ದಿನದಲ್ಲಿ ಕೋಟ್ಯಧಿಪತಿಯಾದ ಮೀನುಗಾರ

    ಪಾಸಿಟಿವಿಟಿ ರೇಟ್ ಕಡಿಮೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಆರೋಗ್ಯ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸುತ್ತೇನೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಡ್ಡಾಯವಾಗಿ ಅನುಸರಿಸಬೇಕು. ಶಾಲೆಗಳು ಪ್ರಾರಂಭವಾಗುತ್ತಿದ್ದು ಮಕ್ಕಳು ಪೋಷಕರಲ್ಲಿ ಕೊರೊನಾ ಜಾಗೃತಿ ಮೂಡಿಸಬೇಕು. ಶಾಲೆಗಳಲ್ಲೂ ಕೂಡ ಅಂತರವನ್ನು ಕಾಪಾಡಿಕೊಂಡು ಸಾಂಕ್ರಾಮಿಕ ರೋಗವನ್ನು ಹಬ್ಬಲು ಬಿಡಬಾರದು ಎಂದು ಸಚಿವ ಕೋಟ ಹೇಳಿದರು. ಇದನ್ನೂ ಓದಿ: ನಾನು ಜನರ ಬಳಿಗೆ ಹೋಗಿ ಕೆಲಸ ಮಾಡುವೆ-ಶಾಲೆ ಭೇಟಿ ಮೂಲಕ ಉಡುಪಿ ಡಿಸಿ ಅಧಿಕಾರ ಸ್ವೀಕಾ

  • ಕರ್ನಾಟಕ ಕಟ್ಟುವಲ್ಲಿ ದಿ.ದೇವರಾಜ ಅರಸು ಪಾತ್ರ ಹಿರಿದು: ಬೊಮ್ಮಾಯಿ

    ಕರ್ನಾಟಕ ಕಟ್ಟುವಲ್ಲಿ ದಿ.ದೇವರಾಜ ಅರಸು ಪಾತ್ರ ಹಿರಿದು: ಬೊಮ್ಮಾಯಿ

    ಬೆಂಗಳೂರು: ಕರ್ನಾಟಕದ ನಾಮಕರಣದಿಂದ ಹಿಡಿದು ಕರ್ನಾಟಕ ಕಟ್ಟುವಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಪಾತ್ರ ಹಿರಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

    ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕನ್ನಡ ನಾಡು ಕಂಡಂಥ ಧೀಮಂತ ನಾಯಕರು, ಜನಪರ, ಹಿಂದುಳಿದ ಮತ್ತು ರೈತಪರ ಮುಖ್ಯಮಂತ್ರಿ ದೇವರಾಜ ಅರಸು. ನಮ್ಮ ಕರ್ತವ್ಯಗಳನ್ನು ನೆನಪಿಸುವ ದಿನವಿದು. ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ. ಹಿಂದುಳಿದ ವರ್ಗಗಳ ಏಳಿಗೆಗಾಗಿ, ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಕೆಲಸ ಮಾಡಬೇಕು. ವಿಶೇಷವಾಗಿ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕೆನ್ನುವ ಸಂಕಲ್ಪವನ್ನು ಮಾಡುವ ದಿನ ಇದು ಎಂದು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: 48 ವರ್ಷಗಳಾದ್ರೂ ಲಕ ಲಕ ಹೊಳೆಯುತ್ತಿದೆ ದೇವರಾಜ ಅರಸು ಬಳಸಿದ ಬೆಂಜ್ ಕಾರು

    ದೇವರಾಜ ಅರಸು ಅವರು ಜಾರಿಗೆ ತಂದ ಕ್ರಾಂತಿಕಾರಿ ಭೂ ಸುಧಾರಣೆ ಕಾಯ್ದೆ, ನಮ್ಮೆಲ್ಲರಿಗೂ ಅತ್ಯಂತ ಸ್ಫೂರ್ತಿದಾಯಕ. ಕರ್ನಾಟಕದಲ್ಲಿ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎನ್ನುವ ಘೋಷಣೆಯನ್ನು ಅಕ್ಷರಶಃ ಪಾಲಿಸಿದವರು ದೇವರಾಜ ಅರಸು. ಹಲವಾರು ನಾಯಕರನ್ನು ಬೆಳೆಸಿದ್ದಾರೆ. ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸಿದ್ದಾರೆ. ಅವರ ಹೆಜ್ಜೆ ಗುರುತುಗಳು ಕರ್ನಾಟಕದ ಭೂಮಿಯಲ್ಲಿ ಶಾಶ್ವತವಾಗಿದೆ. ಅವರ ಹೆಸರಿನಲ್ಲಿ ಇಂದಿಗೂ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಅವರ ವಿಚಾರಧಾರೆಗಳು ಪಕ್ಷಾತೀತವಾಗಿ, ಸರ್ವ ಸಮ್ಮತವಾಗಿ ಒಪ್ಪುವಂಥ ನಾಯಕರು ಎಂದು ನುಡಿದರು. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿ ನಾಯಕರಿಂದ ಕೋವಿಡ್ ನಿಯಮ ಉಲ್ಲಂಘನೆ – ದೂರು ದಾಖಲು

    ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಮೊದಲಾದವರು ಉಪಸ್ಥಿತರಿದ್ದರು.

  • ಕನಸು ಕಾಣುವ ಹಕ್ಕಿದೆ ಕಾಣಲಿ: ಕಾಂಗ್ರೆಸ್ಸಿಗರಿಗೆ ಸಚಿವ ಕೋಟ ಟಾಂಗ್

    ಕನಸು ಕಾಣುವ ಹಕ್ಕಿದೆ ಕಾಣಲಿ: ಕಾಂಗ್ರೆಸ್ಸಿಗರಿಗೆ ಸಚಿವ ಕೋಟ ಟಾಂಗ್

    ಚಿಕ್ಕಮಗಳೂರು: ಈ ಸರ್ಕಾರ ಬಹಳ ದಿನ ಇರಲ್ಲ. ಆರು ತಿಂಗಳಲ್ಲಿ ಬೀಳುತ್ತೆ ಎಂದು ಹೇಳುತ್ತಿರೋ ಕಾಂಗ್ರೆಸ್ಸಿಗರಿಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟಾಂಗ್ ನೀಡಿದ್ದಾರೆ.

    ನಗರದ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಯಾರೂ ಬೇಕಾದರೂ ಕನಸು ಕಾಣಬಹುದು. ಯಾರೇ ಕನಸು ಕಂಡರೂ ತಪ್ಪಿಲ್ಲ. ಎಲ್ಲರಿಗೂ ಕನಸು ಕಾಣುವ ಹಕ್ಕಿದೆ ಎಂದು ಕಾಂಗ್ರೆಸ್ಸಿಗರ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಬಿಜೆಪಿ ಸರ್ಕಾರದ ವಿಷಯದಲ್ಲಿ ಯಾರ ಕನಸೂ ನನಸಾಗುವುದಿಲ್ಲ, ಬಿಜೆಪಿ ಸರ್ಕಾರ ಸುಭದ್ರ ಹಾಗೂ ಸ್ಥಿರವಾಗಿದೆ. ಮಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ರಥಯಾತ್ರೆಗೆ ಅಡ್ಡಿಪಡಿಸಿದ ಸಂಘಟನೆಗಳ ಮೇಲೂ ಕಿಡಿಕಾರಿದ್ದಾರೆ. ವ್ಯಕ್ತಿ, ಶಕ್ತಿ, ಪಾರ್ಟಿ ಹಾಗೂ ಸಂಸ್ಥೆ ಯಾವುದೂ ಮುಖ್ಯವಲ್ಲ. ದೇಶದ ಸಂವಿಧಾನಕ್ಕೆ ಅಗೌರವ ತೋರುವ, ರಾಷ್ಟ್ರದ ರಾಷ್ಟ್ರಧ್ವಕ್ಕೆ ಅಗೌರವ ತೋರುವುದನ್ನ ಸಹಿಸಲ್ಲ, ನಮ್ಮ ಬಿಜೆಪಿ ಸರ್ಕಾರ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿದಿದ್ದಾರೆ. ಇದನ್ನೂ ಓದಿ:ಮಂಡ್ಯದಲ್ಲಿ ಮತ್ತೆ ಸುಮಲತಾ Vs ಎಂಎಲ್‍ಎ ಫೈಟ್ – ದಿಶಾ ಸಭೆಯಲ್ಲಿ ಪ್ರತಿಷ್ಠೆಗೆ ಬಿದ್ದ ಜನಪ್ರತಿನಿಧಿಗಳು

    ದತ್ತಪೀಠದಲ್ಲಿ ತ್ರಿಕಾಲ ಪೂಜೆ ನಡೆಯಬೇಕು. ಹಿಂದೂ ಅರ್ಚಕರ ನೇಮಕ ಮಾಡಬೇಕು ಎಂಬ ಸುದ್ದಿ ಚರ್ಚೆಯಲ್ಲಿದೆ. ಈಗಾಗಲೇ ಹೈಕೋರ್ಟಿನಲ್ಲಿ ದತ್ತಪೀಠ ಸಂಬಂಧದ ವಾದ-ವಿವಾದ ಮುಗಿದು ಅಂತಿಮ ತೀರ್ಪು ಬಾಕಿ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ದತ್ತಪೀಠದ ವಿಚಾರದಲ್ಲಿ ನ್ಯಾಯಾಲಯದ ತೀರ್ಪೀನ ಬಳಿಕ ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

  • ತುರ್ತು ಅಲ್ಲದ, ಪಾರದರ್ಶಕ ಇಲ್ಲದ ಎಲ್ಲಾ ಯೋಜನೆ ರದ್ದು- ಕುಂಭಾಸಿ ದೇಗುಲದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಶಪಥ

    ತುರ್ತು ಅಲ್ಲದ, ಪಾರದರ್ಶಕ ಇಲ್ಲದ ಎಲ್ಲಾ ಯೋಜನೆ ರದ್ದು- ಕುಂಭಾಸಿ ದೇಗುಲದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಶಪಥ

    ಉಡುಪಿ: ಪಾರದರ್ಶಕತೆ ಇಲ್ಲದ, ತುರ್ತು ಅವಶ್ಯಕತೆ ಎಂದು ಅನ್ನಿಸದ ನನ್ನ ಇಲಾಖೆಯ ಎಲ್ಲಾ ಯೋಜನೆಗಳನ್ನು ರದ್ದು ಮಾಡಲಾಗುವುದು ಎಂದು ಸಮಾಜ ಕಲ್ಯಾಣ- ಹಿಂದುಳಿದ ವರ್ಗಗಳ ಇಲಾಖೆ ಸಚಿಚ ಕೋಟ ಶ್ರೀನಿವಾಸ ಪೂಜಾರಿ ಕುಂಭಾಸಿ ಆನೆಗುಡ್ಡೆ ಗಣಪತಿ ದೇವಸ್ಥಾನದಲ್ಲಿ ಶಪಥ ಮಾಡಿದ್ದಾರೆ.

    ಉಡುಪಿ ಜಿಲ್ಲೆ ಕುಂಭಾಸಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಲು ಪ್ರಯತ್ನಿಸುವೆ. ತಲೆಗೊಂದು ಸೂರು ಕುಡಿಯಲು ನೀರು ಒದಗಿಸಲು ಪ್ರಯತ್ನಿಸುವೆ ಎಂದು ಸಮಾಜ ಕಲ್ಯಾಣ- ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ನನ್ನ ಇಲಾಖೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಲು ಈವರೆಗೆ 1.75 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಈ ಮೊತ್ತ 5 ಲಕ್ಷಕ್ಕೇರಿಸಲು ಹಣಕಾಸು ಇಲಾಖೆಗೆ ಶಿಫಾರಸು ಮಾಡಿದ್ದೇನೆ. ಪರಿಶಿಷ್ಟ ಜಾತಿಯವರ ವಾಸದ ಭೂಮಿಗೆ ಹಕ್ಕುಪತ್ರ ನೀಡಲು ಹೊಸ ಕಾರ್ಯಕ್ರಮ ಹಾಕಿದ್ದೇವೆ. ಇರುವ ನೆಲ ಖಾಸಗಿ ಅಥವಾ ಸರ್ಕಾರಿಯಾಗಿದ್ದರೆ ಹಕ್ಕುಪತ್ರ ನೀಡಲು ನಿರ್ದೇಶನ ನೀಡುತ್ತೇನೆ. ಮನೆಗೆ ವಿದ್ಯುತ್ ನೀರು ಶೌಚಾಲಯ ಒದಗಿಸಲು ಕಾರ್ಯಕ್ರಮ ರೂಪಿಸಲಿದ್ದು, ತುರ್ತು ಅಲ್ಲದ- ಪಾರದರ್ಶಕತೆ ಇಲ್ಲದ ಅನಪೇಕ್ಷಿತ ಯೋಜನೆ ರದ್ದು ಮಾಡುತ್ತೇವೆ ಎಂದು ಸಚಿವ ಕೋಟ ಹೇಳಿದರು. ಇದನ್ನೂ ಓದಿ: ಸಾಲ ಮಾಡಿಯೂ ಮನೆ ಕಟ್ಟಬಾರದಾ?- ಶಾಂತಾ ಶ್ರೀನಿವಾಸ ಪೂಜಾರಿ ಕಣ್ಣೀರು

    ಬಡವರ ಮಕ್ಕಳು ವಿದೇಶದಲ್ಲಿ ವಿದ್ಯೆ ಪಡೆಯಲಿ
    ಬಡವರ ಜೀವನಕ್ಕೆ ಬೇಕಾದ ಅವಶ್ಯಕತೆಗಳಿಗೆ ತುರ್ತು ಸ್ಪಂದನೆ ನೀಡುತ್ತೇವೆ. ಬಡವರ ಮಕ್ಕಳಿಗೆ ವಿದೇಶ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸುತ್ತೇವೆ. ಉನ್ನತ ಶಿಕ್ಷಣ , ಮೆಡಿಕಲ್ ಕಲಿಯಲು ಆರ್ಥಿಕ ಕೊರತೆ ಆಗದಂತೆ ನೋಡಿಕೊಳ್ಳುತ್ತೇವೆ. ಈ ಕುರಿತು ಚರ್ಚಸಿಲು ಸೋಮವಾರ ವಿಶೇಷ ಸಭೆ ನಡೆಸುವುದಾಗಿ ಎಂದು ಪೂಜಾರಿ ಹೇಳಿದರು. ಇದನ್ನೂ ಓದಿ: ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ

  • ಸಾಲ ಮಾಡಿಯೂ ಮನೆ ಕಟ್ಟಬಾರದಾ?- ಶಾಂತಾ ಶ್ರೀನಿವಾಸ ಪೂಜಾರಿ ಕಣ್ಣೀರು

    ಸಾಲ ಮಾಡಿಯೂ ಮನೆ ಕಟ್ಟಬಾರದಾ?- ಶಾಂತಾ ಶ್ರೀನಿವಾಸ ಪೂಜಾರಿ ಕಣ್ಣೀರು

    – ಸಿಂಪಲ್ ಶ್ರೀನಿವಾಸನ ಮನೆಯಲ್ಲಿ ಸಿಂಪಲ್ ಸಂಭ್ರಮ

    ಉಡುಪಿ: ಕೋಟಾ ಶ್ರೀನಿವಾಸ ಪೂಜಾರಿ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಿಂಪಲ್ ಶ್ರೀನಿವಾಸ ಎಂದೆ ಹೆಸರು ಪಡೆದಿರುವ ಕೋಟಾ ಗ್ರಾಮದ ಅವರ ಮನೆಯಲ್ಲಿ ಯಾವುದೇ ಸಂಭ್ರಮಾಚರಣೆ ಇರಲಿಲ್ಲ. ನಾಲ್ಕು ಜನ ಆಪ್ತರು ಮಾತ್ರ ಇಂದು ಸಿಹಿ ಹಂಚಿ, ತಿಂದು ಸಿಂಪಲ್ಲಾಗಿ ಖುಷಿಪಟ್ಟರು.

    ಇದೇ ವೇಳೆ ಕೋಟಾ ಶ್ರೀನಿವಾಸ ಪೂಜಾರಿ ಪತ್ನಿ ಶಾಂತಾ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಪತಿ ಸಚಿವರಾಗಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ಅವರು ಸಚಿವರಾಗಬಹುದು ಎಂಬ ನಿರೀಕ್ಷೆಯಲ್ಲಿದ್ದೆವು. ಎರಡು ಅವಧಿಯಲ್ಲಿ ಅವರು ತುಂಬಾ ಚೆನ್ನಾಗಿ ಕೆಲಸ ಮಾಡಿರುವುದರಿಂದ ಈ ಬಾರಿ ಮತ್ತೆ ಸಚಿವ ಸ್ಥಾನ ಸಿಗಬಹುದು ಎಂಬ ನಂಬಿಕೆ ಇತ್ತು ಎಂದರು.

    ಸಾಲ ಮಾಡಿ ಮನೆ ಕಟ್ಟುತ್ತಿದ್ದೇವೆ
    ಮನೆ ಕಟ್ಟುತ್ತಿರುವಾಗ ಜನ ಆರು ಕೋಟಿ ಮನೆ ಎಂದು ಆರೋಪ ಮಾಡಿದರು. ಆದರೆ ನಾವು ಹಾಗೆ ಇಲ್ಲ, ಸಾಲ ಮಾಡಿ 13 ಸೆಂಟ್ಸ್ ಜಾಗ ತೆಗೆದುಕೊಂಡಿದ್ದೆವು. ಈಗ ಜಾಗದ ಮೇಲೆ ಸಾಲ ಮಾಡಿ ಮನೆ ಕಟ್ಟುತ್ತಿದ್ದೇವೆ. ಆರೋಪಗಳನ್ನೆಲ್ಲ ಕೇಳುವಾಗ ಮನಸ್ಸಿಗೆ ಬಹಳ ಬೇಸರವಾಗುತ್ತದೆ, ತುಂಬಾ ನೋವಾಗುತ್ತದೆ. ಮೂರು ವರ್ಷದಿಂದ ಮನೆಯ ಕೆಲಸ ಆಗುತ್ತಿದೆ ಇನ್ನೂ ಪೂರ್ಣಗೊಂಡಿಲ್ಲ ಎಂದರು.

    ಪತಿ ಎರಡು ಬಾರಿ ಸಚಿವರಾಗಿದ್ದಾರೆ, ದಶಕಗಳಿಂದ ಶಾಸಕರಾಗಿ ಕೆಲಸಮಾಡುತ್ತಿದ್ದಾರೆ. ಜೀವನಪೂರ್ತಿ ರಾಜಕಾರಣ ಮಾಡಿಕೊಂಡು ಬಂದವರು, ನನ್ನ ಮಗ ಸ್ವಂತ ಉದ್ಯೋಗ ಮಾಡುತ್ತಿದ್ದಾರೆ. ನಾವು ಮನೆ ಕಟ್ಟುವುದು ತಪ್ಪಾ? ನಮ್ಮ ಬಳಿ ಕೋಟಿಗಟ್ಟಲೆ ಹಣ ಇದ್ದಿದ್ದರೆ ಯಾವತ್ತೋ ಮನೆ ಕಟ್ಟುತ್ತಿದ್ದೆವು. ಐಶಾರಾಮಿ ಜೀವನ ನಡೆಸುತ್ತಿದ್ದೆವು. ಹಣ ಇದ್ದಿದ್ದರೆ ಸರಳ ಜೀವನ ನಡೆಸಬೇಕಾಗಿರಲಿಲ್ಲ ಎಂದು ಶಾಂತಾ ಕಣ್ಣೀರಿಟ್ಟರು.

    ಎಲ್ಲರಿಗೂ ಒಳ್ಳೆಯದೇ ಮಾಡಬೇಕು, ಪತಿ ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಮೇಲೆ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆ. ದೇವರು ಆಯುಷ್ಯ, ಆರೋಗ್ಯ ಕೊಟ್ಟು ಕೆಲಸ ಮಾಡುವ ಶಕ್ತಿ ಸಿಗಲಿ. ನಾನು ಮೊದಲಿಂದಲೂ ಹೀಗೆ ಇದ್ದದ್ದು, ಮುಂದೆ ಹೇಗೆಯೇ ಇರುತ್ತೇನೆ. ಸಚಿವರ ಯಾವ ಕೆಲಸ ಕಾರ್ಯದಲ್ಲೂ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಸಚಿವರು ಇಲ್ಲದಂತಹ ಸಂದರ್ಭದಲ್ಲಿ ಕೆಲವು ಬೇಡಿಕೆಗಳನ್ನು ಜನ ತಂದುಕೊಡುತ್ತಾರೆ. ಅದನ್ನು ಸ್ವೀಕರಿಸಿ ಸಚಿವರಿಗೆ ಮುಟ್ಟಿಸುವುದು ಮಾತ್ರ ನನ್ನ ಕೆಲಸ. ನಾನು ಯಾರ ಪರವಾಗಿಯೂ ಕೆಲಸ ಮಾಡಿಕೊಡಿ ಎಂದು ಈವರೆಗೆ ಹೇಳಿಲ್ಲ, ಮುಂದೆಯೂ ಹೇಳುವುದಿಲ್ಲ. ಕಷ್ಟದಲ್ಲಿರುವವರಿಗೆ ಮಾತ್ರ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

    ಅಪ್ಪ ಸಚಿವರಾಗಿದ್ದು ಖುಷಿಯಾಗಿದೆ
    ಅಪ್ಪ ಸಚಿವರಾಗುತ್ತಾರೆ ಎಂದು ನಮಗೆ ಗೊತ್ತಿರಲಿಲ್ಲ. ಹಾಗಾಗಿ ನಾವು ಬೆಂಗಳೂರಿಗೆ ಹೋಗಿಲ್ಲ. ಅವರು ಕೂಡ ನಮಗೆ ಯಾವುದೇ ಮಾಹಿತಿಯನ್ನು ಕೊಟ್ಟಿಲ್ಲ. ಸಚಿವರಾಗುತ್ತಾರೆ ಎಂದು ಗೊತ್ತಿದ್ದರೆ ನಾವು ಖಂಡಿತ ಬೆಂಗಳೂರಿಗೆ ಹೋಗುತ್ತಿದ್ದೆವು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಗಳು ಸ್ವಾತಿ ಎಸ್.ಪೂಜಾರಿ ಹೇಳಿದರು.

    ಮತ್ತೋರ್ವ ಮಗಳು ಶೃತಿ ಮಾತನಾಡಿ, ಮಾಧ್ಯಮಗಳಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಬಗ್ಗೆ ಚರ್ಚೆ ಇಲ್ಲದಿದ್ದರೂ, ಅವರು ಮಂತ್ರಿ ಆಗಬಹುದು ಎಂಬ ನಂಬಿಕೆಯಲ್ಲಿ ನಾನಿದ್ದೆ. ಒಳ್ಳೆ ಕೆಲಸ ಮಾಡಿದ್ದಾರೆ ಅವರ ಕೆಲಸ ನೋಡಿ ಸ್ಥಾನಮಾನ ಸಿಕ್ಕಿದೆ ಎಂದರು. ಕೋಟಾ ಗ್ರಾಮದ ಮನೆಯ ಮುಂದೆ, ಸಾಲಿಗ್ರಾಮ ಜಂಕ್ಷನ್ ನಲ್ಲಿ ಶ್ರೀನಿವಾಸ ಪೂಜಾರಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

  • ನಾನ್ಸೆನ್ಸ್ ಆರೋಪಕ್ಕೆ ತಲೆಕೆಡಿಸಿಕೊಳ್ಳಬೇಡಿ- ಕೋಟಾಗೆ ರಘುಪತಿ ಭಟ್ ಬೆಂಬಲ

    ನಾನ್ಸೆನ್ಸ್ ಆರೋಪಕ್ಕೆ ತಲೆಕೆಡಿಸಿಕೊಳ್ಳಬೇಡಿ- ಕೋಟಾಗೆ ರಘುಪತಿ ಭಟ್ ಬೆಂಬಲ

    ಉಡುಪಿ: ಸಿಂಪಲ್ ಶ್ರೀನಿವಾಸ ಎಂದು ಖ್ಯಾತಿ ಪಡೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆರು ಕೋಟಿ ಮನೆ ಕಟ್ಟುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಇದೆಲ್ಲಾ ಕಾಮನ್, ಯು ಡೋಂಟ್ ವರಿ ಪೂಜಾರ್ರೆ ಎಂದಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಶಾಸಕ, ಮಂತ್ರಿಯಾದವರು ಮನೆ ಕಟ್ಟುವುದು ಅಪರಾಧವಲ್ಲ. ಭ್ರಷ್ಟಾಚಾರ ಮತ್ತು ಅವ್ಯವಹಾರ ಮಾಡಿದರೆ ಅದು ಅಪರಾಧ. ಆ ಫೋಟೋ ನೋಡುವಾಗಲೇ ಗೊತ್ತಾಗುತ್ತದೆ ಅದು ಸುಮಾರು 60 ಲಕ್ಷದ ಮನೆ. ಮನೆ ಕಂಪ್ಲೀಟ್ ಆಗುವಾಗ ಸುಮಾರು 80 ಲಕ್ಷ ರೂ. ಬೇಕಾಗಬಹುದು. ಮೂರು ಅವಧಿಗೆ ಕೋಟ ಶಾಸಕರಾಗಿ ಆಯ್ಕೆಯಾದವರು, ಶ್ರೀನಿವಾಸ ಪೂಜಾರಿ ಅವರಿಗೆ ಸಂಬಳ, ಹಲವಾರು ಭತ್ಯೆಗಳು ಬರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಕೋಟ ಶ್ರೀನಿವಾಸ ಪೂಜಾರಿ ಸಚಿವ ಸ್ಥಾನ ತಪ್ಪಿಸಲು ಕುತಂತ್ರ

    ಕೋಟಾ 50 ಕೋಟಿ ಬಂಗಲೆ ಕಟ್ಟಲು ಹೊರಟಿಲ್ಲ
    ಕೋಟಾ ಶ್ರೀನಿವಾಸ ಪೂಜಾರಿ ದೊಡ್ಡ ಬಂಗಲೆಯನ್ನು ಕಟ್ಟಿಸುತ್ತಿಲ್ಲ. ಬೇರೆ ನಾಯಕರ ತರಹ 50 ಕೋಟಿ ಮನೆ ಕಟ್ಟಲು ಹೊರಟಿಲ್ಲ ಎಂದು ಕೋಟಿ ಮನೆಯೊಡೆಯರಿಗೆ, ವಿರೋಧಿಗಳಿಗೆ ಕುಟುಕಿದರು. ತಮ್ಮ ಸ್ವಂತ ಜಮೀನಿನಲ್ಲಿ ಹಲವು ವರ್ಷದ ಹೋರಾಟ ಮಾಡಿ, ಕನಸಿನ ಮನೆ ಕಟ್ಟುತ್ತಿದ್ದಾರೆ. ಶ್ರೀನಿವಾಸ ಪೂಜಾರಿಯವರೇ ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಡಿ. ರಾಜಕಾರಣದಲ್ಲಿ ಇಂತಹ ಅಪಪ್ರಚಾರ ಸಾಮಾನ್ಯ. ಇಂತಹದ್ದನ್ನೆಲ್ಲ ನಮ್ಮ ಜನ ನಂಬುವುದಿಲ್ಲ, ನಿಮ್ಮ ಮತದಾರರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

    ನೀವು ನಿಮ್ಮ ಕೆಲಸವನ್ನು ಮಾಡಿಕೊಂಡು ಹೋಗಿ. ಮಂತ್ರಿ ಮಂಡಲ ವಿಸ್ತರಣೆ ಆಗುತ್ತಿರುವಾಗ ಇಂತಹದ್ದೆಲ್ಲ ಸಾಮಾನ್ಯ. ಪೂಜಾರಿಯವರ ವಿರೋಧಿಗಳು, ಕಾಂಗ್ರೆಸ್ ಪಕ್ಷದವರು ಫೋಟೋ- ಬರಹ ಬಿಟ್ಟಿರಬಹುದು. ರಾಜಕೀಯಕ್ಕೆ ಬಂದ ಮೇಲೆ ಬೇಸರದ ನರ ಕಟ್ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ನನ್ನ ರಾಜಕೀಯ ಜೀವನದಲ್ಲಿ ಇಂತಹ ಹಲವು ಏರುಪೇರುಗಳನ್ನು ನೋಡಿದ್ದೇನೆ. ಎಲ್ಲವನ್ನೂ ದಿಟ್ಟವಾಗಿ ಎದುರಿಸಿ ಎಂದರು.

  • ಕೋಟ ಶ್ರೀನಿವಾಸ ಪೂಜಾರಿ ಸಚಿವ ಸ್ಥಾನ ತಪ್ಪಿಸಲು ಕುತಂತ್ರ

    ಕೋಟ ಶ್ರೀನಿವಾಸ ಪೂಜಾರಿ ಸಚಿವ ಸ್ಥಾನ ತಪ್ಪಿಸಲು ಕುತಂತ್ರ

    – ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ
    – 60 ಲಕ್ಷ ಮನೆಯನ್ನು 6 ಕೋಟಿ ಮನೆಯೆಂದು ವೈರಲ್

    ಉಡುಪಿ: ರಾಜ್ಯದಲ್ಲಿ ಒಂದು ಕಡೆಯಿಂದ ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿದ್ದಂತೆ, ಜನಪ್ರತಿನಿಧಿಗಳ ವಿರುದ್ಧ ಷಡ್ಯಂತ್ರ ಶುರುವಾಗಿದೆ. ಸಿಂಪಲ್ ಶ್ರೀನಿವಾಸ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಶುರುವಾಗಿದೆ.

    ಮಾಜಿ ಮುಜರಾಯಿ, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹುಟ್ಟೂರಿನಲ್ಲಿ 6 ಕೋಟಿ ರೂಪಾಯಿ ಮನೆ ಕಟ್ಟಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೋ ಮತ್ತು ಬರಹವನ್ನು ಹರಿಯಬಿಡಲಾಗಿದೆ. ಇದು ಉಡುಪಿ ಜಿಲ್ಲೆಯಾದ್ಯಂತ ಓಡಾಡಿ ಇದೀಗ ಭರೀ ಚರ್ಚೆಗೆ ಗ್ರಾಸವಾಗಿದೆ.

    ತಮ್ಮ ವಿರುದ್ಧ ಅಪಪ್ರಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಲೋಕಾಯುಕ್ತಕ್ಕೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಸುಮಾರು 60 ಲಕ್ಷ ಮೌಲ್ಯದ ಮನೆ ಇದು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಶ್ರೀನಿವಾಸ್ ಪೂಜಾರಿ ಲೋಕಾಯುಕ್ತರಿಗೆ ಪತ್ರ ಮೂಲಕ ವಿನಂತಿ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಕೋಟದಲ್ಲಿ ಶ್ರೀನಿವಾಸ ಪೂಜಾರಿ ಅವರಿಗೆ ಮಂತ್ರಿಸ್ಥಾನ ಸಿಗುತ್ತದೆ ಎಂದು ರಾಜಕೀಯ ವಿಶ್ಲೇಷಣೆಗಳು ನಡೆಯುತ್ತಿದೆ. ಶ್ರೀನಿವಾಸ ಪೂಜಾರಿ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಕುತಂತ್ರ ಮಾಡುವ ಬೆಳವಣಿಗೆಗಳು ಶುರುವಾಗಿದೆ. ಇದನ್ನೂ ಓದಿ: Exclusive: ಉಸಿರಿರೋತನಕ ಕೇಳಿ ಸಚಿವ ಸ್ಥಾನ ಪಡೆಯಲ್ಲ- ಕುಂದಾಪುರದ ವಾಜಪೇಯಿ ಹಾಲಾಡಿ ನೇರ ನುಡಿ

    ಲೋಕಾಯುಕ್ತರಿಗೆ ನನ್ನ ಎಲ್ಲಾ ಆಸ್ತಿಪಾಸ್ತಿಯ ವಿವರಗಳನ್ನು ನೀಡಿದ್ದೇನೆ. ಅವರೇ ಈ ಬಗ್ಗೆ ಸಂಪೂರ್ಣ ತನಿಖೆಯನ್ನು ಮಾಡಲಿ. ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಆಗುತ್ತಿದೆ. ಕಳೆದ ಮೂರು ವರ್ಷಗಳಿಂದ ಹಂತಹಂತವಾಗಿ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಒಟ್ಟು ಅಂಕಿ-ಅಂಶದ ಪ್ರಕಾರ ಒಂದು ರೂಪಾಯಿ ಕೂಡ ನನ್ನ ಆದಾಯಕ್ಕಿಂತ ಹೆಚ್ಚು ಖರ್ಚು ಆಗಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.

  • ಹಿಂದೂ ಧಾರ್ಮಿಕ ದತ್ತಿ ಇಲಾಖೆ, ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ

    ಹಿಂದೂ ಧಾರ್ಮಿಕ ದತ್ತಿ ಇಲಾಖೆ, ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ

    – ಸರ್ಕಾರದಿಂದ ಅಧಿಕೃತ ಆದೇಶ

    ಮಂಗಳೂರು: ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ.

    ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸೂಚನೆಯಂತೆ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ ಕೊಡುವ ಹಕ್ಕಿದೆ: ಸಚಿವ ಕೋಟ

    ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡಬೇಕು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾಧರಿಸಿ ಸರ್ಕಾರ ಆದೇಶ ನೀಡಿದೆ.