Tag: KRPete

  • ಒಂಟಿ ಮಹಿಳೆಯನ್ನ ಭೀಕರವಾಗಿ ಹತ್ಯೆಗೈದು ಪರಾರಿಯಾದ ಪಾಪಿಗಳು

    ಒಂಟಿ ಮಹಿಳೆಯನ್ನ ಭೀಕರವಾಗಿ ಹತ್ಯೆಗೈದು ಪರಾರಿಯಾದ ಪಾಪಿಗಳು

    ಮಂಡ್ಯ: ಒಂಟಿ ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ನಿವಾಸಿ ಒಂಟಿ ಮಹಿಳೆ ಪುಷ್ಪಲತಾ (45) ಮನೆಗೆ ಅಪರಿಚಿತರು ನುಗ್ಗಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಪುಷ್ಪಲತಾ ಅವರ ಪತಿ ಕಳೆದ 10 ವರ್ಷದ ಹಿಂದೆ ಮೃತಪಟ್ಟಿದ್ದರು. ಅದಕ್ಕೆ ಒಂಟಿಯಾಗಿಯೇ ಪುಷ್ಪಲತಾ ತನ್ನ ಮಗನನ್ನು ನೋಡಿಕೊಂಡು ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

    ನಡೆದಿದ್ದೇನು?
    ಪುಷ್ಪಲತಾ ಜೀವನ ಸಾಗಿಸಲು ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು. ಬುಧವಾರ ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಿದಾಗ ಪುಷ್ಪಲತಾ ಕೊಲೆ ನಡೆದಿದೆ. ತಾಯಿ ಎಷ್ಟು ಸಮಯವಾದರೂ ಮೆಡಿಕಲ್ ಸ್ಟೋರ್‌ಗೆ ಬಾರದ ಹಿನ್ನೆಲೆ ಪುಷ್ಪಲತಾ ಪುತ್ರ ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಹಂತಕರು ಪುಷ್ಪಲತಾ ತಲೆ ಹಾಗೂ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಅಲ್ಲದೇ ಪುಷ್ಪಲತಾ ಮೃತದೇಹ ಅರ್ಧಂಬರ್ಧ ಬಟ್ಟೆಯಲ್ಲಿ ಪತ್ತೆಯಾಗಿರುವುದರಿಂದ ಆಕೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ದೇಶದಲ್ಲಿ 2023ರ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದ 5G ಸೇವೆ: ಕೇಂದ್ರ ಸಚಿವ

    ಪುಷ್ಪಲತಾ ಅವರ ಕೊಲೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಶೋಧಕಾರ್ಯವನ್ನು ಪ್ರಾರಂಭಿಸಿದ್ದಾರೆ.

    Live Tv

  • ಟೀ ಮಾರಿದ್ದ ಮೋದಿ ಪ್ರಧಾನಿಯಾದ್ರು, ನಾನು ಟೀ ಗ್ಲಾಸು ತೊಳೆದ್ರೆ ತಪ್ಪೇನು- ನಾರಾಯಣ ಗೌಡ

    ಟೀ ಮಾರಿದ್ದ ಮೋದಿ ಪ್ರಧಾನಿಯಾದ್ರು, ನಾನು ಟೀ ಗ್ಲಾಸು ತೊಳೆದ್ರೆ ತಪ್ಪೇನು- ನಾರಾಯಣ ಗೌಡ

    ಮಂಡ್ಯ: ಕೆಆರ್ ಪೇಟೆ ಕದನ ಕಣದಲ್ಲಿ ಮುಂಬೈ ವಿಚಾರ ಸಖತ್ ಸದ್ದು ಮಾಡುತ್ತಿದೆ. ನಾನು ಕೂಲಿ ಮಾಡಿದ್ದೇನೆ. ಹೊಟೇಲ್‍ನಲ್ಲಿಯೂ ಕೆಲಸ ಮಾಡಿದ್ದೇನೆ. ಈಗಲೂ ನಾನು ಲೋಟ ತೊಳೆಯುತ್ತೇನೆ. ನನ್ನ ಹೊಟೇಲಿನಲ್ಲಿ ತಟ್ಟೆ, ಗ್ಲಾಸು ತೊಳೆದ್ರೆ ಏನು ತಪ್ಪು ಅಂತ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಪ್ರಶ್ನಿಸಿದ್ದಾರೆ.

    ಕೆಆರ್ ಪೇಟೆಯ ವಡ್ಡರಹಳ್ಳಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಟೀ ಮಾರುತ್ತಿದ್ದರು. ಈಗ ಅವರು ನಮ್ಮ ದೇಶದ ಪ್ರಧಾನಿ ಆಗಿದ್ದಾರೆ. ತಟ್ಟೆ ಗ್ಲಾಸು ತೊಳೆದ್ರೆ ಏನು ತಪ್ಪು ಅನ್ನೋ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಪರೋಕ್ಷ ಗುದ್ದು ನೀಡಿದ್ದಾರೆ. ಜೊತೆಗೆ ಇದೇ ವಿಚಾರವನ್ನೇ ಪ್ರಚಾರದಲ್ಲಿ ಪ್ರಸ್ತಾಪಿಸಿ ಅನುಕಂಪ ಗಿಟ್ಟಿಸಲು ನಾರಾಯಣಗೌಡ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

    ದೇವೇಗೌಡರ ಬೀಗರು ಕೆಆರ್ ಪೇಟೆಯನ್ನು ಕಮಾಟಿಪುರ ಮಾಡುವುದಾಗಿ ಹೇಳುತ್ತಾರೆ. ನನ್ನ ಮನಸ್ಸಿನಲ್ಲಿ ಇದುವರೆಗೂ ಅಂತಹ ಭಾವನೆ ಬಂದಿಲ್ಲ. ಡಿ.ಸಿ.ತಮ್ಮಣ್ಣ ಕಮಾಟಿಪುರನಾ ಅವರ ತಾಲೂಕಿನಲ್ಲಿ ಮಾಡಿಕೊಳ್ಳಲಿ. ನನ್ನ ಶರೀರದಲ್ಲಿ ಉಸಿರಿರುವವರೆಗೆ ನನ್ನ ತಾಲೂಕಿನಲ್ಲಿ ಹೀಗೆ ಮಾಡೋಕೆ ಬಿಡಲ್ಲ. ರಾಜ್ಯದಲ್ಲೂ ಹೀಗೆ ಮಾಡೋಕೆ ಬಿಡಲ್ಲ. ವೀರಭದ್ರಸ್ವಾಮಿ ದೇವಸ್ಥಾನದ ಮುಂದೆ ಹೇಳುತ್ತಿದ್ದೀನಿ ಎಂದು ಪ್ರಮಾಣ ಮಾಡಿದರು. ಇದನ್ನೂ ಓದಿ: ನಾನೇನು ತಪ್ಪು ಮಾಡಿದೆ, ನನ್ನನ್ನು ಯಾಕೆ ಕೈ ಬಿಟ್ಟಿರಿ – ಮಂಡ್ಯದಲ್ಲಿ ಎಚ್‍ಡಿಕೆ ಮತ್ತೆ ಕಣ್ಣೀರು

    ನಾನು ಇದುವರೆಗೂ ಸರಿಯಾಗಿ ಕಮಾಟಿಪುರ ನೋಡೇ ಇಲ್ಲ. ಕಾರಲ್ಲಿ ಹೋಗುವಾಗ ನಾನು ದೂರದಿಂದ ನೋಡಿದ್ದೇನೆ ಅಷ್ಟೇ. ಕಮಾಟಿಪುರನಾ ಹತ್ತಿರದಿಂದ ತಮ್ಮಣ್ಣ ಅವರು ನೋಡಿಕೊಂಡು ಬಂದಿದ್ದಾರೆ. ಅದಕ್ಕೆ ಬೇಕಿದ್ರೆ ಅವರ ತಾಲೂಕಿನಲ್ಲಿ ಮಾಡಿಕೊಳ್ಳಲಿ. ನಾನು ಬಿಜೆಪಿ ಸೇರಿದ್ದೇನೆ ಎಂದು ಜೆಡಿಎಸ್ ಕುಟುಂಬ ಮನೆ ಮನೆಗೆ ಪ್ರಚಾರಕ್ಕೆ ಬರುತ್ತಾ ಇದೆ. ಅಂದು ನಾನು ಎಲೆಕ್ಷನ್‍ನಲ್ಲಿ ನಿಂತಾಗ ಯಾಕೆ ಅವರು ಬರಲಿಲ್ಲ. ನನ್ನ ಸೋಲಿಸಲು ಗ್ರೂಪ್ ಮಾಡಿಕೊಂಡು ತಿರುಗಿದರು ಎಂದು ವಾಗ್ದಾಳಿ ನಡೆಸಿದರು.

    ನನ್ನ ಬಾಂಬೆ ಕಳ್ಳ ಅಂತಾರೇ. ಹಾಗಿದ್ರೆ ನನ್ನ ಮನೆಗೆ 15 ವರ್ಷದಿಂದ ಯಾಕೆ ಬರ್ತಾ ಇದ್ರಿ. ಇಡೀ ಕುಟುಂಬ ಯಾಕೆ ನನ್ನ ಹತ್ತಿರ ಬರ್ತಾ ಇದ್ರಿ. ಇಡೀ ಕುಟುಂಬ ಬಾಂಬೆಗೆ ಬಂದ್ರೆ ನನಗೆ ಹೇಳ್ತಾ ಇದ್ರಿ. ಆಗ ನಾನು ಕಳ್ಳ ಆಗಿರಲಿಲ್ವಾ. ನಾನು ಬಿಜೆಪಿಗೆ ಸೇರಿದ ಮೇಲೆ ಕಳ್ಳನಾ. ಬಿಜೆಪಿ ಪಕ್ಷ ಕಳ್ಳತನದ ಪಕ್ಷ ಅಲ್ಲ. ನಾನು ಚೆಕ್ ಮಾಡಿದ್ದೇನೆ. ಮಹಾರಾಷ್ಟ್ರ, ದೆಹಲಿ ಎಲ್ಲಾ ಕಡೆ ಚೆಕ್ ಮಾಡಿದ್ದೇನೆ. ಬಿಜೆಪಿ ಪ್ರಮಾಣಿಕರ ಪಕ್ಷ ಎಂದರು.

     

  • ಕೆಆರ್‌ಪೇಟೆ ಬೈಎಲೆಕ್ಷನ್- ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿದ್ದವ್ರಿಗೆ ಶಾಕ್

    ಕೆಆರ್‌ಪೇಟೆ ಬೈಎಲೆಕ್ಷನ್- ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿದ್ದವ್ರಿಗೆ ಶಾಕ್

    ಬೆಂಗಳೂರು: ನಮ್ಮ ನೆರವಿಗೆ ಬರುತ್ತಾರೆ ಅನ್ನೋ ನಿರೀಕ್ಷೆಯಲ್ಲಿದ್ದ ಎರಡೂ ಬಣದವರ ನಿರೀಕ್ಷೆ ಹುಸಿಯಾಗಿದೆ. ನನಗೆ ನೀವೂ ಬೇಕು, ಅವರೂ ಬೇಕು. ಹೀಗಾಗಿ ನಾನು ಯಾರ ಪರವೂ ಪ್ರಚಾರಕ್ಕೆ ಬರಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

    ಹೌದು. ಮಂಡ್ಯ ಅಖಾಡದ ಲೇಟೆಸ್ಟ್ ಬೆಳವಣಿಗೆಯಾಗಿದ್ದು, ಕೆ.ಆರ್. ಪೇಟೆ ಅಖಾಡದಲ್ಲಿ ಸಂಸದೆ ಸುಮಲತಾ ಸೈಲೆಂಟಾಗಿರಲು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸುಮಲತಾ ಅವರು ತನ್ನ ಬೆಂಬಲ ನಿರೀಕ್ಷಿಸಿದವರಿಗೆ ಶಾಕ್ ನೀಡಿದ್ದಾರೆ.

    ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಬಣದವರು ತಮ್ಮ ಪರವಾಗಿ ಪ್ರಚಾರಕ್ಕೆ ಬರುವಂತೆ ಸುಮಲತಾರ ಮೇಲೆ ಒತ್ತಡ ಹೇರತೊಡಗಿದ್ರು. ಸುಮಲತಾ ಅವರು ಮಂಡ್ಯದ ಅಖಾಡದಿಂದ ಸ್ಪರ್ಧೆ ಮಾಡಿದಾಗ ಬಿಜೆಪಿ ಬಾಹ್ಯ ಬೆಂಬಲ ಘೋಷಣೆ ಮಾಡಿತ್ತು. ಕಾಂಗ್ರೆಸ್ಸಿನ ಚಲುವರಾಯ ಸ್ವಾಮಿ ಮತ್ತು ಟೀಮ್ ಪರವಾಗಿ ಕೆಲಸ ಮಾಡಿದ್ದರು. ಅಸಹಜವಾಗಿಯೇ ಕೆ.ಆರ್.ಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ ಚಂದ್ರಶೇಖರ್ ನಾನು ನಿಮ್ಮನ್ನ ಬೆಂಬಲಿಸಿದ್ದೆ. ಉಪ ಚುನಾವಣೆಯಲ್ಲಿ ನೀವು ನಮ್ಮನ್ನು ಬೆಂಬಲಿಸಿ ಎಂದು ಒತ್ತಡ ಹೇರತೊಡಗಿದ್ದರು. ಇನ್ನೊಂದೆಡೆ ಲೋಕಸಭಾ ಚುನಾವಣೆಯಲ್ಲಿ ಬಾಹ್ಯ ಬೆಂಬಲ ಘೋಷಿಸಿದ್ದ ಬಿಜೆಪಿ ಉಪ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸುವಂತೆ ಒತ್ತಡ ಹೇರತೊಡಗಿತ್ತು. ಹೀಗಾಗಿ ಧರ್ಮ ಸಂಕಟಕ್ಕೆ ಸಿಲುಕಿದ್ದ ಸಂಸದೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದರು.

    ಈಗ ಎರಡು ಬಣದವರಿಗೂ ಸ್ಪಷ್ಟವಾಗಿ ಸಂಸದೆ ತಿಳಿಸಿದ್ದಾರೆ. ಯಾವ ಕಾರಣಕ್ಕೂ ಯಾರ ಪರವಾಗಿಯೂ ಪ್ರಚಾರಕ್ಕೆ ಬರಲ್ಲ ಎಂದಿದ್ದಾರೆ. ಈ ಮೂಲಕ ಸಂಸದೆ ಸುಮಲತಾರನ್ನು ಕರೆತಂದು ತಮ್ಮ ಪರವಾಗಿ ಪ್ರಚಾರ ಮಾಡಿಸಿ ಸುಲಭವಾಗಿ ಗೆಲ್ಲಬಹುದು ಎಂದುಕೊಂಡಿದ್ದ ಕೆ.ಆರ್ ಪೇಟೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಈಗ ನಿರಾಸೆ ಅನುಭವಿಸುವಂತಾಗಿದೆ ಎನ್ನಲಾಗಿದೆ.

  • ರಾಜೀನಾಮೆ ಕೊಡೋಕೆ ಹೇಳಿದ್ದೇ ಬಿಎಸ್‌ವೈ- ಸ್ಫೋಟಕ ರಹಸ್ಯ ಬಿಚ್ಚಿಟ್ಟ ನಾರಾಯಣಗೌಡ

    ರಾಜೀನಾಮೆ ಕೊಡೋಕೆ ಹೇಳಿದ್ದೇ ಬಿಎಸ್‌ವೈ- ಸ್ಫೋಟಕ ರಹಸ್ಯ ಬಿಚ್ಚಿಟ್ಟ ನಾರಾಯಣಗೌಡ

    – ಹಿರಿಯ ಮಗಳು ಅಕೌಂಟಿಗೆ 2 ಲಕ್ಷ ಹಾಕ್ತಿದ್ದಾಳೆ

    ಮಂಡ್ಯ: ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ಬಿಎಸ್‌ವೈ ಮಾತನಾಡಿದ್ದ ಆಡಿಯೋ ಇದೀಗ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ 17 ಮಂದಿ ಶಾಸಕರು ರಾಜೀನಾಮೆ ಕೊಟ್ಟಿರುವ ಅಸಲಿ ಕಾರಣವನ್ನು ಅನರ್ಹ ಶಾಸಕ ನಾರಾಯಣಗೌಡ ಬಿಚ್ಚಿಟ್ಟಿದ್ದಾರೆ.

    ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ನನ್ನನ್ನು ಯಡಿಯೂರಪ್ಪ ಮನೆಗೆ ಕರೆದೊಯ್ದಿದ್ದರು. ಆಗ ಬಿಎಸ್‌ವೈ ಅವರು ಏನಪ್ಪ ಸಿಎಂ ಆಗೋ ಚಾನ್ಸ್ ಇದೆ ಬೆಂಬಲಿಸ್ತೀಯಾ ಅಂತ ಕೇಳಿದರು. ಅಲ್ಲದೆ ನನ್ನ ತಂದೆ ವೀರಭದ್ರ ಸ್ವಾಮಿ ಪೂಜೆ ಮಾಡಿಕೊಂಡು ಬೆಳೆಸಿದ್ದಾರೆ. ಆದರೆ ಕೆಆರ್‌ಪೇಟೆ ಅಭಿವೃದ್ಧಿಯಾಗಿಲ್ಲ. ಈಗಲೂ ಕನಸಲ್ಲಿ ಬಂದು ಕಾಡ್ತಿದ್ದಾರೆ. ನೀನು ಕೈ ಜೋಡಿಸಿದರೆ ಕೆಆರ್‌ಪೇಟೆ ಅಭಿವೃದ್ಧಿ ಮಾಡೋಣ. ಏನಂತೀಯಾ ಎಂದು ಯಡಿಯೂರಪ್ಪ ನನ್ನನ್ನು ಕೇಳಿದ್ದರು. ಅದಕ್ಕೆ ನಾನು ತಾಲೂಕಿನ ಅಭಿವೃದ್ಧಿಗೆ 700 ಕೋಟಿ ಕೇಳಿದ್ದೆ. ಆದರೆ ಯಡಿಯೂರಪ್ಪನವರು ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದರು ಎಂದು ಸ್ಫೋಟಕ ಸತ್ಯವನ್ನು ಬಯಲು ಮಾಡಿದರು.

    ರೇವಣ್ಣಗೆ ಟಾಂಗ್:
    ಇದೇ ವೇಳೆ, ರೇವಣ್ಣ ಸಾಹೇಬರು ಹೇಳ್ತಾರೆ ಎಂಜಲು ಲೋಟ ತೊಳೆಯೋನು ಅಂತ. ನನಗೆ ಅದೇ ಆಶೀರ್ವಾದ ಮಾಡಿರೋದು. ಎಂಜಲು ತೊಳಿಯೋದಕ್ಕಿಂತ ಪುಣ್ಯ ಕೆಲಸ ಇನ್ನೊಂದಿಲ್ಲ. ಎಂಜಲು ಎತ್ತೋಕೆ ಸುಲಭವಾಗಿ ಸಿಗಲ್ಲ. ನನಗೆ ಇದೇ ಶಕ್ತಿ ಕೊಡಲಿ. ಸದಾ ನಾನು ಸೇವಕನಾಗಿ, ಲಕ್ಷಾಂತರ ಜನರಿಗೆ ಅನ್ನದಾನ ಮಾಡಿ ಎಂಜಲು ಎತ್ತುತ್ತೇನೆ ಎಂದು ಹೇಳುವ ಮೂಲಕ ರೇವಣ್ಣಗೆ ಟಾಂಗ್ ನೀಡಿದರು.

    ದಳಪತಿಗಳಿಗೆ ಸವಾಲು:
    ಕೆಆರ್‌ಪೇಟೆಗೆ ರಾಜಕೀಯ ಮಾಡಲು ನೀವು ಬರುತ್ತಿದ್ದೀರಾ. ನಾನು ನನ್ನ ಅರ್ಧ ಆಸ್ತಿಯನ್ನು ನನ್ನ ಕ್ಷೇತ್ರಕ್ಕೆ ಬರೆದು ಕೊಡುತ್ತೇನೆ. ನೀವು ನಿಮ್ಮ ಅರ್ಧ ಆಸ್ತಿಯನ್ನು ಬರೆದುಕೊಡಿ ಎಂದು ನಾರಾಯಣಗೌಡರು ದಳಪತಿಗಳಿಗೆ ಸವಾಲು ಹಾಕಿದರು.

    ಸುಮ್ಮನೆ ನಾರಾಯಣಗೌಡ ಗೆದ್ದರು, ಸೋತರೂ ಮುಂಬೈಗೆ ಹೋಗುತ್ತಾನೆ ಅಂತಾರೆ. ನಾನು ಹೋದರೂ ನನ್ನ ಹೊಟ್ಟೆ ಪಾಡಿಗೆ ಹೋಗೋದು. ನನಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಒಬ್ಬಳು ಮದುವೆಯಾಗಿದ್ದಾಳೆ. ಇನ್ನೊಬ್ಬಳು ಉನ್ನತ ವ್ಯಾಸಂಗ ಮಾಡುತ್ತಿದ್ದಾಳೆ. ನನ್ನ ಹಿರಿಯ ಮಗಳು ನನ್ನ ಅಕೌಂಟ್‌ಗೆ 2 ಲಕ್ಷ ಹಾಕುತ್ತಿದ್ದಾಳೆ. ನನಗೆ ಇನ್ನೇನು ಬೇಕು ಹೇಳಿ ಎಂದರು.