Tag: Krishnaji Rao

  • ನನಸಾಗ್ತಿದೆ ಕೆಜಿಎಫ್ ತಾತನ ಹೀರೋ ಆಗುವ ಕನಸು: ಅವರು ಇರಬೇಕಿತ್ತು ಎಂದ ನಿರ್ದೇಶಕ ಕುಮಾರ್

    ನನಸಾಗ್ತಿದೆ ಕೆಜಿಎಫ್ ತಾತನ ಹೀರೋ ಆಗುವ ಕನಸು: ಅವರು ಇರಬೇಕಿತ್ತು ಎಂದ ನಿರ್ದೇಶಕ ಕುಮಾರ್

    ಕೆಜಿಎಫ್ (KGF) ಸಿನಿಮಾದಲ್ಲಿ ವಯೋವೃದ್ದ ಅಂಧನ ಪಾತ್ರಕ್ಕೆ ಬಣ್ಣ ಹಚ್ಚಿ ಬೆಂಕಿ ಡೈಲಾಗ್ ಬಿಟ್ಟಿದ್ದ ಕೃಷ್ಣೋಜಿ ರಾವ್ (Krishnaji Rao), ಕೆಜಿಎಫ್ ತಾತ ಅಂತಾನೇ ಫೇಮಸ್ ಆಗಿದ್ದು ನಿಮ್ಮೆಲ್ಲರಿಗೂ ಗೊತ್ತೆಯಿದೆ. ಅಂದ್ಹಾಗೇ, ಈ ತಾತನಿಗೆ ಒಂದು ಕನಸಿತ್ತು. ಬಣ್ಣ ಕಳಚುವುದರೊಳಗೆ ನಾನು ಹೀರೋ ಆಗ್ಬೇಕು, ನಾಯಕನಾಗಿ ನಾನು ಕೂಡ ಬೆಳ್ಳಿತೆರೆ ಮೇಲೆ ಮೆರವಣಿಗೆ ಹೊರಡಬೇಕು ಅಂತ ಆಸೆಪಟ್ಟಿದ್ದರು. ಅವರ ಆಸೆಯನ್ನು ನಿರ್ದೇಶಕ ಕುಮಾರ್ ಈಡೇರಿಸಿದರು. ನ್ಯಾನೋ ನಾರಾಯಣಪ್ಪ (Nano Narayanappa) ಚಿತ್ರಕ್ಕೆ ಕೆಜಿಎಫ್ ತಾತನ್ನು ಹೀರೋ ಮಾಡಿದರು. ಸದ್ಯ ಈ ಸಿನಿಮಾ ರಿಲೀಸ್‍ಗೆ ರೆಡಿಯಿದೆ, ಜುಲೈ 07ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲಿದೆ. ಆದರೆ, ಈ ಚಿತ್ರದ ಹೀರೋ ಕೆಜಿಎಫ್ ತಾತಾ ಅಲಿಯಾಸ್ ಕೃಷ್ಣೋಜಿ ರಾವ್ ಜೀವಂತವಾಗಿ ಉಳಿದಿಲ್ಲ. ಬಿಗ್‍ಸ್ಕ್ರೀನ್ ಮೇಲೆ ದಿಬ್ಬಣ ಹೊರಡುವ ಗಳಿಗೆಗೆ ಸಾಕ್ಷಿಯಾಗಬೇಕು ಎನ್ನುವ ಕೆಜಿಎಫ್ ತಾತನ ಕನಸು ನನಸಾಗಲಿಲ್ಲ.

    ಕೆಜಿಎಫ್ ತಾತ ನಿಧನರಾಗಿ ಸುಮಾರು ಆರು ತಿಂಗಳು ಕಳೀತಾ ಬಂತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕೃಷ್ಣೋಜಿ ರಾವ್ ಅವರು ಚಿಕಿತ್ಸೆ ಫಲಿಸದೇ ಉಸಿರು ಚೆಲ್ಲುವಂತಾಯ್ತು. ವೃತ್ತಿಜೀವನದಲ್ಲಿ ಮೊದಲ ಬಾರಿಗೆ ನಾಯಕನಾಗಿ ಬಣ್ಣ ಹಚ್ಚಿದ ಸಿನಿಮಾನ ಸಿಲ್ವರ್‌ ಸ್ಕ್ರೀನ್ ಮೇಲೆ ನೋಡುವ ಸುವರ್ಣಾವಕಾಶ ಮಿಸ್ ಆಯ್ತು. ಆದರೆ, ಸಿನಿಮಾನ ಡಬ್ಬಿಂಗ್ ಟೈಮ್‍ನಲ್ಲಿ ನೋಡಿ ಸಿಕ್ಕಾಪಟ್ಟೆ ಎಂಜಾಯ್ ಮಾಡಿದ್ರಂತೆ. 40 ವರ್ಷಗಳ ಕಾಲ ಚಿತ್ರರಂಗದಲ್ಲಿ ಜೂನಿಯರ್ ಆರ್ಟಿಸ್ಟ್, ಅಸೋಸಿಯೇಟ್, ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಕ್ಕೂ ಸಾರ್ಥಕವಾಯ್ತು ಎನ್ನುವ ಹೆಮ್ಮೆಯ ಭಾವ ವ್ಯಕ್ತಪಡಿಸಿದ್ರಂತೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಕಮ್ ನಿರ್ಮಾಪಕ ಕುಮಾರ್ (Kumar), ಕೆಜಿಎಫ್ ತಾತನ ಅನುಪಸ್ಥಿತಿಯಲ್ಲಿ ನಮ್ಮ ಸಿನಿಮಾ ರಿಲೀಸ್ ಆಗ್ತಿರುವುದು ನಮಗೂ ಬೇಸರವಿದೆ ಎಂದರು. ಇದನ್ನೂ ಓದಿ:ಡೆವಿಲ್‌ ಕಥೆ ಹೇಳಲು ಸಜ್ಜಾದ ತೆಲುಗಿನ ನಟ ಕಲ್ಯಾಣ್‌ ರಾಮ್‌

    ಸಿನಿಮಾದ ಬಗ್ಗೆ ಮಾತು ಮುಂದುವರೆಸಿದ ನಿರ್ದೇಶಕ ಕುಮಾರ್, ಬರೀ 30 ಲಕ್ಷದಲ್ಲಿ ನ್ಯಾನೋ ನಾರಾಯಣಪ್ಪ ಸಿನಿಮಾ ಮಾಡಿದ್ದೇನೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಹಾಗೂ ಕ್ರಿಟಿಕಲ್ ಕೀರ್ತನೆಗಳು ಕೂಡ ಕಡಿಮೆ ಬಜೆಟ್‍ನಲ್ಲಿ ನಿರ್ಮಾಣಗೊಂಡಿದ್ವು. ಹಾಕಿದ ಬಂಡವಾಳದ ಜೊತೆಗೆ ಲಾಭ ತಂದುಕೊಟ್ಟಿದ್ವು. ಹೀಗಾಗಿ, ನ್ಯಾನೋ ನಾರಾಯಣಪ್ಪನ ಮೇಲೂ ನಂಬಿಕೆಯಿದೆ. ಆಡಿಯೋ ರೈಟ್ಸ್ ಒಳ್ಳೆ ಅಮೌಂಟ್‍ಗೆ ಸೇಲಾಗಿದ್ದು, ಅಮೆಜಾನ್ ಪ್ರೈಮ್‍ಗೆ ಡಿಜಿಟಲ್ ರೈಟ್ಸ್ ಮಾತುಕತೆ ನಡೀತಿದೆ. ವಿಜಯ್ ಸಿನಿಮಾಸ್ ಅವರು ಡಿಸ್ಟ್ರಿಬ್ಯೂಷನ್ ಮಾಡ್ತಿದ್ದಾರೆ ಎಂದು ಹೇಳಿಕೊಂಡರು. ತಮ್ಮ ನಿರ್ದೇಶನದ ಮೂರು ಸಿನಿಮಾಗಳಲ್ಲೂ ನ್ಯಾನೋ ಕಾರು ಬಳಕೆ ಮಾಡಿರುವ ಕುರಿತು ಸೆಂಟಿಮೆಂಟ್ ಬಿಚ್ಚಿಟ್ಟರು.

    ಅಂದ್ಹಾಗೆ, ನ್ಯಾನೋ ನಾರಾಯಣಪ್ಪ ಕಾಮಿಡಿ ಡ್ರಾಮಾ ಒಳಗೊಂಡಿರುವ ಚಿತ್ರ. ಇಲ್ಲಿ 70ರ ದಶಕದ ಲವ್‍ಸ್ಟೋರಿಯಿದೆ. ಪ್ರೀತಿಯ ಜೊತೆಗೆ ಜೀವನದ ಪಾಠವೂ ಅಡಕವಾಗಿದೆ. ಒಂದಿಡೀ ಕುಟುಂಬ ಥಿಯೇಟರ್‍ಗೆ ಬಂದು ಕಣ್ಣರಳಿಸಿ ನೋಡುವಂತಹ ಸಿನಿಮಾ ಇದು. ಇಲ್ಲಿ ಕೆಜಿಎಫ್ ತಾತ ಜೂನಿಯರ್ ಆರ್ಟಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೌಬಾಯ್ ಗೆಟಪ್‍ನಲ್ಲೂ ಖದರ್ ತೋರಿಸಿದ್ದಾರೆ. ಇಳಿವಯಸ್ಸಲ್ಲೂ ಕುಗ್ಗದ ಉತ್ಸಾಹ, ಹುಮ್ಮಸ್ಸು ಕೃಷ್ಣೋಜಿ ರಾವ್‍ರನ್ನ ಹೀರೋ ಮಾಡಿದೆ. 80ರ ದಶಕದಲ್ಲಿ ಕಂಡ ಕನಸು ಕೊನೆಗೂ ಈಡೇರಿದೆ. ಪ್ರಶಾಂತ್ ಸಿದ್ದಿ, ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಅಕ್ಷತಾ ಕುಕ್ಕಿ, ಅಪೂರ್ವ, ಕಾಮಿಡಿ ಕಿಲಾಡಿಗಳು ಸಂತು, ಅನಂತ್ ಪದ್ಮನಾಭ್, ಕಿಂಗ್ ಮೋಹನ್ ಸೇರಿದಂತೆ ಹಲವು ಕಲಾವಿದರ ದಂಡು ಚಿತ್ರದಲ್ಲಿದ್ದು, ನ್ಯಾನೋ ನಾರಾಯಣಪ್ಪನಿಗೆ ಬಲ ಬಂದಂತಾಗಿದೆ.

    ನ್ಯಾನೋ ನಾರಾಯಣಪ್ಪ ಟೈಟಲ್ಲೇ ಹೇಳುವಂತೆ ನ್ಯಾನೋ ಕಾರು ಈ ಚಿತ್ರದ ಹೈಲೆಟ್. ಎರಡು ರಿಯಲ್ ಇನ್ಸಿಡೆಂಟ್‍ಗಳನ್ನ ಸಿನಿಮಾರೂಪಕವಾಗಿಸಿರುವುದು ಮತ್ತೊಂದು ಹೈಲೆಟ್. ಹಾಸ್ಯದ ಜೊತೆಗೆ ಭಾವನೆಗಳನ್ನು ಬ್ಲೆಂಡ್ ಮಾಡಿ ಪ್ರೇಕ್ಷಕರನ್ನು ಹಿಡಿದು ಕೂರಿಸುವ ನಿರ್ದೇಶಕ ಕುಮಾರ್, ಈ ಭಾರಿಯೂ ಅಂತಹದ್ದೇ ಪ್ರಯೋಗ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಿದ್ದು, ಶಿವಶಂಕರ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಆಕಾಶ್ ಪರ್ವ ಸಂಗೀತ, ದೀಪು, ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದ್ದು, ಕೇಸರಿ ಫಿಲ್ಮಂ ಕ್ಯಾಪ್ಚರ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಕುಮಾರ್ ಅವ್ರ ಬಂಡವಾಳದಲ್ಲಿ ಸಿನಿಮಾ ಅದ್ದೂರಿಯಾಗಿ ಮೂಡಿಬಂದಿದೆ. ಇದೇ ಜುಲೈ 07ರಂದು ರಾಜ್ಯಾದ್ಯಂತ ನ್ಯಾನೋ ನಾರಾಯಣಪ್ಪನ ದರ್ಶನವಾಗಲಿದೆ. ಮಿಸ್ ಮಾಡದೇ ಥಿಯೇಟರ್ ಗೆ ಬಂದು ಸಿನಿಮಾ ನೋಡಿ ಎನ್ನುತ್ತಿದೆ ಚಿತ್ರತಂಡ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಜಿಎಫ್ ತಾತನ ಕೊನೆಯ ಚಿತ್ರ ‘ನ್ಯಾನೋ ನಾರಾಯಣಪ್ಪ’ಗೆ ಸೆನ್ಸಾರ್ ಅಸ್ತು

    ಕೆಜಿಎಫ್ ತಾತನ ಕೊನೆಯ ಚಿತ್ರ ‘ನ್ಯಾನೋ ನಾರಾಯಣಪ್ಪ’ಗೆ ಸೆನ್ಸಾರ್ ಅಸ್ತು

    ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಕುಮಾರ್. ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಕೆಜಿಎಫ್ ತಾತಾ ಎಂದೇ ಖ್ಯಾತಿ ಗಳಿಸಿದ ಕೃಷ್ಣಾಜಿ ರಾವ್ ಲೀಡ್ ರೋಲ್ ನಲ್ಲಿ ನಟಿಸಿರುವ ಈ ಚಿತ್ರದ ಟ್ರೇಲರ್ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದ್ದು, ಸಿನಿಮಾ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ.

    ಬಿಡುಗಡೆಗೆ ಸಕಲ ರೀತಿಯಲ್ಲೂ ಸಜ್ಜಾಗಿರುವ ‘ನ್ಯಾನೋ ನಾರಾಯಣಪ್ಪ’ ಚಿತ್ರಕ್ಕೆ ಬೇಸರದ ಸಂಗತಿಯೊಂದು ಕಾಡ್ತಿದೆ. ಸಂಪೂರ್ಣ ಚಿತ್ರದ ಜೀವಾಳವೇ ಆಗಿದ್ದ ಕೆಜಿಎಫ್ ತಾತಾ ಖ್ಯಾತಿಯ ಕೃಷ್ಣಾಜಿ ರಾವ್ ಇತ್ತೀಚೆಗೆ ವಯೋ ಸಹಜ ಕಾಯಿಲೆಯಿಂದ ಮರಣ ಹೊಂದಿದ್ರು. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರಿಲ್ಲ ಎಂಬ ನೋವು ಇಡೀ ಚಿತ್ರತಂಡವನ್ನು ಕಾಡ್ತಿದೆ. ಕೆಜಿಎಫ್ ನಂತರ ಮುಖ್ಯ ಪಾತ್ರಧಾರಿಯಾಗಿ ನಟಿಸಿದ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ತುಂಬಾ  ಲವಲವಿಕೆಯಿಂದ  ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ರು. ಚಿತ್ರದಲ್ಲಿ ಅವರ ನಟನೆ ತುಂಬಾ ಅದ್ಭುತವಾಗಿ ಮೂಡಿ ಬಂದಿದೆ. ಪ್ರತಿಬಾರಿ ಕರೆ ಮಾಡಿದಾಗಲು ಸಿನಿಮಾ ಯಾವಾಗ ಬಿಡುಗಡೆಯಾಗುತ್ತೆ ಎಂದು ಕೇಳುತ್ತಿದ್ರು ಆದ್ರೆ ಇಂದು ಅವರು ನಮ್ಮೊಂದಿಗಿಲ್ಲ ಎಂದು ನಿರ್ದೇಶಕ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಡುರಾತ್ರಿಯಲ್ಲಿ ಎಲಿಮಿನೇಷನ್: ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಔಟ್

    ಸೆನ್ಸಾರ್ ನಲ್ಲಿ ‘ಯು’ ಸರ್ಟಿಫಿಕೇಟ್ ಪಡೆದುಕೊಂಡಿರುವ ‘ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಕುಮಾರ್ ಸಿನಿಮಾ ಅಂದ್ರೆ ಅಲ್ಲಿ ಕಾಮಿಡಿಗೆ ಮೊದಲ ಆದ್ಯತೆ ಇರುತ್ತೆ ಇಲ್ಲೂ ಕೂಡ ಅದೇ ಸೂತ್ರವನ್ನು ಫಾಲೋ ಮಾಡಿದ್ದು ಅದರೊಂದಿಗೆ ಒಂದಿಷ್ಟು ಭಾವನಾತ್ಮಕ ಅಂಶಗಳು ಈ ಚಿತ್ರದಲ್ಲಿದೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

    ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿಯನ್ನು ನಿರ್ದೇಶಕ ಕುಮಾರ್ ನಿರ್ವಹಿಸಿದ್ದು, ಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಫೆಬ್ರವರಿಯಲ್ಲಿ ಪ್ರೇಕ್ಷಕರನ್ನು ರಂಜಿಸಲು ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಬರಲಿದ್ದು ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ಕೆಜಿಎಫ್ ತಾತಾ ನಟನೆಯ ‘ನ್ಯಾನೋ ನಾರಾಯಣಪ್ಪ’ ಟ್ರೇಲರ್ ರಿಲೀಸ್

    ಕೆಜಿಎಫ್ ತಾತಾ ನಟನೆಯ ‘ನ್ಯಾನೋ ನಾರಾಯಣಪ್ಪ’ ಟ್ರೇಲರ್ ರಿಲೀಸ್

    ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ (Nano Narayanappa) ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ಪ್ರೇಕ್ಷಕರೆದುರು ತೆರೆದುಕೊಂಡಿದೆ. ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ

    ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಕುಮಾರ್ (Kumar) ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೃಷ್ಣಾಜಿ ರಾವ್ (Krishnaji Rao) ನಟಿಸಿದ್ದು. ಫಸ್ಟ್ ಲುಕ್ ಪೋಸ್ಟರ್, ಟೈಟಲ್ ಮೂಲಕ ಗಮನ ಸೆಳೆದ ಚಿತ್ರತಂಡ ಈಗ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೆಜಿಎಫ್ ನಲ್ಲಿ ಪುಟ್ಟ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡ ಕೃಷ್ಣಾಜಿ ರಾವ್ ಈ ಚಿತ್ರದಲ್ಲಿ ಇಡೀ ಸಿನಿಮಾ ಆವರಿಸಿಕೊಂಡಿದ್ದಾರೆ.  ಕುಮಾರ್ ಹಿಂದಿನ ಸಿನಿಮಾಗಳಂತೆ ಕಾಮಿಡಿ ಈ ಚಿತ್ರದ ಮೂಲ ಮಂತ್ರವಾಗಿದ್ದು ಭಾವನಾತ್ಮಕ ಅಂಶಗಳು ಸಿನಿಮಾದಲ್ಲಿವೆ ಅನ್ನೋದು ಟ್ರೇಲರ್ (trailer) ನೋಡಿದ್ರೆ ಗೊತ್ತಾಗುತ್ತೆ.

    ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ ಕುಮಾರ್. ಕಾಮಿಡಿ ಎಮೋಷನಲ್ ಸಿನಿಮಾ ಇದಾಗಿದ್ದು, ಕುಟುಂಬ ಸಮೇತ ನೋಡಿ ಎಂಜಾಯ್ ಮಾಡಬಹುದಾದ ಸಬ್ಜೆಕ್ಟ್ ಚಿತ್ರದಲ್ಲಿದೆ. ಶಿವಶಂಕರ ಕ್ಯಾಮೆರಾ ನಿರ್ದೇಶನ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಕಾಕ್ರೋಚ್ ಸುಧಿ,  ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಸೇರಿದಂತೆ ಪ್ರತಿಭಾನ್ವಿತ ಕಲಾವಿದರ ಬಳಗ ಚಿತ್ರದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ಮಾತು ಉಳಿಸಿಕೊಂಡ ಪ್ರಶಾಂತ್ ನೀಲ್, ಕೆಜಿಎಫ್ ತಾತನಿಗೆ ಸಲಾರ್ ಸಿನಿಮಾದಲ್ಲೂ ಅವಕಾಶ

    ಮಾತು ಉಳಿಸಿಕೊಂಡ ಪ್ರಶಾಂತ್ ನೀಲ್, ಕೆಜಿಎಫ್ ತಾತನಿಗೆ ಸಲಾರ್ ಸಿನಿಮಾದಲ್ಲೂ ಅವಕಾಶ

    ಕೆಜಿಎಫ್ ಸಿನಿಮಾ ನಂತರ ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಕೃಷ್ಣಜಿ ರಾವ್, ‘ತಾತನ ಲವ್ ಸ್ಟೋರಿ’ ಸಿನಿಮಾದಲ್ಲಿ ಹೀರೋ ಆಗಿ ಅಚ್ಚರಿ ಮೂಡಿಸಿದ್ದರು. ಇದೀಗ ಅದಕ್ಕಿಂತಲೂ ದೊಡ್ಡ ಸುದ್ದಿಯನ್ನೇ ನೀಡಿದ್ದಾರೆ ಕೃಷ್ಣಜಿ ರಾವ್, ಮತ್ತೆ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲೂ ಅವರು ಪಾತ್ರ ಮಾಡುತ್ತಿದ್ದಾರಂತೆ. ಈ ಸಿನಿಮಾದಲ್ಲಿ ಅವರು ಯಾವ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನುವುದು ಸದ್ಯಕ್ಕೆ ಸೆಸ್ಪನ್ಸ್. ಓದಿ : ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ

    ಕೆಜಿಎಫ್ ಮುಗಿದ ನಂತರ ನಿಮಗೆ ಮತ್ತೊಂದು ಸಿನಿಮಾದಲ್ಲಿ ಅವಕಾಶ ನೀಡುತ್ತೇನೆ ಎಂದು ಸ್ವತಃ ಪ್ರಶಾಂತ್ ನೀಲ್ ಅವರೇ ಮಾತುಕೊಟ್ಟಿದ್ದರಂತೆ. ಅದರಂತೆ ಪ್ರಶಾಂತ್ ನಡೆದುಕೊಂಡಿದ್ದಾರೆ. ತಾತನಿಗೆ ಮತ್ತೊಂದು ಅವಕಾಶ ಕೊಟ್ಟಿದ್ದು, ಶೀಘ್ರದಲ್ಲೇ ಅವರು ಶೂಟಿಂಗ್ ಗೂ ಕರೆಯಿಸಿಕೊಳ್ಳಲಿದ್ದಾರೆ ಎನ್ನುವುದು ಲೇಟೆಸ್ಟ್ ಸುದ್ದಿ. ಆದರೆ, ಪಾತ್ರದ ಹಿನ್ನೆಲೆ ಮಾತ್ರ ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಅಲ್ಲದೇ, ತಾವು ಸಲಾರ್ ಚಿತ್ರದಲ್ಲಿ ಪಾತ್ರ ಮಾಡುತ್ತಿರುವುದನ್ನು ತಾತ ಕೂಡ ಖಚಿತ ಪಡಿಸಿದ್ದಾರೆ.

    ಕೆಜಿಎಫ್ 2 ರಿಲೀಸ್ ಆದ ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರಂತೆ ಕೃಷ್ಣಜಿ ರಾವ್. ಒಂದು ರೀತಿಯಲ್ಲಿ ಬೇಡಿಕೆಯ ನಟರಾಗಿ ಬದಲಾಗಿದ್ದಾರಂತೆ. ಈವರೆಗೂ ಏನೆಲ್ಲ ಕಷ್ಟಗಳನ್ನು ಅನುಭವಿಸಿದ್ದೆನೋ, ಅವೆಲ್ಲವೂ ಈಗ ಕರಗುವ ಸಮಯ ಎಂದು ಈ ಹಿಂದೆ ಅವರು ಹೇಳಿದ್ದರು. ಅದರಂತೆಯೇ ಹಲವು ನಿರ್ದೇಶಕರು ಒಂದೊಳ್ಳೆ ಪಾತ್ರಗಳನ್ನು ಕೊಡುವ ಮೂಲಕ ಕೃಷ್ಣಜಿ ರಾವ್ ಅವರಿಗೆ ಪ್ರೋತ್ಸಾಹಿಸುತ್ತಿದ್ದಾರಂತೆ.