ಚಿಕ್ಕೋಡಿ/ ಬಾಗಲಕೋಟೆ: ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ರಣಮಳೆ ಸುರಿಯುತ್ತಿರುವ ಕಾರಣ ಅಧಿಕೃತವಾಗಿ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ (Koyna Dam) ಕೃಷ್ಣ ನದಿಗೆ (Krishna River) 21 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ನೀರು ಬಿಡುಗಡೆ ಮಾಡಿದ ಪರಿಣಾಮ ಚಿಕ್ಕೋಡಿ (Chikkodi) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಮತ್ತೊಮ್ಮೆ ಪ್ರವಾಹದ (Flood) ಭೀತಿ ಎದುರಾಗಿದೆ. ಇದನ್ನೂ ಓದಿ: ಕೆಆರ್ಎಸ್ನಿಂದ 1.50 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ
ಕೊಯ್ನಾ ಜಲಾಶಯ 105 ಟಿಎಂಸಿ ಸಾಮರ್ಥ್ಯದ ಡ್ಯಾಮ್ ಇದಾಗಿದ್ದು ಕಳೆದ 15 ದಿನಗಳ ನಿರಂತರ ಮಳೆಯಿಂದ ಪ್ರತಿಶತ 80ರಷ್ಟು ತುಂಬಿದರಿಂದ ಇವತ್ತು ಅಧಿಕೃತವಾಗಿ ಕೃಷ್ಣಾ ನದಿಗೆ 21ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ನಾಳೆಯೂ ಕೂಡ ಆ ಭಾಗದಲ್ಲಿ ಮಳೆ ಮುಂದವರೆದರೆ ಮತ್ತಷ್ಟು ನೀರು ನದಿಗೆ ಬಿಡುಗಡೆಯಾಗಲಿದೆ.
ಚಿಕ್ಕೋಡಿ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.
ಭಾನುವಾರ 10 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿದ್ದ ಕೊಯ್ನಾ ಆಡಳಿತ ಮಂಡಳಿ ಸದ್ಯ 40 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಏರಿಕೆಯಾಗಿದ್ದು, ಯಡೂರು – ಕಲ್ಲೋಳ ಸೇತುವೆ ಜಲಾವೃತಗೊಂಡಿದೆ. ಈಗಾಗಲೇ ಕೃಷ್ಣಾ ನದಿ ತೀರದ ಜನರಿಗೆ ಎಚ್ಚರಿಕೆ ವಹಿಸಲು ಬೆಳಗಾವಿ ಜಿಲ್ಲಾಡಳಿತ ಸೂಚಿಸಿದೆ. ಇದನ್ನೂ ಓದಿ: ಕ್ಯಾಪ್ಟನ್ ಪಟ್ಟದಿಂದ ಇಳಿಯಲಿದ್ದಾರೆ ಕೊಹ್ಲಿ, ರೋಹಿತ್ಗೆ ನಾಯಕತ್ವ
ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದರೆ ಮತ್ತೆ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಲಿದೆ. 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ 104 ಟಿಎಂಸಿಗಳಷ್ಟು ಭರ್ತಿಯಾಗಿದೆ. ಸದ್ಯ ಕೊಯ್ನಾ ಜಲಾಶಯದ ಪ್ರದೇಶದಲ್ಲೂ ಹೆಚ್ಚಿನ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಅದರ ಜೊತೆಗೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲೂ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ. ಇದನ್ನೂ ಓದಿ: ರಿಟರ್ನ್ ಟಿಕೆಟ್ ಬುಕ್ ಮಾಡಿದ್ದ ಎಮ್ಮಾ ರಾಡುಕಾನು ಯುಎಸ್ ಓಪನ್ ಚಾಂಪಿಯನ್
ಬೆಳಗಾವಿ: ಕೃಷ್ಣಾ ನದಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಏರಿಕೆಯಾಗಿದೆ. ಕೊಯ್ನಾ ಜಲಾಶಯದಿಂದ 55,486 ಕ್ಯೂಸೆಕ್ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕೃಷ್ಣಾ, ದುದಗಂಗಾ ಹಾಗೂ ಹಿರಣ್ಯಕೇಶಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ.
1.95ಲಕ್ಷ ಕ್ಯೂಸೆಕ್ ಗಿಂತ ಹೆಚ್ಚು ನೀರು ಕೃಷಾ ನದಿಗೆ ಹರಿದು ಬರುತ್ತಿದೆ. ಕೃಷ್ಣಾ ನದಿ ತೀರದ ಬಹುತೇಕ ಜನರು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಆಗಿದ್ದಾರೆ. ಇತ್ತ ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಮಳೆ ತಗ್ಗಿದ್ದು, ಜನ ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ. ಕೊಯ್ನಾದಿಂದ ಬರುತ್ತಿರುವ ನೀರಿನಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ದತ್ತ ಮಂದಿರ ಸಂಪೂರ್ಣ ಮುಳುಗಡೆಯಾಗಿದೆ. ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗೋಡಗೇರಿ- ನೊಗಿನಹಾಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲಿಂದ ಅಪಾರ ಪ್ರಮಾಣದ ನೀರು ಹರಿಯುತ್ತಿದೆ.
ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಇಂದು ಮುಂಜಾನೆ 10.22 ಕ್ಕೆ ಭೂ ಕಂಪನವಾಗಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 2.9 ರಷ್ಟು ದಾಖಲಾಗಿದೆ.
ಭೂ ಕಂಪನದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಬಿಡುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣವು ಕೊಯ್ನಾ-136 ಮಿ.ಮೀ , ನವಜಾ-82 ಮಿ.ಮೀ, ಮಹಾಬಳೇಶ್ವರ-156ಮಿ.ಮೀ, ವಾರಣಾ-140ಮಿ.ಮೀ, ಕಾಳಮ್ಮವಾಡಿ-75ಮಿ.ಮೀ ಮತ್ತು ರಾಧಾನಗರಿಯಲ್ಲಿ -58ಮಿ.ಮೀ ಮಳೆಯಾಗಿರುವ ವರದಿಯಾಗಿದೆ.
ಪಶ್ಚಿಮ ಘಟಗಳಲ್ಲಿ ಸತತ ಮಳೆಯಿಂದಾಗಿ ಕೊಯ್ನಾ ಜಲಾಶಯವು ಈಗಾಗಲೆ 86 ಟಿಎಂಸಿ ಭರ್ತಿಯಾಗಿದೆ. 105 ಟಿಎಂಸಿ ಸಾಮರ್ಥ್ಯ ಇರುವ ಕೊಯ್ನಾ ಜಲಾಶಯ ಇದಾಗಿದ್ದು, ಕೊಯ್ನಾ ಜಲಾಶಯದಲ್ಲಿ ಭೂ ಕಂಪನವಾದ ಹಿನ್ನೆಲೆ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದ್ದು ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಕೃಷ್ಣ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಎದುರಾಗಿದೆ.
ಸದ್ಯ ಕೃಷ್ಣಾ ನದಿಗೆ 96 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೊಯ್ನಾ ಜಲಾಶಯದಿಂದ ಇಂದು ಬಿಟ್ಟಿರುವ ನೀರು ಕರ್ನಾಟಕ ರಾಜ್ಯದ ಕೃಷ್ಣಾ ನದಿಗೆ ಮೂರ್ನಾಲ್ಕು ದಿನಗಳ ಬಳಿಕ ಸೇರಿಕೊಳ್ಳಲಿದೆ. ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಬಂದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಲಿದೆ.
ಚಿಕ್ಕೋಡಿ: ಕೊಯ್ನಾ ಜಲಾಶಯದ ಪರಿಸರದಲ್ಲಿ ಮತ್ತೆ ಭೂಕಂಪನ ದಾಖಲಾಗಿದೆ. ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾಟಣ ತಾಲೂಕಿನ ಕೊಯ್ನಾ ಜಲಾಶಯದ ಪರಿಸರದಲ್ಲಿ ಭೂಕಂಪನ ಸಂಭವಿಸಿದೆ.
ಇಂದು ಬೆಳಗ್ಗೆ 6:42 ಕ್ಕೆ ಭೂಮಿ ಕಂಪಿಸಿದ್ದು, 2.8 ರಷ್ಟು ರಿಕ್ಟರ್ ಮಾಪನದಲ್ಲಿ ಭೂಕಂಪನ ದಾಖಲಾಗಿದೆ. ಕೊಯ್ನಾ ಜಲಾಶಯದ 8 ಕಿ.ಮೀಗಳವರೆಗೆ ಭೂಕಂಪನದ ಅನುಭವವಾಗಿದೆ ಎಂದು ಕೊಯ್ನಾ ಜಲಾಶಯದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.
105 ಟಿಎಂಸಿ ನೀರು ಸಂಗ್ರಹಣೆಯ ಕೊಯ್ನಾ ಜಲಾಶಯದಲ್ಲಿ ಈಗ 65 ಟಿಎಂಸಿಕ್ಕೂ ಹೆಚ್ಚು ಸಂಗ್ರಹ ಇದೆ. ಕೊಯ್ನಾ ಜಲಾಶಯದದಿಂದ ಹೆಚ್ಚಿನ ನೀರು ಹರಿದು ಬಂದು ಕೃಷ್ಣಾ ನದಿ ಸೇರಿಕೊಳ್ಳುತ್ತದೆ. ಕೊಯ್ನಾ ಜಲಾಶಯದಿಂದ ಹೆಚ್ಚಿನ ನೀರು ಹರಿದು ಬಂದಾಗ ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಹೀಗಾಗಿ ಕೊಯ್ನಾ ಜಲಾಶಯದ ಪರಿಸರದಲ್ಲಿ ಭೂಕಂಪನ ಹಿನ್ನೆಲೆಯಲ್ಲಿ ಕೊಯ್ನಾ ಹಾಗೂ ಕೃಷ್ಣಾ ನದಿ ತೀರದಲ್ಲಿ ಆತಂಕ ಎದುರಾಗಿದೆ.
ಕೊಯ್ನಾ ಜಲಾಶಯಕ್ಕೆ ಯಾವುದೇ ಧಕ್ಕೆ ಆದರೂ ಅದರ ನೇರ ಎಫೆಕ್ಟ್ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕೃಷ್ಣಾ ನದಿ ತೀರದ ಮೇಲೆ ಆಗಲಿದೆ. ಹೀಗಾಗಿ ಈ ವರ್ಷದಲ್ಲಿ ಎರಡು ಬಾರಿ ಈ ಪರಿಸರದಲ್ಲಿ ಭೂಕಂಪನ ಸಂಭವಿಸಿರುವ ಕಾರಣ ಮತ್ತೆ ಆತಂಕಕ್ಕೆ ಕಾರಣವಾಗಿದೆ. ಸದ್ಯ ಭೂಕಂಪನ ಸಂಭವಿಸಿದ್ದರೂ ಹೆಚ್ಚಿನ ನೀರನ್ನ ಜಲಾಶಯದಿಂದ ಹೊರ ಬಿಟ್ಟಿಲ್ಲ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.
ಬೆಳಗಾವಿ(ಚಿಕ್ಕೋಡಿ): ನೆರೆಯ ಮಹಾರಾಷ್ಟ್ರದಲ್ಲಿ ವರಣನ ಆರ್ಭಟ ಜೋರಾಗಿದ್ದು, ಕೊಯ್ನಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದ್ದು, ಮತ್ತೆ ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಕೊಯ್ನಾ ಡ್ಯಾಮ್ ನಿಂದ 87,338 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಕೃಷ್ಣಾ ನದಿಯನ್ನು ಸೇರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನ ಕೆಳಹಂತದ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು- ಕಲ್ಲೋಳ ಸೇತುವೆ ಜಲಾವೃತಗೊಂಡಿದ್ದು, ಇಂದು ಬಿಟ್ಟಿರುವ ನೀರು ನಾಳೆ ರಾಜ್ಯ ಪ್ರವೇಶಿಸುವ ಸಾಧ್ಯತೆಯಿದೆ.
ಕೊಯ್ನಾ ಜಲಾಶಯಕ್ಕೆ 62,227 ಕ್ಯೂಸೆಕ್ ನೀರು ಒಳ ಹರಿವು ಇದ್ದು, ಕೊಯ್ನಾ ಜಲಾಶಯದ ಆಡಳಿತ ಮಂಡಳಿ ಮಳೆ ಪ್ರಮಾಣ ನೋಡಿ ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಿದೆ. 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ ಸದ್ಯ 104.92 ಟಿಎಂಸಿ ನೀರು ಸಂಗ್ರಹವಾಗಿದೆ. ಆದ್ದರಿಂದ 10 ಅಡಿ ಗೇಟ್ ಎತ್ತರಿಸಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.
ಬೆಳಗಾವಿ(ಚಿಕ್ಕೋಡಿ): ಮಹಾರಾಷ್ಟ್ರದಲ್ಲಿ ಬಾರೀ ಮಳೆಯಾಗುತ್ತಿರುವ ಕಾರಣಕ್ಕೆ ಮತ್ತೆ ಕೊಯ್ನಾ ಡ್ಯಾಮ್ನಿಂದ 73,063 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣ ಮತ್ತೆ ಏರಿಕೆಗೊಂಡಿದೆ.
ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾಟಣ ತಾಲೂಕಿನಲಿ ಕೊಯ್ನಾ ಜಲಾಶಯವಿದ್ದು, ಕಳೆದ ತಿಂಗಳು ಉತ್ತರ ಕರ್ನಾಟಕದಲ್ಲಿ ಪ್ರವಾಹ ಸೃಷ್ಟಿಯಾಗಲು ಕಾರಣವಾಗಿತ್ತು. ಈಗಾಗಲೇ ಕೃಷ್ಣಾ ನದಿ ಪ್ರವಾಹದಿಂದ ಚಿಕ್ಕೋಡಿ ತಾಲೂಕಿನ ಕೆಳಹಂತದ ಯಡೂರು-ಕಲ್ಲೋಳ ಸೇತುವೆ ಜಲಾವೃಗೊಂಡಿದೆ. ಕೃಷ್ಣಾ ನದಿಗೆ ಈ ಸೇತುವೆಯನ್ನು ಅಡ್ಡಲಾಗಿ ನಿರ್ಮಿಸಿಲಾಗಿದೆ. ಕೃಷ್ಣಾ ನದಿಯ ಒಳ ಹರಿವು 48 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಇದೆ. ಅಲ್ಲದೆ ಇಂದು ಕೊಯ್ನಾ ಡ್ಯಾಮ್ನಿಂದ ಬಿಟ್ಟಿರುವ ನೀರು ನಾಳೆ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ.
ಕೊಯ್ನಾ ಪ್ರದೇಶದಲ್ಲಿ ಮಂಗಳವಾರ 71 ಮೀ.ಮೀ ಮಳೆಯಾಗಿತ್ತು. ಕೊಯ್ನಾ ಜಲಾಶಯದ ಒಳ ಹರಿವು 86,553 ಕ್ಯೂಸೆಕ್ ಇದೆ. ಹೀಗಾಗಿ ಕೊಯ್ನಾ ಜಲಾಶಯದ ಆಡಳಿತ ಮಂಡಳಿ ಮಳೆ ಪ್ರಮಾಣ ನೋಡಿ ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಿದೆ. ಕೊಯ್ನಾ ಜಲಾಶಯ 105 ಟಿಎಂಸಿ ಸಾಮಥ್ರ್ಯವನ್ನು ಹೊಂದಿದೆ. ಸದ್ಯ 104.92 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಆದ್ದರಿಂದ 8 ಅಡಿ ಗೇಟ್ ಎತ್ತರಿಸಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.
ಕಲಬುರಗಿ: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತ್ತ ಕಲಬುರಗಿಯ ಭೀಮಾನದಿ ತೀರದಲ್ಲಿ ಕುಡಿಯುವ ನೀರನ್ನು ಬಕೆಟ್ಗಳಲ್ಲಿ ಮಾರಾಟ ಮಾಡುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿನ ಭೀಕರ ಮಳೆಯಿಂದ ಕೋಯ್ನಾ ಜಲಾಶಯದ ಮೂಲಕ ಕರ್ನಾಟಕಕ್ಕೆ ಅಪಾರ ನೀರು ಬಿಡಲಾಗುತ್ತಿದ್ದು, ಬೆಳಗಾವಿ, ರಾಯಚೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ನೆರೆಯಿಂದ ಜನ ತತ್ತರಿಸಿದ್ದಾರೆ. ಆದರೆ ಕಲಬುರಗಿ ಜಿಲ್ಲೆಯ ಭೀಮಾ ನದಿಯಲ್ಲಿ ಹನಿ ನೀರಿಲ್ಲದ ಅಲ್ಲಿನ ಜನ ಜಾನುವಾರುಗಳು ಪರಾದಾಡುತ್ತಿದ್ದಾರೆ. ಅಲ್ಲದೆ, ಕುಡಿಯುವ ನೀರನ್ನು ಬಕೆಟ್ಗಳಲ್ಲಿ ಮಾರಾಟ ಮಾಡಿದ್ದಾರೆ.
ಒಂದು ಬಕೆಟ್ ನೀರನ್ನು 5 ರೂಪಾಯಿಯಂತೆ ಕುಡಿಯುವ ನೀರನ್ನು ಮಾರಾಟ ಕಳೆದ ವರ್ಷ ಹಾಗೂ ಈ ವರ್ಷವೂ ಮಾರಾಟ ಮಾಡಿದ್ದಾರೆ. ಹೀಗಾಗಿ ಆಲಮಟ್ಟಿ ಜಲಾಶಯದಿಂದ, ಇಂಡಿ ಶಾಖಾ ಕಾಲುವೆಗೆ ನೀರು ಹರಿಸಿ ಅಲ್ಲಿಂದ ಆ ನೀರನ್ನು ನೇರವಾಗಿ ಭೀಮಾ ನದಿಗೆ ಬಿಟ್ಟರೆ, ರಾಜ್ಯದಲ್ಲಿ ಉಂಟಾಗಿರುವ ನೆರೆ ಕಡಿಮೆಯಾಗಿ ಇತ್ತ ಬರದ ಸಮಸ್ಯೆ ಸಹ ನಿವಾರಣೆಯಾಗುತ್ತದೆ.
ಭೀಮಾ ನದಿಯಲ್ಲಿ 9 ಬ್ರಿಡ್ಜ್ ಕಂ ಬ್ಯಾರೇಜ್ಗಳಿದು ಅಲ್ಲಿ ಹಂತ ಹಂತವಾಗಿ 15 ಟಿಎಂಸಿ ನೀರು ಸಂಗ್ರಹವಾಗುತ್ತದೆ. ಈ ಹಿಂದೆ ಕಲಬುರಗಿ ಜಿಲ್ಲೆಗೆ ಕುಡಿಯುವ ನೀರಿನ ಸಮಸ್ಯೆಯಾದರೆ ಆಲಮಟ್ಟಿಯಿಂದ ಇಂಡಿ ಶಾಖಾ ಕಾಲುವೆಗೆ ನೀರು ಹರಿಸಿ, ಅಲ್ಲಿಂದ ಭೀಮಾ ನದಿಗೆ ನೀರು ಹಲವು ಬಾರಿ ಬಿಡಲಾಗಿದೆ.
ಸದ್ಯ ಅಪಾರ ಪ್ರಮಾಣದ ನೀರು ಹರಿದು ಅಲ್ಲಿನ ಜನ ಅಕ್ಷರಶಃ ತತ್ತರಿಸಿದ್ದಾರೆ. ಇದರ ಬಗ್ಗೆ ಚಿಂತನೆ ಮಾಡಬೇಕಾದ ನೀರಾವರಿ ಅಧಿಕಾರಿಗಳು ಮರಳು ಮಾಫಿಯಾಗೆ ಗುರಿಯಾಗಿ ಭೀಮೆಗೆ ನೀರು ಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
-ಚಿಕ್ಕೋಡಿಯಲ್ಲಿ ಸೇತುವೆ, ದೇವಾಲಯ ಜಲಾವೃತ
– ಜಮಖಂಡಿ, ರಾಯಚೂರಲ್ಲಿ ಹೆಚ್ಚಿದ ಆತಂಕ
ರಾಯಚೂರು/ಬೆಳಗಾವಿ/ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕೊಯ್ನಾ ಡ್ಯಾಂ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರು ಹೊರಬಿಟ್ಟಿದ್ದಾರೆ. ಇದರಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳು ತುಂಬಿ ಹರಿಯುತ್ತಿವೆ. ಮಾರ್ಕಂಡೇಯ ನದಿಯ ಗೊಡಚಿನಮಲ್ಕಿ ಜಲಪಾತದಲ್ಲಿ ಭಾರಿ ನೀರು ಬರುತ್ತಿದೆ. ನಯನಮನೊಹರ ದೃಶ್ಯ ನೋಡಲು ಪ್ರವಾಸಿಗರ ದಂಡು ಹರಿದು ಬಂತು.
ಬೆಳಗಾವಿ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆಯಾಗಿವೆ. ಪ್ರಸಿದ್ಧ ಕೋಲ್ಹಾಪುರ ಮಹಾಲಕ್ಷ್ಮಿ ದೇವಾಸ್ಥಾನದ ಸುತ್ತ ಪ್ರವಾಹದಂತೆ ನೀರು ಹರಿದಿದೆ. ನೀರಿನ ರಭಸಕ್ಕೆ ದೇವಾಸ್ಥಾನದ ಅಕ್ಕ-ಪಕ್ಕ ನಿಲ್ಲಿಸಿದ ಬೈಕ್ಗಳು ಕೊಚ್ಚಿಕೊಂಡು ಹೋಗುವ ದೃಶ್ಯ ಸಿನಿಮೀಯ ಶೈಲಿ ರೀತಿಯಲ್ಲಿ ಕಂಡು ಬಂದಿದೆ. ಪ್ರವಾಹ ರೂಪದಂತೆ ಬಂದ ನೀರಿನ ರಭಸಕ್ಕೆ ಹೂವಿನ ಅಂಗಡಿ ಹಾಗೂ ರಸ್ತೆಬದಿ ನಿಲ್ಲಿಸಿದ ವಾಹನಗಳು ಮಾರು ದೂರ ಹರಿದು ಹೋಗಿವೆ.
ಮಿಲಿಟರಿ ಪಡೆ ಆಗಮನ:
ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಚಿಕ್ಕೋಡಿಗೆ ಮಿಲಿಟರಿ ಪಡೆ ಆಗಮಿಸಿದೆ. ತಲಾ ಐವತ್ತು ಸೈನಿಕರಿರುವ 2 ತುಕಡಿಗಳಲ್ಲಿ ಯೋಧರು ಆಗಮಿಸಿದ್ದಾರೆ. ಪ್ರವಾಹದಲ್ಲಿ ಸಿಲುಕಿದವರನ್ನ ರಕ್ಷಣೆಗೆ ಬೇಕಾದ ಸಾಮಾಗ್ರಿಗಳ ಸಮೇತ ಧಾವಿಸಿದ್ದಾರೆ. ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ಸಮುದಾಯ ಭವನದಲ್ಲಿ ವಾಸ್ತವ್ಯ ಹೂಡಿದ್ದು, ತಮ್ಮ ಸ್ಥಳಗಳಿಗೆ ತೆರಳಿದ್ದಾರೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೊಯ್ನಾ ಡ್ಯಾಂ ಭರ್ತಿಯಾಗಿದ್ದು, 6 ಗೇಟ್ಗಳಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದಾರೆ. ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಕೃಷ್ಣಾ ನದಿಯ ಪ್ರವಾಹಪೀಡಿತ ಪ್ರದೇಶದ ಜನರಿಗಾಗಿ 8 ಕಡೆ ಗಂಜಿ ಕೇಂದ್ರ ತೆರೆಯಲಾಗಿದೆ. ಇಂಗಳಿ, ಯಡೂರವಾಡಿ, ಕಾಗವಾಡ ತಾಲೂಕಿನ ಜುಗೂಳು/ಶಹಾಪೂರ, ಬಣಜವಾಡ, ಅಥಣಿ ತಾಲೂಕಿನ ರಡೇರಟ್ಟಿ, ಸಪ್ತಸಾಗರ, ನಾಗನೂರು, ರಾಯಬಾಗ ತಾಲೂಕಿನ ಶಿರಗೂರು ಗ್ರಾಮಗಳಲ್ಲಿ ಗಂಜಿಕೇಂದ್ರಗಳು ಆರಂಭಗೊಂಡಿವೆ. ಆಯಾ ಗ್ರಾಮದ ಶಾಲೆ, ಸಮುದಾಯ ಭವನ, ಅಂಗನವಾಡಿಗಳಲ್ಲಿ ಗಂಜಿಕೇಂದ್ರಗಳನ್ನು ಆರಂಭಿಸಲಾಗಿದೆ. ಈಗಾಗಲೇ ಸ್ಥಳಾಂತರಗೊಂಡ ಜನರಿಗೆ ಗಂಜಿಕೇಂದ್ರಗಳಲ್ಲಿ ಊಟ, ವಸತಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಕಲ್ಪಿಸಿಕೊಟ್ಟಿದೆ.
ರಸ್ತೆ ಸಂಪರ್ಕ ಕಡಿತ: ಅಬ್ಬರದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ತಾಲೂಕಿನ ಜಂಬಗಿ-ತುಬಚಿ ರಸ್ತೆ ಸಂಪರ್ಕ ಕಡಿತವಾಗಿದೆ. ಮುತ್ತೂರು, ಕಂಕಣವಾಡಿ, ತುಬುಚಿ, ಶೂರ್ಪಾಲಿ ಗ್ರಾಮಗಳು ಜಲಾವೃತವಾಗಿವೆ. ಹಿಪ್ಪರಗಿ ಜಲಾಶಯಕ್ಕೆ 2.28 ಲಕ್ಷ ಕ್ಯೂಸೆಕ್ ಒಳಹರಿವಿನಿಂದಾಗಿ ಸುಮಾರು 25 ಗ್ರಾಮಗಳಿಗೆ ಭಾಗಶ ಪ್ರವಾಹದ ಭೀತಿ ಎದುರಾಗಿದೆ.
ಮುತ್ತೂರು ಗ್ರಾಮದ ತೋಟದ ವಸತಿ ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ವಸತಿ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಜಲಾವೃತವಾದ ಗ್ರಾಮಗಳಿಗೆ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಶಾಸಕರು ಸೂಚನೆ ನೀಡಿದರು.
ಸೇತುವೆ ಮುಳುಗಡೆ: ರಾಯಚೂರಿನಲ್ಲಿ ಸಹ ಪ್ರವಾಹ ಭೀತಿ ಹೆಚ್ಚಾಗಿದೆ. ನಾರಾಯಣಪುರ ಡ್ಯಾಂನಿಂದ ಬಿಡಲಾಗುತ್ತಿರುವ ನೀರಿನ ಪ್ರಮಾಣವನ್ನು 2 ಲಕ್ಷ ಸಾವಿರ ಕ್ಯೂಸೆಕ್ಗೆ ಹೆಚ್ಚಿಸಲಾಗಿದೆ. ಇದರಿಂದಾಗಿ, ರಾಯಚೂರು ಜಿಲ್ಲೆಯಲ್ಲಿ ಜಮೀನುಗಳಿಗೆ ನೀರು ನುಗ್ಗುವ ಸಾಧ್ಯತೆ ದಟ್ಟವಾಗಿದೆ. ದೇವದುರ್ಗದ ಹೂವಿನಹೆಡಗಿ, ಲಿಂಗಸುಗೂರಿನ ಯರಗೋಡಿ ಸೇತುವೆ ಮುಳುಗಡೆಯಾಗಿದೆ. ತುರ್ತು ಸ್ಥಿತಿಯಲ್ಲಿ ರಕ್ಷಿಸಲು ಎನ್ ಡಿಆರ್ ಎಫ್ ನ 30 ಸಿಬ್ಬಂದಿ ಹಾಗು 2 ಬೋಟುಗಳು ಸಿದ್ಧವಾಗಿವೆ.
ನಡುಗಡ್ಡೆ ಪ್ರದೇಶದಲ್ಲಿ ಆಹಾರ ಧಾನ್ಯ, ಅಗತ್ಯ ವಸ್ತುಗಳ ವಿತರಣೆ ಮಾಡಲಾಗುತ್ತಿದೆ. ನದಿಗೆ ಇಳಿಯದಂತೆ ಡಂಗೂರ ಹಾಗು ಮೈಕ್ ಮುಖಾಂತರ ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗುವ ಹಂತದಲ್ಲಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಸುರಿಯುತ್ತಿರೋ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೊಟ್ಟಿಗೆಹಾರದಲ್ಲಿ ಮಳೆ ಅಬ್ಬರ ಕಂಡು ಜನ ಕಂಗಾಲಾಗಿದ್ದಾರೆ. ಕೊಟ್ಟಿಗೆಹಾರ ಮಾರ್ಗದಿಂದ ಆಲೇಖಾನ್ ಹೊರಟ್ಟಿ, ಮಲೇಮನೆ ಸೇರಿದಂತೆ ನಾಲ್ಕು ಗ್ರಾಮಕ್ಕೆ ಸಂಪರ್ಕ ಕಲ್ಪಿಸೋ ಮಾರ್ಗದ ಮೇಲೆ ಬೃಹತ್ ಬಂಡೆ ಕುಸಿದಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡು, ಮಕ್ಕಳು ಶಾಲೆಗೆ ಹೋಗದಂತ ಸ್ಥಿತಿ ನಿರ್ಮಾಣವಾಗಿದೆ. ಈ ಬಂಡೆ ಎರಡು ಅಡಿಯಷ್ಟು ಪಕ್ಕಕ್ಕೆ ಸರಿದಿದ್ರೆ ಕೊಟ್ಟಿಗೆಹಾರ-ಧರ್ಮಸ್ಥಳ-ಮಂಗಳೂರು ಮಾರ್ಗದ ಸಂಚಾರ ಸ್ಥಗಿತಗೊಳ್ಳುತ್ತಿತ್ತು.