Tag: Kudroli

  • ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಭಾಗಿ

    ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಭಾಗಿ

    – ದಸರಾ ಮೆರವಣಿಗೆಗೆ ಮೆರುಗು ನೀಡಿದ ವಿವಿಧ ಸ್ತಬ್ಧ ಚಿತ್ರಗಳು

    ಮಂಗಳೂರು: ಜಗತ್ ಪ್ರಸಿದ್ಧ ಮಂಗಳೂರು ದಸರಾ (Mangaluru Dasara) ಮೆರವಣಿಗೆ ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ (Kudroli Gokarnanatha Temple) ಸಂಜೆ 4 ಗಂಟೆಗೆ ಆರಂಭಗೊಂಡಿತು. ಸುಮಾರು 60ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರುಗು ನೀಡಿತು. ದೇಶ – ವಿದೇಶಗಳಿಂದ ಬಂದ ಲಕ್ಷಾಂತರ ಮಂದಿ ಭಕ್ತರು ಈ ದಸರಾ ಮೆರವಣಿಗೆಗೆ ಸಾಕ್ಷಿಯಾದರು.

    ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕಳೆದ 10 ದಿನಗಳಿಂದ ಅದ್ಧೂರಿಯಾಗಿ ನಡೆದ ನವರಾತ್ರಿ ಮಹೋತ್ಸವಕ್ಕೆ ದಸರಾ ಮೆರವಣಿಗೆಯೊಂದಿಗೆ ತೆರೆ ಕಾಣಲಿದೆ. ಅಕ್ಟೋಬರ್ 3 ರಂದು ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ದೀಪ ಬೆಳಗಿಸುವುದರೊಂದಿಗೆ ಆರಂಭಗೊಂಡ ಈ ದಸರಾ ಮೆರವಣಿಗೆ ಇಂದು ಬೃಹತ್ ಮೆರವಣಿಗೆಯೊಂದಿಗೆ ಸಂಪನ್ನಗೊಳ್ಳಲಿದೆ. ಸಂಜೆ ಸುಮಾರು 4 ಗಂಟೆಗೆ ಕ್ಷೇತ್ರದಿಂದ ಹೊರಟ ಈ ಬೃಹತ್ ದಸರಾ ಮೆರವಣಿಗೆಯಲ್ಲಿ ವಿಘ್ನನಿವಾರಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯರ ಮೂರ್ತಿಗಳನ್ನು ಸ್ತಬ್ಧ ಚಿತ್ರದೊಂದಿಗೆ ಕೊಂಡೊಯ್ಯಲಾಯಿತು. ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬೃಹತ್ ದಸರಾ ಮೆರವಣಿಗೆ ನಡೆಯುತ್ತಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಇಷ್ಟು ಅಚ್ಚುಕಟ್ಟಾಗಿ ನಡೆಯುವ ಈ ದಸರಾವನ್ನು ಭಕ್ತರ ಸಹಕಾರದಿಂದ ಅದ್ಧೂರಿಯಾಗಿ ನಡೆಸಲಾಗುತ್ತದೆ. ಇದನ್ನೂ ಓದಿ: ಮಂಚಹಳ್ಳಿ, ಕೋಟೆಕೆರೆಯಲ್ಲಿ ಆನೆ ದಾಳಿಗೆ ರೈತರ ಟೊಮೆಟೊ, ತೆಂಗು ನಾಶ

    ಸುಮಾರು ಒಂದು ಸಾವಿರ ಆಕರ್ಷಕ ಕೇರಳ ಕೊಡೆಗಳು, ನೂರಕ್ಕೂ ಅಧಿಕ ಬ್ಯಾಂಡ್ ಸೆಟ್‌ಗಳು, ಸುಮಾರು 50 ಜಾನಪದ ಕುಣಿತಗಳ ತಂಡ, ಕೇರಳ ಚೆಂಡೆವಾದನ, ಕೊಂಬು ಕಹಳೆ, ದೇಶದ ಇತಿಹಾಸವನ್ನು ಬಿಂಬಿಸುವ ಸುಮಾರು 63 ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರಗು ನೀಡಿತು. ದಾರಿಯುದ್ದಕ್ಕೂ ಆಕರ್ಷಕ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದರು. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಶ್ರೀ ಕ್ಷೇತ್ರದಿಂದ ಇಂದು ಸಂಜೆ ಹೊರಟ ಈ ಮೆರವಣಿಗೆ ನಗರದ ಸುಮಾರು 7 ಕಿಲೋ ಮೀಟರ್ ಸಾಗಿದ್ದು, ಸೋಮವಾರ ಮುಂಜಾನೆ 8 ಗಂಟೆಗೆ ಮತ್ತೆ ಶ್ರೀ ಕ್ಷೇತ್ರಕ್ಕೆ ತಲುಪಲಿದೆ. ಕ್ಷೇತ್ರದ ಪುಷ್ಕರಣಿಯಲ್ಲಿ ಗಣೇಶ, ಆದಿಶಕ್ತಿ, ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ವಿಸರ್ಜಿಸಲಾಗುವುದು. ಇದರೊಂದಿಗೆ ಈ ದಸರಾ ಮೆರವಣಿಗೆಗೆ ತೆರೆ ಬೀಳಲಿದೆ. ಇದನ್ನೂ ಓದಿ: ರಾಜ್ಯದ ಜನರ ಆಶೀರ್ವಾದ ಇರೋವರೆಗೂ ನನ್ನ ಯಾರೂ ಅಲ್ಲಾಡಿಸೋಕೆ ಆಗಲ್ಲ: ಸಿದ್ದರಾಮಯ್ಯ

  • ಕಣ್ಮನ ಸೆಳೆಯುವ ಕುದ್ರೋಳಿ ದಸರಾ ವೈಭವ

    ಕಣ್ಮನ ಸೆಳೆಯುವ ಕುದ್ರೋಳಿ ದಸರಾ ವೈಭವ

    ರ್ನಾಟಕದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ನಾಡಹಬ್ಬ ದಸರವು ಪ್ರಮುಖವಾದದ್ದು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ದಸರವನ್ನೂ ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದಲ್ಲಿ (Kudroli Shri Gokarnanatheshwara Kshetra) ದಸರಾ ವೈಭವದಿಂದ ನಡೆಯುತ್ತದೆ. ಇದನ್ನು ವಿಜಯದಶಮಿ, ನವರಾತ್ರಿ ಹಬ್ಬ ಎಂತಲೂ ಕರೆಯುತ್ತಾರೆ.

    ಹತ್ತು ದಿನಗಳ ಕಾಲ ನಗರವನ್ನು ವಿವಿಧ ಬಗೆಯ ಬಣ್ಣ ಬಣ್ಣದ ಬಲ್ಬ್, ದೀಪಗಳಿಂದ ಅಲಂಕರಿಸುತ್ತಾರೆ. ಇದನ್ನು ನೋಡೋದೆ ಕಣ್ಣಗಳಿಗೆ ಒಂದು ಹಬ್ಬ. ನಾನಾ ರೀತಿಯ ವೇಷಗಳಿಂದ ಮನರಂಜನೆ ನೀಡುವ ಸಿಂಹ ಮತ್ತು ಕರಡಿ ಹುಲಿ ಕುಣಿತ ಮುಂತಾದವುಗಳನ್ನು ನಾವಿಲ್ಲಿ ಕಾಣಬಹುದು. ಒಟ್ಟಿನಲ್ಲಿ ಇಡೀ ಮಂಗಳೂರು ನಗರವೇ ಬೆಳಕಿನಲ್ಲಿ ಕಂಗೊಳಿಸುತ್ತಿರುತ್ತದೆ.

    ಬಿ ಆರ್ ಕರ್ಕೇರ ಅವರು ಮಂಗಳೂರು ದಸರವನ್ನು ಮೊದಲು ಪ್ರಾರಂಭಿಸಿದರು. ಮಂಗಳೂರಿನ (Mangaluru) ಗೋಕರ್ನಾಥೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಬಹಳ ವಿಜೃಂಭಣೆಯಿಂದ ಆಚರಿಸುವ ಉತ್ಸವ. ಅದೇ ಸಡಗರದಿಂದ ಆಚರಿಸುವ ಮತ್ತೊಂದು ಉತ್ಸವ ಅಂದರೆ ನವರಾತ್ರಿ. ನವರಾತ್ರಿಯ ಸಂದರ್ಭದಲ್ಲಿ ಶಾರದಾದೇವಿ ಸೇರಿದಂತೆ ಹಲವು ಮೂರ್ತಿಗಳನ್ನು ವೈದಿಕ ಸಾಂಪ್ರದಾಯದಂತೆ ಪ್ರತಿಷ್ಠಾಪಿಸಲಾಗುತ್ತದೆ. 9 ದಿನಗಳ ಕಾಲ ಭಕ್ತಿಯಿಂದ ಪೂಜಿಸಲಾಗುತ್ತದೆ. ನವ ದುರ್ಗೆಯರ ಜೊತೆಗೆ ಮಹಾಗಣಪತಿ ಮತ್ತು ಶಾರದಾದೇವಿಗೂ ವಿಶೇಷ ಪೂಜೆ ನಡೆಯುತ್ತದೆ. ಮಹಾಗಣಪತಿ ಮತ್ತು ಶಾರದೆ ಹಾಗೂ ನವದುರ್ಗೆಯರಾದ ಆದಿಶಕ್ತಿ, ಶೈಲ ಪುತ್ರಿ, ಸ್ಕಂದಾಮಾತಾ, ಕತ್ಯಾಯನಿ, ಕಾಳರಾತ್ರಿ, ಮಹಾ ಗೌರಿ ಸಿದ್ಧಿದಾತ್ರಿ, ಬ್ರಹ್ಮಚಾರಿಣಿ ಚಂದ್ರಘಂಟಾ, ಕೂಷ್ಮಂಡಾಯಿನಿ, ದುರ್ಗೆಯರಿಗೆ ವಿಷೇಶ ಪೂಜೆ ನಡೆಯುತ್ತದೆ.

    ಕುದ್ರೋಳಿ ದಸರಾ (Kudroli Dasara) ಬಂತೆಂದರೆ ಸಾಕು ಊರ ಜನರಿಗೆ ಹಬ್ಬ. ಪರವೂರಿನವರನ್ನು ತನ್ನತ್ತ ಆಕರ್ಷಿಸು ಶಕ್ತಿ ಮಾತೆಗೆ ಇದೆ. ಮಂಗಳ ದೇವಿಯಿಂದ ಮಂಗಳೂರು ಎಂಬ ಹೆಸರು ಬಂದಿದೆ. ಮಂಗಳ ದೇವಿ ದೇವಸ್ಥಾನದಲ್ಲೂ ದಸರವನ್ನು ಆಚರಿಸಲಾಗುತ್ತದೆ. ಜಾನಪದ ಸಂಗೀತ ನಾಟಕ ವಿವಿಧ ವಿಷಯಗಳ ನಾಟಕಗಳು ಮತ್ತು ಭಕ್ತಿ ಗೀತೆಗಳು ಅಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಂಗಳದೇವಿ ದೇವಸ್ಥಾನವು ಏರ್ಪಡಿಸುತ್ತದೆ. ಮಹಾನವಮಿಯಂದು ಎಲ್ಲಾ ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ. ಸುಂದರವಾಗಿ ಅಲಂಕೃತ ಗೊಂಡ ದೇವಿಯನ್ನು ರಥದ ಮೇಲೆ ಕೂರಿಸಿ ನಂತರ ಭವ್ಯವಾದ ರಥವನ್ನು ಎಳೆಯಲಾಗುತ್ತದೆ. ವಿವಿಧ ದೇವತೆಗಳಿಂದ ಕೂಡಿರುವ ರಥವು ವರ್ಣ ರಂಜಿತವಾಗಿ ಕಾಣುತ್ತದೆ. ಮೆರವಣಿಗೆಯು ಮರ್ನಮಿ ಕಟ್ಟವನ್ನು ತಲುಪಿದ ನಂತರ ಅಲ್ಲಿ ದೇವಿಯನ್ನು ಭಕ್ತಿ ಪೂರ್ವಕವಾಗಿ ಪೂಜಿಸಲಾಗುವುದು.

    ವಿವಿಧ ಕಲೆಗಳಿಂದ ಮೇಳೈಸುವ ಮೆರವಣಿಗೆ:

    ವಿಜಯದಶಮಿಯ ದಿನದಂದು ಸಂಜೆಯ ಹೊತ್ತು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗುತ್ತದೆ. ಮಾರನೆಯ ದಿನ ಮುಂಜಾನೆಯ ಹೊತ್ತಿಗೆ ದೇವಸ್ಥಾನದ ಸಂಕೀರ್ಣದಲ್ಲಿರುವ ಪುಷ್ಕರಣಿಯಲ್ಲಿ ವಿಗ್ರಹಗಳ ವಿಸರ್ಜನೆಯೊಂದಿಗೆ ಕೊನೆಗೊಳ್ಳುತ್ತದೆ. ಪೂಜಿಸಿದಂತ ಎಲ್ಲಾ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುವುದು. ಮೆರವಣಿಗೆಯಲ್ಲಿ ಎಲ್ಲಾ ರೀತಿಯ ಕಲಾಪ್ರಕಾರಗಳು ಮೇಳೈಸುತ್ತವೆ. ಚಂಡೆ ವಾದನ ಬ್ಯಾಂಡ್, ವೈವಿಧ್ಯಮಯ ಅಲಂಕಾರಗಳು, ಜನಪದ ನೃತ್ಯ ಯಕ್ಷಗಾನ ಪಾತ್ರಗಳು, ಡೊಳ್ಳು ಕುಣಿತ, ಹುಲಿಕುಣಿತ ಹೀಗೆ ಎಲ್ಲಾ ಸಾಂಸ್ಕೃತಿಕ ಕಲೆಗಳನ್ನು ನಾವು ಈ ಮೆರವಣಿಗೆಯಲ್ಲಿ ಕಾಣಬಹುದು. ಮೆರವಣಿಗೆಯು ಕುದ್ರೋಳಿಯಿಂದ ಪ್ರಾರಂಭವಾಗಿ ಮಣ್ಣಗುಡ್ಡೆ, ಲೇಡಿಹಿಲ್, ಲಾಲ್ ಬಾಗ್, ಕೆಎಸ್ ರಾವ್ ರಸ್ತೆ, ಹಂಪನಕಟ್ಟೆ, ಕಾರ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿಬರುತ್ತದೆ.

     

    ಮಂಗಳೂರು ದಸರವನ್ನು ಮಂಗಳದೇವಿ ದೇವಸ್ಥಾನ, ಶ್ರೀ ವೆಂಕಟರಮಣ ದೇವಸ್ಥಾನ, ಶ್ರೀ ಜೋಡುಮುತ್ತು ದೇವಸ್ಥಾನಗಳು ಸೇರಿ ಸಂಭ್ರಮದಿಂದ ಆಯೋಜಿಸುತ್ತದೆ. ಪ್ರಮುಖವಾಗಿ ಶಾರದಾ ಪೂಜೆಯನ್ನು ಆಯೋಜಿಸಲು ವಿವಿಧ ಸಮಿತಿಗಳಿವೆ. ಸಾರ್ವಜನಿಕ ಶ್ರೀ ಶಾರದಾ ಪೂಜಾ ಮಹೋತ್ಸವ ಆಚಾರ್ಯ ಮಠ ಬ್ರಹ್ಮ ವಿದ್ಯಾ ಪ್ರಬೋಧಿನಿ ಶ್ರೀ ಶಾರದಾ ಪೂಜಾ ಮಹೋತ್ಸವ ಜೋಡುಮಠ, ರಥ ಬೀದಿ ಬಾಲಕರ ಶಾರದ ಮಹೋತ್ಸವ ಗೋಕರ್ಣ ಮಠ ಟ್ಯಾಂಕ್ ಕಾಲೋನಿ ಶಾರದ ಮಹೋತ್ಸವ, ವಿಟಿ ರಸ್ತೆ ಬಾಲಕರ ವೃಂದ ಇತ್ಯಾದಿ ಸಮಿತಿಯನ್ನು ಕಾಣಬಹುದಾಗಿದೆ.

    ಮಂಗಳೂರಿನ ಬ್ರಹ್ಮ ವಿದ್ಯಾ ಪ್ರಬೋಧಿನಿ ಜೋಡುಮಠದಲ್ಲೂ ಶ್ರೀ ಶಾರದಾ ಪೂಜೆ ಮಹೋತ್ಸವವು ನವರಾತ್ರಿಯ ಕಾಲದಲ್ಲಿ ಆರೇಳು ದಿನಗಳ ಕಾಲ ಆಚರಿಸಲಾಗುತ್ತದೆ. ಜೋಡು ಮಠದ ಆವರಣದಲ್ಲಿ ಶಾರದಾ ದೇವಿಯ ವಿಗ್ರಹವನ್ನು ಸ್ಥಾಪಿಸಲಾಗುತ್ತದೆ. ಮೂಲ ನಕ್ಷತ್ರದಿಂದ ಶ್ರವಣ ನಕ್ಷತ್ರದವರೆಗೆ ಪೂಜೆ ನಡೆಯುತ್ತದೆ. ದೇವಿಗೆ ವಿವಿಧ ಅಲಂಕಾರದೊಂದಿಗೆ ಪೂಜಾ ಕೈಂಕರ್ಯವನ್ನು ನೆರವೇರಿಸಲಾಗುತ್ತದೆ. ನವರಾತ್ರಿಯ ಏಕದಶಿ ದಿನದಂದು ಶೋಭಾ ಯಾತ್ರೆಯಲ್ಲಿ ನಿಮಜ್ಜನದೊಂದಿಗೆ ಆರಾಧನೆ ಮುಕ್ತಾಯಗೊಳ್ಳುತ್ತದೆ. ಮಂಗಳೂರಿನಲ್ಲಿ ಮೂಲೆಮೂಲೆಯಲ್ಲೂ ಹಬ್ಬದ ವಾತಾವರಣ ಮನೆ ಮಾಡುತ್ತದೆ.

    ಕಾರ್ ಸ್ಟ್ರೀಟ್‌ನ ಶ್ರೀ ವೆಂಕಟರಮಣ ದೇವಸ್ಥಾನದಲ್ಲೂ ನವರಾತ್ರಿಯ ಸಮಯದಲ್ಲಿ ಆ ಏಳು ದಿನಗಳ ಕಾಲ ಮಂಗಳೂರು ಶಾರದೋತ್ಸವ, ಶಾರದ ಮಹೋತ್ಸವವನ್ನು ಆಚರಣೆ ಮಾಡಲಾಗುತ್ತದೆ. ಶಾರದಾ ದೇವಿಯ ವಿಗ್ರಹವನ್ನು ಕಾರ್ ಸ್ಟ್ರೀಟ್‌ನ ಶ್ರೀ ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠದ ಆವರಣದಲ್ಲಿ ಸ್ಥಾಪಿಸಲಾಗುತ್ತದೆ. ಭವ್ಯವಾದ ಮೆರವಣಿಗೆಯಲ್ಲಿ ಶಾರದ ದೇವಿಯ ವಿಗ್ರಹವನ್ನು ಮೊದಲು ದಿ ಗ್ರೇಟ್ ದರ್ಬಾರ್ ಬೀದಿ ವರ್ಕ್ಸ್, ಬಂದರ್‌ನಿಂದ ಮಠದ ಆವರಣಕ್ಕೆ ತಂದು ಭವ್ಯವಾದ ಮೆರವಣಿಗೆಯೊಂದಿಗೆ ಈ ಉತ್ಸಾಹವು ಮುಕ್ತಾಯಗೊಳ್ಳುವುದು. ಭವ್ಯವಾದ ಮೆರವಣಿಗೆಯನ್ನು ಕಣ್ತುಂಬಿಸಿಕೊಳ್ಳಲು ಸಾವಿರಾರು ಜನಸಂಖ್ಯೆಯಲ್ಲಿ ಭಕ್ತಾದಿಗಳು ಸೇರುತ್ತಾರೆ. ಮೆರವಣಿಗೆ ಕೊನೆಗೊಂಡ ಮೇಲೆ ಬೆಳಗಿನ ಹೊತ್ತಿನಲ್ಲಿ ಮಹಾಮಾಯ ದೇವಸ್ಥಾನದ ಸರೋವರದಲ್ಲಿ ವಿಗ್ರಹವನ್ನು ನಿಮಜ್ಜನಗೊಳಿಸಲಾಗುತ್ತದೆ.

  • ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರಕ್ಕಿಲ್ಲ ಅವಕಾಶ

    ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರಕ್ಕಿಲ್ಲ ಅವಕಾಶ

    – ಡಿಜೆ ಸಂಸ್ಕೃತಿಗೂ ಕಡಿವಾಣ

    ಮಂಗಳೂರು: ಕಾಂತಾರ (Kantara) ಸಿನಿಮಾ ಕರಾವಳಿಯ ದೈವಗಳ ಪ್ರಸಿದ್ಧಿಯನ್ನು ವಿಶ್ವದಾದ್ಯಂತ ಪಸರಿಸಿತ್ತು. ಆದರೆ ಈ ಸಿನಿಮಾದ ಕಾರಣಕ್ಕೆ ಇದೇ ದೈವಗಳು ಕೆಲವರಿಗೆ ತಮಾಷೆಯ ವಸ್ತುವಾಗಿದೆ. ಬೀದಿ ಬೀದಿಯಲ್ಲೂ ದೈವಗಳ ವೇಷ ಹಾಕಿ ಅವಮಾನ ಮಾಡೋ ಪ್ರಕರಣಗಳೂ ನಡೆದಿದೆ. ಹೀಗಾಗಿಯೇ ಈ ಬಾರಿಯ ಮಂಗಳೂರು ದಸರಾದಲ್ಲಿ (Mangaluru Dasara) ದೈವಗಳ ಸ್ತಬ್ಧ ಚಿತ್ರಗಳಿಗೆ ಬ್ರೇಕ್ ಹಾಕಲಾಗಿದೆ. ಡಿಜೆ ಸಂಸ್ಕೃತಿಗೂ ಕಡಿವಾಣ ಹಾಕುವ ಮೂಲಕ ವಿಭಿನ್ನ ದಸರಾ ಆಚರಣೆಗೆ ಮಂಗಳೂರಿನ ಕುದ್ರೋಳಿ ದೇವಸ್ಥಾನದ ಆಡಳಿತ ಹೊಸ ಹೆಜ್ಜೆ ಇಟ್ಟಿದೆ.

    ಹೌದು. ವಿಶ್ವವಿಖ್ಯಾತ ಮಂಗಳೂರು ದಸರಾಕ್ಕೆ ಕುದ್ರೋಳಿ (Kudroli Temple) ಶ್ರೀಕ್ಷೇತ್ರ ಸಜ್ಜಾಗುತ್ತಿದೆ. ಈ ಬಾರಿಯ ದಸರಾ ಮೆರವಣಿಗೆ ಅಕ್ಟೋಬರ್ 25ರಂದು ನಡೆಯಲಿದ್ದು, ತುಳುನಾಡಿನ ದೈವಗಳ ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ ಎಂದು ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಆಡಳಿತ ಖಡಕ್ ನಿರ್ಧಾರ ತಳೆದಿದೆ. ತುಳುನಾಡಿನಲ್ಲಿ ದೈವಗಳ ಬಗ್ಗೆ ಅಪಾರ ನಂಬಿಕೆಯಿದೆ. ಭಕ್ತರ ಈ ನಂಬಿಕೆಗೆ ಘಾಸಿಯಾಗುವಂತಹ ಕಾರ್ಯ ಆಗಬಾರದೆಂದು ದೈವಗಳನ್ನು ಅವಹೇಳನ ಮಾಡುವಂತಹ ಟ್ಯಾಬ್ಲೊಗಳಿಗೆ (Tableau) ಅವಕಾಶ ನೀಡುತ್ತಿಲ್ಲ. ಆದ್ದರಿಂದ ಇಂತಹ ಟ್ಯಾಬ್ಲೊಗಳು ಬಂದಲ್ಲಿ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟ ಪಡಿಸಲಾಗಿದೆ. ಯಾವುದೇ ಜಾತಿ, ಧರ್ಮ, ಮತದವರಿಗೆ ನಿಂದನೆ, ಅವಮಾನ ಮಾಡುವಂತಹ ಟ್ಯಾಬ್ಲೊಗಳಿಗೂ ಅವಕಾಶ ಕೊಡುವುದಿಲ್ಲ ಎಂದು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ನವರಾತ್ರಿ 2023: ಬ್ರಹ್ಮಚಾರಿಣಿ ದೇವಿಯ ಹಿನ್ನೆಲೆ ಏನು?

    ಈ ಬಾರಿಯ ಮಂಗಳೂರು ದಸರಾದ ಮೆರವಣಿಗೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಡಿಜೆಗೆ ನಿಷೇಧ ಹಾಕಲಾಗಿದ್ದು, ಭಜನಾ ತಂಡಗಳ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಲಾಗಿದೆ. ನೂರಾರು ಟ್ಯಾಬ್ಲೋಗಳು ಭಾಗವಹಿಸೋ ಹಿನ್ನೆಲೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಸಾಮರಸ್ಯದ ದಸರಾಕ್ಕೆ ಈ ಬಾರಿ ಮಂಗಳೂರು ದಸರಾ ಸಾಕ್ಷಿಯಾಗಲಿದೆ.ಎಲ್ಲಾ ಜಾತಿ ಮತ, ಧರ್ಮದವರು ಈ ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರಂತೆ ಕ್ರೈಸ್ತ ಧರ್ಮದವರು ಸೇರಿದಂತೆ ಬೇರೆ ಬೇರೆ ಧರ್ಮದವರು ಅವರವರ ಟ್ಯಾಬ್ಲೊಗಳನ್ನು ಮೆರವಣಿಗೆಯಲ್ಲಿ ತರಲಿದ್ದಾರೆ. ಮಂಗಳೂರು ದಸರಾದಲ್ಲಿ ಪ್ರತೀ ವರ್ಷ ಒಂದೊಂದು ವಿಶೇಷವಿರುತ್ತದೆ. ಈ ಬಾರಿ ಅಕ್ಟೋಬರ್ 15ರಂದು ರಾತ್ರಿ 8ಗಂಟೆಗೆ ಶ್ರಿಕ್ಷೇತ್ರದಿಂದ ಮಂಗಳೂರು ದಸರಾ ಮ್ಯಾರಥಾನ್ ನಡೆಯಲಿದೆ. ಜ್ಯೂಯೀಸ್ ಫಿಟ್ ನೆಸ್ ಕ್ಲಬ್ ಹಾಗೂ ಶ್ರೀಕ್ಷೇತ್ರ ಜೊತೆಯಾಗಿ ಸೇರಿ ಈ ಮ್ಯಾರಥಾನ್ ನಡೆಸಲಿದೆ. ಸಾವಿರಾರು ಮಂದಿ ಈ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

    ಒಟ್ಟಾರೆ ದೈವಗಳ ಅವಹೇಳನ ವಿರುದ್ಧ ಈ ಬಾರಿಯ ಮಂಗಳೂರು ದಸರಾ ಹೊಸ ಸಂದೇಶ ಸಾರಿದೆ. ದೇವಸ್ಥಾನದ ಆಡಳಿತ ಮಂಡಳಿಯ ಈ ನಡೆ ಇದೀಗ ಭಾರೀ ಪ್ರಸಂಶೆಗೆ ಕಾರಣವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶ್ರೀಕ್ಷೇತ್ರ ಕುದ್ರೋಳಿಗೆ ನಟ ಕಿಚ್ಚ ಸುದೀಪ್ ಭೇಟಿ

    ಶ್ರೀಕ್ಷೇತ್ರ ಕುದ್ರೋಳಿಗೆ ನಟ ಕಿಚ್ಚ ಸುದೀಪ್ ಭೇಟಿ

    ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ನಟ ಕಿಚ್ಚ ಸುದೀಪ್ ಅವರು ಗುರುವಾರ ಸಂಜೆ ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ಕರಾವಳಿಯ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಕುದ್ರೋಳಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ದೇವರ ಪ್ರಸಾದ ಸ್ವೀಕರಿಸಿದರು. ಈ ವೇಳೆ ಸುದೀಪ್ ಗೆ ದೇವಸ್ಥಾನದ ಆಡಳಿತ ಸಮಿತಿ ಶಾಲು ಹೊದಿಸಿ ಗೌರವಿಸಿದೆ. ಇದನ್ನೂ ಓದಿ: ಫೆಬ್ರವರಿ 24ಕ್ಕೆ ತೆರೆ ಮೇಲೆ ವಿಕ್ರಾಂತ್ ರೋಣ

    ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್ ಸಾಯಿರಾಂ, ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ನಟನನ್ನು ಆದರದಿಂದ ಬರಮಾಡಿಕೊಂಡರು. ಸುದೀಪ್ ಅವರಿಗೆ ನಿರ್ದೇಶಕ ರಾಜೇಶ್ ಭಟ್ ಸಾಥ್ ನೀಡಿದರು. ಕಿಚ್ಚ ನಟನೆಯ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ 2022ರ ಫೆಬ್ರವರಿಯಲ್ಲಿ ಬಿಡುಗಡೆಗೊಳ್ಳಲಿದೆ. ಇದನ್ನೂ ಓದಿ: ಕಿಚ್ಚ ಸುದೀಪ್‍ಗೆ ದೇವಾಲಯ ಕಟ್ಟಿಸುತ್ತಿದ್ದಾರೆ ಅಭಿಮಾನಿಗಳು

    https://www.youtube.com/watch?v=V7Y70iCLr98

  • ಕುದ್ರೋಳಿಯಲ್ಲಿ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬೋ ಕಲಾವಿದರು ಯಾರು ಗೊತ್ತಾ?

    ಕುದ್ರೋಳಿಯಲ್ಲಿ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬೋ ಕಲಾವಿದರು ಯಾರು ಗೊತ್ತಾ?

    ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಸಂಭ್ರಮಕ್ಕೆ ಮೆರುಗು ನೀಡುವ ಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.

    ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳುವುದಿಲ್ಲ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು. ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.

    ದೇವತಾ ಸ್ವರೂಪವಾದ ಈ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ಧೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ , ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ. ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ. ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ. ಇಂತಹ ಅದ್ಭುತ ಕಲಾವಿದರಿಗೊಂದು ಸೆಲ್ಯೂಟ್.

  • ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರಿಗೆ ಕುದ್ರೋಳಿ ಕ್ಷೇತ್ರದಿಂದ ಸಹಾಯ

    ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರಿಗೆ ಕುದ್ರೋಳಿ ಕ್ಷೇತ್ರದಿಂದ ಸಹಾಯ

    ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರಿಗೆ ರಾಜ್ಯದ ಪ್ರಮುಖ ಪುಣ್ಯ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಿತ್ಯವೂ ಹಸಿವು ನೀಗಿಸುವ ಮಹತ್ವ ಕಾರ್ಯ ನಡೆಯುತ್ತಿದೆ.

    ಕುದ್ರೋಳಿ ಕ್ಷೇತ್ರದ ಹರಿಕಾರ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದೆ. ಆರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುವ ಉದ್ದೇಶ ಹೊಂದಿತ್ತಾದರೂ ನಂತರ ಅದು ವಿಸ್ತರಣೆಗೊಂಡು ಇದುವರೆಗೆ ಒಟ್ಟ 250 ಕ್ವಿಂಟಾಲ್ ಅಕ್ಕಿ ವಿತರಿಸಲಾಗಿದೆ. ಅಷ್ಟೇ ಅಲ್ಲದೆ ನಿತ್ಯವೂ ದೇವಸ್ಥಾನದ ವತಿಯಿಂದ 1,000 ಸಾವಿರ ಮಂದಿಗೆ ಅನ್ನದಾನ ನೀಡಲಾಗುತ್ತಿದೆ.

    ಕುದ್ರೋಳಿ ಕ್ಷೇತ್ರದ ವತಿಯಿಂದ ನೀಡಲಾಗುತ್ತಿರುವ ನೆರವಿಗೆ ಭಕ್ತರು ಕೊಡುಗೈ ದಾನಿಗಳು ನೆರವು ನೀಡುತ್ತಿದ್ದಾರೆ. ದಿನದಿಂದ ದಿನಕ್ಕೆ ಕ್ಷೇತ್ರದ ವತಿಯಿಂದ ನೀಡಲಾಗುತ್ತಿರುವ ಅಕ್ಕಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಕಷ್ಟದಲ್ಲಿರುವ ಎಲ್ಲರಿಗೂ ಅಕ್ಕಿ ವಿತರಣೆ ನಡೆಯಲಿದೆ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ತಿಳಿಸಿದ್ದಾರೆ. ಮುಜರಾಯಿ ಇಲಾಖೆಗೆ ಸೇರದಿರುವ ಒಂದು ದೇವಸ್ಥಾನ ಈ ರೀತಿಯ ಪುಣ್ಯದ ಕೆಲಸ ಮಾಡುತ್ತಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

  • ಮೈಸೂರಿನಂತೆ ಮಂಗ್ಳೂರು, ಗದಗದಲ್ಲೂ ನಾಡಹಬ್ಬದ ಸಂಭ್ರಮ

    ಮೈಸೂರಿನಂತೆ ಮಂಗ್ಳೂರು, ಗದಗದಲ್ಲೂ ನಾಡಹಬ್ಬದ ಸಂಭ್ರಮ

    ಮಂಗಳೂರು/ಗದಗ: ಮೈಸೂರು ದಸರಾ ಮಾದರಿಯಲ್ಲೇ ಮಂಗಳೂರು ದಸರಾ ಖ್ಯಾತಿಯೂ ಏರುತ್ತಿದೆ. ಅಲ್ಲದೇ ಗದಗದ ಲಕ್ಷ್ಮೇಶ್ವರದಲ್ಲಿ 45 ವರ್ಷಗಳ ನಂತರ ಅದ್ಧೂರಿಯಾಗಿ 9 ದಿನಗಳವರೆಗೆ ದಸರಾ ದರ್ಬಾರ್ ನಡೆಯಲಿದ್ದು, ಲಕ್ಷ್ಮೇಶ್ವರ ಪಟ್ಟಣ ನವ ವಧುವಿನಂತೆ ಶೃಂಗಾರಗೊಂಡಿದೆ.

    ಹಿಂದೆ ದಸರಾ ಅಂದ್ರೆ ಮೈಸೂರು ಅನ್ನುವುದಷ್ಟೇ ರಾಜ್ಯದ ಜನರಿಗಿತ್ತು. ಆದ್ರೀಗ ಮಂಗಳೂರು ದಸರಾ ಕೂಡ ದೇಶದಲ್ಲಿ ಗುರುತಿಸುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಉತ್ಸವ ಕಳೆಗಟ್ಟಿದ್ದು, 10 ದಿನಗಳ ವೈಭವದ ಉತ್ಸವಕ್ಕೆ ಇಂದು ಅದ್ಧೂರಿ ಚಾಲನೆ ಸಿಗಲಿದೆ. ಅಕ್ಟೋಬರ್ 14ರಂದು ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

    ಈಗಾಗಲೇ ಇಡೀ ಮಂಗಳೂರು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ವಿಜಯದಶಮಿಯಂದು ಸುದೀರ್ಘ ದಸರಾ ಮೆರವಣಿಗೆ ನಡೆಯಲಿದೆ. 75ಕ್ಕೂ ಹೆಚ್ಚು ಸ್ತಬ್ಧಚಿತ್ರಗಳೊಂದಿಗೆ 9 ಕಿಮೀ ಉದ್ದಕ್ಕೆ 16 ಗಂಟೆಗಳ ಕಾಲ ಮೆರವಣಿಗೆ ನಡೆಯೋದು ಇಲ್ಲಿನ ವಿಶೇಷ ಅಂತ ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.

    ಇತ್ತ ಗದಗದ ಲಕ್ಷ್ಮೇಶ್ವರದಲ್ಲಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ದಸರಾ ಧರ್ಮಸಮ್ಮೇಳನದ ದರ್ಬಾರ್ ಆರಂಭವಾಗಿದೆ. ಮಂಗಳವಾರ ಶ್ರೀಗಳು ಪುರಪ್ರವೇಶಿಸಿದ್ದು, 1008 ಮುತೈದೆಯರಿಂದ ಕುಂಭಮೇಳ ಗಜರಾಜನ ಹಾಗೂ ಕುದುರೆ ಗಾಂಭಿರ್ಯ ನಡಿಗೆ, ಮಹಿಳೆಯ ಡೊಳ್ಳು ಕುಣಿತ, ಜಗ್ಗಲಗಿ, ಕರಡಿ ಮಜಲು, ವೀರಗಾಸೆ ಕುಣಿತ ಹೀಗೆ ಅನೇಕ ಜಾನಪದ ಕಲಾತಂಡಗಳು ಮೆರವಣಿಗೆಗೆ ನಡೀತು.

    9 ದಿನಗಳವರೆಗೆ ಪ್ರತಿದಿನ ಬೆಳಗ್ಗೆ ಜಗದ್ಗರುಗಳ ಇಷ್ಟ ಲಿಂಗಪೂಜೆ, ದಸರಾ ಧರ್ಮ ಸಮ್ಮೆಳನ, ಸಂಗೀತ, ಕವಿಗೊಷ್ಠಿ, ಉಪನ್ಯಾಸ ಹೀಗೆ ಅನೇಕ ಕಾರ್ಯಕ್ರಮಗಳು ಜರುಗಲಿವೆ. ಜಗದ್ಗುರುಗಳ ಪಲ್ಲಕ್ಕಿ ಉತ್ಸವ ಮೂಲಕ ದಸರಾ ಸಮ್ಮೇಳನಕ್ಕೆ ಚಾಲನೆ ನೀಡಲಾಯ್ತು ಅಂತ ಮುಕ್ತಿಮಂದಿರದ ವಿಮಲ ರೇಣುಕ ಶಿವಾಚಾರ್ಯಸ್ವಾಮೀಜಿ ಹೇಳಿದ್ದಾರೆ.

    ಒಟ್ಟಿನಲ್ಲಿ ಕಡಲತಡಿ ಮಂಗಳೂರು, ಗದಗದ ಲಕ್ಷ್ಮೇಶ್ವರ 10 ದಿನಗಳ ಕಾಲ ದಸರಾ ಸಂಭ್ರಮದಲ್ಲಿ ಮಿಂದೇಳಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶದಾದ್ಯಂತ ದೀಪಾವಳಿ ಸಂಭ್ರಮ- ಕುದ್ರೋಳಿಯಲ್ಲಿ ಗೂಡು ದೀಪಗಳ ಚಿತ್ತಾರ

    ದೇಶದಾದ್ಯಂತ ದೀಪಾವಳಿ ಸಂಭ್ರಮ- ಕುದ್ರೋಳಿಯಲ್ಲಿ ಗೂಡು ದೀಪಗಳ ಚಿತ್ತಾರ

    ಮಂಗಳೂರು: ದೀಪಾವಳಿ ಬಂದರೆ ಸಾಕು ಕರಾವಳಿಯ ಮನೆ ಮನೆಗಳಲ್ಲಿ ಗೂಡುದೀಪಗಳು ಬೆಳಗುತ್ತಿದ್ದವು. ಆದರೆ ಈ ಬಾರಿ ಅಲ್ಲಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗ ಸಹಸ್ರಾರು ಸಂಖ್ಯೆಯಲ್ಲಿ ಗೂಡುದೀಪಗಳು ಕಂಗೊಳಿಸುತ್ತಿವೆ. ಒಂದನ್ನೊಂದು ಮೀರಿಸುವ ಈ ಗೂಡುದೀಪಗಳು ಜನರನ್ನು ತನ್ನತ್ತ ಸೆಳೆಯುತ್ತಿವೆ.

    ದೀಪಗಳಿಂದಾಗಿರೋ ದೋಣಿ, ನವಿಲಿನಾಕೃತಿಯೊಳಗೆ ಬೆಳಕು, ಗೂಡುದೀಪದಲ್ಲಿ ಯಕ್ಷಗಾನ ಕಲಾವಿದರ ಚಿತ್ತಾರ, ಗೂಡುದೀಪಗಳ ಬೆಳಕಲ್ಲಿ ರಾಮಮಂದಿರ ಪರಿಕಲ್ಪನೆ, ಕಡಲೇಕಾಯಿ ಬೀಜದಲ್ಲಿ ಗೂಡುದೀಪ- ಹೀಗೆ ವಿವಿಧ ರೀತಿಯಲ್ಲಿ ಒಂದಕ್ಕಿಂತಾ ಒಂದು ಅದ್ಭುತವಾಗಿ ಕಂಗೊಳಿಸುತ್ತಿವೆ.

    ಸ್ಥಳೀಯ ವಾಹಿನಿ ಸುಮಾರು 18 ವರ್ಷಗಳಿಂದ ದೀಪಾವಳಿ ಹಬ್ಬದಂದು ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದೊಂದಿಗೆ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿಕೊಂಡು ಬರುತ್ತಿದೆ.

    ದೀಪಾವಳಿ ಹಬ್ಬ ಬಂತು ಎಂದರೆ ತುಳುನಾಡಿನ ಪ್ರತಿ ಮನೆಗಳ ಮುಂದೆ ಗೂಡು ದೀಪಗಳು ಚಿತ್ತಾರಗೊಳ್ಳುತ್ತವೆ. ಯುವ ಪೀಳಿಗೆಯಲ್ಲಿ ಗೂಡುದೀಪಗಳನ್ನು ಹಾಕುವ ಸಂಪ್ರದಾಯ ರೂಢಿಸಬೇಕೆಂಬ ನಿಟ್ಟಿನಲ್ಲಿ ವಾಹಿನಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುತ್ತದೆ.

    ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಿಂದ ಸಾವಿರಾರು ಸ್ಪರ್ಧಾಳುಗಳು ಭಾಗಿಯಾಗಿ ತಮ್ಮ ಕಲೆಯನ್ನು ಪ್ರದರ್ಶಿಸುತ್ತಾರೆ. ಈ ಗೂಡುದೀಪಗಳನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ.