Tag: KPJP

  • ನಟ ಉಪೇಂದ್ರ ಕೆಪಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಘೋಷಣೆ

    ನಟ ಉಪೇಂದ್ರ ಕೆಪಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಘೋಷಣೆ

    ಹುಬ್ಬಳ್ಳಿ: ನಟ ಉಪೇಂದ್ರ ತಮ್ಮ `ಪ್ರಜಾಕೀಯ’ (ಕೆಪಿಜೆಪಿ) ಪಕ್ಷದ ಅಧಿಕೃತ ಚಿಹ್ನೆ “ಆಟೋ ರಿಕ್ಷಾ” ಎಂದು ಘೋಷಣೆ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಟೋ ರಿಕ್ಷಾ ಪಕ್ಷದ ಚಿಹ್ನೆಯಾಗಿ ಸಿಕ್ಕಿರುವುದು ಅತ್ಯಂತ ಸಂತೋಷವಾಗಿದೆ. ಕನ್ನಡ ಅಭಿಮಾನಿಗಳ ನೆಚ್ಚಿನ ನಟ ಶಂಕರ್ ನಾಗ್ ಸರ್ ಅವರಿಗೆ ಇದನ್ನು ಅರ್ಪಣೆ ಮಾಡುತ್ತೇನೆ. ಶಂಕರ್ ನಾಗ್ ಅವರು ಹಲವು ಕನಸುಗಳನ್ನು ಹೊಂದಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ, ಭಾರತಕ್ಕೆ ಮೆಟ್ರೋ ರೈಲು, ಬಡವರಿಗೆ ಕಡಿಮೆ ದರದಲ್ಲಿ ಮನೆ ನಿರ್ಮಾಣ ಮಾಡುವಂತಹ ಹಲವು ಯೊಜನೆಗಳನ್ನು ಹೊಂದಿದ್ದರು. ಅವರ ಆಟೋ ರಾಜ ಸಿನಿಮಾ ಮೂಲಕ ಎಲ್ಲರಿಗೂ ಪ್ರೇರಣೆ, ಅವರ ಚಿಂತನೆಗಳಿಂದ ಸ್ಫೂರ್ತಿ ಪಡೆದು ನಾನು ಖಾಕಿ ಬಟ್ಟೆ ಧರಿಸಿ, ಪಕ್ಷ ಸ್ಥಾಪನೆ ಮಾಡಿದೆ ಎಂದು ಹೇಳಿದರು.

    ಇನ್ನು ಪಕ್ಷದ ಚಿಹ್ನೆಯ ಕುರಿತು ವಿವರಣೆ ನೀಡಿದ ಅವರು, ಆಟೋ ಎಂಬ ಪದಕ್ಕೆ ವಿಶಾಲ ಅರ್ಥವಿದೆ. ನಮಗೇ ನಾಯಕರು ಬೇಡ, ಕಾರ್ಮಿಕರು ಬೇಕು ಎಂಬ ಹಿನ್ನೆಲೆಯಲ್ಲಿ ಖಾಕಿ ಧರಿಸಿ ಕೆಪಿಜಿಪಿ ಪಕ್ಷ ಸಂಘಟನೆ ಮಾಡಿದ್ದೇವೆ. ಆಟೋ ಎಂಬ ಪದ ಮಿಷನ್, ಆಟೋಮೆಟಿಕ್ ಆಂದರೆ ಸ್ವಯಂ ಚಾಲಿತವಾದದ್ದು ಎಂಬ ಅರ್ಥ ಹೊಂದಿದೆ. ಸರ್ಕಾರವು ಹಾಗೆಯೇ ಕಾರ್ಯ ನಿರ್ವಹಿಸಬೇಕು. ಒಂದು ದೊಡ್ಡ ಕಾಪೋರೇಟ್ ಸಂಸ್ಥೆ ಹೇಗೆ ಭ್ರಷ್ಟಚಾರ ಮುಕ್ತವಾಗಿ ನಡೆಯುತ್ತದೆ. ಅಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಕೋಟ್ಯಾಂತರ ಹಣ, ಬಜೆಟ್ ಹೊಂದಿದ್ದರೂ ಸರ್ಕಾರದಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಮಾಡುವ ನಾಯಕರು ಬೇಡ. ಜನರ ಸಂಪರ್ಕದಲ್ಲಿರುವ ಸೇವಕರು ಬೇಕಾಗಿದ್ದಾರೆ. ಪ್ರಜಾಕೀಯದ ಮೂಲಕ ಆಡಳಿತದಲ್ಲಿ ಪರದರ್ಶಕತೆ ತರುವುದು ನಮ್ಮ ಉದ್ದೇಶವಾಗಿದೆ. ಆದೇ ರೀತಿ ಸರ್ಕಾರವು ಭ್ರಷ್ಟಚಾರ ಮುಕ್ತವಾಗಿ ನಡೆಯಬೇಕು ಎಂದರು.

    ರಾಜಕೀಯದಲ್ಲಿ ಹಣ, ಜಾತಿ, ಜನರ ಮನೋಭಾವನೆ ವಿಷಯಗಳನ್ನು ಇಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಬದಲಾಗಬೇಕಿದೆ. ಅದರಿಂದಲೇ ಪ್ರಜಾಕೀಯ ಎಂಬ ವೇದಿಕೆ ಸೃಷ್ಟಿಯಾಗಿದೆ. ಪ್ರತಿಯೊಬ್ಬರಲ್ಲೂ ಹಲವಾರು ಯೋಜನೆ, ಚಿಂತನೆಗಳು ಇರುತ್ತವೆ. ಅವುಗಳನ್ನು ನಮಗೆ ತಿಳಿಸಿ, ನಮ್ಮ ಜೊತೆ ಕೈ ಜೋಡಿಸಿ ಎಂದು ಮನವಿ ಮಾಡಿದರು.

    ಚುನಾವಣೆಯಲ್ಲಿ ವಿಷಯಾಧಾರಿತವಾದ ಅಂಶಗಳ ಮೇಲೆ ಚರ್ಚೆ ನಡೆದು, ಅವುಗಳ ಮೇಲೆ ಮತದಾನ ಮಾಡುವ ನಿರ್ಣಯ ಮಾಡಬೇಕಿದೆ. ತಂತ್ರಜ್ಞಾನವನ್ನು ಬಳಸಿ ಪ್ರತಿಯೊಂದು ಕಾರ್ಯವನ್ನ ಪರದರ್ಶಕವಾಗಿ ಮಾಡಬಹುದು. ಪ್ರತಿ ಸರ್ಕಾರಿ ಅಧಿಕಾರಿಯ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಬಹುದು. ಸಮಸ್ಯೆಗಳ ಕುರಿತು ಚರ್ಚೆ ಮಾಡುವ ಬದಲು ಅವುಗಳಿಗೆ ಪರಿಹಾರ ಹುಡುಕುವ ಕಾರ್ಯ ನಡೆಯಬೇಕಿದೆ. ಪಕ್ಷ ಪ್ರಣಾಳಿಕೆಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಅವುಗಳ ಕುರಿತು ವಿಸ್ತಾರ ಚರ್ಚೆ ಮಾಡಲಾಗುತ್ತದೆ. ನಾನು ಸಾಮಾನ್ಯ ಪ್ರಜೆಯಾಗಿ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

     

  • ಮೋದಿಯೊಬ್ಬರಿಂದ ಬದಲಾವಣೆ ಮಾಡಲು ಸಾಧ್ಯವಿಲ್ಲ, ಜನ ಬದಲಾಗದಿದ್ದರೆ ದೇಶ ಬದಲಾಗಲ್ಲ: ಉಪೇಂದ್ರ

    ಮೋದಿಯೊಬ್ಬರಿಂದ ಬದಲಾವಣೆ ಮಾಡಲು ಸಾಧ್ಯವಿಲ್ಲ, ಜನ ಬದಲಾಗದಿದ್ದರೆ ದೇಶ ಬದಲಾಗಲ್ಲ: ಉಪೇಂದ್ರ

    ಉಡುಪಿ: ಮೋದಿಯೊಬ್ಬರಿಂದ ದೇಶವನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಜನ ಬದಲಾಗದಿದ್ದರೆ ದೇಶ ಬದಲಾಗಲ್ಲ ಎಂದು ನಟ ಕೆಪಿಜೆಪಿ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಪ್ಪಿ, ನಾನು ಪ್ರಾಕ್ಟಿಕಲ್ ಇಲ್ಲ ಅಂತ ಜನ ನನ್ನನ್ನು ನೋಡಿ ನಗುತ್ತಿದ್ದಾರೆ. ಆದರೆ ರಾಜಕೀಯ ದೃಷ್ಟಿಯಲ್ಲಿ ನೋಡಿದರೆ ನಾನು ಪ್ರಾಕ್ಟಿಕಲ್ ಇಲ್ಲ. ಪ್ರಜೆಗಳು ಮಾತನಾಡುವ ಕಾಲ ಬಂದಿದೆ ಎಂದು ಉಪ್ಪಿ ಹೇಳಿದರು. ಎಂಎಲ್‍ಎ ಸೀಟು ಗೆಲ್ಲಲು 50 ಕೋಟಿ ರೂಪಾಯಿ ಬೇಕು. ನನ್ನ ಬಳಿ ಕಾಸಿಲ್ಲ. ಆದರೆ ಕನಸಿದೆ. ಅದನ್ನು ಈಡೇರಿಸಲು ಜನ ಬೆಂಬಲ ಬೇಕಾಗಿದೆ ಎಂದರು.

    ಸತ್ಯಕ್ಕೆ ಸಾವಿಲ್ಲ ಸತ್ಯ ಸಾಯೋದೇ ಇಲ್ಲ. ನನಗೆ ಶೀಘ್ರವಾಗಿ ಕೆಲಸವಾಗಬೇಕಿಲ್ಲ, ನಾನು ಸ್ಮಾರ್ಟಾಗಿ ಕೆಲಸ ಮಾಡುತ್ತೇನೆ. ಅಣ್ಣಾ ಹಜಾರೆ ಬೆಂಬಲ ಕೇಜ್ರಿವಾಲ್‍ಗೆ ಇತ್ತು. ಅರವಿಂದ ಕೇಜ್ರೀವಾಲ್ ಇನ್ನೂ ಚೆನ್ನಾಗಿ ಕೆಲಸ ಮಾಡಬಹುದಿತ್ತು ಎಂದು ಹೇಳಿದರು. ನಮ್ಮ ದೇಶದಲ್ಲಿ ಆರೋಗ್ಯ, ಶಿಕ್ಷಣ ಸರಿಯಾಗಿ ಸಿಕ್ಕಿದ್ದರೆ ಇವತ್ತು ಭ್ರಷ್ಟಾಚಾರ ಎಂಬುವುದು ಇರುತ್ತಿರಲಿಲ್ಲ ಎಂದು ತಿಳಿಸಿದರು.

    ರಾಷ್ಟ್ರೀಯ ಪಕ್ಷಗಳಿಂದ ಬೇಡಿಕೆ ಬಂದಿದೆ. 15 ವರ್ಷದಿಂದ ಆಹ್ವಾನಗಳಿದ್ದರೂ ನಾನು ನನ್ನ ಕನಸನ್ನು ಹೊತ್ತು ಈಗ ಹೊರಟಿದ್ದೇನೆ. ಬೆಕ್ಕಿಗೆ ಗಂಟೆ ಕಟ್ಟಿದ್ದೇನೆ. ಗಂಟೆ ಬಾರಿಸಲು ಜನ ಬೇಕು. 50 ಸಾವಿರ ಜನರ ಮೇಲ್ ಬಂದಿದೆ. 30 ಸಾವಿರ ಮಂದಿ ಕ್ರಿಯಾಶೀಲ ಜನ ನನ್ನ ಜೊತೆಗಿದ್ದಾರೆ ಎಂದು ಉಪೇಂದ್ರ ಹೇಳಿದರು. ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ನನ್ನ ಆಲೋಚನೆಯ ಜನ ತಮ್ಮ ಆಲೋಚನೆಗಳನ್ನು ಹೇಳಬೇಕಿದೆ ಎಂದು ಮನವಿ ಮಾಡಿದರು.

  • ಉಜಿರೆಯಲ್ಲಿ ಮಾನವೀಯತೆ ಮೆರೆದ ರಿಯಲ್ ಸ್ಟಾರ್ ಉಪೇಂದ್ರ

    ಉಜಿರೆಯಲ್ಲಿ ಮಾನವೀಯತೆ ಮೆರೆದ ರಿಯಲ್ ಸ್ಟಾರ್ ಉಪೇಂದ್ರ

    ಮಂಗಳೂರು: ರಿಯಲ್ ಸ್ಟಾರ್ ಹಾಗೂ ಕೆಪಿಜೆಪಿ ಸ್ಥಾಪಕ ಉಪೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ. ಅಂಧ ಮಕ್ಕಳ ಸಹಾಯಕ್ಕಾಗಿ ರಸ್ತೆ ಬದಿಯಲ್ಲಿ ಹಾಡು ಹಾಡುತ್ತಾ ದೇಣಿಗೆ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ನಟ ಕಾರಿನಿಂದ ಇಳಿದು ಮಕ್ಕಳ ಜೊತೆ ಬೆರೆಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ರಸ್ತೆ ಬದಿ ಹಾಡುತ್ತಾ ದೇಣಿಗೆ ಯಾಚಿಸುತ್ತಿದ್ದರು. ಈ ಸಂದರ್ಭದಲ್ಲಿ ಅದೇ ಮಾರ್ಗವಾಗಿ ತನ್ನ ಕಾರಿನಲ್ಲಿ ಹೋಗುತ್ತಿದ್ದ ನಟ ಉಪೇಂದ್ರ, ತಕ್ಷಣ ಕಾರು ನಿಲ್ಲಿಸಿ ಹಾಡು ಹೇಳುತ್ತಿದ್ದ ಅಂಧ ಮಕ್ಕಳ ಬಳಿ ಹೋಗಿದ್ದಾರೆ. ಮಕ್ಕಳ ಹಾಡಿಗೆ ಮೆಚ್ಚಿ ಮೂರು ಸಾವಿರ ರೂಪಾಯಿಯನ್ನು ದೇಣಿಗೆ ರೂಪದಲ್ಲಿ ನೀಡಿದ್ದಾರೆ.

    ಅಂಧರು ರಸ್ತೆ ಬದಿ ಹಾಡಿಕೊಂಡು ಹೋಗುತ್ತಿದ್ದರೂ ಮುಖ ತಿರುಗಿಸಿಕೊಂಡು ಹೋಗೋ ಜನರ ನಡುವೆ ಸ್ಟಾರ್ ನಟ ದಿಢೀರ್ ತಮ್ಮ ಬಳಿಗೆ ಬಂದು ಹಣ ನೀಡಿದ್ದು ಅಂಧ ಕಲಾವಿದರಿಗೆ ಖುಷಿ ತಂದಿದೆ.

    ಬಳಿಕ ಎಲ್ಲಾ ಮಕ್ಕಳಿಗೂ ಶುಭ ಹಾರೈಸಿದ ಉಪೇಂದ್ರ ಮತ್ತೆ ಕಾರು ಹತ್ತಿದ್ದಾರೆ. ಯಾವುದೇ ಅಹಂಕಾರ ಇಲ್ಲದೆ ಅಂಧ ಮಕ್ಕಳ ಜೊತೆ ಉಪೇಂದ್ರ ತೋರಿದ ಪ್ರೀತಿಗೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ

    ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ

    ಚಾಮರಾಜನಗರ: ಪ್ರಜಾಕೀಯ ಪಕ್ಷಕ್ಕೆ ರೈತರನ್ನು ಹಾಗೂ ಗ್ರಾಮೀಣ ಭಾಗದ ಜನರನ್ನು ಸೆಳೆಯುವ ಉದ್ದೇಶದಿಂದ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಸದ್ದಿಲ್ಲದೇ ಗ್ರಾಮೀಣ ಭಾಗಗಳಲ್ಲಿ ವಾಸ್ತವ್ಯ ಹೂಡಿ ರೈತರ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ.

    ಶುಕ್ರವಾರ ರಾತ್ರಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಉಪ್ಪಿ, ಬೆಳಗ್ಗೆ ಗ್ರಾಮಸ್ಥರ ಜೊತೆ ಹಾಗೂ ರೈತರೊಂದಿಗೆ ಸಭೆ ನಡೆಸಿ, ರೈತರಿಗೆ ಎದುರಾಗಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಿದ್ರು.

    ಇದೇ ವೇಳೆ ಮಾತನಾಡಿದ ಉಪೇಂದ್ರ, ಚಾಮರಾಜನಗರ ಭದ್ರಕೋಟೆ ಎಂದು ನಾನು ಇಲ್ಲಿಗೆ ಬಂದಿಲ್ಲ. ಇಲ್ಲಿನ ಜನರ ಸಮಸ್ಯೆ ತಿಳಿಯಲು, ಗ್ರೌಂಡ್ ರಿಯಾಲಿಟಿ ಚೆಕ್ ಮಾಡಲು ಬಂದಿದ್ದೇನೆ. ಇಲ್ಲಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದಕ್ಕೆ ಪರಿಹಾರವನ್ನು ಪಟ್ಟಿ ಮಾಡಲು ಇಲ್ಲಿನ ಜನರಿಗೆ ಹೇಳಿದ್ದೇನೆ ಎಂದ್ರು.

    ಈ ಭಾಗದಲ್ಲಿ ಯಾವ ಪಕ್ಷ ಇದೆ, ಇಲ್ಲಿ ಯಾರು ಅಭ್ಯರ್ಥಿ ಎಂಬುದು ನನಗೆ ಗೊತ್ತಿಲ್ಲ. ಅದನ್ನು ತಿಳಿದುಕೊಳ್ಳೋದಕ್ಕೆ ನಾನು ಇಲ್ಲಿ ಬಂದಿಲ್ಲ. ನನ್ನ ನಾಲ್ಕೈದು ಟೀಂಗಳು ಗ್ರೌಂಡ್ ರಿಯಾಲಿಟಿ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ. ಅಂದ್ರೆ ಕೃಷಿ, ಆರೋಗ್ಯ, ಕೆರೆ ಮುಂತಾದವುಗಳ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಹೀಗಾಗಿ ನಾನು ಬಂದು ಅದರ ರಿಯಾಲಿಟಿ ನೋಡ್ತಾ ಇದ್ದೀನಿ. ಇಲ್ಲಿನ ಕೆರೆಗಳು ಹೇಗಿವೆ, ಅವುಗಳನ್ನು ಹೇಗೆ ಸರಿಪಡಿಸಬಹುದು, ಜನರು ಅದಕ್ಕೆ ಯಾವ ರೀತಿ ಸ್ಪಂದಿಸುತ್ತಾರೆ ಎಂಬುವುದರ ಬಗ್ಗೆ ನೋಡಲು ಬಂದಿದ್ದೇನೆ. ಯಾವುದೇ ಬೇರೆ ಉದ್ದೇಶ ನನಗಿಲ್ಲ ಅಂತ ಹೇಳಿದ್ರು.

    ಇದನ್ನೂ ಓದಿ: ಕನ್ಫ್ಯೂಷನ್, ಥ್ರಿಲ್ಲರ್ ಸಿನಿಮಾ ಅಲ್ಲ, ನಮ್ದು ಟ್ರುಥ್‍ಫುಲ್ ಸಿನಿಮಾ: ಉಪೇಂದ್ರ

    ಸತ್ಯದ ದಾರಿಗೆ ನಾವು ಬರಲೇ ಬೇಕು. ಇದೇ ರೀತಿ ಸುಳ್ಳಿನ ಜೀವನದಲ್ಲಿ ಎಷ್ಟು ದಿನ ಅಂತ ಇರಕ್ಕಾಗುತ್ತೆ. ಗೊತ್ತಿದ್ದರೂ ಕೂಡ ಇದೇ ಸತ್ಯ ಅಂತ ಹೇಳಿಕೊಂಡು ತಿರುಗುತ್ತೇವೆ. ಇದನ್ನು ಬದಲಾಯಿಸಲು ಸಾಧ್ಯವೇ ಇಲ್ಲ ಅಂತ ಪರಿಸ್ಥಿತಿ ಬರೋದು ತುಂಬಾ ದುರದೃಷ್ಟಕರವಾದುದು. ಮುಂದಿನ ಜನಾಂಗದ ದೃಷ್ಟಿಯಿಂದ ನಾವು ಇದನ್ನೆಲ್ಲಾ ಯೋಚನೆ ಮಾಡಬೇಕು ಅಂತ ಹೇಳಿದ್ರು.

    ಒಬ್ಬ ನಾಯಕನನ್ನು ಆಯ್ಕೆ ಮಾಡಿದ ಮೇಲೆ ಕೆಲವು ಕೆಲಸಗಳನ್ನು ಮಾಡೋದಕ್ಕಷ್ಟೆ ಹೊರತು ಬೇರೆ ವಿಷಯಗಳಲ್ಲಿ ಭಾಗಿಯಾಗೋದಕ್ಕಲ್ಲ, ಇಬ್ಭಾಗ ಮಾಡೋದಕ್ಕಲ್ಲ. ಬೇಸರದ ವಿಷಯಗಳನ್ನು ಮಾತನಾಡೋದಕ್ಕಲ್ಲ, ದೂಷಿಸೋದಕ್ಕಲ್ಲ. ಹೀಗಾಗಿ ಇಲ್ಲಿ ಪ್ರಜೆಗಳ ಬಗ್ಗೆ ಯೋಚನೆ ಮಾಡೋಣ. ಇದು ಎಲ್ಲರ ದೇಶ. ಹೀಗಾಗಿ ಎಲ್ಲರೂ ಪ್ರಯತ್ನ ಪಡಲೇಬೇಕು. ಅದಕ್ಕೆ ನಾನು ಯಾರನ್ನೂ ದೂಷಿಸುವುದಿಲ್ಲ. ಯಾರನ್ನೂ ವಿರೋಧಿಸುವುದಿಲ್ಲ ಎಂದು ತಿಳಿಸಿದ್ರು.

    ಇಲ್ಲಿ ದುಡ್ಡು ಮಾಡಿ ವಿದೇಶಕ್ಕೆ ಹೋಗಿ ದುಡ್ಡು ವೇಸ್ಟ್ ಮಾಡಿ ಒಂದು ತಿಂಗ್ಳು ಇದ್ದು, ಎಂಜಾಯ್ ಮಾಡಿ ಬರೋ ಬದಲು ವರ್ಷಾನುಗಟ್ಟಲೇ ಇರೋ ನಮ್ಮ ದೇಶವನ್ನೇ ಫಾರಿನ್ ಕಂಟ್ರಿಯನ್ನಾಗಿ ಮಾಡೋಣ ಅಂತ ಅಂದ್ರು.

    ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ನಾಯಕರಾಗಬೇಕು, ಬೆಂಬಲಿಗರಾಗಬೇಡಿ. ಯಾಕಂದ್ರೆ ದೇವರು ಎಲ್ಲರಿಗೂ ಒಂದಲ್ಲ ಒಂದು ರೀತಿಯ ಸಾಮಥ್ರ್ಯ ಕೊಟ್ಟಿರುತ್ತಾನೆ. ಇದು ಪ್ರಜಾಕಾರಣ, ರಾಜಕಾರಣ ಅಲ್ಲ. ನಿಮ್ಮ ಕೊಡುಗೆ ಅತ್ಯಮೂಲ್ಯವಾದುದು. ಹೀಗಾಗಿ ನಾನು ಯಾವತ್ತೂ ಹೇಳ್ತಾ ಇರೋದು ನನಗೆ ನಾಯಕರು ಬೇಕು ಅಂತ ಹೇಳಿದ್ರು.

  • ಕನ್ಫ್ಯೂಷನ್, ಥ್ರಿಲ್ಲರ್ ಸಿನಿಮಾ ಅಲ್ಲ, ನಮ್ದು ಟ್ರುಥ್‍ಫುಲ್ ಸಿನಿಮಾ: ಉಪೇಂದ್ರ

    ಕನ್ಫ್ಯೂಷನ್, ಥ್ರಿಲ್ಲರ್ ಸಿನಿಮಾ ಅಲ್ಲ, ನಮ್ದು ಟ್ರುಥ್‍ಫುಲ್ ಸಿನಿಮಾ: ಉಪೇಂದ್ರ

    ಮೈಸೂರು: ಸ್ಯಾಂಡಲ್ ವುಡ್ ನಟ ಕಮ್ ಕೆಪಿಜೆಪಿ ಸ್ಥಾಪಕ ಉಪೇಂದ್ರ ಇಂದು ಪ್ರಥಮ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಿನಲ್ಲಿ ಪ್ರಜಾಕೀಯ ಪಕ್ಷದ ಸಂಘಟನೆ ಕುರಿತು ಮಾತನಾಡಿದ್ದಾರೆ.

    ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮದು ಕನ್ಫ್ಯೂಷನ್ ಸಿನಿಮಾ ಅಲ್ಲ. ನಮ್ಮದು ಥ್ರಿಲ್ಲರ್ ಸಿನಿಮಾನು ಅಲ್ಲ. ಇದೊಂದು ಟ್ರುಥ್ ಫುಲ್ ಸಿನಿಮಾ. ಅರ್ಥ ಆಗದೆ ಇರೋರಿಗೆ ಇದು ಹಾರರ್ ಸಿನಿಮಾ ಅಂತ ತನ್ನದೇ ಶೈಲಿಯಲ್ಲಿ ಡೈಲಾಗ್ ಹೊಡೆದ್ರು.

    ನಾನೂ ಮತ ಹಾಕಿ ಅಂತ ಬೀಕ್ಷೆ ಬೇಡುತ್ತಿಲ್ಲ. ನಾನೂ ದೇಶ ಸೇವೆ ಮಾಡಲು ಬಂದಿದ್ದೇನೆ. ನೀವೂ ಗೆಲ್ಲಿಸಬೇಕು ಹೊರತು ನಾನೂ ಗೆಲ್ಲುತ್ತೇನೆ ಎಂದು ಹೇಳುತ್ತಿಲ್ಲ. ನಾನೂ ಗೆಲ್ಲುತ್ತೇನೆ ಎನ್ನುತ್ತಿಲ್ಲ ನಿಮ್ಮ ಗೆಲುವು ಎನ್ನುತ್ತಿದ್ದೇನೆ. ನನಗೆ ಗಣ್ಯರು, ಹಿರಿಯರು ಬೆಂಬಲ ನೀಡಿದ್ದಾರೆ. ಮೈಸೂರು ಯದುವಂಶ ಮಹಾರಾಜ ಯದುವೀರ್ ಕೂಡ ಬೆಂಬಲ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರ ಹೆಸರು ಹೇಳುವೆ. ಈವರೆಗೂ ಯಾವ ನಟರು ನನ್ನ ಪಾರ್ಟಿಗೆ ಸೇರುವುದಾಗಿ ಹೇಳಿಲ್ಲ. ಆದ್ರೆ ನಟ ಶಿವಣ್ಣ, ಯಶ್ ಎಲ್ಲರೂ ಬೆಂಬಲ ಸೂಚಿಸಿದ್ದಾರೆ ಅಂತ ಅವರು ಹೇಳಿದ್ರು.

    ರಾಜಕಾರಣ ಅಂದ್ರೆ ಹಿಂಗೆ ಇದೆ ಅಂತ ನಂಬಿ ಬಿಟ್ಟಿದ್ದೇವೆ. ಅದನ್ನ ಬದಲಾವಣೆ ಹೇಗೆ ಅನ್ನೋದೆ ದೊಡ್ಡ ಕುತೂಹಲವಾಗಿದೆ. ಅದಕ್ಕಾಗಿ ಕೆಪಿಜೆಪಿ ಪಕ್ಷ ಕ್ಯಾಶ್‍ಲೆಶ್ ಪಾರ್ಟಿ ಹುಟ್ಟುಹಾಕಿದ್ದೇವೆ. ಈ ಮೂಲಕ ಸಮಾಜದಲ್ಲಿ ಬದಲಾವಣೆಗೆ ಮುಂದಾಗಿದ್ದೇವೆ. ನಾವು ಪಾರ್ಟಿ ಆರಂಭಿಸಿದಾಗ ಕೇವಲ 10% ಜನರಿಗೆ ಗೊತ್ತಾಗಿತ್ತು. ಈಗ ಮಾಧ್ಯಮಗಳ ಮೂಲಕ ಹಳ್ಳಿ ಹಳ್ಳಿಗೂ ತಲುಪಿದೆ. ನಮ್ಮ ಪಕ್ಷಕ್ಕೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಅದಕ್ಕಾಗಿಯೇ ನಾವು ಆ್ಯಪ್ ಬಿಡುಗಡೆ ಮಾಡಿದ್ದೇವೆ. ವೆಬ್‍ಸೈಟ್ ಮೂಲಕ ನಮ್ಮನ್ನ ಸಂಪರ್ಕಿಸಬಹುದು. ಅರ್ಹ ಅಭ್ಯರ್ಥಿಗಳು ನಮ್ಮ ಪಕ್ಷ ಸೇರಬಹುದು ಅಂತ ಹೇಳಿದ್ರು.

    ನಾವು ಕ್ಷೇತ್ರವಾರು ಮೈಕ್ರೋ ಪ್ಲಾನ್ ಮಾಡಬೇಕು ಎಂದಿದ್ದೇವೆ. ಹೇಗೆ ಸರ್ಕಾರ ನಡೆಸಬೇಕು.? ಅದು ಸಂಪೂರ್ಣ ಪಾರದರ್ಶಕತೆ ಇರಬೇಕು. ಮೊದಲ ಹೆಜ್ಜೆಯೆ ನಾವು ಸರಿಯಾಗಿ ಇಡಬೇಕು. ನಾನು ನಾಯಕ ಆಗುತ್ತೇನೆ ಅಂತ ನಮ್ಮ ಪಕ್ಷಕ್ಕೆ ಬರಬೇಡಿ. ಬೆಳಗ್ಗೆ 9 ರಿಂದ ಸಂಜೆ 6ರವೆಗೆ ಕೆಲಸ ಮಾಡುವವರು ಬನ್ನಿ. ಇಲ್ಲವಾದ್ರೆ ಖಂಡಿತವಾಗಿಯೂ ನಮ್ಮ ಪಕ್ಷಕ್ಕೆ ಬರಬೇಡಿ ಅಂತ ತನ್ನ ಪಕ್ಷಕ್ಕೆ ಆಗಮಿಸುವವರಿಗೆ ಷರತ್ತು ಹಾಕಿದ್ರು.

    ಇದನ್ನೂ ಓದಿ; ಉಪೇಂದ್ರ ರಾಜಕೀಯ ಎಂಟ್ರಿಗೆ ಯಶ್ ಹೇಳಿದ್ದು ಹೀಗೆ

    ನನ್ನ ಮೇಲೆ ಯಾವುದೇ ದೂರು ದಾಖಲಾಗಿಲ್ಲ. ಆ ರೀತಿ ಆಯೋಗದಲ್ಲಿ ದೂರು ದಾಖಲಾದ್ರೆ ಕಾನೂನು ಹೋರಾಟ ಮಾಡುತ್ತೇನೆ. ನಾನೇನು ಹಣದ ವಿಚಾರವಾಗಿ ತಪ್ಪಾಗಿ ಮಾತನಾಡಿಲ್ಲ. ನೀವು ನನ್ನನ್ನ ಪ್ರಶ್ನೆ ಮಾಡಿದ್ರೆ ಹಾಗಂತ ನಿಮ್ಮ ಮೇಲೆ ಕೇಸ್ ಹಾಕಲು ಸಾಧ್ಯವೇ ಅಂತ ಉಪ್ಪಿ ಪತ್ರಕರ್ತರಿಗೆ ಪ್ರಶ್ನೆ ಹಾಕಿದ್ರು.

  • ಉಪ್ಪಿ ಪ್ರಜಾಕೀಯಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ

    ಉಪ್ಪಿ ಪ್ರಜಾಕೀಯಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ

    ಚಾಮರಾಜನಗರ: ಉಪೇಂದ್ರ ಅವರು ಪ್ರಜಾಕೀಯ ಪಕ್ಷ ಕಟ್ಟಿದ್ದು ಒಳ್ಳೆದಾಯಿತು ಎಂದು ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಕೊಳ್ಳೆಗಾಲ ತಾಲೂಕಿನ ಕುರುಬರಕಟ್ಟೆ ಗ್ರಾಮದಲ್ಲಿ ಶ್ರೀ ಧರೆಗೆ ದೊಡ್ಡವರ ಸಂಸ್ಥಾನ ಮಠದ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಅವರು, ಉಪೇಂದ್ರ ಅವರು ಹೊಸ ಆಲೋಚನೆ ಇಟ್ಟುಕೊಂಡು ಪಕ್ಷ ಸ್ಥಾಪಿಸಿದ್ದಾರೆ. ಅವರು ಇಂಡಿಪೆಂಡೆಟ್ ಆಗಿ ಪಕ್ಷಕಟ್ಟಿರುವುದು ಒಳ್ಳೆಯದು ಎಂದು ತಿಳಿಸಿದರು.

    ಕರ್ನಾಟಕ್ಕೆ ಹೊಸ ಆಲೋಚನೆಗಳು ಬೇಕಾಗಿತ್ತು. ಆ ಹೊಸ ಆಲೋಚನೆಯನ್ನು ಉಪೇಂದ್ರ ಅವರು ಮಾಡಿದ್ದಾರೆ. ಈ ರೀತಿಯ ಪಕ್ಷ ಕರ್ನಾಟಕ್ಕೆ ಬೇಕಾಗಿತ್ತು. ಉಪೇಂದ್ರ ಅವರು ಈ ಮೂಲಕ ಕರ್ನಾಟಕ್ಕೆ ಒಳ್ಳೆಯದು ಮಾಡಲಿ ಎಂದು ಹೇಳಿದರು.

    ಮುಂದುವರೆದು ಮಾತನಾಡಿದ ಅವರು, ನನಗೆ ಸದ್ಯಕ್ಕೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲ ಎಂದು ತಿಳಿಸಿದರು.

    ಇದನ್ನೂ ಓದಿ: ಸಿನಿಮಾ ರಂಗಕ್ಕೆ ಗುಡ್‍ಬೈ ಹೇಳ್ತಾರಾ ಉಪೇಂದ್ರ?

  • ಕುಂದಾಪುರದಿಂದ ಸ್ಫರ್ಧಿಸುತ್ತಾರೆ ಅನ್ನೋದಿಕ್ಕೆ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ

    ಕುಂದಾಪುರದಿಂದ ಸ್ಫರ್ಧಿಸುತ್ತಾರೆ ಅನ್ನೋದಿಕ್ಕೆ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ

    ಬೆಂಗಳೂರು: ನಾನು ಕುಂದಾಪುರದಿಂದ ಸ್ಪರ್ಧಿಸುತ್ತೇನೆಂಬುದು ಸುಳ್ಳು ವಿಚಾರ. ಎಲ್ಲ ಅಭ್ಯರ್ಥಿಗಳು ಆದ ಮೇಲೆ ನಾನು ನಿಲ್ಲುವ ಬಗ್ಗೆ ಹೇಳ್ತಿನಿ. ನಾನು ಎಲ್ಲಿ ಸ್ಪರ್ಧಿಸಬೇಕೆಂಬ ಬಗ್ಗೆ ಇಷ್ಟರಲ್ಲೇ ಹೇಳ್ತೀನಿ ಅಂತ ರಿಯಲ್ ಸ್ಟಾರ್ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ ಅಧ್ಯಕ್ಷ ಉಪೇಂದ್ರ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಜೆಪಿ ಪಕ್ಷದ ಅಭ್ಯರ್ಥಿಯಾಗಲು ಮುಕ್ತ ಅವಕಾಶವಿದ್ದು, ಯಾರು ಬೇಕಾದರೂ ಸಂಪರ್ಕ ಮಾಡಬಹುದು. ವೈಯುಕ್ತಿಕ ಸಂದರ್ಶನ ಮಾಡಲಾಗುತ್ತದೆ. ಆಯಾ ಕ್ಷೇತ್ರದ ಬಗ್ಗೆ ವಿವರ, ಸಮಸ್ಯೆಗಳ ಅರಿವಿರಬೇಕು. ವಿದ್ಯಾರ್ಹತೆ ಇಲ್ಲಿ ಪರಿಗಣಿಸಲಾಗುವುದಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡಲು ಇಚ್ಛಿಸುವವರು ಒಂದು ತಿಂಗಳ ಒಳಗೆ ಅಪ್ಲಿಕೇಷನ್ ಫಿಲ್ ಮಾಡಿ ಕಳಿಸಬೇಕು ಅಂತ ಹೇಳಿದ್ರು.

    ಮಹಿಳೆಯರು ಕೂಡ ನಮ್ಮ ಪಕ್ಷಕ್ಕೆ ಅಭ್ಯರ್ಥಿಯಾಗಿ ಬರಲು ಆಸಕ್ತಿ ತೋರಿಸಿದ್ದಾರೆ. ಮಹಿಳೆಯರಿಗೂ ಮುಕ್ತ ಅವಕಾಶ ನಮ್ಮಲಿದೆ. ಒಳ್ಳೆ ಒಳ್ಳೆ ಐಡಿಯಾಗಳನ್ಮು ತೆಗೆದುಕೊಂಡು ಬನ್ನಿ ಅಂತ ಉಪ್ಪಿ ಕರೆ ಕೊಟ್ಟಿದ್ದಾರೆ. ಎಲ್ಲ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಸ್ಪರ್ಧೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆಗೆ ಇಂತದ್ದೇ ಎಂಬ ಮಾನದಂಡವಿಲ್ಲ. ಅವಿದ್ಯಾವಂತರಿಗೂ ಪಕ್ಷದಲ್ಲಿದೆ ಅವಕಾಶ. ಒಂದು ತಿಂಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಡೆಡ್ ಲೈನ್, ಸಂವಿಧಾನಕ್ಕನುಗುಣವಾಗಿ ಕಾಲಂ ಇಟ್ಟಿದ್ದೇವೆ. ನಮ್ಮ ಪಕ್ಷದಲ್ಲಿ ಜಾತಿ, ವರ್ಗಕ್ಕೆ ಅವಕಾಶವಿಲ್ಲ ಅಂದ್ರು.

    ವೆಬ್ ಸೈಟ್,ಆಪ್ ಲಾಂಚ್: ಇಂದಿನ ಕಾರ್ಯಕ್ರಮದಿಂದ ಕುಟುಂಬ ಸದಸ್ಯರನ್ನ ಹೊರಗಿಟ್ಟ ಉಪೇಂದ್ರ ಅವರು, ಪ್ರಜಾಕೀಯ ವೆಬ್ ಸೈಟ್ ಲೋಕಾರ್ಪಣೆ ಮಾಡಿದ್ರು. ನಗ್ನ ಸತ್ಯ ಎಂಬ ಹೆಡ್ ನಲ್ಲಿ ಹಲವು ಮಾಹಿತಿ ಹೊರಬರಲಿದ್ದು, ಅಭ್ಯರ್ಥಿಗಳ ಮಾನದಂಡದ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ರು.

    https://www.kpjpuppi.org ಉಪೇಂದ್ರ ವೆಬ್ ಸೈಟ್ ಇದಾಗಿದ್ದು, ಈ ವೆಬ್ ಸೈಟ್ ನಲ್ಲಿ ಜನರಿಗೆ ಮಾಹಿತಿ ನೀಡಲು ಅವಕಾಶ ಮಾಡಿಕೊಡಲಾಗಿದೆ. ಅಭ್ಯರ್ಥಿಯಾಗ ಬಯಸುವವರು ಇದರಲ್ಲಿ ಡಿಟೇಲ್ಸ್ ಅಪ್ಡೇಟ್ ಮಾಡಬೇಕು. ವಿಧಾನಸಭಾ ಕ್ಷೇತ್ರಕ್ಕೆ ಏನೇನು ಬೇಕೆಂಬ ಬಗ್ಗೆ ಮಾಹಿತಿಯನ್ನು ಜನರಿಗೆ ಈ ವೆಬ್ ಸೈಟ್ ನಲ್ಲಿ ನೀಡಲಿದ್ದೇವೆ ಅಂದ್ರು. ಪ್ರಜಾಕೀಯ ಟ್ಯಾಗ್ ಲೈನ್ ನಲ್ಲಿ ಕರ್ನಾಟಕ ಧ್ವಜದ ಮಾದರಿಯಲ್ಲಿ ಆಪ್ ಲೋಕಾರ್ಪಣೆಯಾಯಿತು.

    ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದಕ್ಕೆ ಪರಿಹಾರ ಕೂಡಾ ಪಟ್ಟಿ ಮಾಡಿ ಕಳುಹಿಸಿ. ಈ ಪಕ್ಷಕ್ಕೆ ಸೇರಬಯಸುವವರಿಗೆ ಯಾವುದೇ ವಿದ್ಯಾರ್ಹತೆಯ ಅಗತ್ಯವಿಲ್ಲ. ಗ್ರಾಮ ಪಂಚಾಯ್ತಿ, ನಗರ ಸಭೆ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಶಾಸಕ ಅಭ್ಯರ್ಥಿಗಳು ನಮ್ಮ ವೆಬ್‍ಗೆ ಡಿಟೇಲ್ಸ್ ಕಳಿಸಬಹುದು ಅಂತ ತಿಳಿಸಿದ್ರು.

    ವೇದಿಕೆಯಲ್ಲಿ ಚೇರ್ ಗಳನ್ನ ಚುನಾವಣಾ ಅಭ್ಯರ್ಥಿಗಳಿಗಾಗಿ ಖಾಲಿ ಉಳಿಸಿದ ಉಪೇಂದ್ರ, ನಮ್ಮ ಪಕ್ಷ ಒಂದು ಮುಕ್ತವಾದ ವೇದಿಕೆ. ಖಾಲಿ ಕುರ್ಚಿಗಳನ್ನು ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಪಕ್ಷದ ಒಂದು ಆಪ್, ಒಂದು ವೆಬ್ ಸೈಟ್ ಮಾಡಿದ್ದೇವೆ. ಅದರಲ್ಲಿ ಪಕ್ಷದ ಎಲ್ಲವೂ ಒಳಗೊಂಡಿರುತ್ತೆ. ಮೈಕೋ ನವೀನ್ ಮತ್ತು ಸ್ನೇಹಿತರು ವೆಬ್‍ಸೈಟ್ ಡಿಸೈನ್ ಮಾಡಿದ್ದಾರೆ ಅಂತ ನಟ ಉಪೇಂದ್ರ ವಿವರಿಸಿದ್ರು.

    ಬದುಕುವುದಕ್ಕೆ ಕೆಲಸ ಅನಿವಾರ್ಯ. ಇದೂ ಇದೆ ವೃತ್ತಿಯೂ ಇದೆ. ಬದುಕುವುದಕ್ಕೆ ಅದೂ ಅನಿವಾರ್ಯವಾಗಿದೆ. ಇದರಲ್ಲೇ ಮುಂದುವರಿಯುತ್ತೇನೆ. ಅನಿವಾರ್ಯವಾದರೆ ಅಲ್ಲಿಗೂ ಹೋಗ್ತೇನೆ ಅಂತ ಹೇಳಿದ್ರು. ಇನ್ನು ಪಕ್ಷ ಉದ್ಘಾಟನೆಯಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ಬಿಜೆಪಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಕುರಿತು ಮಾತನಾಡಿದ ಅವರು, ಬಿಜೆಪಿ ಅವರು ತಪ್ಪಾಗಿ ತಿಳ್ಕೊಂಡಿದ್ರು. ಯಾರೋ ಮಾಡಿದ ವಿಡಿಯೋಗೆ ನನ್ನ ಟೀಕೆ ಮಾಡಿದ್ರು. ಅವರಿಗೆ ವಾಸ್ತವ ತಿಳಿಸಿದ್ದೆ, ಬಳಿಕ ಸರಿ ಹೋಗಿದೆ. ನಾನು ಯಾರನ್ನೂ ದೂಷಿಸುವುದಿಲ್ಲ ಅಂತ ಅಂದ್ರು.

    ನಿರ್ಮಾಪಕ ಸೌಂದರ್ಯ ಜಗದೀಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಈ ವೇಳೆ ಭಾಗಿಯಾಗಿದ್ದರು.

    https://www.youtube.com/watch?v=oFdyrl5xSTg

  • ಅನುಪಮಾ ಶೆಣೈ ಹೊಸ ಪಕ್ಷ ಕಾಂಗ್ರೆಸ್ ಮತಗಳನ್ನು ಒಡೆಯುತ್ತಾ?

    ಅನುಪಮಾ ಶೆಣೈ ಹೊಸ ಪಕ್ಷ ಕಾಂಗ್ರೆಸ್ ಮತಗಳನ್ನು ಒಡೆಯುತ್ತಾ?

    ಬಳ್ಳಾರಿ: ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಡಿವೈಎಸ್‍ಪಿ ಅನುಪಮಾ ಶೆಣೈ ಇದೀಗ ಹೊಸ ಪಕ್ಷವೊಂದನ್ನು ಸ್ಥಾಪಿಸಿದ್ದು, ಕಾಂಗ್ರೆಸ್ ಮತಗಳನ್ನು ಒಡೆಯುತ್ತಾ ಎನ್ನುವ ಪ್ರಶ್ನೆ ಎದ್ದಿದೆ.

    ಬಳ್ಳಾರಿಯ ಕೂಡ್ಲಿಗಿ ಪಟ್ಟಣದಲ್ಲಿ ಗಾಂಧೀಜಿ ಚಿತ್ಮಾಭಸ್ಮಕ್ಕೆ ನಮನ ಸಲ್ಲಿಸುವ ಮೂಲಕ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಸಮಾರಂಭದಲ್ಲಿ `ಭಾರತೀಯ ಜನಶಕ್ತಿ ಕಾಂಗ್ರೆಸ್’ ಎಂಬ ಹೆಸರಿನಲ್ಲಿ ಪಕ್ಷ ಘೋಷಣೆ ಮಾಡಿ ನೂತನ ರಾಜಕೀಯ ಪಕ್ಷವನ್ನು ಅನುಪಮಾ ಶಣೈ ಉದ್ಘಾಟನೆಗೊಳಿಸಿದ್ರು. ಈ ಮೂಲಕ ಡಿವೈಎಸ್ಪಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ರಾಜಕೀಯ ನೆಲೆ ಕಂಡುಕೊಳ್ಳಲು ಅನುಪಮಾ ಮುಂದಾಗಿದ್ದಾರೆ.

    ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಶೆಣೈಗೆ ಸಿಟ್ಟು: ಅರ್ಧಕ್ಕೆ ಪ್ರೆಸ್‍ಮೀಟ್ ಮುಗಿಸಿ ಎದ್ದು ಹೋದ್ರು

    ಮಂಗಳವಾರವಷ್ಟೇ ರಿಯಲ್ ಸ್ಟಾರ್, ನಟ ಉಪೇಂದ್ರ `ಕೆಜೆಪಿಜೆ’ ಎನ್ನುವ ಪಕ್ಷವನ್ನು ಉದ್ಘಾಟನೆಗೊಳಿಸಿದ್ದರು. ಇದೀಗ ಮತ್ತೆ ಅನುಪಮಾ ಶೆಣೈ ಕೂಡ ಪಕ್ಷ ಕಟ್ಟಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೇ ಎರಡು ದಿನಗಳಲ್ಲೆ ಎರಡು ರಾಜಕೀಯ ಪಕ್ಷಗಳು ಹೊಸದಾಗಿ ಆರಂಭಗೊಂಡಿರುವುದು ರಾಜ್ಯದಲ್ಲೆ ಇದೇ ಮೊದಲಾಗಿದೆ.

    ಇದನ್ನೂ ಓದಿ:  ಚುನಾವಣೆ ಹೊತ್ತಲ್ಲಿ ಹೊಸದೊಂದು ಪಕ್ಷ ಎಂಟ್ರಿ – ಬುದ್ಧಿವಂತನಿಂದ `ಕೆಪಿಜೆಪಿ’ ಸ್ಥಾಪನೆ

    ಅನುಪಮಾ ಶೆಣೈ ತಮ್ಮ ಪಕ್ಷಕ್ಕೆ ಭಾರತೀಯ ಜನಶಕ್ತಿ ಕಾಂಗ್ರೆಸ್ ಎಂದು ಹೆಸರಿಟ್ಟಿರುವ ಕಾರಣ ಕಾಂಗ್ರೆಸ್‍ಗೆ ಸ್ಪಲ್ಪ ಕಟಂಕವಾಗಬಹುದು ಎನ್ನುವ ಮಾತುಗಳು ಈಗ ಕೇಳಿ ಬಂದಿವೆ. ಅನುಪಮಾ ಶಣೈ ಅವರ `ಭಾರತೀಯ ಜನಶಕ್ತಿ ಕಾಂಗ್ರೆಸ್’ ಪಕ್ಷ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು 80 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದೆ.

    ಅನುಪಮಾ ಶೆಣೈ ಹೊಸ ಪಕ್ಷ ಸ್ಥಾಪಿಸಿದ ಹಿನ್ನೆಲೆಯಲ್ಲಿ ನಿಮ್ಮ ಅಭಿಪ್ರಾಯ ಏನು? ಈ ಪಕ್ಷದಿಂದ ಅತಿ ಹೆಚ್ಚಿನ ಹೊಡೆತ ಯಾರಿಗೆ? ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ಬರೆಯಿರಿ.

  • ಉಪೇಂದ್ರ ವಿರುದ್ಧ ಕಾನೂನು ಹೋರಾಟ ಮಾಡ್ತೀವಿ: ಶೋಭಾ ಕರಂದ್ಲಾಜೆ

    ಉಪೇಂದ್ರ ವಿರುದ್ಧ ಕಾನೂನು ಹೋರಾಟ ಮಾಡ್ತೀವಿ: ಶೋಭಾ ಕರಂದ್ಲಾಜೆ

    ಬೆಂಗಳೂರು: ಉಪೇಂದ್ರ ಅವರು ಪಕ್ಷ ಸ್ಥಾಪನೆಯ ದಿನವೇ ಪ್ರಧಾನಿ ಮೋದಿಯವರನ್ನ ಅವಹೇಳನ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ನಡೆಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

    ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚಿತ್ರರಂಗದಲ್ಲಿ ಉಪೇಂದ್ರ ಅವರು ನಟರಾಗಿ ಯಶಸ್ವಿಯಾಗಿದ್ದಾರೆ. ಆದರೆ ರಾಜಕೀಯವಾಗಿ ಮೊದಲ ದಿನವೇ ಎಡವಿದ್ದಾರೆ. ಉಪೇಂದ್ರ ಅವರ `ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ’ ಉದಯದ ಬೆನ್ನಲ್ಲೇ ಉಪೇಂದ್ರ ಚಿತ್ರದ ಹಾಡು ಬಳಸಿ ಮೋದಿ ಬಗ್ಗೆ ಸಿದ್ದಪಡಿಸಿದ ವಿಡಿಯೋ ವೈರಲ್ ಆಗಿದೆ ಇದನ್ನು ಬಿಜೆಪಿ ಒಪ್ಪಲ್ಲ, ಇದು ಸರಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದರು.

    ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪಕ್ಷ ಕಟ್ಟಲು ರಾಜಕಾರಣ ಮಾಡಲು ಅವಕಾಶ ಇದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನ ಮಾಡಿರುವುದು ಸರಿಯಲ್ಲ. ಈ ಬಗ್ಗೆ ಕಾನೂನಾತ್ಮಕ ಹೋರಾಟಕ್ಕೂ ಸಿದ್ದವಾಗಬೇಕಾಗುತ್ತೆ. ಹೊಸ ಪಕ್ಷ ಕಟ್ಟಿದ ಮೊದಲ ದಿನವೇ ಉಪೇಂದ್ರ ಎಡವಿರುವುದು ವಿಪರ್ಯಾಸಕ್ಕೆ ಎಡೆಮಾಡಿಕೊಟ್ಟಿದೆ ಎಂದು ಹೇಳಿದರು.

    ಇನ್ನೂ ಟಿಪ್ಪು ಜಯಂತಿ ಹಿನ್ನೆಲೆ ಕೊಡಗು ಜಿಲ್ಲೆಗೆ ಬಿಜೆಪಿ ರ‍್ಯಾಲಿ ನಿಷೇಧ ಮಾಡಿದ್ದಾರೆ. ಜಿಲ್ಲೆಯಲ್ಲಿ ಉಳಿದು ಕೊಳ್ಳಲು ನಮಗೆ ಸರ್ಕಾರ ಅವಕಾಶ ನೀಡುತ್ತಿಲ್ಲ. ಸರ್ಕಾರದ ಕುತ್ರಂತದಿಂದಾಗಿ ಜಿಲ್ಲೆಯ ರ‍್ಯಾಲಿ ಪ್ರವೇಶ ನಿಷೇಧವಾಗಿದೆ. ನಾವು ಜಿಲ್ಲೆಯಲ್ಲಿ ಶಾಂತಿಯುತವಾಗಿ ರ‍್ಯಾಲಿ ನಡೆಸುತ್ತೇವೆ. ಜಿಲ್ಲೆಯ ಪ್ರವೇಶಕ್ಕೆ ಅನುಮತಿ ನೀಡಿ. ಶಾಂತಿಯುತವಾಗಿ ರ‍್ಯಾಲಿ ನಡೆಸಲು ಅವಕಾಶ ನೀಡಬೇಕು ಎಂದು ಪೊಲೀಸ್ ಇಲಾಖೆ ಮತ್ತು ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಮನವಿ ಮಾಡಿಕೊಂಡರು.

    ಇದನ್ನೂ ಓದಿ: ಉಪ್ಪಿ ರಾಜಕೀಯ ಪಕ್ಷದ ಹೆಸ್ರು ಇಂದು ಅಧಿಕೃತ ಘೋಷಣೆ- ಪಕ್ಷದ ಸ್ವರೂಪ, ಪ್ರಣಾಳಿಕೆಗೂ ಮುಹೂರ್ತ ಫಿಕ್ಸ್

    ಕೊಡಗು ಜಿಲ್ಲೆಗೆ ಹೋಗಲು ಬಿಜೆಪಿ ಪರಿವರ್ತನಾ ಯಾತ್ರೆಗೆ ಅನುಮತಿ ನೀಡಿಲ್ಲ. ಯಾತ್ರೆಯಲ್ಲಿ ಬರುವವರಿಗೆ ಹೊಟೇಲ್ ರೂಮ್ ಕೊಡಬಾರದೆಂದು ಸರ್ಕಾರ ಆದೇಶ ಮಾಡಿದೆ. ನಾವು ಶಾಂತಿಯುತ ಪರಿವರ್ತನಾ ಯಾತ್ರೆ ಮಾಡ್ತೇವೆ. ಅನುಮತಿ ನೀಡುವಂತೆ ಕೊಡಗು ಡಿಸಿ ಮತ್ತು ಎಸ್‍ಪಿ ಅವರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು.

    ಇಂಧನ ಇಲಾಖೆ ಅಕ್ರಮ ಕುರಿತು ಸದನ ಸಮಿತಿ ವರದಿಯ ಬಗ್ಗೆ ಪ್ರತಿಕ್ರಿಯಿಸಿ, ಒಪ್ಪಂದ ಆಗಿದ್ರೆ ಅದು ಅವ್ಯವಹಾರ ಆಗುತ್ತಿತ್ತು. ಆದರೆ ನಮ್ಮ ಅವಧಿಯಲ್ಲಿ ಒಪ್ಪಂದ ಮಾಡಿಕೊಂಡಿಲ್ಲ. ಬೆಳಗಾವಿ ಅಧಿವೇಶನದಲ್ಲಿ ವರದಿ ಮಂಡನೆ ಆಗಲಿ. ವರದಿ ಮಂಡನೆ ಆದ್ರೂ ನನಗೇನೂ ಭಯ ಇಲ್ಲ. ನನಗೆ ನನ್ನ ಬಗ್ಗೆ ಸ್ಪಷ್ಟತೆ ಇದೆ. ರಾಜ್ಯದ ಹಿತದೃಷ್ಟಿಯಿಂದ ನಾನು ತೀರ್ಮಾನ ತೆಗೆದುಕೊಂಡಿದ್ದೇನೆಂಬ ವಿಶ್ವಾಸ ಇದೆ. ಬುಟ್ಟಿ ತೆಗಿತೀವಿ ಹಾವು ಬಿಡ್ತೀವಿ ಅಂತ ಕಾಂಗ್ರೆಸ್ ನವರೇ ಹೇಳ್ತಿದ್ದಾರೆ. ಸಿಎಂ ಬಹಳ ಕೇವಲವಾಗಿ ಮಾತಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲೇ ಪ್ರಕರಣವನ್ನು ಸಿಬಿಐ ಗೆ ವಹಿಸಲಿ ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದರು.

  • ಚುನಾವಣೆ ಹೊತ್ತಲ್ಲಿ ಹೊಸದೊಂದು ಪಕ್ಷ ಎಂಟ್ರಿ – ಬುದ್ಧಿವಂತನಿಂದ `ಕೆಪಿಜೆಪಿ’ ಸ್ಥಾಪನೆ

    ಚುನಾವಣೆ ಹೊತ್ತಲ್ಲಿ ಹೊಸದೊಂದು ಪಕ್ಷ ಎಂಟ್ರಿ – ಬುದ್ಧಿವಂತನಿಂದ `ಕೆಪಿಜೆಪಿ’ ಸ್ಥಾಪನೆ

    ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಇಂದು ಅಧಿಕೃತವಾಗಿ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಪ್ರಜಾಕೀಯ ಮೂಲಕ ಸಂಪೂರ್ಣ ಬದಲಾವಣೆ ಘೋಷಣೆ ಮೊಳಗಿಸಿರುವ ಬುದ್ಧಿವಂತ ಅದಕ್ಕಾಗಿ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷವನ್ನು ಸ್ಥಾಪಿಸಿದ್ದಾರೆ.

    ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಂಪೂರ್ಣ ಬದಲಾವಣೆ ತರೋದು ಉಪ್ಪಿಯ ಸೂಪರ್ ಕನಸು. ಬೆಂಗಳೂರಿನ ಗಾಂಧಿ ಭವನದಲ್ಲಿ ಆಟೋ ಚಾಲಕರ ಯೂನಿಫಾರಂನಲ್ಲಿ ಕಾಣಿಸಿಕೊಂಡ ಪತ್ನಿ ಪ್ರಿಯಾಂಕ, ತಂದೆ-ತಾಯಿ, ನಟ ಕುಮಾರ್ ಗೋವಿಂದ್, ಸಂಗೀತ ನಿರ್ದೇಶಕ ಗುರುಕಿರಣ್ ಮುಂತಾದ ಗಣ್ಯರ ಉಪಸ್ಥಿತಿಯಲ್ಲಿ ಖಾದಿ ಕಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    ಖ್ಯಾತ ಕಲಾವಿದ ವಿಲಾಸ್ ನಾಯಕ್ ಉಪೇಂದ್ರರ ಭವಿಷ್ಯದ ಪರಿಕಲ್ಪನೆಯನ್ನು ಚಿತ್ರಪಟಲದಲ್ಲಿ ಮೂಡಿಸಿದರು. ಎತ್ತು, ರೈತ, ಆಟೋ, ಕನ್ನಡ ಧ್ವಜ ಹಿಡಿದಿರುವ ಬಾಲಕ ಈ ಚಿತ್ರಪಟಲದಲ್ಲಿದೆ.

    ಬಳಿಕ ಮಾತನಾಡಿದ ಉಪೇಂದ್ರ ಅವರು, ಈ ಬದಲಾವಣೆ ನಮ್ಮಿಂದ ಆಗಬೇಕು. ಬಳಿಕ ನಾವು ಬದಲಾವಣೆಯನ್ನು ಬಯಸಬೇಕು. ಜನರಿಂದಲೇ ಬದಲಾವಣೆಯಾಬೇಕು ಎನ್ನುವ ನಿಟ್ಟಿನಲ್ಲಿ ಇಂದು ಇಲ್ಲಿ ಜನರನ್ನು ಸೇರಿಸಿದ್ದೀನಿ. ಒಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಬದಲಾವಣೆಯಾಗಬೇಕು ಎನ್ನುವುದೇ ನಮ್ಮ ಮುಖ್ಯ ಉದ್ದೇಶ ಅಂದ್ರು.

    ಪ್ರಜಾಕೀಯ ಅಂತಾ ಗೋಷಣೆ ಮಾಡಿದಾಗ ತುಂಬಾ ಜನ ನಮಗೆ ಮೈಲ್ ಹಾಗೂ ಪೋಸ್ಟ್ ಗಳನ್ನು ಹಾಕಿದ್ರು. ಸದನ್ನೆಲ್ಲಾ ಓದಿದ ಬಳಿಕ ನನಗನಿದ್ದು, ನಾನು ಒಂದು ಖಾಲಿ ಪಾತ್ರೆ ಅಂತ. ಯಾಕಂದ್ರೆ ಅಷ್ಟೋಂದು ಐಡಿಯಾಗಳು, ಸಮಸ್ಯೆಗಳು ಹಾಗೂ ಪರಿಹಾರಗಳು ನಮ್ಮ ಪ್ರಜೆಗಳಿಂದಲೇ ಹರಿದುಬಂದವು. ವಿದ್ಯಾಭ್ಯಾಸದ ವಿಧಾನ ಬದಲಾಗ್ಬೇಕು. ವಿದ್ಯಾರ್ಥಿಗಳು ಓದ್ತಿರೋದಕ್ಕು, ಮಾಡ್ತಿರೋ ಕೆಲಸಕ್ಕೂ ಸಂಬಂಧ ಇಲ್ಲದಂತಾಗಿದೆ ಅಂತ ಹೇಳಿದ್ರು.

    ಶಮಿತಾ ಮಲ್ನಾಡ್ ಅವರಿಂದ ಗಣೇಶನ ಶ್ಲೋಕದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿ.ಮನೋಹರ್, ಗುರುಕಿರಣ್, ನಿರ್ದೇಶಕ ಬಿ.ರಾಮಮೂರ್ತಿ ಮತ್ತಿತರರು ಭಾಗಿಯಾಗಿದ್ದರು. ಮಹೇಶ್ ಗೌಡ ಎನ್ನುವವರು `ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ’ ಹೆಸರಿನಲ್ಲಿ ಪಕ್ಷ ಮಾಡುವ ಯೋಚನೆ ಮಾಡಿದ್ರು. ಪ್ರಜಾಕೀಯ ಹೆಸರಿನ ಆಪ್ ಮಾಡಿದ್ದಾರೆ, ಅದನ್ನ ನವೆಂಬರ್ 10ರಂದು ಬಿಡುಗಡೆ ಮಾಡಲಾಗುತ್ತೆ ಪ್ರಜಾಕೀಯ ಮತ್ತು ಉಪ್ಪಿ ಹೆಸರಿನ ಆಪ್ ಗಳಿವೆ. ಅದು ಜನರೇ ಮಾಡಿಕೊಟ್ಟಿದ್ದಾರೆ.

    ಪ್ರಧಾನಿಗೆ ಅವಮಾನ: ನಟ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪಿಸುತ್ತಿದ್ದಂತೆಯೇ ಇತ್ತ ಬಿಜೆಪಿಯವರು ಉಪ್ಪಿ ವಿರುದ್ಧ ಕಿಡಿಕಾರಿದ್ದಾರೆ. ಇದಕ್ಕೆ ಕಾರಣ ಒಂದು ವಿಡಿಯೋ. ಈ ವಿಡಿಯೋದಲ್ಲಿ ಮೋದಿ ಭಾಷಣದ ಮದ್ಯೆ ಉಪೇಂದ್ರ ಅವರು ನಟಿಸಿದ ಚಿತ್ರವೊಂದರ `ಬರಿವೋಳು’ ಅನ್ನೋ ಹಾಡನ್ನು ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಸುರೇಶ್ ಕುಮಾರ್ ಮತ್ತಿರರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಉಪ್ಪಿ ವಿರುದ್ಧ ಹೋರಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    https://www.youtube.com/watch?v=oFdyrl5xSTg

    https://www.youtube.com/watch?v=pXdkQqp_QyE