Tag: Kumta

  • ಕಾರವಾರ, ಕುಮಟಾದಲ್ಲಿ ಅಬ್ಬರಿಸಿದ ವರುಣ – ಜನಜೀವನ ಅಸ್ತವ್ಯಸ್ತ

    ಕಾರವಾರ, ಕುಮಟಾದಲ್ಲಿ ಅಬ್ಬರಿಸಿದ ವರುಣ – ಜನಜೀವನ ಅಸ್ತವ್ಯಸ್ತ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಇಂದು ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ಕಾರವಾರ ನಗರ ಮತ್ತು ಸುತ್ತಮುತ್ತ ಹಲವು ರಸ್ತೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

    ಕಾರವಾರ ನಗದ ಹಬ್ಬುವಾಡದಲ್ಲಿ ಹೈಚರ್ಚ್ ರಸ್ತೆ, ನಂದನಗದ್ದಾ, ರೈಲು ನಿಲ್ದಾಣ ರಸ್ತೆ ಸೇರಿದಂತೆ ಹಲವೆಡೆ ಚರಂಡಿಯಿಂದ ಮಳೆ ನೀರು ಉಕ್ಕಿ ಹರಿದಿದೆ. ರಸ್ತೆಯಲ್ಲಿ ಉಕ್ಕಿ ಹರಿದ ನೀರಿನಿಂದಾಗಿ ವಾಹನ ಸವಾರರು ಪರದಾಡುವಂತಾಗಿದ್ದು, ನಗರದ ರೈಲ್ವೆ ನಿಲ್ದಾಣರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇದನ್ನೂ ಓದಿ: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

     

    ರವೀಂದ್ರನಾಥ ಟ್ಯಾಗೋರ್ ಕಡಲತೀರದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆ ನೀರು ತುಂಬಿದ್ದು, ಇದರಿಂದ ಸುಮಾರು ಅರ್ಧ ಕಿಲೋಮೀಟರ್ ರಸ್ತೆಯು ನದಿಯಂತೆ ಗೋಚರಿಸುತ್ತಿತ್ತು. ಕುಮಟಾ ಭಾಗದಲ್ಲಿ ಸಹ ಅಬ್ಬರದ ಮಳೆಗೆ ಹಲವು ರಸ್ತೆಗಳು ನೀರು ತುಂಬಿ ವಾಹನ ಸವಾರರು ಪರದಾಡುವಂತಾಯಿತು.

    ಜಿಲ್ಲೆಯಲ್ಲಿ ಇದೇ ತಿಂಗಳು 25ರ ವರೆಗೆ ಯಲ್ಲೋ ಅಲರ್ಟ ಫೋಷಿಸಲಾಗಿದ್ದು, ನದಿ ದಡದಲ್ಲಿರುವ ಗ್ರಾಮಗಳ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

    Live Tv

  • ಫೋಟೋಗೆ ಪೋಸ್ ಕೊಡಲು ಹೋಗಿ ಸಮುದ್ರದ ಪಾಲಾದ ವ್ಯಕ್ತಿ

    ಫೋಟೋಗೆ ಪೋಸ್ ಕೊಡಲು ಹೋಗಿ ಸಮುದ್ರದ ಪಾಲಾದ ವ್ಯಕ್ತಿ

    ಕಾರವಾರ: ಸಮುದ್ರದ ಅಲೆಗಳ ಮಧ್ಯೆ ಕಲ್ಲುಬಂಡೆಯ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೊಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೋರ್ವ ಸಮುದ್ರ ಪಾಲಾಗಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ದುರಂತ ನಡೆದಿದೆ. ಶಿರಸಿಯ ನಿವಾಸಿ 42 ವರ್ಷದ ಸುಬ್ಬುಗೌಡ ಮೃತ ಪ್ರವಾಸಿಗ. ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಸುಬ್ಬುಗೌಡ, ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆಯಿಂದ ಜನ ಕಷ್ಟ ಪಡುವುದನ್ನೇ ಅಚ್ಚೇ ದಿನ್ ಅನ್ನೋದಾ: ಸಿದ್ದರಾಮಯ್ಯ

    ಮಳೆ ಹೆಚ್ಚಾಗುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಬೃಹತ್ ಗಾತ್ರದ ಅಲೆಗಳು ಕಡಲಿಗೆ ಅಪ್ಪಳಿಸುತ್ತಿವೆ. ಇದಾವುದನ್ನೂ ಅರಿಯದ ಪ್ರವಾಸಿಗರು, ಸಮುದ್ರದ ತಟದಲ್ಲಿ ಫೋಟೋಗೆ ಪೋಸ್ ಕೊಡಲು ಮುಂದಾಗುತ್ತಾರೆ. ಅದೇ ರೀತಿ ಪೋಸ್ ಕೊಡಲು ಹೋಗಿ ವ್ಯಕ್ತಿ ಇದೀಗ ಸಮುದ್ರದ ಪಾಲಾಗಿದ್ದಾರೆ. ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕರಾವಳಿಯಲ್ಲಿ ವರುಣನ ಆರ್ಭಟ – ಕುಮಟಾದಲ್ಲಿ ಮಳೆಯಿಂದ ಸಂಕಟ

    ಕರಾವಳಿಯಲ್ಲಿ ವರುಣನ ಆರ್ಭಟ – ಕುಮಟಾದಲ್ಲಿ ಮಳೆಯಿಂದ ಸಂಕಟ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಸಂಜೆಯಿಂದ ಸುರಿದ ಅಬ್ಬರದ ಮಳೆಯಿಂದಾಗಿ ಜಿಲ್ಲೆಯ ಕುಮಟಾ ಪಟ್ಟಣ ಹಾಗೂ ಮಾಸ್ತಿ ಕಟ್ಟಾ ಭಾಗದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರರು ಪರೆದಾಡುವಂತಾಗಿದೆ. ರಸ್ತೆಯಲ್ಲಿ ಮೂರು ಅಡಿಗಳಷ್ಟು ನೀರು ತುಂಬಿ ಜನರು ಓಡಾಡುವುದಕ್ಕೂ ಕಷ್ಟವಾಗಿದೆ.

    ಕುಮಟಾ ತಾಲೂಕಿನ ಹೆರವಟ್ಟಾ ಗ್ರಾಮದ ಸಾಣಿಯಮ್ಮ ದೇವಸ್ಥಾನದ ಒಳಗೆ ನೀರುನುಗ್ಗಿ ದೇವಸ್ಥಾನದ ಪರಿಕರಗಳು ನೀರಿಗಾಹುತಿಯಾಗಿದೆ. ಇದಲ್ಲದೇ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮದಲ್ಲಿ ಹೊಳೆಯ ನೀರು ತುಂಬಿ ಗ್ರಾಮಗಳಿಗೆ ನುಗ್ಗಿದೆ. ಮಳೆ ಹೆಚ್ಚಾದ್ದರಿಂದ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿದ್ದು ಕುಮಟಾ, ಅಂಕೋಲ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

    ಹವಾಮಾನ ಇಲಾಖೆ ಮಾಹಿತಿಯಂತೆ ಇನ್ನೂ ಒಂದು ದಿನಗಳ ಕಾಲ ಅಬ್ಬರದ ಮಳೆಸುರಿಯಲಿದ್ದು ಮೀನುಗಾರಿಕೆಯನ್ನು ಸ್ಥಗಿತ ಮಾಡಲಾಗಿದೆ. ಜಿಲ್ಲಾದ್ಯಾಂತ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಕರಾವಳಿ ಜನರಿಗೆ ಆತಂಕ ತಂದೊಡ್ಡಿದೆ.

  • ಚಿರತೆಗೆ ವಾಹನ ಡಿಕ್ಕಿ- ಮರುಕಪಟ್ಟು ರಕ್ಷಿಸಲು ಹೋದವನ ಮೇಲೆ ದಾಳಿ

    ಚಿರತೆಗೆ ವಾಹನ ಡಿಕ್ಕಿ- ಮರುಕಪಟ್ಟು ರಕ್ಷಿಸಲು ಹೋದವನ ಮೇಲೆ ದಾಳಿ

    ಕಾರವಾರ: ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿರತೆಯನ್ನು ರಕ್ಷಣೆಗೆ ಹೋಗಿದ್ದ ವ್ಯಕ್ತಿ ಮೇಲೆ ಚಿರತೆಯೇ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟ ತಾಲೂಕಿನಲ್ಲಿ ನಡೆದಿದೆ.

    ಕುಮಟ ತಾಲೂಕಿನ ಚಂದ್ರಹಾಸ ನಾಯಕ ಚಿರತೆ ದಾಳಿಗೆ ಒಳಗಾದವರು. ಬರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಚಂದ್ರಹಾಸ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಚಂದ್ರಹಾಸ ಅವರು ದ್ವಿಚಕ್ರ ವಾಹನದಲ್ಲಿ ಅಂಕೋಲದಿಂದ ಬರ್ಗಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ವಾಹನವೊಂದು ಹೆದ್ದಾರಿ ಮೇಲೆ ಮಲಗಿದ್ದ ಚಿರತೆಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಚಿರತೆಯನ್ನು ಕಂಡು ಚಂದ್ರಹಾಸ ರಕ್ಷಣೆಗೆ ಮುಂದಾಗಿದ್ದರು. ಆದರೆ ಚಿರತೆ ಏಕಾಏಕಿ ಅವರ ಮೇಲೆ ದಾಳಿ ಮಾಡಿ ಅಲ್ಲಿಂದ ಪರಾರಿಯಾಗಿದೆ.

    ಚಿರತೆ ದಾಳಿಯಿಂದಾಗಿ ಚಂದ್ರಹಾಸ ಅವರ ಕೈಗೆ ಗಾಯವಾಗಿತ್ತು. ತಕ್ಷಣವೇ ಸ್ಥಳೀಯರು ಅವರನ್ನು ಕುಮಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಕುಮಟ ತಾಲೂಕಿನ ಬರ್ಗಿ ಗ್ರಾಮದಲ್ಲಿ ಇದೇ ಜನವರಿ 31ರಂದು ನಾಯಿಯನ್ನು ಅಟ್ಟಿಸಿಕೊಂಡು ಬಂದಿದ್ದ ಚಿರತೆಯೊಂದು ಆಯಾ ತಪ್ಪಿ ಬಾವಿಗೆ ಬಿದ್ದು ನರಳಾಡಿತ್ತು. ಚಿರತೆ ಬಾವಿಯಿಂದ ಏಳಲು ಪ್ರಯತ್ನಿಸಿತ್ತು. ಆಗ ಅದರ ಗರ್ಜನೆಗೆ ಮನೆಯವರಿಗೆ ಕೇಳಿಸಿ, ಬಾವಿಯಲ್ಲಿ ಚಿರತೆ ಬಿದ್ದಿರುವುದು ಗೊತ್ತಾಗಿತ್ತು. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಗೆ ಅಧಿಕಾರಿಗಳು, ದೊಡ್ಡ ಬುಟ್ಟಿಯನ್ನು ಇಳೆ ಬಿಡುವ ಮೂಲಕ ಚಿರತೆಯನ್ನು ಬಲೆ ಹಾಕಿ ರಕ್ಷಣೆ ಮಾಡಿದ್ದರು.

  • ಕದ್ದು ಸಾಗಿಸುತ್ತಿದ್ದ ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಕುಮಟಾ ಪೊಲೀಸರು!

    ಕದ್ದು ಸಾಗಿಸುತ್ತಿದ್ದ ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಕುಮಟಾ ಪೊಲೀಸರು!

    ಕಾರವಾರ: ಗೋವುಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ಸಿನಿಮೀಯ ರೀತಿಯಲ್ಲಿ ವಶಪಡಿಸಿಕೊಂಡ ಘಟನೆ ಕುಮಟಾದ ಹಳಕಾರ್ ಹರಿಕಾಂತ್ರ ಕೇರಿ ಕ್ರಾಸ್‍ನಲ್ಲಿ ನಡೆದಿದೆ.

    ಆರೋಪಿಗಳು ತಪ್ಪಿಸಿಕೊಂಡಿದ್ದು, ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದು, ಅದರಲ್ಲಿದ್ದ ಎರಡು ಆಕಳು ಹಾಗೂ ಒಂದು ಹೋರಿಯನ್ನು ಕುಮಟಾ ಠಾಣೆ ಪಿಎಸ್‍ಐ ಸಂಪತ್ ಕುಮಾರ್ ತಂಡ ರಕ್ಷಿಸಿದೆ.

    ಶುಕ್ರವಾರ ಮುಂಜಾನೆ ರಿಜಿಸ್ಟರ್ ಆಗದ ಹೊಸ ಮಾರುತಿ ಇಗ್ನೀಸ್ ಕಾರಿನಲ್ಲಿ ಕಳ್ಳರು ಬಂದಿದ್ದರು. ಕುಮಟಾದ ಹರಕಾರ್ ನ ಹರಿಕಾಂತ್ರ ಕೇರಿಯಲ್ಲಿ ಹಸುಗಳನ್ನು ಕದ್ದು, ಕಾರಿನಲ್ಲಿ ಹಾಕಿಕೊಂಡು ಹೋಗುತ್ತಿದ್ದರು. ರಾತ್ರಿ ಪಾಳೆಯ ಗಸ್ತಿನಲ್ಲಿದ್ದ ಕುಮಟಾ ಠಾಣೆ ಪಿಎಸ್‍ಐ ಸಂಪತ್ ಕುಮಾರ್ ತಂಡವು ಇದನ್ನು ಗಮನಿಸಿ ಕಾರನ್ನು ಬೆನ್ನು ಹತ್ತಿದ್ದರು. ಆದರೆ ದಾರಿ ಮಧ್ಯದಲ್ಲಿ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಅದರಲ್ಲಿದ್ದ ಎರಡು ಆಕಳು ಹಾಗೂ ಒಂದು ಹೋರಿಯನ್ನು ಅಲ್ಲಿಯೇ ಬಿಟ್ಟು ಕಳ್ಳರು ತಪ್ಪಿಸಿಕೊಂಡಿದ್ದಾರೆ.

    ಸದ್ಯ ಪೊಲೀಸರು ಕಾರನ್ನು ತಮ್ಮ ವಶಕ್ಕೆ ಪಡೆದಿದ್ದು, ಹಸುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದುಬೈ ಕೆಲಸಕ್ಕೆ ಗುಡ್‍ಬೈ- ಬುದ್ಧಿಮಾಂದ್ಯ ಮಕ್ಕಳ ಪಾಲಿನ ತ್ರಿವಿಧ ದಾಸೋಹಿ ಕಾರವಾರದ ಸಿರಿಲ್

    ದುಬೈ ಕೆಲಸಕ್ಕೆ ಗುಡ್‍ಬೈ- ಬುದ್ಧಿಮಾಂದ್ಯ ಮಕ್ಕಳ ಪಾಲಿನ ತ್ರಿವಿಧ ದಾಸೋಹಿ ಕಾರವಾರದ ಸಿರಿಲ್

    ಕಾರವಾರ: ಸಮಾಜ ಸೇವೆಗಾಗಿ ವಿದೇಶದಲ್ಲಿ ಸಿಕ್ಕಿರುವ ಕೆಲಸವನ್ನು ಬಿಟ್ಟು ತಾಯ್ನಾಡಿನಲ್ಲಿ ಬುದ್ಧಿಮಾಂದ್ಯರ ಸೇವೆ ಮಾಡುತ್ತಿರುವ ವ್ಯಕ್ತಿಯೇ ಇವತ್ತಿನ ನಮ್ಮ ಪಬ್ಲಿಕ್ ಹೀರೋ.

    ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಅಳ್ವೆಕೋಡಿಯ ನಿವಾಸಿ ಸಿರಿಲ್ ಲೋಪಿಸ್ ನಮ್ಮ ಪಬ್ಲಿಕ್ ಹೀರೋ. ಬಡತನದಲ್ಲಿ ಹುಟ್ಟಿ ಕಷ್ಟಪಟ್ಟು ಓದಿ ದುಬೈನಲ್ಲಿ ಒಳ್ಳೇ ಕೆಲಸದಲ್ಲಿದ್ದರು. ದುಬೈನಲ್ಲಿದ್ದ ಕೆಲಸ ಬಿಟ್ಟು 2010ರಲ್ಲಿ ಕುಮಟಾಕ್ಕೆ ಬಂದು ತಮ್ಮ ದಯಾ ನಿಲಯ ಹೆಸರಿನ ಮನೆಯನ್ನೇ ಬುದ್ಧಿಮಾಂದ್ಯ ಮಕ್ಕಳ ಶಾಲೆಯಾಗಿ ಮಾಡಿದ್ದಾರೆ.

    ನಾಲ್ಕೈದು ಮಕ್ಕಳಿಂದ ಪ್ರಾರಂಭವಾದ ಈ ಶಾಲೆಯಲ್ಲೀಗ 32 ಮಕ್ಕಳಿದ್ದಾರೆ. ಊಟ, ವಸತಿ, ಶಿಕ್ಷಣ ಎಲ್ಲವೂ ಇಲ್ಲೇ ನಡೆಯುತ್ತಿದೆ. ಸಿರಿಲ್ ಒಂದು ರೀತಿ ತ್ರಿವಿಧ ದಾಸೋಹಿ ಆಗಿದ್ದಾರೆ. ಈ ವಿಶೇಷ ಮಕ್ಕಳಿಗೆ ಶಿಕ್ಷಣ ನೀಡುವುದು ಬಲು ಕಷ್ಟವಾಗಿತ್ತು. ಹಾಗಾಗಿ ಸಿರಿಲ್ ಈ ಮಕ್ಕಳಿಗೆ ಶಿಕ್ಷಣ ನೀಡೋಕೆ ಅಂತಾನೇ ವಿಶೇಷ ಟ್ರೈನಿಂಗ್ ಪಡೆದಿದ್ದಾರೆ. ಒಮ್ಮೆ ಶಾಲೆ ನಡೆಸುವುದು ಕಷ್ಟವಾದಾಗ ತನ್ನ ಬೈಕ್ ಮಾರಿದ್ದಾರೆ.

    ಈ ದಯಾ ನಿಲಯದಲ್ಲಿ ಸಂಗೀತ, ಕಂಪ್ಯೂಟರ್ ಜೊತೆಗೆ ಸ್ವ-ಉದ್ಯೋಗ ಕಲಿಕೆ ಭಾಗವಾಗಿ ಸಾವಯವ ಗೊಬ್ಬರ ಹಾಗೂ ಪಿನಾಯಿಲ್ ತಯಾರಿಕೆ ಬಗ್ಗೆ ಕಲಿಸಿಕೊಡಲಾಗ್ತಿದೆ. ಈ ಶಾಲೆ ಮಕ್ಕಳು ಟೇಬಲ್ ಟೆನ್ನಿಸ್‍ನಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಿ ಬಂಗಾರದ ಪದಕ ಗೆದ್ದಿದ್ದಾರೆ.

    https://www.youtube.com/watch?v=-Fjf92zIIVQ

     

  • ಅಪರಿಚಿತ ವಾಹನ ಬೈಕಿಗೆ ಡಿಕ್ಕಿ: ಬೈಕ್ ಸವಾರ ಸಾವು

    ಅಪರಿಚಿತ ವಾಹನ ಬೈಕಿಗೆ ಡಿಕ್ಕಿ: ಬೈಕ್ ಸವಾರ ಸಾವು

    ಕಾರವಾರ: ಮಂಗಳವಾರ ನಸುಕಿನ 2 ಗಂಟೆಯ ವೇಳೆಯಲ್ಲಿ ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ದಂಡುಕುಳಿಯಲ್ಲಿ ನೆಡೆದಿದೆ.

    ಅಫ್ರೋಜ್ (16) ಮೃತ ಬೈಕ್ ಸವಾರ. ಸಹ ಸವಾರ ಅಫ್ರೋಜ್ ತಂದೆ ಇಕ್ಬಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‍ನಲ್ಲಿದ್ದ ಮತ್ತೊಬ್ಬ ಅಫ್ರೋಜ್ ಸಹೋದರನಿಗೂ ಗಾಯಗಳಾಗಿವೆ. ತಂದೆ ಮತ್ತು ಮಕ್ಕಳು ಮೂವರು ಒಂದೇ ಬೈಕ್‍ನಲ್ಲಿ ಕುಮಟಾದ ಕಡಲೆಯಿಂದ ಮಿರ್ಜಾನ್‍ಗೆ ಬರುತ್ತಿರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ.

    ಗಾಯಾಳು ಇಕ್ಬಾಲ್‍ರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‍ಗೆ ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.