Tag: kreem

  • ಮಹಿಳೆಯರ ಹತ್ಯೆ, ಮಕ್ಕಳ ಕಣ್ಮರೆ ಹಿಂದಿನ ಕಥನವೇ ‘ಕ್ರೀಮ್’ ಚಿತ್ರ

    ಮಹಿಳೆಯರ ಹತ್ಯೆ, ಮಕ್ಕಳ ಕಣ್ಮರೆ ಹಿಂದಿನ ಕಥನವೇ ‘ಕ್ರೀಮ್’ ಚಿತ್ರ

    ಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ (Abhishek Basant) ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾ ಪ್ರಧಾನ ಚಿತ್ರ  ‘ಕ್ರೀಮ್’ (Kreem). ಸಂಯುಕ್ತಾ ಹೆಗ್ಡೆ (Samyuktha Hegde) ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್  (Arun Sagar) ಪ್ರಮುಖ ಪಾತ್ರಗಳಲ್ಲಿದ್ದಾರೆ.  ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ.

    ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಕ್ರೀಮ್ ಚಿತ್ರದ ಕುರಿತು ಮಾತನಾಡಿದರು.  ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಈ ಸಿನಿಮಾ ಮಾಡಲು ನನಗೆ ರೋಷನ್‌ ಅವರು ಸೇರಿದಂತೆ ಸಾಕಷ್ಟು ಜನ ಸಹಕಾರ ನೀಡಿದ್ದಾರೆ.    ಅಗ್ನಿ ಶ್ರೀಧರ್ ಅವರು ಈ ಚಿತ್ರದ ಕಥೆ ಬರೆದಿದ್ದಾರೆ. ಮುಖ್ಯವಾಗಿ ಕಥೆ ಬರೆದಿರುವವರಿಗೆ ನಿರ್ದೇಶನ ಇಷ್ಟವಾಗಬೇಕು. ಆ ನಿಟ್ಟಿನಲ್ಲಿ ನಾನು ಗೆದ್ದಿದ್ದೇನೆ ಅಂದುಕೊಳ್ಳಬಹುದು. ಇನ್ನು ಚಿತ್ರ ಉತ್ತಮವಾಗಿ ಮೂಡಿಬರಲು ಎಲ್ಲವನ್ನು ಒದಗಿಸುತ್ತಿರುವ ನಿರ್ಮಾಪಕ ದೇವೇಂದ್ರ ಅವರಿಗೆ ಧನ್ಯವಾದ.  ನಮ್ಮ ಚಿತ್ರಕ್ಕೆ  ಸಂಯುಕ್ತ ಹೆಗಡೆ ಅವರನ್ನು ಬಿಟ್ಟು ಬೇರೆ ಯಾರನ್ನೂ ನಾಯಕಿಯ ಪಾತ್ರಕ್ಕೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಚಿತ್ರಕ್ಕಾಗಿ ಅವರು ಪಟ್ಟಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ಸಾಹಸ ದೃಶ್ಯದಲ್ಲಿ ಅಭಿನಯಿಸುವಾಗ ಅವರ ಕಾಲಿಗೆ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೆ ಆಯಿತು. ಆನಂತರ ಕೂಡ ಅವರು ಮೊದಲಿನ ಹುಮ್ಮಸಿನಿಂದಲೇ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ ಎಂದರು ನಿರ್ದೇಶಕ ಅಭಿಷೇಕ್ ಬಸಂತ್.

    ಕ್ರೀಮ್ ಎಂದರೆ ಕಾಳಿ ಮಾತೆಯನ್ನು ಆರಾಧಿಸುವ ಬೀಜಾಕ್ಷರಿ ಮಂತ್ರ.  ದೇಶದಲ್ಲಿ ಪ್ರತಿ ತಿಂಗಳು 400ಕ್ಕೂ ಹೆಚ್ಚು ಮಹಿಳೆಯರ ಹತ್ಯೆಯಾಗುತ್ತಿದೆ. ಜೊತೆಗೆ ಮಕ್ಕಳೂ ಕಣ್ಮರೆಯಾಗುತ್ತಿದ್ದಾರೆ, ಈ ಪ್ರಕರಣಗಳ ಹಿಂದೆ ಯಾರಿದ್ದಾರೆ? ಯಾಕೆ ಮಾಡುತ್ತಿದ್ದಾರೆ?  ಎನ್ನುವ ಅಂಶವನ್ನಿಟ್ಟುಕೊಂಡು ಕಥೆ ಬರೆದಿದ್ದೇನೆ.   ಸಂಯುಕ್ತ ಹೆಗಡೆ ಅವರದು ಇದರಲ್ಲಿ ವೇಶ್ಯೆಯ ಪಾತ್ರ. ಈ ಚಿತ್ರದ ಬಗ್ಗೆ ಕೂಡ ಕೆಲವು ವಿವಾದಗಳು ಬರಬಹುದು. ಎದುರಿಸಲು ನಾನು ಸಿದ್ದನಿದ್ದೇನೆ ಎಂದರು ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದಿರುವ ಅಗ್ನಿ ಶ್ರೀಧರ್. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

    ಈ ಸಿನಿಮಾಗಾಗಿ ನಾನು 2೦೦ ಪರ್ಸೆಂಟ್ ಎಫರ್ಟ್ ಹಾಕಿದ್ದೇನೆ. ಚಿತ್ರೀಕರಣ ಸಮಯದಲ್ಲಿ ಕಾಲಿಗೆ ತೀವ್ರವಾದ ಪೆಟ್ಟಾಯಿತು.  ನಾನು ಎರಡು ತಿಂಗಳು ಮನೆಯಲ್ಲೇ ಇದ್ದು, ವಿಶ್ರಾಂತಿ ಪಡೆದಿದ್ದು ಇದೇ ಮೊದಲ ಬಾರಿ. ಫಿಸಿಯೋ ಥೆರಪಿ ಮಾಡಿಸಿಕೊಳ್ಳಬೇಕಾದರೆ ನಾನು ಪಟ್ಟ ನೋವು ಅಷ್ಟಿಷ್ಟಲ್ಲ. ಈ ಚಿತ್ರಕ್ಕಾಗಿ ನಾನು ಬೆವರು ಮಾತ್ರ ಹರಿಸಿಲ್ಲ. ರಕ್ತವನ್ನು ಹರಿಸಿದ್ದೇನೆ. ಇಷ್ಟೆಲ್ಲ ಶ್ರಮಪಟ್ಟರು ಒಂದೊಳ್ಳೆಯ ಸಿನಿಮಾದಲ್ಲಿ ನಟಿಸಿದ ತೃಪ್ತಿಯಿದೆ ಎಂದರು ನಾಯಕಿ ಸಂಯುಕ್ತ ಹೆಗಡೆ. ಚಿತ್ರ ಚೆನ್ನಾಗಿ ಬರಲು ಸಹಕಾರ ನೀಡುತ್ತಿರುವ ಚಿತ್ರತಂಡದ ಸದಸ್ಯರಿಗೆ ನಿರ್ಮಾಪಕ ದೇವೇಂದ್ರ ಧನ್ಯವಾದ ತಿಳಿಸಿದರು. ನಟ ರೋಷನ್ ಸೇರಿದಂತೆ ಚಿತ್ರತಂಡ ಹಲವು ಸದಸ್ಯರು ಹಾಜರಿದ್ದರು.

  • ಕ್ರೀಮ್ ಸಿನಿಮಾದಲ್ಲಿ ಬೀದಿ ವೇಶ್ಯೆಯಾಗಿ ಕಾಣಿಸಿಕೊಂಡ ಸಂಯುಕ್ತ ಹೆಗ್ಡೆ

    ಕ್ರೀಮ್ ಸಿನಿಮಾದಲ್ಲಿ ಬೀದಿ ವೇಶ್ಯೆಯಾಗಿ ಕಾಣಿಸಿಕೊಂಡ ಸಂಯುಕ್ತ ಹೆಗ್ಡೆ

    ನ್ನಡ ಸಿನಿಮಾ ರಂಗದಲ್ಲಿ ಸಾಕಷ್ಟು ಪ್ರಯೋಗಗಳು ನಡೆಯುತ್ತಿವೆ. ಕಲಾವಿದರು ಕೂಡ ಆಯಾ ಪ್ರಯೋಗಗಳಿಗೆ ತಮ್ಮನ್ನು ತಾವು ತೆರೆದುಕೊಳ್ಳುತ್ತಿದ್ದಾರೆ. ಈ ಯಾದಿಗೆ ಹೊಸ ಸೇರ್ಪಡೆ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ (Samyuktha Hegde). ರಕ್ಷಿತ್ ಶೆಟ್ಟಿ ನಟನೆಯ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡ ಸಂಯುಕ್ತ, ಸದ್ಯ ಕ್ರೀಮ್ (Kreem) ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ಅವರು ಬೀದಿ ವೇಶ್ಯೆಯ ಪಾತ್ರವನ್ನು ನಿರ್ವಹಿಸಿದ್ದಾರೆ.

    ಅಭಿಷೇಕ್ ಬಸಂತ್ (Abhishek Basant) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ರೋಚಕ ಕ್ರೈಮ್ ಕಥೆಯನ್ನು ಹೇಳಿದ್ದಾರಂತೆ ನಿರ್ದೇಶಕರು. ದಂಡುಪಾಳ್ಯದ ಹಿನ್ನೆಲೆಯ ಕಥೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕರು. ದಂಡುಪಾಳ್ಯ (Dandupalya) ಗ್ಯಾಂಗ್ ಬಗ್ಗೆ ಸಾಕಷ್ಟು ಕಥೆಗಳಿವೆ. ಈಗಾಗಲೇ ಮೂರು ಭಾಗಗಳಲ್ಲಿ ಅವರ ಕಥೆಯನ್ನು ಸಿನಿಮಾ ಮಾಡಲಾಗಿದೆ. ಅದೆಲ್ಲವೂ ಕಲ್ಪಿತ ಎನ್ನುವುದನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರಂತೆ. ಇದನ್ನೂ ಓದಿ:ಹಾಲಿವುಡ್ ‘ಸಿಟಾಡೆಲ್’ ಪ್ರೀಮಿಯರ್‌ನಲ್ಲಿ ಸಮಂತಾ

    ಕ್ರೀಮ್ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದವರು ಅಗ್ನಿ ಶ್ರೀಧರ್. ಈ ಕುರಿತು ಅವರು ಮಾತನಾಡಿ, ದಂಡುಪಾಳ್ಯದವರು ಕೇವಲ ಕಳ್ಳತನ ಮಾಡಿದ್ದಾರೆ. ಅವರು ಎಂದೂ ಒಂಟಿ ಮಹಿಳೆಯನ್ನು ಬೆನ್ನತ್ತಿ ಕೊಂದಿಲ್ಲ.  ಕೊಲೆ ಮಾಡಿದವರ ಹಿಂದೆ ಬೇರೆಯದ್ದೇ ಕಥೆಯಿದೆ. ಅದನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇನೆ’ ಎಂದಿದ್ದಾರೆ.

    ವಿವಾದ ಆಗುವಂತಹ ಸಾಕಷ್ಟು ವಿಷಯಗಳು ಈ ಸಿನಿಮಾದಲ್ಲಿ ಇದೆ ಎನ್ನುವುದು ಶ್ರೀಧರ್ ಮಾತು. ಎಲ್ಲದಕ್ಕೂ ತಯಾರಿ ಮಾಡಿಕೊಂಡೆ ಈ ಕಥೆಯನ್ನು ಹೇಳಲು ಹೊರಟಿದೆಯಂತೆ ಚಿತ್ರತಂಡ. ಹಾಗಾಗಿ ಈವರೆಗೂ ಕೇಳಿದ ದಂಡುಪಾಳ್ಯದ ಕಥೆಯನ್ನು ಅಲ್ಲಗಳೆಯುವಂತಹ ಸಾಕಷ್ಟು ವಿಷಯಗಳು ಇಲ್ಲಿವೆಯಂತೆ.

    ತಮ್ಮ ಪಾತ್ರದ ಕುರಿತು ಮಾತನಾಡಿರುವ ಸಂಯುಕ್ತಾ ಹೆಗ್ಢೆ. ಇಂಥದ್ದೊಂದು ಪಾತ್ರವನ್ನು ಮಾಡಿದ್ದಕ್ಕೆ ಹೆಮ್ಮೆ ಅನಿಸುತ್ತಿದೆ. ಈ ಟೀಮ್ ಕೊಟ್ಟ ಸಹಕಾರ ದೊಡ್ಡದು. ಶ್ರೀಧರ್ ಅಂತವರು ಇದ್ದರೆ ಎಂತಹ ಪಾತ್ರ ಮಾಡುವುದಕ್ಕೂ ಧೈರ್ಯ ಬರುತ್ತದೆ ಎಂದರು. ಅಲ್ಲದೇ, ಪಾತ್ರದ ಗಟ್ಟಿತನದ ಕುರಿತು ಅವರು ಮಾತನಾಡಿದ್ದಾರೆ.

  • ಸಂಯುಕ್ತ ಹೆಗಡೆ ನಟನೆಯ ‘ಕ್ರೀಂ’ ಸಿನಿಮಾದ ಶೂಟಿಂಗ್ ಆರಂಭ

    ಸಂಯುಕ್ತ ಹೆಗಡೆ ನಟನೆಯ ‘ಕ್ರೀಂ’ ಸಿನಿಮಾದ ಶೂಟಿಂಗ್ ಆರಂಭ

    ತುರ್ತು ನಿರ್ಗಮನ ಸೇರಿದಂತೆ ಸದ್ಯ ಹಲವು ಸಿನಿಮಾಗಳಲ್ಲಿ ನಟಿಸುತ್ತಿರುವ ನಟಿ ಸಂಯುಕ್ತ ಹೆಗ್ಡೆ ಇದೀಗ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಕ್ರೀಂ ಎಂದು ಹೆಸರಿಡಲಾಗಿದೆ.  ‘ಕ್ರೀಂ’ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಕೆ. ಜಿ. ಎಫ್.ನಲ್ಲಿ ಕಲಾ ನಿರ್ದೇಶನ ಮಾಡಿ ಪ್ರೇಕ್ಷಕರನ್ನು ಸೆಳೆದ ಶಿವಕುಮಾರ್ ಜೆ.ರವರು ಹಾಕಿರುವ ಸೆಟ್ಗಳು ಎಲ್ಲರ ಹುಬ್ಬೇರಿಸಿವೆ. ಇತ್ತೀಚಿನ ವರ್ಷಗಳಲ್ಲಿ ಶ್ರೀಮಂತಿಕೆಯ ಸೆಟ್ಗಳನ್ನು ಯಾರು ಕಂಡಿಲ್ಲ.

    ಅದಕ್ಕಿಂತಲೂ ಪ್ರಮುಖವಾಗಿ ಆ ಚಿತ್ರದ ತಾರಾಗಣ, ಸಂಯುಕ್ತ ಹೆಗ್ಡೆ, ಅರುಣ್ ಸಾಗರ್, ಮತ್ತು ಅಚ್ಯುತ್ ಕುಮಾರ್ ರವರ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿರುವ ನಟರ ಹೆಸರನ್ನು ಭಾರಿ ಗೌಪ್ಯವಾಗಿಡಲಾಗಿದೆ. ಅದು ಎಲ್ಲೆಡೆ ಕುತೂಹಲ ಮೂಡಿಸಿದೆ. ಇದನ್ನೂ ಓದಿ:ಮದುವೆಯ ವದಂತಿಗೆ ಸ್ಪಷ್ಟನೆ ನೀಡಿದ ರಾಮ್ ಪೋತಿನೇನಿ

     

    ಕ್ರೀಂ ಚಿತ್ರದ ಕಥೆ, ಸಂಯೋಜನೆ ಮತ್ತು ಚಿತ್ರಕಥೆಯನ್ನು ಸ್ರುಷ್ಟಿಸಿರುವವರು ಅಗ್ನಿ ಶ್ರೀಧರ್ ಅಂದಮೇಲೆ ಸಹಜವಾಗಿಯೇ ನೈಜ ಹಾಗೂ ಗೌಪ್ಯವಾಗಿ ನಡೆಯುತ್ತಿರುವ ಘಟನೆಗಳನ್ನು ಆಧರಿಸುವ ಸಿನೆಮಾ. ಚಿತ್ರವನ್ನು ಅಭಿಷೇಕ್ ಬಸಂತ್ ನಿರ್ದೇಶಿಸುತ್ತಿದ್ದಾರೆ. ನಿರ್ಮಾಪಕರು ಡಿ. ಕೆ. ದೇವೇಂದ್ರರವರಂತೂ ಹತ್ತು ದಿನಗಳ ಚಿತ್ರೀಕರಣ ಮುಗಿಯುವಷ್ಟರಲ್ಲಿ ಅಪಾರ ಹರ್ಷದಲ್ಲಿದ್ದಾರೆ. ಅವರ ಪ್ರಕಾರ ಈ ಸಿನಿಮಾ ಜಾಕ್ಪಾಟ್ ಹೊಡೆಯಲಿದೆ. ಸುನೋಜ್ ವೇಲಾಯುದನ್ ರವರ ಛಾಯಾಗ್ರಹಣ ಮತ್ತು ಸುರಾಗ್ ಸಂಗೀತವಿರುವ ಈ ಚಿತ್ರ, ವರ್ಷದ ಅಂತ್ಯದ ಹೊತ್ತಿಗೆ ಪ್ರೇಕ್ಷಕರಿಗೆ ಕಾಣಿಸಿಕೊಳ್ಳಲಿದೆ.

    Live Tv