Tag: Kukke Subramanya

  • ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಸುಬ್ರಹ್ಮಣ್ಯದಲ್ಲಿ ಥಳಿತ

    ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಸುಬ್ರಹ್ಮಣ್ಯದಲ್ಲಿ ಥಳಿತ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ(Moral Policing) ಮತ್ತೆ ಮುಂದುವರಿದಿದ್ದು ಇದೀಗ ಕುಕ್ಕೆ ಸುಬ್ರಹ್ಮಣ್ಯ(Kukke Subramanya) ಕ್ಷೇತ್ರಕ್ಕೂ ಕಾಲಿಟ್ಟಿದೆ.

    ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪರಿಸರದಲ್ಲಿ ಹಿಂದೂ(Hindu) ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ (Muslim) ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಇದನ್ನೂ ಓದಿ: ಐಸಿಸ್‌ ಜೊತೆ ಲಿಂಕ್‌ – ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಾಯಕನ ಮಗ ಅರೆಸ್ಟ್‌

    ಕುಕ್ಕೆ ಸುಬ್ರಹ್ಮಣ್ಯದ ಬಸ್ ನಿಲ್ದಾಣದ ಬಳಿ ಹಿಂದೂ ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಸುಳ್ಯದ ಕಲ್ಲಗುಂಡಿ ನಿವಾಸಿ ಅಫೀದ್ ಎಂಬಾತನಿಗೆ ಯುವಕರ ಗುಂಪೊಂದು ಕುಮಾರಧಾರ ನದಿ ಬಳಿಯ ನಿರ್ಜನ‌ ಪ್ರದೇಶದಲ್ಲಿ ಥಳಿಸಿದೆ.

    ಹಲ್ಲೆಗೊಳಗಾದ ಯುವಕ ಅಫೀದ್ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಈ ನಡುವೆ ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆಯೂ ಪೊಲೀಸ್ ದೂರು ನೀಡಿದ್ದು ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ

    ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ

    -ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವಕ್ಕೂ ಧರ್ಮ ದಂಗಲ್ ಕರಿನೆರಳು
    -ಮುಸ್ಲಿಂ ವ್ಯಾಪಾರಸ್ಥರಿಗೆ ಬಹಿಷ್ಕಾರ

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ (Kukke Subramanya) ಚಂಪಾಷಷ್ಠಿ ಉತ್ಸವಕ್ಕೆ ಈ ಬಾರಿ ಧರ್ಮ ದಂಗಲ್‌ನ ಕರಿನೆರಳು ಬಿದ್ದಿದೆ. ಹಲವಾರು ವರ್ಷಗಳಿಂದ ಜಾತ್ರೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಮರಿಗೆ ಈ ಬಾರಿ ಹಿಂದೂ ಸಂಘಟನೆಗಳು ಬಹಿಷ್ಕಾರ ಹಾಕಿದೆ. ಹೀಗಾಗಿ ಮುಸ್ಲಿಮರು ಜಾತ್ರೆಯ ವ್ಯಾಪಾರಕ್ಕೆ ಬಾರದೆ ಧರ್ಮ ದಂಗಲ್‌ನ ಆತಂಕದಲ್ಲಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಘರ್ಷವಿಲ್ಲದೇ ಜಾತ್ರೆ ಸಂಪನ್ನಗೊಂಡಿದೆ.

    ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿಗೆ ಧರ್ಮದಂಗಲ್‌ನ ಕರಿನೆರಳು ಬೀರಿದೆ. ಈ ಬಾರಿ ಚಂಪಾಷಷ್ಠಿಗೆ ಮುಸ್ಲಿಂ ವ್ಯಾಪಾರಿಗಳು ಬರಬಾರದು ಅಂತಾ ಹಿಂದೂ ಸಂಘಟನೆಗಳು ತಾಕೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಚಂಪಾಷಷ್ಠಿ ಮುಸ್ಲಿಂ ವ್ಯಾಪಾರಿಗಳಿಲ್ಲದೇ ನಡೆದಿದೆ. ಮುಸ್ಲಿಂ ವ್ಯಾಪಾರಿಗಳೂ ಹಿಂದೂ ಸಂಘಟನೆಗಳ ತಾಕೀತಿಗೆ ಮಣಿದು ವ್ಯಾಪಾರಕ್ಕೆ ಬಾರದೇ ಜಾತ್ರೋತ್ಸವದಿಂದ ದೂರವುಳಿದಿದ್ದಾರೆ. ಹೀಗಾಗಿ ಚಂಪಾಷಷ್ಠಿ ಧರ್ಮ ದಂಗಲ್‌ನ ಆತಂಕವಿಲ್ಲದೇ ನಿರಾಳವಾಗಿ ನಡೆದಿದೆ.

    ಕಳೆದ ವರ್ಷ ಕರಾವಳಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್ಟಿದೆ. ಈ ಹಿನ್ನಲೆಯಲ್ಲಿ ಚಂಪಾಷಷ್ಠಿಯ ಜಾತ್ರಾ ಸಂಧರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡಬಾರದು ಅಂತಾ ಹಿಂದೂ ಸಂಘಟನೆಗಳು ಬ್ಯಾನರ್ ಅಳವಡಿಸಿದೆ. ಜೊತೆಗೆ ಪೊಲೀಸ್ ಠಾಣೆಗೂ ದೂರು ನೀಡಿತ್ತು. ದೆಹಲಿಯ ಶ್ರದ್ಧಾ ಹತ್ಯೆ, ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ (Mangaluru Blast) ಸೇರಿದಂತೆ ಹಲವು ಪ್ರಕರಣದಲ್ಲಿ ಮುಸ್ಲಿಮರೇ ತೊಡಗಿಕೊಂಡು ರಾಷ್ಟ್ರದಲ್ಲಿ ಅಭದ್ರತೆ ಕಾರಣರಾಗಿದ್ದಾರೆ. ಹೀಗಾಗಿ ಅವರು ಕುಕ್ಕೆಯಲ್ಲಿ ವ್ಯಾಪಾರ ಮಾಡುವ ಅವಶ್ಯಕತೆ ಇಲ್ಲ ಅಂತಾ ಹಿಂದೂ ಸಂಘಟನೆಗಳು ಖಡಕ್ ಎಚ್ಚರಿಕೆ ನೀಡಿದೆ.

    ಚಂಪಾಷಷ್ಠಿಯ ಉತ್ಸವಕ್ಕೆ ಲಕ್ಷಾಂತರ ಭಕ್ತರು ಕುಕ್ಕೆಗೆ ಆಗಮಿಸಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಅಂತಾ ಕುಕ್ಕೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮುಜರಾಯಿ ಇಲಾಖೆಯ ಆದೇಶದನ್ವಯ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಅಂತಾ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮನವಿಯನ್ನೂ ಮಾಡಿತ್ತು. ಜೊತೆಗೆ ಮುಸ್ಲಿಂ ವ್ಯಾಪಾರಿಗಳು ಕ್ಷೇತ್ರದ ಆವರಣಕ್ಕೆ ಬಾರದಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿಗಾ ವಹಿಸಿದ್ದರು.

    ಈ ಬಾರಿ ಮಾತ್ರ ಅಲ್ಲ ಇನ್ನು ಮುಂದೆ ಯಾವುದೇ ಸಂದರ್ಭದಲ್ಲೂ ಮುಸ್ಲಿಮರನ್ನು‌ ನಮ್ಮ ಶ್ರದ್ಧಾ ಕೇಂದ್ರವಾದ ಕುಕ್ಕೆಗೆ ಬರಲು ಬಿಡೋದಿಲ್ಲ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಚುನಾವಣಾ ರ‍್ಯಾಲಿ ವೇಳೆ ನುಗ್ಗಿದ ಗೂಳಿ, ಸಭಿಕರು ಚೆಲ್ಲಾಪಿಲ್ಲಿ- ಬಿಜೆಪಿ ಪಿತೂರಿ ಎಂದ ರಾಜಸ್ಥಾನ ಸಿಎಂ

    ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್‌ನ ಕಾವು ಹೆಚ್ಚಾಗಿದೆ. ವ್ಯಾಪಾರ ನಿರ್ಬಂಧದ ಬಿಸಿ ಬೇರೆ ಬೇರೆ ಜಾತ್ರೋತ್ಸವಗಳಿಗೆ ಹಬ್ಬುತ್ತಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡೋದೇ ಪೊಲೀಸರಿಗೆ ಸವಾಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೆ.ಎಲ್.ರಾಹುಲ್

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೆ.ಎಲ್.ರಾಹುಲ್

    ಮಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಕೆ.ಎಲ್.ರಾಹುಲ್ (KL Rahul) ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subramanya) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಸ್ನೇಹಿತರೊಂದಿಗೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ರಾಹುಲ್‍ ಅವರನ್ನು ದೇವಾಲಯದ ಆಡಳಿತ ಮಂಡಳಿ ಸನ್ಮಾನಿಸಿದೆ. ಮಂಗಳೂರು (Mangaluru) ಮೂಲದ ಕೆ.ಎಲ್. ರಾಹುಲ್ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಮಹಾಪೂಜೆಯಲ್ಲಿ ಭಾಗಿಯಾಗಿದ್ದಾರೆ. ಇವರನ್ನು ದೇವಳದ ವತಿಯಿಂದ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಭುವನೇಶ್ವರಿ ಭಾವಚಿತ್ರಕ್ಕೆ ಭುಗಿಲೆದ್ದ ವಿವಾದ

    ಇತ್ತೀಚೆಗೆ ನಡೆದ ಟಿ-20 ವಿಶ್ವಕಪ್‍ನಲ್ಲಿ ಕೆ.ಎಲ್. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ವಿಶ್ವಕಪ್ ಮುಗಿದ ಬೆನ್ನಲ್ಲೇ ರಾಹುಲ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.  ಇದನ್ನೂ ಓದಿ: ICC ಮಾಸ್ಟರ್ ಪ್ಲ್ಯಾನ್‌ – ಹೊಸ ಮಾದರಿಯಲ್ಲಿ 2024ರ T20 ವಿಶ್ವಕಪ್

    Live Tv
    [brid partner=56869869 player=32851 video=960834 autoplay=true]

  • ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಾರಕಕ್ಕೇರಿದ ಆಡಳಿತಮಂಡಳಿ, ಕಾರ್ಯನಿರ್ವಹಣಾಧಿಕಾರಿ ಜಟಾಪಟಿ

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಾರಕಕ್ಕೇರಿದ ಆಡಳಿತಮಂಡಳಿ, ಕಾರ್ಯನಿರ್ವಹಣಾಧಿಕಾರಿ ಜಟಾಪಟಿ

    ಮಂಗಳೂರು: ದಕ್ಷಿಣ ಕನ್ನಡದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ನಡುವಿನ ಜಟಾಪಟಿ ತಾರಕಕ್ಕೇರಿದೆ. ಉಭಯ ಬಣಗಳು ಪರಸ್ಪರ ದೂರು ಪ್ರತಿದೂರಿನಲ್ಲಿ ತೊಡಗಿವೆ.

    ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪ್ರಸಿದ್ಧ ಕ್ಷೇತ್ರ ಮಾತ್ರವಲ್ಲದೆ, ರಾಜ್ಯದಲ್ಲಿ ಅತಿಹೆಚ್ಚು ಆದಾಯ ಬರುವ ಸ್ಥಳವೂ ಹೌದು. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಈ ದೇವಸ್ಥಾನದಲ್ಲಿ ಆಡಳಿತಮಂಡಳಿ – ಕಾರ್ಯನಿರ್ವಹಣಾಧಿಕಾರಿ ನಡುವಿನ ಜಟಾಪಟಿ ಬೀದಿಗೆ ಬಂದಿದೆ.

    KUKKE (1)

    ಆಡಳಿತ ಮಂಡಳಿ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ವಿರುದ್ಧ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸಾಲು-ಸಾಲು ಆರೋಪ ಮಾಡಿದ್ದಾರೆ. ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಶೀಘ್ರವಾಗಿ ಕೆಲಸ ಮಾಡಲು ಎಡವುತ್ತಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಜೂನ್ 21ರಂದು ಮೈಸೂರಿಗೆ ಬರಲಿದ್ದಾರೆ ಪ್ರಧಾನಿ ಮೋದಿ

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅವರು ವಾರದಲ್ಲಿ 4 ದಿನ ಮಾತ್ರ ಇರ್ತಾರೆ. ದಾಖಲೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ಕೊಡ್ತಿಲ್ಲ. ಹೀಗಾಗಿ ಅವರನ್ನು ಕೆಳಗಿಳಿಸಿ ಒಳ್ಳೆಯ ಅಧಿಕಾರಿಯನ್ನು ನೇಮಿಸಿ ಎಂದು ಸಚಿವ ಎಸ್‌.ಅಂಗಾರ ಹಾಗೂ ಸಚಿವೆ ಶಶಿಕಲಾ ಜೊಲ್ಲೆಗೆ ಮನವಿ ಮಾಡಿದ್ದಾರೆ.

    ಇದಕ್ಕೆ ಸ್ಪಷ್ಟನೆ ನೀಡಿರುವ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ಎರಡು-ಮೂರು ತಿಂಗಳಿನಿಂದ ಈ ರೀತಿಯ ವಿರೋಧ ಪ್ರಕಿಯೆ ನಡೆಯುತ್ತಿದೆ. ನಾನು ಕಚೇರಿ ಕೆಲಸ ಹೊರತುಪಡಿಸಿ ಬೇರೆ ಸಂಧರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಬಿಟ್ಟು ಹೊರಗೆ ಹೋಗೋದಿಲ್ಲ. ಕಚೇರಿ ಕೆಲಸವನ್ನು ದೇವರ ಕೆಲಸವೆಂದು ಭಾವಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಮಳೆಯ ಅಬ್ಬರಕ್ಕೆ ಜನ ತತ್ತರ – ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ

    ಆಡಳಿತ ಮಂಡಳಿ ಮತ್ತು ಕಾರ್ಯ ನಿರ್ವಾಹಣಾಧಿಕಾರಿಯ ನಡುವಿನ ಜಟಾಪಟಿಯಿಂದ ಭಕ್ತ ಸಮೂಹ ಬಡವಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹ ನಿರ್ಮಿಸುವ ಕಾಮಗರಿಗಳಿಗೆ ಹಿನ್ನಡೆಯಾಗಿದೆ. ಇದರಿಂದ ರಾತ್ರಿ ತಂಗಲು ವ್ಯವಸ್ಥೆಯಿಲ್ಲದೆ ಭಕ್ತರು ಕಷ್ಟಪಡುವಂತಾಗಿದೆ.

  • ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸಲ್ಲಿಸಿದ ತೆಲುಗು ಖ್ಯಾತ ನಟ ಪವನ್ ಕಲ್ಯಾಣ್

    ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸಲ್ಲಿಸಿದ ತೆಲುಗು ಖ್ಯಾತ ನಟ ಪವನ್ ಕಲ್ಯಾಣ್

    ತೆಲುಗಿನ ಸೂಪರ್ ಸ್ಟಾರ್, ರಾಜಕಾರಣಿ ಪವನ್ ಕಲ್ಯಾಣ್ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದರು. ಇಂದು ಅವರು ಕ್ಷೇತ್ರದಲ್ಲಿ ಆಶ್ಲೇಷ ಪೂಜೆ ಮತ್ತು ಆದಿ  ಸುಬ್ರಹ್ಮಣ್ಯದ ಹುತ್ತಕ್ಕೆ ವಸ್ತ್ರ ಸಮರ್ಪಣೆ ಮಾಡುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

    ಪೂಜೆ ಪುನಸ್ಕಾರಗಳು ಮುಗಿದ ನಂತರ ಪವನ್ ಕಲ್ಯಾಣ್ ಅವರಿಗೆ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಅವರಿಂದ ಸನ್ಮಾನ ಕೂಡ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪವನ್ ಕಲ್ಯಾಣ್ ಕ್ಷೇತ್ರದ ಸ್ವಚ್ಛತೆಯ ಬಗ್ಗೆ ಕೊಂಡಾಡಿದರು. ಇದನ್ನೂ ಓದಿ: ಮಿಡಲ್ ಫಿಂಗರ್ ತೋರಿಸಿದ ಪೂನಂ: ಕೈಯನ್ನ ತುಂಡು ತುಂಡಾಗಿ ಕತ್ತರಿಸ್ತೀನಿ ಎಂದ ನಟ ಆಲಿ 

    ‘ಲಕ್ಷಾಂತರ ಭಕ್ತರು ಬರುವ ಈ ದೇವಸ್ಥಾನದ ಪ್ರತೀ ಏಕಾದಶಿಯಂದು ದೇವಸ್ಥಾನದಲ್ಲಿ ನಡೆಸುವ ಸ್ವಚ್ಛತೆ ಕಂಡು ಬೆರಗಾಗಿದೆ. ಪರಿಸರ ಸ್ವಚ್ಛಾತಾ ಜಾಗೃತಿಗಾಗಿ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಈ ಕಾರ್ಯ ಎಲ್ಲ ಕಡೆಗೂ ನಡೆಯಬೇಕು. ಪರಿಸರ ಸ್ವಚ್ಛತೆಯೇ ಆದ್ಯತೆ ಆಗಬೇಕು’ ಎಂದು ಪವನ್ ಕಲ್ಯಾಣ್.  ಇದನ್ನೂ ಓದಿ: ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

    ಕುಕ್ಕೆಗೆ ಪವನ್ ಕಲ್ಯಾಣ್ ಬರುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಪಾರ ಅಭಿಮಾನಿಗಳು ಅವರನ್ನು ನೋಡಲು ಆಗಮಿಸಿದ್ದರು. ಪೂಜೆ ಮುಗಿದ ನಂತರ ಪವನ್ ಅಭಿಮಾನಿಗಳೊಂದಿಗೆ ಬೆರೆತರು.

  • ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಪೂಜೆ ಸಲ್ಲಿಸಿದ ಸುಪ್ರೀಂ ನ್ಯಾ.ಅಬ್ದುಲ್ ನಜೀರ್

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಪೂಜೆ ಸಲ್ಲಿಸಿದ ಸುಪ್ರೀಂ ನ್ಯಾ.ಅಬ್ದುಲ್ ನಜೀರ್

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಇಂದು ಆಶ್ಲೇಷ ಬಲಿ ಪೂಜೆ ಸಲ್ಲಿಸಿದ್ದಾರೆ.

    ಹೈದರಾಬಾದ್‍ನಿಂದ ಮಂಗಳೂರಿಗೆ ಕುಟುಂಬ ಸಮೇತರಾಗಿ ವಿಮಾನದಲ್ಲಿ ಬಂದ ನ್ಯಾಯಮೂರ್ತಿಗಳು ಕಾರಿನಲ್ಲಿ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

    ಆಶ್ಲೇಷ ಪೂಜೆ ಬಳಿಕ ದೇವಸ್ಥಾನದ ಆಡಳಿತ ಮಂಡಳಿಯಿಂದ ನ್ಯಾಯಮೂರ್ತಿಗಳಿಗೆ ಗೌರವ ಸಲ್ಲಿಸಲಾಯಿತು. ನ್ಯಾಯಮೂರ್ತಿಗಳ ಪೂಜಾ ಕಾರ್ಯಗಳ ಛಾಯಾಚಿತ್ರಕ್ಕೆ ನಿರ್ಬಂಧವನ್ನು ಹೇರಲಾಗಿತ್ತು. ಇದನ್ನೂ ಓದಿ: 15 ರಿಂದ 18 ವರ್ಷದವರು ಜ. 1ರಿಂದ ಕೋವಿನ್‌ನಲ್ಲಿ ಲಸಿಕೆಗೆ ಹೆಸರು ನೋಂದಾಯಿಸಬಹುದು

    ಅಬ್ದುಲ್‌ ನಜೀರ್‌ ಮೂಲತ: ಕರಾವಳಿಯವರು. ಬೆಳುವಾಯಿ, ಮೂಡುಬಿದಿರೆ ಪರಿಸರದಲ್ಲಿ ಬೆಳೆದಿದ್ದಾರೆ. ಮೂಡುಬಿದಿರೆ ಕಡಲಕೆರೆ ಸಂತ ಇಗ್ನೇಶಿಯಸ್ ಹಿರಿಯ ಪ್ರಾಥಮಿಕ ಶಾಲೆ, ಜೈನ್ ಹೈಸ್ಕೂಲ್ ಮತ್ತು ಶ್ರೀ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಹಾಗೂ ಮುಂದೆ ಮಂಗಳೂರಿನ ಎಸ್‍ಡಿಎಂ ಕಾಲೇಜಿನಲ್ಲಿ ಕಾನೂನು ಅಧ್ಯಯನ ಮಾಡಿದ್ದರು. ಇದನ್ನೂ ಓದಿ: ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ – ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್

    ಈ ಹಿಂದೆ ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ ಅಲ್ಲದೇ ಸಿನಿಮಾ ನಟರು, ರಾಜಕೀಯ ವ್ಯಕ್ತಿಗಳು ನಾಗ ದೋಷ ಪರಿಹಾರಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಆಶ್ಲೇಷ ಪೂಜೆ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ನಟ ಸುದೀಪ್ ಅವರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.

  • ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ ನೀಡಬಹುದು – ಜಿಲ್ಲಾಡಳಿತದಿಂದ ನಿರ್ಬಂಧ ತೆರವು

    ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ ನೀಡಬಹುದು – ಜಿಲ್ಲಾಡಳಿತದಿಂದ ನಿರ್ಬಂಧ ತೆರವು

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದ ನಿಬರ್ಂಧ ಹಿಂಪಡೆದು ಸಾರ್ವಜನಿಕರಿಗೆ ಮುಕ್ತ ಪ್ರವೇಶಕ್ಕೆ ಹಾಗೂ ಸೇವೆಗಳನ್ನು ನಡೆಸಲು ಷರತ್ತುಗಳನ್ನು ಪಾಲಿಸುವ ನಿಬಂಧನೆಗಳಿಗೊಳಪಟ್ಟು ಜಿಲ್ಲಾಡಳಿತ ಅನುಮತಿ ನೀಡಿದೆ. ಇದನ್ನೂ ಓದಿ:  ಗಾಂಧಿ ಜಯಂತಿಯಂದು 31ನೇ ಜಿಲ್ಲೆ ವಿಜಯನಗರಕ್ಕೆ ಅಧಿಕೃತ ಚಾಲನೆ

    ಏನಿದು ಷರತ್ತು?
    ಎರಡೂ ದೇವಾಲಯಗಳಲ್ಲಿ ಕೋವಿಡ್ ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ದೇವಾಲಯದ ಆಡಳಿತ ವರ್ಗವು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸುವ ಜವಾಬ್ದಾರಿಯನ್ನು ಹೊಂದಿರಬೇಕು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲಾ ವರ್ಗದವರು ಪ್ರತಿ 15 ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿಯನ್ನು ಹೊಂದಿರತಕ್ಕದ್ದು ಎಂದು ಆದೇಶವನ್ನು ಹೊರಡಿಸಿದೆ.

    ದೇವಾಲಯಗಳಿಗೆ ಸೇವೆಗೆ ಬರುವ ಭಕ್ತರು 2 ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಸಹ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತವಾಗಿ ಕೊರೊನಾ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ವಿದ್ಯಾಪೀಠಕ್ಕೆ ಉತ್ತಮ ಪ್ರತಿಕ್ರಿಯೆ – ಎರಡನೇ ದಿನದ ಕಾರ್ಯಕ್ರಮಗಳು ಏನು?

    ದೇವಾಲಯಗಳಿಗೆ ಬರುವ ಭಕ್ತರಿಗೆ ಕೋವಿಡ್ ಲಸಿಕೆಯನ್ನು ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿಯನ್ನು ಮೂಡಿಸುವ ಸಲುವಾಗಿ ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ, ಅಂತಹವರುಗಳಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ದೇವಾಲಯಗಳಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆಯಲು ಹಾಗೂ ಜನಸಂದಣಿಯಾಗದಂತೆ ಲಸಿಕೆ ನೀಡಲು ಕ್ರಮವಹಿಸಬೇಕು. ಇದನ್ನೂ ಓದಿ: ದಾರಿ ಮಧ್ಯೆ ಹೋಟೆಲ್‍ನಲ್ಲಿ ಸಾರ್ವಜನಿಕರಂತೆ ಟೀ ಕುಡಿದ ಸಿಎಂ

    ಮೇಲ್ಕಂಡ ದೇವಾಲಯಗಳಲ್ಲಿ ನಡೆಯುವಂತಹ ಪ್ರಮುಖ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸೇವೆಗಳನ್ನು ಆದಷ್ಟು ಮಿತಿಗೊಳಿಸುವುದು ಹಾಗೂ ಜನಸಂದಣಿಯಾಗದಂತೆ ದಿನವೊಂದಕ್ಕೆ ದೇವಾಲಯದಲ್ಲಿ ಸ್ಥಳವನ್ನು ಹೊಂದಿಕೊಂಡು ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡುವಂತೆ ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

  • ಕುಕ್ಕೆ, ಧರ್ಮಸ್ಥಳ, ಕಟೀಲ್‍ನಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

    ಕುಕ್ಕೆ, ಧರ್ಮಸ್ಥಳ, ಕಟೀಲ್‍ನಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

    – ವೀಕೆಂಡ್‍ನಲ್ಲಿ ಸಂಪೂರ್ಣ ಬಂದ್

    ಮಂಗಳೂರು: ಕೇರಳ ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಾಗಾಗಿ ಕರಾವಳಿ ಪ್ರಸಿದ್ದ ಪುಣ್ಯಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.

    ದ.ಕ ಜಿಲ್ಲೆಯಲ್ಲಿ ಅನೇಕ ಹೆಸರಾಂತ ದೇವಾಲಯಗಳಿದ್ದು ದೇವಸ್ಥಾನಕ್ಕೆ ಬರುವ ಭಕ್ತರ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು ಇಟ್ಟಿದೆ. ಆಗಸ್ಟ್ 15 ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ಯಾವುದೇ ಸೇವೆಗಳು ಇರೋದಿಲ್ಲ. ವಾರಾಂತ್ಯವಾದ ಶನಿವಾರ ಮತ್ತು ಭಾನುವಾರ ಈ ಮೂರು ದೇವಸ್ಥಾನದಲ್ಲಿ ದರ್ಶನಕ್ಕೂ ಅವಕಾಶವಿಲ್ಲ. ಇದನ್ನೂ ಓದಿ: ವೀಕೆಂಡ್‍ನಲ್ಲಿ ಪ್ರಸಿದ್ಧ ಸಿಗಂದೂರು ದೇವಾಲಯ ಬಂದ್ 

    ದೇವಸ್ಥಾನದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ನೀಡಿದ್ದು, ದೇವಸ್ಥಾನದಲ್ಲಿ ತೀರ್ಥಪ್ರಸಾದ, ಸೇವೆ ಸೇರಿದಂತೆ ಅನ್ನಸಂತರ್ಪಣೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ವಿಕೇಂಡ್‍ನಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರು ದೇವಸ್ಥಾನದ ವಸತಿ ಗೃಹಗಳಲ್ಲಿ ಉಳಿದುಕೊಳ್ಳಲು 72 ಗಂಟೆಗಳ ಒಳಗಿನ ನೆಗಟಿವ್ ವರದಿ ಕಡ್ಡಾಯಗೊಳಿಸಿದ್ದು. ಉಳಿದ ದಿನಗಳಲ್ಲಿ ಭಕ್ತರು ಕ್ಷೇತ್ರದಲ್ಲಿ ತಂಗುವುದಕ್ಕೂ ಜಿಲ್ಲಾಡಳಿತ ನಿಷೇಧ ಹೇರಿದೆ. ಒಟ್ಟಿನಲ್ಲಿ ಕೊರೊನಾ 3ನೇ ಅಲೆಯನ್ನು ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಈಗಲೇ ಸಿದ್ದತೆ ಮಾಡಿಕೊಂಡಿದ್ದು, ಜಿಲ್ಲಾಡಳಿತ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಸೂಚಿಸಿದೆ.

  • ಕುಕ್ಕೆಯಲ್ಲಿ ಶಿವರಾತ್ರಿ ಆಚರಣೆ ಚರ್ಚೆ – ನಾಳೆ ಧಾರ್ಮಿಕ ತಜ್ಞರ ಸಭೆ: ಕೋಟ ಶ್ರೀನಿವಾಸ ಪೂಜಾರಿ

    ಕುಕ್ಕೆಯಲ್ಲಿ ಶಿವರಾತ್ರಿ ಆಚರಣೆ ಚರ್ಚೆ – ನಾಳೆ ಧಾರ್ಮಿಕ ತಜ್ಞರ ಸಭೆ: ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಶಿವರಾತ್ರಿ ಪೂಜೆ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಪೂಜಾಪದ್ಧತಿಯ ಬಗ್ಗೆ ಮಾಧ್ವ, ಶೈವ ಗುಂಪುಗಳ ನಡುವೆ ಜಿಜ್ಞಾಸೆ ಮೂಡಿದ್ದು, ಎರಡೂ ಗುಂಪಿನವರನ್ನು ಕರೆದು ಮಾತನಾಡುವೆ ಎಂದು ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ ಪೂಜಾರಿ ಅವರು, ಸೋಮವಾರ ಈ ಬಗ್ಗೆ ಸಭೆ ನಡೆಸಲಾಗುವುದು. ಶಿವನ ಅಂಶ ಇರುವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆ ಮಾಡಲು ಇಲಾಖೆ ಸೂಚಿಸುತ್ತದೆ. ಕುಕ್ಕೆಯಲ್ಲಿ ಈ ಬಗ್ಗೆ ಚರ್ಚೆ ಇದ್ದರೆ ಆಗಮ ಪಂಡಿತರು ತೀರ್ಮಾನ ಕೈಗೊಳ್ಳುತ್ತಾರೆ. ದೇವಸ್ಥಾನ, ಮುಜರಾಯಿ ಇಲಾಖೆಯ ಆಗಮ ಪಂಡಿತರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

    ಅಷ್ಟಮಂಗಲದ ವಿಚಾರಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಗಮನಿಸುತ್ತದೆ. ಈ ಬಗ್ಗೆ ನಮ್ಮ ಮೇಲೆ, ಇಲಾಖೆ ಮೇಲೆ ಯಾವುದೇ ಒತ್ತಡ ಇಲ್ಲ, ಸೋಮವಾರ ನಡೆಯುವ ಸಭೆಯಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ ತಜ್ಞರು ಆಗಮ ಪಂಡಿತರು ಈ ಬಗ್ಗೆ ಚರ್ಚಿಸಲಿದ್ದಾರೆ ಎಂದರು.

    ಪೂಜಾಕ್ರಮ ಬದಲಿಸಬೇಡಿ
    ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ. ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಮಂಡಿಸಿದ್ದಾರೆ.

    ಕುಕ್ಕೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದ ಪೂಜಾ ಪದ್ಧತಿ ಯನ್ನು ಮುಂದುವರಿಸಬೇಕು. ಆಚರಣೆಯಲ್ಲಿ ಭಿನ್ನವಾದರೆ ದೇವಸ್ಥಾನ ಅದನ್ನು ಒಪ್ಪಿಕೊಳ್ಳುವುದಿಲ್ಲ. ಪ್ರತಿಷ್ಠಾ ಕಾಲದಲ್ಲಿ ಪೂಜೆ ಯಾವ ರೀತಿ ಆರಂಭವಾಗಿದೆ ಅದು ಹಾಗೆಯೇ ಮುಂದುವರೆಯಬೇಕು. ಯಾವುದೇ ವ್ಯತ್ಯಾಸಗಳು ಆದರೆ ದೋಷ ಬರುತ್ತದೆ. ನನಗೆ ರುದ್ರನ ಮೇಲೆ ದ್ವೇಷ ಇಲ್ಲ. ನಾನು ರುದ್ರ ಪಾರಾಯಣ ಮಾಡುತ್ತೇನೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾನು ರುದ್ರ ಪಾರಾಯಣ ಮಾಡಿಸುತ್ತಿದ್ದೇನೆ. ಯಾವುದೇ ದೇವಸ್ಥಾನದಲ್ಲಿ ಆಗಲಿ ಹಿಂದಿನಿಂದ ಬಂದ ಆಚರಣೆ ಅದು ಹಾಗೆಯೇ ಮುಂದುವರೆಯಬೇಕು. ಮಂತ್ರ ಕ್ರಮ ಎಲ್ಲವೂ ತಂತ್ರದ ರೀತಿಯಲ್ಲಿ ಬಂದರೆ ಚಂದ ಎಂದರು.

    ಕುಕ್ಕೆಯಲ್ಲಿ ಸ್ಕಂದನ ದೇವಸ್ಥಾನ ಇರುವುದು. ಸ್ಕಂದನ ಪೂಜೆ ಹೇಗೆ ಆಗಬೇಕೋ ಅದು ಹಾಗೆ ನಡೆದುಕೊಂಡು ಬರುತ್ತಿದೆ. ಸುಬ್ರಮಣ್ಯ ಸ್ಕಂದ ಕೇಂದ್ರಿತವಾದಂತಹ ಕ್ಷೇತ್ರ. ಬದಲಾವಣೆಗಳು ಆಗಬೇಕಾದರೆ ವಿಮರ್ಶೆ ಮಾಡಬೇಕು ಎಂಬುದು ನನ್ನ ಅನಿಸಿಕೆ. ನನ್ನ ಅಭಿಪ್ರಾಯ ಕೇಳಿದರೆ ಯಾವುದೇ ಪೂಜಾ ಬದಲಾವಣೆಗಳು ಬೇಡ. ಆದರೆ ಬದಲಾವಣೆ ಬೇಕು ಅನ್ನುವವರು ವಿಮರ್ಶೆ ಮಾಡಿ ಎಂದು ಪಲಿಮಾರು ಸ್ವಾಮೀಜಿ ಸಲಹೆ ಕೊಟ್ಟಿದ್ದಾರೆ.

  • ಕುಕ್ಕೆ ಸುಬ್ರಹ್ಮಣ್ಯನಿಗಿದ್ದಾನೆ ಮತ್ತೊಬ್ಬ ಅಪ್ಪಟ ಕ್ರಿಕೆಟ್ ಆಟಗಾರ ಭಕ್ತ

    ಕುಕ್ಕೆ ಸುಬ್ರಹ್ಮಣ್ಯನಿಗಿದ್ದಾನೆ ಮತ್ತೊಬ್ಬ ಅಪ್ಪಟ ಕ್ರಿಕೆಟ್ ಆಟಗಾರ ಭಕ್ತ

    ಮಂಗಳೂರು: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ, ಜಗತ್ತಿನೆಲ್ಲೆಡೆ ಭಕ್ತರನ್ನು ಹೊಂದಿರುವ ಕುಕ್ಕೆ ಸುಬ್ರಹ್ಮಣ್ಯನಿಗೂ ಭಾರತೀಯ ಕ್ರಿಕೆಟ್ ತಂಡಕ್ಕೂ ಇರುವ ನಂಟಿನ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ರಾಹುಲ್ ದ್ರಾವಿಡ್, ರವಿಶಾಸ್ತ್ರಿ, ಮನೀಶ್ ಪಾಂಡೆ, ಕೆ.ಎಲ್.ರಾಹುಲ್ ಸೇರಿದಂತೆ ಬಹುತೇಕ ಎಲ್ಲಾ ಕ್ರಿಕೆಟಿಗರು ಕುಕ್ಕೆ ಸುಬ್ರಹ್ಮಣ್ಯ ಬಂದು ತಮ್ಮ ಯಶಸ್ಸಿನ ಮೆಟ್ಟಿಲನ್ನು ಗಟ್ಟಿಗೊಳಿಸಿದವರೇ. ಇದೀಗ ಪ್ರಸ್ತುತ ಇರುವ ಕ್ರಿಕೆಟ್ ತಂಡದಲ್ಲೂ ಒಬ್ಬ ಕ್ರೀಡಾಳು ಭಾರತೀಯ ಕ್ರಿಕೆಟ್ ತಂಡ ದೇಶ, ವಿದೇಶ ನೆಲದಲ್ಲಿ ಆಟವಾಡಲು ಹೋಗುವ ಮೊದಲು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಸೇವೆ ಸಲ್ಲಿಸುತ್ತಾರೆ.

    ಭಾರತೀಯ ಕ್ರಿಕೆಟ್ ತಂಡದ ಥ್ರೋಡೌನ್ ಸ್ಪೆಷಲಿಸ್ಟ್ ಡಿ.ರಾಘವೇಂದ್ರ ಕಳೆದ ಇಪ್ಪತ್ತು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಪ್ರಾರ್ಥನೆ ಮಾಡಿ, ತಮ್ಮ ಇಷ್ಟಾರ್ಥ ಪೂರೈಸಿಕೊಂಡಿದ್ದಾರೆ. ಕುಮುಟಾದ ತನ್ನ ಮನೆಯಿಂದ ಹೊರಬಂದು ಬೆಂಗಳೂರಿಗೆ ಸೇರಿದ್ದ ರಾಘವೇಂದ್ರ ಒಪ್ಪತ್ತಿನ ಊಟಕ್ಕೂ ಪರದಾಡಿದ ದಿನಗಳು ಸಾಕಷ್ಟಿವೆ. ಎಳವೆಯಲ್ಲೇ ಕ್ರಿಕೆಟ್‍ನ ಹುಚ್ಚು ತಲೆಗೆ ಹಚ್ಚಿಸಿಕೊಂಡಿದ್ದ ರಾಘವೇಂದ್ರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ನೋಡಿಯೇ ತನ್ನ ಪ್ರತಿಭೆಯನ್ನು ಹೆಚ್ಚಿಸಿಕೊಂಡವರು. ಕ್ರೀಡಾಂಗಣದ ಹೊರಗೆ ಬಂದ ಬಾಲನ್ನು ಹೆಕ್ಕಿಕೊಡುತ್ತಿದ್ದ ರಾಘವೇಂದ್ರ ಇದೀಗ ದೇಶ-ವಿದೇಶಗಳ ಕ್ರಿಕೆಟ್ ತಂಡಕ್ಕೆ ಬೇಕಾದ ಕ್ರೀಡಾಳುವಾಗಿದ್ದಾರೆ. ಮೊದಲ ಬಾರಿಗೆ ಕುಕ್ಕೆಗೆ ಬಂದಾಗ ಕುಕ್ಕೆಯ ಛತ್ರದ ಹೊರಗೆ ಚಾಪೆ ಹಾಕಿ ಮಲಗಿದ್ದ ರಾಘವೇಂದ್ರ ಕುಕ್ಕೆ ಸುಬ್ರಹ್ಮಣ್ಯ ಕೃಪೆಗೆ ಪಾತ್ರರಾಗಿ ಇಂದು ಆಕಾಶದೆತ್ತರಕ್ಕೆ ಬೆಳೆದಿದ್ದಾರೆ.

    ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಪ್ಪಟ ಭಕ್ತರಾಗಿರುವ ಡಿ.ರಾಘವೇಂದ್ರ, ತಮ್ಮ ತಂಡ ಪ್ರತೀ ಬಾರಿ ಆಡುವ ಆಟಕ್ಕೆ ಮೊದಲು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಡದ ಹೆಸರಿನಲ್ಲಿ ಪೂಜೆ ಸಲ್ಲಿಸುತ್ತಾರೆ. ಗೆದ್ದು ಬಂದ ಬಳಿಕ ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸುವುದು ರಾಘವೇಂದ್ರ ಅವರ ರೂಢಿ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಕ್ಷೇತ್ರದ ಸಿಬ್ಬಂದಿ ಮೂಲಕ ಭಾರತೀಯ ತಂಡದ ಹೆಸರಿನಲ್ಲಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ, ಆಸ್ಟ್ರೇಲಿಯಾ ದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತೀಯ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧ ಗೆಲುವು ಸಾಧಿಸಿದ ತಕ್ಷಣವೇ ಕುಕ್ಕೆ ಸುಬ್ರಹ್ಮಣ್ಯದ ಪ್ರೋಟೋಕಾಲ್‌ ಸಿಬ್ಬಂದಿ ಪ್ರಮೋದ್‍ಗೆ ದೂರವಾಣಿ ಕರೆಮಾಡಿ ತಂಡದ ಹೆಸರಿನಲ್ಲಿ ಸುಬ್ರಹ್ಮಣ್ಯನಿಗೆ ಸೇವೆ ಸಲ್ಲಿಸಲು ತಿಳಿಸಿದ್ದಾರೆ.

    ಕೇವಲ ಕ್ರಿಕೆಟ್ ಮಾತ್ರವಲ್ಲ, ಇತರ ಕ್ರೀಡಾಳುಗಳು ಕೂಡ ಕುಕ್ಕೆಗೆ ಭೇಟಿ ನೀಡಿ ತಮ್ಮ ಕ್ರೀಡೆಯಲ್ಲಿ ಯಶಸ್ಸು ಗಳಿಸಿದ್ದಾರೆ. ಸುಬ್ರಹ್ಮಣ್ಯ ದೇವರಿಗೂ ಕ್ರೀಡೆಗೂ ಸಾಮ್ಯತೆಯಿದ್ದು, ಸುಬ್ರಹ್ಮಣ್ಯ ಸ್ಚಾಮಿಯ ತಾಯಿ ಪಾರ್ವತಿಯು ತಮ್ಮ ಇಬ್ಬರು ಮಕ್ಕಳಾದ ಗಣಪತಿ ಹಾಗೂ ಸುಬ್ರಹ್ಮಣ್ಯರಿಗೆ ತ್ರಿಲೋಕವನ್ನು ಮೂರು ಬಾರಿ ಸುತ್ತಿ ಬರುವಂತೆ ಸೂಚಿಸಿದ್ದಾರೆ. ಬೇಗ ಸುತ್ತು ಬಂದವರಿಗೆ ಮಾವಿನ ಹಣ್ಣನ್ನು ಬಹುಮಾನವಾಗಿ ನೀಡುವುದಾಗಿಯೂ ಹೇಳಿ ಕ್ರೀಡಾ ಮನೋಭಾವವನ್ನು ಸುಬ್ರಹ್ಮಣ್ಯ ಬಿತ್ತಿದ್ದರು. ಈ ಕಾರಣಕ್ಕಾಗಿಯೇ ಸುಬ್ರಹ್ಮಣ್ಯ ಸನ್ನಿಧಿಗೆ ಬರುವ ಕ್ರೀಡಾಳುಗಳು ಅತ್ಯಂತ ಯಶಸ್ವಿಯಾಗುತ್ತಾರೆ ಎನ್ನುವುದು ಕ್ಷೇತ್ರದ ಹಿರಿಯ ಸಿಬ್ಬಂದಿಯ ನಂಬಿಕೆಯಾಗಿದೆ.

    ತನ್ನ ಅಪಾರ ಚಾಕಚಕ್ಯತೆಯ ಥ್ರೋಡೌನ್ ಬಾಲಿಂಗ್‍ನಿಂದ ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುತ್ತಿರುವ ರಾಘವೇಂದ್ರ ಎಷ್ಟೇ ಎತ್ತರಕ್ಕೆ ಬೆಳೆದರೂ ಕುಕ್ಕೆ ಸುಬ್ರಹ್ಮಣ್ಯದ ನಂಟು ಮರೆತಿಲ್ಲ. ಕುಕ್ಕೆ ಸುಬ್ರಹ್ಮಣ್ಯನ ಆಶೀರ್ವಾದ ಈ ಯುವ ಪ್ರತಿಭಾವಂತ ಆಟಗಾರನ ಮೇಲಿರಲಿ. ಆ ಮೂಲಕ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ದೇವಾಲಯದ ಸಿಬ್ಬಂದಿ ಹಾರೈಸಿದ್ದಾರೆ.