Tag: KPCC President Post

  • ಕೆಪಿಸಿಸಿಗೆ ಬೇಗ ಅಧ್ಯಕ್ಷರ ಆಯ್ಕೆಯಾಗಲಿ- ದಿನೇಶ್ ಗುಂಡೂರಾವ್ ಒತ್ತಾಯ

    ಕೆಪಿಸಿಸಿಗೆ ಬೇಗ ಅಧ್ಯಕ್ಷರ ಆಯ್ಕೆಯಾಗಲಿ- ದಿನೇಶ್ ಗುಂಡೂರಾವ್ ಒತ್ತಾಯ

    ಉಡುಪಿ: ಕಾಂಗ್ರೆಸ್ ಹೈಕಮಾಂಡ್ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಹೆಚ್ಚು ತಡ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಉಡುಪಿಯ ಕೃಷ್ಣ ಮಠದಲ್ಲಿ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಲ್ಲರ ವಿಶ್ವಾಸವನ್ನು ಪಡೆದು ಸಮಾಲೋಚನೆ ಮಾಡಿ ನೂತನ ಅಧ್ಯಕ್ಷರನ್ನು ಶೀಘ್ರ ತೀರ್ಮಾನ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ದೇಶದಲ್ಲಿ ದೊಡ್ಡ ಮಟ್ಟದ ಹೋರಾಟ ಸಂಘಟಿಸಬೇಕಾಗಿದೆ. ಇದಕ್ಕೆ ಎಲ್ಲರ ಸಹಮತ, ಒಮ್ಮತ ಮುಖ್ಯವಾಗುತ್ತದೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರ ಅಭಿಪ್ರಾಯ ಪಡೆದು ಪಕ್ಷದ ಹೈಕಮಾಂಡ್ ಸರಿಯಾದ ತೀರ್ಮಾನ ಮಾಡುವುದು ಬಹಳ ಮುಖ್ಯ ಎಂದರು.

    ದಾರಿ ತಪ್ಪಿಸುತ್ತಿರು ಶಾ:
    ಪೌರತ್ವ ತಿದ್ದುಪಡೆ ಕಾಯ್ದೆ ಕುರಿತು ಮಾತನಾಡಿದ ಅವರು, ಇದು ಕೇಂದ್ರ ಸರ್ಕಾರದ ಕಾನೂನು. ಆದರೆ ಅನೇಕ ರಾಜ್ಯಗಳು ತಿರಸ್ಕಾರ ಮಾಡಿವೆ. ಸುಪ್ರೀಂಕೋರ್ಟ್ ಮುಂದೆಯೂ ಸಿಎಎ ವಿಚಾರ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸಿದ್ದಾರೆ. ಯಾರಿಗೂ ಪೌರತ್ವ ಕೊಡುವುದು ಬೇಡ ಅಂತ ನಾವು ಹೇಳುತ್ತಿಲ್ಲ. ಧರ್ಮದ ಆಧಾರದಲ್ಲಿ ವಿಭಜನೆ ಮಾಡಬೇಡಿ. ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವುದು ಸಂವಿಧಾನ ವಿರೋಧಿ ಎಂದು ಹೇಳಿದರು.

    ಅಮಿತ್ ಶಾ ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಒಮ್ಮೆ ಎನ್‍ಆರ್‍ಸಿ ಮಾಡುತ್ತೇವೆ ಎನ್ನುತ್ತಾರೆ. ಇನ್ನೊಮ್ಮೆ ಇಲ್ಲ ಅಂತಾರೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಭಾಷಣ ಮಾಡಿದರೆ ಪ್ರಯೋಜನ ಇಲ್ಲ. ದೇಶದಲ್ಲಿ ಘರ್ಷಣೆ, ಗಲಭೆ ಆಗಬೇಕು ಅಂತ ಇದ್ದರೆ ಕಾನೂನು ಜಾರಿ ಮಾಡಿ ಎಂದು ಆಗ್ರಹಿಸಿದರು.

  • ಕಾಂಗ್ರೆಸ್‍ನಲ್ಲಿ ಸಮನ್ವಯತೆ ಇದೆ, ಎಲ್ಲರೂ ಒಗ್ಗಟ್ಟಾಗಿದ್ದೇವೆ: ಈಶ್ವರ್ ಖಂಡ್ರೆ

    ಕಾಂಗ್ರೆಸ್‍ನಲ್ಲಿ ಸಮನ್ವಯತೆ ಇದೆ, ಎಲ್ಲರೂ ಒಗ್ಗಟ್ಟಾಗಿದ್ದೇವೆ: ಈಶ್ವರ್ ಖಂಡ್ರೆ

    ಕಲಬುರಗಿ: ಕಾಂಗ್ರೆಸ್‍ನಲ್ಲಿ ಸಮನ್ವಯತೆ ಇದೆ. ಎಲ್ಲರೂ ತಮ್ಮ ಅಭಿಪ್ರಾಯವನ್ನು ಶನಿವಾರವೇ ತಿಳಿಸಿದ್ದಾರೆ. ಪಕ್ಷ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಿರುವದಾಗಿ ಹೇಳಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಕೆಪಿಸಿಸಿ ಅಧ್ಯಕ್ಷ ನೇಮಕದ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಷ್ಟೆಯಿಂದ ನಿರ್ವಹಿಸುತ್ತೇನೆ. ರಾಜ್ಯ ಸರ್ಕಾರ ಅಧಿವೇಶನವನ್ನು ಕರೆಯುತ್ತಿಲ್ಲ. ಕನಿಷ್ಠ ಹದಿನೈದು ದಿನವಾದರೂ ಅಧಿವೇಶನ ಕರೆದು ಜನರ ಸಮಸ್ಯೆ ಚರ್ಚಿಸಲು ಅವಕಾಶ ನೀಡಬೇಕು ಎಂದರು.

    ಈ ಹಿಂದೆ ಹೆಸರಿಗೆ ಮಾತ್ರ ಎನ್ನುವಂತೆ ಅಧಿವೇಶನ ಕರೆದು ಕೈ ತೊಳೆದುಕೊಂಡಿದ್ದು, ಇದೀಗ ಮತ್ತೆ ಅಧೀವೇಶನ ನಡೆಸುವುದ್ದಾಗಿ ಹೇಳಿದ್ದಾರೆ. ಆದರೆ ಎಷ್ಟು ದಿನ ನಡೆಸುತ್ತೇವೆ ಎನ್ನುವುದನ್ನು ಸ್ಪಷ್ಟಪಡಿಸಿಲ್ಲ. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಸಿದ್ದಗಂಗಾ ಶ್ರೀಗಳ ಮಠದಲ್ಲಿ ರಾಜಕೀಯ ಭಾಷಣ ಮಾಡಿರುವುದು ಸರಿಯಲ್ಲ. ರಾಜ್ಯದ ಜನರಿಗೆ ನರೇಂದ್ರ ಮೋದಿ ಅವಮಾನ, ಮೋಸ ಮಾಡಿದ್ದಾರೆ. ಇಂತಹ ಪ್ರಧಾನಿ ನಮಗೆ ಬೇಕಾ ಅನ್ನೋ ಚರ್ಚೆ ಇದೀಗ ಜನರಲ್ಲಿ ಪ್ರಾರಂಭವಾಗಿದೆ ಎಂದು ಹೇಳಿದರು.

    ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ. ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಅವರ ಮೇಲೆ ಹೆಸರಿಗೆ ಮಾತ್ರ ದೂರು ದಾಖಲಿಸಿದ್ದಾರೆ, ಇದು ಸರಿಲ್ಲ. ಅವರನ್ನು ಕಾನೂನು ಪ್ರಕಾರ ಬಂಧಿಸಬೇಕು ಎಂದು ಆಗ್ರಹಿಸಿದರು.

  • ಡಿಕೆಶಿ ಹಾದಿಗೆ ನೂರೆಂಟು ವಿಘ್ನ

    ಡಿಕೆಶಿ ಹಾದಿಗೆ ನೂರೆಂಟು ವಿಘ್ನ

    ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನ ಕೆಪಿಸಿಸಿ ಅಧ್ಯಕ್ಷ ಗಾದಿಗೆ ತಂದು ಕೂರಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಆದರೆ ಈ ಯತ್ನಕ್ಕೆ ರಾಜ್ಯ ಕಾಂಗ್ರೆಸ್‍ನ ಎರಡು ಬಣಗಳು ಅಡ್ಡಗಾಲು ಹಾಕುತ್ತಿರುವ ಇಂಟರೆಸ್ಟಿಂಗ್ ಬೆಳವಣಿಗೆ ನಡೆಯುತ್ತಿದೆ.

    ಡಿಕೆ ಶಿವಕುಮಾರ್ ಪಟ್ಟಾಭಿಷೇಕ ತಪ್ಪಿಸಲು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಣ ಮುಂದಾಗಿದೆ. ದಿನೇಶ್ ಗುಂಡುರಾವ್ ಅರಿಂದ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ಕೃಷ್ಣಬೈರೇಗೌಡ ಅವರ ಹೆಸರನ್ನು ಮುನ್ನಲೆಗೆ ತಂದಿದೆ. ಒಕ್ಕಲಿಗರ ಕೋಟದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾದರೆ ಕೃಷ್ಣಬೈರೇಗೌಡ ಅವರು ಇರಲಿ. ಲಿಂಗಾಯತರ ಕೋಟದಲ್ಲಿ ನೀಡುವುದಾದರೆ ಎಂ.ಬಿ.ಪಾಟೀಲ್ ಇರಲಿ ಎನ್ನುವುದು ಸಿದ್ದರಾಮಯ್ಯ ಅವರ ಬಣ ಲಾಬಿ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

    ಇತ್ತ ಮೂಲ ಕಾಂಗ್ರೆಸ್ಸಿಗರು ಲಿಂಗಾಯತರ ಕೋಟದಲ್ಲಿ ಈಶ್ವರ್ ಖಂಡ್ರೆ ಅಥವಾ ದಲಿತರ ಕೋಟವಾದರೆ ಕೆ.ಹೆಚ್.ಮುನಿಯಪ್ಪ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಲಾಬಿ ಆರಂಭಿಸಿದ್ದಾರೆ. ಎಲ್ಲರನ್ನೂ ಮೀರಿ ಡಿಕೆ ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಡುತ್ತಾ ಅಥವಾ ಪ್ರತಿಬಾರಿಯಂತೆ ಈ ಬಾರಿಯೂ ಬಣ ರಾಜಕಾರಣದಿಂದಾಗಿ ಕೊನೆ ಗಳಿಗೆಯಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಪಟ್ಟದಿಂದ ವಂಚಿತರಾಗುತ್ತಾರಾ ಎನ್ನುವುದು ಸದ್ಯದ ಕುತೂಹಲವಾಗಿದೆ.