ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಉಡುಪಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಎರಡು ಕಾರ್ಯಕ್ರಮಗಳ ಜೊತೆ ಮೂರು ದೇಗುಲಗಳ ದರ್ಶನ ಮಾಡಲಿದ್ದಾರೆ.
ಶುಕ್ರವಾರ ರಾತ್ರಿ ಮಣಿಪಾಲಕ್ಕೆ ಆಗಮಿಸಿ ತಂಗಿರುವ ಹಣಕಾಸು ಸಚಿವೆ, ಇಂದು ಉಡುಪಿಯಲ್ಲಿ ಮಣಿಪಾಲದ ಟಿ.ಎ.ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್(ಟ್ಯಾಪ್ಮಿ) ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಭಾಷಣ ಮಾಡಲಿದ್ದಾರೆ. ಉಡುಪಿ ಕುಕ್ಕಿಕಟ್ಟೆಯಲ್ಲಿ ಶ್ರೀ ವಿಶ್ವೇಶತೀರ್ಥ ಧಾಮವನ್ನು ಸಚಿವರು ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ಭಾರತ ಹಾಕಿ ತಂಡದಲ್ಲಿ ಹಾಸನದ ಶೇಷೇಗೌಡ
ಉಡುಪಿ ಕೃಷ್ಣಮಠ ಭೇಟಿ ನೀಡಿ ಪರಿಹಾರ ಸ್ವಾಮೀಜಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ಕಾರ್ಯಕ್ರಮ ನಿಗದಿಯಾಗಿದ್ದು, ಸಂಜೆ ಮಂಗಳೂರಿಗೆ ತೆರಳಿ ವಿಮಾನ ಮೂಲಕ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಜ್ಯಸಭಾ ಚುನಾವಣಾ ಮುನ್ನ ರಾಜ್ಯ ಭೇಟಿ ಮಹತ್ವ ಪಡೆದಿದೆ.
ಉಡುಪಿಯಲ್ಲಿ ಎರಡು ವರ್ಷಕ್ಕೊಮ್ಮೆ ಪರ್ಯಾಯೋತ್ಸವ ಅಂದರೆ ಉಡುಪಿ ಜನರಲ್ಲಿ ಹಬ್ಬದ ಸಡಗರ. ಎರಡು ವರ್ಷಗಳಿಗೆ ಒಮ್ಮೆ ಬರುವ ಈ ದ್ವಿವಾರ್ಷಿಕ ಉತ್ಸವದ ಸಂದರ್ಭ ಉಡುಪಿಯ ನಗರ ಸಿಂಗಾರಗೊಳ್ಳುತ್ತದೆ.ಜನವರಿ ತಿಂಗಳ ಚಳಿಗಾಲದ ರಾತ್ರಿಯಲ್ಲಿ ಬೀದಿಯ ತುಂಬೆಲ್ಲಾ ಜಗಮಗ ಬೆಳಕು ರಾರಾಜಿಸುತ್ತಾ ಕಣ್ಮನ ಸೆಳೆಯುತ್ತದೆ. ಈಗ ಪುನಃ ಉಡುಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಅಷ್ಟಕ್ಕೂ ಉಡುಪಿ ಪರ್ಯಾಯ ಎಂದರೆ ಏನು? ಪರ್ಯಾಯೋತ್ಸವ ಎಂದರೆ ಯಾವ ಉತ್ಸವ? ಈ ಉತ್ಸವವನ್ನು ಜನರು ಏಕೆ ಇಷ್ಟು ಸಂಭ್ರಮಿಸುತ್ತಾರೆ? ಉತ್ಸವದ ಇತಿಹಾಸ ಏನು? ಈ ಬಗ್ಗೆ ವಿವರಗಳು ಇಲ್ಲಿದೆ.
ಮಧ್ವಾಚಾರ್ಯರು ಉಡುಪಿಯಲ್ಲಿ ಕೃಷ್ಣಮಠವನ್ನು ಸ್ಥಾಪನೆ ಮಾಡಿದರು. ಶ್ರೀಕೃಷ್ಣನಿಗೆ ಪೂಜೆ ಮಾಡಲು ಎಂಟು ಮಂದಿ ಯತಿಗಳನ್ನು ನೇಮಿಸಿದ್ದರು. ಆರಂಭದಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೂಜಾ ಅಧಿಕಾರ ಎಂಟು ಮಠಗಳ ನಡುವೆ ಹಸ್ತಾಂತರವಾಗುತ್ತಿತ್ತು ನಂತರ ಎರಡು ವರ್ಷಕ್ಕೆ ವಿಸ್ತರಣೆ ಆಯ್ತು.
ಅದಮಾರು ಮಠ ಎರಡು ವರ್ಷ ಪರ್ಯಾಯ ಅಧಿಕಾರ ಪೂರೈಸಿದ್ದು, ಇನ್ನು 14 ವರ್ಷದ ನಂತರ ಶ್ರೀಗಳು ಮತ್ತೆ ಕೃಷ್ಣನ ಪೂಜಾಧಿಕಾರ ವಹಿಸಿಕೊಳ್ಳಲಿದ್ದಾರೆ. ನಡುರಾತ್ರಿ ಆರಂಭವಾಗುವ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಬೆಳಗಿನ ಜಾವ ಸಾಂಪ್ರದಾಯಿಕ ಪ್ರಕ್ರಿಯೆಗಳು ಮುಗಿದುಬಿಡುತ್ತದೆ. ಫೋಟೋಗಳ ಮೂಲಕ ಪರ್ಯಾಯ ಮಹೋತ್ಸವದ ಎಲ್ಲ ಪ್ರಕ್ರಿಯೆಗಳನ್ನು ಇಲ್ಲಿ ವಿವರಿಸಲಾಗುವುದು. ಇದನ್ನೂ ಓದಿ: ಎರಡು ವರ್ಷ ಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ – ಕೃಷ್ಣಾಪುರ ಸ್ವಾಮೀಜಿ ಘೋಷಣೆ
ಹೇಗೆ ನಡೆಯಿತು?
ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ರಾತ್ರಿ 1:30 ಕ್ಕೆ ಪವಿತ್ರ ಸ್ನಾನ ಮಾಡಿದರು. ಈ ಸಂದರ್ಭ ಹತ್ತಾರು ಭಕ್ತರು ಸ್ವಾಮೀಜಿಗಳ ಜೊತೆ ತೀರ್ಥಸ್ನಾನದಲ್ಲಿ ಜೊತೆಯಾದರು. ಉಡುಪಿ ನಗರಕ್ಕೆ ಆಗಮಿಸಿ ಜೋಡುಕಟ್ಟೆಯಲ್ಲಿ ಪಟ್ಟದ ದೇವರಿಗೆ ಮಂಗಳಾರತಿ ಮಾಡುವ ಮೂಲಕ ದೀಪ ಬೆಳಗಿಸಿ ಪರ್ಯಾಯ ಮೆರವಣಿಗೆ ಆರಂಭವಾಯಿತು. ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಸೀಮಿತ ಟ್ಯಾಬ್ಲೋ ಕಲಾತಂಡಗಳ ಜೊತೆಗೆ ಪಲ್ಲಕ್ಕಿ ಟ್ಯಾಬ್ಲೋದಲ್ಲಿ ಕೂತು ಸ್ವಾಮೀಜಿಗಳು ಮಠದತ್ತ ಸಾಗಿದರು.
ರಥಬೀದಿಗೆ ಬಿಳಿ ಹಾಸು ಹಾಸಲಾಗಿತ್ತು. ಅದರ ಮೇಲೆ ಎಲ್ಲ ಸ್ವಾಮೀಜಿಗಳು ನಡೆದುಕೊಂಡು ಬಂದು ಕನಕನ ಕಿಂಡಿಯಲ್ಲಿ 4:30ಕ್ಕೆ ಶ್ರೀ ಕೃಷ್ಣದೇವರ ದರ್ಶನ ಮಾಡಿ ನವಗ್ರಹ ದಾನ ನೀಡಿ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರ ದೇವರ ದರ್ಶನ ಪಡೆದರು. ಅನಂತೇಶ್ವರದಲ್ಲಿ ಶ್ರೀ ಮಧ್ವಾಚಾರ್ಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಸಿದರು. ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ 5:25 ಕ್ಕೆ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಎಲ್ಲ ಶ್ರೀಗಳನ್ನು ಸ್ವಾಗತಿಸಿದರು.
ಶ್ರೀಕೃಷ್ಣ ದೇವರ ದರ್ಶನ ಪಡೆದು ಕೃಷ್ಣಾಪುರ ಮಠದ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿ ಚಂದ್ರಶಾಲೆಯಲ್ಲಿ ಪರ್ಯಾಯ ಅದಮಾರು ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು. ಮಧ್ವಾಚಾರ್ಯರ ಸನ್ನಿಧಿಯ ಎದುರು ಅದಮಾರು ಮಠಾಧೀಶರು ಕೃಷ್ಣಾಪುರ ಮಠಾಧೀಶರಿಗೆ 5:45 ಕ್ಕೆ ಅಕ್ಷಯ ಪಾತ್ರೆ, ಸಟ್ಟುಗ ಹಸ್ತಾಂತರ ಮಾಡಿದರು. ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಚತುರ್ಥ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿದರು. ಪರ್ಯಾಯ ಶ್ರೀಗಳಿಂದ ಬಡಗುಮಾಳಿಗೆಯ ಅರಳು ಗದ್ದುಗೆ ವಿಧಿ ನಡೆಯಿತು. ಇದನ್ನೂ ಓದಿ: ಕೋವಿಡ್ ಕಾಲಘಟ್ಟದಲ್ಲಿ ಸರಳ ಪರ್ಯಾಯ: ಕೃಷ್ಣಾಪುರ ವಿದ್ಯಾಸಾಗರ ತೀರ್ಥ ಸ್ವಾಮೀಜಿ
ಅರಳಿನ ಗದ್ದಿಗೆ ಮೇಲೆ ಪರಸ್ಪರ ಸ್ವಾಮಿಗಳು ಗಂದಾದ್ಯುಪಚಾರ, ಅಷ್ಟ ಮಠಾಧೀಶರಿಂದ ಪಟ್ಟಕಣಿಕೆ ಹಾಗೂ ಮಾಲಿಕೆ ಮಂಗಳಾರತಿ ನಡೆಯಿತು. ಈ ಸಂದರ್ಭ ಎಲ್ಲ ಸ್ವಾಮೀಜಿಗಳು ಉಭಯ ಕುಶಲೋಪರಿಯಲ್ಲಿ ತೊಡಗಿದರು. 6:45 ಕ್ಕೆ ಸರಿಯಾಗಿ ಪರ್ಯಾಯ ದರ್ಬಾರ್ ನಡೆಯಿತು. ಸಾರ್ವಜನಿಕರು ಮಠದ ಭಕ್ತರು ದರ್ಬಾರ್ ಸಭೆಯಲ್ಲಿ ಭಾಗಿಯಾದರು. ನಾಲ್ಕನೇ ಸುತ್ತಿನ ಪರ್ಯಾಯ ಪೀಠಾಧಿಪತಿ ಕೃಷ್ಣಾಪುರ ಸ್ವಾಮೀಜಿ ದರ್ಬಾರ್ ಸಭೆ ಮುಗಿಸಿ ನೂತನ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
ಜನನ ಮತ್ತು ಬಾಲ್ಯ:
ಅಷ್ಟಮಠಗಳಲ್ಲೇ ಹಿರಿಯ ಯತಿಯಾಗಿದ್ದ ಪೇಜಾವರ ಶ್ರೀ 1931 ಏಪ್ರಿಲ್ 27 ರಂದು ಉಡುಪಿಯಿಂದ 120 ಕಿ.ಮೀ ದೂರದಲ್ಲಿರುವ ಪುತ್ತೂರು ತಾಲೂಕಿನ ರಾಮಕುಂಜ ಹಳ್ಳಿಯಲ್ಲಿ ಜನಿಸಿದ್ದರು. ಪೇಜಾವರ ಶ್ರೀ ವಿಶ್ವೇಶತೀರ್ಥರು ನಾರಾಯಣಾಚಾರ್ಯ ಮತ್ತು ಕಮಲಮ್ಮ ದಂಪತಿಯ ಎರಡನೇ ಮಗನಾಗಿ ಜನಿಸಿದ ಇವರ ಮೂಲ ಹೆಸರು ವೆಂಕಟರಮಣ ಆಗಿತ್ತು.
ವೆಂಕಟರಮಣ ರಾಮಕುಂಜದ ಹಳ್ಳಿಯ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದಾರೆ. ಇವರು 7ನೇ ವರ್ಷದಲ್ಲೇ ಗಾಯತ್ರಿಯ ಉಪದೇಶ ಮಾಡಿದ್ದರು. ನಂತರ 8ನೇ ವಯಸ್ಸಲ್ಲೇ ಮುಖ್ಯಪ್ರಾಣ ಸನ್ನಿಧಿಯಲ್ಲಿ ದೀಕ್ಷೆ ಪಡೆದಿದ್ದರು. ಬಳಿಕ ಪೇಜಾವರ ಮಠದ ಪರಂಪರೆಯ 32ನೇಯ ಯತಿಯಾಗಿ ನೇಮಕಗೊಂಡಿದ್ದರು.
ಪೇಜಾವರ ಶ್ರೀ ಅಸ್ಪೃಶ್ಯತೆ ವಿರುದ್ಧ ಧ್ವನಿ ಎತ್ತುತ್ತಿದ್ದರು. ಜೊತೆಗೆ ಇವರು ಗಾಂಧೀಜಿ ವಿಚಾರಧಾರೆಯನ್ನು ಪಾಲಿಸುತ್ತಿದ್ದರು. ದಿನ ಕಳೆದಂತೆ ಪೇಜಾವರ ಶ್ರೀ ಮಠದ ಯತಿಗಳು ಉತ್ಸವಗಳಲ್ಲಿ ಧರಿಸುತ್ತಿದ್ದ ಪಟ್ಟೆ, ಪೀತಾಂಬರಗಳ ವೈಭವದ ಪೋಷಾಕನ್ನು ತೊರೆದು ಶುದ್ಧ ಖಾದಿಧಾರಿಯಾಗುವ ದೀಕ್ಷೆ ತೊಟ್ಟರು. ನಂತರ ಮಠದಲ್ಲಿ ಸ್ವಾಮಿಗಳಿಗೆ ಪ್ರತ್ಯೇಕ ಅಡುಗೆ ಮಾಡುವ ಪದ್ಧತಿಯನ್ನು ರದ್ದುಗೊಳಿಸಿದರು.
1951 ಜನವರಿ 18ರಂದು 21ರ ಹರೆಯದಲ್ಲೇ ಮೊದಲ ಪರ್ಯಾಯ ಪೀಠವೇರಿದ್ದ ಪೇಜಾವರ ಶ್ರೀ ಒಟ್ಟು 5 ಬಾರಿ ಪರ್ಯಾಯ ಪೀಠವೇರಿ ಕೃಷ್ಣ ಪೂಜೆ ನಡೆಸಿದ ಎರಡನೇ ಹಿರಿಯ ಯತಿ ಎಂದು ಖ್ಯಾತಿ ಪಡೆದಿದ್ದಾರೆ. ಕೃಷ್ಣನನ್ನ ಉಡುಪಿಯಲ್ಲಿ ಪ್ರತಿಷ್ಠಾಪಿಸಿದ ಮಧ್ವಾಚಾರ್ಯರು ಬಿಟ್ಟರೆ ಪೇಜಾವರ ಶ್ರೀ ವಿಶ್ವೇಶತೀರ್ಥರೇ ಐದು ಬಾರಿ ಪರ್ಯಾಯ ಪೀಠ ಏರಿದ ವಿಶೇಷ ಸಾಧನೆ ಮಾಡಿದ್ದರು.
ದಲಿತರ ಪರ ಹೋರಾಟ
ದಲಿತರ ಪರ ಧ್ವನಿ ಎತ್ತಿ ದಲಿತರ ಅಭಿವೃದ್ಧಿ ಪರ, ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ್ದರು. ಇದಲ್ಲದೇ ದಲಿತ ಖೇರಿಗೆ ಭೇಟಿ ನೀಡಿ ವಾಸ್ತವ್ಯ ಮಾಡುತ್ತಿದ್ದರು. ಕೃಷ್ಣ ಮಠದಲ್ಲಿ ಎಡೆ ಹಾಗೂ ಮಡೆ ಸ್ನಾನವನ್ನು ಪೇಜಾವರ ಶ್ರೀ ಅವರೇ ನಿಲ್ಲಿಸಿದ್ದಾರೆ. ಜೊತೆಗೆ ನಕ್ಸಲ್ ಪ್ರದೇಶದಲ್ಲಿ ಹೆಲ್ತ್ ಕ್ಯಾಂಪ್ ಕೂಡ ನಡೆಸಿ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದರು.
ಲಿಂಗಾಯುತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಪೇಜಾವರ ಶ್ರೀ ಆಹ್ವಾನಿಸಿದ್ದರು. ಧರ್ಮ ಸಂಸತ್ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಕರೆಕೊಟ್ಟಿದ್ದರು. ಹೀಗಾಗಿ ರಾಮಮಂದಿರ ನಿರ್ಮಾಣದಲ್ಲಿ ಪೇಜಾವರ ಶ್ರೀ ಮುಂಚೂಣಿಯಲ್ಲಿದ್ದರು. ಇವರು ಪ್ರಧಾನಿ ಮೋದಿಯವರೊಂದಿಗೆ ಆತ್ಮೀಯತೆ ಹೊಂದಿದ್ದರು. ಪ್ರಧಾನಿ ಮೋದಿ ಮಾತ್ರವಲ್ಲದೇ ಅಡ್ವಾಣಿ, ನಿರ್ಮಲಾ ಸೀತಾರಾಮನ್, ರಾಜನಾಥ್ ಸಿಂಗ್ ಅವರಿಗೂ ಆಪ್ತರಾಗಿದ್ದರು. ವಿಶ್ವಹಿಂದೂ ಪರಿಷತ್ ಪ್ರಮುಖರಾಗಿದ್ದ ಪೇಜಾವರ ಶ್ರೀ ರಾಷ್ಟ್ರದ ಸಂತರಲ್ಲಿ ಪ್ರಭಾವಿ ಹಿರಿಯ ಯತಿಯಾಗಿದ್ದರು.
ಉಡುಪಿಯ ಅಷ್ಟಮಠದಲ್ಲೇ ಹಿರಿಯ ಯತಿಯಾಗಿದ್ದರಿಂದ ಶೀರೂರು ಲಕ್ಷ್ಮೀವರ ತೀರ್ಥ ಸ್ಚಾಮೀಜಿ ಸಾವಿನ ಸಮಯದಲ್ಲಿ ಅಷ್ಟಮಠಕ್ಕೆ ಮಾರ್ಗದರ್ಶಕರಾಗಿದ್ದರು. ದಲಿತರಿಗೆ ಧೀಕ್ಷೆ ನೀಡುತ್ತಿದ್ದರು. ಸದಾ ಯೋಗ ಪೂಜೆಯಲ್ಲಿ ತಲ್ಲಿನರಾಗಿರುತ್ತಿದ್ದರು. ಅಲ್ಲದೇ ವಿರೋಧದ ನಡುವೆಯೂ ಕೃಷ್ಣ ಮಠದಲ್ಲಿ ಇಫ್ತಾರ್ ಕೂಟ ನಡೆಸಿದ್ದರು. ಇತ್ತೀಚೆಗೆ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ನಂತರ ಖುಷಿಪಟ್ಟಿದ್ದರು.
ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ಇವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ.
ಪ್ರೇಜಾವರ ಶ್ರೀಗಳ ಪಾರ್ಥಿವ ಶರೀರವನ್ನು ಕೃಷ್ಣಮಠಕ್ಕೆ ಶಿಫ್ಟ್ ಮಾಡಲಾಗುತ್ತದೆ. ಸುಮಾರು 20 ನಿಮಿಷ ಕಾಲ ಮಠದಲ್ಲೇ ಇರಲಿದ್ದು, ಅಲ್ಲಿ ಅಷ್ಟಮಠಾಧೀಶರು ಮಧ್ವ ಸರೋವರದಲ್ಲಿ ಸ್ನಾನ, ಅಭಿಷೇಕ ಮಾಡಿಸಲಿದ್ದಾರೆ. ನಂತರ ಕನಕನ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಇದನ್ನೂ ಓದಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ
ಅಲ್ಲಿ ಮಧ್ಯಾಹ್ನ 12 ಗಂಟೆಯವರೆಗೂ ಸಾರ್ವಜನಿಕರಿಗೆ ಪೇಜಾವರ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶ್ರೀಗಳ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೊನೆಗೆ ವಿದ್ಯಾಪೀಠದಲ್ಲಿ ಸರ್ಕಾರದ ಸಕಲ ಗೌರವದೊಂದಿಗೆ ಪೇಜಾವರ ಶ್ರೀಗಳ ಬೃಂದಾವನ ಮಾಡಲಾಗುತ್ತದೆ.
ರಕ್ತದೊತ್ತಡ, ಮಧುಮೇಹ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಕಳೆದ ಶುಕ್ರವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 9 ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ಗುರುವಾರದಿಂದ ಹೆಚ್ಚೇನೂ ಸುಧಾರಣೆಯಾಗಿರಲಿಲ್ಲ. ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದರು.
ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣೈಕ್ಯರಾದರು.
ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಗುರುವಂದನೆ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಡುಪಿಗೆ ಆಗಮಿಸಿದ್ದರು. ಸನ್ಯಾಸ ಸ್ವೀಕರಿಸಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೇಜಾವರ ಸ್ವಾಮಿಗಳನ್ನು ಗೌರವಿಸಿ, ಕೃಷ್ಣನ ದರ್ಶನ ಪಡೆದು ರಾಮಜಪ ಮಾಡಿದರು.
ದೇಶದ ಹಿರಿಯ ಸಂತ ಪೇಜಾವರ ಶ್ರೀಗಳು ಸನ್ಯಾಸ ಸ್ವೀಕರಿಸಿ 80 ವರ್ಷಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣನ ಅಂಗಳದಲ್ಲಿ ಯತಿಶ್ರೇಷ್ಠ ಪೇಜಾವರ ಶ್ರೀ ಪಾದರಿಗೆ ಗುರುವಂದನೆ ಕಾರ್ಯಕ್ರಮ ಆಯೋಜನೆಯಾಗಿತ್ತು. ಪೇಜಾವರ ಶ್ರೀಗಳ ನೆಚ್ಚಿನ ಶಿಷ್ಯೆ ಸಾದ್ವಿ ಉಮಾ ಭಾರತಿ ಆಶಯದಂತೆ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶದ ಪ್ರಥಮ ಪ್ರಜೆ ಇವತ್ತು ಕೃಷ್ಣನಗರಿಗೆ ಆಗಮಿಸಿದ್ದರು.
ಪೇಜಾವರ ಮಠಕ್ಕೆ ಆಗಮಿಸಿದ ರಾಷ್ಟ್ರಪತಿಗಳು, ಸ್ವಾಮೀಜಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದರು. ಇದೇ ವೇಳೆ ಮಠದ ವತಿಯಿಂದಲೂ ರಾಷ್ಟ್ರಪತಿಗಳಿಗೆ ಯಕ್ಷ ಕಿರೀಟ ತೊಡಿಸಿ ಸನ್ಮಾನ ಮಾಡಲಾಯಿತು. ಈ ವೇಳೆ ಮಾತನಾಡಿದ ರಾಷ್ಟ್ರಪತಿಗಳು, ಶ್ರೀರಾಮ ಈ ದೇಶದ ಮರ್ಯಾದಾ ಪುರುಷೋತ್ತಮ. ರಾಮನ ಜೀವನಾದರ್ಶ ನಮಗೆಲ್ಲಾ ಮಾದರಿ. ರಾಮ ರಾಜ್ಯವೇ ಆದರ್ಶ ರಾಜ್ಯ. ರಾಮನ ಆದರ್ಶ ಪಾಲಿಸಿದರೆ ದೇಶ ಸುಖಿಯಾಗಿರುತ್ತದೆ ಎಂದರು.
ಗುರುವಂದನೆ ಕಾರ್ಯಕ್ರಮವನ್ನು ಆಯೋಜಿಸಿದ್ದ, ಪೇಜಾವರ ಸ್ವಾಮಿಗಳ ಶಿಷ್ಯೆ, ಕೇಂದ್ರ ಸಚಿವೆ ಉಮಾಭಾರತಿ ಅವರು ಸಂಸತ್ತಿನಲ್ಲಿ ವಿಪ್ ಜಾರಿಯಾದ ಕಾರಣ ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಉಳಿದಂತೆ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಮತ್ತು ನಾಗಾಲ್ಯಾಂಡ್ ರಾಜ್ಯಪಾಲ ಉಡುಪಿ ಮೂಲದ ಪಿ.ಬಿ ಆಚಾರ್ಯ ಅವರು ರಾಷ್ಟ್ರಪತಿಗಳಿಗೆ ಸಾಥ್ ನೀಡಿದರು.
ಕಾರ್ಯಕ್ರಮದ ಬಳಿಕ ಕೆಲ ಸಮಯ ಪೇಜಾವರ ಶ್ರೀಗಳ ಜೊತೆ ಸಮಾಲೋಚನೆ ನಡೆಸಿದ ರಾಷ್ಟ್ರಪತಿಗಳು ಕೃಷ್ಣಮಠಕ್ಕೆ ಭೇಟಿ ನೀಡಿ, ಅಷ್ಠಮಠಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪೇಜಾವರ ಶ್ರೀಗಳು ರಾಷ್ಟ್ರಪತಿಗಳನ್ನು ಗೌರವಿಸಿ, ಅವರಿಗೆ ಶ್ರೀಕೃಷ್ಣ ಸಹಿತ ಬೆಳ್ಳಿ ಪ್ರಭಾವಳಿ ನೀಡಿ ಗೌರವಿಸಿದರು. ಈ ವೇಳೆ ಪೇಜಾವರ ಕಿರಿಯ ಶ್ರೀಗಳು, ಪರ್ಯಾಯ ಶ್ರೀಗಳು ಉಪಸ್ಥಿತರಿದ್ದರು. ಪಾಜಕ ಕ್ಷೇತ್ರದಲ್ಲಿ ಮಧ್ವ ಯುನಿವರ್ಸಿಟಿ ಸ್ಥಾಪನೆಗೆ ಸಹಕಾರ ಮತ್ತು ಮಧ್ವ ದಿನಾಚರಣೆ ಪ್ರಾರಂಭಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದು ಪೇಜಾವರ ಶ್ರೀಗಳು ತಿಳಿಸಿದರು.
ಈ ಮೊದಲು ಮಠದ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಸುವ ಯೋಚನೆ ಇತ್ತು. ಆದರೆ ಭದ್ರತೆಯ ಕಾರಣಕ್ಕಾಗಿ ಉಡುಪಿಯಲ್ಲಿ ಸಾರ್ವಜನಿಕ ಸಭೆ ನಡೆಸಲು ಅವಕಾಶ ನೀಡಿಲ್ಲ. ಉಮಾ ಭಾರತಿ ನೇತೃತ್ವದಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಗುರುವಂದನೆಯನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಅಥವಾ ನವದೆಹಲಿಯಲ್ಲಿ ಆಯೋಜಿಸುವ ಚಿಂತನೆ ನಡೆದಿದೆ. ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ನಿರ್ಭಂದ ವಿತ್ತು.
President Kovind visited Sri Pejawara Adhokshaja Mutt and paid his respects at Sri Krishna Temple in Udupi, Karnataka. pic.twitter.com/KigjUtvKbq
ಉಡುಪಿ: ನಾವು ಯಾರಿಗೂ ಕೋಪ ಬರುವ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಅವರಿಗೆ ಯಾಕೆ ಕೋಪ ಇದೆ ಎನ್ನುವುದು ಗೊತ್ತಿಲ್ಲ. ಅವರು ಕೃಷ್ಣ ಮಠಕ್ಕೆ ಬರುತ್ತಾರೋ ಇಲ್ಲವೋ ಎನ್ನುವುದು ಭಾನುವಾರ ತಿಳಿಯಲಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹೇಳಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾನುವಾರ ಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಗೈರಾಗುತ್ತಿದ್ದಾರೆ ಎನ್ನುವ ವರದಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಅವರಿಗೆ ಕೃಷ್ಣಮಠದ ಪ್ರತಿನಿಧಿಗಳ ಮೂಲಕ ಆಹ್ವಾನ ನೀಡಿದ್ದೇವೆ. ಆದರೆ ಕಾರ್ಯದರ್ಶಿಗಳು ಉಡುಪಿ ಕಾರ್ಯಕ್ರಮಕ್ಕೆ ಸಿಎಂ ಬರುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಮಠಕ್ಕೆ ಬರುತ್ತಾರೋ ಇಲ್ಲವೋ ಭಾನುವಾರ ತಿಳಿಯಲಿದೆ ಎಂದರು.
ನನ್ನ ಪರ್ಯಾಯದ ಸಂದರ್ಭದಲ್ಲಿ ಅವರಿಗೆ ಆಹ್ವಾನ ಮಾಡಿದ್ದೆ. ಹಲವು ಬಾರೀ ಮಠಕ್ಕೆ ಆಹ್ವಾನ ನೀಡಲಾಗಿದೆ. ನಾನು ಬರುವುದಿಲ್ಲ ಎಂದು ಸಿಎಂ ಅವರು ಹೇಳಿಲ್ಲ. ಆದರೆ ಒಂದು ಬಾರಿಯೂ ಮಠಕ್ಕೆ ಬಂದಿಲ್ಲ. ಮೊನ್ನೆ ಪರ್ಯಾಯದ ನಂತರ ಕೃಷ್ಣನಿಗೆ ಕಾಣಿಕೆ ಕಳುಹಿಸಿದ್ದರು. ಸಿಎಂ ಅವರ ಶ್ರೀಮತಿ ಫೋನ್ನಲ್ಲಿ ಮಾತನಾಡಿದ್ದರು ಎಂದು ಪೇಜಾವರ ಶ್ರೀ ತಿಳಿಸಿದರು.
ನಾನು ಸಿಎಂ ಅವರನ್ನು ಮಂಗಳೂರು, ಬೆಂಗಳೂರು, ಮೈಸೂರಲ್ಲಿ ಹಲವು ಬಾರಿ ಭೇಟಿಯಾಗಿದ್ದೇನೆ. ವರುಣಾ ಉಪಚುನಾವಣೆ ಸಂದರ್ಭ ಪ್ರಸಾದ ತೆಗೆದುಕೊಂಡು ಹೋಗಿದ್ದಾರೆ. ಸುತ್ತೂರು ಶ್ರೀಗಳು ಕೃಷ್ಣಮಠಕ್ಕೆ ಬರುವುದಾಗಿ ಹೇಳಿದ್ದರು. ಸಿಎಂ ಅವರನ್ನೂ ಜೊತೆ ಕರೆತರುವುದಾಗಿ ಹೇಳಿದ್ದಾರೆ ಎಂದು ಶ್ರೀಗಳು ಹೇಳಿದರು.