Tag: kumbakonam

  • ಮೊಬೈಲ್ ಒಡೆದು ಹಾಕ್ತೀನಿ ಹುಷಾರ್ ಎಂದ ನಯನತಾರಾ

    ಮೊಬೈಲ್ ಒಡೆದು ಹಾಕ್ತೀನಿ ಹುಷಾರ್ ಎಂದ ನಯನತಾರಾ

    ಖ್ಯಾತ ನಟಿ ನಯನತಾರಾ (Nayanthara) ಇದೇ ಮೊದಲ ಬಾರಿಗೆ ಬಹಿರಂಗವಾಗಿ ಅಭಿಮಾನಿಯ ವಿರುದ್ಧ ಗರಂ ಆಗಿದ್ದಾರೆ. ಇದೇ ರೀತಿ ಮಾಡ್ತಾ ಇದ್ದರೆ ನಿಮ್ಮ ಮೊಬೈಲ್ ಅನ್ನು ಒಡೆದು ಹಾಕುವುದಾಗಿ ಎಚ್ಚರಕೆ ನೀಡಿದ್ದಾರೆ. ಕೋಪಿಸಿಕೊಂಡು ಎಚ್ಚರಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಇತ್ತೀಚೆಗಷ್ಟೇ ಪತಿ ವಿಘ್ನೇಶ್ ಶಿವನ್ (Vignesh Shivan) ಜೊತೆ ನಯನತಾರಾ ಕುಂಭಕೋಣಂ (Kumbakonam) ಬಳಿಯ ಕಾಮಾಕ್ಷಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನೆಚ್ಚಿನ ನಟಿ ಬಂದಿರುವ ವಿಚಾರ ಸ್ಥಳೀಯರಿಗೆ ತಿಳಿಯುತ್ತಿದ್ದಂತೆಯೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ. ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಶಾಂತವಾಗಿ ಇರುವಂತೆ ಎಷ್ಟೇ ಮನವಿ ಮಾಡಿದರೂ ಅಭಿಮಾನಿಗಳು ಕೇಳದಿದ್ದಾಗ ಅನಿವಾರ್ಯವಾಗಿ ಗದರಿದ್ದಾರೆ.

    ಸಾಲಾಗಿ ಬನ್ನಿ ಎಲ್ಲರಿಗೂ ಸೆಲ್ಫಿ ಕೊಡುವೆ ಎಂದು ನಯನತಾರಾ ಮನವಿ ಮಾಡಿಕೊಂಡರೂ ಅಭಿಮಾನಿಗಳು ಕೇಳಿಲ್ಲ. ಪರಿಸ್ಥಿತಿಯನ್ನು ಅರಿತ ಅವರು ಸಮಾಧಾನ ಮಾಡಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಹಾಗಾಗಿ ತರಾತುರಿಯಲ್ಲಿ ಪೂಜೆ ಮುಗಿಸಿ ಹೊರಟಿದ್ದಾರೆ. ಈ ಸಂದರ್ಭದಲ್ಲಿ ವಿಡಿಯೋ ಮಾಡುತ್ತಾ ಬಂದ ಅಭಿಮಾನಿಯ ವಿರುದ್ಧ ಗರಂ ಆದ ನಯನಾ, ಮೊಬೈಲ್ ಒಡೆದು ಹಾಕುವುದಾಗಿ ಎಚ್ಚರಿಸಿದ್ದಾರೆ.

    ನಿರಂತರವಾಗಿ ಆ ಅಭಿಮಾನಿ ವಿಡಿಯೋ ಮಾಡುತ್ತಲೇ ಅವರ ಹಿಂದೆ ಸಾಗಿದ್ದಾನೆ. ಅದನ್ನು ಗಮನಿಸಿದ ನಯನತಾರಾ ಮೊದಲು ಮನವಿ ಮಾಡಿಕೊಂಡಿದ್ದಾರೆ. ವಿಡಿಯೋ ನಿಲ್ಲಿಸುವಂತೆ ಹೇಳಿದ್ದಾರೆ. ಅವನು ನಿಲ್ಲಿಸದೇ ಹೋದಾಗ ಖಡಕ್ ಆಗಿಯೇ ಎಚ್ಚರಿಕೆ ನೀಡಿ ವಿಡಿಯೋ ನಿಲ್ಲಿಸಿದ್ದಾರೆ.

  • ಆಟೋ ಚಾಲಕ ಈಗ ಪಾಲಿಕೆಯ ಮೇಯರ್

    ಆಟೋ ಚಾಲಕ ಈಗ ಪಾಲಿಕೆಯ ಮೇಯರ್

    ಚೆನ್ನೈ: ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಇದೀಗ ತಮಿಳುನಾಡಿನ ಕುಂಭಕೋಣಂ ಪಾಲಿಕೆಯ ಮೇಯರ್ ಆಗಿ ಆಯ್ಕೆಯಾಗುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    47 ವರ್ಷದ ಶರವಣನ್ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. 48 ವಾರ್ಡ್‍ಗಳಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ 42 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಇದೀಗ ಮೇಯರ್ ಆಗಿ ಶರವಣನ್ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಯುಪಿ ಭವಿಷ್ಯ ಅಖಿಲೇಶ್ ಯಾದವ್ ಕೈಯಲ್ಲಿ ಸುರಕ್ಷಿತವಾಗಿರುತ್ತೆ: ಮಯಾಂಕ್ ಜೋಶಿ

    ಸರವಣನ್ ಯಾರು?: ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿರುವ ಶರವಣನ್ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಬಾಡಿಗೆ ಮನೆಯಲ್ಲಿ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಆರನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಇವರು, ಸ್ಥಳೀಯ ಜನರ ಸಮಸ್ಯೆ ಬಗೆಹರಿಸುವಲ್ಲಿ ಒಂದು ಹೆಜ್ಜೆ ಮುಂದೆ ಇದ್ದಾರೆ. ಮೇಯರ್ ಆಗಿ ಆಯ್ಕೆಯಾದ ಬಳಿಕ ಶರವಣನ್ ಪ್ರಮಾಣವಚನ ಸ್ವೀಕಾರ ಮಾಡಲು ಆಟೋದಲ್ಲಿ ಪಾಲಿಕೆಗೆ ಆಗಮಿಸಿ ಗಮನ ಸೆಳೆದರು. ಇದನ್ನೂ ಓದಿ: ಮೊದಲು ಉಕ್ರೇನ್ ಸ್ವರ್ಗದಂತಿತ್ತು, ಈಗ ನರಕವಾಗಿದೆ – ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಯುವಕ

    ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ದಾಖಲಿಸಿರುವ ಸರವಣನ್ ಪಕ್ಷದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕಾಗಿ ತಮಿಳುನಾಡು ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ ಎಸ್ ಅಲ್‍ಗಿರಿ ಇವರ ಹೆಸರನ್ನ ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ಶರವಣನ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ.