Tag: Kudroli Shri Gokarnanatheshwara Kshetra

  • ಕಣ್ಮನ ಸೆಳೆಯುವ ಕುದ್ರೋಳಿ ದಸರಾ ವೈಭವ

    ಕಣ್ಮನ ಸೆಳೆಯುವ ಕುದ್ರೋಳಿ ದಸರಾ ವೈಭವ

    ರ್ನಾಟಕದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ನಾಡಹಬ್ಬ ದಸರವು ಪ್ರಮುಖವಾದದ್ದು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ದಸರವನ್ನೂ ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದಲ್ಲಿ (Kudroli Shri Gokarnanatheshwara Kshetra) ದಸರಾ ವೈಭವದಿಂದ ನಡೆಯುತ್ತದೆ. ಇದನ್ನು ವಿಜಯದಶಮಿ, ನವರಾತ್ರಿ ಹಬ್ಬ ಎಂತಲೂ ಕರೆಯುತ್ತಾರೆ.

    ಹತ್ತು ದಿನಗಳ ಕಾಲ ನಗರವನ್ನು ವಿವಿಧ ಬಗೆಯ ಬಣ್ಣ ಬಣ್ಣದ ಬಲ್ಬ್, ದೀಪಗಳಿಂದ ಅಲಂಕರಿಸುತ್ತಾರೆ. ಇದನ್ನು ನೋಡೋದೆ ಕಣ್ಣಗಳಿಗೆ ಒಂದು ಹಬ್ಬ. ನಾನಾ ರೀತಿಯ ವೇಷಗಳಿಂದ ಮನರಂಜನೆ ನೀಡುವ ಸಿಂಹ ಮತ್ತು ಕರಡಿ ಹುಲಿ ಕುಣಿತ ಮುಂತಾದವುಗಳನ್ನು ನಾವಿಲ್ಲಿ ಕಾಣಬಹುದು. ಒಟ್ಟಿನಲ್ಲಿ ಇಡೀ ಮಂಗಳೂರು ನಗರವೇ ಬೆಳಕಿನಲ್ಲಿ ಕಂಗೊಳಿಸುತ್ತಿರುತ್ತದೆ.

    ಬಿ ಆರ್ ಕರ್ಕೇರ ಅವರು ಮಂಗಳೂರು ದಸರವನ್ನು ಮೊದಲು ಪ್ರಾರಂಭಿಸಿದರು. ಮಂಗಳೂರಿನ (Mangaluru) ಗೋಕರ್ನಾಥೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಬಹಳ ವಿಜೃಂಭಣೆಯಿಂದ ಆಚರಿಸುವ ಉತ್ಸವ. ಅದೇ ಸಡಗರದಿಂದ ಆಚರಿಸುವ ಮತ್ತೊಂದು ಉತ್ಸವ ಅಂದರೆ ನವರಾತ್ರಿ. ನವರಾತ್ರಿಯ ಸಂದರ್ಭದಲ್ಲಿ ಶಾರದಾದೇವಿ ಸೇರಿದಂತೆ ಹಲವು ಮೂರ್ತಿಗಳನ್ನು ವೈದಿಕ ಸಾಂಪ್ರದಾಯದಂತೆ ಪ್ರತಿಷ್ಠಾಪಿಸಲಾಗುತ್ತದೆ. 9 ದಿನಗಳ ಕಾಲ ಭಕ್ತಿಯಿಂದ ಪೂಜಿಸಲಾಗುತ್ತದೆ. ನವ ದುರ್ಗೆಯರ ಜೊತೆಗೆ ಮಹಾಗಣಪತಿ ಮತ್ತು ಶಾರದಾದೇವಿಗೂ ವಿಶೇಷ ಪೂಜೆ ನಡೆಯುತ್ತದೆ. ಮಹಾಗಣಪತಿ ಮತ್ತು ಶಾರದೆ ಹಾಗೂ ನವದುರ್ಗೆಯರಾದ ಆದಿಶಕ್ತಿ, ಶೈಲ ಪುತ್ರಿ, ಸ್ಕಂದಾಮಾತಾ, ಕತ್ಯಾಯನಿ, ಕಾಳರಾತ್ರಿ, ಮಹಾ ಗೌರಿ ಸಿದ್ಧಿದಾತ್ರಿ, ಬ್ರಹ್ಮಚಾರಿಣಿ ಚಂದ್ರಘಂಟಾ, ಕೂಷ್ಮಂಡಾಯಿನಿ, ದುರ್ಗೆಯರಿಗೆ ವಿಷೇಶ ಪೂಜೆ ನಡೆಯುತ್ತದೆ.

    ಕುದ್ರೋಳಿ ದಸರಾ (Kudroli Dasara) ಬಂತೆಂದರೆ ಸಾಕು ಊರ ಜನರಿಗೆ ಹಬ್ಬ. ಪರವೂರಿನವರನ್ನು ತನ್ನತ್ತ ಆಕರ್ಷಿಸು ಶಕ್ತಿ ಮಾತೆಗೆ ಇದೆ. ಮಂಗಳ ದೇವಿಯಿಂದ ಮಂಗಳೂರು ಎಂಬ ಹೆಸರು ಬಂದಿದೆ. ಮಂಗಳ ದೇವಿ ದೇವಸ್ಥಾನದಲ್ಲೂ ದಸರವನ್ನು ಆಚರಿಸಲಾಗುತ್ತದೆ. ಜಾನಪದ ಸಂಗೀತ ನಾಟಕ ವಿವಿಧ ವಿಷಯಗಳ ನಾಟಕಗಳು ಮತ್ತು ಭಕ್ತಿ ಗೀತೆಗಳು ಅಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಂಗಳದೇವಿ ದೇವಸ್ಥಾನವು ಏರ್ಪಡಿಸುತ್ತದೆ. ಮಹಾನವಮಿಯಂದು ಎಲ್ಲಾ ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ. ಸುಂದರವಾಗಿ ಅಲಂಕೃತ ಗೊಂಡ ದೇವಿಯನ್ನು ರಥದ ಮೇಲೆ ಕೂರಿಸಿ ನಂತರ ಭವ್ಯವಾದ ರಥವನ್ನು ಎಳೆಯಲಾಗುತ್ತದೆ. ವಿವಿಧ ದೇವತೆಗಳಿಂದ ಕೂಡಿರುವ ರಥವು ವರ್ಣ ರಂಜಿತವಾಗಿ ಕಾಣುತ್ತದೆ. ಮೆರವಣಿಗೆಯು ಮರ್ನಮಿ ಕಟ್ಟವನ್ನು ತಲುಪಿದ ನಂತರ ಅಲ್ಲಿ ದೇವಿಯನ್ನು ಭಕ್ತಿ ಪೂರ್ವಕವಾಗಿ ಪೂಜಿಸಲಾಗುವುದು.

    ವಿವಿಧ ಕಲೆಗಳಿಂದ ಮೇಳೈಸುವ ಮೆರವಣಿಗೆ:

    ವಿಜಯದಶಮಿಯ ದಿನದಂದು ಸಂಜೆಯ ಹೊತ್ತು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗುತ್ತದೆ. ಮಾರನೆಯ ದಿನ ಮುಂಜಾನೆಯ ಹೊತ್ತಿಗೆ ದೇವಸ್ಥಾನದ ಸಂಕೀರ್ಣದಲ್ಲಿರುವ ಪುಷ್ಕರಣಿಯಲ್ಲಿ ವಿಗ್ರಹಗಳ ವಿಸರ್ಜನೆಯೊಂದಿಗೆ ಕೊನೆಗೊಳ್ಳುತ್ತದೆ. ಪೂಜಿಸಿದಂತ ಎಲ್ಲಾ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುವುದು. ಮೆರವಣಿಗೆಯಲ್ಲಿ ಎಲ್ಲಾ ರೀತಿಯ ಕಲಾಪ್ರಕಾರಗಳು ಮೇಳೈಸುತ್ತವೆ. ಚಂಡೆ ವಾದನ ಬ್ಯಾಂಡ್, ವೈವಿಧ್ಯಮಯ ಅಲಂಕಾರಗಳು, ಜನಪದ ನೃತ್ಯ ಯಕ್ಷಗಾನ ಪಾತ್ರಗಳು, ಡೊಳ್ಳು ಕುಣಿತ, ಹುಲಿಕುಣಿತ ಹೀಗೆ ಎಲ್ಲಾ ಸಾಂಸ್ಕೃತಿಕ ಕಲೆಗಳನ್ನು ನಾವು ಈ ಮೆರವಣಿಗೆಯಲ್ಲಿ ಕಾಣಬಹುದು. ಮೆರವಣಿಗೆಯು ಕುದ್ರೋಳಿಯಿಂದ ಪ್ರಾರಂಭವಾಗಿ ಮಣ್ಣಗುಡ್ಡೆ, ಲೇಡಿಹಿಲ್, ಲಾಲ್ ಬಾಗ್, ಕೆಎಸ್ ರಾವ್ ರಸ್ತೆ, ಹಂಪನಕಟ್ಟೆ, ಕಾರ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿಬರುತ್ತದೆ.

     

    ಮಂಗಳೂರು ದಸರವನ್ನು ಮಂಗಳದೇವಿ ದೇವಸ್ಥಾನ, ಶ್ರೀ ವೆಂಕಟರಮಣ ದೇವಸ್ಥಾನ, ಶ್ರೀ ಜೋಡುಮುತ್ತು ದೇವಸ್ಥಾನಗಳು ಸೇರಿ ಸಂಭ್ರಮದಿಂದ ಆಯೋಜಿಸುತ್ತದೆ. ಪ್ರಮುಖವಾಗಿ ಶಾರದಾ ಪೂಜೆಯನ್ನು ಆಯೋಜಿಸಲು ವಿವಿಧ ಸಮಿತಿಗಳಿವೆ. ಸಾರ್ವಜನಿಕ ಶ್ರೀ ಶಾರದಾ ಪೂಜಾ ಮಹೋತ್ಸವ ಆಚಾರ್ಯ ಮಠ ಬ್ರಹ್ಮ ವಿದ್ಯಾ ಪ್ರಬೋಧಿನಿ ಶ್ರೀ ಶಾರದಾ ಪೂಜಾ ಮಹೋತ್ಸವ ಜೋಡುಮಠ, ರಥ ಬೀದಿ ಬಾಲಕರ ಶಾರದ ಮಹೋತ್ಸವ ಗೋಕರ್ಣ ಮಠ ಟ್ಯಾಂಕ್ ಕಾಲೋನಿ ಶಾರದ ಮಹೋತ್ಸವ, ವಿಟಿ ರಸ್ತೆ ಬಾಲಕರ ವೃಂದ ಇತ್ಯಾದಿ ಸಮಿತಿಯನ್ನು ಕಾಣಬಹುದಾಗಿದೆ.

    ಮಂಗಳೂರಿನ ಬ್ರಹ್ಮ ವಿದ್ಯಾ ಪ್ರಬೋಧಿನಿ ಜೋಡುಮಠದಲ್ಲೂ ಶ್ರೀ ಶಾರದಾ ಪೂಜೆ ಮಹೋತ್ಸವವು ನವರಾತ್ರಿಯ ಕಾಲದಲ್ಲಿ ಆರೇಳು ದಿನಗಳ ಕಾಲ ಆಚರಿಸಲಾಗುತ್ತದೆ. ಜೋಡು ಮಠದ ಆವರಣದಲ್ಲಿ ಶಾರದಾ ದೇವಿಯ ವಿಗ್ರಹವನ್ನು ಸ್ಥಾಪಿಸಲಾಗುತ್ತದೆ. ಮೂಲ ನಕ್ಷತ್ರದಿಂದ ಶ್ರವಣ ನಕ್ಷತ್ರದವರೆಗೆ ಪೂಜೆ ನಡೆಯುತ್ತದೆ. ದೇವಿಗೆ ವಿವಿಧ ಅಲಂಕಾರದೊಂದಿಗೆ ಪೂಜಾ ಕೈಂಕರ್ಯವನ್ನು ನೆರವೇರಿಸಲಾಗುತ್ತದೆ. ನವರಾತ್ರಿಯ ಏಕದಶಿ ದಿನದಂದು ಶೋಭಾ ಯಾತ್ರೆಯಲ್ಲಿ ನಿಮಜ್ಜನದೊಂದಿಗೆ ಆರಾಧನೆ ಮುಕ್ತಾಯಗೊಳ್ಳುತ್ತದೆ. ಮಂಗಳೂರಿನಲ್ಲಿ ಮೂಲೆಮೂಲೆಯಲ್ಲೂ ಹಬ್ಬದ ವಾತಾವರಣ ಮನೆ ಮಾಡುತ್ತದೆ.

    ಕಾರ್ ಸ್ಟ್ರೀಟ್‌ನ ಶ್ರೀ ವೆಂಕಟರಮಣ ದೇವಸ್ಥಾನದಲ್ಲೂ ನವರಾತ್ರಿಯ ಸಮಯದಲ್ಲಿ ಆ ಏಳು ದಿನಗಳ ಕಾಲ ಮಂಗಳೂರು ಶಾರದೋತ್ಸವ, ಶಾರದ ಮಹೋತ್ಸವವನ್ನು ಆಚರಣೆ ಮಾಡಲಾಗುತ್ತದೆ. ಶಾರದಾ ದೇವಿಯ ವಿಗ್ರಹವನ್ನು ಕಾರ್ ಸ್ಟ್ರೀಟ್‌ನ ಶ್ರೀ ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠದ ಆವರಣದಲ್ಲಿ ಸ್ಥಾಪಿಸಲಾಗುತ್ತದೆ. ಭವ್ಯವಾದ ಮೆರವಣಿಗೆಯಲ್ಲಿ ಶಾರದ ದೇವಿಯ ವಿಗ್ರಹವನ್ನು ಮೊದಲು ದಿ ಗ್ರೇಟ್ ದರ್ಬಾರ್ ಬೀದಿ ವರ್ಕ್ಸ್, ಬಂದರ್‌ನಿಂದ ಮಠದ ಆವರಣಕ್ಕೆ ತಂದು ಭವ್ಯವಾದ ಮೆರವಣಿಗೆಯೊಂದಿಗೆ ಈ ಉತ್ಸಾಹವು ಮುಕ್ತಾಯಗೊಳ್ಳುವುದು. ಭವ್ಯವಾದ ಮೆರವಣಿಗೆಯನ್ನು ಕಣ್ತುಂಬಿಸಿಕೊಳ್ಳಲು ಸಾವಿರಾರು ಜನಸಂಖ್ಯೆಯಲ್ಲಿ ಭಕ್ತಾದಿಗಳು ಸೇರುತ್ತಾರೆ. ಮೆರವಣಿಗೆ ಕೊನೆಗೊಂಡ ಮೇಲೆ ಬೆಳಗಿನ ಹೊತ್ತಿನಲ್ಲಿ ಮಹಾಮಾಯ ದೇವಸ್ಥಾನದ ಸರೋವರದಲ್ಲಿ ವಿಗ್ರಹವನ್ನು ನಿಮಜ್ಜನಗೊಳಿಸಲಾಗುತ್ತದೆ.

  • Photo Gallery | ಮಂಗಳೂರು ದಸರಾ ವೈಭವ – ಶಾರದಾ ಮಾತೆಗೆ ಅಷ್ಟ ದಿನದ ಅಲಂಕಾರ

    Photo Gallery | ಮಂಗಳೂರು ದಸರಾ ವೈಭವ – ಶಾರದಾ ಮಾತೆಗೆ ಅಷ್ಟ ದಿನದ ಅಲಂಕಾರ

    ಮಂಗಳೂರಿನ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. 9 ದಿನಗಳ ಕಾಲ ಈ ಕ್ಷೇತ್ರದಲ್ಲಿ ಪೂಜಿಸಲ್ಪಡುವ ನವದುರ್ಗೆಯರ ಮೂರ್ತಿಯೊಂದಿಗೆ ಶಾರದಾ ಮಾತೆಯ ಮೂರ್ತಿಯೂ ಪ್ರತಿಷ್ಠಾಪನೆಗೊಂಡಿದೆ. ಶಾರದಾ ಮಾತ್ರೆಗೆ ದಿನಕ್ಕೊಂದು ರೀತಿಯಲ್ಲಿ ವಿಶೇಷ ಅಲಂಕಾರ ಮಾಡುವ ಮೂಲಕ ದಸರಾ ವೈಭವಕ್ಕೆ ಮೆರುಗು ನೀಡಲಾಗುತ್ತಿದೆ. ಮಾತೆ ದರ್ಶನಕ್ಕೆ ಬರುವ ಭಕ್ತರು ಅದ್ಧೂರಿ ಅಲಂಕಾರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಹಾಗೆಯೇ ಕುದ್ರೋಳಿ‌ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಿಸಲ್ಪಡುವ ಶಾರದಾ ಮಾತೆಗೆ ನವರಾತ್ರಿಯ 8ನೇ ದಿನದ ದಿವ್ಯಾಲಂಕಾರ SPOTLIGHT PRODUCTIONS ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ…

  • ಕೈ ಬೀಸಿ ಕರೆಯುತ್ತಿದೆ ಮಂಗಳೂರು ದಸರಾ – ಬರೋಬ್ಬರಿ 22 ಲಕ್ಷ ಬಲ್ಬುಗಳಿಂದ ಅಲಂಕಾರ

    ಕೈ ಬೀಸಿ ಕರೆಯುತ್ತಿದೆ ಮಂಗಳೂರು ದಸರಾ – ಬರೋಬ್ಬರಿ 22 ಲಕ್ಷ ಬಲ್ಬುಗಳಿಂದ ಅಲಂಕಾರ

    ಮಂಗಳೂರು: ದಸರಾ ಎಂದರೆ ಮೊದಲು ನೆನಪಾಗುವುದು ಮೈಸೂರು ದಸರಾ(Mysuru Dasara). ಇತ್ತೀಚಿನ ದಿನಗಳಲ್ಲಿ ಮಂಗಳೂರು ದಸರಾ (Mangaluru Dasara) ಕೂಡ ಮೈಸೂರು ದಸರಾದಷ್ಟೇ ಪ್ರಖ್ಯಾತಿ ಪಡೆದಿದೆ. ಇದೀಗ ದಸರಾ ಸಂಭ್ರಮದಲ್ಲಿ ಬೆಳಕಿನ ಚಿತ್ತಾರದಿಂದ ಎಲ್ಲರನ್ನೂ ಸ್ವಾಗತಿಸಲು ಸಿದ್ಧವಾಗಿ ನಿಂತಿದೆ.

    ಮಂಗಳೂರು ದಸರಾ ನಡೆಯುತ್ತಿರುವ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ (Kudroli Shri Gokarnanatheshwara Kshetra) ಸಂಜೆಯಾಗುತ್ತಿದ್ದಂತೆ ಭೂಲೋಕದ ಸ್ವರ್ಗದಂತೆ ಕಂಗೊಳಿಸುತ್ತದೆ. ದಸರಾ ಮೆರವಣಿಗೆ (Dasara Procession) ಹಾದುಹೋಗುವ ನಗರದ ಸುಮಾರು 7ಕಿ.ಮೀ. ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಬರೋಬ್ಬರಿ 22 ಲಕ್ಷ ಬಲ್ಬುಗಳನ್ನು ಬಳಸಿ ದೀಪಾಲಂಕಾರ ಮಾಡಲಾಗಿದೆ. ಈ ಬೆಳಕಿನ ಚಿತ್ತಾರ ಮಂಗಳೂರು ದಸರಾವನ್ನು ಮತ್ತಷ್ಟು ಕಂಗೊಳಿಸುವಂತೆ ಮಾಡಿದೆ.ಇದನ್ನೂ ಓದಿ: BBK 11: ಕಂಟೆಂಟ್‌ಗೋಸ್ಕರ ಲವ್ ಆಗುತ್ತಾ?: ಚೈತ್ರಾಗೆ ಅನುಷಾ ಪ್ರಶ್ನೆ

    7 ಕಿ.ಮೀ. ರಸ್ತೆಯುದ್ದಕ್ಕೂ ಮಾಡಿರುವ ವಿದ್ಯುತ್ ದೀಪಾಲಂಕಾರದಲ್ಲಿ 10 ಲಕ್ಷ ದೊಡ್ಡ ಪ್ರಮಾಣದ ಬಲ್ಬ್ಗಳು ಸೇರಿದಂತೆ ಒಟ್ಟು 22 ಲಕ್ಷಕ್ಕೂ ಅಧಿಕ ಬಲ್ಬ್ಗಳಿಂದ ಶೃಂಗರಿಸಲಾಗಿದೆ. ದಸರಾದ ಹಿನ್ನೆಲೆಯಲ್ಲಿ ನವರಾತ್ರಿ ಆರಂಭಗೊಂಡ ಮೊದಲ ದಿನದಿಂದ 10 ದಿನಗಳ ಕಾಲ ಸಂಜೆ 7 ಗಂಟೆಯಾಗುತ್ತಿದ್ದAತೆ ನಗರವು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತದೆ. ವಾಹನ ಜನಜಂಗುಳಿಯಿಂದ ಕೂಡಿದ ರಸ್ತೆಗಳು ಇದೀಗ ಬೆಳಕಿನ ಚಿತ್ತಾರದಿಂದ ಮಧುವಣಗಿತ್ತಿಯಂತೆ ಅಲಂಕೃತಗೊಂಡಿದೆ.

    ಮಂಗಳೂರು ದಸರಾವನ್ನು ಕಟ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಅ.13 ರಂದು ಅದ್ದೂರಿ ದಸರಾ ಮೆರವಣಿಗೆ ನಡೆಯಲಿದ್ದು, ಭರ್ಜರಿಯಾಗಿ ಅಲಂಕೃತಗೊಂಡಿದೆ.ಇದನ್ನೂ ಓದಿ: ಇವಿಎಂ ಹ್ಯಾಕ್‌ ಮಾಡಲಾಗಿದೆ: ಹರಿಯಾಣ ಸೋಲಿನ ಬಗ್ಗೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

  • Photo Gallery | ಮಂಗಳೂರು ನವರಾತ್ರಿ ಉತ್ಸವ – ಶಾರದಾ ಮಾತೆಗೆ 6ನೇ ದಿನದ ಶೃಂಗಾರ

    Photo Gallery | ಮಂಗಳೂರು ನವರಾತ್ರಿ ಉತ್ಸವ – ಶಾರದಾ ಮಾತೆಗೆ 6ನೇ ದಿನದ ಶೃಂಗಾರ

    ಮಂಗಳೂರಿನ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಕಳೆಗಟ್ಟಿದೆ. 9 ದಿನಗಳ ಕಾಲ ಈ ಕ್ಷೇತ್ರದಲ್ಲಿ ಆರಾಧನೆಗೊಳ್ಳಲಿರುವ ನವದುರ್ಗೆಯರ ಮೂರ್ತಿಯೊಂದಿಗೆ ಶಾರದಾ ಮಾತೆಯ ಮೂರ್ತಿಯನ್ನೂ ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರತಿದಿನ ಶಾರದಾ ಮಾತೆಗೆ ವಿಭಿನ್ನ ಅಲಂಕಾರ ಮಾಡುವ ಮೂಲಕ ಗಮನ ಸೆಳೆಯಲಾಗುತ್ತಿದೆ. ಹಾಗೆಯೇ ಕುದ್ರೋಳಿ‌ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ‌ಪ್ರತಿಷ್ಠಾಪನೆಗೊಂಡಿರುವ ಶಾರದಾ ಮಾತೆಗೆ ನವರಾತ್ರಿಯ ಆರನೇ ದಿನದ ಶೃಂಗಾರ ಮಾಡಿದ್ದು, ವೈಭವಪೂರಿತ ಅಲಂಕಾರ ದೃಶ್ಯ SPOTLIGHT PRODUCTIONS ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ…

  • Photo Gallery | ಮಂಗಳೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ – ಶಾರದಾ ಮಾತೆಗೆ ದಿವ್ಯಾಲಂಕಾರ

    Photo Gallery | ಮಂಗಳೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ – ಶಾರದಾ ಮಾತೆಗೆ ದಿವ್ಯಾಲಂಕಾರ

    ಮಂಗಳೂರಿನ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಉತ್ಸವಕ್ಕೆ ವೈಭವೋಪೇತ ಚಾಲನೆ ಸಿಕ್ಕಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಈ ಕ್ಷೇತ್ರದಲ್ಲಿ ಆರಾಧನೆಗೊಳ್ಳಲಿರುವ ನವದುರ್ಗೆಯರ ಮೂರ್ತಿಯೊಂದಿಗೆ ಶಾರದಾ ಮಾತೆಯ ಮೂರ್ತಿಯನ್ನೂ ಪ್ರತಿಷ್ಠಾಪನೆ ಮಾಡಲಾಗಿದೆ. ಗಣಪತಿ, ಶಾರದಾ ಮಾತೆ, ಆದಿಶಕ್ತಿಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸಿದ್ಧಿಧಾತ್ರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ ಮಹಾಗೌರಿಯರಬನ್ನೂ ಇಲ್ಲಿನ ಸುಂದರ ಕಲಾಕೃತಿಗಳ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿದೆ. ಈ ಸಂದರ್ಭದಲ್ಲಿ ಶಾರದಾ ಮಾತೆಯ ಅದ್ಧೂರಿ ಅಲಂಕಾರ, ದಸರಾ ಸಂಭ್ರಮದ ಕ್ಷಣಗಳು SPOTLIGHT PRODUCTIONS ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ…

     

  • ಮಂಗಳೂರು ದಸರಾಕ್ಕೆ ಅದ್ಧೂರಿ ಚಾಲನೆ – ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ಪ್ರತಿಷ್ಠಾಪನೆ

    ಮಂಗಳೂರು ದಸರಾಕ್ಕೆ ಅದ್ಧೂರಿ ಚಾಲನೆ – ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ಪ್ರತಿಷ್ಠಾಪನೆ

    – ದಸರಾಕ್ಕೆ ಚಾಲನೆ ನೀಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

    ಮಂಗಳೂರು: ಇಲ್ಲಿನ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ (Kudroli Shri Gokarnanatheshwara Kshetra) ನಡೆಯುವ ಮಂಗಳೂರು ದಸರಾಕ್ಕೆ ಗುರುವಾರ ಚಾಲನೆ ದೊರೆಯಿತು. ನವರಾತ್ರಿಯ ಒಂಬತ್ತು ದಿನಗಳ ಕಾಲ ಈ ಕ್ಷೇತ್ರದಲ್ಲಿ ಆರಾಧನೆಗೊಳ್ಳಲಿರುವ ನವದುರ್ಗೆಯರ ಮೂರ್ತಿ (Navadurga Idol) ಪ್ರತಿಷ್ಠಾನೆ ನಡೆಯಿತು. ಈ ಬಾರಿಯ ದಸರಾಕ್ಕೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಚಾಲನೆ ನೀಡಿದರು.

    ಮಂಗಳೂರು ದಸರಾ ಮಹೋತ್ಸವವನ್ನು ಆಯೋಜಿಸುತ್ತಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದಿನಿಂದ ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಮಹೋತ್ಸವ ‘ಮಂಗಳೂರು ದಸರಾ’ಕ್ಕಿಂದು (Mangaluru Dasara) ವಿದ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದಲ್ಲಿ ವಿಘ್ನವಿನಾಶಕ ಗಣೇಶ, ವಿದ್ಯಾದೇವಿ ಶಾರದಾ ಮಾತೆ, ಆದಿಶಕ್ತಿ ಹಾಗೂ ನವದುರ್ಗೆಯರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಇದನ್ನೂ ಓದಿ: ಈ ಮೈಸೂರು ದಸರಾದ ಗಜಪಡೆ – ಅಭಿಮನ್ಯು & ಟೀಂ ಬಗ್ಗೆ ಇಲ್ಲಿದೆ ಫುಲ್‌ ಡಿಟೇಲ್ಸ್‌ 

    ಎಲ್ಲಾ ದೇವರನ್ನು ಏಕಕಾಲಕ್ಕೆ ಪ್ರತಿಷ್ಠಾಪಿಸಲಾಗಿದ್ದು, 9 ದಿನಗಳ ಕಾಲ ಪೂಜಾ ಕೈಂಕರ್ಯ ನೆರವೇರಲಿದೆ. ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಈ ಬಾರಿಯ ಮಂಗಳೂರು ದಸರಾಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ: ಶಿವಮೊಗ್ಗ ದಸರಾಗೆ ವೈಭವದ ಚಾಲನೆ

    ಈ ಸುಂದರ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಂಡ ನವದುರ್ಗೆಯರು ದೇಶ ವಿದೇಶದ ಭಕ್ತರನ್ನು ಸೆಳೆಯುತ್ತದೆ. ಗಣಪತಿ, ಶಾರದಾ ಮಾತೆ, ಆದಿಶಕ್ತಿಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸಿದ್ದಿದಾತ್ರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ, ಮಹಾಗೌರಿಯರನ್ನ ಇಲ್ಲಿನ ಸುಂದರ ಕಲಾಕೃತಿಗಳ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿದೆ. ಭೂಲೋಕದ ಸ್ವರ್ಗದಂತಿರುವ ಸಭಾಂಗಣದಲ್ಲಿ ಅತ್ಯಾಕರ್ಷ ಸಂಯೋಜನೆಯಲ್ಲಿ ಈ 12 ದೇವರುಗಳನ್ನು ನೋಡುವುದು ಭಕ್ತರ ಕಣ್ಣಿಗೊಂದು ಹಬ್ಬವೇ ಸರಿ. ಇದನ್ನೂ ಓದಿ: ವಿಜಯನಗರ ಸಾಮ್ರಾಜ್ಯದಿಂದ ಮೈಸೂರಿಗೆ ದಸರಾ ಸಾಗಿಬಂದ ಹಾದಿ – ನಾಡಹಬ್ಬ ಸಂಸ್ಕೃತಿ ನಿಮಗೆಷ್ಟು ಗೊತ್ತು?

    ಮೈಸೂರು ದಸರಾಕ್ಕೆ ಇದು ಸರಿಸಾಟಿ ಎಂದು ಭಕ್ತರು ಬಣ್ಣಿಸುತ್ತಾರೆ. ಈ ರೀತಿ ನವರಾತ್ರಿಯ ಸಂದರ್ಭ ದೇವರ ಪ್ರತಿಷ್ಠಾಪನೆ ದೇಶದ ಬೇರೆಲ್ಲೂ ಆಗೋದಿಲ್ಲ ಅನ್ನುವುದು ಇಲ್ಲಿನ ವಿಶೇಷತೆ. ಇದನ್ನೂ ಓದಿ: ದಿನೇಶ್ ಗುಂಡೂರಾವ್ ಗೋಹತ್ಯೆಗೆ ಬೆಂಬಲ ನೀಡುತ್ತಿದ್ದಾರೋ, ಗೋಮಾಂಸ ತಿನ್ನೋದನ್ನ ಸಮರ್ಥನೆ ಮಾಡ್ತಿದ್ದಾರೋ?- ಸಿ.ಟಿ.ರವಿ

    ಕ್ಷೇತ್ರದಲ್ಲಿ ಒಂಬತ್ತು ದಿನಗಳ ಕಾಲ ಪೂಜೆಗೊಳ್ಳುವ ಈ ಎಲ್ಲಾ ಮೂರ್ತಿಗಳನ್ನು ಅಕ್ಟೋಬರ್ 13 ರಂದು ದೇವಸ್ಥಾನದಲ್ಲೇ ವಿಸರ್ಜನಾ ಪೂಜೆ ನಡೆಸಿ ಕ್ಷೇತ್ರಕ್ಕೆ ಪ್ರದಕ್ಷಿಣೆ ಹಾಕಿ, ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುವುದು. ಸಂಭ್ರಮದ ಮಂಗಳೂರು ದಸರಾಕ್ಕೆ ನೀವೂ ಬನ್ನಿ.