Tag: lake

  • ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ – ಮೀನಿಗಾಗಿ ಮುಗಿಬಿದ್ದ ನೂರಾರು ಜನ

    ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ – ಮೀನಿಗಾಗಿ ಮುಗಿಬಿದ್ದ ನೂರಾರು ಜನ

    ಹಾಸನ: ಸರ್ಕಾರ ಸಂಜೆ ಲಾಕ್‍ಡೌನ್ ತೆರವುಗೊಳಿಸುತ್ತಿದ್ದಂತೆ ಹಾಸನದಲ್ಲಿ ಜನ ಸಾಮಾಜಿಕ ಅಂತರ ಮರೆತು ಮೀನಿಗಾಗಿ ಕೆರೆಗೆ ಮುಗಿಬಿದ್ದ ಘಟನೆ ನಡೆದಿದೆ.

    ಜಿಲ್ಲೆಯ ಅರಕಲಗೂಡು ತಾಲೂಕಿನ ಹನೆಮಾರನಹಳ್ಳಿಯಲ್ಲಿ ನೂರಾರು ಜನ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಕೆರೆಯ ಮೀನಿಗಾಗಿ ಮುಗಿಬಿದ್ದಿದ್ದಾರೆ. ಕೆರೆಯಲ್ಲಿ ನೀರು ಕಡಿಮೆಯಾಗಿದ್ದರಿಂದ ಅಕ್ಕಪಕ್ಕದ ಹಳ್ಳಿಯ ಜನ ಒಮ್ಮೆಲೆ ಮೀನು ಹಿಡಿಯಲು ಕೆರೆಗೆ ಇಳಿದಿದ್ದಾರೆ.

    ಒಂದು ಕಡೆ ಅಧಿಕಾರಿಗಳು ಕೊರೊನಾ ತಡೆಗೆ ನಿರಂತರವಾಗಿ ಓಡಾಡುತ್ತಿದ್ದರೆ, ಮತ್ತೊಂದು ಕಡೆ ಜನ ಮಾತ್ರ ತಮಗೂ ಕೊರೊನಾಗೂ ಸಂಬಂಧವೇ ಇಲ್ಲ ಎಂಬ ರೀತಿ ನಡೆದುಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಪ್ರತಿನಿತ್ಯ ನೂರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಅದರ ನಡುವೆ ಜಿಲ್ಲೆಯ ಜನ ಕೂಡ ಸಾಮಾಜಿಕ ಅಂತರ ಮರೆತು ವರ್ತಿಸುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗುತ್ತಿದೆ.

  • ಕೊರೊನಾ ಸಂಕಷ್ಟದಲ್ಲಿ ಕೃಷಿಗಾಗಿ ಕೆರೆ ಅಭಿವೃದ್ಧಿಗೆ ಮುಂದಾದ ಕೆಜಿಎಫ್ ಶಾಸಕಿ

    ಕೊರೊನಾ ಸಂಕಷ್ಟದಲ್ಲಿ ಕೃಷಿಗಾಗಿ ಕೆರೆ ಅಭಿವೃದ್ಧಿಗೆ ಮುಂದಾದ ಕೆಜಿಎಫ್ ಶಾಸಕಿ

    ಕೋಲಾರ: ಕೊರೊನಾ ಮಹಾಮಾರಿಗೆ ಹೆದರಿ ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಲಕ್ಷಾಂತರ ಜನರು ಮತ್ತೆ ತಮ್ಮ ಊರುಗಳಿಗೆ ವಾಪಸ್ ಬಂದಿದ್ದಾರೆ. ಆದರೆ ಊರುಗಳಿಗೆ ಹಿಂತಿರುಗಿರುವ ಯುವಕರನ್ನು ಮತ್ತೆ ಬೆಂಗಳೂರಿಗೆ ತೆರಳದಂತೆ ಹಳ್ಳಿಗಳಲ್ಲೇ ಕಟ್ಟಿಹಾಕಲು ಸದ್ದಿಲ್ಲದೆ ಕೋಲಾರದಲ್ಲಿ ಒಂದು ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ.

    ಬೃಹತ್ತಾದ ಕೆರೆಯಲ್ಲಿ ಹತ್ತಾರು ಜೆಸಿಬಿಗಳ ಅಬ್ಬರದ ಮಧ್ಯೆ ಕೆರೆಯನ್ನು ಕ್ಲೀನ್ ಮಾಡುತ್ತಿರುವ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್, ಅವರ ಜೊತೆಗೆ ಸಾವಿರಾರು ಬೆಂಬಲಿಗರು ಇಂಥಾದೊಂದು ದೃಶ್ಯಗಳು ಕಂಡು ಬಂದಿದ್ದು ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ. ಹೌದು ಕೋಲಾರ ಜಿಲ್ಲೆಯಲ್ಲೇ ಅತಿ ದೊಡ್ಡ ಕೆರೆ ಎಂಬ ಖ್ಯಾತಿ ಹೊಂದಿರುವ ಬೇತಮಂಗಲ ಕೆರೆ ಸುಮಾರು 1,000 ಎಕ್ರೆ ವಿಸ್ತೀರ್ಣ ಹೊಂದಿದೆ. ಸುಮಾರು 50 ರಿಂದ 60 ಗ್ರಾಮಗಳ ರೈತರು ಈ ಕೆರೆಯ ಮೇಲೆ ಅವಲಂಭಿತರಾಗಿದ್ದಾರೆ. ಇಂತಹ ಕೆರೆ ಕಳೆದ ಹಲವು ವರ್ಷಗಳಿಂದ ನೀರು ಬಾರದೆ ಗಿಡ ಗಂಟೆಗಳಿಂದ ತುಂಬಿ ಹೋಗಿತ್ತು.

    ಆದರೆ ಈ ಸಮಯದಲ್ಲಿ ಕೊರೊನಾಗೆ ಹೆದರಿ ಸಾವಿರಾರು ಜನ ಯುವಕರು ಮತ್ತೆ ತಮ್ಮ ಗ್ರಾಮಗಳತ್ತ ಮುಖಮಾಡಿದ್ದಾರಲ್ಲದೆ ಹೆಚ್ಚಾಗಿ ಕೃಷಿಯಲ್ಲಿ ಆಸಕ್ತಿ ವಹಿಸುತ್ತಿದ್ದಾರೆ. ಅದಕ್ಕಾಗಿ ಬೆಂಗಳೂರಿನಿಂದ ತಮ್ಮೂರಿಗೆ ಬಂದಿರುವ ಯುವಕರನ್ನು ಇಲ್ಲೇ ಉಳಿಸಿಕೊಳ್ಳಬೇಕೆಂದ ನಿರ್ಧಾರ ಮಾಡಿರುವ ಶಾಸಕಿ ರೂಪಕಲಾ ತಮ್ಮ ಸ್ವಂತ ಹಣದಿಂದ ಬೇತಮಂಗಲ ಕೆರೆ ಕ್ಲೀನ್ ಮಾಡಿಸುತ್ತಿದ್ದಾರೆ. ಕೆಸಿ ವ್ಯಾಲಿ ನೀರು ಸಹ ಹರಿಸುವ ಜೊತೆಗೆ ಮಳೆಗಾಲ ಆರಂಭವಾಗುತ್ತಿದ್ದು ಕೆರೆಗೆ ನೀರು ಬಂದರೆ ಬೆಂಗಳೂರು ತೊರೆದು ಬಂದಿರುವ ಯುವಕರು ಹಳ್ಳಿಗಳಲ್ಲೇ ಇದ್ದು ಕೃಷಿ ಕಾರ್ಯದಲ್ಲಿ ತೊಡಗುತ್ತಾರೆ ಅನ್ನೋದು ಇವರ ಪ್ಲಾನ್ ಅಗಿದೆ. ಅದಕ್ಕಾಗಿಯೇ ಕೆರೆ ಕ್ಲೀನ್ ಮಾಡೋದಕ್ಕೆ ಸರ್ಕಾರ ಅಥವಾ ಜಿಲ್ಲಾಡಳಿತದ ಮೊರೆ ಹೋದರೆ ಕೆಲಸ ನಿಧಾನವಾಗುತ್ತದೆ ಎಂದು ತಮ್ಮ ಸ್ವಂತ ಹಣದಿಂದಲೇ ಕೆರೆ ಶುದ್ಧೀಕರಣ ಕಾರ್ಯಕ್ಕೆ ನಿಂತಿದ್ದಾರೆ.

    ಕೆಜಿಎಫ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸುಮಾರು ನೂರಾರು ಹಳ್ಳಿಗಳು ಬರುತ್ತವೆ ಆ ಪೈಕಿ ಸುಮಾರು 50ಕ್ಕೂ ಹೆಚ್ಚು ಹಳ್ಳಿಗಳಿಗೆ ಈ ಕೆರೆ ಮತ್ತು ರಾಮಸಾಗರ ಕೆರೆ ನೀರಿನ ಮೂಲವಾಗಿದೆ. ಅದಕ್ಕಾಗಿಯೇ ಮಳೆಗಾಲದ ಸಮಯಕ್ಕೆ ಸರಿಯಾಗಿ ಕೆರೆ ಕ್ಲೀನ್ ಆಗಿ ಒಂದಷ್ಟು ನೀರು ಬಂದಿದ್ದೇ ಅದಲ್ಲಿ ಕೃಷಿ ಚಟುವಟಿಕೆ ಜೊತೆಗೆ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೂ ಅನುಕೂಲವಾಗುತ್ತದೆ ಅನ್ನೋದು ರೂಪಕಲಾ ಅವರ ಪ್ಲಾನ್ ಆಗಿದೆ.

    ಹಾಗಾಗಿ ಸ್ಥಳೀಯರ ಸಹಕಾರದೊಂದಿಗೆ ಕೆರೆ ಕ್ಲೀನ್ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇನ್ನು ಕಳೆದ ಇಪ್ಪತ್ತು ವರ್ಷಗಳಿಂದ ಕೆರೆ ಕ್ಲೀನ್ ಮಾಡುವ ಕೆಲಸ ಹಲವು ಕಾರಣಗಳಿಂದ ನೆನೆಗುದಿಗೆ ಬಿದ್ದಿತ್ತು. ಆದರೆ ಈ ಸಂದರ್ಭದಲ್ಲಿ ಶಾಸಕಿ ಯುವಕರನ್ನು ಹಳ್ಳಿಗಳಲ್ಲೇ ಕಟ್ಟಿಹಾಕಬೇಕೆಂಬ ಉದ್ದೇಶದಿಂದ ಕೆರೆ ಶುದ್ಧೀಕರಣ ಕಾರ್ಯಕ್ಕೆ ಕೈಹಾಕಿರುವುದಕ್ಕೆ ಹಲವರು ಸಾಥ್ ನೀಡುತ್ತಿದ್ದಾರೆ. ಜೊತೆಗೆ ಶಾಸಕಿಯ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಈಜಲು ಹೋಗಿ ನೀರುಪಾಲಾದ ಯುವಕ

    ಈಜಲು ಹೋಗಿ ನೀರುಪಾಲಾದ ಯುವಕ

    -ಶವಕ್ಕಾಗಿ ಹುಡುಕಾಟ

    ದಾವಣಗೆರೆ: ಈಜಲು ಹೋದ ಯುವಕ ನೀರುಪಾಲಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತಮಲೇಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ.

    21 ವರ್ಷದ ವೆಂಕಟೇಶ್ ನೀರು ಪಾಲಾದ ಯುವಕ. ಭಾನುವಾರ ವೆಂಕಟೇಶ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಗ್ರಾಮದ ಚೌಡೇಶ್ವರಿ ಕೆರೆಯಲ್ಲಿ ಈಜಲು ಹೋಗಿದ್ದನು. ಕೆರೆ ಮಧ್ಯ ಭಾಗಕ್ಕೆ ಹೋಗಿ ವಾಪಸ್ಸು ಬರಲಾಗದೇ ವೆಂಕಟೇಶ್ ನೀರಿನಲ್ಲಿ ಮುಳುಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕದ ದಳದ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಭಾನುವಾರ ರಾತ್ರಿ 10 ಗಂಟೆಯವರೆಗು ಶವಕ್ಕಾಗಿ ಹುಡುಕಾಟ ನಡೆಸಿದ್ದರು.

    ಇಂದು ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನಾ ಸ್ಥಳದಲ್ಲಿ ವೆಂಕಟೇಶ್ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿಯಲು ಬಂದ ಟ್ಯಾಂಕರ್ ಹಿಡಿದ ಗ್ರಾಮಸ್ಥರು

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿಯಲು ಬಂದ ಟ್ಯಾಂಕರ್ ಹಿಡಿದ ಗ್ರಾಮಸ್ಥರು

    ರಾಯಚೂರು: ಕಾರ್ಖಾನೆಗಳ ವಿಷಕಾರಿ ತ್ಯಾಜ್ಯವನ್ನು ಕೆರೆಗೆ ಸುರಿಯಲು ಬಂದಿದ್ದ ಟ್ಯಾಂಕರ್ ಅನ್ನು ಹಿಡಿದು ಗ್ರಾಮಸ್ಥರೇ ಪೊಲೀಸರಿಗೆ ಒಪ್ಪಿಸಿರುವ ಘಟನೆ ರಾಯಚೂರಿನ ಮನ್ಸಲಾಪುರದಲ್ಲಿ ನಡೆದಿದೆ.

    ಕಳೆದ ಒಂದು ವರ್ಷದಿಂದಲೂ ರಾಯಚೂರಿನ ಹೈದರಾಬಾದ್ ರಸ್ತೆಯಲ್ಲಿನ ಕೆಲ ಕಾರ್ಖಾನೆಗಳು ತಮ್ಮ ರಾಸಾಯನಿಕ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿವೆ. ಇದರಿಂದ ಕೆರೆ ನೀರು ವಿಷವಾಗುತ್ತಿದ್ದು ಮೀನುಗಳು ಸಾಯುತ್ತಿವೆ, ಗದ್ದೆಗಳು ಹಾಳಾಗುತ್ತಿದ್ದು ಸರಿಯಾಗಿ ಬೆಳೆ ಬರುತ್ತಿಲ್ಲ. ಮನುಷ್ಯರ ಮೇಲೂ ಈ ರಾಸಾಯನಿಕ ತ್ಯಾಜ್ಯ ಕೆಟ್ಟಪರಿಣಾಮ ಬೀರುತ್ತಿದೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ.

    ಕಳೆದ ರಾತ್ರಿ ತ್ಯಾಜ್ಯ ಸುರಿಯಲು ಬಂದ ವೇಳೆ ಟ್ಯಾಂಕರ್ ಅನ್ನು ಹಿಡಿದಿದ್ದು, ಚಾಲಕರಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ ಅಂತ ಗ್ರಾಮಸ್ಥರು ತಿಳಿಸಿದ್ದಾರೆ. ಕಳೆದ ವರ್ಷ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳು ಸತ್ತು ಹೋಗಿದ್ದವು. ಭತ್ತದ ಬೆಳೆ ಹಾಳಾಗಿತ್ತು. ಗದ್ದೆಯಲ್ಲಿ ಕೆಲಸ ಮಾಡುವ ರೈತರ ಕೈಗಳಿಗೆ ಬೊಬ್ಬೆಗಳು ಬರುತ್ತಿದ್ದವು. ಈಗ ಮತ್ತೆ ಮಳೆಗಾಲ ಬಂದಿರುವುದರಿಂದ ಕೆರೆ ಹಾಗೂ ಹಳ್ಳ ಇರುವ ಪ್ರದೇಶದಲ್ಲಿ ರಾಸಾಯನಿಕ ತ್ಯಾಜ್ಯ ಸುರಿಯಲು ಕಾರ್ಖಾನೆಗಳು ಮುಂದಾಗಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಘಟನೆ ಹಿನ್ನೆಲೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಆದರೆ ಈ ಟ್ಯಾಂಕರ್ ಯಾವ ಕಾರ್ಖಾನೆಗೆ ಸೇರಿದ್ದು ಎಂದು ಇನ್ನೂ ತಿಳಿದುಬಂದಿಲ್ಲ.

  • ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

    ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

    ಮಂಗಳೂರು: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಶರವೂರು ಎಂಬಲ್ಲಿ ನಡೆದಿದೆ.

    ಶರವೂರು ಸಮೀಪದ ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ 22 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಬುಧವಾರ ಬೆಳಿಗ್ಗೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕಡಬ ಪೊಲೀಸರಿಗೆ ಯುವತಿಯ ಮನೆಯವರು ದೂರು ನೀಡಿದ್ದಾರೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೆರೆಗೆ ಬಿತ್ತು ತಾಯಿಯ ಕಂಕುಳದಲ್ಲಿದ್ದ ಮೂರು ವರ್ಷದ ಕಂದಮ್ಮ

    ಕೆರೆಗೆ ಬಿತ್ತು ತಾಯಿಯ ಕಂಕುಳದಲ್ಲಿದ್ದ ಮೂರು ವರ್ಷದ ಕಂದಮ್ಮ

    -ಸಿನಿಮೀಯ ರೀತಿಯಲ್ಲಿ ಬದುಕುಳಿದ ಮಗು

    ಭೋಪಾಲ್: ತಾಯಿಯ ಕಂಕುಳದಲ್ಲಿದ್ದ ಮೂರು ವರ್ಷದ ಮಗು ಜಾರಿ ಕೆರೆಯ ಪಾಲಾಗಿದ್ದ ಕಂದಮ್ಮ ಸಿನಿಮೀಯ ರೀತಿಯಲ್ಲಿ ಬದುಕುಳಿದಿದೆ.

    ಶನಿವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ನಗರದ ವಿಐಪಿ ರಸ್ತೆಯ ರಾಜಾ ಬೋಜ ಪ್ರತಿಮೆ ಬಳಿ ಕಾಜೀ ಕ್ಯಾಂಪ್ ನಿವಾಸಿಯಾದ ಇರ್ಷಾದ್ ತನ್ನ ಪತ್ನಿ ಹಾಗೂ ಮಗು ಜೊತೆ ಬಂದಿದ್ದರು. ಪ್ರತಿಮೆ ವೀಕ್ಷಣೆ ವೇಳೆ ದಿಢೀರ್ ಅಂತಾ ಕಂಕುಳದಲ್ಲಿದ್ದ ಮಗು ಜಾರಿ ಕೆರೆಯಲ್ಲಿ ಬಿದ್ದಿದೆ. ಪತಿ-ಪತ್ನಿ ಮಗುವಿನ ರಕ್ಷಣೆಗೆ ಕೂಗುತ್ತಿದ್ದಂತೆ ದಡದಲ್ಲಿ ಐಸ್ ಕ್ರೀಂ ಮಾರುತ್ತಿದ್ದ ಹರಿಓಂ ವರ್ಮಾ, ಪೌರ ಕಾರ್ಮಿಕ ವಾಹನದ ಚಾಲಕ ಸೋಹೆಲ್ ಕೆರೆಗೆ ಧುಮುಕಿ ಮಗುವನ್ನು ರಕ್ಷಿಸಿದ್ದಾರೆ.

    ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಮಗುವನ್ನು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆಯ ಬಳಿಕ ಮಗು ಚೇತರಿಸಿಕೊಂಡಿದೆ.

  • ಪಾಳುಬಿದ್ದ ಕೆರೆಗೆ ಯುವಕರಿಂದ ಮರು ಜೀವ- ರೈತರ ಮೊಗದಲ್ಲಿ ಸಂತಸ

    ಪಾಳುಬಿದ್ದ ಕೆರೆಗೆ ಯುವಕರಿಂದ ಮರು ಜೀವ- ರೈತರ ಮೊಗದಲ್ಲಿ ಸಂತಸ

    – ಕೆರೆಗೆ ಬೇಕಿದೆ ತಡೆಗೋಡೆ

    ಮಡಿಕೇರಿ: ಹಲವು ವರ್ಷಗಳಿಂದ ಹೂಳುತುಂಬಿ ಪಾಳು ಬಿದ್ದಿದ್ದ ಅಭ್ಯತ್ ಮಂಗಲ ಸಾರ್ವಜನಿಕರ ಕೆರೆಯನ್ನು ನರೇಗಾ ಯೋಜನೆಯಡಿ ಯುವಕರ ತಂಡ ಪುನಶ್ಚೇತನಗೊಳಿಸಿದ್ದು, ಮರುಜೀವ ನೀಡಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‍ಮಂಗಲ ಗ್ರಾಮದ ಅತ್ತಿಮಂಗಲ ಕೆರೆ ಹಲವು ವರ್ಷಗಳಿಂದ ಹೂಳು ತುಂಬಿತ್ತು. ಕಸದ ಗಿಡಗಳು ಬೆಳೆದು ಪಾಳು ಬಿದ್ದಿತ್ತು. ಮಾತ್ರವಲ್ಲದೇ ಕೆಲವರು ರಾತ್ರಿ ವೇಳೆ ಕೋಳಿ ಮಾಂಸದ ತ್ಯಾಜ್ಯವನ್ನು ಕೆರೆಯ ಬದಿಯಲ್ಲಿ ಎಸೆಯುತ್ತಿದ್ದು, ದುರ್ವಾಸನೆಯಿಂದ ಕೂಡಿತ್ತು.

    ಇದನ್ನು ಅರಿತ ನೆಲ್ಯಹುದಿಕೇರಿಯ ಮುತ್ತಪ್ಪ ಯುವಕಲಾ ಸಂಘದ ಯುವಕರ ತಂಡ ಕೆರೆಯ ಪುನಶ್ಚೇತನಕ್ಕೆ ಮುಂದಾಗಿತ್ತು. ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ಕೆರೆಯ ಅಭಿವೃದ್ಧಿಗೆ ಅನುವು ಮಾಡಿಕೊಡಲಾಗಿದೆ. ಅತ್ತಿಮಂಗಲ ಸಮೀಪದ ಮುಖ್ಯ ರಸ್ತೆಯ ಬದಿಯಲ್ಲೇ ಇರುವ ಕೆರೆಯನ್ನು ಕಳೆದ ಒಂದು ತಿಂಗಳಿನಿಂದ ಸ್ವಚ್ಛಗೊಳಿಸಲಾಗಿದೆ. ಕೆರೆಯ ಸುತ್ತಲೂ ಇದ್ದ ಕುರಚಲು ಗಿಡ ಹಾಗೂ ಹುಲ್ಲನ್ನು ತೆರವುಗೊಳಿಸಿ, ಕೆರೆಯ ಹೂಳನ್ನು ತೆಗೆಯಲಾಗಿದೆ.

    ರಸ್ತೆಯ ಬದಿಯಲ್ಲಿನ ಕಸದ ತ್ಯಾಜ್ಯವನ್ನು ಸ್ವಚ್ಛಗೊಳಿಸಲಾಗಿದೆ. ಒಂದು ತಿಂಗಳಿನಿಂದ ಯುವಕರ ತಂಡ ಕೆರೆಯ ಅಭಿವೃದ್ಧಿಯಲ್ಲಿ ತೊಡಗಿದ್ದು, ಇದೀಗ ಕೆರೆಗೆ ಜೀವಕಳೆ ಬಂದಿದೆ. ಬೇಸಿಗೆಯಲ್ಲಿ ಗ್ರಾಮದ ಕೃಷಿಕರಿಗೆ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಕೆರೆ ಅಭಿವೃದ್ಧಿಯಿಂದಾಗಿ ಸ್ಥಳೀಯ ಕೃಷಿಕರಿಗೆ ಉಪಯೋಗವಾಗಲಿದೆ. ಸುಮಾರು ಒಂದು ಏಕರೆ ವಿಸ್ತೀರ್ಣದಲ್ಲಿರುವ ಕೆರೆ ಈ ಹಿಂದೆ ಸ್ಥಳೀಯ ಕೃಷಿಕರಿಗೆ ನೀರಿನ ಮುಖ್ಯ ಮೂಲವಾಗಿತ್ತು. ಬಳಿಕ ನೀರಿಲ್ಲದೇ ಪಾಳು ಬಿದ್ದಿದ್ದು, ಗದ್ದೆಗಳಿಗೆ ನೀರಿನ ಕೊರತೆ ಉಂಟಾಗುತ್ತಿದೆ. ಪಂಚಾಯಿತಿಯ 5 ಲಕ್ಷ ರೂ. ವೆಚ್ಚದಲ್ಲಿ ಕೆರೆಯನ್ನು ಅಭಿವೃದ್ಧಿಪಡಿಸಿದ್ದು, ಸುತ್ತಲಿನ ಜಾಗದಲ್ಲಿ ಹೂ ಗಿಡಗಳನ್ನು ನೆಟ್ಟು ಕೆರೆಯ ಅಂದ ಹೆಚ್ಚಿಸಲು ಸಹ ಯುವಕರು ಮುಂದಾಗಿದ್ದಾರೆ.

    ಮುಖ್ಯ ರಸ್ತೆಯ ತಿರುವಿನಲ್ಲಿ ಸಾರ್ವಜನಿಕ ಕೆರೆ ಇದ್ದು, ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಕೆರೆಯ ಸುತ್ತಲೂ ಕಬ್ಬಿಣದ ಬೇಲಿ ಹಾಗೂ ಬಕೆರೆಯ ಎರಡೂ ಬದಿ ತಿರುವು ಹಾಗೂ ಇಳಿಜಾರು ಇರುವುದರಿಂದ ಕೆರೆಗೆ ಅಡ್ಡಲಾಗಿ ಕಬ್ಬಿಣದ ತಡೆಗೋಡೆ ಅಳವಡಿಸಬೇಕು ಎಂದು ಸ್ಥಳೀಯರು ಸಲಹೆ ನೀಡಿದ್ದಾರೆ.

  • ಜಲಸಮಾಧಿ- ಮಂಡ್ಯದ ಏಳು ಜನರಿಗೆ ಒಟ್ಟು 22 ಲಕ್ಷ ಸಿಎಂ ಪರಿಹಾರ

    ಜಲಸಮಾಧಿ- ಮಂಡ್ಯದ ಏಳು ಜನರಿಗೆ ಒಟ್ಟು 22 ಲಕ್ಷ ಸಿಎಂ ಪರಿಹಾರ

    ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜಲಸಮಾಧಿಯಾದ 7 ಮಂದಿಗೆ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಯಿಂದ ಒಟ್ಟು 22 ಲಕ್ಷ ರೂ. ಪರಿಹಾರ ಒದಗಿಸಲು ಸೂಚಿಸಿದ್ದಾರೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ 7 ಮಂದಿಗೆ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಯಿಂದ ಒಟ್ಟು 22 ಲಕ್ಷ ರೂ. ಪರಿಹಾರ ಒದಗಿಸಲು ಸೂಚಿಸಿದ್ದಾರೆ.

    ನಾಗಮಂಗಲ ತಾಲೂಕು ಬೀರನಹಳ್ಳಿಯ ಶ್ರೀಮತಿ ಗೀತಾ, ಸವಿತಾ ಹಾಗೂ ಸೌಮ್ಯ ಅವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಇದೇ ತಾಲೂಕಿನ ಚೋಳಸಂದ್ರದ ರಶ್ಮಿ ಮತ್ತು ಇಂಚರಾ, ಕೆ.ಆರ್.ಪೇಟೆ ತಾಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

    ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿಯ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೀರು ಪಾಲಾಗಿದ್ದರು. ಬೀರನಹಳ್ಳಿಯ ಗೀತಾ(40), ಮಕ್ಕಳಾದ ಸವಿತಾ(19) ಹಾಗೂ ಸೌಮ್ಯ(14) ಮೃತ ದುರ್ದೈವಿಗಳು. ಕೆರೆ ಬಳಿ ಭಾನುವಾರ ಯಾರೂ ಇಲ್ಲದೇ ಇದ್ದಾಗ ಈ ಘಟನೆ ನಡೆದಿದೆ. ಬಟ್ಟೆ ತೊಳೆಯಲು ಹೋಗಿದ್ದ ಮೂವರಲ್ಲಿ ಒಬ್ಬರು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಅವರನ್ನು ಕಾಪಾಡಲು ಹೋಗಿ ಮತ್ತಿಬ್ಬರ ಸಾವನ್ನಪ್ಪಿದ್ದರು.

  • ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿ ತಾಯಿ, ಮಕ್ಕಳು ನೀರು ಪಾಲು

    ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿ ತಾಯಿ, ಮಕ್ಕಳು ನೀರು ಪಾಲು

    ಮಂಡ್ಯ: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೀರು ಪಾಲಾದ ಘಟನೆ ನಾಗಮಂಗಲ ತಾಲೂಕಿನ ಬೀರನಹಳ್ಳಿಯಲ್ಲಿ ನಡೆದಿದೆ.

    ಬೀರನಹಳ್ಳಿಯ ಗೀತಾ(40), ಮಕ್ಕಳಾದ ಸವಿತಾ(19) ಹಾಗೂ ಸೌಮ್ಯ(14) ಮೃತ ದುರ್ದೈವಿಗಳು. ಕೆರೆ ಬಳಿ ಇಂದು ಯಾರೂ ಇಲ್ಲದೆ ಇದ್ದಾಗ ಘಟನೆ ನಡೆದಿದೆ. ಬಟ್ಟೆ ತೊಳೆಯಲು ಹೋಗಿದ್ದ ಮೂವರಲ್ಲಿ ಒಬ್ಬರು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಅವರನ್ನು ಕಾಪಾಡಲು ಹೋಗಿ ಮತ್ತಿಬ್ಬರು ದಾರುಣ ಸಾವು ಕಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

    ಕೆರೆಯಲ್ಲಿ ತೇಲುತ್ತಿದ್ದ ಬಿಂದಿಗೆ, ದಡದಲ್ಲಿದ್ದ ಬಟ್ಟೆ ನೋಡಿ ಕರೆಯಲ್ಲಿ ಯಾರೋ ಜಾರಿ ಬಿದ್ದಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದರು. ಗ್ರಾಮಸ್ಥರ ಪರಿಶೀಲನೆ ನಡೆಸಿದಾಗ ವೇಳೆ ಮೂವರ ಮೃತಪಟ್ಟಿರುವ ದೃಢವಾಗಿದೆ. ಬಳಿಕ ಮೃತದೇಹಗಳನ್ನ ಕೆರೆಯಿಂದ ಹೊರ ತೆಗೆಯಲಾಗಿದೆ.

    ಮಹಿಳೆ ಹಾಗೂ ಮಕ್ಕಳ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • 8 ವರ್ಷಗಳೇ ಕಳೆದ್ರೂ ಈಡೇರಲಿಲ್ಲ ಕನಸು- ಲಾಕ್‍ಡೌನ್ ವೇಳೆ ಮಾದರಿಯಾದ ಅನ್ನದಾತರು!

    8 ವರ್ಷಗಳೇ ಕಳೆದ್ರೂ ಈಡೇರಲಿಲ್ಲ ಕನಸು- ಲಾಕ್‍ಡೌನ್ ವೇಳೆ ಮಾದರಿಯಾದ ಅನ್ನದಾತರು!

    ಧಾರವಾಡ: ಮನಸ್ಸಿದ್ದರೆ ಮಾರ್ಗ ಅಂತಾರೆ. ಜನ ಮನಸ್ಸು ಮಾಡಿದ್ರೆ ಏನೆಲ್ಲಾ ಮಾಡಬಹುದು ಅನ್ನೋದಕ್ಕೆ ಇಲ್ಲಿಯ ಜನರೇ ಸಾಕ್ಷಿ. ಕಳೆದ 8 ವರ್ಷಗಳಿಂದ ಸರ್ಕಾರದ ಎದುರು ಮಂಡಿಯೂರಿ ಕೇಳಿದ್ರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಇದೀಗ ತಾವೇ ಮುಂದೆ ನಿಂತು ಆ ಕೆಲಸ ಮಾಡಿ ಸಾಧಿಸಿದ್ದಾರೆ.

    ಹೌದು. ಇದು ಧಾರವಾಡ ಹೊರವಲಯದ ಲಕಮನಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಲಿನ ಜನರ ಶ್ರಮಾದಾನದ ಕಥೆ. ಕೆರೆ ನಿರ್ಮಾಣಕ್ಕೆ 8 ವರ್ಷಗಳಿಂದ ಮನವಿ ಮಾಡಿದ್ರೂ ಅಧಿಕಾರಿಗಳು, ಜನಪ್ರತಿನಿಧಿಗಳು ಡೋಂಟ್‍ಕೇರ್ ಎಂದಿದ್ದರು. ಇದೇ ವೇಳೆ ಕೊರೊನಾದಿಂದಾಗಿ ಲಾಕ್‍ಡೌನ್ ಘೋಷಣೆಯಾಯ್ತು. ಇದನ್ನೇ ಜನ ಉಪಯೋಗಿಸಿ ಮಾದರಿಯಾಗಿದ್ದಾರೆ. ಲಾಕ್‍ಡೌನ್ ವೇಳೆ ಶಾಖಾಂಬರಿ ನಗರ, ನಂದಿನಿಲೇಔಟ್ ಹಾಗೂ ಗುರುದೇವ ನಗರದ ಜನ ನಾವೇ ಯಾಕೆ ಕೆರೆ ನಿರ್ಮಾಣ ಮಾಡಬಾರದು ಅಂತ ಮನಸ್ಸು ಮಾಡಿದರು. ಸುಮಾರು 3.5 ಲಕ್ಷ ರೂ.ಗಳನ್ನು ಬಡಾವಣೆ ಜನರಿಂದ ಸಂಗ್ರಹಿಸಿ ಕೆಲವರು ಹಣದ ಜೊತೆ ಶ್ರಮಾದಾನ ಮಾಡಿದ್ರೆ, ಕೆಲವರು ಹಣ ಕೊಟ್ಟು ಸಹಕರಿಸಿದ್ರು.

    ಈ ಹಿಂದೆ ಈ ಜಾಗವನ್ನ ರಿಯಲ್ ಎಸ್ಟೆಟ್ ಮಾಡೋರು ಒತ್ತುವರಿ ಮಾಡಿಕೊಂಡು ಫ್ಲ್ಯಾಟ್ ಮಾಡಲು ಮುಂದಾಗಿದ್ದರು. ಆದರೆ ಇಲ್ಲಿಯ ಜನರು ಅವರಿಂದ ಈ ಕೆರೆಯನ್ನ ಉಳಿಸುವಲ್ಲಿ ಕೂಡ ಸಫಲರಾದ್ರು. ಅಲ್ಲದೇ ಬಡಾವಣೆಯ ಪ್ರತಿಯೊಬ್ಬರೂ ಸೇರಿ ಕೆರೆ ಪಕ್ಕದಲ್ಲಿ ಅರಣ್ಯ ಇಲಾಖೆಯಿಂದ ಸಸಿಗಳನ್ನು ತಂದು ನೆಟ್ಟಿದ್ದಾರೆ. ಕೆರೆ ಏರಿ ಮೇಲೆ ಹಿರಿಯ ನಾಗರಿಕರು ಕೂರುವುದಕ್ಕೆ ಬೆಂಚ್ ನಿರ್ಮಾಣ ಮಾಡಿದ್ದಾರೆ.

    ಕೆರೆ ಒತ್ತುವರಿ ಮಾಡಿದವರನ್ನ ಬಿಡಿಸಿ ಒಂದು ಕರೆ ನಿರ್ಮಾಣ ಮಾಡಲು ಲಾಕ್‍ಡೌನ್ ಕೂಡಾ ಕಾರಣವಾಯ್ತು. ಅಲ್ಲದೇ ಈ ಬಡಾವಣೆಯ ಜನರ ಹಲವು ದಿನಗಳ ಕನಸು ನನಸು ಆಗಲು ಕೂಡ ಕಾರಣ ಆಯ್ತು.