Tag: Lady Constable

  • 2 ಕೋಟಿ ಮೌಲ್ಯದ ಹೆರಾಯಿನ್‌ ಜೊತೆ ಪಂಜಾಬ್‌ ಲೇಡಿ ಕಾನ್‌ಸ್ಟೇಬಲ್‌ ಬಂಧನ

    2 ಕೋಟಿ ಮೌಲ್ಯದ ಹೆರಾಯಿನ್‌ ಜೊತೆ ಪಂಜಾಬ್‌ ಲೇಡಿ ಕಾನ್‌ಸ್ಟೇಬಲ್‌ ಬಂಧನ

    ಚಂಡೀಗಢ: 2 ಕೋಟಿ ಮೌಲ್ಯದ ಹೆರಾಯಿನ್‌ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್‌ ಅರೆಸ್ಟ್‌ ಆಗಿದ್ದಾರೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

    17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಬೆನ್ನಲ್ಲೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಆಕೆಯ ಚರ ಮತ್ತು ಸ್ಥಿರ ಆಸ್ತಿಗಳ ತನಿಖೆ ನಡೆಯುತ್ತಿದೆ.

    ಆರೋಪಿಯು ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಆಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿ ಪ್ರಧಾನ ಕಚೇರಿಯ ಸುಖ್‌ಚೈನ್ ಸಿಂಗ್ ಗಿಲ್ ತಿಳಿಸಿದ್ದಾರೆ.

    ಈ ಹಿಂದೆ ಪೊಲೀಸರು ಕಾನ್‌ಸ್ಟೇಬಲ್ ಮೇಲೆ ಡೋಪ್ ಪರೀಕ್ಷೆ ನಡೆಸಿದ್ದರು. ಆದರೆ ಅದು ನೆಗೆಟಿವ್ ಬಂದಿತ್ತು. ನಗರ ಡಿಎಸ್‌ಪಿ ಹರ್ಬನ್ಸ್ ಸಿಂಗ್ ಧಲಿವಾಲ್, ಗೌಪ್ಯ ಮಾಹಿತಿಯ ಆಧಾರದ ಮೇಲೆ, ಪೊಲೀಸ್ ತಂಡವು ಲಾಡ್ಲಿ ಧಿ ಚೌಕ್ ಬಳಿಯ ಮೇಲ್ಸೇತುವೆಯ ಕೆಳಗೆ ಚೆಕ್‌ಪಾಯಿಂಟ್ ಅನ್ನು ಸ್ಥಾಪಿಸಿತು. ಈ ವೇಳೆ, ಅಮನ್‌ದೀಪ್ ಕಾರನ್ನು ನಿಲ್ಲಿಸಿ ತಪಾಸಣೆಗೆ ಒಳಪಡಿಸಲಾಯಿತು. ಅದರಲ್ಲಿ 17.71 ಮಿ.ಗ್ರಾಂ ಹೆರಾಯಿನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

  • ಸಿಲಿಕಾನ್ ಸಿಟಿಯಲ್ಲಿ ಮಹಿಳಾ ಹೆಡ್ ಕಾನ್ಸ್​ಟೇಬಲ್​ಗೆ ರೌಡಿಶೀಟರ್‌ನಿಂದ ಚಾಕು ಇರಿತ

    ಸಿಲಿಕಾನ್ ಸಿಟಿಯಲ್ಲಿ ಮಹಿಳಾ ಹೆಡ್ ಕಾನ್ಸ್​ಟೇಬಲ್​ಗೆ ರೌಡಿಶೀಟರ್‌ನಿಂದ ಚಾಕು ಇರಿತ

    ಬೆಂಗಳೂರು: ಮಹಿಳಾ ಕಾನ್ಸ್​ಟೇಬಲ್​ಗೆ ರೌಡಿಶೀಟರ್ ಓರ್ವ ಚಾಕು ಇರಿದಿರುವ ಘಟನೆ ನಗರ ಹೆಎಎಲ್ ಠಾಣಾ ವ್ಯಾಪ್ತಿಯ ಜ್ಯೋತಿ ನಗರದಲ್ಲಿ ಘಟನೆ ನಡೆದಿದೆ.

    ವಿನುತಾ ಚಾಕು ಇರಿತಕ್ಕೊಳಗಾದ ಹೆಡ್ ಕಾನ್ಸ್​ಟೇಬಲ್​ ಎಂದು ಗುರುತಿಸಲಾಗಿದ್ದು, ರೌಡಿಶೀಟರ್ ಶೇಖ್ ಷರೀಫ್ ಈ ಕೃತ್ಯವನ್ನು ಎಸಗಿದ್ದಾನೆ. ಆಗಸ್ಟ್ 5 ರಂದು ಆರೋಪಿಯನ್ನು ಬಂಧಿಸಲು ವಿನುತಾ ಹೋಗಿದ್ದರು. ಈ ವೇಳೆ ಕಾನ್ಸ್​ಟೇಬಲ್‍ಗೆ ಆರೋಪಿ ಚಾಕು ಇರಿದಿದ್ದಾನೆ.

    ಇತ್ತೀಚೆಗಷ್ಟೇ ಜಾಮೀನಿನ ಆಧಾರದ ಮೇಲೆ ಬಿಡುಗಡೆಯಾಗಿದ್ದ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಅಲ್ಲದೇ ಮತ್ತೆ ಕೊಲೆ ಮಾಡಲು ಸಂಚು ರೂಪಿಸಿದ್ದಾನೆ ಎಂಬ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ಆತನನ್ನು ಠಾಣೆಗೆ ಕರೆತರಲು ಆಗಸ್ಟ್ 5 ರಂದು ಮಹಿಳಾ ಹೆಡ್‍ ಕಾನ್ಸ್​ಟೇಬಲ್​ ವಿನುತಾ ಹಾಗೂ ತಂಡ ಹೋಗಿತ್ತು. ಇದನ್ನೂ ಓದಿ: ಶ್ರೀಲಂಕಾ ತಲುಪಿರುವ ಹಡಗು ಯಾವುದೇ ದೇಶಗಳಿಗೂ ತೊಂದರೆ ಕೊಡಲ್ಲ: ಚೀನಾ

    ಆರೋಪಿ ಜ್ಯೋತಿನಗರದಿಂದ ರೆಡ್ಡಿ ಪಾಳ್ಯಕ್ಕೆ ತೆರಳುತ್ತಿರುವ ಬಗ್ಗೆ ಮಾಹಿತಿ ದೊರೆತ ಪೊಲೀಸರು, ಮಾಹಿತಿ ಆಧಾರದ ಮೇಲೆ ರಾತ್ರಿ 9.30ಕ್ಕೆ ಆತನನ್ನು ಕರೆದುಕೊಂಡು ಹೋಗಲು ತಂಡ ಮುಂದಾಗಿದೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದನು. ಆದರೆ ಸ್ಥಳೀಯರ ಸಹಾಯದಿಂದ ಆತನ್ನನ್ನು ಹಿಡಿದು ಠಾಣೆಗೆ ಕರೆತರಲಾಯಿತು. ಘಟನೆ ನಂತರ ಚಿಕಿತ್ಸೆ ಪಡೆದು ಇದೀಗ ಚೇರಿಸಿಕೊಂಡಿರುವ ಕಾನ್ಸ್​ಟೇಬಲ್​, ಆರೋಪಿ ವಿರುದ್ಧ ಐಪಿಸಿ 307, 353, 354 ಅಡಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಕೈ ನಾಯಕರಿಗೆ ನಾರ್ಥ್ ಸೌತ್ ತಂತ್ರ ಕಿರಿಕಿರಿ- ರಾಹುಲ್ ಗಾಂಧಿ ತಂತ್ರಗಾರಿಕೆಗೆ ತೀವ್ರ ಅತೃಪ್ತಿ

    Live Tv
    [brid partner=56869869 player=32851 video=960834 autoplay=true]

  • ಕೈಯಲ್ಲಿ ಮುಟ್ಟಲ್ಲ, ನೀವೇ ಜೇಬಿಗಿಡಿ – ಲಂಚ ಪಡೆದ ಲೇಡಿ ಕಾನ್ಸ್ ಟೇಬಲ್ ಸಸ್ಪೆಂಡ್

    ಕೈಯಲ್ಲಿ ಮುಟ್ಟಲ್ಲ, ನೀವೇ ಜೇಬಿಗಿಡಿ – ಲಂಚ ಪಡೆದ ಲೇಡಿ ಕಾನ್ಸ್ ಟೇಬಲ್ ಸಸ್ಪೆಂಡ್

    – ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

    ಮುಂಬೈ: ದ್ವಿಚಕ್ರ ವಾಹನ ಸವಾರರಿಂದ ಲಂಚ ಪಡೆದಿದ್ದ ಮಹಿಳಾ ಪೊಲೀಸ್ ಪೇದೆಯನ್ನ ಅಮಾನುತು ಮಾಡಿ ಪಿಂಪರಿ ಚಿಂಚವಾಡಾದ ಟಾಫಿಕ್ ವಿಭಾಗದ ಎಸಿಪಿ ಶ್ರೀಕಾಂತ್ ದಿಸ್ಲೇ ಆದೇಶಿಸಿದ್ದಾರೆ.

    ಪಿಂಪರಿ ನಗರದ ಶಗುಣ್ ಚೌಕ್ ಬಳಿ ಮಹಿಳಾ ಪೇದೆ ಸ್ವಾತಿ ಸೋನರ್ ಡ್ಯೂಟಿಗೆ ಹಾಕಲಾಗಿತ್ತು. ಕೊರೊನಾ ಭಯದಿಂದ ನೋಟುಗಳನ್ನ ಕೈಯಲ್ಲಿ ಮುಟ್ಟದ ಸ್ವಾತಿ ಸೋನರ್, ಯುವತಿಗೆ ಜೇಬಿಗೆ ಇಡುವಂತೆ ಹೇಳಿದ್ದಾರೆ. ಈ ಎಲ್ಲ ದೃಶ್ಯಗಳು ಸಾರ್ವಜನಿಕರ ಮೊಬೈಲನಲ್ಲಿ ಸರೆಯಾಗಿದ್ದವು. ವೀಡಿಯೋ ವೈರಲ್ ಬಳಿಕ ಎಚ್ಚೆತ್ತ ಅಧಿಕಾರಿಗಳು ಲಂಚ ಪಡೆದ ಪೇದೆಯನ್ನ ಅಮಾನತುಗೊಳಿಸಿದ್ದಾರೆ.

    ಹೆಲ್ಮೆಟ್ ಧರಿಸದೇ ಸ್ಕೂಟಿಯಲ್ಲಿ ಬಂದ ತಾಯಿ-ಮಗಳನ್ನ ಸ್ವಾತಿ ತಡೆದಿದ್ದಾರೆ. ಇಬ್ಬರ ಮಧ್ಯೆ ಕೆಲ ಸಮಯ ಮಾತುಕತೆ ನಡೆದಿದೆ. ಕೊನೆಗೆ ಯುವತಿ ಸ್ವಾತಿ ಪ್ಯಾಂಟ್ ಜೇಬಿಗೆ ಹಣ ಇಟ್ಟಿದ್ದಾರೆ. ವೀಡಿಯೋ ಆಧರಿಸಿ ಸ್ವಾತಿಯನ್ನ ಅಮಾನತು ಮಾಡಲಾಗಿದ್ದು, ಘಟನೆ ಸಂಬಂಧ ತನಿಖೆ ನಡೆಸಲು ತಂಡ ರಚಿಸಲಾಗಿದೆ ಎಂದು ಎಸಿಪಿ ಶ್ರೀಕಾಂತ್ ದಿಸ್ಲೇ ಹೇಳಿದ್ದಾರೆ.

  • ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ

    ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ

    ಹೈದರಾಬಾದ್: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬುಧವಾರ ಆಂಧ್ರಪ್ರದೇಶದ ವಿಶಾಖಪಟ್ಟಣದ ಆನಂದಪುರಂನಲ್ಲಿ ನಡೆದಿದೆ.

    ಕರನಂ ಕುಮಾರಿ(22) ಆತ್ಮಹತ್ಯೆ ಮಾಡಿಕೊಂಡ ಪೇದೆ. ಪತಿಯೊಂದಿಗಿನ ಗಲಾಟೆಯಿಂದ ರೋಸಿ ಹೋಗಿದ್ದ ಕರನಂ ಕುಮಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕರನಂ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಆಕೆಯ ಪತಿ ಮಲಾ ರಾಜೇಂದ್ರ(27) ಚಂಡೀಗಢದಲ್ಲಿ ಕೆಲಸ ಮಾಡುತ್ತಿದ್ದ.

    ರಾಜೇಂದ್ರ ಹಾಗೂ ಕುಮಾರಿ ಇಬ್ಬರು ವಿಶಾಖಪಟ್ಟನಂನಲ್ಲಿರುವ ಪಂದಲಾಪಾಕದ ಇಂಡೋ-ಟಿಬೇಟಿಯನ್ ಬಾರ್ಡರ್ ಬೆಟಾಲಿಯನ್ ನಲ್ಲಿ ಭೇಟಿ ಆಗಿದ್ದರು. ಭೇಟಿಯಾದ ಬಳಿಕ ಇಬ್ಬರು ಒಳ್ಳೆಯ ಸ್ನೇಹಿತರು ಆಗಿದ್ದರು. ಇವರ ಸ್ನೇಹ ಪ್ರೀತಿಗೆ ತಿರುಗಿ ಇಬ್ಬರು ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇವರ ಮದುವೆಯನ್ನು ಪೋಷಕರು ಒಪ್ಪಿರಲಿಲ್ಲ. ಜಾತಿ ಬೇರೆ ಕಾರಣಕ್ಕೆ ಇಬ್ಬರ ಕುಟುಂಬದವರು ಈ ಮದುವೆಯನ್ನು ನಿರಾಕರಿಸಿದ್ದರು.

    ಕುಮಾರಿ ತನ್ನ ಜೀವಕ್ಕೆ ಹೆದರಿ ಮದುವೆ ಮಾಡಿಕೊಳ್ಳೋಣ ಎಂದು ರಾಜೇಂದ್ರನಿಗೆ ಒತ್ತಾಯಿಸುತ್ತಿದ್ದಳು. ಬಳಿಕ ಇಬ್ಬರು ನಾಲ್ಕು ತಿಂಗಳ ಹಿಂದೆ ಸಿಂಹಚಲಂ ದೇವಸ್ಥಾನದಲ್ಲಿ ಮದುವೆ ಆಗಿ ಆನಂದಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮದುವೆಯಾದ ಕೆಲವೇ ದಿನಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಬಂದು ಜಗಳ ಮಾಡಲು ಶುರು ಮಾಡಿದ್ದಾರೆ. ಅಲ್ಲದೇ ಕುಮಾರಿ ಆತ್ಮಹತ್ಯೆಗೂ ಕೂಡ ಯತ್ನಿಸಿದ್ದಳು ಎಂದು ಬೀಮಿಲಿ ಸರ್ಕಲ್ ಇನ್ಸ್ ಪೆಕ್ಟರ್ ಸೂರ್ಯನಾರಾಯಣ ಹೇಳಿದ್ದಾರೆ.

    ಕುಮಾರಿ ಮೊದಲ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಗ ಆಕೆಯ ಪತಿ ಹಾಗೂ ಆಕೆಯ ನಡುವೆ ಯಾವುದೇ ಮಾತುಕತೆ ಇರಲಿಲ್ಲ. ಅಲ್ಲದೇ ಪತಿ ರಾಜೇಂದ್ರ ತನ್ನ ಜೊತೆ ಚೆನ್ನಾಗಿ ನಡೆದುಕೊಳ್ಳುತ್ತಿಲ್ಲ ಎಂದು ಹೇಳಿ ಕುಮಾರಿ ಚಂಡೀಗಢದಲ್ಲಿದ್ದ ತನ್ನ ಪತಿಗೆ ಕರೆ ಮಾಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾಳೆ. ಆದರೆ ರಾಜೇಂದ್ರ ತನ್ನ ಪತ್ನಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ವರದಿಯಾಗಿದೆ.

    ಪತಿಯನ್ನು ಕರೆ ಮಾಡಿದ ಬಳಿಕ ಕುಮಾರಿ ತನ್ನ ಕುಟುಂಬದವರಿಗೆ ಕರೆ ಮಾಡಿ, “ನಾನು ಮೋಸ ಹೋಗಿದ್ದೇನೆ. ನಾನು ಖಿನ್ನತೆಗೆ ಒಳಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾಳೆ. ಆಕೆಯ ಪೋಷಕರು ಪ್ರತಿಕ್ರಿಯಿಸುವ ಮೊದಲೇ ಕುಮಾರಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಕಾಲ್ ರೆಕಾರ್ಡ್ ಪರಿಶೀಲಿಸಿ ಚಂಡೀಗಢ ಪೊಲೀಸರಿಗೆ ಮಾಹಿತಿ ನೀಡಿದ್ದು ರಾಜೇಂದ್ರನನ್ನು ಬಂಧಿಸಿದ್ದಾರೆ.

    ಕುಮಾರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬೀಮಿಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv