Tag: Krishna Rukmini

  • ಕನ್ನಡ ಕಿರುತೆರೆಗೆ ಕಮ್‌ಬ್ಯಾಕ್ ಮಾಡಿದ ‘ಕೃಷ್ಣ ರುಕ್ಮಿಣಿ’ ನಟಿ

    ಕನ್ನಡ ಕಿರುತೆರೆಗೆ ಕಮ್‌ಬ್ಯಾಕ್ ಮಾಡಿದ ‘ಕೃಷ್ಣ ರುಕ್ಮಿಣಿ’ ನಟಿ

    ನ್ನಡ ಕಿರುತೆರೆಯಲ್ಲಿ ‘ಕೃಷ್ಣ ರುಕ್ಮಿಣಿ’ (Krishna Rukmini) ಸೀರಿಯಲ್ ಭಾರೀ ಮೆಚ್ಚುಗೆ ಗಳಿಸಿತ್ತು. ನಾಯಕಿಯಾಗಿ ರುಕ್ಮಿಣಿ ಪಾತ್ರಧಾರಿ ಕೂಡ ಸೈ ಎನಿಸಿಕೊಂಡಿದ್ದರು. ಹಲವು ವರ್ಷಗಳ ನಂತರ ರುಕ್ಮಿಣಿ ಪಾತ್ರಧಾರಿ ಅಂಜನಾ ಶ್ರೀನಿವಾಸ್ (Anjana Srinivas) ಕನ್ನಡ ಕಿರುತೆರೆಗೆ ಕಮ್‌ಬ್ಯಾಕ್ ಆಗಿದ್ದಾರೆ.

    2011ರಲ್ಲಿ ‘ಕೃಷ್ಣ ರುಕ್ಮಿಣಿ’ ಸೀರಿಯಲ್ ಪ್ರಸಾರವಾಗುತ್ತಿತ್ತು. ಅದರಲ್ಲಿ ಡಾರ್ಲಿಂಗ್ ಕೃಷ್ಣ (Darling Krishna) ಹೀರೋ ಆಗಿದ್ರೆ, ನಾಯಕಿಯಾಗಿ ಅಂಜನಾ ನಟಿಸಿದ್ದರು. ಕಿರುತೆರೆಯಲ್ಲಿ ಬೆಸ್ಟ್ ಜೋಡಿ ಎಂದೇ ಅಂದು ಫೇಮಸ್ ಆಗಿದ್ದರು. ಈ ಸೀರಿಯಲ್ ನಂತರ ಪರಭಾಷೆಯ ಸೀರಿಯಲ್‌ನಲ್ಲಿ ನಟಿ ಬ್ಯುಸಿಯಾಗಿದ್ದರು. ಈಗ ಮತ್ತೆ ಕನ್ನಡದ ‘ಜಾನಕಿ ಸಂಸಾರ’ ಕಥೆ ಹೇಳೋದಕ್ಕೆ ರೆಡಿಯಾಗಿದ್ದಾರೆ. ಇದನ್ನೂ ಓದಿ:ಮಗಳ ಹೆಸರು ಬದಲಿಸಿದ ದುನಿಯಾ ವಿಜಯ್

    ‘ಜಾನಕಿ ಸಂಸಾರ’ ಸೀರಿಯಲ್‌ನಲ್ಲಿ ನಾಯಕಿಯಾಗಿ ಎಂಟ್ರಿ ಕೊಡುತ್ತಿದ್ದಾರೆ. ವಾಹಿನಿಯು ಸುಂದರವಾದ ಪ್ರೋಮೋ ರಿಲೀಸ್ ಮಾಡಿ ಮಾಹಿತಿ ನೀಡಿದೆ. ಕೂಡು ಕುಟುಂಬದ ಕಥೆ ಈ ಧಾರಾವಾಹಿಯಲ್ಲಿದೆ. ಅಂಜನಾ ಅವರು ಜಾನಕಿ ಪಾತ್ರ ಮಾಡುತ್ತಿದ್ದು, ಜಾನಕಿಗೆ ಮಗು ಕೂಡ ಇದೆ. ಸೂರಜ್ ಹೊಳ್ಳ ಅವರು ಈ ಧಾರಾವಾಹಿಯ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.


    ಅಂದಹಾಗೆ, 17ನೇ ವಯಸ್ಸಿಗೆ ಕೃಷ್ಣ ರುಕ್ಮಿಣಿ ಸೀರಿಯಲ್‌ಗೆ ನಾಯಕಿಯಾಗಿ ಆಯ್ಕೆ ಆದರು. ಬಳಿಕ ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ 7 ಸೀರಿಯಲ್‌ನಲ್ಲಿ ನಟಿಸಿದ್ದಾರೆ.

  • ಲವ್ ಜಿಹಾದ್ ಮಹಾಭಾರತದಲ್ಲೂ ನಡೆದಿದೆ: ವಿವಾದಿತ ಹೇಳಿಕೆ ನೀಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ

    ಲವ್ ಜಿಹಾದ್ ಮಹಾಭಾರತದಲ್ಲೂ ನಡೆದಿದೆ: ವಿವಾದಿತ ಹೇಳಿಕೆ ನೀಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ

    ದಿಸ್ಪುರ್: ಲವ್ ಜಿಹಾದ್ (Love Jihad) ವಿಚಾರವಾಗಿ ಅಸ್ಸಾಂನಲ್ಲಿ (Assam) ಭಾರೀ ರಾಜಕೀಯ ನಡೆದಿದೆ. ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಕೃಷ್ಣ-ರುಕ್ಮಿಣಿ (Krishna Rukmini) ಪ್ರೇಮಗಾಥೆಗೆ ಪರೋಕ್ಷವಾಗಿ ಲವ್ ಜಿಹಾದ್ ಟಚ್ ನೀಡಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಇತ್ತೀಚೆಗೆ ಅಸ್ಸಾಂನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಹಿಂದೂ ಪತ್ನಿ ಮತ್ತು ಆಕೆಯ ತಂದೆ ತಾಯಿಯನ್ನು ಕೊಂದಿದ್ದ. ಈ ಪ್ರಕರಣವನ್ನು ಲವ್ ಜಿಹಾದ್ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಕರೆದಿದ್ದರು. ಈ ಹೇಳಿಕೆಯನ್ನು ವಿರೋಧಿಸುವ ಭರದಲ್ಲಿ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ (Bhupen Borah) ಕೃಷ್ಣ-ರುಕ್ಮಿಣಿ ಮದುವೆ ವಿಚಾರವನ್ನು ಎಳೆದುತಂದಿದ್ದಾರೆ.

    ಲವ್ ಜಿಹಾದ್ ಮಹಾಭಾರತದಲ್ಲೂ (Mahabharat) ನಡೆದಿದೆ. ಪುರಾಣ ಗ್ರಂಥಗಳಲ್ಲಿ ಕೃಷ್ಣನು ರುಕ್ಮಿಣಿಯನ್ನು ಓಡಿಸಿಕೊಂಡು ಹೋಗಿರುವ ಉಲ್ಲೇಖವಿದೆ. ಇಂದಿನ ಕಾಲದಲ್ಲಿ ಬೇರೆ ಬೇರೆ ಧರ್ಮ, ಬೇರೆ ಬೇರೆ ಜಾತಿಗಳ ಯುವಕ-ಯುವತಿಯರು ಮದುವೆ ಆಗುವುದು ಸಾಮಾನ್ಯವಾಗಿದೆ. ಇದನ್ನು ಲವ್ ಜಿಹಾದ್‌ಗೆ ಹೋಲಿಸುವುದು ಸರಿಯಲ್ಲ ಎಂದು ಬೋರಾ ಹೇಳಿಕೆ ನೀಡಿದ್ದಾರೆ.

    ಈ ಹೇಳಿಕೆಗೆ ಕೆರಳಿದ ಹಿಮಾಂತ ಶರ್ಮಾ, ಇದು ಖಂಡನೀಯ, ಎಲ್ಲಾ ಸನಾತನಿಗಳು ಬೋರಾ ವಿರುದ್ಧ ಕೇಸ್ ದಾಖಲಿಸಿದರೆ, ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳದೇ ಇರಲು ಸಾಧ್ಯವಿಲ್ಲ. ಯಾರಾದರೂ ದೂರು ನೀಡಿದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಡ್ರೋನ್ ಮೂಲಕ ಪಂಜಾಬ್‌ಗೆ ಡ್ರಗ್ಸ್ ಸಪ್ಲೈ ಮಾಡಲಾಗ್ತಿದೆ: ಪಾಕ್ ಪ್ರಧಾನಿ ಆಪ್ತ

    ತಮ್ಮ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಇದೀಗ ಭೂಪೇನ್ ಬೋರಾ ವೈಷ್ಣವ ಪ್ರಾರ್ಥನೆ ಹಾಡುವ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ಗೆ ಮೊಣಕಾಲು ನೋವು – ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]