Tag: kota srinivasa poojary

  • ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧ: ಡಿಕೆಶಿ ವಿರುದ್ಧ ಕೋಟ ಪರೋಕ್ಷ ವಾಗ್ದಾಳಿ

    ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧ: ಡಿಕೆಶಿ ವಿರುದ್ಧ ಕೋಟ ಪರೋಕ್ಷ ವಾಗ್ದಾಳಿ

    ಬೆಳಗಾವಿ: ಸರ್ಕಾರ ಅಭದ್ರವಾಗಿದೆ ಅನ್ನೋದಕ್ಕಿಂತ ಭದ್ರವಾಗಿದೆ ಅನ್ನೋದೆ ಹೆಚ್ಚಿಸಲಿ. ಸ್ವಾಭಾವಿಕವಾಗಿ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಯಾವುದೇ ಪ್ರಕ್ರಿಯೆಗಳಲ್ಲಿ ಪಾಲ್ಗೊಂಡಿಲ್ಲ. ಪಾಲ್ಗೊಳ್ಳುವುದೂ ಇಲ್ಲ. ಆದ್ರೆ ಅಸ್ಥಿರಗೊಂಡಂತಹ ಸರ್ಕಾರವೊಂದು ತಾನಾಗಿಯೇ ಉರುಳಿ ಬಿದ್ರೆ ಅದಕ್ಕೆ ಬಿಜೆಪಿ ಜವಾಬ್ದಾರಿ ಅಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಇಲ್ಲಿಯವರೆಗೆ ಭದ್ರವಾಗಿರಲಿಲ್ಲ. ಅಭದ್ರತೆಯಲ್ಲಿ ಇತ್ತು. ಅವರ ಆಂತರಿಕ ವಿವಾದಗಳು ಒಂದಷ್ಟು ಪರಾಕಷ್ಟೆಗೇರಿ, ಬಹುತೇಕವಾಗಿ ಸರ್ಕಾರ ತನ್ನ ಕುಸಿತವನ್ನು ಕಾಣಲು ಇಂದಿನ ಅಧಿವೇಶನದ ಸಂದರ್ಭದಲ್ಲಿ ದಟ್ಟವಾಗಿ ಕಂಡುಬಂತು ಅಂತ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ್ ಜಾರಕಿಹೊಳಿಯವರು ಮಾನಸಿಕವಾಗಿ ಸರ್ಕಾರದಿಂದ ದೂರ ಉಳಿದು ಬಹಳ ಸಮಯವಾಗಿದೆ. ಈ ವಿಚಾರ ಸಾಮಾನ್ಯವಾಗಿ ಇಡೀ ರಾಜ್ಯದ ಜನತೆಗೆ ಗೊತ್ತಾಗಿರೋ ವಿಚಾರವಾಗಿದೆ. ಆದ್ರೆ ಅಧಿಕೃತವಾಗಿ ಇನ್ನಷ್ಟೇ ಆಗಬೇಕಾಗಿದೆ. ಇದೇ ವೇಳೆ ಸಚಿವ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಗಲಾಟೆ ಸರ್ಕಾರದ ಮೇಲೆ ಪರಿಣಾಮ ಬೀರುತ್ತದಾ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧವಾಗಿದೆ. ಯಾಕಂದ್ರೆ ಇಲ್ಲಿ ಬಹಳ ವರ್ಷಗಳ ಕಾಲ ರಾಜಕಾರಣ ಮಾಡಿದವರ ಮೇಲೆ ಇದು ಪರಿಣಾಮ ಬೀರಿದೆ. ಈ ಕುರಿತು ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಅದಷ್ಟೇ ಮುಂದಿರುವಂತಹ ವಿಚಾರವಾಗಿದೆ. ಆದ್ರೆ ಈ ವಿಚಾರದಲ್ಲಿ ಬಿಜೆಪಿ ಸ್ಪಷ್ಟವಾದ ನಿಲುವನ್ನು ಹೊಂದಿದೆ ಅಂದ್ರು.

    ಇಂದಿನ ಸಂದಿಗ್ಧ ಸ್ಥಿತಿಯಲ್ಲಿ ಪಕ್ಷಕ್ಕೆ 10 ಮಂದಿ ಶಾಸಕರು ಬಂದ್ರೂ ಬೆಂಬಲ ಕೊಡುವುದಾಗಿ ಈಗಾಗಲೇ ರಾಜ್ಯಾಧ್ಯಕ್ಷರು ಹಾಗೂ ಬಿಜೆಪಿಯ ಎಲ್ಲಾ ನಾಯಕರು ಸ್ಪಷ್ಟವಾಗಿ ಹೇಳಿದ್ದೇವೆ. ಅಲ್ಲದೇ ಸರ್ಕಾರ ರಚನೆ ಮಾಡುತ್ತೇವೆ. ರಾಜ್ಯದ ಜನರ ಭಾವನೆ ಅವರು ಬಿಜೆಪಿಯೇ ಅಧಿಕಾರಕ್ಕೆ ಬರಬೇಕು ಅನ್ನೊದು ಇದೆ. ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿಯವರು ಬಿಜೆಪಿಯವರ ಸಂಪರ್ಕದಲ್ಲಿದ್ದಾರೆ ಅನ್ನೋ ಗುಮಾನಿಯ ಕುರಿತು ಮಾತನಾಡಿದ ಶ್ರೀನಿವಾಸ ಪೂಜಾರಿ, ಸ್ವಾಭಾವಿಕವಾಗಿ ಎಲ್ಲಿ ತೃಪ್ತಿಯಾಗುತ್ತದೋ ಆ ಕಡೆ ಅವರು ಗಮನವನ್ನು ಕೊಡುತ್ತಿದ್ದಾರೆ. ಹಾಗೆಯೇ ಅವರು ಪಕ್ಷಕ್ಕೆ ಬರಬೇಕು ಅನ್ನುವ ಆಸೆಯಿದೆ. ಅವರು ಬರುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಒಟ್ಟಿನಲ್ಲಿ ರಮೇಶ್ ಜಾರಕಿಹೊಳಿಯವರು ಪಕ್ಷಕ್ಕೆ ಬಂದ್ರೆ ಸ್ವಾಗತಿಸುವುದಾಗಿ ಅವರು ತಿಳಿಸಿದ್ರು.

    ಉತ್ತರ ಕನ್ನಡ ಶಾಶ್ವತವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಇಲ್ಲಿಯ ಜನ ಜೀವನ, ಮೂಲಭೂತ ಸೌಕರ್ಯ, ನೀರಾವರಿ, ಆರೋಗ್ಯ ಹಾಗೂ ಶಿಕ್ಷಣದಲ್ಲಿ ಕನಿಷ್ಠ ಪ್ರಗತಿಯಲ್ಲಿದೆ ಅನ್ನುವ ಸದ್ಯದ ಅಂಕಿ-ಅಂಶ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಕಡೆ ವಿಶೇಷವಾದ ಗಮನಕೊಡಬೇಕು ಅನ್ನೋ ಒತ್ತಾಯವನ್ನು ನಾವು ಸದನದಲ್ಲಿ ಮಾಡಿದ್ದೇವೆ. ಬರೀ ಮಾತುಗಳಲ್ಲಿ ಹೇಳಿದ್ರೆ ಸಾಲದು. ಸರ್ಕಾರ ಈ ಬಗ್ಗೆ ದಟ್ಟವಾದ ನಿಲುವು ತೆಗೆದುಕೊಳ್ಳಬೇಕು. ಈ ಮೂಲಕ ಉತ್ತರ ಕರ್ನಾಟಕ ಅಭಿವೃದ್ಧಿಗೆ ಕೆಲಸ ಮಾಡಬೇಕು ಅಂದ್ರು.

    ಒಟ್ಟಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಈ ಹಿಂದೆಯೂ ಬಡವರ ಪರ ಕೆಲಸ ಮಾಡಿದೆ. ಮುಂದೆಯೂ ಬಡವರ ಪರ ಕೆಲಸ ಮಾಡಲಿದೆ ಅಂತ ಅವರು ತಿಳಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಎಚ್‍ಡಿಕೆ ಟಿಪ್ಪು ಜಯಂತಿ ಆಚರಿಸ್ತಿರೋದು ಯಾಕೆ: ಸರ್ಕಾರದ ರಹಸ್ಯ ತಿಳಿಸಿದ ಕೋಟ

    ಸಿಎಂ ಎಚ್‍ಡಿಕೆ ಟಿಪ್ಪು ಜಯಂತಿ ಆಚರಿಸ್ತಿರೋದು ಯಾಕೆ: ಸರ್ಕಾರದ ರಹಸ್ಯ ತಿಳಿಸಿದ ಕೋಟ

    ಉಡುಪಿ: ಟಿಪ್ಪು ಜಯಂತಿ ಆಚರಿಸದೇ ಇದ್ದರೆ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲವನ್ನು ವಾಪಸ್ ಪಡೆಯಬಹುದು ಎನ್ನುವ ಹೆದರಿಕೆಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಬಾರಿ ಆಚರಣೆಗೆ ಮುಂದಾಗಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ರಾಜ್ಯ ಸರ್ಕಾರದ ಮಾನಸಿಕತೆ ವಿಚಿತ್ರವಾಗಿದೆ. ಅಲ್ಪಸಂಖ್ಯಾತರ ಮತ ಪಡೆಯಲು ಟಿಪ್ಪು ಜಯಂತಿಯ ನಾಟಕವಾಡ್ತಿದೆ. ಟಿಪ್ಪು ಜಯಂತಿ ಮಾಡದೇ ಇದ್ರೆ ಸಿದ್ದರಾಮಯ್ಯ ಬೆಂಬಲ ಹಿಂದೆ ಪಡಿತಾರೆ ಅಂತ ಕುಮಾರಸ್ವಾಮಿಗೆ ಹೆದರಿಕೆ ಎಂದು ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಬಿಜೆಪಿ ವಿರೋಧವಿದೆ. ಟಿಪ್ಪು ಕ್ರೌರ್ಯದ ಸಂಕೇತ. ಟಿಪ್ಪು ಕನ್ನಡ ವಿರೋಧಿ ಧರ್ಮಾಂಧನ ಜಯಂತಿ ಮಾಡಿದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುತ್ತೆ ಎಂದು ಎಚ್ಚರಿಕೆ ನೀಡಿದರು.

    ಸರಕಾರ ಟಿಪ್ಪು ಜಯಂತಿ ಕೈ ಬಿಡಬೇಕು. ಸಿದ್ದರಾಮಯ್ಯ ಸವಾಲು ಹಾಕಿ ಟಿಪ್ಪು ಜಯಂತಿ ಆಚರಿಸಿದ್ರು. ಜನರು ಚುನಾವಣೆಯಲ್ಲಿ ಅವರನ್ನು ತಿರಸ್ಕರಿಸಿದರು. ಟಿಪ್ಪು ಜಯಂತಿ ಆಚರಿಸಿದ್ರೆ ರಾಜ್ಯಾದ್ಯಂತ ವಿರೋಧ ಎದುರಿಸಬೇಕಾಗುತ್ತೆ ಅಂತ ರಾಜ್ಯ ಮುಖ್ಯ ಕಾರ್ಯದರ್ಶಿ ಗೆ ಪತ್ರ ಬರೆದಿದ್ದೇನೆ. ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಪ್ರಕಟಿಸಬೇಡಿ. ಆಮಂತ್ರಣ ಪತ್ರಿಕೆಯಲ್ಲಿ ಬಿಜೆಪಿ ನಾಯಕರ ಹೆಸರು ಬೇಡ ಅಂತ ಉಡುಪಿ ಜಿಲ್ಲಾಡಳಿತಕ್ಕೂ ಸೂಚನೆ ನೀಡಿದ್ದೇನೆ ಎಂದರು.

    ಪ್ರಕಾಶ್ ರೈ ವಿರುದ್ಧ ಗುಡುಗು:
    ಇದೇ ಸಂದರ್ಭದಲ್ಲಿ ಅಯ್ಯಪ್ಪ ದೇವರೇ ಅಲ್ಲ ಅಂತ ಹೇಳಿಕೆ ನೀಡಿದ ಪ್ರಕಾಶ್ ರೈ ವಿರುದ್ಧ ಗುಡುಗಿದ ಅವರು, ಪ್ರಕಾಶ್ ರೈ ಗೌರಿಯ ಮಾನಸಿಕತೆಯಿಂದ ಇನ್ನೂ ಹೊರಬಂದಿಲ್ಲ. ಗೌರಿಯ ಹತ್ಯೆ ಬಗ್ಗೆ ನಮಗೆಲ್ಲ ನೋವಿದೆ. ಯಾವ ಹಿಂಸೆಯನ್ನೂ ಸಹಿಸಲು ನಮಗೆ ಸಾಧ್ಯವಿಲ್ಲ. ಗೌರಿ ಹಿಂದೂ ಧರ್ಮ ಧರ್ಮವೇ ಅಲ್ಲ ಅಂದಿದ್ಳು. ಹಿಂದೂ ದೇವರು ದೇವರೇ ಅಲ್ಲ ಅಂದಿದ್ದಳು. ಆ ಮಾನಸಿಕತೆಯಿಂದ ಪ್ರಕಾಶ್ ರೈ ಹೊರ ಬಂದಿಲ್ಲ ಅನ್ನೋದೇ ದುಃಖದ ವಿಚಾರ ಅಂದ್ರು.

    ಬುದ್ಧಿಜೀವಿಗಳು, ನಗರ ನಕ್ಸಲರ ಮಾತಿಗೆ ಅವರೇ ಸ್ಪಷ್ಟನೆ ಕೊಡಬೇಕು. ಇತರ ಧರ್ಮಗಳ ವಿಚಾರವನ್ನು ಆಯಾ ಧರ್ಮಗಳು ನಿರ್ಧರಿಸುತ್ತದೆ. ಹಿಂದೂ ಧರ್ಮದ ವಿಚಾರದಲ್ಲಿ ನ್ಯಾಯಾಲಯ, ಸರ್ಕಾರ ಹಸ್ತಕ್ಷೇಪ ಮಾಡುತ್ತದೆ. ಶಬರಿಮಲೆ ವಿಚಾರದಲ್ಲಿ ಧಾರ್ಮಿಕ ನಂಬಿಕೆಗೆ ಬೆಲೆ ಕೊಡಬೇಕು. ನ್ಯಾಯಾಲಯಕ್ಕೆ ಮೇಲ್ಮನವಿ ಮಾಡಿದ ನಂತರವೂ ಪಿಣರಾಯಿ ವಿಜಯನ್ ವರ್ತನೆ ಸರಿಯಾಗಿಲ್ಲ. ನಂಬಿಕೆಯ ಮೇಲಿನ ಬಲಾತ್ಕಾರ, ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ ಅಂತ ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಣವೇಷಧಾರಿಯಾಗಿ ದಂಡ ಹಿಡಿದು ನಡೆದ್ರು ಕೋಟ ಶ್ರೀನಿವಾಸ ಪೂಜಾರಿ

    ಗಣವೇಷಧಾರಿಯಾಗಿ ದಂಡ ಹಿಡಿದು ನಡೆದ್ರು ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ: ವಿಜಯ ದಶಮಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟ ಗ್ರಾಮದಲ್ಲಿ ಪಥ ಸಂಚಲನ ನಡೆಯಿತು.

    ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬಿಳಿ ಅಂಗಿ, ಕಂದು ಬಣ್ಣದ ಪ್ಯಾಂಟ್, ಕಪ್ಪು ಟೋಪಿ, ಬೆಲ್ಟ್, ಶೂ ಧರಿಸಿ ಕೈಯಲ್ಲಿ ದಂಡ ಹಿಡಿದು ಪಥಸಂಚಲನದಲ್ಲಿ ಭಾಗವಹಿಸಿದ್ರು.

    ಘೋಷಣೆ ಸಹಿತ ಕೋಟ ಮೂರುಕೈ ಪ್ರದೇಶದಿಂದ ಸಾಗಿಬಂದ ಸ್ವಯಂಸೇವಕರ ಪಥ ಸಂಚಲನವು ಕೋಟ ಬಸ್ ನಿಲ್ದಾಣದವರೆಗೆ ಸಾಗಿತು. ಬಳಿಕ ಕೋಟ ಹಿರೇ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು. ಎಂಎಲ್‍ಸಿ ಆಗಿರುವ ಕೋಟ ಶ್ರೀನಿವಾಸ ಪೂಜಾರಿ ಈ ಬಾರಿ ಡಿಫರೆಂಟ್ ಲುಕ್‍ನಲ್ಲಿ ಕಂಡುಬಂದ್ರು. ರಾಜಕಾರಣಿಯಾಗಿ ಎಂಎಲ್ ಸಿಯಾದ್ರೂ ಆರ್ ಎಸ್ ಎಸ್ ಚಟುವಟಿಕೆಯಲ್ಲಿ ಕೋಟ ತೊಡಗಿಸಿಕೊಂಡಿದ್ದಾರೆ. ಸೀಡ್ ಬಾಲ್, ಶಾಖೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿದ್ಯಾರ್ಥಿ. ಬಹಳ ಶಿಸ್ತಿನಿಂದ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾ ಬಂದಿದ್ದೇನೆ. ವಾರ್ಷಿಕ ಪಥ ಸಂಚಲನ ದಲ್ಲಿ ಪಾಲ್ಗೊಂಡಿದ್ದೇನೆ. ಈ ಬಗ್ಗೆ ನನಗೆ ಗೌರವ ಇದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv