Tag: Kyiv

  • ಬಂಕರ್‌ಗಳಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಒದ್ದು ಅಪಾರ್ಟ್ಮೆಂಟ್‌ಗೆ ಕಳುಹಿಸುತ್ತಿದ್ದಾರೆ: ವಿದ್ಯಾರ್ಥಿ

    ಬಂಕರ್‌ಗಳಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಒದ್ದು ಅಪಾರ್ಟ್ಮೆಂಟ್‌ಗೆ ಕಳುಹಿಸುತ್ತಿದ್ದಾರೆ: ವಿದ್ಯಾರ್ಥಿ

    ಕೀವ್: ಪಬ್ಲಿಕ್ ಬಂಕರ್‌ಗಳಲ್ಲಿ ಇರುವ ಭಾರತೀಯ ವಿದ್ಯಾರ್ಥಿಗಳನ್ನು ಒದ್ದು ವಾಪಸ್ ಅಪಾರ್ಟ್ಮೆಂಟ್‌ಗೆ ಕಳುಹಿಸುವ ಮೂಲಕ ಹಲ್ಲೆ ಎಸಗಲಾಗುತ್ತಿದೆ ಎಂದು ಉಕ್ರೇನ್‍ನಲ್ಲಿರುವ ಕರ್ನಾಟಕ ಮೂಲದ ವಿದ್ಯಾರ್ಥಿ ಬೇಸರ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ವಿದ್ಯಾರ್ಥಿ ಪ್ರಸಾದ್ ಮಾತನಾಡಿ, ವಿಶ್ವಸಂಸ್ಥೆಯ ಭಾರತ ಉಕ್ರೇನ್‍ಗೆ ಬೆಂಬಲ ನೀಡಿರಲಿಲ್ಲ. ಇದರಿಂದಾಗಿ ಸಿಟ್ಟಾಗಿರುವ ಸ್ಥಳೀಯ ಉಕ್ರೇನ್ ಜನತೆ ಒದ್ದು ಅಪಾರ್ಟ್ಮೆಂಟ್‌ಗೆ ತೆರಳುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ನೋವನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಂತ ಸಾಮಾಜಿಕ ಮಾಧ್ಯಮ ಆ್ಯಪ್ ಬಿಡುಗಡೆ ಮಾಡಿದ ಟ್ರಂಪ್

    ಇಲ್ಲಿರುವ ಹಾಸ್ಟೆಲ್ ಬಂಕರ್‌ಗಳಲ್ಲಿ ವಿದ್ಯಾರ್ಥಿಗಳು ಮಾತ್ರ ಸುರಕ್ಷಿತವಾಗಿದ್ದಾರೆ. ಉಳಿದವರೆಲ್ಲರೂ ಅಪಾರ್ಟ್ಮೆಂಟ್‌ನಲ್ಲಿದ್ದಾರೆ. ಮತ್ತೊಂದು ವಿಚಾರವೆಂದರೆ ಇಲ್ಲಿ ತಿನ್ನಲು ಊಟ ಸಿಗುತ್ತಿಲ್ಲ. ಕುಡಿಯಲು ನೀರು ಸಹ ಸಿಗದೇ ಟ್ಯಾಪ್‍ನಿಂದ ಬರುವ ನೀರನ್ನು ಬಿಸಿ ಮಾಡಿಕೊಂಡು ಕುಡಿಯುತ್ತಿದ್ದೇವೆ. ಹೊರಗಡೆ ಹೋಗಲು ಕೂಡಾ ಆಗುತ್ತಿಲ್ಲ. ಏಕೆಂದರೆ ಎಲ್ಲಿ ಸ್ಥಳೀಯ ಜನರು ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ ಅನ್ನುವ ಭಯ ಕಾಡುತ್ತಿದೆ ಎಂದು ತಮ್ಮ ಅಳಲು ತೊಡಿಕೊಂಡರು.

    ವಿದ್ಯಾರ್ಥಿ ಹೇಳಿದ್ದು ಏನು?
    ಉಕ್ರೇನ್‍ನಿನ ಬಾರ್ಡರ್‍ನಲ್ಲಿಯೂ ಸಹ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದೆ ಅಂತ ಅಲ್ಲಿಯ ವಿದ್ಯಾರ್ಥಿಗಳು ನನಗೆ ವೀಡಿಯೋ ಮಾಡಿ ಬಿಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ ಯುದ್ದ ಪ್ರಾರಂಭಗೊಳ್ಳವ ಮುನ್ನ ಜನವರಿ 25ಕ್ಕೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕೃತ ಫೇಸ್ ಬುಕ್ ಪೇಜ್‍ನಿಂದ ಒಂದು ಫಾರಂ ಬಂದಿತ್ತು.

    ಫಾರಂನಲ್ಲಿ ರಷ್ಯಾ ಗಡಿಯಲ್ಲಿ ಯಾವುದೇ ಯುದ್ಧ ನಡೆಯುವ ಸಂದರ್ಭ ಕಾಣುತ್ತಿಲ್ಲ. ಇಲ್ಲಿ ಪರಿಸ್ಥಿತಿ ತುಂಬಾ ಶಾಂತವಾಗಿದೆ. ಒಂದು ವೇಳೆ ಹಾಗೇನಾದರೂ ಯುದ್ಧ ನಡೆಯುವ ಸಂದರ್ಭ ಎದುರಾದರೆ ನಿಮ್ಮ ಸಹಾಯಕ್ಕೆ ನಾವು ಇದ್ದೇವೆ ಎಂದು ಹೇಳಿತ್ತು.

    ಯುದ್ಧ ಪ್ರಾರಂಭವಾಗುವ ಮುನ್ನ ಭಾರತಕ್ಕೆ ಬರಬೇಕೆಂದರೆ ಆವಾಗಾಗಲೇ ಉಕ್ರೇನ್‍ನ ಎಲ್ಲ ನಾಗರಿಕ ವಿಮಾನಗಳು ಬುಕ್ ಆಗಿದ್ದವು. ಕೀವ್‍ನ ಬಾರ್ಡರ್‍ನಲ್ಲಿ ಸೇರಿರುವ ವಿದ್ಯಾರ್ಥಿಗಳನ್ನು ಹೊರಗಡೆ ಹೋಗಲಿಕ್ಕೆ ಬಿಡುತ್ತಿಲ್ಲ. ವಾಪಸ್ ಹೋಗಿ ಅಂತ ಹಲ್ಲೆ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಭಾರತಕ್ಕೆ ಹೋಗಿದ್ದಾರೆ. ಕೇವಲ ಪಾಕಿಸ್ತಾನ ಮತ್ತು ನೈಜಿರೀಯಾದ ಕೆಲ ವಿದ್ಯಾರ್ಥಿಗಳು ಮಾತ್ರ ಇಲ್ಲಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನ ಸಮುದ್ರ, ಭೂ-ಆಧಾರಿತ ಪ್ರದೇಶದ ಮೇಲೆ ರಷ್ಯಾ ದಾಳಿ!

    ಕೀವ್ ಬಾರ್ಡರ್ ಬಿಟ್ಟು ಬೇರೆ ಬಾರ್ಡರ್‍ನಿಂದ ಈಗಾಗಲೇ ಕೆಲವೊಂದಿಷ್ಟು ವಿದ್ಯಾರ್ಥಿಗಳು ಪಾರಾಗಿದ್ದಾರೆ. ನಮಗೆ ಇಲ್ಲಿ ಪ್ರತೀ ಕ್ಷಣಕ್ಕೂ ಸತ್ತು ಬದುಕುತ್ತಿದ್ದೇವೆ. ಸ್ಥಳೀಯ ಜನರು ಯಾವಾಗ ನಮ್ಮ ಮೇಲೆ ದಾಳಿ ಮಾಡುತ್ತಾರೆ ಅನ್ನುವ ಭಯ ಕಾಡುತ್ತಿದೆ ಎಂದು ಭಯ ವ್ಯಕ್ತಪಡಿಸಿದರು. ?

    ಉಕ್ರೇನ್ ಮೇಲೆ ರಷ್ಯಾ ದಾಳಿಯನ್ನು ಖಂಡಿಸಿ ಶನಿವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆ ನಡೆದಿತ್ತು. ಅಮೆರಿಕ ಮತ್ತು ಆಲ್ಬೇನಿಯಾ ಸಂಯುಕ್ತವಾಗಿ ಮಂಡಿಸಿದ ನಿರ್ಣಯದ ಮೇಲೆ ಮತದಾನ ನಡೆದಿತ್ತು.

    ಭಾರತ, ಚೀನಾ, ಯುಎಇ ದೇಶಗಳು ಮತದಾನದಿಂದ ದೂರ ಉಳಿದಿದ್ದರೆ ಪೆÇೀಲೆಂಡ್, ಇಟಲಿ, ನ್ಯೂಜಿಲೆಂಡ್ ಸೇರಿ 11 ದೇಶಗಳು ನಿರ್ಣಯದ ಪರವಾಗಿ ಮತ ಹಾಕಿವೆ. ರಷ್ಯಾ ದೇಶ ಊಹಿಸಿದಂತೆಯೇ ವಿಟೋ ಅಧಿಕಾರ ಚಲಾಯಿಸಿ, ನಿರ್ಣಯ ಪಾಸ್ ಆಗದಂತೆ ತಡೆದಿದೆ.

    ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ಭಾರತದ ಶಾಶ್ವತ ರಾಯಭಾರಿ ತಿರುಮೂರ್ತಿ, ವಿವಾದ ಇತ್ಯರ್ಥಕ್ಕೆ ಚರ್ಚೆಯೊಂದೇ ಸಮಾಧಾನ. ಆದರೆ ಈ ಕ್ಷಣದಲ್ಲಿ ಅದು ಸಾಧ್ಯವಾಗಿಲ್ಲ. ಎರಡು ದೇಶಗಳು ರಾಜತಾಂತ್ರಿಕ ಮಾರ್ಗವನ್ನು ಕೈಬಿಟ್ಟಿದ್ದಕ್ಕೆ ವಿಷಾದವಿದೆ. ಸದ್ಯಕ್ಕೆ ಈ ಖಂಡನಾ ನಿರ್ಣಯದಿಂದ ದೂರ ಇರಲು ಭಾರತ ನಿರ್ಧರಿಸಿದೆ ಎಂದು ತಿಳಿಸಿದ್ದರು.

  • ಮೋದಿ ಜೀ, ಯೋಗಿ ಜೀ ಯಾರಿದ್ದೀರಿ..? ಪ್ಲೀಸ್ ನಮ್ಮನ್ನು ಕಾಪಾಡಿ- ಯುಪಿ ವಿದ್ಯಾರ್ಥಿನಿ ಅಳಲು

    ಮೋದಿ ಜೀ, ಯೋಗಿ ಜೀ ಯಾರಿದ್ದೀರಿ..? ಪ್ಲೀಸ್ ನಮ್ಮನ್ನು ಕಾಪಾಡಿ- ಯುಪಿ ವಿದ್ಯಾರ್ಥಿನಿ ಅಳಲು

    ಕೀವ್: ರಷ್ಯಾ- ಉಕ್ರೇನ್ ನಡುವಿನ ಸಂಘರ್ಷಕ್ಕೆ ಇಂದು 5ನೇ ದಿನ. ಕಾರ್ಕಿವ್, ಕೀವ್ ನಗರಗಳನ್ನ ವಶಕ್ಕೆ ಪಡೆಯಲು ರಷ್ಯಾ ಸೇನೆ ತೀವ್ರ ಕಸರತ್ತು ನಡೆಸುತ್ತಿದ್ದು, ರಷ್ಯಾ ಸೇನೆಗೆ, ಉಕ್ರೇನ್ ಸೇನೆಯಿಂದ ತೀವ್ರ ಪ್ರತಿರೋಧ ವ್ಯಕ್ತವಾಗುತ್ತಿದೆ. ಆದರೂ ಪಟ್ಟು ಬಿಡದ ಉಕ್ರೇನ್ ಸೇನೆಯು ರಷ್ಯಾ ಸೈನಿಕರನ್ನು ಸದೆಬಡೆಯುತ್ತಿದೆ. ಈ ಮಧ್ಯೆ ವಿದ್ಯಾಭ್ಯಾಸಕ್ಕೆ ತೆರಳಿದ ವಿದ್ಯಾರ್ಥಿಗಳು ತಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವಂತೆ ಭಯ, ಆತಂಕದಿಂದಲೇ ವೀಡಿಯೋ ಮಾಡಿಕೊಂಡು ಅಳಲು ತೋಡಿಕೊಳ್ಳುತ್ತಿದ್ದಾರೆ.

    ಉತ್ತರ ಪ್ರದೇಶ ವಿದ್ಯಾರ್ಥಿನಿ ಗರ್ವಾಮಿಶ್ರ ವೀಡಿಯೋ ಮಾಡಿ ಕಣ್ಣೀರು ಹಾಕಿದ್ದಾಳೆ. ನನಗೆ ಅನ್ನಿಸುತ್ತಿದೆ ನಮಗೆ ಇಲ್ಲಿ ಯಾವುದೇ ಸಹಾಯ ಸಿಗುವುದಿಲ್ಲ. ಭಾರತೀಯ ರಾಯಭಾರಿ ಕಚೇರಿಗೆ ಕರೆ ಮಾಡುತ್ತಿದ್ದೇವೆ. ಆದರೆ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾಳೆ. ಇದನ್ನೂ ಓದಿ: ಉಕ್ರೇನ್ ಜನರ ಸಹಾಯಕ್ಕೆ ನಿಂತ ಇಸ್ಕಾನ್‍ಗೆ ಭಾರೀ ಮೆಚ್ಚುಗೆ

    ಪ್ರತಿ ದಿನ ರಾತ್ರಿ ಬಂಕರ್ ಒಳಗೆ ನುಗ್ಗಲು ರಷ್ಯಾ ಸೈನಿಕರು ಯತ್ನಿಸುತ್ತಿದ್ದಾರೆ. ಗೇಟ್ ಒಡೆದು ಹಂಗಾಮ ಮಾಡ್ತಿದ್ದಾರೆ. ಇಲ್ಲಿಂದ ರೈಲು, ಕಾರಿನಲ್ಲಿ ಪೊಲೆಂಡ್ ಗಡಿಗೆ ತಲುಪಲು ಯತ್ನಿಸಿದವರ ಮೇಲೆ ಹಲ್ಲೆಗಳಾಗಿದೆ, ನಾಪತ್ತೆಯಾಗಿದ್ದಾರೆ. ರಷ್ಯಾ ಸೈನಿಕರು ಫೈರಿಂಗ್ ಮಾಡಿದ್ದಾರೆ. ಭಾರತೀಯ ವಿದ್ಯಾರ್ಥಿನಿಯರನ್ನು ಅಪಹರಿಸಿದ್ದಾರೆ. ಅವರನ್ನು ಎಲ್ಲಿಗೆ ಕರೆದೊಯ್ದಿದ್ದಾರೆ, ಏನು ಮಾಡಿದ್ದಾರೆ ಎಂಬುದು ತಿಳಿದಿಲ್ಲ. ವಿದ್ಯಾರ್ಥಿಗಳ ಬಗ್ಗೆಯೂ ಮಾಹಿತಿ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾಳೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ರುಮೇನಿಯಾ ಗಡಿಯಲ್ಲೂ ಸೈನಿಕರು ಹಲ್ಲೆ ಮಾಡುತ್ತಿದ್ದಾರೆ. ಮೋದಿ ಜೀ, ಯೋಗಿ ಜೀ ಯಾರಿದ್ದೀರಿ. ನಮ್ಮನ್ನು ಕಾಪಾಡಿ. ನಮನ್ನು ರಕ್ಷಣೆ ಮಾಡುತ್ತಾರೆಂಬ ಭರವಸೆ ಇಲ್ಲ. ನಮಗಿಲ್ಲಿ ಏನಾಗುತ್ತೋ ಗೊತ್ತಿಲ್ಲ. ಯಾರಿದ್ದೀರಿ..? ಎಲ್ಲಿದ್ದೀರಿ..? ದಯಮಾಡಿ ನಮ್ಮನ್ನು ಕಾಪಾಡಿ. ಭಾರತೀಯ ಸೇನೆಯನ್ನು ಕಳುಹಿಸಿ ನಮ್ಮನ್ನು ರಕ್ಷಿಸಿ. ನಾವು ಬದುಕುತ್ತಿವೋ, ಸಾಯುತ್ತಿವೋ ಗೊತ್ತಿಲ್ಲ. ದಯಮಾಡಿ.. ದಯಮಾಡಿ ನಮ್ಮನ್ನು ರಕ್ಷಿಸಿ. ಭಾರತೀಯ ರಾಯಭಾರಿ ನಮ್ಮ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಜೈಹಿಂದ್, ಜೈ ಭಾರತ್ ಎಂದು ಹೇಳುತ್ತಾ ಕಣ್ಣೀರು ಸುರಿಸಿ ರಕ್ಷಿಸುವಂತೆ ಪರಿಪರಿಯಾಗಿ ಬೇಡಿಕೊಂಡಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

  • ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ಕೀವ್/ನವದೆಹಲಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್ ಶುರುವಾಗಿದೆ. ಮುಂದಿನ ವಿದ್ಯಾಭ್ಯಾಸದ ಬಗ್ಗೆ ಇದೀಗ ವಿದ್ಯಾರ್ಥಿಗಳು ತಲೆಕೆಡಿಸಿಕೊಂಡಿದ್ದಾರೆ. ಈ ಮಕ್ಕಳಿಗೆ ಸದ್ಯಕ್ಕೆ ಭಾರತದಲ್ಲಿ ಶಿಕ್ಷಣ ಮುಂದುವರಿಸಲು ಅವಕಾಶ ಸಿಗಲ್ಲ. ಹೀಗಾಗಿ ಭಾರತದ ವಿದ್ಯಾರ್ಥಿಗಳ ಭವಿಷ್ಯ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.

    ಭಾರತದ ಸದ್ಯದ ನಿಯಮದಲ್ಲಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಈ ಅವಕಾಶ ಕೊಡಲು ಅಧಿಕಾರ ಇದೆಯೇ ಹೊರತು, ಏಕಾಏಕಿ ಅನುಮತಿ ಕೊಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಇದಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಕಾನೂನು ಜಾರಿ ಮಾಡಬೇಕು. ಇದನ್ನೂ ಓದಿ: ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್‌ ಇನ್ನೂ ಕೈವಶವಾಗಿಲ್ಲ ಯಾಕೆ?

    ಭಾರತದಲ್ಲಿ ವ್ಯಾಸಂಗ ಮುಂದುವರಿಸೋ ವಿದ್ಯಾರ್ಥಿಗಳಿಗೆ ವಿಶೇಷ ಕೋಟಾದಡಿ ಸೀಟು ನೀಡಬೇಕಾಗುತ್ತೆ. ಈ ಪ್ರಕ್ರಿಯೆ ಸಂಪೂರ್ಣ ಕೇಂದ್ರ ಸರ್ಕಾರವೇ ನಡೆಸಿ ರಾಜ್ಯಗಳಿಗೆ ಸೂಚನೆ ಕೊಡಬೇಕು. ವೈದ್ಯಕೀಯ ಬಗ್ಗೆ ಉಕ್ರೇನ್ ಶೈಕ್ಷಣಿಕ ವ್ಯವಸ್ಥೆ ಮತ್ತು ಭಾರತ ವ್ಯವಸ್ಥೆ ವಿಭಿನ್ನವಾಗಿರುತ್ತದೆ. ಇದನ್ನೂ ಓದಿ: ಉಕ್ರೇನ್ ನೆರವಿಗೆನಿಂತ ಎಲೋನ್ ಮಸ್ಕ್ – ಸ್ಟಾರ್ ಲಿಂಕ್ ಸ್ಯಾಟಲೈಟ್ ಮೂಲಕ ಬ್ರಾಡ್‍ಬ್ಯಾಂಡ್ ಸೇವೆ

    ಭಾರತಕ್ಕೆ ಬಂದಿರೋ ವಿದ್ಯಾರ್ಥಿಗಳು ವಿವಿಧ ವರ್ಷದ ಕೋರ್ಸ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ಇವರಿಗಾಗಿ ಕೇಂದ್ರ ಸರ್ಕಾರ ನಿಯಮ ರೂಪಿಸಿ ಅವಕಾಶ ಮಾಡಿಕೊಡಬಹುದು. ಯುದ್ಧ ಮುಗಿದ ಬಳಿಕ ಉಕ್ರೇನ್‍ನಲ್ಲಿಯೇ ಶಿಕ್ಷಣ ಮುಂದುವರಿಕೆ ಬಗ್ಗೆ ರಾಜತಾಂತ್ರಿಕ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಉಕ್ರೇನ್ ದಾಳಿಗೆ 4,300 ರಷ್ಯಾ ಸೈನಿಕರ ಸಾವು – ಸುಕೋಯ್ ಫೈಟರ್ ಜೆಟ್ ಧ್ವಂಸ

    https://www.youtube.com/watch?v=riX3zrQuZLg

  • ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್‌ ಇನ್ನೂ ಕೈವಶವಾಗಿಲ್ಲ ಯಾಕೆ?

    ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್‌ ಇನ್ನೂ ಕೈವಶವಾಗಿಲ್ಲ ಯಾಕೆ?

    ಕೀವ್‌: ಯುದ್ಧ ಘೋಷಣೆಯಾದ ಬಳಿಕ ರಷ್ಯಾ ಸುಲಭವಾಗಿ ಉಕ್ರೇನ್‌ ದೇಶವನ್ನು ಗೆಲ್ಲಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಈಗ ಉಕ್ರೇನ್ ಪ್ರಭಲವಾಗಿ ಹೋರಾಟ ಮಾಡುತ್ತಿದ್ದು ರಷ್ಯಾದ ಲೆಕ್ಕಾಚಾರ ತಲೆಕೆಳಗಾಗಿದೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.

    ಹೌದು. ಆರಂಭದಲ್ಲಿ ಉಕ್ರೇನ್‌ ವಾಯುನೆಲೆಯನ್ನು ಧ್ವಂಸಗೊಳಿಸಿದ್ದ ರಷ್ಯಾ ನಂತರ ಮಿಲಿಟರಿ ಕಾರ್ಯಾಚರಣೆ ಆರಂಭಿಸಿತ್ತು. ಸುಲಭವಾಗಿ ಉಕ್ರೇನ್‌ ಗಡಿಯನ್ನು ನುಗ್ಗಿದ್ದ ಟ್ಯಾಂಕರ್‌ಗಳು ಹಲವು ನಗರಗಳನ್ನು ವಶ ಪಡಿಸಿಕೊಂಡಿತ್ತು. ಆದರೆ ರಾಜಧಾನಿ ಕಿವ್‌ ನಗರವನ್ನು ವಶಪಡಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ.

    ರಷ್ಯಾ ಸೇನೆ ಉಕ್ರೇನ್ ನಾಗರಿಕದಿಂದ ತೀವ್ರ ಪ್ರತಿರೋಧ ಎದುರಿಸುತ್ತಿದೆ. ಉಕ್ರೇನ್ ಅಧ್ಯಕ್ಷರೇ ಮುಂದೆ ನಿಂತು 30ಸಾವಿರಕ್ಕೂ ಹೆಚ್ಚು ರೈಫಲ್, ಮಷಿನ್ ಗನ್, ಪಿಸ್ತೂಲ್‍ಗಳನ್ನು ಸಾರ್ವಜನಿಕರಿಗೆ ಹಂಚಿಬಿಟ್ಟಿದ್ದಾರೆ. ಜನಾಕ್ರೋಶ ಮತ್ತಷ್ಟು ಹೆಚ್ಚಿದರೇ ರಷ್ಯಾ ಸೇನೆಗೆ ಉಕ್ರೇನ್ ವಶ ಕಷ್ಟಸಾಧ್ಯ. ಎರಡೂ ಕಡೆಯೂ ಭಾರೀ ಪ್ರಾಣ ನಷ್ಟ ಉಂಟಾಗುವ ಆತಂಕ ಎದುರಾಗಿದೆ. ಇದನ್ನೂ ಓದಿ: ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!

    ಜನರಿಂದ ಭಾರೀ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಷ್ಯಾ ಈಗ ಜನ ವಸತಿಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ. ತನ್ನ ಸೈನಿಕರತ್ತ ಪೆಟ್ರೋಲ್‌ ಬಾಂಬ್‌ ಎಸೆಯುತ್ತಿರುವ ಹಿನ್ನೆಲೆಯಲ್ಲಿ ರಷ್ಯಾ ತೈಲ ಸಂಗ್ರಹಗಳ ಮೇಲೆ ದಾಳಿ ನಡೆಸಿ ಸ್ಟೋಟಗೊಳಿಸುತ್ತಿದೆ. ಇದರಿಂದಾಗಿ ಸಾಮಾಗ್ರಿ ಸಾಗಾಟ, ನೀರಿಗೆ ಸಮಸ್ಯೆಯಾಗಿದೆ.

    ರಷ್ಯಾ ಬೆಂಬಲಿತ ಬಂಡುಕೋರರ ವಶದಿಂದ 2014ರಲ್ಲಿ ಡಾನ್ ಬಾಸ್ ಪ್ರಾಂತ್ಯದ ಇಲೋವೈಸ್ಕ್ ನಗರ ವಶಕ್ಕೆ ತೆಗೆದುಕೊಳ್ಳಲು ಉಕ್ರೇನ್‍ಗೆ 50 ದಿನ ಹಿಡಿದಿತ್ತು. ಅತ್ತ, ಇರಾಕ್‍ನ ಮೊಸುಲ್ ನಗರ ವಶಕ್ಕೆ ತೆಗೆದುಕೊಳ್ಳಲು ಅಮೆರಿಕಾಗೆ ಬರೋಬ್ಬರಿ ನಾಲ್ಕು ತಿಂಗಳು ಬೇಕಾಗಿತ್ತು. ಇದನ್ನೂ ಓದಿ: Russia-Ukraine Crisis: ರಷ್ಯಾಗೆ ಮತ್ತೊಂದು ಶಾಕ್ – SWIFTನಿಂದ ರಷ್ಯಾವನ್ನು ದೂರವಿಡಲು ತೀರ್ಮಾನ

    ಸೋವಿಯತ್ ಪಡೆಗಳನ್ನು ಆಫ್ಘಾನಿಸ್ತಾನದಿಂದ ಓಡಿಸಲು ಅಮೆರಿಕಾ ಅಲ್ಲಿನ ಉಗ್ರರಿಗೆ ದೊಡ್ಡಮಟ್ಟದಲ್ಲಿ ಸಣ್ಣ ಆಯುಧಗಳನ್ನೇ ನೀಡಿತ್ತು. ಉಕ್ರೇನ್‍ನಲ್ಲಿಯೂ ಇದೇ ವ್ಯೂಹ ರಚನೆ ಆಗಿದೆ ಜನರೇ ಪ್ರತಿದಾಳಿ ನಡೆಸಿ ರಷ್ಯಾ ಸೇನೆಯನ್ನು ಹಿಮ್ಮೆಟ್ಟಿಸುತ್ತಿದ್ದಾರೆ.

  • ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಕೀವ್: ಉಕ್ರೇನ್ ಮೇಲೆ ರಷ್ಯಾ ಸೈನಿಕರ ಆಕ್ರಮಣ ದಾಳಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಕ್ರೇನ್‍ನ ಎರಡನೇ ಅತಿ ದೊಡ್ಡ ನಗರ ಕರ್ಕಿವ್‍ನಲ್ಲಿರುವ ಗ್ಯಾಸ್ ಪೈಪ್‍ಲೈನ್ ಅನ್ನು ರಷ್ಯಾ ಸೇನೆ ಸ್ಫೋಟಿಸಿದೆ.

    ಈ ವಿಚಾರವನ್ನು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಸ್ಫೋಟದ ಪರಿಣಾಮ ಆಯಿಲ್ ಟ್ಯಾಂಕ್ ಸ್ಫೋಟಗೊಂಡು ಆಗಸದಲ್ಲಿ ದೊಡ್ಡ ಅಣಬೆಯಾಕಾರದ ಮೋಡ ಆವರಿಸಿಕೊಂಡಿದೆ. ಇದು ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎಂದು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

    https://twitter.com/WW32022/status/1497721984339349512

    ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸುವಂತೆ ಉಕ್ರೇನ್ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    https://twitter.com/WW32022/status/1497758655407665165

    ಕರ್ಕಿವ್ ನಗರದಲ್ಲಿ ಉಕ್ರೇನ್ ಹಾಗೂ ರಷ್ಯಾ ಸೇನೆಗಳ ನಡುವೆ ಭಾರೀ ಯುದ್ಧ ನಡೆಯುತ್ತಿದೆ ಎಂದು ತಿಳಿದುಬಂದಿದೆ. ರಷ್ಯಾ ಗಡಿಯಿಂದ ಈ ನಗರ 40 ಕಿಲೋ ಮೀಟರ್ ದೂರದಲ್ಲಿದ್ದು, ಇಲ್ಲಿ ಸುಮಾರು 15 ಲಕ್ಷ ಜನರು ವಾಸಿಸುತ್ತಿದ್ದಾರೆ. ಇದನ್ನೂ ಓದಿ:‌ ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

  • ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    ಕೀವ್: ರಷ್ಯಾ ರಣೋತ್ಸಾಹ 4ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಪುಟ್ಟ ದೇಶವಾಗಿರುವ ಉಕ್ರೇನ್ ಪತರಗುಟ್ಟಿದೆ. ಇದರ ಮಧ್ಯೆ ಉಕ್ರೇನ್ ಸೈನಿಕರೊಬ್ಬರು ತಮ್ಮ ಪೋಷಕರನ್ನು ನೆನಪು ಮಾಡಿಕೊಂಡು ಭಾವುಕರಾದ ವೀಡಿಯೋ ಇದೀಗ ವೈರಲ್ ಆಗುತ್ತಿದೆ.

    ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ್ದು, ಈಗಾಗಲೇ ಉಭಯ ದೇಶಗಳ ಹಲವಾರು ಸೈನಿಕರು ಹತರಾಗಿದ್ದಾರೆ. ಉಕ್ರೇನ್ ರಾಜಧಾನಿ ಕೀವ್‍ನ ಫೋಟೋಬ್ರಿಡ್ಜ್ ನಲ್ಲಿ ಏಕಾಂಗಿಯಾಗಿ ಗಡಿ ರಕ್ಷಣೆ ಮಾಡುತ್ತಿರುವ 21 ವರ್ಷದ ಸೆರ್ಗಿ ಪೆಟ್ರೋಶೆಂಕೊ ಯೋಧ ಇದೀಗ ತನ್ನ ಪೋಷಕರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ:‌ ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

    ಯೋಧನ ಪೋಷಕರು ವಾಸವಾಗಿರುವ ಸ್ಥಳದಲ್ಲಿ ರಷ್ಯಾ ಯೋಧರು ದಾಳಿ ನಡೆಸಿದ್ದಾರೆ. ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ಯೋಧ ತಮ್ಮ ಹೆತ್ತವರನ್ನು ನೆನೆದು ಗದ್ಗದಿತರಾಗಿದ್ದಾರೆ. ನಾನು ಜೀವಂತವಾಗಿ ಉಳಿಯುತ್ತೇನೋ ಇಲ್ಲವೋ ಗೋತ್ತಿಲ್ಲ. ಆದರೆ ನಿಮ್ಮ ಆರೋಗ್ಯದ ಬಗ್ಗೆ ಗಮನ ನೀಡಿ, ನನ್ನ ಬಗ್ಗೆ ಯಾವುದೇ ಕಾರಣಕ್ಕೂ ಯೋಚನೆ ಮಾಡಬೇಡಿ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:‌ ಶೀಘ್ರವೇ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿರುವ ಜರ್ಮನಿ

    https://twitter.com/Yashika1Keswani/status/1497555000314445828

    ಇತ್ತ ಉಕ್ರೇನ್‍ನ ರಸ್ತೆಗಳಲ್ಲಿ ಬಾಂಬ್ ದಾಳಿ, ಅಪಾರ್ಟ್‍ಮೆಂಟ್‍ಗಳ ಮೇಲೆ ರಷ್ಯಾ ಸೈನಿಕರು ಮಿಸೈಲ್ ದಾಳಿ ಮಾಡುತ್ತಿದ್ದಾರೆ. ಬಂಕರ್‍ಗಳ ಹೊರಗೆ ಬಾಂಬ್ ಸದ್ದು ಕೇಳಿಸುತ್ತಿದ್ದು, ಜನ ಜೀವ ಭಯದಲ್ಲಿದ್ದಾರೆ. ಉಕ್ರೇನ್‍ನ ಕಾರ್ಕೀವ್ ಹಾಗೂ ಕೀವ್‍ನಲ್ಲಿ ರಾತ್ರಿಯೂ ಗುಂಡಿನ ಮೊರೆತ ಕೇಳಿಸಿತ್ತು. ಕಗ್ಗತ್ತಲ ರಾತ್ರಿಯಲ್ಲಿ ಆಗಸದಲ್ಲಿ ಬಾಂಬ್, ಮಿಸೈಲ್‍ಗಳ ಆರ್ಭಟ ಇತ್ತು. ಉಕ್ರೇನ್ ರಕ್ಷಣೆ ಮಾಡಲು ಸಾವಿರಾರು ಯೋಧರು ರಷ್ಯಾ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇದನ್ನೂ ಓದಿ:‌ ಅಪ್ಪ-ಅಮ್ಮ ಬಳಿ ಸುಳ್ಳು ಹೇಳಿದ್ದೆವು- ಉಕ್ರೇನ್ ಅನುಭವ ಹಂಚಿಕೊಂಡ ವಿದ್ಯಾರ್ಥಿನಿ

  • ರಷ್ಯಾ ಉಕ್ರೇನ್ ಬಿಕ್ಕಟ್ಟು ಚಿತ್ರೀಕರಣಕ್ಕೆ ಮುಂದಾದ ಹಾಲಿವುಡ್ ಸ್ಟಾರ್

    ರಷ್ಯಾ ಉಕ್ರೇನ್ ಬಿಕ್ಕಟ್ಟು ಚಿತ್ರೀಕರಣಕ್ಕೆ ಮುಂದಾದ ಹಾಲಿವುಡ್ ಸ್ಟಾರ್

    ಕೀವ್: ಯುದ್ಧ ವಿರೋಧಿ ಮತ್ತು ಮಾನವೀಯ ಕಾರಣಗಳಿಗಾಗಿ ಸದಾ ಮಿಡಿಯುವ ಹಾಲಿವುಡ್ ತಾರೆ, ಆಸ್ಕರ್ ಪ್ರಶಸ್ತಿ ವಿಜೇತ ಸೀನ್ ಪೆನ್ ಉಕ್ರೇನ್‍ನಲ್ಲಿ ನಡೆಯುತ್ತಿರುವ ರಷ್ಯಾದ ಆಕ್ರಮಣದ ಕುರಿತು ಸಾಕ್ಷ್ಯ ಚಿತ್ರ ಮಾಡಲು ಮುಂದಾಗಿದ್ದಾರೆ.

    ಉಕ್ರೇನ್‍ನ ಸರ್ಕಾರಿ ಅಧಿಕಾರಿಗಳು ತಮ್ಮ ನೆಲದಲ್ಲಿ ನಡೆಯುತ್ತಿರುವ ಪ್ರಸ್ತುತ ಬಿಕ್ಕಟ್ಟಿನ ಕುರಿತು ಮಾತನಾಡುತ್ತಿದ್ದ ಪತ್ರಿಕಾಗೋಷ್ಠಿಯಲ್ಲೀ ಸೀನ್ ಭಾಗಿಯಾಗಿದ್ದರು. ಸಾಕ್ಷ್ಯ ಚಿತ್ರಕ್ಕೆ ಬೇಕಾದ ವಿವರಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಆಲಿಸುತ್ತಿದ್ದರು. ಈ ಸಾಕ್ಷ್ಯ ಚಿತ್ರವು ಡಾಕ್ ವೈಸ್ ವಲ್ರ್ಡ್ ನ್ಯೂಸ್ ಮತ್ತು ಎಂಡೀವರ್ ಕಂಟೆಂಟ್‍ನ ಸಹಯೋಗದೊಂದಿಗೆ ವೈಸ್ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಲಿದೆ. ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    ಈ ಮೊದಲೇ ಸೀನ್ ಸಾಕ್ಷ್ಯ ಚಿತ್ರಕ್ಕಾಗಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದಾರೆ. ಕೊನೆಯದಾಗಿ ನವೆಂಬರ್ 2021ರಲ್ಲಿ ಉಕ್ರೇನ್‍ಗೆ ಭೇಟಿ ನೀಡಿದ್ದ ಅವರು, ಈ ವೇಳೆ ಉಕ್ರೇನ್ ದೇಶದ ಮಿಲಿಟರಿ ಪ್ರತಿಷ್ಟಾನಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು ಎಂದು ವರದಿಯಾಗಿದೆ. ಅಲ್ಲದೇ, ಪೆನ್ ಅವರು ಉಕ್ರೇನಿಯನ್ ರಾಯಭಾರ ಕಚೇರಿಗೆ ಭೇಟಿ ನೀಡಿದ್ದರು. ಉಕ್ರೇನಿಯನ್ ಉಪ ಪ್ರಧಾನಿ ಐರಿನಾ ವೆರೆಶ್‍ಚುಕ್ ಜೊತೆಗೆ ಸ್ಥಳೀಯ ಪತ್ರಕರ್ತರು ಮತ್ತು ಉಕ್ರೇನಿಯನ್ ಮಿಲಿಟರಿಯ ಸದಸ್ಯರೊಂದಿಗೆ ಅವರು ಮಾತನಾಡಿ ಸಾಕಷ್ಟು ವಿಷಯ ಸಂಗ್ರಹಿಸಿದ್ದಾರೆ ಎನ್ನಲಾಗುತ್ತಿದೆ.  ಇದನ್ನೂ ಓದಿ:  ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!

    ಉಕ್ರೇನಿಯನ್ ರಾಯಭಾರ ಕಚೇರಿಯು ಈ ಚಲನಚಿತ್ರ ನಿರ್ಮಾಪಕರನ್ನು ಶ್ಲಾಘಿಸಿ ಹೇಳಿಕೆ ನೀಡಿದ್ದು, ಉಕ್ರೇನ್‍ನಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಘಟನೆಗಳನ್ನು ರೆಕಾರ್ಡ್ ಮಾಡಲು ಮತ್ತು ನಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದ ಬಗ್ಗೆ ಜಗತ್ತಿಗೆ ಸತ್ಯವನ್ನು ತಿಳಿಸಲು ವಿಶೇಷವಾಗಿ ಪೆನ್ ಅವರು ಕೈವ್‍ಗೆ ಬಂದಿದ್ದಾರೆ ಎಂದು ತಿಳಿಸಿತು. ‘ಉಕ್ರೇನ್‍ಗೆ ಬೆಂಬಲ ನೀಡುವವರಲ್ಲಿ ಸೀನ್ ಪೆನ್ ಕೂಡಾ ಒಬ್ಬರಾಗಿದ್ದಾರೆ. ಅವರ ಧೈರ್ಯ ಮತ್ತು ಪ್ರಾಮಾಣಿಕತೆಗೆ ನಮ್ಮ ದೇಶವು ಅವರಿಗೆ ಸದಾ ಕೃತಜ್ಞರಾಗಿರಬೇಕು’ ಎಂದು ಶ್ಲಾಘಿಸಿದೆ.

  • ಲ್ಯಾಂಡಿಂಗ್ ವೇಳೆ ವಿಮಾನ ಪತನ – 22 ಮಂದಿ ವಿದ್ಯಾರ್ಥಿಗಳು ಸಜೀವ ದಹನ

    ಲ್ಯಾಂಡಿಂಗ್ ವೇಳೆ ವಿಮಾನ ಪತನ – 22 ಮಂದಿ ವಿದ್ಯಾರ್ಥಿಗಳು ಸಜೀವ ದಹನ

    – ಬೆಂಕಿಗೆ ಸುಟ್ಟು ಕರಕಲಾದ ವಿಮಾನ

    ಕೈವ್: ದೇಶದ ಪೂರ್ವದ ಖಾರ್ಕಿವ್ ಬಳಿ ಉಕ್ರೇನಿಯನ್ ವಾಯುಪಡೆಯ ವಿಮಾನವು ಪತನವಾಗಿ ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

    ಇದು ಒಂದು ಆಘಾತ. ವಿಮಾನ ಪತನದಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆ ದಾಖಲಿಸಲಾಗಿದೆ. ಉಳಿದವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ಉಪ ಆಂತರಿಕ ಸಚಿವ ತಿಳಿಸಿದರು.

    ಪತನವಾದ ಸಾರಿಗೆ ವಿಮಾನದಲ್ಲಿ ಒಟ್ಟು 28 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದರಲ್ಲಿ 21 ಮಿಲಿಟರಿ ವಿದ್ಯಾರ್ಥಿಗಳು ಮತ್ತು ಏಳು ಸಿಬ್ಬಂದಿ ಇದ್ದರು. ಖಾರ್ಕಿವ್ ರಾಷ್ಟ್ರೀಯ ವಾಯುಪಡೆಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವಾಯುಪಡೆ ತಿಳಿಸಿದೆ.

    ಉಕ್ರೇನ್ ರಾಜಧಾನಿ ಕೈವ್‍ನಿಂದ ಸುಮಾರು 400 ಕಿ.ಮೀ. ದೂರವಿರುವ ಚುಹುಯಿವ್ ವಿಮಾಣ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಈ ಅವಘಡ ಸಂಭವಿಸಿದೆ. ಆಂಟೊನೊವ್ -26 ಸಾರಿಗೆ ವಿಮಾನವು ಲ್ಯಾಂಡಿಂಗ್ ಆಗುವಾಗ ಪತನವಾಗಿದೆ. ಪರಿಣಾಮ ವಿಮಾನ ಸ್ಫೋಟಿಸಿ ಬೆಂಕಿ ಹೊತ್ತಿಕೊಂಡಿದೆ. ಪತನದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, 22 ಮಂದಿ ಸಜೀವ ದಹನರಾಗಿದ್ದಾರೆ ಎಂದು ತುರ್ತು ಸೇವೆಗಳು ತಿಳಿಸಿದೆ.

    ಮಾಹಿತಿ ತಿಳಿದು ಸ್ಥಳಕ್ಕೆ ರಕ್ಷಣಾ ಪಡೆ, ಅಗ್ನಿಶಾಮಕ ದಳ ದೌಡಾಯಿಸಿದ್ದು, ಒಂದು ಗಂಟೆಯ ನಂತರ ಬೆಂಕಿಯನ್ನು ನಂದಿಸಲಾಗಿದೆ. ವಿಮಾನ ದುರಂತಕ್ಕೆ ಕಾರಣಗಳನ್ನು ತನಿಖೆ ಮಾಡಲು ತುರ್ತಾಗಿ ಆಯೋಗವನ್ನು ರಚಿಸಲಾಗಿದೆ. ಆದರೆ ಇದುವರೆಗೂ ವಿಮಾನ ಪತನಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ.