Tag: Kumble

  • ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ದೇವರ ಮೊಸಳೆ ಬಬಿಯಾ ಇನ್ನಿಲ್ಲ

    ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ದೇವರ ಮೊಸಳೆ ಬಬಿಯಾ ಇನ್ನಿಲ್ಲ

    ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ(Anantha Padmanabha Swamy Temple) ಕ್ಷೇತ್ರ ಪಾಲಕನಂತಿದ್ದ ಮೊಸಳೆ ʼಬಬಿಯಾʼ(Babiya) ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.

    ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ(Lake) ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

    ಹಲವಾರು ದೇವಸ್ಥಾನಗಳಲ್ಲಿ ದೇವರ ಆನೆ, ಬಸವ ಇತ್ಯಾದಿ ಪ್ರಾಣಿಗಳಿಗಳಿರುತ್ತದೆ. ಆದರೆ ಈ ದೇವಾಲದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮಾನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇತ್ತು. ವರ್ಷದ ಎಲ್ಲಾ ದಿನವೂ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯಲ್ಲಿ ಈ ಮೊಸಳೆಯೂ ಕೂಡ ಇಲ್ಲೇ ವಾಸವಾಗಿರುತ್ತದೆ. ದೇವರ ನೈವೇದ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿತ್ತು. ಹಾಗೆಂದು ಇದುವರೆಗೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳೇ ಇಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

    ಅನಂತಪುರ ಕ್ಷೇತ್ರದಲ್ಲಿರುವ ಈ ಮೊಸಳೆ ಹೆಚ್ಚಿನ ಸಂದರ್ಭದಲ್ಲಿ ದೇವಾಲಯದ ಎಡಬದಿಯಲ್ಲಿರುವ ಗುಹೆಯಲ್ಲಿ ಇರುತ್ತಿತ್ತು. ಮಧ್ಯಾಹ್ನ ದೇವಾಲಯದ ನೈವೇದ್ಯವನ್ನು ಇಟ್ಟು ಮೊಸಳೆಯನ್ನು ಕರೆಯಲಾಗುತ್ತಿತ್ತು.  ಇದನ್ನೂ ಓದಿ: ಅನಂತಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಪ್ರವಚನದ ವೇಳೆ ಮೊಸಳೆ ಪ್ರತ್ಯಕ್ಷ

    ದೇವಸ್ಥಾನ ಎಲ್ಲಿದೆ?
    ಮಂಗಳೂರಿನಿಂದ ಸುಮಾರು 39 ಕಿ.ಮೀ ದೂರವಿರುವ ಕುಂಬ್ಳೆಯಿಂದ ಬದಿಯಡ್ಕ ಮಾರ್ಗವಾಗಿ ಸುಮಾರು ನಾಲ್ಕು ಕಿಲೋಮೀಟರ್ ದೂರದಲ್ಲಿ ಅನಂತಪುರ ದೇವಾಲಯವಿದೆ. ತಿರುವಂತಪುರದ ಅನಂತಪದ್ಮನಾಭ ದೇವಳಕ್ಕೆ ಇದು ಮೂಲ ಸ್ಥಾನವೆಂಬುದು ಪುರಾಣ ಕಥೆಗಳಲ್ಲಿ ಕಾಣಬಹುದು. ಮಾತ್ರವಲ್ಲದೆ, ಕೆರೆಯ ಬದಿಯಲ್ಲಿ ಒಂದು ಸುರಂಗ ಮಾರ್ಗವೂ ಇದ್ದು, ಈ ಸುರಂಗದ ಮೂಲಕ ತಿರುವನಂತಪುರದ ದೇವಸ್ಥಾನ ತಲುಪಬಹುದು ಎಂದು ಪ್ರತೀತಿ. ದೇವಸ್ಥಾನದಲ್ಲಿ ಸಾಮಾನ್ಯವಾಗಿ ವಿಗ್ರಹವು ಕಲ್ಲಿನಿಂದಲೋ, ಲೋಹದಿಂದಲೋ ಕೆತ್ತಲ್ಪಟ್ಟಿರುತ್ತದೆ. ಆದರೆ ಇಲ್ಲಿನ ದೇವರ ಮೂರ್ತಿಯು ಸಂಪೂರ್ಣವಾಗಿ ಆಯುರ್ವೇದದ ಗಿಡಮೂಲಿಕೆಗಳಿಂದ, ವಿವಿಧ ದ್ರವ್ಯಗಳ ಲೇಪನದಿಂದ ತಯಾರಿಸಿದ್ದಾಗಿದೆ. ಇದಕ್ಕೆ ‘ಕಡುಶರ್ಕರ ಪಾಕ’ದ ವಿಗ್ರಹ ಎಂದು ಹೆಸರಿದೆ.

    ಈ ದೇವಾಲಯದ ಹತ್ತಿರದಲ್ಲಿ ಶ್ರೀ ಮಹಾಗಣಪತಿಯ ಗುಡಿಯ ಇದೆ. ಅಷ್ಟೇ ಅಲ್ಲದೇ ಪುರಾತನ ಕಾಲದ ತುಳುಶಾಸನ ಇದೆ. ಪ್ರಧಾನ ದೇವಾಲಯದ ಬದಿಯಲ್ಲಿಯೇ ಗೋಪಾಲ ಕೃಷ್ಣ, ಸ್ವಲ್ಪ ದೂರದಲ್ಲಿ ರಕ್ತೇಶ್ವರಿ ಗುಡಿಯನ್ನೂ ಕಾಣಬಹುದು. ಹಾಗೆಯೇ ಶ್ರೀ ವನಶಾಸ್ತಾರ ಗುಡಿಯೂ ಇದೆ. ಈ ಗುಡಿ ಬಳಿಯೇ ಇನ್ನೊಂದು ಸಣ್ಣ ಕೆರೆ ಕಾಣಬಹುದು.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಘಟಕದ ಮಹಾಸಭೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಘಟಕದ ಮಹಾಸಭೆ

    – ನೂತನ ಅಧ್ಯಕ್ಷರಾಗಿ ಅಬ್ದುಲ್‍ ರಹಮಾನ್ ಸುಬ್ಬಯ್ಯಕಟ್ಟೆ ಆಯ್ಕೆ

    ಕಾಸರಗೋಡು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾಸರಗೋಡು ಜಿಲ್ಲಾ ಘಟಕದ ಮಹಾಸಭೆ ಕಳೆದ ಭಾನುವಾರ ಕುಂಬಳೆಯ ಹೊಟೇಲ್ ಅನ್ನಪೂರ್ಣ ಸಭಾಂಗಣದಲ್ಲಿ ನಡೆಯಿತು.

    ಸಂಘದ ಜಿಲ್ಲಾಧ್ಯಕ್ಷ ಅಚ್ಯುತ ಚೇವಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಕೆ. ಗಂಗಾಧರ್ ಯಾದವ್ ಸ್ವಾಗತಿಸಿ ಪ್ರಾಸ್ತಾಪಿಸಿದರು.

    ಬಳಿಕ ನೂತನ ಪದಾಕಾರಿಗಳ ಆಯ್ಕೆ ನಡೆಸಲಾಗಿದ್ದು, ಅಬ್ದುಲ್‍ರಹಮಾನ್ ಸುಬ್ಬಯ್ಯಕಟ್ಟೆ ಅವರನ್ನು ಸರ್ವಾನುಮತದಿಂದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಪುರುಷೋತ್ತಮ ಭಟ್ (ಉಪಾಧ್ಯಕ್ಷ), ಕೆ.ಗಂಗಾಧರ್ ಯಾದವ್ (ಪ್ರಧಾನ ಕಾರ್ಯದರ್ಶಿ), ಪುರುಷೋತ್ತಮ ಪೆರ್ಲ (ಕೋಶಾಧಿಕಾರಿ), ವಿವೇಕ್ ಆದಿತ್ಯಮತ್ತು ಸ್ಟೀಫನ್ ಕ್ರಾಸ್ತ ಜೊತೆ ಕಾರ್ಯದರ್ಶಿಗಳಾಗಿ ಆಯ್ಕೆಯಾದರು.

    ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರದೀಪ್ ಕುಮಾರ್ ಬೇಕಲ್, ಅಬ್ದುಲ್ ರಹಮಾನ್ ಉದ್ಯಾವರ, ರತನ್ ಹೊಸಂಗಡಿ, ರವಿ ನಾಯ್ಕಾಪು, ಜಗನ್ನಾಥ ಶೆಟ್ಟಿ ಹಾಗೂ ಆರಿಫ್ ಮಚ್ಚಂಪಾಡಿ ಆಯ್ಕೆಯಾದರು. ಕೇಂದ್ರ ಸಮಿತಿ ಪ್ರತಿನಿಧಿಯಾಗಿ ಮಾಜಿ ಅಧ್ಯಕ್ಷ ಅಚ್ಯುತ ಚೇವಾರ್ ಅವರನ್ನು ಆಯ್ಕೆ ಮಾಡಲಾಯಿತು.

  • ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಗ್ರಾಹಕನಿಂದ ಹಲ್ಲೆ

    ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಗ್ರಾಹಕನಿಂದ ಹಲ್ಲೆ

    ಉಡುಪಿ: ಬ್ಯಾಂಕಿನಲ್ಲಿ ಚಿನ್ನದ ಸರ ಅಡವಿಟ್ಟು ಪಡೆದ ಸಾಲದ ಹಣ ವಾಪಾಸ್ ನೀಡದ್ದಕ್ಕೆ ಸರವನ್ನು ಹರಾಜು ಹಾಕಿದ್ದರಿಂದ ಗ್ರಾಹಕನೊಬ್ಬ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾಸರಗೋಡು ಸಮೀಪದ ಕುಂಬ್ಳೆಯಲ್ಲಿ ನಡೆದಿದೆ.

    ಸಾಲ ಮರುಪಾವತಿಸದಿದ್ದಕ್ಕೆ ಚಿನ್ನದ ಸರವನ್ನು ಹರಾಜು ಹಾಕಿದ ಫೈನಾನ್ಸ್ ನವರ ಕ್ರಮವನ್ನು ವಿರೋಧಿಸಿ ಗ್ರಾಹಕನೋರ್ವ ಬ್ಯಾಂಕ್ ನೊಳಗೆ ನುಗ್ಗಿ ಬ್ಯಾಂಕ್ ಮ್ಯಾನೇಜರ್ ಗೆ ಥಳಿಸಿದ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ನಡೆದಿದೆ. ಇಮ್ತೀಯಾಝ್ ಹಲ್ಲೆ ಮಾಡಿದ ಆರೋಪಿ. 2016ರಲ್ಲಿ ಇಮ್ತೀಯಾಝ್ 10 ಗ್ರಾಂ ಚಿನ್ನವನ್ನು ಮುತ್ತೂಟ್ ಫೈನಾನ್ಸ್ ಬ್ಯಾಂಕ್‍ನಲ್ಲಿ ಅಡವಿಟ್ಟು 20 ಸಾವಿರ ರೂ. ಸಾಲ ಪಡೆದಿದ್ದ.

    ಒಂದು ವರ್ಷಗಳಿಂದ ನೋಟಿಸ್ ನೀಡಿದ್ರೂ ಹಣ ಪಾವತಿಸದ ಹಿನ್ನೆಲೆಯಲ್ಲಿ ಚಿನ್ನದ ಸರವನ್ನು ಬ್ಯಾಂಕ್ ನವರು ಹರಾಜು ಹಾಕಿದ್ರು. ಇಂದು ಬೆಳಗ್ಗೆ 10 ಗಂಟೆಗೆ ಬ್ಯಾಂಕ್ ಗೆ ಬಂದ ಇಮ್ತೀಯಾಝ್ ಬ್ಯಾಂಕ್ ನವರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ಲ್ಯಾಪ್ ಟಾಪ್ ಗಳನ್ನು ಬಿಸಾಡಿ ಬ್ಯಾಂಕ್ ಮ್ಯಾನೇಜರ್ ಅಶ್ವಿನಿ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿರುವ ಅಶ್ವಿನಿಯನ್ನು ಕುಂಬ್ಳೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಹಲ್ಲೆ ಮಾಡಿದ ಇಮ್ತಿಯಾಝ್ ವಿರುದ್ಧ ಕುಂಬ್ಳೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

  • ಇಂದಿನಿಂದ ಇಂಡೋ-ಆಸೀಸ್ 2ನೇ ಟೆಸ್ಟ್- ಮಹಾಕದನಕ್ಕೆ ಸಜ್ಜಾಗಿದೆ ಚಿನ್ನಸ್ವಾಮಿ ಕ್ರೀಡಾಂಗಣ

    ಇಂದಿನಿಂದ ಇಂಡೋ-ಆಸೀಸ್ 2ನೇ ಟೆಸ್ಟ್- ಮಹಾಕದನಕ್ಕೆ ಸಜ್ಜಾಗಿದೆ ಚಿನ್ನಸ್ವಾಮಿ ಕ್ರೀಡಾಂಗಣ

    – ತವರಲ್ಲಿ ಗೆಲ್ಲಿಸುವ ಜವಬ್ದಾರಿ ಕೋಚ್ ಕುಂಬ್ಳೆಗೆ

    ಬೆಂಗಳೂರು: ವಿಶ್ವ ಶ್ರೇಷ್ಠ ತಂಡಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದಿನಿಂದ 2ನೇ ಟೆಸ್ಟ್ ಕದನ ಶುರುವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಪುಣೆಯಲ್ಲಿ ಭಾರತಕ್ಕೆ ಸೋಲುಣಿಸುವ ಮೂಲಕ 1-0 ಮುನ್ನಡೆ ಸಾಧಿಸಿರುವ ಸ್ಟೀವ್ ಸ್ಮಿತ್ ಪಡೆ ಗೆಲುವಿನ ಹುಮ್ಮಸ್ಸಿನಲ್ಲಿದೆ. ಆದ್ರೆ ಸೋಲಿನ ಸೇಡು ತೀರಿಸಿಕೊಳ್ಳೋಕೆ ಕೊಹ್ಲಿ ಹುಡುಗರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

    ಎರಡು ತಂಡಗಳಲ್ಲೂ ಬಲಿಷ್ಠ ಆಟಗಾರರಿದ್ದಾರೆ. ಟೀಂ ಇಂಡಿಯಾಗೆ ಕಳಪೆ ಬ್ಯಾಟಿಂಗ್ ಪ್ರದರ್ಶನ ದೊಡ್ಡ ಹೊಡೆತ ಕೊಟ್ಟಿದೆ. ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆಗೆ ತವರು ನೆಲದಲ್ಲಿ ತಂಡವನ್ನು ಗೆಲುವಿನ ಹಳಿಗೆ ತರುವ ದೊಡ್ಡ ಜವಾಬ್ದಾರಿಯಿದೆ. ಜೊತೆಗೆ ಆಸೀಸ್ ಬ್ಯಾಟಿಂಗ್ ಪಡೆಯನ್ನ ಕಟ್ಟಿಹಾಕುವ ಆಯುಧಗಳಾದ ಅಶ್ವಿನ್, ಜಡೇಜಾ ಸರಿಯಾಗಿ ಆಡಿದ್ರೆ ಆದ್ರೆ ಕಾಂಗೂರುಗಳ ಬೆನ್ನೆಲುಬು ಮುರಿಯೋದು ಸುಲಭ.

    ಚಿನ್ನಸ್ವಾಮಿ ಅಂಗಳದಲ್ಲಿ ಆಸೀಸ್ ವಿರುದ್ಧ ಟೀಂ ಇಂಡಿಯಾ ಇದುವರೆಗೆ 05 ಟೆಸ್ಟ್ ಪಂದ್ಯಗಳನ್ನ ಆಡಿದ್ದು, 1ರಲ್ಲಿ ಜಯಭೇರಿ ಬಾರಿಸಿದೆ. ಆಸ್ಟ್ರೇಲಿಯಾ 2 ರಲ್ಲಿ ಗೆಲುವು ದಾಖಲಿಸಿದೆ. ಇನ್ನು 2 ಪಂದ್ಯಗಳಲ್ಲಿ ಫಲಿತಾಂಶ ಬಾರದೆ ಡ್ರಾನಲ್ಲಿ ಅಂತ್ಯವಾಗಿದೆ.

    ಒಟ್ನಲ್ಲಿ ಆಸೀಸ್ ಹಿಸ್ಟ್ರಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನಾಗಿದೆ. ಆದ್ರೆ ಕುಂಬ್ಳೆ ಭಾರತಕ್ಕೆ ಪ್ಲಸ್ ಪಾಯಿಂಟ್ ಆಗಿದ್ದು, ಕೊಹ್ಲಿ ಪಡೆಯನ್ನ ಯಾವ ರೀತಿ ಗೆಲುವಿನ ಟ್ರ್ಯಾಕ್‍ ಗೆ ತರ್ತಾರೆ ಕಾದು ನೋಡ್ಬೇಕು.