Tag: Krunal Pandya

  • ಪಂದ್ಯಶ್ರೇಷ್ಠ ಗೆದ್ದು ಐಪಿಎಲ್‌ನಲ್ಲಿ ದಾಖಲೆ ಬರೆದ ಕೃನಾಲ್‌!

    ಪಂದ್ಯಶ್ರೇಷ್ಠ ಗೆದ್ದು ಐಪಿಎಲ್‌ನಲ್ಲಿ ದಾಖಲೆ ಬರೆದ ಕೃನಾಲ್‌!

    ಅಹಮದಾಬಾದ್‌: ಆರ್‌ಸಿಬಿ ಆಲ್‌ರೌಂಡರ್‌ ಕೃನಾಲ್‌ ಪಾಂಡ್ಯ (Krunal Pandya) ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಐಪಿಎಲ್‌ನಲ್ಲಿ (IPL) ವಿಶೇಷ ದಾಖಲೆ (Record) ಬರೆದಿದ್ದಾರೆ.

    ಎರಡು ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಕೃನಾಲ್‌ ಪಾತ್ರವಾಗಿದ್ದಾರೆ. 2017ರಲ್ಲಿ ಪುಣೆ ಸೂಪರ್‌ ಜೈಂಟ್ಸ್‌ ವಿರುದ್ಧ ಮುಂಬೈ ತಂಡ ಫೈನಲ್‌ನಲ್ಲಿ ಗೆದ್ದಾಗಲೂ ಕೃನಾಲ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರವಾಗಿದ್ದರು.

    ಮೊದಲು ಬ್ಯಾಟ್‌ ಮಾಡಿದ್ದ ಮುಂಬೈ 8 ವಿಕೆಟ್‌ ನಷ್ಟಕ್ಕೆ 129 ರನ್‌ ಹೊಡೆದಿತ್ತು. ಈ ಪಂದ್ಯದಲ್ಲಿ ಕೃನಾಲ್‌ 47 ರನ್‌(38 ಎಸೆತ, 3 ಬೌಂಡರಿ, 2 ಸಿಕ್ಸ್‌) ಹೊಡೆದಿದ್ದರು. ಈ ಪಂದ್ಯವನ್ನು ಮುಂಬೈ ರೋಚಕ 1 ರನ್‌ಗಳಿಂದ ಗೆದ್ದುಕೊಂಡಿತ್ತು.

    ಪಂದ್ಯವನ್ನು ತಿರುಗಿಸಿದ್ದ ಕೃನಾಲ್‌:
    ಫೈನಲ್‌ ಪಂದ್ಯ ಪಂಜಾಬ್‌ ಕಡೆ ವಾಲಿತ್ತು. ಆದರೆ 7ನೇ ಓವರ್‌ನಿಂದ ಕೃನಾಲ್‌ ಪಾಂಡ್ಯ ಕೈಚಳಕದಿಂದಾಗಿ ಪಂದ್ಯ ಆರ್‌ಸಿಬಿ (RCB) ಕಡೆ ವಾಲಿತ್ತು. ಅಂತಿಮವಾಗಿ 4 ಓವರ್‌ನಲ್ಲಿ ಕೇವಲ 17 ರನ್‌, 2 ವಿಕೆಟ್‌ ಪಡೆಯುವ ಮೂಲಕ ಪಂಜಾಬ್‌ ರನ್‌ ವೇಗಕ್ಕೆ ಕಡಿವಾಣ ಹಾಕಿದ್ದರು.

    ಪಂಜಾಬ್‌ 6 ಓವರ್‌ ಅಂತ್ಯಕ್ಕೆ 1 ವಿಕೆಟ್‌ ನಷ್ಟಕ್ಕೆ 52 ರನ್‌ ಗಳಿಸಿ ಸುಭದ್ರ ಸ್ಥಿತಿಯಲ್ಲಿತ್ತು.  ಈ ಹಂತದಲ್ಲಿ ರಜತ್‌ ಪಾಟಿದಾರ್‌ ಕೃನಾಲ್‌ ಪಾಂಡ್ಯ (Krunal Pandya) ಕೈಗೆ ಚೆಂಡು ನೀಡಿದರು. ಕೃನಾಲ್‌ ತಮ್ಮ ಮೊದಲ ಓವರ್‌ನಲ್ಲಿ 3 ರನ್‌ ನೀಡಿ ರನ್‌ಗೆ ಕಡಿವಾಣ ಹಾಕಿದರು. ತಮ್ಮ ಎರಡನೇ ಓವರ್‌ನಲ್ಲಿ ಪ್ರಭುಸಿಮ್ರಾನ್‌ ಸಿಂಗ್‌ ಅವರನ್ನು ಔಟ್‌ ಮಾಡಿದರು. ಈ ಓವರ್‌ನಲ್ಲಿ ಕೇವಲ 4 ರನ್‌ ಮಾತ್ರ ನೀಡಿದರು.

    ತಮ್ಮ ಮೂರನೇ ಓವರ್‌ನಲ್ಲಿ 11 ರನ್‌ ನೀಡಿದ ಕೃನಾಲ್‌ ತಮ್ಮ ಕೊನೆಯ ಓವರ್‌ನಲ್ಲಿ ಜೋಶ್‌ ಇಂಗ್ಲಿಸ್‌ ಅವರನ್ನು ಔಟ್‌ ಮಾಡಿದರು. ಸಿಕ್ಸ್‌ ಹೊಡೆಯಲು ಹೋದ ಇಂಗ್ಲಿಸ್‌ ಅವರ ಕ್ಯಾಚನ್ನು ಬೌಂಡರಿ ಬಳಿ ಲಿವಿಂಗ್‌ಸ್ಟೋನ್ ಹಿಡಿದರು. ಇಲ್ಲಿಂದ ಪಂದ್ಯದ ದಿಕ್ಕೇ ಬದಲಾಯಿತು.

    4 ಓವರ್‌ನಲ್ಲಿ ರನ್‌ ನಿಯಂತ್ರಣ ಮಾಡಿದ್ದು ಅಲ್ಲದೇ 2 ವಿಕೆಟ್‌ ತೆಗೆಯುವ ಮೂಲಕ ಕೃನಾಲ್‌ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ನಂತರ ಪಂಜಾಬ್‌ ಸತತ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿ ಕೊನೆಗೆ ಸೋಲನ್ನು ಒಪ್ಪಿಕೊಂಡಿತು.

    ಹಾಗೆ ನೋಡಿದ್ರೆ 4 ಓವರ್‌ ಎಸೆದ ಭುವನೇಶ್ವರ್‌ ಕುಮಾರ್‌ 38 ರನ್‌ ನೀಡಿದ್ರೆ ಹೆಜಲ್‌ವುಡ್‌ 54 ರನ್‌ ನೀಡಿ ದುಬಾರಿಯಾಗಿದ್ದರು. ಸುಯಾಶ್‌ ಶರ್ಮಾ 2 ಓವರ್‌ ಎಸೆದಿದ್ದರೂ 19 ರನ್‌ ನೀಡಿದ್ದರು. ರೋಮಾರಿಯೋ ಶೆಪರ್ಡ್‌ 3 ಓವರ್‌ ಎಸೆದು 30 ರನ್‌ ಕೊಟ್ಟಿದ್ದರು.

  • ಪಂಜಾಬ್‌ ಪರ ವಾಲಿದ್ದ ಪಂದ್ಯವನ್ನು ಆರ್‌ಸಿಬಿ ಕಡೆ ತಿರುಗಿಸಿದ್ದು ಕೃನಾಲ್‌!

    ಪಂಜಾಬ್‌ ಪರ ವಾಲಿದ್ದ ಪಂದ್ಯವನ್ನು ಆರ್‌ಸಿಬಿ ಕಡೆ ತಿರುಗಿಸಿದ್ದು ಕೃನಾಲ್‌!

    ಅಹಮದಾಬಾದ್‌: 4 ಓವರ್‌ 17 ರನ್‌ 2 ವಿಕೆಟ್‌. ಪಂಜಾಬ್‌ (PBKS) ಪರ ವಾಲಿದ್ದ ಪಂದ್ಯವನ್ನು ಆರ್‌ಸಿಬಿ (RCB) ಕಡೆ ತಿರುಗಿಸಿದ್ದು ಕೃನಾಲ್‌ ಪಾಂಡ್ಯ.

    ಪಂಜಾಬ್‌ 6 ಓವರ್‌ ಅಂತ್ಯಕ್ಕೆ 1 ವಿಕೆಟ್‌ ನಷ್ಟಕ್ಕೆ 52 ರನ್‌ ಗಳಿಸಿತ್ತು. ಈ ಹಂತದಲ್ಲಿ ರಜತ್‌ ಪಾಟಿದಾರ್‌ ಕೃನಾಲ್‌ ಪಾಂಡ್ಯ (Krunal Pandya) ಕೈಗೆ ಚೆಂಡು ನೀಡಿದರು. ಕೃನಾಲ್‌ ತಮ್ಮ ಮೊದಲ ಓವರ್‌ನಲ್ಲಿ 3 ರನ್‌ ನೀಡಿ ರನ್‌ಗೆ ಕಡಿವಾಣ ಹಾಕಿದರು. ತಮ್ಮ ಎರಡನೇ ಓವರ್‌ನಲ್ಲಿ ಪ್ರಭುಸಿಮ್ರಾನ್‌ ಸಿಂಗ್‌ ಅವರನ್ನು ಔಟ್‌ ಮಾಡಿದರು. ಈ ಓವರ್‌ನಲ್ಲಿ ಕೇವಲ 4 ರನ್‌ ಮಾತ್ರ ನೀಡಿದರು.

     

     

    ತಮ್ಮ ಮೂರನೇ ಓವರ್‌ನಲ್ಲಿ 11 ರನ್‌ ನೀಡಿದ ಕೃನಾಲ್‌ ತಮ್ಮ ಕೊನೆಯ ಓವರ್‌ನಲ್ಲಿ ಜೋಶ್‌ ಇಂಗ್ಲಿಸ್‌ ಅವರನ್ನು ಔಟ್‌ ಮಾಡಿದರು. ಸಿಕ್ಸ್‌ ಹೊಡೆಯಲು ಹೋದ ಇಂಗ್ಲಿಸ್‌ ಅವರ ಕ್ಯಾಚನ್ನು ಬೌಂಡರಿ ಬಳಿ ಲಿವಿಂಗ್‌ಸ್ಟೋನ್ ಹಿಡಿದರು. ಇಲ್ಲಿಂದ ಪಂದ್ಯದ ದಿಕ್ಕೇ ಬದಲಾಯಿತು.

    4 ಓವರ್‌ನಲ್ಲಿ ರನ್‌ ನಿಯಂತ್ರಣ ಮಾಡಿದ್ದು ಅಲ್ಲದೇ 2 ವಿಕೆಟ್‌ ತೆಗೆಯುವ ಮೂಲಕ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ನಂತರ ಪಂಜಾಬ್‌ ಸತತ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿ ಕೊನೆಗೆ ಸೋಲನ್ನು ಒಪ್ಪಿಕೊಂಡಿತು.

    ಹಾಗೆ ನೋಡಿದ್ರೆ 4 ಓವರ್‌ ಎಸೆದ ಭುವನೇಶ್ವರ್‌ ಕುಮಾರ್‌ 38 ರನ್‌ ನೀಡಿದ್ರೆ ಹೆಜಲ್‌ವುಡ್‌ 54 ರನ್‌ ನೀಡಿ ದುಬಾರಿಯಾಗಿದ್ದರು. ಸುಯಾಶ್‌ ಶರ್ಮಾ 2 ಓವರ್‌ ಎಸೆದಿದ್ದರೂ 19 ರನ್‌ ನೀಡಿದ್ದರು. ರೋಮಾರಿಯೋ ಶೆಪರ್ಡ್‌ 3 ಓವರ್‌ ಎಸೆದು 30 ರನ್‌ ಕೊಟ್ಟಿದ್ದರು. ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕೆ ಅರ್ಹವಾಗಿಯೇ ಕೃನಾಲ್‌ ಪಾಂಡ್ಯ ಅವರು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

  • ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ; 6 ವಿಕೆಟ್‌ಗಳ ಅಮೋಘ ಜಯ – ನಂ.1 ಪಟ್ಟಕ್ಕೇರಿದ ಬೆಂಗಳೂರು

    ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ; 6 ವಿಕೆಟ್‌ಗಳ ಅಮೋಘ ಜಯ – ನಂ.1 ಪಟ್ಟಕ್ಕೇರಿದ ಬೆಂಗಳೂರು

    ನವದೆಹಲಿ: ಕೃನಾಲ್‌ ಪಾಂಡ್ಯ (Krunal Pandya), ವಿರಾಟ್‌ ಕೊಹ್ಲಿ (Virat Kohli) ಶತಕದ ಜೊತೆಯಾಟ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿಯ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.

    ಸೂಪರ್‌ ಸಂಡೇ ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಹೈವೋಲ್ಟೇಜ್‌ ಪಂದ್ಯ ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿತ್ತು. ಏಕೆಂದರೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಗೆದ್ದಾಗ ಕೆ.ಎಲ್‌ ರಾಹುಲ್‌ ಸಂಭ್ರಮಿಸಿದ ರೀತಿ ಇದಕ್ಕೆ ಕಾರಣವಾಗಿತ್ತು. ಅಂದಿನಿಂದಲೇ ಕೊಹ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ ಅನ್ನೋ ಪೋಸ್ಟರ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ಟ್ರೆಂಡಿಂಗ್‌ನಲ್ಲಿತ್ತು. ಇದೀಗ ಆರ್‌ಸಿಬಿ ಗೆಲುವು ಅಭಿಮಾನಿಗಳ ಪಾಲಿಗೆ ಬಹುದೊಡ್ಡ ಗೆಲುವಾಗಿದೆ. ಅಲ್ಲದೇ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದ್ದು, 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ.

    ಗೆಲುವಿಗೆ 163 ರನ್‌ಗಳ ಗುರಿ ಪಡೆದ ಆರ್‌ಸಿಬಿ ಪವರ್‌ ಪ್ಲೇ ನಲ್ಲೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮೊದಲ 4 ಓವರ್‌ಗಳಲ್ಲಿ 26 ರನ್‌ಗಳಿಗೆ ಜಾಕೋಬ್‌ ಬೇಥಲ್‌ (12 ರನ್‌), ರಜತ್‌ ಪಾಟೀದಾರ್‌ (6 ರನ್‌), ದೇವದತ್‌ ಪಡಿಕಲ್‌ (0) ವಿಕೆಟ್‌ ಕಳೆದುಕೊಂಡು ಆರ್‌ಸಿಬಿ ಸಂಕಷ್ಟಕ್ಕೀಡಾಯಿತು. 10 ಓವರ್‌ ಕಳೆದರೂ 100 ರನ್‌ಗಳ ಗಡಿ ದಾಟದ ಆರ್‌ಸಿಬಿ ಪಂದ್ಯ ಗೆಲ್ಲುವುದು ಅನುಮಾನ ಎಂದೇ ಹೇಳಲಾಗುತ್ತಿತ್ತು. ಆದ್ರೆ ವಿರಾಟ್‌ ಕೊಹ್ಲಿ ಹಾಗೂ ಕೃನಾಲ್‌ ಪಾಂಡ್ಯ ಅವರ ಶತಕದ ಜೊತೆಯಾಟ ತಂಡದ ಗೆಲುವಿನ ಹಾದಿಯನ್ನು ಸುಗಮವಾಗಿಸಿತು.

    4ನೇ ವಿಕೆಟಿಗೆ ಕೃನಾಲ್‌ ಪಾಂಡ್ಯ, ವಿರಾಟ್‌ ಕೊಹ್ಲಿ ಜೋಡಿ 84 ಎಸೆತಗಳಲ್ಲಿ 119 ರನ್‌ಗಳ ಜೊತೆಯಾಟ ನೀಡಿತು. ಇದು ತಂಡದ ಗೆಲುವಿಗೆ ಕಾರಣವಾಯಿತು. ಇನ್ನೂ ಕೊನೆಯಲ್ಲಿ ಟಿಮ್‌ ಡೇವಿಡ್‌ ಅವರ ಸಿಕ್ಸರ್‌ ಬೌಂಡರಿ ಆಟದಿಂದ ಆರ್‌ಸಿಬಿಗೆ ಗೆಲುವು ಸುಲಭವಾಯಿತು. ಆರ್‌ಸಿಬಿ ಪರ ಕೃನಾಲ್‌ ಪಾಂಡ್ಯ ಅಜೇಯ 73 ರನ್‌ (47 ಎಸೆತ, 5 ಬೌಂಡರಿ, 4 ಸಿಕ್ಸರ್)‌, ವಿರಾಟ್‌ ಕೊಹ್ಲಿ 51 ರನ್‌ (47 ಎಸೆತ, 4 ಬೌಂಡರಿ) ಗಳಿಸಿದ್ರೆ, ಟಿಮ್‌ ಡೇವಿಡ್‌ 5 ಎಸೆತಗಳಲ್ಲಿ 19 ರನ್‌ ಗಳಿಸಿ ಮಿಂಚಿದರು.

    ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ಉತ್ತಮ ಆರಂಭವನ್ನೇ ಪಡೆಯಿತು. ಅಭಿಷೇಕ್ ಪೊರೇಲ್ 28 ಮತ್ತು ಫಫ್ ಡುಪ್ಲೆಸಿ 22 ರನ್ ಸಿಡಿಸಿದರು. ಕರುಣ್ ನಾಯರ್ 4 ರನ್‌ಗೆ ಪೆವಿಲಿಯನ್ ಸೇರಿಕೊಂಡರು. ಉತ್ತಮವಾಗಿ ಆಡಿದ ಕೆ.ಎಲ್. ರಾಹುಲ್ 41 (39 ಎಸೆತ) ರನ್‌ಗಳ ಕೊಡುಗೆ ನೀಡಿದರು. ಒಂದು ಹಂತದಲ್ಲಿ 200ರ ಸಮೀಪಕ್ಕೆ ತಲುಪಬಹುದು ಎನ್ನುವಂತಿದ್ದ ರನ್ ಗತಿ ಆರ್‌ಸಿಬಿ ಬೌಲರ್‌ಗಳ ಬಿಗಿ ಹಿಡಿತಕ್ಕೆ ರನ್‌ ಕದಿಯಲು ತಿಣುಕಾಡುತ್ತಾ ಸಾಗಿತು. ಅತ್ತ ರನ್‌ ಬರದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತೊಂದೆಡೆ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಸಾಗಿತು. ಆದ್ರೆ ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟನ್‌ ಸ್ಟಬ್ಸ್‌ 18 ಎಸೆತಗಳಲ್ಲಿ 34 ರನ್ ಗಳಿಸುವ ಮೂಲಕ ಡೆಲ್ಲಿ 163 ರನ್‌ಗಳ ಗುರಿ ನೀಡಲು ನೆರವಾದರು.

    ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ 33 ರನ್ ನೀಡಿ 3 ವಿಕೆಟ್ ಕಿತ್ತರೆ, ಹೇಜಲ್ವುಡ್‌ 36 ರನ್ ನೀಡಿ 2 ವಿಕೆಟ್ ಪಡೆದರು.

    ರಾಹುಲ್‌ vs ಕೊಹ್ಲಿ:
    ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್‌ಸಿಬಿಯನ್ನು ಸೋಲಿಸಿತ್ತು. ಆಗ ಗೆಲುವಿನ ರುವಾರಿಯಾಗಿದ್ದ ಕೆ.ಎಲ್ ರಾಹುಲ್ ಅವರು, ʻಇದು ನನ್ನ ಗ್ರೌಂಡ್‌ʼ ಎಂದು ʻಕಾಂತಾರʼ ಚಲನಚಿತ್ರದ ದೃಶ್ಯದ ಮಾದರಿಯನ್ನು ಅನುಕರಿಸಿದ್ದರು. ಇದೀಗ ಗೆದ್ದು ಆರ್‌ಸಿಬಿ ಸೋಲಿಗೆ ಸೇಡು ತೀರಿಸಿಕೊಂಡಿದೆ.

  • IPL 2025: ಕೊಹ್ಲಿ, ಸಾಲ್ಟ್‌ ಫಿಫ್ಟಿ ಆಟ – 7 ವಿಕೆಟ್‌ ಜಯದೊಂದಿಗೆ ಆರ್‌ಸಿಬಿಗೆ ಶುಭಾರಂಭ; ತವರಲ್ಲಿ ಕೆಕೆಆರ್‌ಗೆ ಮುಖಭಂಗ

    IPL 2025: ಕೊಹ್ಲಿ, ಸಾಲ್ಟ್‌ ಫಿಫ್ಟಿ ಆಟ – 7 ವಿಕೆಟ್‌ ಜಯದೊಂದಿಗೆ ಆರ್‌ಸಿಬಿಗೆ ಶುಭಾರಂಭ; ತವರಲ್ಲಿ ಕೆಕೆಆರ್‌ಗೆ ಮುಖಭಂಗ

    ಕೋಲ್ಕತ್ತಾ: ಫಿಲ್‌ ಸಾಲ್ಟ್‌ (Phil Salt), ವಿರಾಟ್‌ ಕೊಹ್ಲಿ (Virat Kohli) ಆಕರ್ಷಕ ಅರ್ಧಶತಕ ನೆರವಿನಿಂದ ಆರ್‌ಸಿಬಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ 2025ರಲ್ಲಿ (IPL 2025) ಆರ್‌ಸಿಬಿ (RCB) ಶುಭಾರಂಭ ಪಡೆದಿದೆ. ತವರಲ್ಲೇ ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR) ಮುಖಭಂಗ ಅನುಭವಿಸಿದೆ.

    ಟಾಸ್‌ ಗೆದ್ದ ಆರ್‌ಸಿಬಿ ನಾಯಕ ರಜತ್‌ ಪಾಟೀದಾರ್‌ ಫೀಲ್ಡಿಂಗ್‌ ಆಯ್ದುಕೊಂಡರು. ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 8 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿತು. 175 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ 3 ವಿಕೆಟ್‌ ನಷ್ಟಕ್ಕೆ 16.2 ಓವರ್‌ಗಳಿಗೆ 177 ರನ್‌ ಗಳಿಸಿ ಗೆದ್ದು ಬೀಗಿತು.

    ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ಮೊದಲ ಓವರ್‌ನಲ್ಲೇ ಕ್ವಿಂಟನ್‌ ಡಿಕಾಕ್‌ (4) ವಿಕೆಟ್‌ ಕಳೆದುಕೊಂಡು ಆಘಾತ ಎದುರಿಸಿತು. ಈ ವೇಳೆ ಜೊತೆಯಾದ ಸುನಿಲ್ ನರೈನ್ ಮತ್ತು ಅಜಿಂಕ್ಯಾ ರಹಾನೆ ಬಿರುಸಿನ ಆಟದ ಮೂಲಕ ಗಮನ ಸೆಳೆದರು. ಆರ್‌ಸಿಬಿ ಬೌಲರ್‌ಗಳ ಬೆವರಿಳಿಸಿದ ರಹಾನೆ ಕೇವಲ 25 ಬಾಲ್‌ಗಳಿಗೆ ಫಿಫ್ಟಿ ಬಾರಿಸಿ ಅಬ್ಬರಿಸಿದರು.

    ಇತ್ತ ಅಜಿಂಕ್ಯಾ 31 ಎಸೆತಕ್ಕೆ 56 ರನ್‌ (6 ಫೋರ್‌, 4 ಸಿಕ್ಸರ್‌) ಗಳಿಸಿದ್ದರು. ಅತ್ತ ನರೈನ್‌ 26 ಬಾಲ್‌ಗೆ 44 ರನ್‌ (5 ಫೋರ್‌, 3 ಸಿಕ್ಸರ್) ಬಾರಿಸಿದ್ದರು. ರಹಾನೆ ಮತ್ತು ನರೈನ್‌ ಶತಕದ ಜೊತೆಯಾಟ ಆರ್‌ಸಿಬಿಗೆ ನುಂಗಲಾರದ ತುತ್ತಾಗಿತ್ತು.‌‌ ಈ ವೇಳೆ ರಶಿಕ್‌ ಸಲಾಮ್‌ ಬೌಲಿಂಗ್‌ನಲ್ಲಿ ನರೈನ್‌ ಕ್ಯಾಚ್‌ ನೀಡಿ ನಿರ್ಗಮಿಸಿದರು. ಸ್ಪಿನ್‌ ಜಾದು ಮಾಡಿದ ಕೃಣಾಲ್‌ ಪಾಂಡ್ಯ, ಕೆಕೆಆರ್‌ ಓಟಕ್ಕೆ ಬ್ರೇಕ್‌ ಹಾಕಿದರು. ಪ್ರಮುಖ ಬ್ಯಾಟರ್‌ಗಳಾದ ವೆಂಕಟೇಶ್‌ ಅಯ್ಯರ್‌ (6), ರಿಂಕು ಸಿಂಗ್‌ (12) ಇಬ್ಬರನ್ನೂ ಹೊರಹಾಕುವಲ್ಲಿ ಯಶಸ್ವಿಯಾದರು.

    ಅಂಗ್‌ಕ್ರಿಶ್ ರಘುವಂಶಿ (30) ರನ್‌ ಗಳಿಸಿ ಕೆಕೆಆರ್‌ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು. ಕೊನೆಗೆ ಆರ್‌ಸಿಬಿ ಬೌಲರ್‌ಗಳ ಪರಾಕ್ರಮ ಮುಂದುವರಿದು 174 ರನ್‌ಗಳಿಗೆ ಕೆಕೆಆರ್‌ ಅನ್ನು ಕಟ್ಟಿಹಾಕಿದರು.

    ಆರ್‌ಸಿಬಿ ಪರ ಕೃಣಾಲ್‌ ಪಾಂಡ್ಯ ಉತ್ತಮ ಬೌಲಿಂಗ್‌ ಪ್ರದರ್ಶನ ತೋರಿ 3 ವಿಕೆಟ್‌ ಕಿತ್ತು. ಜೋಶ್‌ ಹ್ಯಾಜಲ್‌ವುಡ್‌ ಕೂಡ ಕಡಿಮೆ ರನ್‌ ಕೊಟ್ಟು 2 ವಿಕೆಟ್‌ ಕಬಳಿಸಿ ಗಮನ ಸೆಳೆದರು. ಇನ್ನು ಯಶ್‌ ದಯಾಳ್‌, ರಶಿಕ್‌ ಸಲಾಮ್, ಸುಯೇಶ್‌ ಶರ್ಮಾ ತಲಾ 1 ವಿಕೆಟ್‌ ಕಿತ್ತರು.

    175 ರನ್‌ ಗುರಿ ಬೆನ್ನತ್ತಿದ ಆರ್‌ಸಿಬಿ ಆರಂಭದಲ್ಲೇ ಅಬ್ಬರಿಸಿತು. ಓಪನರ್‌ಗಳಾಗಿ ಕಣಕ್ಕಿಳಿದ ಫಿಲ್‌ ಸಾಲ್ಟ್‌ ಮತ್ತು ವಿರಾಟ್‌ ಕೊಹ್ಲಿ ಜೊತೆಯಾಟ ತಂಡದ ಭದ್ರಬುನಾದಿ ಹಾಕಿಕೊಟ್ಟಿತು. ಇಬ್ಬರು ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಸಾಲ್ಟ್‌ 31 ಬಾಲ್‌ಗೆ 56 ರನ್‌ (9 ಫೋರ್‌, 2 ಸಿಕ್ಸರ್‌) ಹಾಗೂ ಕೊಹ್ಲಿ 36 ಬಾಲ್‌ಗೆ 56 ರನ್‌ (4 ಫೋರ್‌, 3 ಸಿಕ್ಸರ್‌) ಬಾರಿಸಿದರು.

    ಹೊಸ ನಾಯಕನಾಗಿ ಬಂದ ರಜತ್‌ ಪಾಟೀದಾರ್‌ ಕೂಡ ಜವಾಬ್ದಾರಿಯುತ (34 ರನ್‌, 16 ಬಾಲ್‌, 5 ಫೋರ್‌, 1 ಸಿಕ್ಸರ್‌) ಆಟ ಆಡಿದರು. ದೇವದತ್‌ ಪಡಿಕಲ್‌ (10), ಲಿಯಾಮ್‌ ಲಿವಿಂಗ್‌ಸ್ಟೋನ್‌ 15 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

  • ಗಂಡು ಮಗುವಿಗೆ ಜನ್ಮ ನೀಡಿದ ಕೃನಾಲ್‌ ಪಾಂಡ್ಯ ಪತ್ನಿ

    ಗಂಡು ಮಗುವಿಗೆ ಜನ್ಮ ನೀಡಿದ ಕೃನಾಲ್‌ ಪಾಂಡ್ಯ ಪತ್ನಿ

    ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೃನಾಲ್‌ ಪಾಂಡ್ಯ (Krunal Pandya) ಅವರ ಪತ್ನಿ ಪಂಖುರಿ ಶರ್ಮಾ ಅವರಿಂದು ತಮ್ಮ 2ನೇ ಮಗುವಿಗೆ ಜನ್ಮನೀಡಿದ್ದಾರೆ. ಶುಭ ಶುಕ್ರವಾರವೇ ಗಂಡು ಮಗುವಿನ ಜನನವಾಗಿದ್ದು ದಂಪತಿಗಳಿಬ್ಬರು ಸಂಭ್ರಮದಲ್ಲಿದ್ದಾರೆ.

    ತಮ್ಮ ಪತ್ನಿ ಹಾಗೂ ಮಗುವಿನೊಂದಿಗೆ ತೆಗೆಸಿರುವ ಫೋಟೋವನ್ನು ಕೃನಾಲ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಗುವಿನ ಹೆಸರು ವಾಯು ಎಂದು ಸಹ ಪಾಂಡ್ಯ ಹೇಳಿಕೊಂಡಿದ್ದಾರೆ. ಈ ಫೋಟೋ ಕಂಡು ಪಾಂಡ್ಯ ಅಭಿಮಾನಿಗಳೂ ಶುಭ ಹಾರೈಸಿದ್ದಾರೆ. 2022ರ ಜುಲೈನಲ್ಲಿ ಕೃನಾಲ್‌ ಮತ್ತು ಪಂಖುರಿ (Pankuri Sharma) ದಂಪತಿ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಮೊದಲ ಮಗುವಿನ ಹೆಸರು ಕವಿರ್‌. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಮತ ಚಲಾಯಿಸಿದ ಟೀಂ ಇಂಡಿಯಾ ಮುಖ್ಯಕೋಚ್‌ – ಮತದಾನಕ್ಕೆ ಕರೆ ಕೊಟ್ಟ ಮಾಜಿ ಕ್ರಿಕೆಟರ್ಸ್‌!

    2017ರಲ್ಲಿ ಕೃನಾಲ್‌ ಪಾಂಡ್ಯ ಅವರು ತಮ್ಮ ಬಹುಕಾಲದ ಗೆಳತಿ ಪಂಖುರಿ ಶರ್ಮಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ವೃತ್ತಿಯಲ್ಲಿ ಮಾಡೆಲ್‌ ಆಗಿದ್ದ ಪಂಖುರಿ, ತನಗೆ ಆಧಾರ ಸ್ತಂಭವಾಗಿ ನಿಂತಿದ್ದಾರೆ ಎಂದು ಕೃನಾಲ್‌ ಆಗಾಗ್ಗೆ ಹೇಳಿಕೊಂಡಿದ್ದಾರೆ.

    ಸದ್ಯ ಐಪಿಎಲ್‌ ಕಣದಲ್ಲಿರುವ ಕೃನಾಲ್‌ ಪಾಂಡ್ಯ ಅವರು ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಪರವಾಗಿ ಆಡುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು ನಗರ ಜಿಲ್ಲೆಯ 3 ಕ್ಷೇತ್ರಗಳ ಮತ ಎಣಿಕೆ ಮತ್ತು ಸ್ಟ್ರಾಂಗ್ ರೂಂ ಕೇಂದ್ರಗಳ ವಿವರ ಹೀಗಿದೆ..

  • 4.3 ಕೋಟಿ ರೂ. ವಂಚನೆ – ಹಾರ್ದಿಕ್‌ ಪಾಂಡ್ಯ ಮಲಸಹೋದರ ಅರೆಸ್ಟ್‌!

    4.3 ಕೋಟಿ ರೂ. ವಂಚನೆ – ಹಾರ್ದಿಕ್‌ ಪಾಂಡ್ಯ ಮಲಸಹೋದರ ಅರೆಸ್ಟ್‌!

    ಮುಂಬೈ: ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಕೃನಾಲ್‌ ಪಾಂಡ್ಯ ಅವರ ಮಲಸಹೋದರ ವೈಭವ್‌ ಪಾಂಡ್ಯ ಅವರನ್ನ ಮುಂಬೈ ಪೊಲೀಸರು (Mumbai Police) ಬಂಧಿಸಿರುವ ಘಟನೆ ನಡೆದಿದೆ. 4.3 ಕೋಟಿ ರೂ. ವಂಚಿಸಿರುವುದಾಗಿ (Cheating Case) ಹಾರ್ದಿಕ್‌ ಪಾಂಡ್ಯ ನೀಡಿದ ದೂರಿನ ಮೇರೆಗೆ ಅವರನ್ನ ಬಂಧಿಸಲಾಗಿದೆ.

    ಹಾರ್ದಿಕ್‌ ಪಾಂಡ್ಯ, ಕೃನಾಲ್‌ ಪಾಂಡ್ಯ ಹಾಗೂ ವೈಭವ್‌ ಪಾಂಡ್ಯ (Vaibhav Pandya) ಮೂವರು ಸೇರಿ ನಡೆಸುತ್ತಿದ್ದ ಪಾಲುದಾರಿಕೆ ಸಂಸ್ಥೆಯಿಂದ ಪಾಂಡ್ಯ ಬ್ರದರ್ಸ್‌ಗೆ ವೈಭವ್‌ ನಷ್ಟವುಂಟು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಿಂಚಿ ಮಾಯವಾದ ಮಯಾಂಕ್‌ – ಗಾಯದ ಸಮಸ್ಯೆ ಕುರಿತು ಬಿಗ್‌ ಅಪ್ಡೇಟ್‌ ಕೊಟ್ಟ ಕೃನಾಲ್‌ ಪಾಂಡ್ಯ!

    ಹಾರ್ದಿಕ್‌, ಕೃನಾಲ್‌ (Krunal Pandya) ಮತ್ತು ವೈಭವ್‌ 2021ರಲ್ಲಿ ವ್ಯವಹಾರವೊಂದನ್ನ ಆರಂಭಿಸಿದ್ದರು. ಪಾಲುದಾರಿಕೆ ಸಂಸ್ಥೆ ಒಪ್ಪಂದದ ಪ್ರಕಾರ, ಬಂದ ಲಾಭದಿಂದ ಪಾಂಡ್ಯ ಬ್ರದರ್ಸ್‌ಗೆ ತಲಾ 40%, ವೈಭವ್‌ಗೆ 20% ಹಂಚಿಕೊಳ್ಳಬೇಕಿತ್ತು. ಆದ್ರೆ ವೈಭವ್‌ ಪ್ರತ್ಯೇಕ ಕಂಪನಿಯೊಂದನ್ನ ಸ್ಥಾಪಿಸಿ, ಪಾಂಡ್ಯ ಬ್ರದರ್ಸ್‌ ಸ್ಥಾಪಿಸಿದ್ದ ಸಂಸ್ಥೆ ಹಣವನ್ನ ಅದಕ್ಕೆ ಬಳಸಿಕೊಳ್ಳುತ್ತಿದ್ದರು. ಈ ಕುರಿತು ಹಾರ್ದಿಕ್‌ ಪಾಂಡ್ಯ ಅವರು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗಕ್ಕೆ (EOW) ದೂರು ನೀಡಿದ ಬಳಿಕ, ಪ್ರಕರಣ ದಾಖಲಿಸಿಕೊಂಡು ವೈಭವ್‌ ಪಾಂಡ್ಯ ಅವರನ್ನ ಬಂಧಿಸಲಾಗಿದೆ.

    ಸದ್ಯ 2024 ಐಪಿಎಲ್‌ ಋತುವಿನ ಆರಂಭದಿಂದಲೂ ಸುದ್ದಿಯಲ್ಲಿದ್ದಾರೆ. 2022ರಲ್ಲಿ ಪದಾದರ್ಪಣೆ ಮಾಡಿದ ಗುಜರಾತ್‌ ಟೈಟಾನ್ಸ್‌ ತಂಡವನ್ನ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್‌ ಪಟ್ಟಕ್ಕೇರಿಸಿದ್ದ ಪಾಂಡ್ಯ 2024ರ ಆವೃತ್ತಿಯಲ್ಲಿ ಮತ್ತೆ ತವರು ಮುಂಬೈ ತಂಡಕ್ಕೆ ನಾಯಕನಾಗಿ ಮರಳಿದರು. ಆದ್ರೆ ರೋಹಿತ್‌ ಶರ್ಮಾ ಅವರನ್ನು ಮುಂಬೈ ತಂಡದ ನಾಯಕತ್ವದಿಂದ ಕೆಳಗಿಳಿಸಿದ ನಂತರ ಅವರ ಅಭಿಮಾನಿಗಳು ನಿರಾಸೆಯಾಗಿದ್ದಾರೆ. ಮೈದಾನದಲ್ಲೇ ಹಾರ್ದಿಕ್‌ ಪಾಂಡ್ಯ ಅವರ ಕಾಲೆಳೆಯುವ ಪ್ರಯತ್ನಗಳು ನಡೆಯುತ್ತಿವೆ. ಇದನ್ನೂ ಓದಿ: ಫಿಫ್ಟಿ ಬಳಿಕ ಕೊಹ್ಲಿ ಸ್ಟ್ರೈಕ್‌ರೇಟ್‌ ಹೆಚ್ಚಾಗ್ಬೇಕಿತ್ತು – ಮ್ಯಾಕ್ಸಿ ತರ ಆದ್ರೆ ಏನ್‌ ಮಾಡೋಕಾಗುತ್ತೆ: ಸೆಹ್ವಾಗ್‌

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಂಡ್ಯ, ತಂಡದಲ್ಲಿ ನಮ್ಮ ಯೋಜನೆಗಳು ಸರಿಯಾಗಿವೆ, ಉದ್ದೇಶವೂ ಸರಿಯಾಗಿದೆ. ಎಲ್ಲವೂ ಕ್ಲಿಕ್ ಆಗುವ ದಿನಗಳು ಹತ್ತಿರ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸತತ ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆಲುವಿನ ಖಾತೆ ತೆರೆಯಿತು. ಏಪ್ರಿಲ್‌ 11ರಂದು ಆರ್‌ಸಿಬಿ ವಿರುದ್ಧ ತವರು ಕ್ರೀಡಾಂಗಣ ವಾಂಖೆಡೆಯಲ್ಲಿ ಸೆಣಸಲಿದೆ.

  • ಮಿಂಚಿ ಮಾಯವಾದ ಮಯಾಂಕ್‌ – ಗಾಯದ ಸಮಸ್ಯೆ ಕುರಿತು ಬಿಗ್‌ ಅಪ್ಡೇಟ್‌ ಕೊಟ್ಟ ಕೃನಾಲ್‌ ಪಾಂಡ್ಯ!

    ಮಿಂಚಿ ಮಾಯವಾದ ಮಯಾಂಕ್‌ – ಗಾಯದ ಸಮಸ್ಯೆ ಕುರಿತು ಬಿಗ್‌ ಅಪ್ಡೇಟ್‌ ಕೊಟ್ಟ ಕೃನಾಲ್‌ ಪಾಂಡ್ಯ!

    – ಮತ್ತೆ ಕಣಕ್ಕಿಳಿಯುತ್ತಾರಾ ತಾರಾ ವೇಗಿ?

    ಲಕ್ನೋ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ತಮ್ಮ ವೇಗದ ಬೌಲಿಂಗ್‌ನಿಂದಲೇ ಭಾರೀ ಸದ್ದು ಮಾಡುತ್ತಿದ್ದ ಲಕ್ನೂ ಸೂಪರ್‌ ಜೈಂಟ್ಸ್‌ (LSG) ತಂಡದ ಮಯಾಂಕ್‌ ಯಾದವ್‌ (Mayank Yadav) ಪಕ್ಕೆಲುಬು ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

    ಸೂಪರ್‌ ಸಂಡೇ (ಏ.7) ಲಕ್ನೋ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧದ ಪಂದ್ಯದಲ್ಲಿ ಕೇವಲ ಒಂದು ಓವರ್‌ ಬೌಲಿಂಗ್‌ ಮಾಡಿದ ಮಯಾಂಕ್‌, ಯಾವುದೇ ವಿಕೆಟ್‌ ಪಡೆಯದೇ 13 ರನ್‌ ಬಿಟ್ಟುಕೊಟ್ಟರು. ಈ ಓವರ್‌ನ ಮೊದಲ ಎರಡು ಎಸೆತಗಳು ಗಂಟೆಗೆ 140 ಕಿಮೀ ವೇಗದಲ್ಲಿತ್ತು. ಒಂದು ಓವರ್‌ ಬೌಲಿಂಗ್‌ ಬಳಿಕ ತಕ್ಷಣವೇ ಪಕ್ಕೆಲುಬು ಸಮಸ್ಯೆಗೆ ತುತ್ತಾಗಿ ಮೈದಾನ ತೊರೆದರು. ಇದರ ಹೊರತಾಗಿಯೂ ಯಶ್‌ ಠಾಕೂರ್‌‌ ಅವರ ಮಾರಕ ದಾಳಿ, ಕೃನಾಲ್‌ ಪಾಂಡ್ಯ ಅವರ ಸ್ಪಿನ್‌ ಮೋಡಿಯಿಂದ ಕೆ.ಎಲ್‌ ರಾಹುಲ್‌ (KL Rahul) ಬಳಗ 33 ರನ್‌ಗಳ ಗೆಲುವು ಸಾಧಿಸಿತು. ಇದನ್ನೂ ಓದಿ: ಶ್ರೀಕೃಷ್ಣನ ಮೇಲಿನ ನಂಬಿಕೆಯಿಂದ ಮಾಂಸಾಹಾರ ತ್ಯಜಿಸಿದ್ರಾ ವೇಗಿ? – ಮಯಾಂಕ್‌ ತಾಯಿ ಹೇಳಿದ್ದೇನು?

    ಬಿಗ್‌ ಅಪ್ಡೇಟ್‌ ಕೊಟ್ಟ ಕೃನಾಲ್‌ ಪಾಂಡ್ಯ:
    ಮಯಾಂಕ್‌ ಯಾದವ್‌ ಅವರ ಗಾಯದ ಸಮಸ್ಯೆ ಕುರಿತು ಮಾತನಾಡಿದ ಕೃನಾಲ್‌ ಪಾಂಡ್ಯ (Krunal Pandya), ಇದು ಗಂಭೀರವಾದ ಗಾಯವಲ್ಲ. ಆದ್ದರಿಂದ ಮಯಾಂಕ್‌ ಮುಂದಿನ ಪಂದ್ಯಗಳಲ್ಲಿ ಕ್ರಮವಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಮಯಾಂಕ್‌ಗೆ ಏನಾಗಿದೆ ಎಂಬುದು ನಿಖರವಾಗಿ ನನಗೂ ತಿಳಿದಿಲ್ಲ. ಆದ್ರೆ ಪಂದ್ಯ ಆರಂಭಕ್ಕೂ ಮುನ್ನ ನೆಟ್ಸ್‌ನಲ್ಲಿ ಚೆನ್ನಾಗಿ ಬೌಲಿಂಗ್‌ ಅಭ್ಯಾಸ ಮಾಡುತ್ತಿದ್ದರು. ನನ್ನೊಂದಿಗೂ ಸಕಾರಾತ್ಮಕವಾಗಿ ಸಂಭಾಷಣೆ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.

    ಐಪಿಎಲ್‌ನಲ್ಲಿ ಐತಿಹಾಸಿಕ ದಾಖಲೆ:
    21 ವರ್ಷ ವಯಸ್ಸಿನ ಮಯಾಂಕ್‌ ಯಾದವ್‌ ಇತ್ತೀಚೆಗಷ್ಟೇ ಗಂಟೆಗೆ 156.7 ಕಿಮೀ ವೇಗದಲ್ಲಿ ಬೌಲಿಂಗ್‌ ಮಾಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. 150 ಕಿಮೀಗಿಂತಲೂ ಅಧಿಕ ವೇಗದಲ್ಲಿ ಬೌಲಿಂಗ್‌ ಮಾಡಿದ 4ನೇ ಬೌಲರ್‌ ಅಂತಲೂ ಕರೆಸಿಕೊಂಡಿದ್ದಾರೆ. ಇದನ್ನೂ ಓದಿ: ಮಯಾಂಕ್‌ ವೇಗಕ್ಕೆ ಐಪಿಎಲ್‌ನಲ್ಲಿ ದಾಖಲೆಗಳು ಪುಡಿ ಪುಡಿ!

    ಐಪಿಎಲ್‌ನಲ್ಲಿ ವೇಗದ ಬೌಲಿಂಗ್‌ ಮಾಡಿದ ಟಾಪ್‌-5 ಆಟಗಾರರು:
    * ಶಾನ್‌ ಟೈಟ್‌ – 2011ರಲ್ಲಿ – 157.7 ಕಿಮೀ
    * ಲಾಕಿ ಫರ್ಗೂಸನ್‌ – 2022ರಲ್ಲಿ – 157.3 ಕಿಮೀ
    * ಉಮ್ರಾನ್‌ ಮಲಿಕ್‌ – 2022ರಲ್ಲಿ – 157.0 ಕಿಮೀ
    * ಮಯಾಂಕ್‌ ಯಾದವ್‌ – 2024ರಲ್ಲಿ – 156.7 ಕಿಮೀ
    * ಅನ್‌ರಿಚ್‌ ನಾರ್ಟೆ – 2020ರಲ್ಲಿ – 156.2 ಕಿಮೀ

  • IPL 2023 Eliminator: 5 ರನ್‌ಗೆ 5 ವಿಕೆಟ್‌ ಉಡೀಸ್‌ – ಲಕ್ನೋ ಮನೆಗೆ, ಮುಂಬೈಗೆ 81ರನ್‌ಗಳ ಭರ್ಜರಿ ಜಯ

    IPL 2023 Eliminator: 5 ರನ್‌ಗೆ 5 ವಿಕೆಟ್‌ ಉಡೀಸ್‌ – ಲಕ್ನೋ ಮನೆಗೆ, ಮುಂಬೈಗೆ 81ರನ್‌ಗಳ ಭರ್ಜರಿ ಜಯ

    ಚೆನ್ನೈ: ಆಕಾಶ್‌ ಮಧ್ವಾಲ್‌ ಮಾರಕ ಬೌಲಿಂಗ್‌ ದಾಳಿ ಹಾಗೂ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದಿಂದ ಮುಂಬೈ ಇಂಡಿಯನ್ಸ್‌ ತಂಡವು, ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ‌ 81 ರನ್‌ಗಳ ಭರ್ಜರಿ ಜಯ ಸಾಧಿಸಿದ್ದು, ಎಲಿಮಿನೇಟರ್‌ 2ನೇ ಹಂತಕ್ಕೆ ತಲುಪಿದೆ. ಮೇ 26 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 2ನೇ ಎಲಿಮಿನೇಟರ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೆಣಸಲಿದೆ. ಇನ್ನೂ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಲಕ್ನೋ ಸೂಪರ್‌ ಜೈಂಟ್ಸ್‌ ಸೋತು ನಿರಾಸೆ ಅನುಭವಿಸಿದೆ.

    ಕಳೆದ ವರ್ಷವಷ್ಟೇ ಐಪಿಎಲ್‌ ಪ್ರವೇಶಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ 2ನೇ ಬಾರಿಯೂ ಮೊದಲ ಎಲಿಮಿನೇಟರ್‌ ಪಂದ್ಯದಲ್ಲೇ ಸೋತು ಹೊರನಡೆದಿದೆ. 2022ರ ಆವೃತ್ತಿಯಲ್ಲಿ ಆರ್‌ಸಿಬಿ ವಿರುದ್ಧ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಸೋತಿತ್ತು.

    ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ 8 ವಿಕೆಟ್‌ ನಷ್ಟಕ್ಕೆ 182 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ 16.3 ಓವರ್‌ಗಳಲ್ಲೇ 101 ರನ್‌ಗಳಿಗೆ ಸರ್ವಪತನಕಂಡಿತು.

    ಚೇಸಿಂಗ್‌ ಆರಂಭಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದಲ್ಲಿ ಮುಂಬೈ ಬೌಲರ್‌ಗಳ ದಾಳಿಗೆ ತರಗೆಲೆಗಳಂತೆ ವಿಕೆಟ್‌ ಉದುರಿತು. ಪವರ್‌ ಪ್ಲೇ ನಲ್ಲಿ ವಿಕೆಟ್‌ ಕಳೆದುಕೊಂಡ ಹೊರತಾಗಿಯೂ ಉತ್ತಮ ರನ್‌ ಕಲೆಹಾಕಿತ್ತು. ಬಳಿಕ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳ ಕಳಪೆ ಪ್ರದರ್ಶನದಿಂದ ಮುಂಬೈ ಎದುರು ಮಂಡಿಯೂರಬೇಕಾಯಿತು.

    ಲಕ್ನೋ ತಂಡದ ಪರ ಮಾರ್ಕಸ್‌ ಸಗ್ಟೋಯ್ನಿಸ್‌ 40 ರನ್‌ (27 ಎಸೆತ, 5 ಬೌಂಡರಿ, 1 ಸಿಕ್ಸರ್‌), ಕೈಲ್‌ ಮೇಯರ್ಸ್‌ 18 ರನ್‌, ದೀಪಕ್‌ ಹೂಡಾ 15 ರನ್‌ ಗಲಿಸಿದ್ದು ಬಿಟ್ಟರೆ ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ದೃಢವಾಗಿ ನಿಲ್ಲದ ಕಾರಣ ಲಕ್ನೋ ಹೀನಾಯ ಸೋಲನುಭವಿಸಿತು.

    ಅನಿಲ್‌ ಕುಂಬ್ಳೆ ದಾಖಲೆ ಸರಿಗಟ್ಟಿದ ಮಧ್ವಾಲ್‌:
    ಮುಂಬೈ ಇಂಡಿಯನ್ಸ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಆಕಾಶ್‌ ಮಧ್ವಾಲ್‌ 3.3 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಉಡೀಸ್‌ ಮಾಡಿದರು. ಈ ಮೂಲಕ ಅನಿಲ್‌ ಕುಂಬ್ಳೆ ದಾಖಲೆ ಸರಿಗಟ್ಟಿದರು. ಕೇಪ್‌ಟೌನ್‌ನಲ್ಲಿ ನಡೆದ 2009ರ ಐಪಿಎಲ್‌ ಆವೃತ್ತಿಯಲ್ಲಿ ಕುಂಬ್ಳೆ 3.1 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಪಡೆದಿದ್ದರು. ಇದೀಗ ಆಕಾಶ್‌ ಮಧ್ವಾಲ್‌ 3.3 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಪಡೆದಿದ್ದಾರೆ. ಚಿರ್ಸ್‌ ಜೋರ್ಡನ್‌ ಹಾಗೂ ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರು ಹೆಚ್ಚಿನ ರನ್‌ ಕಲೆಹಾಕುವಲ್ಲಿ ವಿಫಲವಾದರೂ 3ನೇ ವಿಕೆಟ್‌ಗೆ ಕ್ಯಾಮರೂನ್‌ ಗ್ರೀನ್‌ ಹಾಗೂ ಸೂರ್ಯಕುಮಾರ್‌ ಜೋಡಿ 38 ಎಸೆತಗಳಲ್ಲಿ 66 ರನ್‌ ಬಾರಿಸಿತ್ತು. ಇವರಿಬ್ಬರ ಆಟದಿಂದ ಮುಂಬೈ ಮೊದಲ 10 ಓವರ್‌ಗಳಲ್ಲಿ 98 ರನ್‌ ಗಳಿಸಿತ್ತು. ಬಳಿಕ ಸೂರ್ಯ ಹಾಗೂ ಗ್ರೀನ್‌ ಔಟಾಗುತ್ತಿದ್ದಂತೆ ರನ್‌ ವೇಗ ಕಳೆದುಕೊಂಡ ಮುಂಬೈ ತಂಡ ಮುಂದಿನ 10 ಓವರ್‌ಗಳಲ್ಲಿ ಕೇವಲ 84 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.

    ಮುಂಬೈ ಪರ ಕ್ಯಾಮರೂನ್‌ ಗ್ರೀನ್‌ 41 ರನ್‌ (23 ಎಸತೆ, 6 ಬೌಂಡರಿ, 1 ಸಿಕ್ಸರ್), ಸೂರ್ಯಕುಮಾರ್‌ ಯಾದವ್‌ 33 ರನ್‌ (20 ಎಸೆತ, 2 ಬೌಂಡರಿ, 2 ಸಿಕ್ಸ್‌ರ್‌), ತಿಲಕ್‌ ವರ್ಮಾ 26 ರನ್‌, ನೇಹಾಲ್‌ ವಧೇರಾ 23 ರನ್‌, ರೋಹಿತ್‌ ಶರ್ಮಾ 11 ರನ್‌, ಇಶಾನ್‌ ಕಿಶನ್‌ 15 ರನ್‌ ಗಳಿಸಿದರು.

  • ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    ಲಕ್ನೋ: ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್‌ ಸಿಕ್ಸರ್‌, ಬೌಂಡರಿ ಆಟದ ಹೊರತಾಗಿಯೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಕೆಕೆಆರ್‌ ವಿರುದ್ಧ 1 ರನ್‌ ರೋಚಕ ಜಯ ಸಾಧಿಸಿದೆ. ಈ ಮೂಲಕ ಲಕ್ನೋ ತಂಡ ಪ್ಲೆ ಆಫ್‌ಗೆ ಹಾರಿದೆ. ಕೆಕೆಆರ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ.

    14ರ ಪೈಕಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು +0284 ರನ್‌ ರೇಟ್‌ನೊಂದಿಗೆ 17 ಅಂಕ ಪಡೆದು 3ನೇ ಸ್ಥಾನ ಪಡೆದುಕೊಂಡಿದೆ.

    ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೆಕೆಆರ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 175 ರನ್‌ ಗಳಿಸಿ 1 ರನ್‌ ನಿಂದ ವಿರೋಚಿತ ಸೋಲನುಭವಿಸಿತು.

    ಚೇಸಿಂಗ್‌ ಆರಂಭಿಸಿದ ಕೆಕೆಆರ್‌ ಉತ್ತಮ ಆರಂಭ ಪಡೆದರೂ ಬಳಿಕ ಕೆಕೆಆರ್‌ ಬೌಲಿಂಗ್‌ ದಾಳಿಗೆ ತತ್ತರಿಸಿತು. ಮೊದಲ ವಿಕೆಟ್‌ ಪತನಕ್ಕೆ ಜೇಸನ್‌ ರಾಯ್‌, ವೆಂಕಟೇಶ್‌ ಅಯ್ಯರ್‌ ಜೋಡಿ 5.5 ಓವರ್‌ಗಳಲ್ಲಿ 61 ರನ್‌ ಕಲೆಹಾಕಿತ್ತು. ಅಯ್ಯರ್‌ 24 ರನ್‌, ಜೇಸನ್‌ ರಾಯ್‌ 28 ಎಸೆತಗಳಲ್ಲಿ 45 ರನ್‌ ಗಳಿಸಿದರು. ಬಳಿಕ ನಿತೀಶ್‌ ರಾಣಾ, ರಹ್ಮದ್ದುಲ್ಲಾ ಗುರ್ಭಜ್‌ 10 ರನ್‌, ರಸ್ಸೆಲ್‌ 7 ರನ್‌ ಗಳಿಸಿ ಕೈಚೆಲ್ಲಿದರು. ಕೊನೆಯಲ್ಲಿ ರಿಂಕು ಸಿಂಗ್‌ ಹೋರಾಟ ಅರ್ಧ ಶತಕದ ಹೋರಾಟ ನಡೆಸಿದರೂ ತಂಡ ವಿರೋಚಿತ ಸೋಲಿಗೆ ಗುರಿಯಾಯಿತು. ರಿಂಕು ಸಿಂಗ್‌ 33 ಎಸೆತಗಳಲ್ಲಿ ಭರ್ಜರಿ 67 ರನ್‌ (6 ಬೌಂಡರಿ, 4 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟ ಎದುರಿಸಿತ್ತು. ಕ್ವಿಂಟನ್‌ ಡಿ ಕಾಕ್‌ 28 ರನ್‌ (27 ಎಸೆತ, 2 ಸಿಕ್ಸರ್‌), ಪ್ರೇರಕ್‌ ಮಂಕದ್‌ 26 ರನ್‌ (20 ಎಸೆತ, 5 ಬೌಂಡರಿ) ಗಳಿದರೂ, ನಿಧಾನಗತಿಯ ಬ್ಯಾಟಿಂಗ್‌ನಿಂದ ತಂಡ ಕಡಿಮೆ ರನ್‌ ದಾಖಲಿಸಿತ್ತು. ಮೊದಲ 10 ಓವರ್‌ಗಳಲ್ಲಿ 73 ರನ್‌ ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡಿತ್ತು. ನಂತರ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ನಿಕೋಲಸ್‌ ಪೂರನ್‌ ಭರ್ಜರಿ ಅರ್ಧಶತಕದ ಬ್ಯಾಟಿಂಗ್‌ನಿಂದ ತಂಡ 170ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಲಕ್ನೋ ತಂಡದ ಪರ ಡಿಕಾಕ್‌ 28 ರನ್‌, ಮಂಕದ್‌ 26 ರನ್‌, ಆಯುಷ್‌ ಬದೋನಿ 25 ರನ್‌ ಗಳಿಸಿದರೆ ನಿಕೋಲಸ್‌ ಪೂರನ್‌ 58 ರನ್‌ (30 ಎಸೆತ, 5 ಸಿಕ್ಸರ್‌, 4 ಬೌಂಡರಿ) ಚಚ್ಚಿದರು.

    ಕೆಕೆಆರ್‌ ವೈಭವ್‌ ಅರೋರಾ, ಶಾರ್ದೂಲ್‌ ಠಾಕೂರ್‌, ಸುನೀಲ್‌ ನರೇನ್‌ ತಲಾ 2 ವಿಕೆಟ್‌ ಕಿತ್ತರೆ, ಪರ ಹರ್ಷಿತ್‌ ರಾಣಾ ಹಾಗೂ ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಲಕ್ನೋ ಸೂಪರ್‌ ಜೈಂಟ್ಸ್‌ಗೆ 5 ರನ್‌ ರೋಚಕ ಜಯ – RCBಗೆ ಮತ್ತೆ ಕಂಟಕವಾದ ಲಕ್ನೋ

    ಲಕ್ನೋ ಸೂಪರ್‌ ಜೈಂಟ್ಸ್‌ಗೆ 5 ರನ್‌ ರೋಚಕ ಜಯ – RCBಗೆ ಮತ್ತೆ ಕಂಟಕವಾದ ಲಕ್ನೋ

    ಲಕ್ನೋ: ಮಾರ್ಕಸ್‌ ಸ್ಟೋಯ್ನಿಸ್‌ (Marcus Stoinis) ಸಿಕ್ಸರ್‌, ಬೌಂಡರಿ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants), ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿ, ಪ್ಲೆ ಆಫ್‌ ಹಾದಿಯನ್ನ ಸುಗಮವಾಗಿಸಿಕೊಂಡಿದೆ. ಆದರೆ ಪ್ಲೆ ಆಫ್‌ ಪ್ರವೇಶಿಸುವ ಕನಸು ಕಂಡಿದ್ದ ಆರ್‌ಸಿಬಿಗೆ ಮತ್ತೆ ಸಂಕಷ್ಟ ತಂದೊಡ್ಡಿದೆ.

    ಕೊನೆಯ 2‌ ಓವರ್‌ಗಳಲ್ಲಿ ಮುಂಬೈ ಗೆಲುವಿಗೆ 30 ರನ್‌ಗಳ ಅಗತ್ಯವಿದ್ದಾಗ 19ನೇ ಓವರ್‌ನಲ್ಲೇ 19ರನ್‌ ದಾಖಲಾಯಿತು. ಕೊನೆಯ ಓವರ್‌ನಲ್ಲಿ 11 ರನ್‌ಗಳು ಬೇಕಿದ್ದಾಗ ಟಿಮ್‌ ಡೇವಿಡ್‌ ಹಾಗೂ ಕ್ಯಾಮರೂನ್‌ ಗ್ರೀನ್‌ ಕಳಪೆ ಪ್ರದರ್ಶನದಿಂದಾಗಿ 5 ರನ್‌ ಗಳಷ್ಟೇ ಸೇರ್ಪಡೆಯಾಯಿತು. ಕೊನೆಗೆ ಮುಂಬೈ 5 ರನ್‌ಗಳಿಂದ ವಿರೋಚಿತ ಸೋಲನುಭವಿಸಿತು. 5ನೇ ಸ್ಥಾನದಲ್ಲಿದ್ದ ಆರ್‌ಸಿಬಿ (RCB) ತಂಡಕ್ಕೂ ಲಕ್ನೋ ಗೆಲವು ಸಂಕಷ್ಟ ತಂದಂತಾಗಿದೆ. ಒಂದು ವೇಳೆ ಆರ್‌ಸಿಬಿ ಸತತ ಎರಡು ಪಂದ್ಯಗಳಲ್ಲಿ ಗೆದ್ದು ಮುಂಬೈ ಮುಂದಿನ ಪಂದ್ಯದಲ್ಲೂ ಸೋತರಷ್ಟೇ ಆರ್‌ಸಿಬಿಗೆ ಪ್ಲೆ ಆಫ್‌ ಪ್ರವೇಶಿಸುವ ಅವಕಾಶ ಸಿಗಲಿದೆ.

    ತವರಿನ ಅಟಲ್‌ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ 3 ವಿಕೆಟ್‌ ನಷ್ಟಕ್ಕೆ 177 ರನ್‌ ಕಲೆಹಾಕಿತ್ತು. 178 ರನ್‌ ಗುರಿ ಪಡೆದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿ ಗೆದ್ದು ಬೀಗಿತು. ಈ ಮೂಲಕ ಪ್ಲೆ ಆಫ್‌ಗೆ ಬಹುತೇಕ ಅರ್ಹತೆ ಪಡೆದುಕೊಂಡಿತು.

    ಬೌಲಿಂಗ್‌ ಪಿಚ್‌ನಲ್ಲಿ ಇದೇ ಮೊದಲಬಾರಿಗೆ ಇತ್ತಂಡಗಳಿಂದಲೂ ರನ್‌ ಹೊಳೆ ಹರಿಯಿತು. ಲಕ್ನೋ ಪರ ಮಾರ್ಕಸ್‌ ಸ್ಟೋಯ್ನಿಸ್‌ ಹಾಗೂ ಮುಂಬೈ ಇಂಡಿಯನ್ಸ್‌ ಪರ ರೋಹಿತ್‌ ಶರ್ಮಾ (Rohit Sharma), ಇಶಾನ್‌ ಕಿಶನ್‌ (Ishan Kishan) ಭರ್ಜರಿ ಸಿಕ್ಸರ್‌ ಬೌಂಡರಿ ಬ್ಯಾಟಿಂಗ್‌ ನಡೆಸಿದರು.

    ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ ಹಾಗೂ ಇಶಾನ್‌ ಕಿಶನ್‌ ಲಕ್ನೋ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿದ್ರು. ಮೊದಲ ವಿಕೆಟ್‌ ಜೊತೆಯಾಟಕ್ಕೆ ಈ ಜೋಡಿ 9.4 ಓವರ್‌ಗಳಲ್ಲಿ 90 ರನ್‌ ಸಿಡಿಸಿತ್ತು. ರೋಹಿತ್‌ ಶರ್ಮಾ 25 ಎಸೆತಗಳಲ್ಲಿ 37 ರನ್‌ (1 ಬೌಂಡರಿ, 3 ಸಿಕ್ಸರ್‌) ಗಳಿಸಿದರೆ, ಇಶಾನ್‌ ಕಿಶನ್‌ 39 ಎಸೆತಗಳಲ್ಲಿ 59 ರನ್‌ (1 ಸಿಕ್ಸರ್‌, 8 ಬೌಂಡರಿ) ಚಚ್ಚಿದರು. ಕಳೆದೆರಡು ಪಂದ್ಯದಲ್ಲಿ ಅಬ್ಬರಿಸಿದ್ದ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್‌ ಯಾದವ್‌ 7 ರನ್‌ ಹಾಗೂ ನಿಹಾಲ್‌ ವಧೇರಾ 16 ರನ್‌ ಗಳಿಸಿ ನಿರಾಸೆ ಮೂಡಿಸಿದರು.

    ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್‌ ಡೇವಿಡ್‌ ಬ್ಯಾಟಿಂಗ್‌ ನೆರವಿನಿಂದ ರನ್‌ ಗಳಿಸಿದ್ದ ಮುಂಬೈ ಗೆಲುವಿನ ಕನಸು ಕಂಡಿತ್ತು. ಕೊನೆಯ ಓವರ್‌ನಲ್ಲಿ ಡೇವಿಡ್‌ ಹಾಗೂ ಕ್ಯಾಮರೂನ್‌ ಗ್ರೀನ್‌ ಕಳಪೆ ಪ್ರದರ್ಶನದಿಂದ ಮುಂಬೈ ವಿರೋಚಿತ ಸೋಲನುಭವಿಸಿತು. ಟಿಮ್‌ ಡೇವಿಡ್‌ 19 ಎಸೆತಗಳಲ್ಲಿ 32 ರನ್‌ ಗಳಿಸಿದರು.

    ಲಕ್ನೋ ಪರ ಬೌಲಿಂಗ್‌ ದಾಳಿ ನಡೆಸಿದ ರವಿ ಬಿಷ್ಣೋಯಿ, ಯಶ್‌ ಠಾಕೂರ್‌ ತಲಾ 2 ವಿಕೆಟ್‌ ಉರುಳಿಸಿದರೆ, ಮೊಹ್ಸಿನ್‌ ಖಾನ್‌ 1 ವಿಕೆಟ್‌ ಪಡೆದು ಮಿಂಚಿದರು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ ಆರಂಭದಲ್ಲೇ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ದೀಪಕ್‌ ಹೂಡ 5 ರನ್‌, ಕ್ವಿಂಟನ್‌ ಡಿ ಕಾಕ್‌ 16 ರನ್‌ ಹಾಗೂ ಪ್ರೇರಕ್‌ ಮಂಕಡ್‌ ಶೂನ್ಯಕ್ಕೆ ಔಟಾಗಿದ್ದರು. ಬಳಿಕ ಒಂದಾದ ನಾಯಕ ಕೃನಾಲ್‌ ಪಾಂಡ್ಯ ಹಾಗೂ ಮಾರ್ಕಸ್‌ ಸ್ಟೋಯ್ನಿಸ್‌ ಜೋಡಿ 59 ಎಸೆತಗಳಲ್ಲಿ 82 ರನ್‌ ಸಿಡಿಸಿತ್ತು. ನಂತರದಲ್ಲಿ ನಿಕೋಲಸ್‌ ಪೂರನ್‌‌ ಹಾಗೂ ಸ್ಟೋಯ್ನಿಸ್‌ ಜೋಡಿ 24 ಎಸೆತಗಳಲ್ಲಿ 60 ರನ್‌ ಬಾರಿಸಿತು. ಕೊನೆಯವರೆಗೂ ಅಜೇಯರಾಗಿ ಹೋರಾಡಿದ ಸ್ಟೋಯ್ನಿಸ್‌ 47 ಎಸೆತಗಳಲ್ಲಿ 89 ರನ್‌ (8 ಸಿಕ್ಸರ್‌, 4 ಬೌಂಡರಿ) ಚಚ್ಚಿದರೆ, ಕೃನಾಲ್‌ ಪಾಂಡ್ಯ 42 ಎಸೆತಗಳಲ್ಲಿ 49 ರನ್‌ ಗಳಿಸಿದರು. ಅರ್ಧ ಶತಕ ಗಳಿಸದೆಯೇ ಕಾಲು ನೋವು ಸಮಸ್ಯೆಯಿಂದ ಕ್ರೀಸ್‌ ಬಿಟ್ಟು ಹೊರನಡೆದರು. ನಿಕೋಲಸ್‌ ಪೂರನ್‌ 8 ರನ್‌ ಗಳಿಸಿ ಅಜೇಯರಾಗುಳಿದರು.

    ಮುಂಬೈ ಪರ ಜೇಸನ್‌ ಬೆಹ್ರೆನ್‌ಡ್ರೋಫ್‌ 4 ಓವರ್‌ಗಳಲ್ಲಿ 30 ರನ್‌ ನೀಡಿ 2 ವಿಕೆಟ್‌ ಕಿತ್ತರೆ, ಪಿಯೂಷ್‌ ಚಾವ್ಲಾ 3 ಓವರ್‌ಗಳಲ್ಲಿ 1 ವಿಕೆಟ್‌ 26 ರನ್‌ ನೀಡಿ 1 ವಿಕೆಟ್‌ ಪಡೆದರು.