Tag: KVN Productions

  • ಸೆ.3ರಿಂದ ಶಿವಣ್ಣ – ಪವನ್ ಒಡೆಯರ್ ಕಾಂಬಿನೇಷನ್ ಚಿತ್ರ ಶುರು; ಮಂಡ್ಯದಲ್ಲೂ ಶೂಟಿಂಗ್‌ಗೆ ಪ್ಲ್ಯಾನ್‌

    ಸೆ.3ರಿಂದ ಶಿವಣ್ಣ – ಪವನ್ ಒಡೆಯರ್ ಕಾಂಬಿನೇಷನ್ ಚಿತ್ರ ಶುರು; ಮಂಡ್ಯದಲ್ಲೂ ಶೂಟಿಂಗ್‌ಗೆ ಪ್ಲ್ಯಾನ್‌

    ಸ್ಟಾರ್ ನಟರ ಜೊತೆ ದೊಡ್ಡ ದೊಡ್ಡ ಸಿನಿಮಾಗಳ ನಿರ್ಮಾಣದಲ್ಲಿ ಕೆವಿಎನ್ ಸಂಸ್ಥೆ (KVN Productions) ಹೆಸರು ಮಾಡಿದೆ. ‘ಟಾಕ್ಸಿಕ್’, ‘ಕೆಡಿ’, ‘ಜನ ನಾಯಗನ್’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ಆ ಮೂಲಕ ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ಈ ಸಂಸ್ಥೆಯು ಶಿವಣ್ಣ (Shivarajkumar) ಜೊತೆ ಕೈ ಜೋಡಿಸಿದೆ.

    ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆಯಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಸಾರಥಿ. ಸ್ಯಾಂಡಲ್‌ವುಡ್‌ನಲ್ಲಿ (Sandalwood) ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್ ಒಡೆಯರ್ ಪುನೀತ್ ರಾಜ್‌ಕುಮಾರ್‌ಗೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಶಿವರಾಜ್‌ಕುಮಾರ್‌ಗೆ ಇದೇ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸೆಪ್ಟೆಂಬರ್ 3ರಿಂದ ಆರಂಭವಾಗಲಿದೆ. ಇದನ್ನೂ ಓದಿ: ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

    ಶಿವಣ್ಣ ಅವರಿಗೆ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಪವನ್ ಒಡೆಯರ್ ಈ ಚಿತ್ರಕ್ಕೆ ಬಂಡವಾಳ ಕೂಡ ಹೂಡುತ್ತಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಕೂಡ ಈ ಸಿನಿಮಾಗೆ ನಿರ್ಮಾಣ ಮಾಡುತ್ತಿದೆ. ವೆಂಕಟ್ ಕೊನಂಕಿ ಅವರ ಕೆವಿಎನ್ ಸಂಸ್ಥೆ ಹಾಗೂ ಪವನ್ ಒಡೆಯರ್ ಅವರ ಒಡೆಯರ್ ಮೂವೀಸ್ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡಲಿದೆ. ಇದನ್ನೂ ಓದಿ: ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್

    ಶಿವಣ್ಣ-ಪವನ್ ಕಾಂಬಿನೇಷನ್ ಸಿನಿಮಾದ ಚಿತ್ರೀಕರಣ ದೇಶದ ನಾನಾ ಭಾಗಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ ಮೂರರಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಆರಂಭವಾಗಲಿದೆ. ಆ ಬಳಿಕ ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಇದನ್ನೂ ಓದಿ: ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಸರ್ಕಾರ ಆದೇಶ – ಅನಿರುದ್ಧ ರಿಯಾಕ್ಷನ್ ಏನು?

    ಶಿವವರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ. ಅದರಂತೆ ತಾರಾ ಬಳಗದಲ್ಲಿ ಜಯರಾಮ್, ಸಾಯಿ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿಯಂತಹ ದಿಗ್ಗಜರ ಜೊತೆ ಸಂಜನಾ ಆನಂದ್ ಹಾಗೂ ದೀಕ್ಷಿತ್ ಶೆಟ್ಟಿಯಂತ ಪ್ರತಿಭಾನ್ವಿತ ಕಲಾದಂಡು ಚಿತ್ರದಲ್ಲಿ ಇರಲಿದೆ. ಒಂದೊಳ್ಳೆ ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಕಥಾಹಂದರ ಹೊಂದಿರುವ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ, ಶಶಾಂಕ್ ನಾರಾಯಣ್ ಸಂಕಲನ ಒದಗಿಸಲಿದ್ದಾರೆ. ಶಿವಣ್ಣ , ಪವನ್ ಒಡೆಯರ್ ಹಾಗೂ ಕೆವಿಎನ್ ಮೊದಲ ಬಾರಿಗೆ ಒಂದಾಗುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಸಹಜವಾಗಿ ಹೆಚ್ಚು ಮಾಡಿದೆ.

  • ಟಾಲಿವುಡ್‍ಗೂ ಎಂಟ್ರಿ ಕೊಟ್ಟ ಕೆವಿಎನ್ – ಮೆಗಾಸ್ಟಾರ್‌ಗೆ ಸಿನಿಮಾ ನಿರ್ಮಾಣ

    ಟಾಲಿವುಡ್‍ಗೂ ಎಂಟ್ರಿ ಕೊಟ್ಟ ಕೆವಿಎನ್ – ಮೆಗಾಸ್ಟಾರ್‌ಗೆ ಸಿನಿಮಾ ನಿರ್ಮಾಣ

    ಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ (Tollywood) ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರಿಗೆ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ. ಅಂದಹಾಗೆ ಬಹುನಿರೀಕ್ಷಿತ ಟಾಕ್ಸಿಕ್, ಕೆಡಿ ಸಿನಿಮಾ ನಿರ್ಮಿಸುತ್ತಿರುವ ಕೆವಿಎನ್ ಸಂಸ್ಥೆಯಿಂದ ಮತ್ತೊಂದು ಹೊಸ ಅಧ್ಯಾಯ ಶುರುವಾಗಲಿದೆ.

    ಕೆವಿಎನ್ ಸಂಸ್ಥೆ ತಮಿಳಿನಲ್ಲಿ ದಳಪತಿ ವಿಜಯ್ ನಟನೆಯ `ಜನ ನಾಯಗನ್’ ಚಿತ್ರ ನಿರ್ಮಾಣ ಮಾಡುವ ಮೂಲಕ ತಮಿಳು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ತೆಲುಗು ಚಿತ್ರರಂಗದತ್ತ ಮುಖ ಮಾಡಿರುವ ಕೆವಿಎನ್ ಸಂಸ್ಥೆ, ಚಿರಂಜೀವಿ ಅವರ 158ನೇ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಮೆಗಾಸ್ಟಾರ್ ಚಿರಂಜೀವಿ ಅವರ 70ನೇ ವರ್ಷದ ಹುಟ್ಟುಹಬ್ಬದ ವಿಶೇಷವಾಗಿ ಈ ಪ್ರಾಜೆಕ್ಟ್ ಅನೌನ್ಸ್ ಮಾಡಲಾಗಿದೆ. ಈ ಹಿಂದೆ `ವಾಲ್ತೇರು ವೀರಯ್ಯ’ ಸಿನಿಮಾ ಮಾಡಿದ್ದ ಬಾಬಿ ಕೊಲ್ಲಿ ಮತ್ತೊಮ್ಮೆ ಚಿರುಗೆ ಆ್ಯಕ್ಷನ್‍ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್

    ಚಿರಂಜೀವಿ-ಬಾಬಿ-ಕೆವಿಎನ್ ಕಾಂಬಿನೇಷನ್ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಮೂಡಿ ಬರಲಿದೆ. ಈ ಚಿತ್ರವನ್ನು ದಸರಾಗೆ ಲಾಂಚ್ ಮಾಡಲು ಚಿತ್ರತಂಡ ಭರ್ಜರಿ ಪ್ಯಾನ್ ಹಾಕಿಕೊಂಡಿದ್ದು, ವರ್ಷದ ಕೊನೆಗೆ ಶೂಟಿಂಗ್ ಆರಂಭ ಮಾಡಲು ಸಿದ್ಧತೆ ಮಾಡಿಕೊಂಡಿದೆಯಂತೆ. ಮೆಗಾಸ್ಟಾರ್ ಜೊತೆ ಸಿನಿಮಾ ಮಾಡಲು ಕೈಜೋಡಿಸುವ ಮೂಲಕ ಟಾಲಿವುಡ್‍ಗೂ ಕೆವಿಎನ್ ನಿರ್ಮಾಣ ಸಂಸ್ಥೆ ಎಂಟ್ರಿಕೊಟ್ಟಿದೆ. ಇದನ್ನೂ ಓದಿ: ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್

  • ಗ್ಯಾಂಗ್‌ಸ್ಟರ್‌ ಲುಕ್‌ನಲ್ಲಿ ಯಶ್-‌ ‘ಟಾಕ್ಸಿಕ್‌’ ಬರ್ತ್‌ಡೇ ಪೀಕ್‌ ಗ್ಲಿಂಪ್ಸ್‌ ಔಟ್‌

    ಗ್ಯಾಂಗ್‌ಸ್ಟರ್‌ ಲುಕ್‌ನಲ್ಲಿ ಯಶ್-‌ ‘ಟಾಕ್ಸಿಕ್‌’ ಬರ್ತ್‌ಡೇ ಪೀಕ್‌ ಗ್ಲಿಂಪ್ಸ್‌ ಔಟ್‌

    ರಾಕಿಂಗ್‌ ಸ್ಟಾರ್‌ ಯಶ್‌ಗೆ (Yash) ಇಂದು (ಜ.8) ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಫ್ಯಾನ್ಸ್‌ಗೆ ‘ಟಾಕ್ಸಿಕ್‌’ (Toxic) ಟೀಮ್‌ ಬಿಗ್‌ ಸರ್ಪ್ರೈಸ್‌ ಕೊಟ್ಟಿದೆ. ‘ಟಾಕ್ಸಿಕ್‌’ನಲ್ಲಿ ಗ್ಯಾಂಗ್‌ಸ್ಟರ್‌ ಅವತಾರದಲ್ಲಿರುವ ಯಶ್‌ ಲುಕ್‌ ಅನ್ನು ರಿವೀಲ್‌ ಮಾಡಲಾಗಿದೆ. ಇದನ್ನೂ ಓದಿ:BBK 11: ಭವ್ಯಾ ಇಲ್ಲಿಯವರೆಗೆ ಬರಲು ನಾನೇ ಕಾರಣ- ವರಸೆ ಬದಲಿಸಿದ ತ್ರಿವಿಕ್ರಮ್

    ರಾಕಿ ಭಾಯ್‌ ಬರ್ತ್‌ಡೇ ಪ್ರಯುಕ್ತ 59 ಸೆಕೆಂಡ್‌ ಗ್ಲಿಂಪ್ಸ್‌ ರಿವೀಲ್‌ ಆಗಿದ್ದು, ಡ್ರಗ್ಸ್‌ ಮಾಫಿಯಾ ಕುರಿತ ಚಿತ್ರವಾಗಿದೆ. ರಿಲೀಸ್‌ ಆದ ಗ್ಲಿಂಪ್ಸ್‌ನಲ್ಲಿ ಕಲರ್‌ಫುಲ್‌ ಸೆಟ್‌ನಲ್ಲಿ ನಟನ ಸ್ಟೈಲೀಶ್‌ ವಾಕ್‌, ಹಾಟ್‌ ಮ್ಯಾನರಿಸಮ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಇನ್ನೂ ‘ಟಾಕ್ಸಿಕ್‌’ ಸಿನಿಮಾವು ಬೆಂಗಳೂರಿನ HMT ಮೈದಾನದಲ್ಲಿ ಮೊದಲ ಹಂತದ ಚಿತ್ರೀಕರಣ ಶುರುವಾದ ಬಳಿಕ ಮುಂಬೈ, ಗೋವಾ, ಮಂಗಳೂರಿನಲ್ಲಿ ಶೂಟಿಂಗ್‌ ನಡೆಸಿದೆ ಚಿತ್ರತಂಡ.

    ಈ ಸಿನಿಮಾವನ್ನು KVN ಪ್ರೊಡಕ್ಷನ್ಸ್‌ ಹಾಗೂ ಯಶ್‌ ನಿರ್ಮಾಣದ ಸಂಸ್ಥೆ ಮಾನ್‌ಸ್ಟರ್‌ ಮೈಂಡ್‌ ಕ್ರಿಯೇಷನ್ಸ್‌ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಚಿತ್ರಕ್ಕೆ ಗೀತು ಮೋಹನ್‌ದಾಸ್‌ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಯಶ್‌ ನಟನೆಯ 19ನೇ ಸಿನಿಮಾ ಟಾಕ್ಸಿಕ್‌ ಚಿತ್ರವಾಗಿದ್ದು, ‘ಕೆಜಿಎಫ್‌ 2’ ಸಕ್ಸಸ್‌ ಬಳಿಕ ಈ ಸಿನಿಮಾ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

  • ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಿಸಿದ್ದ ಚಿದಂಬರಂ ಜೊತೆ KVN ಪ್ರೊಡಕ್ಷನ್ಸ್ ಹೊಸ ಚಿತ್ರ

    ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಿಸಿದ್ದ ಚಿದಂಬರಂ ಜೊತೆ KVN ಪ್ರೊಡಕ್ಷನ್ಸ್ ಹೊಸ ಚಿತ್ರ

    ಕೆವಿಎನ್ ಪ್ರೊಡಕ್ಷನ್ಸ್ (KVN Productions) ಮತ್ತು ತೆಸ್ಪಿಯನ್ ಫಿಲ್ಮ್ಸ್ಒಂದು ಹೊಸ ಚಿತ್ರಕ್ಕಾಗಿ ಕೈ ಜೋಡಿಸಿದ್ದಾರೆ. ಈ ಮಹತ್ವಾಕಾಂಕ್ಷೆಯ ಚಿತ್ರವನ್ನ  ಹೊಸ ಶೈಲಿಯ ಚಿತ್ರಗಳಿಂದ ಇಂದಿನ ಯುವ ಸಮುದಾಯದ ಮನ ಗೆದ್ದಿರುವ ನಿರ್ದೇಶಕ ಚಿದಂಬರಂ ಮತ್ತು ಜೀತು ಮಾಧವನ್ ಜೊತೆಯಾಗಿ ಹೊಸ ಸಿನಿಮಾಗಾಗಿ ಸಾಥ್‌ ನೀಡಿದ್ದಾರೆ.

    ತೆಸ್ಪಿಯನ್ ಫಿಲ್ಮ್ಸ್ ಸಂಸ್ಥೆಯ ರೂವಾರಿ ಶ್ರೀಮತಿ ಶೈಲಜಾ ದೇಸಾಯಿ ಜೊತೆಗೆ ಕೈ ಜೋಡಿಸಿರುವ  KVN ಪ್ರೊಡಕ್ಷನ್ಸ್‌ನ ರೂವಾರಿ ವೆಂಕಟ್ ಕೆ. ನಾರಾಯಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ‘ಮಂಜುಮ್ಮಲ್ ಬಾಯ್ಸ್’ (Manjummel Boys) ನಿರ್ದೇಶಿಸಿದ್ದ ಚಿದಂಬರಂ ಜೊತೆಗೆ, ಇತ್ತೀಚೆಗೆ ಎಲ್ಲರ‌ ಮನಗೆದ್ದಿದ್ದ ‘ಆವೇಶಮ್’ ಖ್ಯಾತಿಯ ನಿರ್ದೇಶಕ ಜಿತು‌ ಮಾಧವನ್ ಈ ಹೊಸ ಯೋಜನೆಗೆ ಜೊತೆಯಾಗಲಿದ್ದಾರೆ.

    ಅಷ್ಟೇ ಅಲ್ಲ ಈ‌ ಚಿತ್ರದಲ್ಲಿ ನುರಿತ ತಂತ್ರಜ್ಞರ ದೊಡ್ಡ‌ ಪಡೆಯೇ ಕೆಲಸ ಮಾಡಲಿದ್ದಾರೆ. ಛಾಯಾಗ್ರಹಣಕ್ಕೆ ಶೈಜು ಖಾಲೆದ್, ಸಂಗೀತ ನೀಡಲು ಸುಶಿನ್ ಶ್ಯಾಮ್ ಆಯ್ಕೆಯಾದರೆ ಎಡಿಟಿಂಗ್ ಜವಾಬ್ದಾರಿ ವಿವೇಕ್ ಹರ್ಷನ್ ಹೆಗಲಿಗೇರಿದೆ.

    KVN ಪ್ರೊಡಕ್ಷನ್ಸ್ ಸಂಸ್ಥಾಪಕ ವೆಂಕಟ ಕೆ ನಾರಾಯಣ ಅವರು ಮಾತನಾಡಿ, ನಾವು ನಮ್ಮ ಸಂಸ್ಥೆಯಿಂದ  ಭಿನ್ನ ಬಗೆಯ, ಸದಭಿರುಚಿಯ ಮನರಂಜನಾತ್ಮಕ ಸಿನಿಮಾಗಳನ್ನ ಕೊಡೋ ದೃಷ್ಟಿಯಿಂದ ಕೆಲಸ ಮಾಡುತ್ತೇವೆ. ಅದರಂತೆ ಇಂಥ ಹೊಸ ಬಗೆಯ ಚಿಂತನೆಯುಳ್ಳ, ನಿರ್ದೇಶಕರಿಂದ ಜನರ ಮನರಂಜಿಸುವ ಕೆಲಸಕ್ಕೆ ಕೈ ಹಾಕಿರೋದೆ ಒಂದು ಮೈನವಿರೇಳಿಸೊ ಪ್ರಯತ್ನ. ಇಂತಹ ತಂಡದ ಜೊತೆಗೆ ಸಿನಿಮಾ ಮಾಡೋ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಡುತ್ತಿರುವ ನಮಗೆ ಹೆಮ್ಮೆ ತಂದಿದೆ.

    ಒಂದು ಕಥೆಯನ್ನ ತೆರೆ ಮೇಲೆ ತರೊ ಪ್ರಕ್ರಿಯೆನೇ ರೋಮಾಂಚಕ. ನನ್ನಂತೆಯೇ ಒಳ್ಳೆಯ ಕಥೆಗೆ, ಸ್ಕ್ರಿಪ್ಟ್‌ಗೆ ಒತ್ತು ಕೊಡುವ ತಂಡದ ಜೊತೆ ಕೆಲಸ ಮಾಡ್ತಿರೋದು‌ ನಿಜಕ್ಕೂ‌ ಹೆಮ್ಮೆಯ ವಿಷಯ. ಇದು ನನ್ನ ಹೃದಯಕ್ಕೆ ಹತ್ತಿರವಾದ ಕಥೆಯಾಗಿದೆ. ಸಿನಿಮಾ ಕೃಷಿಯ ಬಗ್ಗೆ ಇಷ್ಟೊಂದು ಗಾಢ ಪ್ರೀತಿಯುಳ್ಳ ತಂಡದ ಜೊತೆ‌ ಕೆಲಸ ಮಾಡೋದೆ ಒಂದು ದೊಡ್ಡ ಖುಷಿ ಅಂತ ಅಭಿಪ್ರಾಯಪಟ್ಟರು.

    KVN ಪ್ರೊಡಕ್ಷನ್ಸ್ ಪಾಲಿಗೆ 2025 ಸುವರ್ಣ ಸಮಯವಾಗಲಿದೆ. ಈಗಾಗಲೇ ಯಶ್ ಜೊತೆ ಟಾಕ್ಸಿಕ್, ತಮಿಳಿನ ದಳಪತಿ ಜೊತೆ ‘ತಳಪತಿ 69’ ಸಿನಿಮಾ, ಹಿಂದಿಯಲ್ಲಿ ಪ್ರಿಯದರ್ಶನ್ ಜೊತೆ ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ, ಹಾಗೆಯೇ ಧ್ರುವ ಸರ್ಜಾ‌ ಜೊತೆ ‘ಕೆಡಿ’ ಸಿನಿಮಾವಿದೆ. ಇದೀಗ ಮಲಯಾಳಂ‌ ಚಿತ್ರರಂಗಕ್ಕೆ ಹೀಗೆ ನುರಿತರೊಂದಿಗೆ ಕಾಲಿಡ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಯೋಜನೆಗಳನ್ನ ಹಾಕಿಕೊಂಡಿರೋ ಸೂಚನೆ ಕೆವಿಎನ್ ಸಂಸ್ಥೆ ಕೊಡುತ್ತಿದೆ.

  • ಭಾರಿ ಮೊತ್ತಕ್ಕೆ ಉಪೇಂದ್ರ ನಿರ್ದೇಶನದ ‘ಯುಐ’ ವಿತರಣೆ ಹಕ್ಕು ಖರೀದಿಸಿದ ಕೆವಿಎನ್ ಪ್ರೊಡಕ್ಷನ್ಸ್

    ಭಾರಿ ಮೊತ್ತಕ್ಕೆ ಉಪೇಂದ್ರ ನಿರ್ದೇಶನದ ‘ಯುಐ’ ವಿತರಣೆ ಹಕ್ಕು ಖರೀದಿಸಿದ ಕೆವಿಎನ್ ಪ್ರೊಡಕ್ಷನ್ಸ್

    ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿದ ಸಿನಿಮಾಗಳಿಗೆ ಕ್ರೇಜ್ ಇರುತ್ತೋ ಇಲ್ಲವೋ. ಆದ್ರೆ, ಉಪ್ಪಿ ಡೈರೆಕ್ಷನ್ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳಿದ್ದಾರೆ, ಅಂದ್ರೆ ಇಡೀ ಇಂಡಸ್ಟ್ರಿ ಆ ಸಿನಿಮಾಗಾಗಿ ಎದುರು ನೋಡುತ್ತಿರುತ್ತೆ ಅನ್ನೋ ಮಾತು ಸಹಜ. ಸಿನಿ ಪ್ರೇಮಿಗಳಂತೂ ಆ ಸಿನಿಮಾವನ್ನ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿರುತ್ತಾರೆ. ಈದೀಗ ಉಪೇಂದ್ರ ನಟಿಸಿ ನಿರ್ದೇಶಿಸಿರುವ `ಯುಐ’ ಚಿತ್ರದ (UI Cinema) ಕನ್ನಡದ ಹಂಚಿಕೆ ಹಕ್ಕನ್ನು ಕೆವಿಎನ್ ಪ್ರೊಡಕ್ಷನ್ಸ್ (KVN Productions) ಭಾರೀ ಮೊತ್ತಕ್ಕೆ ಪಡೆದುಕೊಂಡಿದೆ.

    ಕನ್ನಡದ ಬಹುಕೋಟಿ ಬಜೆಟ್ ಚಿತ್ರ ಡಿಸೆಂಬರ್ 20ಕ್ಕೆ ಬಹುಭಾಷೆಯಲ್ಲಿ ವಿಶ್ವಾದ್ಯಂತ ರಿಲೀಸ್ ಆಗಲಿದ್ದು ಚಿತ್ರವನ್ನು ಲಹರಿ ಫಿಲಮ್ಸ್‌ (Lahari Films) ಹಾಗೂ ವೀನಸ್ ಎಂಟರ್ಟೈನರ್ಸ್‌ ಅಡಿಯಲ್ಲಿ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ಇದನ್ನೂ ಓದಿ: ಯಶ್‌ ನಟನೆಯ ‘ಟಾಕ್ಸಿಕ್‌’ ಸೆಟ್‌ನಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಬಾಲಿವುಡ್‌ ನಟಿ

    ಚಿತ್ರದ ಇತರೆ ಭಾಷೆಯ ಹಂಚಿಕೆ ಹಕ್ಕುಗಳು ಈಗಾಗ್ಲೇ ಬಹುಕೋಟಿಗೆ ಸೇಲ್ ಆಗಿದೆ, ಮಲಯಾಳಂ ಹಂಚಿಕೆ ಹಕ್ಕನ್ನ ಸಿ.ಜೆ ರಾಯ್ ಪಡೆದುಕೊಂಡ್ರೆ, ತಮಿಳಿನಲ್ಲಿ ಎ.ಪಿ ಇಂಟರ್‌ನ್ಯಾಷನಲ್‌ ಫಿಲಮ್ಸ್‌ ಶನ್ ಹಂಚಿಕೆಯನ್ನ ತಮ್ಮದಾಗಿಸಿಕೊಂಡಿದೆ. ತೆಲುಗಿನಲ್ಲಿ ಅಲ್ಲು ಅರವಿಂದ್ ಒಡೆತನದ ಗೀತಾ ಆರ್ಟ್ಸ್ ಸಂಸ್ಥೆ ಹಂಚಿಕೆ ಹಕ್ಕುಪಡೆದುಕೊಂಡಿದೆ. ಹಿಂದಿ ಭಾಷೆಯಲ್ಲೂ ಹಂಚಿಕೆಯ ಹಕ್ಕು ಮಾರಾಟವಾಗಿದ್ದು ನಾಳೆ (ನ.25) ಘೋಷಣೆಯಾಗಲಿದೆ.

    ಇದೀಗ ವಿವಿಧ ಭಾಷೆಗಳ ಬಿಗ್ ಬಜೆಟ್ ಸಿನಿಮಾಗಳ ಹಂಚಿಕೆ ಹಕ್ಕು ಪಡೆದು ಹೆಸರುವಾಸಿಯಾಗಿರುವ, ಸದ್ಯಕ್ಕೆ ಟಾಕ್ಸಿಕ್ ಚಿತ್ರ ನಿರ್ಮಿಸುತ್ತಿರುವ ಕೆವಿಎನ್ ಪ್ರೊಡಕ್ಷನ್ಸ್‌ ವಿಶಾಲ ಕರ್ನಾಟಕಕ್ಕೆ `ಯುಐ’ ಹಂಚಿಕೆ ಮಾಡುವ ಹಕ್ಕನ್ನು ದಾಖಲೆ ಮೊತ್ತಕ್ಕೆ ಪಡೆದುಕೊಂಡಿದೆ. ಇದನ್ನೂ ಓದಿ: ಬಿಗ್ ಬಿ ಮೊಮ್ಮಗನ ಜೊತೆ ಸುಹಾನಾ ಖಾನ್‌ ಫೋಟೋ ವೈರಲ್- ಡೇಟಿಂಗ್‌ ಬಗ್ಗೆ ಶುರುವಾಯ್ತು ಚರ್ಚೆ

  • ದಚ್ಚುಗೆ ಪ್ರೇಮ್ ಆ್ಯಕ್ಷನ್ ಕಟ್- ‘ಜೈ ಶ್ರೀರಾಮ್’ ಎಂದು ಗದೆ ಎತ್ತಿದ ಡಿಬಾಸ್

    ದಚ್ಚುಗೆ ಪ್ರೇಮ್ ಆ್ಯಕ್ಷನ್ ಕಟ್- ‘ಜೈ ಶ್ರೀರಾಮ್’ ಎಂದು ಗದೆ ಎತ್ತಿದ ಡಿಬಾಸ್

    ಸ್ಯಾಂಡಲ್‌ವುಡ್ (Sandalwood) ದಾಸ ದರ್ಶನ್ (Darshan) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದರ ನಡುವೆ ಸಾಲು ಸಾಲು ಸಿನಿಮಾಗಳ ಅನೌನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 9ಕ್ಕೂ ಹೆಚ್ಚು ಸಿನಿಮಾಗಳು ಇಂದು (ಫೆ.16) ಅನೌನ್ಸ್ ಆಗಿದೆ. ಆ ಸಾಲಿನಲ್ಲಿ ‘ಕರಿಯ’ (Kariya) ಕಾಂಬಿನೇಷನ್ ಜೋಡಿ ಮತ್ತೆ ಒಟ್ಟಾಗಿದ್ದಾರೆ. ಪ್ರೇಮ್ (Director Prem) ಅಡ್ಡಾಗೆ ಎಂಟ್ರಿ ಕೊಟ್ಟಿರೋ ದರ್ಶನ್ ಜೈ ಶ್ರೀರಾಮ್ ಎಂದು ಗದೆ ಎತ್ತಿದ್ದಾರೆ.

    ಬರೋಬ್ಬರಿ 11 ವರ್ಷಗಳ ನಂತರ ಡಿಬಾಸ್‌ಗೆ ಮತ್ತೆ ಪ್ರೇಮ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ‘ಕರಿಯ’ ಜೋಡಿ ಮತ್ತೆ ಒಂದಾಗಿರೋದು ಸಹಜವಾಗಿ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ದರ್ಶನ್ ಹುಟ್ಟುಹಬ್ಬದಂದು (ಫೆ.16) ಈ ಸಿನಿಮಾದ ಮೋಷನ್ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. ದರ್ಶನ್- ಪ್ರೇಮ್ ಕಾಂಬೋ ಸಿನಿಮಾವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ವರುಣ್‌ ಜೊತೆಗಿನ ಬ್ರೇಕಪ್‌ ವೇಳೆ ‘ಬಿಗ್‌ ಬಾಸ್‌’ ಆಫರ್‌ ಸಿಕ್ಕಿದ್ದು ನಿಜನಾ? ವರ್ಷ ಕಾವೇರಿ ಸ್ಪಷ್ಟನೆ

    ಚಿತ್ರತಂಡ ರಿಲೀಸ್ ಮಾಡಿರುವ ವಿಡಿಯೋದಲ್ಲಿ ದರ್ಶನ್ ಮಾತ್ರ ಕೇಳುತ್ತಿದೆ. ಚಿತ್ರದ ಟೈಟಲ್ ಆಗಲಿ, ಸಿನಿಮಾ ಕಥೆ ಬಗೆಗಿನ ಸುಳಿವು ಆಗಿರಲಿ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ನನ್ನ ಕೊನೆ ಉಸಿರಿರುವವರೆಗೂ ಈ ಭೂಮಿ ಮೇಲೆ ಒಂದು ಹನಿ ರಕ್ತನೂ ಸೋಕೋದಕ್ಕೆ ನಾನು ಬಿಡಲ್ಲ ಎಂದು ದರ್ಶನ್ ಖಡಕ್ ಡೈಲಾಗ್ ಹೊಡೆದಿದ್ದಾರೆ. ‘ಜೈ ಶ್ರೀರಾಮ್’ ಎಂದು ದರ್ಶನ್ ಗದೆ ಹಿಡಿದು ಬಂದಿದ್ದಾರೆ. ಚಿತ್ರದ ಪೋಸ್ಟರ್‌ ನೋಡ್ತಿದ್ದಂತೆ ಇದು ಪೌರಣಿಕ ಸಿನಿಮಾನಾ? ಎಂದು ಫ್ಯಾನ್ಸ್‌ ಲೆಕ್ಕಚಾರ ಹಾಕ್ತಿದ್ದಾರೆ.

    2003ರಲ್ಲಿ ದರ್ಶನ್‌ಗೆ ಪ್ರೇಮ್ ಕರಿಯ ಚಿತ್ರಕ್ಕಾಗಿ ನಿರ್ದೇಶನ ಮಾಡಿದ್ದರು. ಚೆಂದದ ಲವ್ ಸ್ಟೋರಿ ಜೊತೆ ರೌಡಿಸಂ ಕಥೆಯನ್ನು ನಿರ್ದೇಶಕರು ಸಿನಿಮಾದಲ್ಲಿ ತೋರಿಸಿದ್ದರು. ಅಂದು ಕರಿಯ ಸೂಪರ್ ಹಿಟ್ ಆಗಿತ್ತು. ಅಂದು ಲಾಂಗ್ ಹಿಡಿದ ದರ್ಶನ್ ಇಂದು ಜೈ ಶ್ರೀರಾಮ್ ಎಂದು ಗದೆ ಹಿಡಿದು ಯುದ್ಧಕ್ಕೆ ಸಜ್ಜಾಗಿದ್ದಾರೆ.

     

    View this post on Instagram

     

    A post shared by KVN Productions (@kvn.productions)

    ‘ಕಾಟೇರ’ ಸಕ್ಸಸ್ ನಂತರ ದರ್ಶನ್‌ಗೆ ಮತ್ತಷ್ಟು ಡಿಮ್ಯಾಂಡ್ ಜಾಸ್ತಿಯಾಗಿದೆ. ಎಂದೂ ಮಾಡಿರದ ಹೊಸ ಬಗೆಯ ಕಥೆಯನ್ನು ದರ್ಶನ್ ಆಯ್ಕೆ ಮಾಡ್ತಿದ್ದಾರೆ. ಮಿಲನ ಖ್ಯಾತಿಯ ಪ್ರಕಾಶ್, ಕಾಟೇರ ನಿರ್ದೇಶಕನ ಜೊತೆ 2 ಸಿನಿಮಾ, ರಮೇಶ್ ಪಿಳ್ಳೈ, ಶೈಲಜಾ ನಾಗ್ ಮತ್ತು ಬಿ.ಸುರೇಶ, ಮೋಹನ್ ನಟರಾಜನ್, ಸೂರಪ್ಪ ಬಾಬು, ಸಚ್ಚಿದಾನಂದ ಇಂಡುವಾಳ, ಕೆ.ಮಂಜುನಾಥ್, ರಘುನಾಥ್ ಸೋಗಿ, ಮಹೇಶ್ ಸುಖಧರೆ, ರಾಘವೇಂದ್ರ ಹೆಗ್ಡೆ ಹೀಗೆ ಸಾಲು ಸಾಲು ನಿರ್ಮಾಪಕರು ದರ್ಶನ್‌ಗಾಗಿ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ. ದರ್ಶನ್ ಹುಟ್ಟುಹಬ್ಬದಂದು ಸಿನಿಮಾಗಳನ್ನು ಘೋಷಣೆ ಕೂಡ ಮಾಡಿದ್ದಾರೆ.

    ದರ್ಶನ್ ಸಿನಿಮಾಗಳಿಗೆ ಬಂಡವಾಳ ಹಾಕಿದರೆ ಹಣಕ್ಕೆ ಮೋಸವಿಲ್ಲ ಎನ್ನುವ ಮಾತು ಮೊದಲಿನಿಂದಲೂ ಇದೆ. ಕಾಟೇರ ಗೆದ್ದ ನಂತರ ಈ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ಹಾಗಾಗಿ ಸಾಲು ಸಾಲು ಸಿನಿಮಾಗಳು ಘೋಷಣೆ ಆಗಿವೆ. ಯಾವೆಲ್ಲ ಸಿನಿಮಾಗಳು, ಯಾವಾಗೆಲ್ಲ ಬರುತ್ತವೆ ಎನ್ನುವುದು ಕಾದು ನೋಡಬೇಕಿದೆ.

  • Yash 19 ಸಿನಿಮಾ KVN ನಿರ್ಮಾಣ ಮಾಡ್ತಿದ್ಯಾ? ಇಲ್ಲಿದೆ ಸೀಕ್ರೆಟ್

    Yash 19 ಸಿನಿಮಾ KVN ನಿರ್ಮಾಣ ಮಾಡ್ತಿದ್ಯಾ? ಇಲ್ಲಿದೆ ಸೀಕ್ರೆಟ್

    ಶ್ 19 ಯಾವಾಗ? ಇನ್ನೇನು ಎರಡು ಮೂರು ದಿನದಲ್ಲಿ ಘೋಷಣೆಯಾಗಲಿದೆ ಬಿಡ್ರಿ. ಹೀಗಂತ ಎಲ್ಲರೂ ಹೇಳುತ್ತಿದ್ದಾರೆ. ಕಾರಣ ಯಶ್ 19 (Yash 19) ನಿರ್ಮಿಸುತ್ತಿರುವ ಕೆವಿಎನ್ (Kvn Productions) ಬಿಗ್ ಅನೌನ್ಮೆಂಟ್ ಮಾಡುವುದಾಗಿ ಕಿಡಿ ಹೊತ್ತಿಸಿದೆ. ಹಾಗಿದ್ದರೆ ನಿಜವಾಗಿ ಯಶ್ ಹೊಸ ಸಿನಿಮಾ ಅನೌನ್ಸ್ ಆಗಲಿದೆಯಾ? ಅಥವಾ ಕೆವಿಎನ್ ನಿರ್ಮಾಣದ ಇನ್ನೊಂದು ಚಿತ್ರದ ವಿಷಯ ಹೊರ ಬೀಳಲಿದೆಯಾ? ರಾಕಿ ನಯಾ ಸಿನಿಮಾ ಖಬರ್ ಹಾಗೂ ಈಗ ಗೊತ್ತಾಗಲಿರುವ ಸುದ್ದಿ. ಎರಡರ ಎಕ್ಸ್‌ಕ್ಲೂಸಿವ್ ಸಮಾಚಾರ ಇಲ್ಲಿದೆ.

    ಒಂದೂವರೆ ವರ್ಷ ಯಶ್ ಇನ್ನೂ ಮನೆ ಬಾಗಿಲು ತೆಗೆದಿಲ್ಲ. ಅಲ್ಲಿಂದ ಹೊರ ಬಂದು ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ನಿಮಗಾಗಿ ಒಳ್ಳೆಯ ಸಿನಿಮಾ ಕೊಡಲು ಇಷ್ಟೊಂದು ತಯಾರಿ ಮಾಡುತ್ತಿದ್ದೇನೆ. ಎಲ್ಲವನ್ನೂ ಸದ್ಯದಲ್ಲೇ ಹೇಳುತ್ತೇನೆ. ಹೀಗಂತ ಸಮಾಧಾನ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ನೋಡಿದರೆ ಯಶ್ 19 ಸಿನಿಮಾ ನಿರ್ಮಿಸುತ್ತಿರುವ ಕೆವಿಎನ್ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಸದ್ಯದಲ್ಲೇ ಬಿಗ್ ಅನೌನ್ಸ್ಮೆಂಟ್ ಮಾಡಲಿದ್ದೇವೆ ಎಂದಿದೆ. ಅಲ್ಲಿಗೆ ಯಶ್ ಭಕ್ತಗಣ(Fans) ಮತ್ತೆ ಕಿವಿ ಅಗಲಿಸಿ ಕುಳಿತಿದ್ದಾರೆ. ಇದೇನಾ ಯಶ್ 19 ಸಿನಿಮಾ? ಹಾಗಿದ್ದರೆ ಯಾವಾಗ ಅನಾವರಣ? ಇದನ್ನೂ ಓದಿ:ವಿಡಿಯೋ ಲೀಕ್ ಬಗ್ಗೆ ಭಯಾನಕ ಸತ್ಯ ಬಿಚ್ಚಿಟ್ಟ ಕೃತಿ ಕರಬಂಧ

    ಕೆವಿಎನ್ ಕೆಲವು ದೊಡ್ಡ ದೊಡ್ಡ ಸಿನಿಮಾ ಘೋಷಣೆ ಮಾಡುತ್ತಿದೆ. ಈಗಾಗಲೇ ಪ್ರೇಮ್ ನಿರ್ದೇಶನದಲ್ಲಿ ಕೆಡಿ ಶೂಟಿಂಗ್ ಹಂತದಲ್ಲಿದೆ. ಇನ್ನು ಕೆಲವು ಸಿನಿಮಾಗಳನ್ನೂ ಇದು ನಿರ್ಮಿಸಲು ಸಜ್ಜಾಗಿದೆ. ಇದೆಲ್ಲದರ ನಡುವೆ ಯಶ್ ಸಿನಿಮಾಕ್ಕೂ ಕಾಸು ಸುರಿಯಲಿದೆ. ಇಡೀ ವಿಶ್ವವೇ ಕಾಯುತ್ತಿರುವ ರಾಕಿ ಸಿನಿಮಾಕ್ಕೆ ಕೋಟಿಗಳನ್ನು ಪೈಸೆಗಳ ಲೆಕ್ಕದಲ್ಲಿ ಹಂಚಲಿದೆ. ಹೀಗಾಗಿಯೇ ರಾಕಿ ಸಿನಿಮಾಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಒಂದೂವರೆ ವರ್ಷದಿಂದ ಯಶ್ ಮಾತ್ರ ಅದ್ಭುತ ತಂಡ ಕಟ್ಟಿಕೊಂಡು ಬೆವರು ಸುರಿಸುತ್ತಿದ್ದಾರೆ. ಈ ಹೊತ್ತಲ್ಲಿ ಕೆವಿಎನ್ ಅನೌನ್ಸ್ಮೆಂಟ್ ಕುತೂಹಲ ಮೂಡಿಸಿದೆ. ಆದರೆ ನೀವಂದುಕೊಂಡಂತೆ ಇದು ಯಶ್ ಸಿನಿಮಾ ಘೋಷಣೆ ಅಲ್ಲವೇ ಅಲ್ಲ.

    ಹಾಗಿದ್ದರೆ ಯಶ್ ಸಿನಿಮಾ ಯಾವಾಗ ಹೊರ ಬೀಳಲಿದೆ? ಅಂದರೆ ಇನ್ನೆಷ್ಟು ಕಾಯಬೇಕು ನಾವು? ಇದು ಭಕ್ತಗಣ ಕೇಳುತ್ತಿರುವ ಪ್ರಶ್ನೆ. ಉತ್ತರ ಇಲ್ಲಿದೆ. ಇನ್ನು ಹದಿನೈದು ಅಥವಾ ಒಂದು ತಿಂಗಳಲ್ಲಿ ಅಕ್ಷರಶಃ ಇದೇ ಕೆವಿಎನ್ ಸಂಸ್ಥೆ ಇದೇ ರೀತಿ ಯಶ್ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಅನಾವರಣ ಮಾಡಲಿದೆ. ಇನ್ನೇನು ಎಲ್ಲ ಕೆಲಸವೂ ಮುಗಿದಿದೆ. ಅದರರ್ಥ ಸುಮ್ಮನೆ ಅಲ್ಲ. ಇಡೀ ಸಿನಿಮಾ ಈಗಾಗಲೇ ಕಾಗದದ ಮೇಲೆ ಮೂಡಿದೆ. ಕತೆ, ಚಿತ್ರಕತೆ, ಸಂಭಾಷಣೆ ಒಂದು ಕಡೆ. ಹಾಗೆಯೇ ಕ್ಯಾಮೆರಾ, ಸಂಗೀತ, ಕಲಾ ನಿರ್ದೇಶನ, ಸಾಹಸ ದೃಶ್ಯ, ಲೋಕೇಶನ್ಸ್, ಕಾಸ್ಟ್ಯೂಮ್ ಡಿಸೈನಿಂಗ್ ಎಲ್ಲವೂ ತೆರೆ ಮೇಲೆ ಬರಲು ಸಜ್ಜಾಗಿವೆ. ಶೂಟಿಂಗ್ ಮಾತ್ರ ಬಾಕಿ ಅಷ್ಟೇ. ಹಾಗಿದೆ ಯಶ್ ತಯಾರಿ.

    ಇದು ನೆಕ್ಸ್ಟ್‌ ಲೆವೆಲ್ ಸಿನಿಮಾ. ಹೀಗಂತಿದೆ ಇದೀ ಯಶ್ ಬಳಗ. ಈಗಾಗಲೇ ಫಸ್ಟ್ ಲುಕ್ ಕೂಡ ಜನರ ಮುಂದೆ ಬರಲು ಸಜ್ಜಾಗಿದೆ. ಅದನ್ನು ನೋಡಿದವರು ಬೆಚ್ಚಿ ಬಿದ್ದಿದ್ದಾರೆ. ಇದೇನಿದು ಯಶ್ ಅವತಾರ? ಬರೀ ಫಸ್ಟ್‌ ಲುಕ್ ಈ ರೇಂಜ್‌ಗಿದ್ದರೆ ಇನ್ನು ಸಿನಿಮಾ ಹೇಗಿರಬಹುದು? ಇನ್ಯಾವ ಹೊಸ ಲೋಕಕ್ಕೆ ನಮ್ಮನ್ನು ಕರೆದುಕೊಂಡು ಹೋಗಬಹುದು? ಇಡೀ ಜಗತ್ತೇ ನಮ್ಮ ಕನ್ನಡ ನಾಡನ್ನು ಬರೀ ಮೆರೆಸುವುದಲ್ಲ. ತಲೆ ಮೇಲಿಟ್ಟುಕೊಂಡು ಪೂಜೆ ಮಾಡುತ್ತದೆ. ಇದು ಯಶ್ 19 ಸಿನಿಮಾದ ಅಸಲಿ ಸಮಾಚಾರ. ಇನ್ನೇನು ಕೆಲವೇ ಕೆಲವು ದಿನ. ಖುದ್ದು ಯಶ್ ನಿಮ್ಮ ಮುಂದೆ ಹಾಜರಾಗಿ ಎಲ್ಲವನ್ನೂ ಹಂಚಿಕೊಳ್ಳಲಿದ್ದಾರೆ.

    ಯಶ್ 19 ನಿರ್ದೇಶಕರು ಯಾರು? ಪ್ರಶ್ನೆಗೆ ಇಲ್ಲೇ ಈ ಹಿಂದೆ ಉತ್ತರ ನೀಡಿದ್ದೇವೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್. ಇವರೇ ಸಕಲವನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದಾರೆ. ಕಳೆದ ಎಂಟು ತಿಂಗಳಿಂದ ಬೆಂಗಳೂರಿನ ಫೈವ್‌ಸ್ಟಾರ್ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದಾರೆ. ಒಂದೇ ಒಂದು ಅಗುಳಿನಷ್ಟೂ ತಪ್ಪಾಗಬಾರದು. ಹಾಗೆ ಜತನದಿಂದ ಎಲ್ಲ ರೂಪಿಸಿದ್ದಾರೆ. ಮೊದಲ ಬಾರಿ ಕನ್ನಡಕ್ಕೆ ಬಂದಿರುವ ಗೀತು. ಮೊದಲ ಬಾರಿ ಯಶ್‌ರನ್ನು ನಿರ್ದೇಶಿಸುತ್ತಿರುವ ಗೀತು. ಅದು ಹೇಗೆ ಎಲ್ಲ ನಿಭಾಯಿಸುತ್ತಾರೊ? ಅದಕ್ಕಾಗಿ ನೀವು ಇನ್ನು ಒಂದೂವರೆ ವರ್ಷ ಕಾಯಲೇಬೇಕು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KVN ಸಂಸ್ಥೆ ಬಿಗ್ ಅನೌನ್ಸ್‌ಮೆಂಟ್ – ಯಶ್ 19 ಮತ್ತೆ ಟ್ರೆಂಡಿಂಗ್

    KVN ಸಂಸ್ಥೆ ಬಿಗ್ ಅನೌನ್ಸ್‌ಮೆಂಟ್ – ಯಶ್ 19 ಮತ್ತೆ ಟ್ರೆಂಡಿಂಗ್

    ನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ (Kvn Productions) ಹೊಸ ಸಿನಿಮಾ ಬಗ್ಗೆ ಅಪ್‌ಡೇಟ್ ನೀಡೋದಾಗಿ ಅನೌನ್ಸ್ ಮಾಡಿದೆ. ಈ ಬೆನ್ನಲ್ಲೇ ಯಶ್ 19 (Yash 19) ಹ್ಯಾಷ್ ಟ್ಯಾಗ್ ಮತ್ತೆ ಟ್ರೆಂಡಿಂಗ್‌ನಲ್ಲಿದೆ. ನ್ಯಾಷನಲ್ ಸ್ಟಾರ್ ಯಶ್ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಟ್ ಸಿಗುವ ಬಗ್ಗೆ ಅಭಿಮಾನಿಗಳು ಎದುರು ನೋಡ್ತಿದ್ದಾರೆ.

    ಬಿಗ್ ಅನೌನ್ಸ್‌ಮೆಂಟ್ ಕಮ್ಮಿಂಗ್ ಸೂನ್ ಎಂದು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಯಶ್ 19 ಸಿನಿಮಾ ಅಪ್‌ಡೇಟ್ ಬಗ್ಗೆನೇ ಏನಾದ್ರೂ ಸುಳಿವು ಕೊಡ್ತಿದ್ದಾರಾ? ಎನ್ನುವ ಚರ್ಚೆ ಶುರುವಾಗಿದೆ. ಅಭಿಮಾನಿಗಳು ಬೇಗ ಹೇಳಿ ಎಂದು ಕೇಳುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ ಯಶ್ ತಮ್ಮ ಮುಂದಿನ ಸಿನಿಮಾ ಘೋಷಿಸುತ್ತಾರಾ? ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಇದನ್ನೂ ಓದಿ:ಎಲ್ಲೆಲ್ಲೂ ‘ಜೈಲರ್’ ಚಿತ್ರದ ಹವಾ, ನಿಲ್ಲುತ್ತಿಲ್ಲ ರಜನಿ ತಾಕತ್ತು

    ‘ಕೆಜಿಎಫ್ 2’ (KGF 2) ಸಿನಿಮಾ ತೆರೆಗೆ ಬಂದು ಒಂದೂವರೆ ವರ್ಷ ಕಳೆದಿದೆ. ಆದರೂ ಯಶ್ ಮುಂದಿನ ಚಿತ್ರದ ಬಗ್ಗೆ ಅಪ್‌ಡೇಟ್ ಸಿಗದೇ ಕಾತರದಿಂದ ಕಾಯ್ತಿದ್ದಾರೆ. ಈ ಹಿಂದೆ ಕೆವಿಎನ್ ಸಂಸ್ಥೆ ಜೊತೆ ಯಶ್ ಕೈಜೋಡಿಸುತ್ತಿದ್ದಾರೆ ಎನ್ನಲಾಗಿತ್ತು. ಈಗ ಕೆವಿಎನ್ ಟೀಮ್ ಕಡೆಯಿಂದ ಸಿನಿಮಾ ಅನೌನ್ಸ್‌ಮೆಂಟ್ ಎನ್ನುತ್ತಿದ್ದಂತೆ ಯಶ್ 19 ಹ್ಯಾಷ್‌ಟ್ಯಾಗ್ ಈಗ ಇಂಡಿಯಾ ಮಟ್ಟದಲ್ಲಿ ಟ್ರೆಂಡಿಂಗ್‌ನಲ್ಲಿದೆ.

    ಯಶ್ 19 ಚಿತ್ರಕ್ಕೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಈ ಹಿಂದೆ ಯಶ್ 19 ಚಿತ್ರಕ್ಕೆ ನರ್ತನ್ ಹೆಸರು ಕೇಳಿ ಬಂದಿತ್ತು. ಆದರೆ ಕಥೆ ಸೆಟ್ ಆಗದ ಕಾರಣ ಅದು ಸಾಧ್ಯವಾಗಲಿಲ್ಲ. ಯಶ್ ಮುಂದಿನ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಆ್ಯಕ್ಷನ್ ಕಟ್ ಹೇಳುತ್ತಾರೆ ಎನ್ನುವ ಚರ್ಚೆ ಕೂಡ ಭಾರೀ ಸದ್ದು ಮಾಡಿತ್ತು. ಇನ್ನೊಂದು ಕಡೆ ಕೆಜಿಎಫ್‌ 3 ಸಿನಿಮಾ ಮಾಡ್ತಾರೆ ಎನ್ನಲಾಗಿತ್ತು. ಈ ಬಗ್ಗೆ ಯಾವುದೇ ಅಧಿಕೃತ ಅಪ್‌ಡೇಟ್ ಹೊರಬಿದ್ದಿಲ್ಲ. ವರಮಹಾಲಕ್ಷ್ಮಿ ಹಬ್ಬದಂದು (ಆಗಸ್ಟ್‌ 25) ಯಶ್ ಸಿನಿಮಾ ಬಗ್ಗೆ ಸಿಹಿಸುದ್ದಿ ಸಿಗಲಿದೆ ಎಂದು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಅಭಿಮಾನಿಗಳ ನಿರೀಕ್ಷೆ ಪೂರೈಸುತ್ತಾ? ಎಂದು ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧ್ರುವ ಸರ್ಜಾಗೆ ನಾಯಕಿಯಾಗೋ ಆ KD ಲೇಡಿ ಯಾರು?

    ಧ್ರುವ ಸರ್ಜಾಗೆ ನಾಯಕಿಯಾಗೋ ಆ KD ಲೇಡಿ ಯಾರು?

    ಜೋಗಿ ಪ್ರೇಮ್ (Jogi Prem) ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ಕೆಡಿ’ (KD) ಒಂದಲ್ಲಾ ಒಂದು ವಿಚಾರವಾಗಿ ಸೌಂಡ್ ಮಾಡುತ್ತಲೇ ಇದೆ. ದಿನದಿಂದ ದಿನಕ್ಕೆ ಚಿತ್ರತಂಡದ ತಾರಾಗಣ ಹಿರಿದಾಗುತ್ತಲೇ ಇದೆ. ಹೀಗಿರುವಾಗ ಧ್ರುವ ಸರ್ಜಾಗೆ (Dhruva Sarja) ನಾಯಕಿಯಾಗಿ ಯಾರು ಸಾಥ್ ಕೊಡುತ್ತಾರೆ ಎಂಬುದನ್ನ ರಿವೀಲ್ ಮಾಡುವುದಕ್ಕೆ ಕೌಂಟ್‌ಡೌನ್ ಶುರುವಾಗಿದೆ. ನಾಯಕಿ ಮಚ್ಚ್‌ಲಕ್ಷ್ಮಿ ಪರಿಚಯಿಸೋದಾಗಿ ಚಿತ್ರತಂಡ ಅನೌನ್ಸ್ ಮಾಡಿದೆ.

    ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt), ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ. ‘ಕೆಡಿ’ ನಾಯಕಿ ಮಚ್ಚ್‌ಲಕ್ಷ್ಮಿ ಬಗ್ಗೆ ಅನೌನ್ಸ್ ಮಾಡ್ತಿವಿ ಎನ್ನುತ್ತಿದ್ದಂತೆ ಯಾರಿರಬಹುದು ಎಂಬ ಗುಸು ಗುಸು ಈಗಾಗಲೇ ಶುರುವಾಗಿದೆ.

     

    View this post on Instagram

     

    A post shared by Prem❣️s (@directorprems)

    KDಗೆ ಪರಭಾಷಾ ನಟಿ ಅಲ್ಲ, ಹೊಸ ಮುಖ ಕೂಡ ಅಲ್ಲ, ರೀಷ್ಮಾ ನಾಣಯ್ಯ (Reeshma Nanaiah) ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ಸಿನಿಮಾ ಚಿತ್ರೀಕರಣದಲ್ಲೂ ಅವರು ಭಾಗಿ ಆಗಿದ್ಧಾರೆ. ಏ.28ಕ್ಕೆ ಶುಕ್ರವಾರ 10:05ಕ್ಕೆ ಫಸ್ಟ್ ಲುಕ್ ಸಮೇತ ಮಚ್ಚ್‌ಲಕ್ಷ್ಮಿ ದರ್ಶನ ಮಾಡಿಸಲಿದೆಯಂತೆ ಚಿತ್ರತಂಡ. ಜೋಗಿ ಪ್ರೇಮ್ ನಿರ್ದೇಶನದ ‘ಏಕ್‌ ಲವ್ ಯಾ’ ಚಿತ್ರದಲ್ಲಿ ರೀಷ್ಮಾ ನಟಿಸಿದ್ದರು. ಮಡಿಕೇರಿ ಮೂಲದ ರೀಷ್ಮಾ ಬೆಂಗಳೂರಿನಲ್ಲಿ ಪದವಿ ಮುಗಿಸಿದ್ದಾರೆ. ಮೊದಲ ಚಿತ್ರದಲ್ಲೇ ಆಕೆಯ ನಟನೆ ಗಮನ ಸೆಳೆದಿತ್ತು. ಹಾಗಾಗಿ ‘KD’ ಚಿತ್ರಕ್ಕೂ ಆಕೆನೇ ನಾಯಕಿ ಎನ್ನಲಾಗ್ತಿದೆ. ಎಲ್ಲದಕ್ಕೂ ಅಧಿಕೃತ ಅಪ್‌ಡೇಟ್‌ಗೆ ಕಾದುನೋಡಬೇಕಿದೆ. ಇದನ್ನೂ ಓದಿ:38 ಕೋಟಿ ರೂಪಾಯಿ ಕೊಟ್ಟು ಎರಡು ಐಷರಾಮಿ ಮನೆ ಖರೀದಿಸಿದ ಆಲಿಯಾ ಭಟ್

    1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ. ಧ್ರುವ ನಟನೆಯ ‘ಮಾರ್ಟಿನ್’ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗಪ್ಪಳಿಸಲು ಸಿದ್ಧವಾಗ್ತಿದೆ. ಅದರ ಬೆನ್ನಲ್ಲೇ ತೆರೆಮೇಲೆ KD ಸಿನಿಮಾದ  ಕರಾಮತ್ತು ಶುರುವಾಗಲಿದೆ.

  • ಧ್ರುವ ಸರ್ಜಾ ಜೊತೆ ರೊಮ್ಯಾನ್ಸ್ ಮಾಡಲಿರುವ ನಾಯಕಿ ಇವರೇ

    ಧ್ರುವ ಸರ್ಜಾ ಜೊತೆ ರೊಮ್ಯಾನ್ಸ್ ಮಾಡಲಿರುವ ನಾಯಕಿ ಇವರೇ

    ಡೈರೆಕ್ಟರ್ ಪ್ರೇಮ್ (Director Prem) ನಿರ್ದೇಶನದ ಸಿನಿಮಾ `ಕೆಡಿ’ (KD) ಶುರುವಾದ ದಿನದಿಂದ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇದೆ. ಧ್ರುವಾಗೆ ಸಂಜಯ್ ದತ್ ವಿಲನ್ ಆಗಿ ಅಬ್ಬರಿಸಿದ್ದರೆ, ಆ್ಯಕ್ಷನ್ ಪ್ರಿನ್ಸ್ ಜೊತೆ ರೊಮ್ಯಾನ್ಸ್ ಮಾಡಲಿರುವ ನಾಯಕಿ ಬಗ್ಗೆ ಸಖತ್ ಚರ್ಚೆ ನಡೆಯುತ್ತಿದೆ.‌ ಇದನ್ನೂ ಓದಿ: 800 ವರ್ಷದ ಹಳೆಯ ಮನೆಯಲ್ಲಿ ಶುಭಾ ಪೂಂಜಾ ದಿಢೀರ್ ಮದುವೆ

    ಕೆವಿಎನ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ KD ಸಿನಿಮಾ ಭರದಿಂದ ಶೂಟಿಂಗ್ ನಡೆಯುತ್ತಿದೆ. 1970ರ ದಶಕದ ಕಥೆಯನ್ನ ತೆರೆಯ ಮೇಲೆ ತೋರಿಸಲು ನಿರ್ದೇಶಕ ಪ್ರೇಮ್ ಹೊರಟಿದ್ದಾರೆ. ಧ್ರುವ ಮುಂದೆ ಖಳನಾಯಕನಾಗಿ ಸಂಜಯ್ ದತ್ ಅಬ್ಬರಿಸಲಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಬಂದು `ಕೆಜಿಎಫ್ 2′ ನಟ ತನ್ನ ಭಾಗದ ಶೂಟಿಂಗ್ ಮುಗಿಸಿ ಕೊಟ್ಟಿದ್ದಾರೆ.

    ಇನ್ನೂ 2ನೇ ಭಾಗದ ಚಿತ್ರೀಕರಣವನ್ನು 12 ಎಕರೆ ಜಾಗದಲ್ಲಿ ಶೂಟ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಅದಕ್ಕಾಗಿ ಅದ್ದೂರಿಯಾಗಿ ಸೆಟ್ ಕೂಡ ನಿರ್ಮಿಸಲಾಗಿದೆ. 70ರ ದಶಕದಲ್ಲಿ ಬೆಂಗಳೂರು ಹೇಗಿತ್ತು ಎಂಬುದನ್ನ ತಮ್ಮ ಸಿನಿಮಾ ಮೂಲಕ ತೋರಿಸಲು ರೆಡಿಯಾಗಿದ್ದಾರೆ. ಇನ್ನೂ ಕೆಡಿ ಧ್ರುವಾಗೆ ನಾಯಕಿ ಯಾರು ಎಂಬುದರ ಬಗ್ಗೆ ಇದುವರೆಗೂ ರಿವೀಲ್ ಆಗಿಲ್ಲ.

    ಆದರೆ ಧ್ರುವ ಸರ್ಜಾಗೆ ಕೊಡಗಿನ ಬ್ಯೂಟಿ ರೀಷ್ಮಾ (Reeshma Nanaih) ಮತ್ತು ಭರಾಟೆ ನಟಿ ಶ್ರೀಲೀಲಾ (Sreeleela) ಇಬ್ಬರ ಹೆಸರು ಕೇಳಿ ಬರುತ್ತಿದೆ. ಚಿತ್ರಕ್ಕೆ ನಾಯಕಿ ಯಾರಾಗ್ತಾರೆ ಎಂಬುದರ ಬಗ್ಗೆ ಕುತೂಹಲ ಮೂಡಿಸಿದೆ. ಸಿನಿಮಾ ತಂಡದಿಂದ ಅಧಿಕೃತ ಅಪ್‌ಡೇಟ್ ಸಿಗುವವರೆಗೂ ಕಾದುನೋಡಬೇಕಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k