Tag: Kundapur

  • ‘ಕಾಂತಾರ’ ಚಿತ್ರೀಕರಣಕ್ಕೆ ಕುಂದಾಪುರದಲ್ಲಿ ತಲೆಯೆತ್ತಿ ನಿಂತ ಬೃಹತ್ ಸೆಟ್

    ‘ಕಾಂತಾರ’ ಚಿತ್ರೀಕರಣಕ್ಕೆ ಕುಂದಾಪುರದಲ್ಲಿ ತಲೆಯೆತ್ತಿ ನಿಂತ ಬೃಹತ್ ಸೆಟ್

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 1  (Kantara 1) ಸಿನಿಮಾದ ಚಿತ್ರೀಕರಣಕ್ಕಾಗಿ ಕುಂದಾಪುರದಲ್ಲಿ (Kundapur) ಬೃಹತ್ ಆಧುನಿಕ ಸೆಟ್ ವೊಂದನ್ನು ನಿರ್ಮಾಣ ಮಾಡಿದೆ ಹೊಂಬಾಳೆ ಫಿಲ್ಮ್ಸ್. ರಾಮೋಜಿರಾವ್ ಫಿಲ್ಮ್ಸ್ ಬಿಟ್ಟರೆ, ಈ ಪ್ರಮಾಣದಲ್ಲಿ ತಯಾರಾದ ಸೆಟ್ ಇದಾಗಲಿದೆ. 200 x 200 ಅಡಿ ಒಳಾಂಗಣ ಹೊಂದಿರುವ ಸೆಟ್ ಇದಾಗಿದೆಯಂತೆ.

    ಕಾಡಿನ ಮಧ್ಯ ಕೆಲವು ದೃಶ್ಯಗಳನ್ನು ರಿಷಬ್ ಚಿತ್ರೀಕರಿಸಿದರೆ ಒಳಾಗಂಣದ ಬಹುತೇಕ ಚಿತ್ರೀಕರಣ ಇದೇ ಸೆಟ್ ನಲ್ಲೇ ನಡೆಯಲಿದೆಯಂತೆ. ಕುದುರೆ ಸವಾರಿ ಸೇರಿದಂತೆ ಹಲವಾರು ಕಸರತ್ತುಗಳನ್ನು ಈ ಸೆಟ್ ನಲ್ಲೇ ಮಾಡುವಷ್ಟು ದೊಡ್ಡದಾಗಿ ಅದು ನಿರ್ಮಾಣವಾಗಿದೆ. ಅಲ್ಲಿಯೇ ಡಬ್ಬಿಂಗ್, ಎಡಿಟಂಗ್ ಸ್ಟುಡಿಯೋ ಕೂಡ ನಿರ್ಮಾಣವಾಗಿದೆಯಂತೆ.

    ಈಗಾಗಲೇ ಚಿತ್ರೀಕರಣವನ್ನು ಆರಂಭಿಸಿರುವ ರಿಷಬ್, 20 ದಿನಗಳ ಕಾಲ ಮೊದಲನೇ ಹಂತದ ಶೂಟಿಂಗ್ ಇರಲಿದೆಯಂತೆ. ಈಗಾಗಲೇ ಕಾಡಿನ ಕೆಲವು ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು, ಸೆಟ್ ನಲ್ಲೂ ಮುಂದಿನ ದಿನಗಳಲ್ಲಿ ಚಿತ್ರೀಕರಣ ಮುಂದುವೆಯಲಿದೆ. ಕುಂದಾಪುರದಲ್ಲೇ ಬಹುತೇಕ ಟೀಮ್ ವಾಸ್ತವ್ಯ ಹೂಡಿದೆ.

     

    ಕಥೆಯ ಸಾರಾಂಶವನ್ನು ಹೇಳುವಂತ ದೃಶ್ಯಗಳು ಈಗಾಗಲೇ ಚಿತ್ರೀಕರಣವಾಗಿದ್ದು, ಮುಂದಿನ ದಿನಗಳಲ್ಲಿ ಒಂದೊಂದೇ ಪ್ರಮುಖ ಪಾತ್ರಗಳು ಜೊತೆಯಾಗುತ್ತವೆಯಂತೆ. ಅಂದಹಾಗೆ ಸೆಟ್ ಫೋಟೋಗಳು ಸೋರಿಕೆಯಾಗದಂತೆ ಮುತುವರ್ಜಿ ವಹಿಸಿದ್ದಾರೆ ರಿಷಬ್ ಅಂಡ್ ಟೀಮ್.

  • ದಾರಿಯಲ್ಲಿ ಸಿಕ್ಕ 10 ಸಾವಿರ ರೂ. ಮಾಲೀಕರಿಗೆ ಹಿಂತಿರುಗಿಸಿದ ಹೈಸ್ಕೂಲ್ ವಿದ್ಯಾರ್ಥಿನಿಯರು

    ದಾರಿಯಲ್ಲಿ ಸಿಕ್ಕ 10 ಸಾವಿರ ರೂ. ಮಾಲೀಕರಿಗೆ ಹಿಂತಿರುಗಿಸಿದ ಹೈಸ್ಕೂಲ್ ವಿದ್ಯಾರ್ಥಿನಿಯರು

    ಉಡುಪಿ: ಹೈಸ್ಕೂಲ್ ವಿದ್ಯಾರ್ಥಿನಿಯರು ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಸಿಕ್ಕ 10 ಸಾವಿರ ರೂ. ಅನ್ನು ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದಿರುವ ಘಟನೆ ಕುಂದಾಪುರ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

    ಕೋಣಿ ಪ್ರೌಢ ಶಾಲಾ ನಾಲ್ಕು ವಿದ್ಯಾರ್ಥಿನಿಳಾದ ಶ್ರಾವ್ಯಾ, ಐಶ್ವರ್ಯಾ.ಜೆ, ಪ್ರಸ್ತುತಿ ಮತ್ತು ವೈಷ್ಣವಿ ಪ್ರಾಮಾಣಿಕತೆ ಮೆರೆದಿದ್ದಾರೆ. ಅವರು ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಪ್ಲಾಸ್ಟಿಕ್ ನಲ್ಲಿ ಸುತ್ತಿದ ಪೊಟ್ಟಣ ಸಿಕ್ಕಿದೆ. ಅದನ್ನು ಈ ವಿದ್ಯಾರ್ಥಿನಿಯರು ತೆಗೆದು ನೋಡಿದಾಗ 10 ಸಾವಿರ ರೂಪಾಯಿ ಇರುವುದು ಕಂಡುಬಂದಿದೆ. ತಕ್ಷಣ ವಿದ್ಯಾರ್ಥಿನಿಯರು ಸಿಕ್ಕಿದ ಹತ್ತು ಸಾವಿರ ರೂ. ಅನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಕೊಟ್ಟಿದ್ದಾರೆ. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ: ಸಿಎಂ ಸ್ಪಷ್ಟನೆ

    ಮುಖ್ಯೋಪಾಧ್ಯಯರು ವಾಟ್ಸಪ್ ಮೂಲಕ ಸಾರ್ವಜನಿಕ ಸಂದೇಶವನ್ನು ಹರಿಬಿಟ್ಟಿದ್ದಾರೆ. ನಂತರ ಈ ಹಣ ಅದೇ ಊರಿನ ಅಂಚೆ ಇಲಾಖೆಯಲ್ಲಿ ಕೆಲಸ ಮಾಡುವ ಸುಲೇಖಾ ಅವರದ್ದು ಎಂಬುದು ಗಮನಕ್ಕೆ ಬಂದಿದೆ. ಪರಿಣಾಮ ಇಂದು ಬೆಳಗ್ಗೆ ಶಾಲೆಯ ಅಸಂಬ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಾಮಾಣಿಕ ಮಕ್ಕಳಾದ ಶ್ರಾವ್ಯಾ, ಐಶ್ವರ್ಯಾ.ಜೆ, ಪ್ರಸ್ತುತಿ ಮತ್ತು ವೈಷ್ಣವಿ ಇವರು ಹಣವನ್ನು ಕಳೆದುಕೊಂಡ ಸುಲೇಖಾ ಅವರಿಗೆ ಹಸ್ತಾಂತರಿಸಿದರು.

    ಸುಲೇಖಾ ಶಾಲೆಯ ಎಲ್ಲ ವಿದ್ಯಾರ್ಥಿಗಳಗೆ ಸಿಹಿ ವಿತರಿಸಿ ಧನ್ಯವಾದ ಸಮರ್ಪಿಸಿದರು. ಮಕ್ಕಳ ಈ ಪ್ರಾಮಾಣಿಕತನ ಎಲ್ಲರಿಗೂ ಮಾದರಿಯಾಗಬೇಕು ಎಂದು ಆಶಿಸಿದರು.

    ಕೆ.ಜಿ.ಜಗನ್ನಾಥರಾವ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಾದವ ಅಡಿಗ ಈ ಕುರಿತು ಮಾತನಾಡಿದ್ದು, ನಮ್ಮ ಮಕ್ಕಳು ಪ್ರಾಮಾಣಿಕರು ಎಂದು ಹೆಮ್ಮೆಯಿಂದ ನಾನು ಹೇಳುತ್ತೇನೆ. ಇದು ನಮ್ಮ ಶಾಲೆಗೆ ಊರಿಗೆ ಮತ್ತು ರಾಜ್ಯಕ್ಕೆ ಒಂದು ಮಾದರಿ ಕೆಲಸ. ಗ್ರಾಮೀಣ ಭಾಗದ ಮಕ್ಕಳು ಕಷ್ಟದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಮನೆಯಲ್ಲಿ ಕಷ್ಟದ ಜೀವನ ನಡೆಯುತ್ತಿರುವುದರಿಂದ ಇಂತಹ ಪ್ರಾಮಾಣಿಕತೆ ಅವರಲ್ಲಿ ಬಂದಿರಲು ಸಾಧ್ಯ ಎಂದು ಪ್ರಶಂಸಿದರು. ಇದನ್ನೂ ಓದಿ: ಕೊರೊನಾ ಜಾಗ್ರತೆ ವಹಿಸಿಕೊಂಡೇ ಮೇಕೆದಾಟು ಪಾದಯಾತ್ರೆ ಮಾಡ್ತೀವಿ: ಸಿದ್ದರಾಮಯ್ಯ

    ರಸ್ತೆಯಲ್ಲಿ ಹಣ ಸಿಕ್ಕಿದ ಕೂಡಲೇ ಎರಡನೇ ಆಲೋಚಿಸದೇ ನೇರವಾಗಿ ಶಾಲೆಗೆ ಬಂದು ಹಣವನ್ನು ಕೊಟ್ಟು ಹೋಗಿದ್ದಾರೆ. ಶಿಕ್ಷಕರು ಮಕ್ಕಳು ಶಾಲಾಭಿವೃದ್ಧಿ ಸಮಿತಿ ಸಮ್ಮುಖದಲ್ಲಿ ಹಣ ಕಳೆದುಕೊಂಡವರಿಗೆ ಅದನ್ನು ಹಸ್ತಾಂತರ ಮಾಡಲಾಗಿದೆ ಎಂದು ಹೇಳಿದರು.

  • ನಾಡಗೀತೆ ಪೂರ್ಣವಾಗುವವರೆಗೆ ಕದಲದ ದನ

    ನಾಡಗೀತೆ ಪೂರ್ಣವಾಗುವವರೆಗೆ ಕದಲದ ದನ

    ಉಡುಪಿ: ರಾಷ್ಟ್ರಗೀತೆ, ನಾಡಗೀತೆಗೆ ಗೌರವ ಕೊಡಬೇಕು ಎಂಬುದು ನಿಯಮ. ಬುದ್ಧಿ ತಿಳಿದ ಮನುಷ್ಯರೇ ಕೆಲವೊಮ್ಮೆ ನಿಯಮ ಉಲ್ಲಂಘನೆ ಮಾಡಿ ಉಡಾಫೆ ತೋರಿಸುತ್ತಾರೆ. ಆದರೆ ನಿಯಮ ಗೊತ್ತಿಲ್ಲದ ಹಸುವೊಂದು ನಾಡಗೀತೆ ಕೇಳಿದ ತಕ್ಷಣ ಕೊಂಚವೂ ಅಲುಗಾಡದೆ ನಿಂತು ಗೌರವ ತೋರಿದೆ.

    ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬೈಂದೂರು ವಲಯದ ಮಾವಿನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದೃಶ್ಯ ಕಂಡುಬಂದಿದೆ. ಶಾಲಾ ವಿದ್ಯಾರ್ಥಿಗಳು ಮುಂಜಾನೆ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಹಸು ಶಾಲಾ ಆವರಣದೊಳಗೆ ಬಂದಿದೆ. ವಿದ್ಯಾರ್ಥಿಗಳು ಸಾಮೂಹಿಕವಾಗಿ ನಾಡಗೀತೆ ಹಾಡುವಾಗ ಶಿಸ್ತಿನಲ್ಲಿ ಹಸು ಒಂದೇ ಕಡೆ ನಿಂತಿದೆ. ಇದನ್ನೂ ಓದಿ: ಮುಂದಿನ ಆದೇಶದವರೆಗೆ ದೆಹಲಿಯ ಎಲ್ಲಾ ಶಾಲೆಗಳನ್ನು ಮುಚ್ಚಲಾಗುವುದು: ಗೋಪಾಲ್ ರೈ

    ಅದರಲ್ಲಿಯೂ ಈ ಹಸುವಿನ ವಿಶೇಷವೆಂದರೆ ನಾಡಗೀತೆ ಮುಗಿಯುವವರೆಗೂ ಕದಲದೆ ನಿಂತಲ್ಲೆ ನಿಂತಿದ್ದು, ನಂತರ ಹುಲ್ಲು ಅರಸುತ್ತಾ ಹೋಗಿದೆ. ನಾಡಗೀತೆಗೆ ಹಸು ಪ್ರತಿಕ್ರಿಯಿಸಿದ ಈ ವಿಶೇಷ ದೃಶ್ಯವನ್ನು ಶಿಕ್ಷಕರೊಬ್ಬರು ಸೆರೆ ಹಿಡಿದಿದ್ದಾರೆ.

  • ಅಕ್ರಮ ಗೋವು ಸಾಗಾಟ- ಓರ್ವನ ಬಂಧನ, ಪಿಕಪ್ ಜಪ್ತಿ

    ಅಕ್ರಮ ಗೋವು ಸಾಗಾಟ- ಓರ್ವನ ಬಂಧನ, ಪಿಕಪ್ ಜಪ್ತಿ

    ಉಡುಪಿ: ಆರು ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಬಂಧಿಸಲಾಗಿದೆ. ಕುಂದಾಪುರ ತಾಲೂಕಿನಿಂದ ಭಟ್ಕಳಕ್ಕೆ ಪಿಕ್ ಅಪ್ ನಲ್ಲಿ ತುಂಬಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಶಬ್ಬೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬೈಂದೂರು ಪೋಲಿಸರ ಮಿಂಚಿನ ಕಾರ್ಯಚರಣೆ ಮಾಡಿದ್ದು, ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಪಿ.ಎಸ್.ಐ ಪವನ್ ನಾಯಕ್ ಮತ್ತು ಸಿಬ್ಬಂದಿ ನೇತ್ರತ್ವದಲ್ಲಿ ಕಾರ್ಯಚರಣೆ ಮಾಡಲಾಗಿದೆ. ಖಚಿತ ಮಾಹಿತಿಯೊಂದಿಗೆ ಭಟ್ಕಳದಲ್ಲಿ ಕಾರ್ಯಚರಣೆ ನಡೆಸಿದ ಪೋಲಿಸರು ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ತಪಾಸಣೆ ನಡೆಸಿದಾಗ ಆರು ಗೋವುಗಳು ಇರುವುದು ಕಂಡು ಬಂದಿದೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಉಡುಪಿ ಪ್ರವಾಸ- ಜಿಲ್ಲಾಸ್ಪತ್ರೆಗೆ ಗುದ್ದಲಿ ಪೂಜೆ

    ಉಡುಪಿ ಜಿಲ್ಲೆಯ ಬೈಂದೂರಿನಿಂದಲೇ ಗೋವು ಸಾಗಾಟದ ವಾಹನವನ್ನು ಪೋಲಿಸರು ಹಿಂಬಾಲಿಸಿದ್ದಾರೆ. ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ ಬಂಧನ ಪ್ರಕ್ರಿಯೆ ನಡೆದಿದೆ. ಪಿಕಪ್ ನಲ್ಲಿದ್ದ ಆರು ಗೋವನ್ನು ರಕ್ಷಣೆ ಮಾಡಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ

  • ಫೈನಾನ್ಶಿಯರ್ ಕೊಲೆ- ಆರೋಪಿ ಅನೂಪ್ ಪೊಲೀಸ್ ಕಸ್ಟಡಿಗೆ

    ಫೈನಾನ್ಶಿಯರ್ ಕೊಲೆ- ಆರೋಪಿ ಅನೂಪ್ ಪೊಲೀಸ್ ಕಸ್ಟಡಿಗೆ

    ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ಪಾಲುದಾರ ಅನೂಪ್ ಶೆಟ್ಟಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದು, ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಯನ್ನು ಆಗಸ್ಟ್ 9ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

    ಗೆಳೆಯ ಅಜೇಂದ್ರನನ್ನು ಕೊಲೆಗೈದು ಆತನ ಕಾರಿನಲ್ಲೇ ಅನೂಪ್ ಗೋವಾಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪೊಲೀಸರ ಕಾರ್ಯಾಚರಣೆಯಿಂದ ಆರೋಪಿಯ ಬಂಧನವಾಗಿದೆ. ಇದನ್ನೂ ಓದಿ: ಸತ್ತವನ ಕಾರಿನಲ್ಲೇ ಕೊಲೆಗಾರ ಎಸ್ಕೇಪ್- ಆರೋಪಿ ಅನೂಪ್ ಶೆಟ್ಟಿ ಗೋವಾದಲ್ಲಿ ಅಂದರ್

    ಅಜೇಂದ್ರ ಶೆಟ್ಟಿಯ ಚಿನ್ನದ ಚೈನ್, ಆಭರಣಗಳು, ಕೃತ್ಯಕ್ಕೆ ಬಳಸಿದ ಆಯುಧಗಳನ್ನು ಇನ್ನಷ್ಟೇ ವಶಕ್ಕೆ ಪಡೆಯಬೇಕಿದೆ. ಪ್ರಕರಣದಲ್ಲಿ ಬೇರೆ ಯಾರಾದ್ರೂ ಶಾಮೀಲಾಗಿದ್ದಾರೆ ಎಂಬ ಬಗ್ಗೆ ಇನ್ನಷ್ಟು ಕೂಲಂಕುಶ ತನಿಖೆ ಆಗಬೇಕಾಗಿದೆ. ಆರೋಪಿಯ ವಿಚಾರಣೆ ಕೂಡ ಮಾಡಬೇಕಾಗಿದೆ ಎಂದು ಎಸ್ ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ಇದನ್ನೂ ಓದಿ: ಉಡುಪಿಯಲ್ಲಿ ಸರಣಿ ಕಳ್ಳತನ – ಮೂರು ಮನೆಗೆ ಕನ್ನ ಹಾಕಿದ ಖದೀಮರು

  • ಕುಂದಾಪುರದಲ್ಲಿ ಡ್ರೀಮ್ ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ

    ಕುಂದಾಪುರದಲ್ಲಿ ಡ್ರೀಮ್ ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ

    ಉಡುಪಿ: ಜಿಲ್ಲೆ ಕುಂದಾಪುರ ತಾಲೂಕಿನ ಸಲ್ವಾಡಿ ಎಂಬಲ್ಲಿ ಫಿನಾನ್ಶಿಯರ್ ಕೊಲೆಯಾಗಿದೆ. ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಅಜೇಂದ್ರ ಶೆಟ್ಟಿ (33) ಕೊಲೆಗೀಡಾದ ಫೈನಾನ್ಸ್ ಮಾಲೀಕ.

    ಕುಂದಾಪುರದ ತಾಲೂಕಿನ ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಳ್ವಾಡಿಯಲ್ಲಿ ತಡರಾತ್ರಿ ಡ್ರೀಮ್ ಫೈನಾನ್ಸ್ ನ ಫೈನಾನ್ಶಿಯರ್ ಕೊಲೆಯಾಗಿದೆ. ಯಡಾಡಿ ಮತ್ಯಾಡಿ ಕೂಡಲ್ ನಿವಾಸಿಯಾಗಿರುವ ಅಜೇಂದ್ರ ಶೆಟ್ಟಿ ತಡರಾತ್ರಿಯವರೆಗೆ ಮನೆಗೆ ವಾಪಾಸ್ಸಾಗಿರಲಿಲ್ಲ. ಮನೆಯವರು ಹುಡುಕಾಟ ಪ್ರಾರಂಭಿಸಿದರು. ಎಲ್ಲೂ ಕೂಡ ಕಾಣಿಸದಿದ್ದಾಗ ಆತನ ಸ್ನೇಹಿತರು ಫೈನಾನ್ಸ್ ಗೆ ಹೋಗಿದ್ದಾರೆ.

    ಫೈನಾನ್ಸ್ ಒಳಗೆ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ ಎಂಬ ಮಾಹಿತಿಯಿದೆ. ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ಅಜೇಂದ್ರ ಫೈನಾನ್ಸ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ವ್ಯವಹಾರ ವಿಚಾರದಲ್ಲಿ ನಡೆದಿರುವ ಕೊಲೆಯೆಂದು ಮೇಲ್ನೋಟಕ್ಕೆ ಅಂದಾಜಿಸಲಾಗಿದೆ. ಕೊಲೆಯ ಹಿಂದಿನ ಕಾರಣ ಪೊಲೀಸ್ ತನಿಖೆ ಯಿಂದ ಬೆಳಕಿಗೆ ಬರಬೇಕಾಗಿದೆ. ಇದನ್ನೂ ಓದಿ: ಉಡುಪಿಯಲ್ಲಿ ಸರಣಿ ಕಳ್ಳತನ – ಮೂರು ಮನೆಗೆ ಕನ್ನ ಹಾಕಿದ ಖದೀಮರು

    ಉಡುಪಿ ಜಿಲ್ಲೆಯಾದ್ಯಂತ ಇತ್ತೀಚಿಗೆ ಒಂದಾದ ಮೇಲೆ ಒಂದು ಕೊಲೆ ಪ್ರಕರಣಗಳು ನಡೆಯುತ್ತಿದೆ. ಅಪರಾಧ ಕೃತ್ಯ ಹೆಚ್ಚಾಗುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ. ಕುಂದಾಪುರ ಗ್ರಾಮಾಂತರ ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಉಡುಪಿಯ ವಿಶಾಲಾ ಮರ್ಡರ್- ಯುಪಿಯಲ್ಲಿ ತಲೆಮರೆಸಿಕೊಂಡಿರುವ ಕಾಂಟ್ರ್ಯಾಕ್ಟ್ ಕಿಲ್ಲರ್

  • Exclusive: ಉಸಿರಿರೋತನಕ ಕೇಳಿ ಸಚಿವ ಸ್ಥಾನ ಪಡೆಯಲ್ಲ- ಕುಂದಾಪುರದ ವಾಜಪೇಯಿ ಹಾಲಾಡಿ ನೇರ ನುಡಿ

    Exclusive: ಉಸಿರಿರೋತನಕ ಕೇಳಿ ಸಚಿವ ಸ್ಥಾನ ಪಡೆಯಲ್ಲ- ಕುಂದಾಪುರದ ವಾಜಪೇಯಿ ಹಾಲಾಡಿ ನೇರ ನುಡಿ

    – ಪಬ್ಲಿಕ್ ಟಿವಿ ಜೊತೆ ಮನಸ್ಸು ಬಿಚ್ಚಿಟ್ಟ ಹಾಲಾಡಿ ಶ್ರೀನಿವಾಸ್ ಶೆಟ್ಟಿ

    ಉಡುಪಿ: ನಾನು ಸಚಿವ ಸ್ಥಾನವನ್ನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಉಸಿರು ಇರೋತನಕ ನಾನು ಬೆಂಗಳೂರಿಗೆ ಹೋಗಿ ಸಚಿವ ಸ್ಥಾನ ಕೇಳಲ್ಲ. ಯಾರ ಕಾಲಿಗೂ ಬೀಳುವುದಿಲ್ಲ ಎಂದು ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಯಾವ ನಾಯಕನ ಹಿಂದೆ ಸುತ್ತು ಬರುತ್ತಾ ತಿರುಗಾಡಲು ಹೋಗುವುದಿಲ್ಲ. ನಾನು ರಾಜಕೀಯದಲ್ಲಿ ಸಮತೋಲನ ಕಳೆದುಕೊಳ್ಳುವುದಿಲ್ಲ. ನಾನು ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ. ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು. ಆಗಲೂ ನಾನು ಸಚಿವ ಸ್ಥಾನ ಕೇಳಿರಲಿಲ್ಲ. ಈಗಲೂ ಕೇಳಲು ಹೋಗಲ್ಲ ಎಂದರು.

    ಸರ್ಕಾರಿ ಕಾರು ಗನ್ ಮ್ಯಾನ್ ಮನೆ ಬೇಡ:
    ರಾಜಕೀಯ ಲಾಬಿ, ಜಾತಿವಾದಿತನ ನಾನು ಮಾಡುವುದಿಲ್ಲ. ಯಾರ ಕಾಲಿಗೆ ಬಿದ್ದು ನಾನು ಕೆಲಸ ತೆಗೆದುಕೊಳ್ಳುವುದಿಲ್ಲ. ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ. ಶ್ರದ್ಧೆಯಿಂದ ಮಾಡುತ್ತೇನೆ. ಶಾಸಕನಾಗಿ ಜನ ಸೇವೆಯನ್ನು ಐದು ಅವಧಿಯಲ್ಲೂ ಮಾಡುತ್ತಿದ್ದೇನೆ ಎಂದು ಹಾಲಾಡಿ ಹೇಳಿದರು.

    ನಾನು ಮಂತ್ರಿಯಾದರೆ ಸರ್ಕಾರಿ ಕಾರು, ಎಸ್ಕಾರ್ಟ್, ಗನ್ ಮ್ಯಾನ್ ತೆಗೆದುಕೊಳ್ಳುವುದಿಲ್ಲ. ನಾನು ಜನರ ಜೊತೆ ಕೆಲಸ ಮಾಡುವವನು ನನಗೆ ಯಾವ ಜೀವ ಭಯವಿಲ್ಲ. ಜೀವ ಭಯ ಇದ್ದವರು ಜನಸೇವೆ ಮಾಡಲು ಸಾಧ್ಯವಿಲ್ಲ. ನನಗೆ ಈವರೆಗೆ ಯಾರಿಂದಲೂ ಯಾವುದೇ ಕರೆಗಳು ಮಾಹಿತಿಗಳು ಬಂದಿಲ್ಲ. ಕರೆ ಬಂದರೆ ನಾನು ಇದನ್ನು ಹೇಳಲು ಸಿದ್ಧನಿದ್ದೇನೆ ಎಂದರು. ನಾನು ಹೆಡ್ ರಾಜಕಾರಣಿ ಅಲ್ಲ. ನನ್ನದು ನೇರನುಡಿಯ ರಾಜಕಾರಣ. ದುರಹಂಕಾರ ಅಲ್ಲ, ಯಾರ ಭಯದಲ್ಲೂ ಇಲ್ಲ. ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು ಎಂದರು.

    ಸ್ಥಾನಮಾನ ಕೇಳುವುದು ಪ್ರಜಾಪ್ರಭುತ್ವ ಅಲ್ಲ
    ಕೇಳಿ ಸಚಿವ ಸ್ಥಾನವನ್ನ ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆ ಅಲ್ಲ. ಕೇಳಿ ಅಧಿಕಾರವನ್ನು ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಲ್ಲ. ಶ್ವಾಸ ಇದ್ದರೆ ಸಚಿವ ಸ್ಥಾನ ಕೇಳಲು ಹೋಗಲ್ಲ. ನಾನು ಜಾತ್ಯಾತೀತ ರಾಜಕಾರಣಿ. ನನ್ನ ಹುಟ್ಟಿನಿಂದ ನಾನು ಜಾತಿ ಸಂಘರ್ಷಕ್ಕೆ ಹೋಗಿಲ್ಲ. ಪ್ರಬಲ ಜಾತಿಯಲ್ಲಿ ಹುಟ್ಟಿದ್ದು ಆಕಸ್ಮಿಕ. ಎಲ್ಲಾ ಜಾತಿಯವರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಒಂದು ಜಾತಿಯ ಉದ್ಧಾರಕ್ಕಾಗಿ ಜನ ನನ್ನನ್ನು ಗೆಲ್ಲಿಸಿದ್ದಲ್ಲ ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಇದನ್ನೂ ಓದಿ: ಇಂದಿನಿಂದ ಆಗಸ್ಟ್ 1ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    ಜಾತಿವಾದಿಗಳು ಶಾಸಕರಾಗಲೇಬಾರದು
    ಜಾತಿವಾದಿಗಳು ಜಾತಿಯ ಸಂಘಕ್ಕೆ ಸಚಿವರಾಗಬೇಕು. ಜಾತಿವಾದಿಗಳು ಯಾವುದೇ ಕಾರಣಕ್ಕೂ ಶಾಸಕರಾಗಬಾರದು. ಜಾತಿವಾದಿಗಳು ಸಾರ್ವತ್ರಿಕ ಚುನಾವಣೆಗೆ ಬರಬಾರದು. ನನ್ನಲ್ಲಿ ಯಾವುದೇ ನಾಟಕೀಯ ಮಾತುಗಳು ಇಲ್ಲ. ಉಪಯೋಗಕ್ಕೆ ಇಲ್ಲದ್ದನ್ನ ಕೊಟ್ಟರೆ ಕಿಸೆಗೆ ಹಾಕಿಕೊಂಡು ಬರುವುದಿಲ್ಲ. ಶಾಸಕರು ಹೆರಿಗೆ ಕೋಣೆಯ ದಾದಿಯ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಮಾರ್ಮಿಕವಾಗಿ ಹೇಳಿದರು. ನನ್ನ ಮಾತುಗಳನ್ನು ನೀವು ಹೇಗೆ ಬೇಕಾದರೂ ವಿಶ್ಲೇಷಣೆ ಮಾಡಿಕೊಳ್ಳಬಹುದು. ವಿಶ್ಲೇಷಣೆ ಮಾಡಲು ಮಾಧ್ಯಮಗಳಿಗೆ ಹಕ್ಕು ಇದೆ ಎಂದರು. ಇದನ್ನೂ ಓದಿ: ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗೋದು ನನಗೆ ಇಷ್ಟವಿಲ್ಲ: ಜಗದೀಶ್ ಶೆಟ್ಟರ್

    ಹಾಲಾಡಿ ಶ್ರೀನಿವಾಸ್ ಶೆಟ್ಟಿ ಉಡುಪಿ ಜಿಲ್ಲೆಯ ಕುಂದಾಪುರದ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. ಸಚಿವ ಸ್ಥಾನ ಕೊಡುವುದಾಗಿ ಬೆಂಗಳೂರಿಗೆ ಕರೆಸಿಕೊಂಡು ಬಿಜೆಪಿ ಒಮ್ಮೆ ಮೋಸ ಮಾಡಿತ್ತು. ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಮಂತ್ರಿ ಸ್ಥಾನ ಕೊಡುವ ಬದಲು ಕೋಟ ಶ್ರೀನಿವಾಸ ಪೂಜಾರಿಗೆ ಸಚಿವ ಸ್ಥಾನ ನೀಡಿತ್ತು. ಆ ಬೇಸರದಿಂದ ಪಕ್ಷೇತರರಾಗಿ ಹಾಲಾಡಿ ಸ್ಪರ್ಧೆ ಮಾಡಿ ಸುಮಾರು 40,611 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಬಿ.ಎಸ್ ಯಡಿಯೂರಪ್ಪ ಮತ್ತು ಟೀಂ ಸಂಧಾನ ಮಾಡಿ ಹಾಲಾಡಿ ತಣ್ಣಗಾಗಿದ್ದರು. ಪಕ್ಷೇತರರಾಗಿ ಗೆದ್ದ ನಂತರ ಐದು ವರ್ಷದ ಅವಧಿಯ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ತೇಜಸ್ವಿನಿ ಅನಂತ್ ಕುಮಾರ್, ಮಗಳು ಜೆಡಿಎಸ್‍ಗೆ ಬಂದ್ರೆ ಸ್ವಾಗತ, ಪಕ್ಷದಲ್ಲಿ ಉತ್ತಮ ಗೌರವ: ಎಚ್‍ಡಿಕೆ

  • ಕುಂದಾಪುರದಲ್ಲಿ ಭಾರೀ ಮಳೆ- ಮರ ಬಿದ್ದು ದಂಪತಿ ಆಸ್ಪತ್ರೆಗೆ ದಾಖಲು

    ಕುಂದಾಪುರದಲ್ಲಿ ಭಾರೀ ಮಳೆ- ಮರ ಬಿದ್ದು ದಂಪತಿ ಆಸ್ಪತ್ರೆಗೆ ದಾಖಲು

    ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನ ಮಕ್ಕಿ ಮನೆಯಲ್ಲಿ ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದಿದೆ. ಮನೆ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಮನೆಯೊಳಗಿದ್ದ ದಂಪತಿಗೆ ಗಂಭೀರ ಗಾಯವಾಗಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕಳೆದ ರಾತ್ರಿ ಈ ಘಟನೆ ನಡೆದಿದ್ದು ಮನೆಯ ಪಕ್ಕದಲ್ಲಿದ್ದ ತೆಂಗಿನ ಮರ ಮತ್ತು ಬೃಹತ್ ಗಾತ್ರದ ಧೂಪದ ಮರ ಬಿದ್ದು ಮನೆ ಹಾನಿಯಾಗಿದೆ. ಬಸ್ರೂರು ಮಕ್ಕಿಮನೆ ಗಣಪಯ್ಯ ಗಾಣಿಗರಿಗೆ ಸೇರಿದ ಮನೆ ಇದಾಗಿದ್ದು, ದಂಪತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: ಉಡುಪಿಯಲ್ಲಿ ಗಾಳಿ ಮಳೆ- ಪ್ರವಾಸಿಗರಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

    ಗಣಪಯ್ಯ ಗಾಣಿಗ ಮತ್ತು ಪತ್ನಿ ವಾರಿಜ ಗಂಭೀರ ಗಾಯವಾಗಿದ್ದು ಮನೆಯಲ್ಲಿ ಇದ್ದ ಮಕ್ಕಳಿಗೆ ಯಾವುದೇ ಅಪಾಯವಾಗದೆ ಅದೃಷ್ಟವಶಾತ್ ಪಾರಾಗಿದ್ದಾರೆ. ಮನೆಯ ಗೋಡೆಗಳು ಕುಸಿದು ಬಿರುಕು ಬಿಟ್ಟಿದೆ. ಮೇಲ್ಛಾವಣಿ ಕುಸಿದಿದ್ದು ಸದ್ಯ ಆಸ್ಪತ್ರೆಯಲ್ಲಿ ದಂಪತಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮನೆಗುರುಳಿದ ಮರ- ಪಾರಾದ ಉಡುಪಿ ವೆಂಕಟರಮಣ ಐತಾಳ್ ಅನುಭವ ಭಯಾನಕ

    ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜಿಲ್ಲೆಯಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ನದಿ ಮತ್ತು ಸಮುದ್ರ ತೀರದ ಜನ ಬಹಳ ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಅಪಾಯದಲ್ಲಿರುವ ಪ್ರದೇಶದ ಜನರು ಮುಂಜಾಗೃತಾ ಕ್ರಮವಾಗಿ ಎತ್ತರ ಪ್ರದೇಶಗಳಿಗೆ ತೆರಳಬೇಕು. ಆಶ್ರಯ ತಾಣಗಳಿಗೆ ಅಗತ್ಯಬಿದ್ದರೆ ತೆರಳಬೇಕು ಎಂದು ಡಿಸಿ ಸೂಚನೆ ನೀಡಿದ್ದಾರೆ.

  • ನಾಯಿ ಬೆನ್ನತ್ತಿ ಬಂದು ವಾಟರ್ ಟ್ಯಾಂಕ್‍ಗೆ ಬಿತ್ತು ಚಿರತೆ

    ನಾಯಿ ಬೆನ್ನತ್ತಿ ಬಂದು ವಾಟರ್ ಟ್ಯಾಂಕ್‍ಗೆ ಬಿತ್ತು ಚಿರತೆ

    ಉಡುಪಿ: ಬೇಟೆ ಅರಸುತ್ತಾ ಬಂದ ಚಿರತೆಯೊಂದು ನೀರಿನ ಟ್ಯಾಂಕ್ ಒಳಗೆ ಬಿದ್ದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.

    ಕುಂದಾಪುರದ ಕೊಡ್ಲಾಡಿಯಲ್ಲಿ ಘಟನೆ ನಡೆದಿದ್ದು, ಅರಣ್ಯಾಧಿಕಾರಿಗಳು ಮತ್ತು ಸಾರ್ವಜನಿಕರ ಕಾರ್ಯಾಚರಣೆ ಮೂಲಕ ಚಿರತೆ ರಕ್ಷಿಸಲಾಯ್ತು. ಚಂದ್ರ ಶೆಟ್ಟಿಯವರ ಮನೆಯ ಸಮೀಪದ ನೀರಿನ ಟ್ಯಾಂಕ್ ಗೆ ಚಿರತೆ ಬಿದ್ದು ಘರ್ಜನೆ ಮಾಡುತ್ತಿತ್ತು. ಶಬ್ದಕೇಳಿದ ಮನೆಯವರು ಇಣುಕಿ ನೋಡಿದಾಗ ಚಿರತೆ ಕಾಣಿಸಿದೆ.

    ಆರಂಭದಲ್ಲಿ ಭಯಗೊಂಡ ಮನೆಯವರು ಕೂಡಲೇ ಸ್ಥಳೀಯರು ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿ ಪ್ರಭಾಕರ್ ಅವರ ತಂಡ ಚಿರತೆಯನ್ನು ಮೇಲಕ್ಕೆತ್ತಿ, ಬೋನಿಗೆ ಹಾಕಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ. ಚಿರತೆಗೆ ಸುಮಾರು ಐದು ವರ್ಷವಾಗಿದೆ. ಹಸಿವಿನಿಂದ ನಾಯಿಯನ್ನು ಹುಡುಕುತ್ತಾ ಬಂದಿರಬಹುದು ಎಂದು ಅರಣ್ಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

    ಅರಣ್ಯಾಧಿಕಾರಿ ಪ್ರಭಾಕರ್ ತಂಡದಲ್ಲಿ, ಶರತ್, ಶಿವಕುಮಾರ್, ಉದಯ್, ರಂಜಿತ್, ವಿಜಯ್ ಇದ್ದರು. ಸ್ಥಳೀಯ ಯುವಕರು ಬೋನ್ ಜೋಡಿಸಲು, ಬಲೆ ಹಿಡಿದು ಇಲಾಖೆಗೆ ಸಹಕರಿಸಿದರು.

  • ಕುಂದಾಪುರ ಆಕ್ಸಿಜನ್ ಪ್ಲ್ಯಾಂಟ್ ಕಾಮಗಾರಿ ವೀಕ್ಷಿಸಿದ ಸಂಸದೆ ಶೋಭಾ ಕರಂದ್ಲಾಜೆ

    ಕುಂದಾಪುರ ಆಕ್ಸಿಜನ್ ಪ್ಲ್ಯಾಂಟ್ ಕಾಮಗಾರಿ ವೀಕ್ಷಿಸಿದ ಸಂಸದೆ ಶೋಭಾ ಕರಂದ್ಲಾಜೆ

    ಉಡುಪಿ: ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕ ಕಾಮಗಾರಿಯನ್ನು ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು.

    ಸಿವಿಲ್ ಕಾಮಗಾರಿ ತಾಂತ್ರಿಕ ಅಡಚಣೆಯಿಂದ ವಿಳಂಬವಾಗಿದೆ. ಈ ಕಾರಣಕ್ಕಾಗಿ ಕಾಮಗಾರಿಯ ಉಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿದೆ. ಶೀಘ್ರ ಕಾಮಗಾರಿ ಪೂರ್ಣ ಆಗಬೇಕು ಎಂದು ಪ್ರಾಜೆಕ್ಟ್ ಇಂಜಿನಿಯರ್ ಗಳಿಗೆ ಸಂಸದೆ ಸೂಚನೆ ನೀಡಿದರು.

    ಒಟ್ಟು 5 ಲಕ್ಷ ರೂ ವೆಚ್ಚದ ಕಾಮಗಾರಿಗೆ ಸಂಸದರ ನಿಧಿಯಿಂದ ಮೂರು ಲಕ್ಷ ರೂಪಾಯಿಗಳ ಅನುದಾನವನ್ನು ನೀಡಲು ನಿರ್ದೇಶನ ನೀಡಲಾಗಿದೆ. ಉಳಿದ ಎರಡು ಲಕ್ಷ ರೂಪಾಯಿಗಳನ್ನು ಐಎಂಎಯವರು ನೀಡಲಿದ್ದಾರೆ ಎಂದು ಶೋಭಾ ಕರಂದ್ಲಾಜೆ ವಿವರಿಸಿದರು.

    ಹದಿನೈದು ದಿನಗಳೊಳಗೆ ಘಟಕ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಲಿದೆ ಅಗತ್ಯದ ಯಂತ್ರೋಪಕರಣಗಳು ಡಿ.ಆರ್.ಡಿ.ಓ ಸಂಸ್ಥೆ ಒದಗಿಸಲಿದೆ ಎಂದು ಮಧ್ಯಮಗಳಿಗೆ ಮಾಹಿತಿ ಕೊಟ್ಟರು.

    https://twitter.com/ShobhaBJP/status/1397164588622172161

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಪುರಸಭೆ ಸದಸ್ಯ ಮೋಹನ್ ದಾಸ್ ಶೆಣೈ ಉಪಸ್ಥಿತರಿದ್ದರು.

    https://twitter.com/ShobhaBJP/status/1397230880381353990