Tag: Kundagola

  • ನಕಲಿ ವೈದ್ಯರ ಹಾವಳಿ- ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್

    ನಕಲಿ ವೈದ್ಯರ ಹಾವಳಿ- ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್

    ಹುಬ್ಬಳ್ಳಿ: ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಈ ಅಕ್ರಮಕ್ಕೆ ಬ್ರೇಕ್ ಹಾಕಲು ಮುಂದಾದ ಅಧಿಕಾರಿಗಳು ಕ್ಲಿನಿಕ್ ಒಂದನ್ನು ಸೀಜ್ ಮಾಡಿದ್ದಾರೆ.

    ಕುಂದಗೋಳ ತಾಲೂಕಿನಾದ್ಯಂತ ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ತಹಶೀಲ್ದಾರ್ ಹಾಗೂ ಇನ್ಸ್‌ಪೆಕ್ಟರ್ ದಾಳಿ ನಡೆಸಿದ್ದಾರೆ. ಕುಂದಗೋಳದ ಹಲವು ಗ್ರಾಮಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತಹಶೀಲ್ದಾರ್ ಬಸವರಾಜ ಮೆಳವಂಕಿ ಹಾಗೂ ಕುಂದಗೋಳ ಇನ್ಸ್‌ಪೆಕ್ಟರ್ ನವೀನ್ ಜಕ್ಕಲಿ ನೇತೃತ್ವದಲ್ಲಿ ದಾಳಿ ಮಾಡಲಾಯಿತು.

    ಈ ವೇಳೆ ವೈದ್ಯನೆಂದು ಹೇಳಿಕೊಂಡು ಕ್ಲಿನಿಕ್ ನಡೆಸುತ್ತಿದ್ದ ಅಬ್ದುಲ್ ನಜೀಮ್ ಮುಲ್ಲಾ ಎಂಬಾತನ ಕ್ಲಿನಿಕ್ ಅನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ದಾಳಿ ನಡೆಸಿದಾಗ ನಜೀಮ್ ಮುಲ್ಲಾ ನಕಲಿ ವೈದ್ಯ ಎಂದು ಪತ್ತೆಯಾಗಿದ್ದು, ಆತನ ಬಳಿ ಯಾವುದೇ ವೈದ್ಯಕೀಯ ದಾಖಲೆಗಳಿಲ್ಲ ಹಾಗೂ ಕ್ಲಿನಿಕ್‍ಗೆ ಸಂಬಂಧಿಸಿದಂತೆಯೂ ಯಾವುದೇ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ.

  • ಮತಗಟ್ಟೆಯ ಬಾಗಿಲಿಗೆ ಅರಿಸಿನ, ಕುಂಕುಮ ಹಚ್ಚಿ ಪೂಜೆ ಮಾಡಿದ ಬಿಜೆಪಿ ಕಾರ್ಯಕರ್ತರು!

    ಮತಗಟ್ಟೆಯ ಬಾಗಿಲಿಗೆ ಅರಿಸಿನ, ಕುಂಕುಮ ಹಚ್ಚಿ ಪೂಜೆ ಮಾಡಿದ ಬಿಜೆಪಿ ಕಾರ್ಯಕರ್ತರು!

    ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆ ಮತದಾನ ಇಂದು ನಡೆಯುತ್ತಿದ್ದು, ತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿ ಎಂದು ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಸಲ್ಲಿಸಿದ್ದಾರೆ.

    ಬೆಳ್ಳಂಬೆಳಗ್ಗೆ ಮತಗಟ್ಟೆಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ ಪರವಾಗಿ ಪೂಜೆ ಸಲ್ಲಿಸಿದ್ದಾರೆ. ಅದರಗುಂಚಿ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 65ಕ್ಕೆ ಪೂಜೆ ಮಾಡಿ ತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿ ಎಂದು ಆಶಿಸಿದ್ದಾರೆ. ಮತಗಟ್ಟೆಯ ಬಾಗಿಲಿಗೆ ಅರಿಸಿನ, ಕುಂಕುಮ ಹಚ್ಚಿ, ತೋರಣದ ರೀತಿಯಲ್ಲಿ ಹೂವಿನ ಮಾಲೆ ಹಾಕಿ, ಬಳಿಕ ಹೊಸಲಿನ ಬಳಿ ತೆಂಗಿನಕಾಯಿ ಒಡೆದು ಪೂಜೆ ಮಾಡಲಾಗಿದೆ. ಅಲ್ಲದೆ ಮತಗಟ್ಟೆಯಲ್ಲಿದ್ದ ಮತ ಯಂತ್ರಕ್ಕೂ ಕೂಡ ಆರತಿ ಬೆಳಗಿ ಕಾರ್ಯಕರ್ತರು ಪೂಜೆ ಮಾಡಿದ್ದಾರೆ.

    ಇಂದು ಲೋಕಸಭಾ ಚುನಾವಣೆಯ ಅಂತಿಮ ಹಂತದ ಚುನಾವಣೆ ಜೊತೆಗೆ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತದಾನ ನಡೆಯುತ್ತಿದೆ. ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾದ ಕುಂದಗೋಳ, ಉಮೇಶ್ ಜಾಧವ್ ರಾಜೀನಾಮೆಯಿಂದ ಖಾಲಿಯಾದ ಚಿಂಚೋಳಿ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ, ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಸೇರಿದಂತೆ 8 ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. 214 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಸೂಕ್ಷ್ಮ 33 ಹಾಗೂ ಅತಿ ಸೂಕ್ಷ್ಮ 38 ಮತದಾನ ಕೇಂದ್ರಗಳನ್ನು ಗುರುತಿಸಲಾಗಿದೆ.

    ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್, ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ಸೇರಿದಂತೆ ಒಟ್ಟು 17 ಜನ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 241 ಮತಗಟ್ಟೆಗಳಿದ್ದು, ಅವುಗಳಲ್ಲಿ 60 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗೂ 181 ಸಾಮಾನ್ಯ ಮತಗಟ್ಟೆಗಳಿವೆ.

  • ನನ್ನಿಂದ್ಲೇ ಪ್ರೇರಣೆ ಪಡೆದು ಮೈತ್ರಿ ನಾಯಕರು ಅಳ್ತಿದ್ದಾರೆ- ನಟಿ ಶೃತಿ

    ನನ್ನಿಂದ್ಲೇ ಪ್ರೇರಣೆ ಪಡೆದು ಮೈತ್ರಿ ನಾಯಕರು ಅಳ್ತಿದ್ದಾರೆ- ನಟಿ ಶೃತಿ

    ಹುಬ್ಬಳ್ಳಿ: ನನ್ನಿಂದಲೇ ಪ್ರೇರಣೆಗೊಂದು ಇಂದು ಅನೇಕರು ಅಳುತ್ತಿದ್ದಾರೆ ಎಂದು ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ಕಿಡಿಕಾರಿದ್ದಾರೆ.

    ಕುಂದಗೋಳ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಅತ್ತು ಅತ್ತು ಹೆಸರು ಮಾಡಿದ್ದೇನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ನನ್ನಿಂದಲೇ ಪ್ರೇರಣೆ ಪಡೆದು ಇಂದು ಅನೇಕರು ಅಳುತ್ತಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಲೇವಡಿ ಮಾಡಿದ್ದಾರೆ.

    ನಾನು ಅತ್ತು ಅಭಿಮಾನಿಗಳನ್ನು ಮಾಡಿಕೊಂಡಿದ್ದೇನೆ ಎಂದು ಜನ ಅಂದಿದ್ದಕ್ಕಾಗಿಯೇ ಜೆಡಿಎಸ್ ಕಾಂಗ್ರೆಸ್ ನಲ್ಲಿ ಬಹಳ ಜನ ಇಂದು ಅಳುತ್ತಿದ್ದಾರೆ. ಆದರೆ ನಮಗೆ ಅಳುವ ನಾಯಕರು ಬೇಕಾಗಿಲ್ಲ. ಕಣ್ಣೀರು ಒರೆಸುವ ನಾಯಕರು ಬೇಕಾಗಿದ್ದಾರೆ ಎಂದು ಹೇಳುವ ಮೂಲಕ ಸಿಎಂಗೆ ಟಾಂಗ್ ನೀಡಿದರು.

    ಸರ್ಕಾರದ ವಿರುದ್ಧ ಬಿಎಸ್‍ವೈ ಕಿಡಿ:
    ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾತನಾಡಿ, ಕುಂದಗೋಳ, ಚಿಂಚೊಳಿ ಗೆದ್ದರೆ ನಾವು 106 ಆಗ್ತೀವಿ. ಇಬ್ಬರು ಪಕ್ಷೇತರರು ನಮ್ಮ ಜೊತೆಗೆ ಇದ್ದಾರೆ. ಇನ್ನೂ ಎರಡ್ಮೂರು ಜನ ಬಂದರೆ ಮುಂದೆ ನಮ್ಮದೇ ಸರ್ಕಾರ ಬರುತ್ತದೆ ಎಂದು ಹೇಳಿದ್ದಾರೆ.

    ಕುಮಾರಸ್ವಾಮಿ ಮತ್ತು ಅವರ ಕಂಪನಿಯನ್ನು ಮನೆಗೆ ಕಳುಹಿಸಬೇಕಿದೆ. 166 ತಾಲೂಕಿನಲ್ಲಿ ಭೀಕರ ಬರಗಾಲ ಇದೆ. ಆದರೂ ಸಚಿವ, ಮುಖ್ಯಮಂತ್ರಿ ಬರಗಾಲ ಪ್ರದೇಶಕ್ಕೆ ಹೋಗಿಲ್ಲ. ಅದಕ್ಕಾಗಿಯೇ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಆರು ಸಾವಿರ ಕೊಡುವ ಯೋಜನೆ ಮೋದಿ ಮಾಡಿದ್ದಾರೆ. ಹೆಣ್ಣುಮಕ್ಕಳು ಹುಟ್ಟಿದರೆ ಕಣ್ಣೀರು ಹಾಕುವ ಕಾಲ ಇತ್ತು. ಅದರೆ ನಾನು ಭಾಗ್ಯಲಕ್ಷ್ಮಿ ಯೋಜನೆ ಕೊಟ್ಟ ಬಳಿಕ ಹೆಣ್ಣು ಮಕ್ಕಳ ನೋಡುವ ದೃಷ್ಟಿ ಬದಲಾಯಿತು. ಆದರೆ ಕುಮಾರಸ್ವಾಮಿ ಆ ಯೋಜನೆ ಚಿವುಟಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಕಂಪನಿ ರೈತರ ಸಾಲ ಮನ್ನಾ ಮಾಡಿಲ್ಲ. ರೈತರ ಸಾಲ ಮನ್ನಾ ಮಾಡದೇ ಹೋದರೆ, ಅಧಿವೇಶನ ಆರಂಭವಾದಾಗ ಕುಮಾರಸ್ವಾಮಿ ಮೂಗು ಹಿಡಿದು ಕೇಳುತ್ತೇನೆ. ಸಾಲ ಮನ್ನಾ ಮಾಡು ಇಲ್ಲವೇ ಅಧಿಕಾರ ಬಿಟ್ಟು ತೊಲಗು ಎಂದು ಹೇಳುತ್ತೇನೆ. ರೈತರ ಸಾಲಮನ್ನಾ ಆಗುವವರೆಗೂ ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

  • ಬರ್ತ್ ಡೇ ದಿನದಂದೇ ಅಪಾಯದಿಂದ ಪಾರಾದ ಸಚಿವ ಡಿಕೆಶಿ

    ಬರ್ತ್ ಡೇ ದಿನದಂದೇ ಅಪಾಯದಿಂದ ಪಾರಾದ ಸಚಿವ ಡಿಕೆಶಿ

    ಗದಗ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಇಂದು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಧಾರವಾಡದ ಮುಕ್ತಿ ಮಂದಿರದ ವೀರ ಗಂಗಾಧರ ಶಿವಾಚಾರ್ಯ ಮಹಾಸ್ವಾಮೀಗಳ ಗದ್ದುಗೆ ದರ್ಶನ ಪಡೆದರು. ಆದರೆ ಈ ವೇಳೆ ಸಚಿವರು ನಡೆಯಬಹುದಾಗಿದ್ದ ಸಂಭನೀಯ ಅಪಾಯದಿಂದ ಪಾರಾಗಿದ್ದಾರೆ.

    ಗದ್ದುಗೆ ದರ್ಶನ ಪಡೆದ ಸಚಿವರು ದೀಪ ಬೆಳಗಿಸಿ ಪೂಜೆ ಮಾಡಿದರು. ಲಿಂಗೈಕ್ಯ ವೀರಗಂಗಾಧರ ಗದ್ದುಗೆ ಪೂಜೆ ಸಲ್ಲಿಸಿ ಹೂಮಾಲೆ ಹಾಕುವ ವೇಳೆ ಸಚಿವರು ಧರಸಿದ್ದ ಶೆಲ್ಲೆಗೆ ದೀಪ ತಾಕಿತ್ತು. ತಕ್ಷಣ ಪೂಜಾರಿ ಎಚ್ಚೆತ್ತುಕೊಂಡ ಪರಿಣಾಮ ನಡೆಯಬಹುದಿದ್ದ ಅವಘಡ ತಪ್ಪಿದೆ.

    ಘಟನೆಯಿಂದ ವಿಚಲಿತರಾಗದ ಡಿಕೆ ಶಿವಕುಮಾರ್ ಅವರು ಗದ್ದುಗೆ ಬಳಿಯೇ ಮಹಾಸ್ವಾಮಿಗಳನ್ನು ನೆನೆದು ಸ್ವಲ್ಪ ಸಮಯ ಧ್ಯಾನಕ್ಕೆ ಕುಳಿತರು. ಆ ಬಳಿಕ ಗದ್ದುಗೆಯಿಂದ ತೆರಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದೊಂದು ಪವಿತ್ರವಾದ ಕ್ಷೇತ್ರ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದ ಕ್ಷೇತ್ರ. ನನಗೆ ಇಷ್ಟವಾದಂತಹ ಕ್ಷೇತ್ರಕ್ಕೆ ಬಂದು ಆಶೀರ್ವಾದ ಪಡೆದುಕೊಂಡಿದ್ದೇನೆ. ದೇವಸ್ಥಾನಕ್ಕೆ ಆಗಮಿಸಿ ನನ್ನ ಇಷ್ಟಾರ್ಥಗಳನ್ನು ಕೇಳಿಕೊಂಡಿದ್ದೇನೆ. ಕುಂದಗೋಳ ಕ್ಷೇತ್ರದ ಜನ ನಮ್ಮನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಈ ಸಂದರ್ಭದಲ್ಲಿ ರಾಜಕೀಯ ವಿಚಾರಗಳನ್ನು ಮಾತನಾಡಲ್ಲ ಎಂದರು.

  • ಸಿದ್ದರಾಮಯ್ಯ ಪ್ರಚಾರ ವೇಳೆ ಮೋದಿ ಪರ ಘೋಷಣೆ – ಕೈ, ಕಮಲ ಕಾರ್ಯಕರ್ತರ ನಡ್ವೆ ಫೈಟ್

    ಸಿದ್ದರಾಮಯ್ಯ ಪ್ರಚಾರ ವೇಳೆ ಮೋದಿ ಪರ ಘೋಷಣೆ – ಕೈ, ಕಮಲ ಕಾರ್ಯಕರ್ತರ ನಡ್ವೆ ಫೈಟ್

    ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿ, ಪ್ರಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ ಘಟನೆ ನಡೆದಿದೆ.

    ಕ್ಷೇತ್ರದ ದ್ಯಾವನೂರ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಇದರಿಂದ ತೀವ್ರ ಮುಜುಗರಕ್ಕೆ ತುತ್ತಾದ ಸಿದ್ದರಾಮಯ್ಯ, ಕೂಡಲೇ ಮೋದಿ ಪರ ಘೋಷಣೆ ಕೂಗುತ್ತಿದ್ದವರನ್ನು ಸ್ಥಳದಿಂದ ಕಳಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ರು. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಕಾರ್ಯಕರ್ತರು, ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದ್ರು. ಇತ್ತ ಕಾಂಗ್ರೆಸ್ ಕಾರ್ಯಕರ್ತರು ಕೂಡ ಸಿಟ್ಟುಗೊಂಡ ಪರ ಒಂದು ಹಂತದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಕೈ ಮಿಲಾಯಿಸಿದರು.

    ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸಲು ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಪ್ರಚಾರ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಕುಸುಮಾ ಅವರಿಗೆ ಏನು ತಿಳಿದಿಲ್ಲ ಎನ್ನುತ್ತಾರೆ. ಆದರೆ ಯಾರು ರಾಜಕೀಯ ಕಲಿತು ಬಂದಿಲ್ಲಾ, ಅವರ ಹಿಂದೆ ಸಂಪೂರ್ಣ ಸರ್ಕಾರ ಇದೆ. ಈ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೇವೆ ಎಂದರು. ಅಲ್ಲದೇ ಮೋದಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಏನಾದರೂ ಮಾಡಿದ್ದಾರಾ ಎಂದು ಪ್ರಶ್ನಿಸಿ ತಾವು ಸಿಎಂ ಆಗಿದ್ದಾಗ ಜಾರಿ ಮಾಡಿದ್ದ ಜನಪರ ಯೋಜನೆಗಳನ್ನು ಪ್ರಸ್ತಾಪ ಮಾಡಿದರು.

    ಇತ್ತ ಇಂದು ಸಂಜೆ ವೇಳೆಗೆ ಕುಂದಗೋಳ ವಿಧಾನಸಭಾ ಕ್ಷೇತ್ರದ ದೇವನೂರು ಗ್ರಾಮದಲ್ಲಿ ನಡೆಯ ಬೇಕಿದ್ದ ಕೆಎಸ್ ಈಶ್ವರಪ್ಪ ಅವರ ರೋಡ್ ಶೋ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಇದೇ ಗ್ರಾಮದಲ್ಲೇ ಕೈ ಕಾರ್ಯಕರ್ತರು ಹಾಗೂ ಕಮಲ ಕಾರ್ಯಕರ್ತರ ನಡುವೆ ಜಗಳ ನಡೆದಿದ್ದ ಕಾರಣ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಈಶ್ವರಪ್ಪ ಅವರ ರೋಡ್ ಶೋ ರದ್ದು ಮಾಡಲಾಗಿದೆ.

  • ಮಾನ ಮರ್ಯಾದೆ, ಪಂಚೇಂದ್ರಿಯ ಇಲ್ಲದ ಸರ್ಕಾರ ರಾಜ್ಯದಲ್ಲಿದೆ : ರೇಣುಕಾಚಾರ್ಯ

    ಮಾನ ಮರ್ಯಾದೆ, ಪಂಚೇಂದ್ರಿಯ ಇಲ್ಲದ ಸರ್ಕಾರ ರಾಜ್ಯದಲ್ಲಿದೆ : ರೇಣುಕಾಚಾರ್ಯ

    ಧಾರವಾಡ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ರೈತರ ಜೊತೆ ನಾವಿದ್ದೇವೆ ಎಂದು ಹೇಳುತ್ತಿದೆ. ಆದರೆ ರೈತರು ಸಂಕಷ್ಟದಲ್ಲಿ ಇದ್ದಾಗ ಸರ್ಕಾರದ ನಾಯಕರು ರೆಸಾರ್ಟಿನಲ್ಲಿ ಮಾಲೀಸ್ ಮಾಡಿಸಿಕೊಳ್ಳುತ್ತಾ ಇರುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

    ಕುಂದಗೋಳ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರೋದು ಮಾನ ಮರ್ಯಾದೆ ಇಲ್ಲದ ಸರ್ಕಾರ. ಪಂಚೇಂದ್ರಿಯಗಳೇ ಇಲ್ಲದ ಸರ್ಕಾರ. ಇವರು ಯಾವ ರೈತರ ಸಾಲಮನ್ನಾ ಮಾಡಿಲ್ಲ. ಬರಗಾಲ ಸಮಸ್ಯೆಯನ್ನು ನಿಭಾಯಿಸುತ್ತಿಲ್ಲ. ರೈತರ ಜೊತೆ ಇದ್ದೇವೆ ಅಂತಾರೆ, ಋಣ ಮುಕ್ತ ಪತ್ರದ ಬದಲಿಗೆ ಸಾಂತ್ವನ ಪತ್ರ ಕೊಡುತ್ತಾರೆ. ರೈತರು ಸಂಕಷ್ಟದಲ್ಲಿ ಇದ್ದಾಗ ರೆಸಾರ್ಟ್ ನಲ್ಲಿ ಮಾಲೀಸ್ ಮಾಡಿಸಿಕೊಳ್ಳುತ್ತಾ ಇರುತ್ತಾರೆ ಎಂದು ಟಾಂಗ್ ಕೊಟ್ಟರು.

    ಸಿ. ಎಂ ಇಬ್ರಾಹಿಂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಿರುವುದಕ್ಕೆ ಪ್ರತಿಕ್ರಿಯಿಸಿ, ಮೋದಿ ಬಗ್ಗೆ ಜೋಕರ್ ಮತ್ತು ಬ್ರೋಕರ್ ಇಬ್ರಾಹಿಂ ಏನೇನೋ ಮಾತನಾಡುತ್ತಾ ಇದ್ದಾರೆ. ಭ್ರಷ್ಟಾಚಾರದ ಹಣ ತಂದು ಕುಂದಗೋಳ ಚಿಂಚೊಳಿಯಲ್ಲಿ ಹಂಚುತ್ತಿದ್ದಾರೆ ಎಂದು ಕಿಡಿಕಾರಿದರು.

    ಈಗಾಗಲೇ ಹರ್ಲಾಪುರದ ರೈತ ಈಶ್ವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆಯಿಂದ ಸಿಎಂಗೆ ಕುಂದಗೋಳಗೆ ಸ್ವಾಗತ ಮಾಡುವಂತಾಗಿದೆ. ಈ ಸರ್ಕಾರ ನಿಜವಾಗಿಯೂ ಬದುಕಿದ್ದರೆ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

  • ಕುಂದಗೋಳ ಉಪಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ನೀಡಿದ ಡಿಕೆಶಿ

    ಕುಂದಗೋಳ ಉಪಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ನೀಡಿದ ಡಿಕೆಶಿ

    ಧಾರವಾಡ: ಕುಂದಗೋಳ ಉಪ ಚುನಾವಣೆ ದಿನದಿಂದ ದಿನಕ್ಕೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಇಂದು ಧಾರವಾಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಬಸವರಾಜ್ ಅರಬಗೊಂಡ ಇಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬಸವರಾಜ್ ಅರಬಗೊಂಡ ಸದ್ಯ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕರಾಗಿದ್ದಾರೆ.

    ಕೆಲವು ದಿನಗಳ ಹಿಂದೆಯೇ ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗ ಪ್ರಚಾರದಲ್ಲಿ ಬಿಜೆಪಿ ನಾಯಕರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅಂದು ಸುಳಿವು ನೀಡಿದಂತೆ ಸ್ಥಳೀಯ ಪ್ರಭಾವಿ ಮುಖಂಡರಾಗಿರುವ ಬಸವರಾಜ್ ಅರಬಗೊಂಡರನ್ನು ಪಕ್ಷಕ್ಕೆ ಕರೆತರುವಲ್ಲಿ ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದು, ಬಿಜೆಪಿ ಭಾರೀ ಹೊಡೆತ ಎನ್ನಲಾಗಿದೆ. ಈ ಮೊದಲೇ ಸ್ಥಳೀಯ ಬಿಜೆಪಿ ಮುಖಂಡರ ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಸುಳಿವನ್ನು ಡಿ.ಕೆ.ಶಿವಕುಮಾರ್ ನೀಡಿದ್ದರು.

    ಬಿಜೆಪಿ ಕಾರ್ಯಕರ್ತರನ್ನು ತಮ್ಮತ್ತ ಸೆಳೆಯುವ ಕೆಲಸ ಡಿಕೆಶಿ ಮಾಡುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಕೈ ಹಾಕಿದರೆ ಹುಷಾರ್. ಇದರ ಪರಿಣಾಮ ನೆಟ್ಟಗಿರಲ್ಲ. ಇದು ಕನಕಪುರ, ರಾಮನಗರ ಅಲ್ಲ. ಇಲ್ಲಿ ಯಾರನ್ನು ಖರೀದಿಸಲು ಸಾಧ್ಯವಿಲ್ಲ. ಡಿಕೆ ಶಿವಕುಮಾರ್ ಅವರಿಗೆ ಕುಂದಗೋಳ ಉಪ ಚುನಾವಣೆಯ ಉಸ್ತುವಾರಿ ಕೊಟ್ಟಿದ್ದಾರೆ. ಯಾಕೆ ಕಾಂಗ್ರೆಸ್‍ನಲ್ಲಿ ಉತ್ತರ ಕರ್ನಾಟಕದಲ್ಲಿ ನಾಯಕರೇ ಇಲ್ಲವೇ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗುರುವಾರ ಎಚ್ಚರಿಕೆ ನೀಡಿದ್ದರು.

    ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇಡೀ ರಾಜ್ಯದ ನಾಯಕರು ಚುನಾವಣೆ ನಡೆಸಲು ಆಗಮಿಸಿದ್ದಾರೆ. ನಮ್ಮ ಕಾರ್ಯಕರ್ತರು ಗ್ರಾಮ ಪಂಚಾಯತ್ ಮಟ್ಟದಲ್ಲಿ ತೆರಳಿ ಮಹಿತಿ ಕಲೆ ಹಾಕಿದ್ದು, ಶಿವಳ್ಳಿ ಅವರು ಯಾರಿಗೂ ಕಿರುಕುಳ ನೀಡಿಲ್ಲ. ನಮ್ಮ ಸರ್ಕಾರ ಮತ್ತು ಪಕ್ಷದ ಒಗ್ಗಟ್ಟಿನಿಂದ ಚುನಾವಣೆಯ ಕೆಲಸದಲ್ಲಿ ಭಾಗಿಯಾಗಿದೆ. ಜನ ನಮ್ಮ ಜೊತೆಗಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರು ನಮಗೆ ಆಶಿರ್ವಾದ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಯಾರಿಗೂ ಹಣದ ಆಮಿಷ ಒಡ್ಡಿಲ್ಲ. ಯಾರ ಬಳಿ ಸಾಕ್ಷ್ಯಗಳಿದ್ದರೆ, ಬೇಕಾದರೆ ಪೊಲೀಸರಿಗೆ ದೂರು ನೀಡಬಹುದು ಎಂದು ತಿಳಿಸಿದರು.

  • ಸಾವಿನ ರಾಜಕಾರಣ: ಬಳ್ಳಾರಿ ಕಳೆದುಕೊಂಡಂತೆ ಕುಂದಗೋಳವನ್ನ ಕಳೆದುಕೊಳ್ಳುತ್ತಾ ಬಿಜೆಪಿ?

    ಸಾವಿನ ರಾಜಕಾರಣ: ಬಳ್ಳಾರಿ ಕಳೆದುಕೊಂಡಂತೆ ಕುಂದಗೋಳವನ್ನ ಕಳೆದುಕೊಳ್ಳುತ್ತಾ ಬಿಜೆಪಿ?

    ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಆಡಿದ್ದ ಮಾತು ಬಿಜೆಪಿಗೆ ಮುಳುವಾಗಿತ್ತು. ಜನಾರ್ದನ ರೆಡ್ಡಿ ಅವರ ಮಾತಿನಿಂದಲೇ ಬಳ್ಳಾರಿ ಉಪ ಕದನಲ್ಲಿ ಬಿಜೆಪಿ ಸೋತಿತು ಎಂಬ ಮಾತುಗಳು ಫಲಿತಾಂಶದ ಬಳಿಕ ಕೇಳಿ ಬಂದಿದ್ದವು. ಇದೀಗ ಕುಂದಗೋಳ ಉಪ ಅಖಾಡದಲ್ಲಿಯೂ ಬಿಜೆಪಿ ಸಿ.ಎಸ್.ಶಿವಳ್ಳಿ ಅವರ ಸಾವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಬಳ್ಳಾರಿಯಂತೆಯೇ ಕುಂದಗೋಳದ ಫಲಿತಾಂಶದ ಮೇಲೆ ಶ್ರೀರಾಮುಲು ಮತ್ತು ಜಗದೀಶ್ ಶೆಟ್ಟರ್ ಹೇಳಿಕೆ ಪರಿಣಾಮ ಬೀರುತ್ತಾ ಎಂಬ ಚರ್ಚೆಗಳು ಆರಂಭಗೊಂಡಿವೆ.

    ಶ್ರೀರಾಮುಲು ಹೇಳಿದ್ದೇನು?: ಕಾಂಗ್ರೆಸ್ ಸಚಿವರಾಗಿದ್ದ ಸಿಎಸ್ ಶಿವಳ್ಳಿ ಸಾವಿನಲ್ಲೂ ರಾಜಕೀಯ ಹುಡುಕಿರುವ ಬಿಜೆಪಿ ನಾಯಕರು, ಶಿವಳ್ಳಿ ಯಾವತ್ತೋ ಮಂತ್ರಿ ಆಗಬೇಕಿತ್ತು. ಆದರೆ ಅವರನ್ನು ಕಡೆಗಣಿಸಿ ಬೇರೆಯವರನ್ನು ಮಂತ್ರಿ ಮಾಡಿದ್ದರು. ಮಂತ್ರಿ ಆದ ಬಳಿಕವೂ ಸಿಎಂ ಕುಮಾರಸ್ವಾಮಿ ಸೇರಿದಂತೆ ಶಿವಳ್ಳಿ ಖಾತೆಯಲ್ಲಿ ಬೇರೆಯವರ ಹಸ್ತಕ್ಷೇಪ ಹೆಚ್ಚಾಗಿತ್ತು. ಇದರಿಂದ ಮಾನಸಿಕ ನೊಂದಿದ್ದ ಶಿವಳ್ಳಿ ಪ್ರಾಣಬಿಟ್ಟರು ಎಂದು ಶ್ರೀರಾಮುಲು ಹೇಳಿದ್ದರು.

    ಶ್ರೀರಾಮುಲು ಹೇಳಿಕೆ ಸಮರ್ಥಿಸಿಕೊಂಡ ಶೆಟ್ಟರ್: ಇತ್ತ ಶ್ರೀರಾಮುಲು ಅವರ ಬಳಿಕ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕೂಡ, ಶಿವಳ್ಳಿ ಅವರು ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ಅಸಮಾಧಾನ ಹೊಂದಿದ್ದರು. ಶಿವಳ್ಳಿ ಅವರಿಗೆ ಮಂತ್ರಿ ಸ್ಥಾನ ಸಿಗದೇ ಇದ್ದಾಗ ಅವರಿಗೆ ಸಾಕಷ್ಟು ನೋವಾಗಿತ್ತು. ಆ ನೋವನ್ನು ನನ್ನ ಮುಂದೆಯೇ ಹೇಳಿಕೊಂಡಿದ್ದರು. ಆ ನೋವಿನಿಂದ ಅವರು ಸಾಕಷ್ಟು ಬಳಲಿದ್ದರು. ಈ ಸಂಬಂಧ ಕಾಂಗ್ರೆಸ್ ದೂರು ಕೊಡಲಿ ಅದಕ್ಕೆ ನಾವು ಹೆದರುವುದಿಲ್ಲ ಎಂದು ಹೇಳಿದ್ದಾರೆ.

    ಕಣ್ಣೀರಿಟ್ಟ ಡಿಕೆಶಿ: ಇದೇ ಸಂದರ್ಭದಲ್ಲಿ ಕುಂದಗೋಳದಲ್ಲಿ ಶಿವಳ್ಳಿಯವ್ರನ್ನ ನೆನೆದು ಸಚಿವ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದಾರೆ. ಶಿವಳ್ಳಿ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಿರ್ಧರಿಸಿದ್ದೇವೆ. ರಾಮುಲು ಪೊಲೀಸರಿಗೆ ದೂರು ನೀಡಲಿ. ನಾವು ಕಿರುಕುಳ ನೀಡಿದ್ದೇವೆ ಎಂದಾದ್ರೆ ಪೊಲೀಸರಿಗೆ ಸಾಕ್ಷ್ಯ ಕೊಡಲಿ. ಶಿವಳ್ಳಿ ಸಾವಿನ ವಿಚಾರದಲ್ಲಿ ರಾಜಕೀಯ ಮಾಡಬಾರದು ಇಂತಹ ಮಾತುಗಳಿಂದ ರಾಮುಲು ಗೌರವ ಕಳೆದುಕೊಂಡಿದ್ದಾರೆ. ಶಿವಳ್ಳಿ ಪತ್ನಿಯನ್ನು ಗೆಲ್ಲಿಸಿ ಮೈತ್ರಿ ಸರ್ಕಾರವನ್ನು ಬಲಪಡಿಸಿ ಎಂದು ಪಕ್ಷ ಕಾರ್ಯಕರ್ತರಿಗೆ ಕರೆ ನೀಡಿದರು.

  • ನಾನು, ರಮೇಶಣ್ಣ ಪಕ್ಷದಲ್ಲೇ ಇದ್ದೇವೆ : ಮಹೇಶ್ ಕುಮಟಳ್ಳಿ

    ನಾನು, ರಮೇಶಣ್ಣ ಪಕ್ಷದಲ್ಲೇ ಇದ್ದೇವೆ : ಮಹೇಶ್ ಕುಮಟಳ್ಳಿ

    ಹುಬ್ಬಳ್ಳಿ: ನಮ್ಮಲ್ಲಿ ಸಣ್ಣ ಅಸಮಾಧಾನ ಇರುವುದು ನಿಜ. ಆದರೆ ಪಕ್ಷದಲ್ಲಿಯೇ ಅವುಗಳನ್ನು ಸರಿ ಮಾಡಿಕೊಳ್ಳುತ್ತೇವೆ. ನಾನು ಮತ್ತು ರಮೇಶಣ್ಣ ಪಕ್ಷದಲ್ಲೇ ಇರುತ್ತೇವೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಕುಂದಗೋಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಕ್ಷ ಬಿಡುವ ನಿರ್ಧಾರ ಮಾಡಲ್ಲ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರುತ್ತೇವೆ. ರಮೇಶಣ್ಣ ನಾನು ಪಕ್ಷದಲ್ಲೇ ಇದ್ದೇವೆ. ಇದು ಹೈಕಮಾಂಡ್ ಅವರಿಗೂ ತಿಳಿದಿದೆ. ಆದ್ದರಿಂದ ಮಾಧ್ಯಮಗಳಿಗೆ ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದರು.

    ನಮ್ಮಲ್ಲಿ ಇರುವ ಅಸಮಾಧಾನವನ್ನು ನಾವೇ ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸುಕೊಳ್ಳುತ್ತೇವೆ. ಈ ಬಗ್ಗೆ ಹೈಕಮಾಂಡ್‍ಗೆ ತಿಳಿಸಿದ್ದೇವೆ. ನಮ್ಮಲ್ಲಿ ಯಾರು ಸಂಧಾನ ಮಾಡುವ ಅವಶ್ಯಕತೆ ಇಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ. ಕುಂದಗೋಳದಲ್ಲಿ ನಾವು ಗೆಲ್ಲುತ್ತೇವೆ. ಸಿಎಂ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲರೂ ನಮ್ಮ ನಾಯಕರಾಗಿದ್ದಾರೆ. ಯಾರು ಅಂತಕ ಪಡೆಯುವ ಅಗತ್ಯವಿಲ್ಲ ಎಂದರು.

    ಇತ್ತ ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ರಮೇಶ್ ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಕುಮಟಳ್ಳಿ ತಮ್ಮತ್ತ ಸೆಳೆದು ಬಿಜೆಪಿಗೆ ಚಮಕ್ ನೀಡಿದ್ದಾರೆ. ಆ ಮೂಲಕ ಸಮ್ಮಿಶ್ರ ಸರ್ಕಾರ ಚುನಾವಣೆ ಬಳಿಕ ಉಳಿಯುವುದಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಖಡಕ್ ಸಂದೇಶ ರವಾನೆ ಮಾಡಿದ್ದಾರೆ.

  • ಶಿವಳ್ಳಿ ನೆನೆದು ವೇದಿಕೆಯಲ್ಲೇ ಕಣ್ಣೀರು ಹಾಕಿದ ಡಿಕೆಶಿ!

    ಶಿವಳ್ಳಿ ನೆನೆದು ವೇದಿಕೆಯಲ್ಲೇ ಕಣ್ಣೀರು ಹಾಕಿದ ಡಿಕೆಶಿ!

    ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಚಿವ ಡಿ.ಕೆ ಶಿವಕುಮಾರ್ ಅವರು ಇಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ದಿವಂಗತ ಸಚಿವ ಸಿ.ಎಸ್ ಶಿವಳ್ಳಿ ಅವರನ್ನು ನೆನೆದು ವೇದಿಕೆ ಮೇಲೆಯೇ ಕಣ್ಣೀರಿಟ್ಟಿದ್ದಾರೆ.

    ಇಂಗಳಗಿ ಗ್ರಾಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ವೇದಿಕೆ ಮೇಲೆ ಮಾತನಾಡುತ್ತಿದ್ದ ಅವರು ಶಿವಳ್ಳಿ ಅವರನ್ನು ಕಳೆದುಕೊಂಡಿರುವುದು ಮನಸ್ಸಿಗೆ ಬಹಳ ನೋವನ್ನು ತಂದಿದೆ ಎಂದು ಹೇಳಿ ಕಣ್ಣೀರಿಟ್ಟಿದ್ದಾರೆ.

    ಶಿವಳ್ಳಿ ಜಾತಿ ಧರ್ಮ ಬೇಧ ಭಾವ ಮಾಡಲಿಲ್ಲ. ನಿಮಗೆ ಯಾವತ್ತಾದ್ರೂ ಅವನು ಕಿರುಕುಳ ನೀಡಿದ್ದಾನಾ ಹೇಳಿ? ಪಾಪ ಶಿವಳ್ಳಿ ಪತ್ನಿ ಕುಸುಮಾ ಅವರು ಇಂದು ಚುನಾವಣೆಗೆ ನಿಂತಿದ್ದಾರೆ. ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವರನ್ನು ಗೆಲ್ಲಿಸಿ ಮೈತ್ರಿ ಸರ್ಕಾರವನ್ನು ಬಲಗೊಳಿಸಿ ಎಂದು ಹೇಳಿ ಭಾವುಕರಾದರು.

    ಈಗ ಚುನಾವಣೆ ಬಂದಿದೆ ವೋಟ್ ಕೊಡಿ ಎಂದು ಕಣ್ಣಿರು ಹಾಕುತ್ತಿಲ್ಲ. ಬದಲಿಗೆ ನನಗೆ ತುಂಬಾ ಹತ್ತಿರವಾದ ಗೆಳೆಯ ಅವನು. ಶಿವಳ್ಳಿಯನ್ನು ಕಳೆದುಕೊಂಡು ನನಗೆ ನೋವಾಗಿದೆ. ಹೀಗಾಗಿ ನನಗೆ ಅಳು ಬಂದಿದೆ. ನಾನು ನಾಟಕ ಮಾಡುತ್ತಿಲ್ಲ ಎಂದು ಹೇಳಿ ಭಾವುಕರಾದರು.