Tag: Kothur Manjunath

  • ಚುನಾವಣೆ ಹೊಸ್ತಿಲಲ್ಲಿ ಆಪರೇಷನ್‌ ಕಾಂಗ್ರೆಸ್‌ – ಕೊತ್ತುರು ಬಾಂಬ್‌ಗೆ ಸಮೃದ್ಧಿ, ವೆಂಕಟಶಿವಾರೆಡ್ಡಿ ಸ್ಪಷ್ಟನೆ

    ಚುನಾವಣೆ ಹೊಸ್ತಿಲಲ್ಲಿ ಆಪರೇಷನ್‌ ಕಾಂಗ್ರೆಸ್‌ – ಕೊತ್ತುರು ಬಾಂಬ್‌ಗೆ ಸಮೃದ್ಧಿ, ವೆಂಕಟಶಿವಾರೆಡ್ಡಿ ಸ್ಪಷ್ಟನೆ

    ಕೋಲಾರ: ಲೋಕಸಭಾ ಚುನಾವಣೆ (Lok Saba Election) ಹೊಸ್ತಿಲಲ್ಲಿ ಆಪರೇಷನ್ ಕಾಂಗ್ರೆಸ್ (Operation Congress) ಶುರುವಾಗಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಇಂಥಾದೊಂದು ಅನುಮಾನಕ್ಕೆ ಕಾರಣವಾಗಿದ್ದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಸಿಡಿಸಿದ ಬಾಂಬ್.

    ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ದಿ ಮಂಜುನಾಥ್ (Samruddhi Manjunath) ಹಾಗೂ ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ (Venkatashiva Reddy) ಶೀಘ್ರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: ಜಿಮ್ಸ್ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ 38 ವಿದ್ಯಾರ್ಥಿಗಳು ಅಮಾನತು

     

    ಇಬ್ಬರು ಜೆಡಿಎಸ್ ಶಾಸಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಪರಮೇಶ್ವರ್‌ ಸಮ್ಮುಖದಲ್ಲಿ ಮಾತುಕತೆ ನಡೆದಿದೆ. ಸಚಿವ ಕೆ.ಹೆಚ್ ಮುನಿಯಪ್ಪ ಸಮ್ಮುಖದಲ್ಲಿ ಆಪರೇಷನ್ ನಡೆಯುತ್ತಿದೆ ಎಂದು ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಈ ಬೆಳವಣಿಗೆ ಜಿಲ್ಲೆಯಲ್ಲಿ ಹಾಗೂ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಸಂಸತ್ತಿನಲ್ಲಿ ಇಂದು ರಾಮ ಮಂದಿರ ಗೊತ್ತುವಳಿ: ಬಿಜೆಪಿ ಸಂಸದರಿಗೆ ವಿಪ್‌ ಜಾರಿ

    ಕೊತ್ತೂರು ಮಂಜುನಾಥ್ ಆಪರೇಷನ್ ಹಸ್ತ ಬಾಂಬ್‌ಗೆ ಜೆಡಿಎಸ್ ಶಾಸಕರು ಸ್ಪಷ್ಟನೆ ನೀಡಿದ್ದಾರೆ. ಕ್ಷೇತ್ರದ ಅಭಿವೃದ್ದಿಗಾಗಿ ಸಿಎಂ, ಡಿಸಿಎಂ ಭೇಟಿಯಾಗಿ ಅನುದಾನ ಕೇಳಿದ್ದು ನಿಜ. ಈ ವೇಳೆ ಅವರು ಪಕ್ಷಕ್ಕೆ ಬರುವಂತೆ ಕರೆದಿದ್ದು ನಿಜ. ಆದರೆ ನಾವು ಯಾವತ್ತೂ ಪಕ್ಷಕ್ಕೆ ಬರುವುದಾಗಿ ಹೇಳಿಲ್ಲ ಎಂದು ಶಾಸಕ ಸಮೃದ್ದಿ ಮಂಜುನಾಥ್ ಹಾಗೂ ಜಿ.ಕೆ.ವೆಂಕಟಶಿವಾರೆಡ್ಡಿ ಆಪರೇಷನ್ ವಿಚಾರವನ್ನು ತಳ್ಳಿಹಾಕಿದ್ದಾರೆ.

    ಒಟ್ಟಿನಲ್ಲಿ ಲೋಕಸಭೆ ಚುನಾವಣೆಯ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರುಗಳ ರಾಜಕೀಯ ಪ್ರಹಸನಗಳು ಶುರುವಾಗಿದೆ. ಆಪರೇಷನ್ ಹಸ್ತ ನಿಜವೇ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

     

  • ಕೆಲವರಿಗೆ ಹುಚ್ಚು ಹಿಡಿದು ಸಿಎಂ ಸ್ಥಾನದ ಬಗ್ಗೆ ಮಾತಾಡ್ತಾರೆ: ಕೊತ್ತೂರು ಮಂಜುನಾಥ್

    ಕೆಲವರಿಗೆ ಹುಚ್ಚು ಹಿಡಿದು ಸಿಎಂ ಸ್ಥಾನದ ಬಗ್ಗೆ ಮಾತಾಡ್ತಾರೆ: ಕೊತ್ತೂರು ಮಂಜುನಾಥ್

    ಕೋಲಾರ: ಕೆಲವರಿಗೆ ತಲೆ ಕೆಟ್ಟಿದೆ, ಹೀಗಾಗಿ ಹುಚ್ಚು ಹಿಡಿದು ಸಿಎಂ ಸ್ಥಾನದ ಕುರಿತು ಮಾತನಾಡುತ್ತಿದ್ದಾರೆ ಎಂದು ಕೋಲಾರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಹೇಳಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕೆಂಬ ಕಾಂಗ್ರೆಸ್‍ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ.

    ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ. ಇದರಿಂದ ಸರ್ಕಾರ ಸಹ ಯಾವುದೇ ತೊಂದರೆ ಇಲ್ಲದಂತೆ ನಡೆದುಕೊಂಡು ಹೋಗುತ್ತಿದೆ. ಈ ಸಮಯದಲ್ಲಿ ಅಭಿವೃದ್ಧಿಯ ಬಗ್ಗೆ ಸಿಎಂ ಹಾಗೂ ಡಿಸಿಎಂ ಬಳಿ ಮಾತಾಡಲಿ. ಅದು ಬಿಟ್ಟು ಪಿನ್ ಚುಚ್ಚುವವರನ್ನು ಪಕ್ಷದಿಂದ ದೂರ ಇಡುವಂತೆ ಹಿರಿಯರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸೌಹಾರ್ದಯುತ ಈದ್ ಮಿಲಾದ್ ಹಬ್ಬದಂದೇ ಕಿಡಿಗೇಡಿಗಳು ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ: ಉಮೇಶ್ ಜಾಧವ್

    ಎಲ್ಲರಿಗೂ ಮಂತ್ರಿ ಹಾಗೂ ಸಿಎಂ ಸ್ಥಾನ ಬೇಕು ಎಂದು ಕೇಳಿದರೆ ಹೇಗೆ? ನನಗೂ ಪಿಎಂ ಆಗಬೇಕೆಂದು ಆಸೆ ಇದೆ. ಆದರೆ ಕೈ ಎಲ್ಲಿಯವರೆಗೆ ಎಟುಕುವುದೋ ಅಷ್ಟಕ್ಕೆ ಆಸೆ ಪಡಬೇಕು. ಕೆಲಸ ಮಾಡಲು ಆಸಕ್ತಿ ಇದ್ದರೆ ಕೆಲಸ ಮಾಡಿ, ಅದನ್ನು ಬಿಟ್ಟು ನಮ್ಮ ಜಾತಿಯವರು ಸಿಎಂ ಆಗಬೇಕು ಎನ್ನುವುದನ್ನ ಬಿಡಿ ಎಂದಿದ್ದಾರೆ.

    ಇನ್ನೂ ಜಾತಿಯ ವಿಚಾರವಾಗಿ ಇಂತಹ ವೈದ್ಯರು, ಇಂತಹ ಎಸ್ಪಿ ಹಾಗೂ ಗಾಳಿಯನ್ನು ಅವರವರ ಜಾತಿಗೆ ವಿಂಗಡಣೆ ಮಾಡಿಕೊಳ್ಳಲಿ. ಇಂತಹ ವಿಚಾರಗಳನ್ನು ತಲೆಕೆಟ್ಟವರು ಮಾತ್ರ ಮಾತನಾಡುತ್ತಾರೆ ಎಂದು ಅವರು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕೋಮು ಸಂಘರ್ಷ – ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು: ವಿಜಯೇಂದ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟಿಟಿಡಿಗೆ 43 ಲಕ್ಷ ರೂ. ಮೌಲ್ಯದ ವಾಹನ ಕೊಡುಗೆ ನೀಡಿದ ಮಾಜಿ ಶಾಸಕ ಕೊತ್ತೂರು ಮಂಜುನಾಥ್

    ಟಿಟಿಡಿಗೆ 43 ಲಕ್ಷ ರೂ. ಮೌಲ್ಯದ ವಾಹನ ಕೊಡುಗೆ ನೀಡಿದ ಮಾಜಿ ಶಾಸಕ ಕೊತ್ತೂರು ಮಂಜುನಾಥ್

    ಕೋಲಾರ: ತಿರುಮಲ ತಿರುಪತಿ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಅನ್ನದಾಸೋಹಕ್ಕಾಗಿ ಹಣ್ಣು ತರಕಾರಿಗಳನ್ನು ಸಾಗಿಸುವ ಟ್ರಕ್ ಒಂದನ್ನು ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಕೊಡುಗೆ ನೀಡಿದ್ದಾರೆ.


    ಸುಮಾರು 43 ಲಕ್ಷ ರೂ. ಮೌಲ್ಯದ ಟ್ರಕ್ ವಾಹನವನ್ನು ಖುದ್ದು ಕೂತ್ತೂರು ಮಂಜುನಾಥ್ ತಿರುಪತಿ ತಿರುಮಲಕ್ಕೆ ತೆರಳಿ ಟಿಟಿಡಿ ಆಡಳಿತ ಮಂಡಳಿಗೆ ವಾಹನವನ್ನು ಹಸ್ತಾಂತರ ಮಾಡಿದರು. ಕಳೆದ ಒಂದು ವಾರದ ಹಿಂದೆಯಷ್ಟೇ 10 ಕೋಟಿ ರೂ. ತಾಲೂಕಿನ ದೇವಾಲಯಗಳ ಜೀರ್ಣೋದ್ದಾರ ಹಾಗೂ ಅಭಿವೃದ್ದಿಗಾಗಿ ನೀಡಿದ್ದರು. ಇದನ್ನೂ ಓದಿ: ಜಪಾನ್‌ ಯುವಕರು ಒಮ್ಮೆಯಾದರೂ ಭಾರತಕ್ಕೆ ಭೇಟಿ ನೀಡಬೇಕು: ಮೋದಿ ಆಹ್ವಾನ

    ಮುಳಬಾಗಲು ಕ್ಷೇತ್ರದಲ್ಲಿ ಪಕ್ಷತೀತವಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಅಪಾರ ಪ್ರಮಾಣದ ಅಭಿಮಾನಿಗಳ ಬಳಗ ಹೊಂದಿರುವ ಮಂಜುನಾಥ್ ಪಕ್ಷಭೇದ ಮೀರಿ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಹಿಂದೆ ಬಳ್ಳಾರಿಯ ಜನಾರ್ಧನ ರೆಡ್ಡಿ ಚಿನ್ನದ ಕಿರೀಟ ನೀಡಿದ್ರು, ರಾಜ್ಯದ ಸಾಕಷ್ಟು ಜನ ನಾಯಕರು ತಿರುಪತಿ ತಿರುಮಲಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಸುದ್ದಿಯಾಗಿದ್ರು. ಇದನ್ನೂ ಓದಿ: ರಾಷ್ಟ್ರೀಯತೆ ಪರಿಕಲ್ಪನೆ ಸಂವಿಧಾನದಿಂದ ಬಂದಿಲ್ಲ, ಅದು ಪ್ರಾಚೀನ ಬೇರುಗಳನ್ನು ಹೊಂದಿದೆ: JNU ಕುಲಪತಿ

  • ಮುಳುಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ!

    ಮುಳುಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ!

    ಕೋಲಾರ: ಮುಳುಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಮಂಜುನಾಥ್ (ಕೊತ್ತೂರು ಮಂಜುನಾಥ್) ಅವರ ನಾಮಪತ್ರ ತಿರಸ್ಕೃತಗೊಂಡಿದೆ.

    ನಕಲಿ ಜಾತಿ ಪ್ರಮಾಣ ಪತ್ರ ನಿಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಂಜುನಾಥ್ ಅವರ ನಾಮಪತ್ರವನ್ನು ಅಸಿಂಧುಗೊಳಿಸಿದೆ. ಕೋಲಾರ ಸಂಸದ ಮುನಿಯಪ್ಪ ಪುತ್ರಿ ನಂದಿನಿ ಕೂಡ ಮುಳುಬಾಗಿಲು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಮಂಜುನಾಥ್ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೆ ನಂದಿನಿ ನಾಮಪತ್ರವನ್ನು ವಾಪಸ್ ಪಡೆದ ಕಾರಣ ಈಗ ಮುಳುಬಾಗಿಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲದಂತಾಗಿದೆ.

    ಮುಳಬಾಗಿಲು ಕ್ಷೇತ್ರದ ಶಾಸಕ ಜಿ.ಮಂಜುನಾಥ್ ಜಾತಿ ಪ್ರಮಾಣಪತ್ರ ನಕಲೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ಜಾತಿ ಪ್ರಮಾಣಪತ್ರವನ್ನು ಅಸಿಂಧು ಎಂದು ಬುಧವಾರ ತೀರ್ಪು ನೀಡಿತ್ತು.

    ನಂದಿನಿಯವರು ನಾಮಪತ್ರವನ್ನು ವಾಪಸ್ ಪಡೆದಿದ್ದು ಯಾಕೆ ಎನ್ನುವ ಕಾರಣ ತಿಳಿದು ಬಂದಿಲ್ಲ.

    ಏನಿದು ಪ್ರಕರಣ?
    ಮುಳಬಾಗಿಲು ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿನ ಬುಡ್ಗ ಜಂಗಮ ಜಾತಿಗೆ ಸೇರಿದ್ದೇನೆ ಎಂದು 2013ರ ಚುನಾವಣೆ ಸಂದರ್ಭದಲ್ಲಿ ಮಂಜುನಾಥ್ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಬುಡ್ಗ ಜಂಗಮ ಅಂತಾ ಜಾತಿಯೇ ಇಲ್ಲ ಮಂಜುನಾಥ್ ಅವರಿಗೆ ಹೇಗೆ ಜಾತಿ ಪ್ರಮಾಣ ಪತ್ರ ನೀಡಲು ಸಾಧ್ಯ ಎಂದು ಮುಳುಬಾಗಿಲಿನ ಜೆಡಿಎಸ್ ಮುಖಂಡ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿ ಆಂಜಿನಪ್ಪ ಮತ್ತು ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ 2013ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.