Tag: Kotekar Bank Robbery

  • Kotekar Bank Robbery; ಕೇವಲ 4 ದಿನದಲ್ಲಿ ಪ್ರಕರಣ ಭೇದಿಸಿ ಎಲ್ಲಾ ಚಿನ್ನಾಭರಣ ವಶಕ್ಕೆ: ಗುಂಡೂರಾವ್

    Kotekar Bank Robbery; ಕೇವಲ 4 ದಿನದಲ್ಲಿ ಪ್ರಕರಣ ಭೇದಿಸಿ ಎಲ್ಲಾ ಚಿನ್ನಾಭರಣ ವಶಕ್ಕೆ: ಗುಂಡೂರಾವ್

    ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ‌ (Kotekar Bank Robbery) ಪ್ರಕರಣವನ್ನು ಕೇವಲ ನಾಲ್ಕು ದಿನದಲ್ಲಿ ಭೇದಿಸಿ ಎಲ್ಲಾ ಚಿನ್ನಾಭರಣವನ್ನ ವಶಪಡಿಸಿಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

    ಪ್ರಕರಣದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣ ಭೇದಿಸಿದ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅತೀ ಶೀಘ್ರದಲ್ಲೇ ಪೊಲೀಸರು ಈ ದರೋಡೆ ಪ್ರಕರಣವನ್ನ ಭೇದಿಸಿದ್ದಾರೆ. ಇಂತಹ ಸಮಾಜಘಾತುಕ ಶಕ್ತಿಗಳನ್ನ ನಿಯಂತ್ರಿಸುವುದು, ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವುದು ಸರ್ಕಾರದ ಕರ್ತವ್ಯ. ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳು ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ಸುರಕ್ಷತೆಯ ಬಗ್ಗೆ ಎಲ್ಲಾ ಹಣಕಾಸು ಸಂಸ್ಥೆಗಳಿಗೆ ಸುರಕ್ಷತೆಯ ಮಾರ್ಗಸೂಚಿ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ,ಹಿಂದಿರುವವರು ಯಾರು ಎಲ್ಲವನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಗಳ ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ – ಥಾವರ್ ಚಂದ್ ಗೆಹ್ಲೋಟ್

    ಮಸಾಜ್ ಪಾರ್ಲರ್ ಮೇಲೆ ರಾಮ್ ಸೇನೆ ಕಾರ್ಯಕರ್ತರ ದಾಳಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಏನಾದರೂ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ಪೊಲೀಸರ ಗಮನಕ್ಕೆ ತರಬೇಕು. ಈ ರೀತಿ ಗೂಂಡಾಗಿರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತರೋದು ಸರಿಯಲ್ಲ. ಈ ರೀತಿಯ ಘಟನೆಗಳು ನಡೆದಾಗ ಬಂಡವಾಳ ಹೂಡಿಕೆ, ಧಾರ್ಮಿಕ ಕ್ಷೇತ್ರಗಳಿಗೆ ಬರುವುದರ ಮೇಲೆ ಪರಿಣಾಮ ಬೀಳುತ್ತದೆ. ಬಂಡವಾಳ ಹೂಡುವವರು ಇಲ್ಲಿ ಸುರಕ್ಷತೆ ಇದ್ಯಾ ಎಂದು ಕೇಳುತ್ತಾರೆ. ಇತ್ತೀಚೆಗೆ ಬೆಂಗಳೂರಿಗೆ ಬಂದ ಬಂಡವಾಳ ಹೂಡಿಕೆದಾರರು ಇಲ್ಲಿ ಸುರಕ್ಷತೆ ಇದ್ಯಾ ಎಂದು ಕೇಳಿದ್ದರು. ರಾಮ್ ಸೆಮಿರಲಿ, ಶ್ರೀರಾಮ ಸೇನೆ ಇರಲಿ, ಈ ರೀತಿ ಮಾಡೋದು ಖಂಡಿತ ಸರಿಯಲ್ಲ. ಅವರ ಮೇಲೆ ಕಟ್ಟು ನಿಟ್ಟಿನ ಕ್ರಮ ಆಗುತ್ತದೆ. ಇಂಥವರ ವಿರುದ್ಧ ಎಲ್ಲರೂ ಧ್ವನಿ ಎತ್ತುವ ಅವಶ್ಯಕತೆ ಇದೆ. ಕೆಲವರು ಈ ಘಟನೆಯನ್ನು ಇನ್ನೂ ಖಂಡಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ

    ಸಿಎಂ ಬದಲಾವಣೆ ವಿಚಾರದ ಕುರಿತು ಮಾತನಾಡಿ, ಇದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಒಬ್ಬರು ಸಿಎಂ ಇರುವಾಗ ಇನ್ನೊಬ್ಬರು ಸಿಎಂ ಆಗುವ ಪ್ರಶ್ನೆ ಬರೋದಿಲ್ಲ. ಈ ಬಗ್ಗೆ ಏನೇ ಇದ್ದರೂ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಿದ್ದರಾಮಯ್ಯ ಎಲ್ಲರಿಗೂ 100% ವಿಶ್ವಾಸ ಇರೋ ನಾಯಕ ಎಂದರು. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವದ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

    ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಉಲ್ಲೇಖ ವಿಚಾರವಾಗಿ ಪ್ರತಿಕ್ರಿಯಿಸಿ, ದೇಶದಲ್ಲಿ ಯಾವುದೇ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನ ಉಳಿಸಿಕೊಂಡು ನಾಲ್ಕೇ ತಿಂಗಳಲ್ಲಿ ಎಲ್ಲವನ್ನೂ ಅನುಷ್ಠಾನಗೊಳಿಸಿದೆ. ಎಷ್ಟೇ ಜನ ಟೀಕೆಗಳು ಮಾಡಿದರೂ, ನಾವು ನಮ್ಮ ಬದ್ಧತೆಯನ್ನ ತೋರಿಸಿದ್ದೇವೆ. ಈ ಗ್ಯಾರಂಟಿಗಳನ್ನು ಅಷ್ಟು ಬೇಗ ಜಾರಿಗೆ ಹೇಗೆ ತಂದಿರೀ ಎಂದು ಕೇಂದ್ರ ಸರ್ಕಾರದವರೇ ಕೇಳಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ತಾಯ್ನಾಡಿಗೆ ಬಂದಿಳಿದ ಶಿವಣ್ಣ

  • ಕೋಟೆಕಾರು ಬ್ಯಾಂಕ್‌ ದರೋಡೆ ಕೇಸ್‌ – ದರೋಡೆಕೋರನಿಗೆ ಗುಂಡೇಟು

    ಕೋಟೆಕಾರು ಬ್ಯಾಂಕ್‌ ದರೋಡೆ ಕೇಸ್‌ – ದರೋಡೆಕೋರನಿಗೆ ಗುಂಡೇಟು

    ಮಂಗಳೂರು: ಇಲ್ಲಿನ ಕೋಟೆಕಾರು ಬ್ಯಾಂಕ್‌ ದರೋಡೆ (Kotekar Bank Robbery) ಪ್ರಕರಣದಲ್ಲಿ ಮುಂಬೈ ಮೂಲದ ಆರೋಪಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

    ಮುಂಬೈ ಮೂಲದ ಆರೋಪಿ ಕಣ್ಣನ್ ಮಣಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ತಮಿಳುನಾಡಿನಿಂದ ಮಂಗಳೂರಿಗೆ (Mangaluru) ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಆರೋಪಿ ಕಣ್ಣನ್‌ ತಪ್ಪಿಸಿಕೊಳ್ಳಲು ಯತ್ನಿಸಿದ. ಇದನ್ನೂ ಓದಿ: Kotekar Bank Robbery | ಬ್ಯಾಂಕ್‌ನಲ್ಲಿ ಚಿನ್ನ ದೋಚಲು ನಮಾಜ್ ಟೈಂ ಸೂಚಿಸಿದ್ದೇ ಆ ಸ್ಥಳೀಯ ವ್ಯಕ್ತಿ – ರಹಸ್ಯ ಸ್ಫೋಟ

    ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಶೂಟೌಟ್‌ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಣ್ಣನ್‌ ಮಣಿ ಮೇಲೆ ಶೂಟೌಟ್‌ ಮಾಡಲಾಗಿದೆ.

    ನಿನ್ನೆ ತಮಿಳುನಾಡಿನ ತಿರುವನ್ನಲಿಯ ಪದ್ಮನೇರಿ ಗ್ರಾಮವೊಂದರಲ್ಲಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸದ್ಯ ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ಆರೋಪಿಯನ್ನು ದಾಖಲಿಸಲಾಗಿದೆ. ಸಿಸಿಬಿ ಇನ್‌ಸ್ಪೆಕ್ಟರ್‌ ರಫೀಕ್ ಫೈರಿಂಗ್ ಮಾಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಸಾಲುಸಾಲು ದರೋಡೆ – ಜಿಲ್ಲೆಗಳಲ್ಲಿ ಪೊಲೀಸರು ಹೈಅಲರ್ಟ್, ಮುನ್ನೆಚ್ಚರಿಕೆಗೆ ಭದ್ರತಾ ಪಾಠ

  • ಸ್ಥಳೀಯರ ಸಹಾಯದಿಂದಲೇ ಮಂಗಳೂರು ಬ್ಯಾಂಕ್‌ ಲೂಟಿ! – ಪೊಲೀಸ್‌ ತನಿಖೆಯ ಸ್ಫೋಟಕ ಮಾಹಿತಿ

    ಸ್ಥಳೀಯರ ಸಹಾಯದಿಂದಲೇ ಮಂಗಳೂರು ಬ್ಯಾಂಕ್‌ ಲೂಟಿ! – ಪೊಲೀಸ್‌ ತನಿಖೆಯ ಸ್ಫೋಟಕ ಮಾಹಿತಿ

    – ದರೋಡೆಗೆ ಕೈಜೋಡಿಸಿದ್ದ ವ್ಯಕ್ತಿಯ ಪತ್ತೆಗೆ ಬಲೆ
    – ಕೇವಲ 5 ನಿಮಿಷದಲ್ಲಿ 10 ಕೋಟಿ ದೋಚಿ ಪರಾರಿ

    ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ (Kotekar Co Operative Bank Robbery) ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಚಿನ್ನಾಭರಣವನ್ನು (Gold) ದೋಚಲು ದರೋಡೆಕೋರರು ಭಾರೀ ಪ್ಲಾನ್ ಮಾಡಿದ್ದಾರೆ.ಆದರೆ ದರೋಡೆಕೋರರ ಕೃತ್ಯಕ್ಕೆ ಸಹಕಾರ ನೀಡಿದ್ದು ಸ್ಥಳೀಯ ವ್ಯಕ್ತಿಯೇ ಎಂಬ ಸ್ಪೋಟಕ ಮಾಹಿತಿ ಪೊಲೀಸರಿಗೆ (Police) ಸಿಕ್ಕಿದೆ.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಕಳೆದ ಕೆಲ ದಿನಗಳಿಂದ ಬಿಜಾಪುರ,ಬೀದರ್, ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣಗಳೇ ಸಾಕ್ಷಿ.ಅದರಲ್ಲೂ ಮಂಗಳೂರಿನ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ರಾಜ್ಯದಲ್ಲೇ ಅತೀ ದೊಡ್ಡ ದರೋಡೆ ಪ್ರಕರಣವಾಗಿದೆ.

     

    ಬ್ಯಾಂಕ್‌ನಲ್ಲಿದ್ದ ಸುಮಾರು 10 ಕೋಟಿಗೂ ಅಧಿಕ ಮೌಲ್ಯದ ಹಣ, ಚಿನ್ನಾಭರಣವನ್ನು ಹಾಡಹಗಲಲ್ಲೇ ದರೋಡೆ ಮಾಡಲಾಗಿದ್ದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದರೋಡೆ ನಡೆದು ದಿನ ಕಳೆದರೂ ಈವರೆಗೂ ಆರೋಪಿಗಳ ಒಂದೇ ಒಂದು ಸುಳಿವು ಸಿಕ್ಕಿಲ್ಲ. ಭಾರೀ ಪ್ಲಾನ್ ಮಾಡಿಕೊಂಡೇ ದರೋಡೆಗೆ ಬಂದಿದ್ದ ದರೋಡೆಕೋರರು, ಪರಾರಿಯಾಗಲು ಅಷ್ಟೇ ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದ ದರೋಡೆ ಮಾಡಲು ಸ್ಥಳೀಯ ವ್ಯಕ್ತಿಯೋರ್ವನ ಸಹಕಾರ ಇದೆ ಎಂಬ ಸ್ಪೋಟಕ ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಂಗಳೂರು ಬ್ಯಾಂಕ್‌ ಲೂಟಿ – ಕೇರಳದಿಂದ ಬೋಟ್‌ನಲ್ಲಿ ತಮಿಳುನಾಡಿಗೆ ತೆರಳಿದ್ರಾ ಖದೀಮರು?

    ಈ ಬ್ಯಾಂಕಿನ ಬಗ್ಗೆ ಸಂಪೂರ್ಣ ಮಾಹಿತಿ ಇರುವ ಸ್ಥಳೀಯ ವ್ಯಕ್ತಿಯೇ ಈ ದರೋಡೆಯ ಮಾಸ್ಟರ್ ಮೈಂಡ್ ಎನ್ನುವುದು ಪೊಲೀಸರಿಗೆ ಸಿಕ್ಕಿರುವ ಸದ್ಯದ ಮಾಹಿತಿ. ಇದಕ್ಕೆ ಪೂರಕವೆಂಬಂತೆ ಸಿಸಿ ಕ್ಯಾಮೆರಾ ಡಿವಿಆರ್ ಬದಲಾಯಿಸುವ ದಿನ, ಚಿನ್ನ ಪರಿವೀಕ್ಷಕ ಲಾಕರ್ ಓಪನ್ ಮಾಡುವ ಸಮಯ, ದರೋಡೆ ಮಾಡಲು ನಿಗದಿಮಾಡಿದ್ದ ದಿನ ಶುಕ್ರವಾರ ಮಧ್ಯಾಹ್ನ 1 ಗಂಟೆ.

     

    ಬ್ಯಾಂಕ್‌ ಆಸುಪಾಸಿನಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದು ಶುಕ್ರವಾರ ಮಧ್ಯಾಹ್ನ 1 ರಿಂದ 1:30 ರೊಳಗೆ ಅಂಗಡಿಯ  ವ್ಯಾಪಾರಿಗಳು ಮಸೀದಿಗೆ ನಮಾಜ್‌ಗೆ ಹೋಗುತ್ತಾರೆ. ಹೀಗಾಗಿ ಕೇವಲ 5 ನಿಮಿಷದಲ್ಲೇ ಸಿಕ್ಕಿದ ಚಿನ್ನಾಭರಣವನ್ನು ದೋಚಿಕೊಂಡು ಬರೋ ಪ್ಲಾನ್ ಮಾಡಿದ್ದಾರೆ. ಅದರಂತೆ ಸರಿಯಾಗಿ 1 ಗಂಟೆ 10 ನಿಮಿಷಕ್ಕೆ ಬಂದ ದರೋಡೆಕೋರರು 1 ಗಂಟೆ 16 ನಿಮಿಷಕ್ಕೆ ಚಿನ್ನಾಭರಣವನ್ನು ಗೋಣಿ ಚೀಲಕ್ಕೆ ಹಾಕಿ  ಕಾರಿಗೆ ತುಂಬಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಬೆಳಗ್ಗೆಯೇ ತುಂತುರು ಮಳೆ

    ಬ್ಯಾಂಕ್ ದರೋಡೆ ಮಾಡಲು ಬೇಕಾದ ಎಲ್ಲಾ ಮಾಹಿತಿಯನ್ನ ಸ್ಥಳೀಯ ವ್ಯಕ್ತಿಯೇ ಮಾಡಿದ್ದಾನೆ ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ. ಆ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು ಆತನನನ್ನು ವಶಕ್ಕೆ ಪಡೆಯಲು ಹುಡುಕಾಟ ಮುಂದುವರಿಸಿದ್ದಾರೆ. ಒಟ್ಟಿನಲ್ಲಿ ಈ ದರೋಡೆಯ ಹಿಂದೆ ಸ್ಥಳೀಯರ ಕೈವಾಡ ಇದೆ ಎಂಬ ಅನುಮಾನ ನಿಜವಾಗುವ ಸಾಧ್ಯತೆಯಿದೆ.