Tag: lahari music

  • ಸುದೀಪ್ ಅಳಿಯನ ‘ಜಿಮ್ಮಿ’ ಚಿತ್ರದ ಕ್ಯಾರೆಕ್ಟರ್ ಗ್ಲಿಂಪ್ಸ್ ಮೇಕಿಂಗ್ ವಿಡಿಯೋ ರಿಲೀಸ್

    ಸುದೀಪ್ ಅಳಿಯನ ‘ಜಿಮ್ಮಿ’ ಚಿತ್ರದ ಕ್ಯಾರೆಕ್ಟರ್ ಗ್ಲಿಂಪ್ಸ್ ಮೇಕಿಂಗ್ ವಿಡಿಯೋ ರಿಲೀಸ್

    ಕಿಚ್ಚ ಸುದೀಪ್ (Sudeep) ಅವರ ಸಹೋದರಿಯ ಮಗ ಸಂಚಿತ್ ನಟಿಸಿ, ನಿರ್ದೇಶನ ಮಾಡುತ್ತಿರುವ ಜಿಮ್ಮಿ (Jimmy) ಸಿನಿಮಾದ ಕ್ಯಾರೆಕ್ಟರ್ (Character Glimpses) ಗ್ಲಿಂಪ್ಸ್ ಮೇಕಿಂಗ್ ವಿಡಿಯೋ ಇಂದು ರಿಲೀಸ್ ಆಗಿದೆ. ವಿಡಿಯೋ ತುಣುಕೊಂದನ್ನು ಲಹರಿ ಮ್ಯೂಸಿಕ್ (Lahari Music) ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಸಂಚಿತ್ ಚೆನ್ನಾಗಿ ಕಾಣಿಸಿಕೊಂಡಿದ್ದಾರೆ. ಪಕ್ಕಾ ತಯಾರಿ ಮಾಡಿಕೊಂಡೇ ಈ ಸಿನಿಮಾ ಮಾಡುತ್ತಿರುವುದು ಆ ವಿಡಿಯೋದಿಂದ ಗೊತ್ತಾಗುತ್ತದೆ.

    ಶೂಟಿಂಗ್ ಸಮಯದಲ್ಲಿ ತಾತ, ಅಜ್ಜಿ, ತಾಯಿ ಮತ್ತು ಸುದೀಪ್ ಮಗಳು ಕೂಡ ಹಾಜರಿದ್ದು, ಸಂಚಿತ್ ಗೆ ಪ್ರೋತ್ಸಾಹಿಸುತ್ತಿರುವ ವಿವರಗಳು ಕೂಡ ವಿಡಿಯೋದಲ್ಲಿ ಲಭ್ಯವಿದೆ. ಸಾಹಸ ಸನ್ನಿವೇಶವೊಂದನ್ನು ಚಿತ್ರೀಕರಿಸುವ ದೃಶ್ಯ ಕೂಡ ವಿಡಿಯೋದಲ್ಲಿದೆ. ಸಖತ್ತಾಗಿರುವ ಲೈಟಿಂಗ್ ಮತ್ತು ಡೈರೆಕ್ಷನ್ ಅನ್ನು ಅದು ಒಳಗೊಂಡಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಸಕಲ ತಯಾರಿಯೊಂದಿಗೆ ಸಂಚಿತ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ವಿಶೇಷ ಅಂದ್ರೆ ತಾವು ನಟಿಸುವ ಚೊಚ್ಚಲ ಚಿತ್ರವನ್ನು ತಾವೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಜೊತೆ ಕೆ.ಪಿ ಶ್ರೀಕಾಂತ್, ಮನೋಹರ್ ನಾಯ್ಡು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

    ತಮ್ಮ ಮೊದಲ ಸಿನಿಮಾದಲ್ಲೇ ನಟನೆಯ ಜೊತೆ ನಿರ್ದೇಶನ (Direction) ಕೂಡ ಸಂಚಿತ್ ಮಾಡ್ತಿದ್ದಾರೆ. ಮೂಲಕ ಚಿತ್ರರಂಗಕ್ಕೆ ಯುವನಟ ಸಂಚಿತ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಇದೊಂದು ಕ್ರೈಂ ಡ್ರಾಮಾ ಆಧರಿಸಿದ ಸಿನಿಮಾವಾಗಿದ್ದು, ತಂದೆಮಗನ ಬಾಂಧವ್ಯವನ್ನು ಸಾರುವ ಕಥೆಯನ್ನು ಚಿತ್ರದ ಮೂಲಕ ತೋರಿಸಲಿದ್ದಾರೆ.

     

    ಲಹರಿ ಸಂಸ್ಥೆಯ (Lahari Films) ಮನೋಹರ್ ನಾಯ್ಡು, ವೀನಸ್ ಮೂವಿಸ್ ಕೆ. ಪಿ ಶ್ರೀಕಾಂತ್ ಈಗಾಗಲೇ 2 ಸಿನಿಮಾ ನಿರ್ಮಿಸ್ತಿದ್ದಾರೆ. ಉಪೇಂದ್ರ ನಟನೆಯಯುಐಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಸೆಟ್ಟೇರಿ ನಿಂತೇ ಹೋಗಿದ್ದ ವಿನಯ್ ರಾಜ್ಕುಮಾರ್ ನಟನೆಯಗ್ರಾಮಾಯಣಮರುಜೀವ ಕೊಟ್ಟಿದ್ದಾರೆ. ನಂತರ ಸಂಚಿತ್ ನಟನೆಯ ಚಿತ್ರಕ್ಕೆ ಜೋಡಿ ಬಂಡವಾಳ ಹೂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Special- ‘ಆಸ್ಕರ್’ ಬೆನ್ನಲ್ಲೇ ಮತ್ತೆ 50 ಲಕ್ಷ ಜನ ‘ನಾಟು ನಾಟು’ ವೀಡಿಯೋ ನೋಡಿದ್ರು

    Special- ‘ಆಸ್ಕರ್’ ಬೆನ್ನಲ್ಲೇ ಮತ್ತೆ 50 ಲಕ್ಷ ಜನ ‘ನಾಟು ನಾಟು’ ವೀಡಿಯೋ ನೋಡಿದ್ರು

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ‘ಆರ್.ಆರ್.ಆರ್’ (R.R.R) ಸಿನಿಮಾದ ‘ನಾಟು ನಾಟು’ (Natu Natu) ಹಾಡಿಗೆ ಆಸ್ಕರ್ (Oscar) ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಈ ಹಾಡನ್ನು ನೋಡಿದವರ ಸಂಖ್ಯೆ 50 ಲಕ್ಷ ದಾಟಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಿಗರು ಕೂಡ ಈ ಹಾಡನ್ನು ಹುಡುಕಿ ವೀಕ್ಷಿಸಿದ್ದಾರೆ. ಕಳೆದ ನಲವತ್ತೆಂಟು ಗಂಟೆಯಲ್ಲಿ 55 ಲಕ್ಷಕ್ಕೂ ಹೆಚ್ಚು ಜನರು ಈ ಹಾಡನ್ನು ವೀಕ್ಷಿಸಿದ್ದರೆ, 24 ಗಂಟೆಯಲ್ಲಿ 35 ಲಕ್ಷಕ್ಕೂ ಹೆಚ್ಚು ಜನರು ಈ ಹಾಡನ್ನು ಕಣ್ತುಂಬಿಕೊಂಡಿದ್ದಾರೆ.

    ನಿನ್ನೆ ಬೆಳಗ್ಗೆ (ಮಾರ್ಚ್ 13) ಲಹರಿ ಚಾನೆಲ್ (Lahari Music) ನಲ್ಲಿ 125 ಮಿಲಿಯನ್ ವೀಕ್ಷಣೆ ಇತ್ತು. ಈಗಿನವರೆಗೆ 128 ಮಿಲಿಯನ್ ಆಗಿದೆ. ಈ ಕುರಿತು ಮಾಹಿತಿಯನ್ನು ಹಂಚಿಕೊಂಡ ಲಹರಿ ಸಂಸ್ಥೆಯ ವೇಲು, ‘ನಾಟು ನಾಟು ಹಾಡು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿದೆ. ಟಿ ಸೀರಿಸ್ ಮತ್ತು ಲಹರಿ ಮ್ಯೂಸಿಕ್ ಎರಡರಲ್ಲೂ ಹಾಡನ್ನು ವೀಕ್ಷಿಸಬಹುದಾಗಿದೆ. ಅತೀ ಹೆಚ್ಚು ತೆಲುಗಿನಲ್ಲೇ ಈ ಹಾಡನ್ನು ನೋಡಿದ್ದಾರೆ. ಗ್ಲೋಡನ್ ಗ್ಲೋಬ್ ಪ್ರಶಸ್ತಿ ಬಂದಾಗಲೂ ಹೆಚ್ಚಿನ ಸಂಖ್ಯೆಯಲ್ಲಿ ಈ ಹಾಡನ್ನು ವೀಕ್ಷಿಸಿದ್ದರು. ಆಸ್ಕರ್ ಬಂದ ನಂತರವೂ ನೋಡಿದ್ದಾರೆ’ ಎನ್ನುತ್ತಾರೆ. ಇದನ್ನೂ ಓದಿ: ಪುನೀತ್ ಜನ್ಮ ದಿನದಂದು ಓಟಿಟಿಯಲ್ಲಿ ‘ಗಂಧದ ಗುಡಿ’

    ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಅದು ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ಗೀತೆ ಇದಾಗಿದ್ದು,  ಎಂ.ಎಂ.ಕೀರವಾಣಿ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರೆ, ಈ ಹಾಡಿನ ಮ್ಯೂಸಿಕ್ ಹಕ್ಕನ್ನು ಕನ್ನಡದ ಹೆಮ್ಮೆಯ ಲಹರಿ ಸಂಸ್ಥೆ ಪಡೆದುಕೊಂಡಿದೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಮೂಲ ಚಿತ್ರಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ಕಲಾಭೈರವ ಹಾಗೂ ಸಿಪ್ಲಿಗಂಜ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಮೂಡಿ ಬಂದಿದೆ. ಇಂತಹ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

  • Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    ನಾಟು ನಾಟು (Natu Natu) ಹಾಡು ಆಸ್ಕರ್ (Oscar) ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಅದು ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ಗೀತೆ ಇದಾಗಿದ್ದು,  ಎಂ.ಎಂ.ಕೀರವಾಣಿ (MM Keeravani) ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರೆ, ಈ ಹಾಡಿನ ಮ್ಯೂಸಿಕ್ ಹಕ್ಕನ್ನು ಕನ್ನಡದ ಹೆಮ್ಮೆಯ ಲಹರಿ (Lahari Music) ಸಂಸ್ಥೆ ಪಡೆದುಕೊಂಡಿದೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಮೂಲ ಚಿತ್ರಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ಕಲಾಭೈರವ ಹಾಗೂ ಸಿಪ್ಲಿಗಂಜ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಮೂಡಿ ಬಂದಿದೆ. ಇಂತಹ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ (Sipliganja) ಹಾಗೂ ಕಾಲಭೈರವ (Kalabhairava) ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

    ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • ಉಪೇಂದ್ರ ನಿರ್ದೇಶನದ ಹೊಸ ಚಿತ್ರಕ್ಕೆ ಜೂ.3 ರಂದು ಮುಹೂರ್ತ

    ಉಪೇಂದ್ರ ನಿರ್ದೇಶನದ ಹೊಸ ಚಿತ್ರಕ್ಕೆ ಜೂ.3 ರಂದು ಮುಹೂರ್ತ

    ಪ್ಪಿ 2 ಸಿನಿಮಾದ ನಂತರ ನಟ, ನಿರ್ದೇಶಕ ಉಪೇಂದ್ರ ಕೈಗೆತ್ತಿಕೊಂಡಿರುವ ಹೊಸ ಸಿನಿಮಾದ ಅಪ್ ಡೇಟ್ ಸಿಕ್ಕಿದೆ. ಈಗಾಗಲೇ ಹೊಸ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ರಿಲೀಸ್ ಮಾಡಿ, ಜನರ ತಲೆಗೆ ಹುಳು ಬಿಟ್ಟಿರುವ ಉಪೇಂದ್ರ ಅವರು ತಮ್ಮ ನಿರ್ದೇಶನದ ಹೊಸ ಸಿನಿಮಾದ ಮುಹೂರ್ತವನ್ನು ಜೂ.3ಕ್ಕೆ ಫಿಕ್ಸ್ ಮಾಡಿದ್ದಾರೆ. ಇದನ್ನೂ ಓದಿ : ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    ಈ ಹಿಂದೆ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿ, ಅದರಲ್ಲಿ ಟೈಟಲ್ ಕೂಡ ಅನಾವರಣಗೊಳಿಸಿದ್ದರು. ಅದರಲ್ಲಿ ಒಂದು ಟೈಟಲ್ ಕೂಡ ಬರೆದಿದ್ದರು. ಆದರೆ, ಆ ಟೈಟಲ್ ಏನು ಎನ್ನುವುದೇ ಒಂದು ನಿಗೂಢ ಚಿತ್ರಕಥೆಯಂತಿತ್ತು. ಈ ಹೊಸ ಸಿನಿಮಾದ ಟೈಟಲ್, ಕುದುರೆ ಲಾಳ ಎನ್ನಬೇಕೆ? ಮೂರು ನಾಮ ಎಂದು ತಿಳಿದುಕೊಳ್ಳಬೇಕೆ? ಅಥವಾ ಉಗುರಿನ ಮೇಲೆ ಮತದಾನದ ಇಂಕು ಹತ್ತಿರವ ಗುರುತು ಎಂದು ಕರೆಯಬೇಕೋ? ನಾವು ಏನು ಅಂದುಕೊಳ್ಳುತ್ತೆವೆಯೋ ಅದೇ ಸಿನಿಮಾದ ಟೈಟಲ್ ಎನ್ನುವಂತೆ ಶೀರ್ಷಿಕೆ ಇಟ್ಟಿದ್ದರು. ಇದನ್ನೂ ಓದಿ : ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ಈಗಾಗಲೇ ಈ ಹೊಸ ಸಿನಿಮಾಗಾಗಿ ಒಂದಿಷ್ಟು ಆಡಿಷನ್ ಕೂಡ ನಡೆಸಿದ್ದು,  ಪಾತ್ರಗಳ ಆಯ್ಕೆಯನ್ನೂ ಮಾಡಿದ್ದಾರೆ. ಚಿಕ್ಕವರಿಂದ ವಯಸ್ಸಾದ ವ್ಯಕ್ತಿಗಳು ಈ ಸಿನಿಮಾಗಾಗಿ ಬೇಕಾಗಿದ್ದರಿಂದ ಹದಿನೈದು ದಿನಗಳ ಕಾಲ ಆಡಿಷನ್ ಮಾಡಿದ್ದಾರಂತೆ ನಿರ್ದೇಶಕರು. ನಟನೆಯ ಚಿತ್ರ ನಿರ್ದೇಶನವನ್ನೂ ಉಪೇಂದ್ರ ಅವರೇ ಮಾಡುತ್ತಿದ್ದು, ನಾಯಕಿ ಯಾರು ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಈಗಾಗಲೇ ನಾಯಕಿಯ ಆಯ್ಕೆ ಕೂಡ ಆಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

    ಲಹರಿ ಸಂಸ್ಥೆ ಮತ್ತು ಕೆ.ಪಿ.ಶ್ರೀಕಾಂತ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಹೀಗೆ ಏಳು ಭಾಷೆಗಳಲ್ಲಿ ಈ ಚಿತ್ರ ಮೂಡಿ ಬರಲಿದೆ.

  • ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಬೆಂಗಳೂರು: ಏಪ್ರಿಲ್ 4 ರಂದು ಗ್ರ್ಯಾಮಿ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‍ರನ್ನು ಲಹರಿ ಸಂಸ್ಥೆ ವತಿಯಿಂದ ಸನ್ಮಾನಿಸಲಾಯ್ತು. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಲಹರಿ ಸಂಸ್ಥೆ ಮುಖ್ಯಸ್ಥ ಮನೋಹರ್ ನಾಯ್ಡು, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ಸಿಇಓ ಅರುಣ್ ಸಿಂಗ್, ನಟರಾದ ಶಿವಣ್ಣ, ರವಿಚಂದ್ರನ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮನೋಹರ್ ಅವರು ನಾವು ಒಟ್ಟಿಗೆ ಬೆಳೆದವರು. ಅಕ್ಕ ಪಕ್ಕದ ಮನೆಯವರು. ಮನೋಹರ್ ಹಾರ್ಡ್ ವರ್ಕ್ ಮಾಡ್ತಾರೆ. ಓನ್ಲಿ ಹಾರ್ಡ್ ವರ್ಕ್ ಮಾಡ್ತಾರೆ. ಬಟ್ ವೇಲು ಹಾರ್ಡ್ ವರ್ಕಿಂಗ್ & ಫನ್ ಲೀವಿಂಗ್ ಮನುಷ್ಯ ಎಂದರು. ಹೀಗೆ ಇಂಗ್ಲೀಷ್‍ನಲ್ಲಿ ಮಾತು ಶುರು ಮಾಡಿದ ಸಿಎಂಗೆ ಮುಂದೆ ಕುಳಿತಿರುವ ಒಬ್ಬರು ಕನ್ನಡ ಸರ್ ಅಂದ್ರು. ಕೂಡಲೇ ಉತ್ತರಿಸಿದ ಸಿಎಂ, ತಡಿಯಪ್ಪ ನಮ್ಮದು ಉತ್ತರ ಕರ್ನಾಟಕದ ಕನ್ನಡ. ನಿಮ್ಮದೆಲ್ಲಾ ಅರ್ಧಂಬಂರ್ಧ ಕನ್ನಡ ನಮ್ಮದು ಅಪ್ಪಟ ಕನ್ನಡ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ನನಗೆ ಗ್ರ್ಯಾಮಿ ಅವಾರ್ಡ್ ಅಂದ್ರೆ ಗೊತ್ತಿರಲಿಲ್ಲ. ನಾನು ಗ್ರ್ಯಾಮಿ ಅವಾರ್ಡ್ ಅಂದ್ರೆ ಜಿಂಗ್ ಚಾಂಗ್ ಇರುತ್ತೆ ಅನ್ಕೊಂಡು ಬಂದಿದ್ದೆ. ಇಲ್ಲಿ ಬಂದು ಆ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಖುಷಿ ಆಯ್ತು. ಸಾರ್ಥಕ ಅನ್ನಿಸ್ತು ಎಂದರು. ಇದನ್ನೂ ಓದಿ: ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ನಿಲ್ಲದ ರಾಕಿಭಾಯ್ ಆರ್ಭಟ: 400 ಕೋಟಿಯತ್ತ `ಕೆಜಿಎಫ್ 2′

    ಇದೇ ವೇಳೆ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್ ಮಾತನಾಡಿ, ರಿಕ್ಕಿ ಕೇಜ್‍ರನ್ನು 12-13 ವರ್ಷದ ಹಿಂದೆ ನಮ್ಮದೊಂದು ಸಣ್ಣ ಕೆಲಸಕ್ಕೆ ಸಂಪರ್ಕಿಸಿದ್ದೆ. ಅವರ ಪ್ಯಾಶನ್ ನೋಡಿ ಅನ್ನಿಸ್ತು. ಇವರು ನಮಗೆ ವರ್ಕೌಟ್ ಆಗಲ್ಲ ಎಂದು. ಹಾಗಿತ್ತು ಅವರ ಕೆಲಸ. ಕನ್ನಡಿಗರು ಎದ್ದು ನಿಂತ್ರೆ ಹೀಗೆ ಗ್ರ್ಯಾಮಿ ಅವಾರ್ಡ್ ಬರುತ್ತೆ. ಕೆಜಿಎಫ್ ನಂತಹ ಸಿನಿಮಾವೂ ಬರುತ್ತೆ ಎಂದು ಹಾಡಿ ಹೊಗಳಿದರು.

    ಈ ಮೊದಲು ವೇದಿಕೆಯಲ್ಲಿ ಮಾತು ಪ್ರಾರಂಭಿಸೋದಕ್ಕೂ ಮುನ್ನ ಸಿಎಂ ಜೊತೆ ರಂಗನಾಥ್ ಮಾತಿನ ಕೌಂಟರ್ ನೀಡಿದರು. ರಂಗನಾಥ್ ವೇದಿಕೆ ಏರುತ್ತಿದ್ದಂತೆ ತಾವು ಕುಳಿತಲ್ಲಿಯೇ ಪ್ರೈಮ್ ಟೈಂ ಆಯ್ತು ಎಂದು ಸಿಎಂ ಕಾಲೆಳೆದರು. ಈ ವೇಳೆ ರಂಗನಾಥ್, ನಾನು ಇಲ್ಲಿರೋದು ಬಿಟ್ಟು ಅಲ್ಲಿದ್ರೆ ನಿಮಗೇ ಡೇಂಜರ್ ಎಂದು ನಗುತ್ತಾ ಉತ್ತರಿಸಿದ್ರು.

    ಈ ಮೊದಲು ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‍ರನ್ನು ಸನ್ಮಾನಿಸಿದ್ರು. ಗ್ರ್ಯಾಮಿ ಪ್ರಶಸ್ತಿ ಪಡೆದ ಡಿವೈನ್ ಟೈಡ್ಸ್ ಆಲ್ಬಂ ಅನ್ನು ಲಹರಿ ಸಂಸ್ಥೆಯೇ ನಿರ್ಮಿಸಿತ್ತು.

  • ಲಹರಿ ಭಾವಗೀತೆ, ಜಾನಪದ ಗೀತೆ ಖಾತೆಗೆ ಯೂಟ್ಯೂಬ್‌ನಿಂದ ಗೋಲ್ಡನ್‌ ಬಟನ್‌ ಪ್ರಶಸ್ತಿ

    ಲಹರಿ ಭಾವಗೀತೆ, ಜಾನಪದ ಗೀತೆ ಖಾತೆಗೆ ಯೂಟ್ಯೂಬ್‌ನಿಂದ ಗೋಲ್ಡನ್‌ ಬಟನ್‌ ಪ್ರಶಸ್ತಿ

    ಬೆಂಗಳೂರು: ದಕ್ಷಿಣ ಭಾರತದ ಹೆಸರಾಂತ ಸಂಗೀತ ಕಂಪನಿ ಲಹರಿ ಮ್ಯೂಸಿಕ್ ಮತ್ತೊಂದು ದಾಖಲೆ ಬರೆದಿದ್ದು, ಯೂಟ್ಯೂಬ್‌ ಗೋಲ್ಡನ್‌ ಬಟನ್‌ ಪ್ರಶಸ್ತಿ ಸಿಕ್ಕಿದೆ.

    ಯೂಟ್ಯೂಬ್‌ನಲ್ಲಿರುವ Lahari Bhavageethegalu & Folk – T-Series ಖಾತೆಯನ್ನು 10 ಲಕ್ಷ ಮಂದಿ ಸಬ್‌ಸ್ಕ್ರೈಬ್‌ ಮಾಡಿದ ಹಿನ್ನೆಲೆಯಲ್ಲಿ ಯೂಟ್ಯೂಬ್‌ನಿಂದ ಗೋಲ್ಡನ್‌ ಬಟನ್‌ ಗೌರವ ಸಿಕ್ಕಿದೆ.

    ಭಾವಗೀತೆಗಳು ಮತ್ತು ಜಾನಪದ ಗೀತೆಗಳಿಗೆ ಭಾರತದಲ್ಲೇ ಮೊಟ್ಟ ಮೊದಲ ಬಾರಿಗೆ 10 ಲಕ್ಷ ಚಂದಾದಾರರಾಗಿದ್ದಕ್ಕೆ ಆಗಿದ್ದಕ್ಕೆ ಈ ಅವಾರ್ಡ್ ಸಿಕ್ಕಿದೆ. ಸಮಸ್ತ ಕೇಳುಗರಿಗೆ ಲಹರಿ ಸಂಸ್ಥೆ ಧನ್ಯವಾದಗಳನ್ನು ಅರ್ಪಿಸಿದೆ.  ಇದನ್ನೂ ಓದಿ: 29 ದಾಖಲೆಗಳನ್ನು ಬರೆದು ರಾಕೆಟ್ ವೇಗದಲ್ಲಿ ಮುನ್ನುಗ್ಗುತಿದೆ ಕೆಜಿಎಫ್ 2: ದಾಖಲೆಗಳ ಪಟ್ಟಿ ಇದೆ

    ಇಲ್ಲಿಯವರೆಗೂ ಈ ಖಾತೆಯಲ್ಲಿ 2,883 ಹಾಡುಗಳನ್ನು ಅಪ್ಲೋಡ್‌ ಮಾಡಲಾಗಿದೆ. ಕನ್ನಡದ ಪ್ರಸಿದ್ಧ ಭಾವಗೀತೆಗಳನ್ನು ನೀವು ಲಹರಿ ಕಂಪನಿಯ Lahari Bhavageethegalu & Folk – T-Series  ಯೂಟ್ಯೂಬ್‌ ಚಾನೆಲ್‌ನಲ್ಲಿ ಆಲಿಸಬಹುದು.

  • ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಹರಿ ಮ್ಯೂಸಿಕ್ ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಸಹ ಬಂದಿದೆ. ರಿಕ್ಕಿ ಕೇಜ್ ಅವರಿಗೆ ಈ ಪ್ರಶಸ್ತಿ ಸಂದಿದೆ. ಈ ಎರಡು ಸಂತಸವನ್ನು ಹಂಚಿಕೊಳ್ಳಲು ಲಹರಿ ವೇಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು.

    ಕೇವಲ ಐನ್ನೂರು ರೂಪಾಯಿ ಬಂಡವಾಳದಿಂದ ನಮ್ಮ ಅಣ್ಣ ಮನೋಹರ ನಾಯ್ಡು ಅವರು ಈ ಸಂಸ್ಥೆಯನ್ನು ಆರಂಭಿಸಿದರು. ಈಗ ನಮ್ಮ ಸಂಸ್ಥೆ ಈ ಮಟ್ಟಕ್ಕೆ ಬರಲು ನಿಮ್ಮೆಲ್ಲರ ಹಾರೈಕೆ ಕಾರಣ. ಇದೇ ಮೊದಲ ಬಾರಿಗೆ ನಮ್ಮ ಸಂಸ್ಥೆ ಮೂಲಕ ಬಿಡುಗಡೆಯಾದ ‘ಡಿವೈನ್ ಟೈಡ್ಸ್’ ಆಲ್ಬಂಗೆ ಸಂಗೀತ ನೀಡಿದ್ದಕ್ಕಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಈ ಗೌರವಕ್ಕೆ ಪಾತ್ರರಾದ ರಿಕ್ಕಿಕೇಜ್ ಅವರನ್ನು ಅಭಿನಂದಿಸುತ್ತೇನೆ. ಈ ಪ್ರಶಸ್ತಿ ಸಮಾರಂಭಕ್ಕೆ ನಾನು ವೀಸಾ ಸಿಗದ ಕಾರಣದಿಂದ ಹೋಗಿರಲಿಲ್ಲ. ನನ್ನ ಅಣ್ಣನ ಮಗ ಚಂದ್ರು, ರಿಕ್ಕಿಕೇಜ್ ಅವರ ಜೊತೆಗೆ ಹೋಗಿದ್ದರು. ನಾವೆಲ್ಲರೂ ಮನೆಯಿಂದಲೇ ನೋಡಿ ಸಂತಸಪಟ್ಟೆವು. ಸದ್ಯದಲ್ಲೇ ರಿಕ್ಕಿಕೇಜ್ ಅವರ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರವೊಂದನ್ನು ನಮ್ಮ ಸಂಸ್ಥೆ ಮೂಲಕ ನಿರ್ಮಿಸುವ ತಯಾರಿ ನಡೆಯುತ್ತಿದೆ ಎಂದು ಲಹರಿ ವೇಲು ತಿಳಿಸಿದರು.

    ನನಗೆ ಎರಡನೇ ಬಾರಿ ಈ ಪ್ರಶಸ್ತಿ ಬಂದಿರುವುದು ಸಂತೋಷ ತಂದಿದೆ. ಪ್ಯಾಂಡಮಿಕ್ ಸಮಯದಲ್ಲಿ ಈ ಆಲ್ಬಂ ನಿರ್ಮಾಣವಾಯಿತು. ಅನೇಕ ಕಲಾವಿದರನ್ನು ಜೂಮ್ ಕಾಲ್ ಹಾಗೂ ಮೆಸೇಜ್‍ಗಳ ಮೂಲಕ ಸಂಪರ್ಕ ಮಾಡಿದ್ದೆ. ನೂರೈವತ್ತಕ್ಕೂ ಅಧಿಕ ಕಲಾವಿದರು ಹಾಗೂ ತಂತ್ರಜ್ಞರು ಈ ಹಾಡಿಗೆ ಕೆಲಸ ಮಾಡಿದ್ದಾರೆ. ಅದರಲ್ಲಿ ಅರವತ್ತಕ್ಕೂ ಅಧಿಕರು ಭಾರತದವರು. ಮಿಕ್ಕವರು ಹೊರ ದೇಶದವರು. ಇಲ್ಲಿನ ವಾರಿಜಾಶ್ರೀ, ಅರುಣ್ ಕುಮಾರ್, ಸುಮಾ ರಾಣಿ, ಚೈತ್ರ ಮುಂತಾದ ಕಲಾವಿದರು ಈ ಆಲ್ಬಂ ನಲ್ಲಿದ್ದಾರೆ. ನಾನು ಕನ್ನಡದಲ್ಲಿ ಆಕ್ಸಿಡೆಂಟ್, ವೆಂಕಟ ಇನ್ ಸಂಕಟ ಹಾಗೂ ಕ್ರೇಜಿ ಕುಟುಂಬ ಚಿತ್ರಗಳಿಗೆ ಸಂಗೀತ ನೀಡಿದ್ದೇನೆ. ಆ ಮೂರು ಸಿನಿಮಾಗಳ ನಾಯಕ ರಮೇಶ್ ಅರವಿಂದ್ ಅವರೆ. ರಮೇಶ್ ನನ್ನ ಆತ್ಮೀಯ ಸ್ನೇಹಿತರು. ನನಗೆ ಸಿನಿಮಾಗಿಂತ ವಿಭಿನ್ನ ಆಲ್ಬಂಗಳನ್ನು ಮಾಡುವುದರಲ್ಲೇ ಆಸಕ್ತಿ ಹೆಚ್ಚು ಎಂದು ರಿಕ್ಕಿಕೇಜ್ ತಿಳಿಸಿದ್ದಾರೆ.

    ಪ್ರಶಸ್ತಿ ಪಡೆಯಲು ಲಹರಿ ಸಂಸ್ಥೆಯ ಚಂದ್ರು ಅವರೊಂದಿಗೆ ಹೋದ ಸಂದರ್ಭವನ್ನು ನೆನಪಿಸಿಕೊಂಡರು. ಹಾಗೂ ಮುಂದೆ ಸಹ ಲಹರಿ ಸಂಸ್ಥೆಯವರೊಂದಿಗೆ ಇರುವುದಾಗಿ ಹೇಳಿದರು.

    ಇಷ್ಟು ಎತ್ತರಕ್ಕೆ ಬೆಳೆದಿದ್ದರೂ ರಿಕ್ಕಿಕೇಜ್, ನಮ್ಮ ಸಂಸ್ಥೆಯ ಕಾರ್ಯಗಳಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆ. ಅವರು ನಮ್ಮೊಂದಿಗೆ ಯಾವುದೇ ಅಗ್ರಿಮೆಂಟ್ ಸಹ ಮಾಡಿಕೊಂಡಿಲ್ಲ. ಲಹರಿ ಸಂಸ್ಥೆಯ ಚಂದ್ರು ಅವರು ಮಾತನಾಡಿ, ಇದೇ ಅವರ ಪ್ರೀತಿಗೆ ಸಾಕ್ಷಿ ಎಂದರು. ರಿಕ್ಕಿಕೇಜ್ ಅವರೊಂದಿಗೆ ಹದಿನೈದು ವರ್ಷಗಳಿಂದ ಜೊತೆಗಿರುವ ವಾಡಿಯಲ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • RRR ಆಡಿಯೋ ಖರೀದಿ -ಒಪ್ಪಂದಕ್ಕೆ ಸಹಿ ಹಾಕಿದ ಲಹರಿ ಸಂಸ್ಥೆ

    RRR ಆಡಿಯೋ ಖರೀದಿ -ಒಪ್ಪಂದಕ್ಕೆ ಸಹಿ ಹಾಕಿದ ಲಹರಿ ಸಂಸ್ಥೆ

    ಬೆಂಗಳೂರು: ನಿರ್ದೇಶಕ ಎಸ್.ಎಸ್ ರಾಜಮೌಳಿ ಅವರ ಬಹುನಿರೀಕ್ಷಿತ RRR ಚಿತ್ರದ ಆಡಿಯೋ ಪಡೆದುಕೊಂಡ ಒಪ್ಪಂದಕ್ಕೆ ಲಹರಿ ಸಂಸ್ಥೆ ಇಂದು ಸಹಿ ಹಾಕಿದೆ.

    ಕೆಲದಿನಗಳ ಹಿಂದೆ ಲಹರಿ ಸಂಸ್ಥೆ ಆರ್‍ಆರ್‍ಆರ್ ಚಿತ್ರದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿತ್ತು. ಇದೀಗ ಲಹರಿ ಸಂಸ್ಥೆಯು ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಆರ್‍ಆರ್‍ಆರ್ ಅಗ್ರಿಮೆಂಟ್ ಗೆ ಸೈನ್ ಮಾಡಿರುವ ಅಧಿಕೃತವಾಗಿ ಪತ್ರವನ್ನು ಪಡೆಯುವ ಮೂಲಕ ಹಕ್ಕನ್ನು ಪಡೆದುಕೊಂಡಿದೆ. ಆಗಸ್ಟ್ 1ರ ಬೆಳಗ್ಗೆ 11 ಗಂಟೆಗೆ ಆರ್‍ಆರ್‍ಆರ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗಲಿದೆ. ಇದನ್ನೂ ಓದಿ: RRR ಆಡಿಯೋ ರೈಟ್ಸ್ ಲಹರಿ ಪಾಲು

    ಲಹರಿ ಸಂಸ್ಥೆ ಹೈದರಾಬಾದ್‍ನಲ್ಲಿ ಲಿಖಿತವಾಗಿ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದ್ದು, ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕೀರವಾಣಿ ಜೊತೆ ಸಭೆಯಲ್ಲಿ ಭಾಗಿಯಾಗಿದ್ದರು. 28 ಕೋಟಿ ರೂ.ಗೆ ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ಖರೀದಿಸಿದೆ ಎಂದು ತಿಳಿದು ಬಂದಿದೆ.

    ಆರ್‌ಆರ್‌ಆರ್‌ ಚಿತ್ರದ ಆಡಿಯೋ ಹಕ್ಕನ್ನು ಭಾರೀ ಮೊತ್ತಕ್ಕೆ ಖರೀದಿಸಲಾಗಿದೆ. ಒಟ್ಟು 5 ಭಾಷೆಗಳಲ್ಲಿ ಆರ್‌ಆರ್‌ಆರ್‌ ತೆರೆಕಾಣುತ್ತಿದ್ದು, ಐದೂ ಭಾಷೆಯ ಆಡಿಯೋ ಹಕ್ಕನ್ನು ಲಹರಿ ಹಾಗೂ ಟಿ ಸಿರೀಸ್ ತಮ್ಮ ಜೋಳಿಗೆಗೆ ಹಾಕಿಕೊಂಡಿವೆ. ಬಾಹುಬಲಿ ಚಿತ್ರದ ಆಡಿಯೋ ಹಕ್ಕನ್ನೂ ಇದೇ ಸಂಸ್ಥೆ ದಾಖಲೆ ಮೊತ್ತಕ್ಕೆ ಖರೀದಿಸಿತ್ತು.  ಇದನ್ನೂ ಓದಿ: RRR ಸಿನಿಮಾದ ಒಂದು ಸಾಂಗ್ ಶೂಟ್‍ಗೆ ರಾಜಮೌಳಿ ಬೃಹತ್ ಪ್ಲಾನ್

    ಈಗಾಗಲೇ ಆರ್‌ಆರ್‌ಆರ್‌ ಸಿನಿಮಾದ ಚಿತ್ರೀಕರಣ ಕೊನೇಯ ಹಂತ ತಲುಪಿದ್ದು, ಇದೇ ಆಗಸ್ಟ್ 1 ರಂದು ವಿಶೇಷ ಹಾಡನ್ನು ಬಿಡುಗಡೆಗೊಳಿಸಲು ಚಿತ್ರ ತಂಡ ಸಿದ್ಧತೆ ನಡೆಸಿದೆ. ಇದರ ಮಧ್ಯೆಯೇ ಜುಲೈ 15ರಂದು ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಲು ಸಹ ತಯಾರಿ ನಡೆದಿದೆ. ಈ ಮೇಕಿಂಗ್ ವೀಡಿಯೋ ನಿಮ್ಮನ್ನು ಆರ್‍ಆರ್‍ಆರ್ ಪ್ರಪಂಚಕ್ಕೆ ಕೊಂಡೊಯ್ಯಲಿದ್ದು, ಈ ಮೂಲಕ ಚಿತ್ರವನ್ನು ಹೇಗೆ ನಿರ್ಮಿಸಲಾಗಿದೆ ಎಂಬುದರ ಝಲಕ್ ತೋರಿಸಲಾಗುತ್ತಿದೆ.

    ಹೀಗೆ ಆರ್‌ಆರ್‌ಆರ್‌ ಸಿನಿಮಾ ಕುರಿತು ಚಿತ್ರ ತಂಡ ಬ್ಯಾಕ್ ಟು ಬ್ಯಾಕ್ ಅಪ್‍ಡೇಟ್ ನೀಡುತ್ತಿದೆ. ಅಂದಹಾಗೆ ಬಹುನಿರೀಕ್ಷಿತ ಆರ್‍ಆರ್‍ಆರ್ ಸಿನಿಮಾ ಅಕ್ಟೋಬರ್ 13ರಂದು ವಿಶ್ವಾದ್ಯಂತ ತೆರೆಗಪ್ಪಳಿಸುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ. ಹೀಗಾಗಿ ಅಭಿಮಾನಿಗಳು ಆರ್‍ಆರ್‍ಆರ್ ಅಪ್‍ಡೇಟ್ಸ್‍ಗಾಗಿ ಕಾತರದಿಂದ ಕಾಯುತ್ತಿದ್ದಾರೆ.

  • RRR ಆಡಿಯೋ ರೈಟ್ಸ್ ಲಹರಿ ಪಾಲು

    RRR ಆಡಿಯೋ ರೈಟ್ಸ್ ಲಹರಿ ಪಾಲು

    ಬೆಂಗಳೂರು: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್.ಎಸ್.ರಾಜಮೌಳಿ ಅವರ ಬಹುನಿರೀಕ್ಷಿತ ಆರ್‌ಆರ್‌ಆರ್‌ ಚಿತ್ರದ ಆಡಿಯೋ ರೈಟ್ಸ್ ಸೇಲ್ ಆಗಿದ್ದು, ಲಹರಿ ಹಾಗೂ ಟಿ ಸಿರೀಸ್ ಸಂಸ್ಥೆ ಪಾಲಾಗಿದೆ.

    ಆರ್‌ಆರ್‌ಆರ್‌ ಚಿತ್ರದ ಆಡಿಯೋ ಹಕ್ಕನ್ನು ಭಾರೀ ಮೊತ್ತಕ್ಕೆ ಖರೀದಿಸಲಾಗಿದೆ. ಒಟ್ಟು 5 ಭಾಷೆಗಳಲ್ಲಿ ಆರ್‌ಆರ್‌ಆರ್‌ ತೆರೆಕಾಣುತ್ತಿದ್ದು, ಐದೂ ಭಾಷೆಯ ಆಡಿಯೋ ಹಕ್ಕನ್ನು ಲಹರಿ ಹಾಗೂ ಟಿ ಸಿರೀಸ್ ತಮ್ಮ ಜೋಳಿಗೆಗೆ ಹಾಕಿಕೊಂಡಿವೆ. ಬಾಹುಬಲಿ ಚಿತ್ರದ ಆಡಿಯೋ ಹಕ್ಕನ್ನೂ ಇದೇ ಸಂಸ್ಥೆ ದಾಖಲೆ ಮೊತ್ತಕ್ಕೆ ಖರೀದಿಸಿತ್ತು. ಇದೀಗ ಆರ್‌ಆರ್‌ಆರ್‌ ಬಾಹುಬಲಿ ದಾಖಲೆಯನ್ನೂ ಮುರಿದಿದೆ ಎನ್ನಲಾಗುತ್ತಿದೆ.

    ಈ ಕುರಿತು ಲಹರಿ ಸಂಸ್ಥೆಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಸಣ್ಣ ಪ್ರೋಮೋವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಆದಷ್ಟು ಬೇಗ ಆರ್‌ಆರ್‌ಆರ್‌ ಮ್ಯೂಸಿಕ್ ಲಭ್ಯವಾಗಲಿದೆ ಎಂದು ಸಂಸ್ಥೆ ತಿಳಿಸಿದೆ. ಇಂಡಿಯಾಸ್ ಬಿಗ್ಗೆಸ್ಟ್ ಮ್ಯೂಸಿಕ್ ಲೇಬಲ್ಸ್, ಇಂಡಿಯಾಸ್ ಬಿಗ್ಗೆಸ್ಟ್ ಕೊಲಾಬರೇಷನ್, ಮ್ಯೂಸಿಕಲ್ ಎಕ್ಸ್ಟ್ರಾವೆಗಾಂಝಾ ಕಮಿಂಗ್ ಟು ಯೂ ಸೂನ್ ಎಂಬುದಾಗಿ ಚಿಕ್ಕ ಪ್ರೋಮೋದಲ್ಲಿ ಹೇಳಲಾಗಿದೆ.

    ಈಗಾಗಲೇ ಆರ್‌ಆರ್‌ಆರ್‌ ಸಿನಿಮಾದ ಚಿತ್ರೀಕರಣ ಕೊನೇಯ ಹಂತ ತಲುಪಿದ್ದು, ಇದೇ ಆಗಸ್ಟ್ 1 ರಂದು ವಿಶೇಷ ಹಾಡನ್ನು ಬಿಡುಗಡೆಗೊಳಿಸಲು ಚಿತ್ರ ತಂಡ ಸಿದ್ಧತೆ ನಡೆಸಿದೆ. ಇದರ ಮಧ್ಯೆಯೇ ಜುಲೈ 15ರಂದು ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಲು ಸಹ ತಯಾರಿ ನಡೆದಿದೆ. ಈ ಮೇಕಿಂಗ್ ವೀಡಿಯೋ ನಿಮ್ಮನ್ನು ಆರ್‍ಆರ್‍ಆರ್ ಪ್ರಪಂಚಕ್ಕೆ ಕೊಂಡೊಯ್ಯಲಿದ್ದು, ಈ ಮೂಲಕ ಚಿತ್ರವನ್ನು ಹೇಗೆ ನಿರ್ಮಿಸಲಾಗಿದೆ ಎಂಬುದರ ಝಲಕ್ ತೋರಿಸಲಾಗುತ್ತಿದೆ.

    ಹೀಗೆ ಆರ್‌ಆರ್‌ಆರ್‌ ಸಿನಿಮಾ ಕುರಿತು ಚಿತ್ರ ತಂಡ ಬ್ಯಾಕ್ ಟು ಬ್ಯಾಕ್ ಅಪ್‍ಡೇಟ್ ನೀಡುತ್ತಿದೆ. ಅಂದಹಾಗೆ ಬಹುನಿರೀಕ್ಷಿತ ಆರ್‍ಆರ್‍ಆರ್ ಸಿನಿಮಾ ಅಕ್ಟೋಬರ್ 13ರಂದು ವಿಶ್ವಾದ್ಯಂತ ತೆರೆಗಪ್ಪಳಿಸುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ. ಹೀಗಾಗಿ ಅಭಿಮಾನಿಗಳು ಆರ್‍ಆರ್‍ಆರ್ ಅಪ್‍ಡೇಟ್ಸ್‍ಗಾಗಿ ಕಾತರದಿಂದ ಕಾಯುತ್ತಿದ್ದಾರೆ.

  • ಲಹರಿ ಮ್ಯೂಸಿಕ್‍ಗೆ ಯೂಟ್ಯೂಬ್ ಡೈಮಂಡ್ ಅವಾರ್ಡ್

    ಲಹರಿ ಮ್ಯೂಸಿಕ್‍ಗೆ ಯೂಟ್ಯೂಬ್ ಡೈಮಂಡ್ ಅವಾರ್ಡ್

    ಬೆಂಗಳೂರು: ಲಹರಿ ಮ್ಯೂಸಿಕ್‍ಗೆ ಯೂಟ್ಯೂಬ್ ನೀಡುವ ಪ್ರತಿಷ್ಠಿತ ಡೈಮಂಡ್ ಅವಾರ್ಡ್ ಸಿಕ್ಕಿದೆ.

    ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಲಹರಿ ಯುಟ್ಯೂಬ್ ಚಾನೆಲ್ ಶುರುವಾಗಿ ಇಲ್ಲಿಗೆ 10 ವರ್ಷ. ಈ ಸಂಭ್ರಮದ ಹೊತ್ತಲ್ಲೇ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲಿಗೆ  ಈಗ 1.18 ಕೋಟಿ ಮಂದಿ  ಸಬ್‍ಸ್ಕ್ರೈಬರ್ಸ್ ಆಗಿದ್ದಾರೆ.

    1 ಕೋಟಿ ಸಬ್‍ಸ್ಕ್ರೈಬರ್ಸ್ ಆದ ಹಿನ್ನೆಲೆಯಲ್ಲಿ ನ್ಯೂಯಾರ್ಕ್‍ನಲ್ಲಿರುವ ಯೂಟ್ಯೂಬ್ ಸಂಸ್ಥೆಯಿಂದ ಲಹರಿ ಮ್ಯೂಸಿಕ್‍ಗೆ ಪ್ರತಿಷ್ಠಿತ ಡೈಮಂಡ್ ಅವಾರ್ಡ್ ಪ್ರಶಸ್ತಿ ಸಿಕ್ಕಿದೆ.  ಇದನ್ನೂ ಓದಿ: ಲಹರಿ ಮ್ಯೂಸಿಕ್ ಪಾಲಾಯ್ತು ಕೆಜಿಎಫ್ 2 ಆಡಿಯೋ ರೈಟ್ಸ್

    ಕನ್ನಡಕ್ಕೆ ಮಾತ್ರ ಸೀಮಿತವಾಗದೆ ತೆಲುಗು, ತಮಿಳು ಹಾಗೂ ಮಲೆಯಾಳಂಗೂ ಲಹರಿ ಯೂಟ್ಯೂಬ್ ಚಾನೆಲ್ ವಿಸ್ತರಣೆ ಗೊಂಡಿದೆ. ಇದು ನಮಗೆ ಸಿಕ್ಕ ಗೌರವವಲ್ಲ, ಸಮಸ್ತ ಕನ್ನಡಿಗರ ಸಹಕಾರದ ಫಲ. ಹಾಗಾಗಿ ಇದು ಸಮಸ್ತ ಕನ್ನಡಿಗರಿಗೆ ಸಲ್ಲಬೇಕಾದ ಗೌರವ. ಅವರಿಗೆ ಇದು ಅರ್ಪಣೆ ಅಂತಾ ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿ ವೇಲು ಪಬ್ಲಿಕ್ ಟಿವಿಗೆ  ತಿಳಿಸಿದ್ದಾರೆ.