Tag: Kushboo Sundar

  • ನಿಮ್ಮನ್ನು ಮದುವೆಯಾಗುತ್ತೇನೆ ಎಂದ ಅಭಿಮಾನಿಗೆ ಖುಷ್ಬೂ ಉತ್ತರ

    ನಿಮ್ಮನ್ನು ಮದುವೆಯಾಗುತ್ತೇನೆ ಎಂದ ಅಭಿಮಾನಿಗೆ ಖುಷ್ಬೂ ಉತ್ತರ

    ಬೆಂಗಳೂರು: ರಣಧೀರ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿರುವ ನಟಿ ಖುಷ್ಬೂ ಸುಂದರ್ ಅವರನ್ನು ಮದುವೆಯಾಗಲು ಬಯಸಿದ ಅಭಿಮಾನಿಯೊಬ್ಬರಿಗೆ ಕೊಟ್ಟಿರುವ ಉತ್ತರ ಸಖತ್ ವೈರಲ್ ಆಗುತ್ತಿದೆ.

    ಖುಷ್ಬೂ ಸುಂದರ್ ಅವರು 10 ಕೆಜಿ ತೂಕವನ್ನು ಕಡಿಮೆ ಮಾಡಿಕೊಂಡಿರುವ ವಿಚಾರವನ್ನು ಅಭಿಮಾನಿಗಳ ಜೊತೆಗೆ ಶೇರ್ ಮಾಡಿಕೊಂಡಿದ್ದರು. ಹೊಸ ಲುಕ್ ಮೂಲಕವಾಗಿ ಅಭಿಮಾನಿಗಳ ಗಮನ ಸೆಳೆಯುತ್ತಿರುವ ಖುಷ್ಬೂ ಅವರಿಗೆ ಅಭಿಮಾನಿ ಮದುವೆಯೆ ಪ್ರಪೋಸಲ್‍ಅನ್ನು ಸೋಶಿಯಲ್ ಮೀಡಿಯಾದಲ್ಲಿ ಇಟ್ಟಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ: ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್

    ನಾನು ನಿಮ್ಮನ್ನು ಮದುವೆಯಾಗಲೂ ಬಯಸಿದ್ದೇನೆ ಮೇಡಂ ಎಂದು ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖುಷ್ಬೂ ಓ..ಓ.. ಕ್ಷಮಿಸಿ ನೀವು ತುಂಬಾ ತಡವಾಗಿ ಹೇಳಿದ್ದೀರ. ಸರಿಯಾಗಿ 21 ವರ್ಷ ತಡವಾಗಿ ಹೇಳಿದ್ದೀರ. ನನ್ನ ಗಂಡನೊಂದಿಗೆ ಈ ವಿಚಾರವಾಗಿ ಪರಿಶಲೀಸೋಣ ಎಂದು ಟ್ವೀಟ್ ಮಾಡಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಡ್ರಗ್ಸ್ ಕೇಸ್ – ಸಂಜನಾ, ರಾಗಿಣಿ ದ್ವಿವೇದಿಗೆ ಸಂಕಷ್ಟ!

    10 ಕೆಜಿ ತೂಕವನ್ನು ವರ್ಕೌಟ್ ಮೂಲಕವಾಗಿ ಇಳಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 10 ಕೆಜಿ ತೂಕವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದಾರೆ. ನಟಿ ಖುಷ್ಬೂ ಸುಂದರ್ ಅವರ ಸಣ್ಣಗಾಗಿ ಅಚ್ಚರಿ ಮೂಡಿಸಿದ್ದಾರೆ. ಇದೀಗ ಕಠಿಣ ಪರಿಶ್ರಮವು ಫಲಿತಾಂಶಗಳನ್ನು ನೀಡಿದಾಗ, ಸಂತೋಷವನ್ನು ವಿವರಿಸಲು ಸಾಧ್ಯವಿಲ್ಲ ಎಂದು ತೂಕ ಇಳಿಸಿಕೊಂಡ ನಂತರ ತೆಗೆಸಿರುವ ಕೆಲವು ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹೇಗೆ ಖುಷ್ಬೂ ಸುಂದರ್ ತೂಕ ಇಳಿಸಿಕೊಂಡರು ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ತೂಕ ಕಳೆದುಕೊಂಡ ರಣಧೀರ ನಟಿ

  • ಕೈ ಬಿಟ್ಟು ಕಮಲ ಮುಡಿಯಲು ಖುಷ್ಬೂ ರೆಡಿ

    ಕೈ ಬಿಟ್ಟು ಕಮಲ ಮುಡಿಯಲು ಖುಷ್ಬೂ ರೆಡಿ

    ಚೆನ್ನೈ: ನಟಿ, ಕಾಂಗ್ರೆಸ್ ವಕ್ತಾರೆ ಖುಷ್ಬೂ ಸುಂದರ್ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಇಂದು ಸಂಜೆ ಚೆನ್ನೈನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಖುಷ್ಬೂ ಬಿಜೆಪಿ ಸೇರಲಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಪದವಿಯಿಂದ ಖುಷ್ಬೂ ಅವರನ್ನ ವಜಾಗೊಳಿಸಿ ಆದೇಶಿಸಿದೆ.

    ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಖುಷ್ಬೂ ಸುಂದರ್, ಪಕ್ಷದ ಕೆಲವು ವಿಷಯಗಳ ಉನ್ನತ ಮಟ್ಟದಲ್ಲಿಯೇ ಉಳಿದುಕೊಂಡಿವೆ. ಆ ವಿಷಯ ಅಥವಾ ವಿಚಾರ ತಳಮಟ್ಟದಲ್ಲಿರುವ ಕಾರ್ಯಕರ್ತರಿಗೆ ತಲುಪುತ್ತಿಲ್ಲ. ಉನ್ನತ ಸ್ಥಾನದಲ್ಲಿದ್ದವರಿಂದ ಕೇವಲ ಆದೇಶಗಳು ಬರುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ.

    2014ರಲ್ಲಿ ಡಿಎಂಕೆ ತೊರೆದು ಖುಷ್ಬೂ ಸುಂದರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ತದನಂತರ ತಮಿಳುನಾಡಿ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಪಕ್ಷದ ವಕ್ತಾರೆಯಾಗಿ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜಕೀಯ ಅಂಗಳದಲ್ಲಿ ಚಿರಪರಿಚಿತರಾಗಿದ್ದರು.

    ಕನ್ನಡ, ಹಿಂದಿ, ತಮಿಳು ಸೇರಿದಂತೆ 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಖುಷ್ಬೂ ಎಲ್ಲರಿಗೂ ಚಿರಪರಿಚಿತ. ತಮಿಳುನಾಡಿನಲ್ಲಿ ಬಾವುಟ ಹಾರಿಸಲು ಬಿಜೆಪಿ ಶತಾಗತಯ ಪ್ರಯತ್ನ ಪಡುತ್ತಿದೆ. ಈ ಬೆನ್ನಲ್ಲೇ ಖುಷ್ಬೂ ಸೇರ್ಪಡೆ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ವಿಶ್ಲೇಷಣೆ ಮಾಡಲಾಗ್ತಿದೆ. ಮುಂದಿನ ವರ್ಷ ತಮಿಳುನಾಡಿನ ವಿಧಾನಸಭಾ ಚುನಾವಣೆ ಹಿನ್ನೆಲೆ ಖುಷ್ಬೂ ಬಿಜೆಪಿ ಸೇರ್ಪಡೆ ಹೆಚ್ಚು ಮಹತ್ವ ಪಡೆದುಕೊಂಡಿದೆ.