Tag: Kovid

  • ಕೋವಿಡ್ ಮೂರನೇ ಅಲೆಯಲ್ಲ, ಮೂವತ್ತನೇ ಅಲೆ ಬಂದ್ರೂ ಹೆದರಲ್ಲ: ಕೆ.ಎಸ್. ಈಶ್ವರಪ್ಪ

    ಕೋವಿಡ್ ಮೂರನೇ ಅಲೆಯಲ್ಲ, ಮೂವತ್ತನೇ ಅಲೆ ಬಂದ್ರೂ ಹೆದರಲ್ಲ: ಕೆ.ಎಸ್. ಈಶ್ವರಪ್ಪ

    ಶಿವಮೊಗ್ಗ: ಕೋವಿಡ್ ಮೂರನೇ ಅಲೆಯಲ್ಲ, ಮೂವತ್ತನೇ ಅಲೆ ಬಂದರೂ ಹೆದರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

    ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅನಿವಾಸಿ ಭಾರತೀಯರಾಗಿರುವ ಭೂಪಾಳಂ ಕುಟುಂಬದವರು, ಕೋವಿಡ್ ನಿಯಂತ್ರಣಕ್ಕೆ 5 ಕೋಟಿ ರೂ. ಮೌಲ್ಯದ ಸಲಕರಣೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಈಶ್ವರಪ್ಪ ಚಾಲನೆ ನೀಡಿದ್ದಾರೆ. ಈ ವೇಳೆ ಕೋವಿಡ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣವನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ. ಸರ್ಕಾರದ ಜೊತೆಗೆ ಅನೇಕ ಸಂಘ-ಸಂಸ್ಥೆಗಳು ಕೈಜೋಡಿಸಿದ್ದು, ಸಾಕಷ್ಟು ನೆರವು ನೀಡುತ್ತಿವೆ. ಹೀಗಾಗಿ ಕೋವಿಡ್ ನಿಯಂತ್ರಣ ಕಷ್ಟವಿಲ್ಲ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ:ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

    ಕೋವಿಡ್ ಮೂರನೇ ಅಲೆಯಲ್ಲ, ಮೂವತ್ತನೇ ಅಲೆ ಬಂದರೂ ಹೆದರುವುದಿಲ್ಲ. ನಮಗೆ ನಂಬಿಕೆ ಇದೆ. ನಮ್ಮ ಸರ್ಕಾರ ಇದನ್ನು ಸಮರ್ಪಕವಾಗಿ ನಿಭಾಯಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೊದಲಿನಿಂದಲೂ ಭೂಪಾಳಂ ಕುಟುಂಬ ಕೊಡುಗೈ ದಾನದಲ್ಲಿ ಮುಂದಿತ್ತು. ಈಗಲೂ ಆ ಕುಟುಂಬದವರು ಅದನ್ನು ಉಳಿಸಿಕೊಂಡಿದ್ದಾರೆ. ಅವರ ಆಶ್ರಯದಲ್ಲಿಯೇ ಅನೇಕರು ನೆರವು ಪಡೆದಿದ್ದಾರೆ ಎಂದು ಪ್ರಶಂಸಿದ್ದಾರೆ.ಇದನ್ನೂ ಓದಿ:ಹಿರಿಯ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್‍ಐಆರ್

    ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೂಪಾಳಂ ಕುಟುಂಬದವರು ಕೋಟ್ಯಂತರ ರೂ. ಮೌಲ್ಯದ ಔಷಧ ಹಾಗೂ ಸಲಕರಣೆಗಳನ್ನು ದಾನವಾಗಿ ನೀಡಿದ್ದಾರೆ. ದಾನ ನೀಡಲು ಕೂಡ ಮನಸ್ಸಿರಬೇಕು. ಮಾನವೀಯ ಸ್ಪಂದನೆಯಿಂದಾಗಿ ಕೋಟ್ಯಂತರ ರೂ. ಮೌಲ್ಯದ ಸಲಕರಣೆಗಳು ಸರ್ಕಾರಿ ಆಸ್ಪತ್ರೆಗೆ ಬಂದಿವೆ. ಅದರಲ್ಲಿ ವೆಂಟಿಲೇಟರ್, ಆಕ್ಸಿಜನ್ ಕಾನ್ಸಟ್ರೇಟರ್ ಮೊದಲಾದವು ಸೇರಿವೆ. ಈ ಸ್ಪಂದನೆಯಿಂದಾಗಿಯೇ ರಾಜ್ಯದಲ್ಲಿಯೇ ಮೆಗ್ಗಾನ್ ಆಸ್ಪತ್ರೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದಿದ್ದಾರೆ.

  • ಮೈಸೂರಿನಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್ ಸಾವು

    ಮೈಸೂರಿನಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್ ಸಾವು

    ಮೈಸೂರು: ಜಿಲ್ಲೆಯಲ್ಲಿ ಒಂದರ ಮೇಲೊಂದು ಕೊರೊನಾ ವಾರಿಯರ್ಸ್ ಗಳ ಸಾವಾಗುತ್ತಿದೆ. ಇಂದು ಕೂಡ ಓರ್ವ ಆರೋಗ್ಯಾಧಿಕಾರಿ ಮೈಸೂರಿನಲ್ಲಿ ಸಾವನ್ನಪ್ಪಿದ್ದಾರೆ.

    ಸಾವನ್ನಪ್ಪಿದ ಕೊರೊನಾ ವಾರಿಯರ್ ಅನ್ನು ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದ ನಿವಾಸಿ ಚಂದ್ರಶೇಖರ್ (32) ಎಂದು ಗುರುತಿಸಲಾಗಿದೆ. ಇವರು ಸಮುದಾಯ ಆರೋಗ್ಯಾಧಿಕಾರಿಯಾಗಿದ್ದು, ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಕೊರೊನಾ ರೋಗಿಗಳನ್ನು ಪತ್ತೆ ಮಾಡುವ ತಂಡದಲ್ಲಿ ಚಂದ್ರಶೇಖರ್ ಕೆಲಸ ಮಾಡುತ್ತಿದ್ದರು. ಆದರೆ ನೆನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಿದ್ದ ಚಂದ್ರಶೇಖರ್, ಮನೆಯಲ್ಲಿ ದಿಢೀರನೇ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಾರ್ಗ ಮಧ್ಯೆದಲ್ಲೇ ಚಂದ್ರಶೇಖರ್ ಸಾವನ್ನಪ್ಪಿದ್ದಾರೆ. ಕೊರೊನಾ ಟೆಸ್ಟ್ ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ.

  • ನೆನಪಿಗಾಗಿ ಅವಳಿ ಮಕ್ಕಳಿಗೆ ‘ಕೊರೊನಾ, ಕೋವಿಡ್’ ಎಂದು ನಾಮಕರಣ

    ನೆನಪಿಗಾಗಿ ಅವಳಿ ಮಕ್ಕಳಿಗೆ ‘ಕೊರೊನಾ, ಕೋವಿಡ್’ ಎಂದು ನಾಮಕರಣ

    – ಕೊರೊನಾ ಉತ್ತಮ ಅಭ್ಯಾಸಗಳನ್ನ ಬೆಳೆಸಿಕೊಳ್ಳುವಂತೆ ಮಾಡಿದೆ

    ರಾಯ್ಪುರ್: ಕೊರೊನಾ ವೈರಸ್ ವಿಶ್ವದಾದ್ಯಂತ ವ್ಯಾಪಿಸಿದ್ದು, ಜನರಲ್ಲಿ ಆತಂಕ ಸೃಷ್ಟಿಸುತ್ತಿದೆ. ಕೊರೊನಾ ಮತ್ತು ಕೋವಿಡ್ ಈ ಎರಡು ಪದಗಳು ಜನರಲ್ಲಿ ಈಗಾಗಲೇ ಆತಂಕ ಸೃಷ್ಟಿಸಿವೆ. ಅಲ್ಲದೇ ಇದರಿಂದ ಆರ್ಥಿಕ ಕಷ್ಟವನ್ನು ಎದುರಿಸಲಾಗುತ್ತಿದೆ. ಆದರೆ ಈ ಮಧ್ಯೆ ಛತ್ತೀಸ್‍ಗಢ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ ಮಾಡಿದ್ದಾರೆ.

    ರಾಯ್ಪುರ ಮೂಲದ ದಂಪತಿಗೆ ಮಾರ್ಚ್ 26-27ರ ಮಧ್ಯರಾತ್ರಿ ರಾಯ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಅವಳಿ ಮಕ್ಕಳ ಜನನವಾಗಿದೆ. ಒಂದು ಗಂಡು ಮತ್ತು ಒಂದು ಹೆಣ್ಣು ಮಗು ಜನಿಸಿದ್ದು, ಲಾಕ್‍ಡೌನ್ ಮಧ್ಯೆಯೂ ಜನಿಸಿದ್ದಕ್ಕಾಗಿ ಮಕ್ಕಳಿಗೆ ‘ಕೊರೊನಾ-ಕೋವಿಡ್’ ಎಂದು ಹೆಸರನ್ನು ಇಡಲಾಗಿದೆ.

    ಮಾರ್ಚ್ 27 ರಂದು ಮುಂಜಾನೆ ನಾನು ಅವಳಿ ಮಕ್ಕಳಿಗೆ ಜನ್ಮ ನೀಡಿದೆ. ನಾವು ಗಂಡು ಮಗುವಿಗೆ ಕೋವಿಡ್ ಮತ್ತು ಹೆಣ್ಣು ಮಗುವಿಗೆ ಕೊರೊನಾ ಎಂದು ಹೆಸರಿಟ್ಟಿದ್ದೇವೆ. ಹೆರಿಗೆಯ ವೇಳೆ ನಾವು ಅನೇಕ ತೊಂದರೆಗಳನ್ನು ಎದುರಿಸಿದ್ದೇವೆ. ಆದ್ದರಿಂದ ನನ್ನ ಪತಿ ನೆನಪಿಗಾಗಿ ಈ ಹೆಸರು ಇಟ್ಟಿದ್ದಾರೆ ಎಂದು ತಾಯಿ ಪ್ರೀತಿ ವರ್ಮಾ ತಿಳಿಸಿದರು.

    ಪ್ರಸ್ತುತ ಕೊರೊನಾ ವೈರಸ್ ಅಪಾಯಕಾರಿಯಾಗಿದೆ. ಆದರೆ ಇದೇ ವೇಳೆ ಜನರಿಗೆ ನೈರ್ಮಲ್ಯ, ಸ್ವಚ್ಛತೆ ಮತ್ತು ಇತರ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳುವಂತೆ ಮಾಡಿದೆ. ಹೀಗಾಗಿ ನಾವು ಈ ಹೆಸರುಗಳ ಬಗ್ಗೆ ಯೋಚಿಸಿದ್ದೆವು. ಆಸ್ಪತ್ರೆಯ ಸಿಬ್ಬಂದಿ ಸಹ ‘ಕೊರೊನಾ ಮತ್ತು ಕೋವಿಡ್’ ಎಂದು ಕರೆಯುತ್ತಿದ್ದರು. ಕೊನೆಗೆ ಸಾಂಕ್ರಾಮಿಕ ರೋಗದ ಹೆಸರನ್ನು ಇಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

    ಮಾರ್ಚ್ 26ರಂದು ತಡರಾತ್ರಿ ನನಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಪತಿ ಅಂಬುಲೆನ್ಸ್‌ಗೆ ಫೋನ್ ಮಾಡಿದ್ದಾರೆ. ಲಾಕ್‍ಡೌನ್ ಆದ ಪರಿಣಾಮ ಯಾವುದೇ ವಾಹನಕ್ಕೂ ಅವಕಾಶ ಇರಲಿಲ್ಲ. ಹೀಗಾಗಿ ಪೊಲೀಸರು ವಿವಿಧ ಸ್ಥಳಗಳಲ್ಲಿ ಅಂಬುಲೆನ್ಸ್ ನಿಲ್ಲಿಸಿ, ಪರಿಶೀಲನೆ ಮಾಡಿದ್ದಾರೆ. ಕೊನೆಗೆ ನನ್ನ ಸ್ಥಿತಿ ನೋಡಿ ಬಿಟ್ಟಿದ್ದಾರೆ. ಆದರೆ ಮಧ್ಯರಾತ್ರಿಯಾಗಿದ್ದರಿಂದ ಆಸ್ಪತ್ರೆಯಲ್ಲಿ ಏನಾಗಬಹುದು ಎಂಬ ಭಯ ಆಗಿತ್ತು. ಅದೃಷ್ಟವಶಾತ್ ವೈದ್ಯರು ಮತ್ತು ಇತರ ಸಿಬ್ಬಂದಿ ಆಸ್ಪತ್ರೆಯಲ್ಲೇ ಇದ್ದು ನನಗೆ ಹೆರಿಗೆ ಮಾಡಿಸಿದರು ಎಂದು ಹೆರಿಗೆ ವೇಳೆ ಎದುರಾದ ತೊಂದರೆಯ ಬಗ್ಗೆ ವರ್ಮಾ ತಿಳಿಸಿದ್ದಾರೆ.

    ತಾಯಿ ಮತ್ತು ಮಕ್ಕಳು ಇಬ್ಬರೂ ಆರೋಗ್ಯವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ದಂಪತಿ ಕೊರೊನಾ-ಕೋವಿಡ್ ಎಂದು ಮಕ್ಕಳಿಗೆ ಹೆಸರಿಟ್ಟ ನಂತರ ಆಸ್ಪತ್ರೆಯಲ್ಲಿ ಅವಳಿ ಮಕ್ಕಳು ಕೇಂದ್ರ ಬಿಂದುವಾಗಿದ್ದವು ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ. ಮೂಲತಃ ಉತ್ತರ ಪ್ರದೇಶದವರಾಗಿದ್ದು, ದೆಹಲಿಯ ಪುರಾಣಿ ಬಸ್ತಿ ಪ್ರದೇಶದ ಬಾಡಿಗೆ ಮನೆಯಲ್ಲಿ ದಂಪತಿ ವಾಸಿಸುತ್ತಿದ್ದಾರೆ.