Tag: Lakhan

  • ಅಣ್ಣನ ವಿರುದ್ಧ ಡ್ಯಾನ್ಸ್ ವಿಡಿಯೋ ಬಿಟ್ಟ ಸತೀಶ್

    ಅಣ್ಣನ ವಿರುದ್ಧ ಡ್ಯಾನ್ಸ್ ವಿಡಿಯೋ ಬಿಟ್ಟ ಸತೀಶ್

    ಬೆಳಗಾವಿ: ಡಿಸೆಂಬರ್ 5ರಂದು ನಡೆಯಲಿರುವ ಗೋಕಾಕ್ ಕ್ಷೇತ್ರದ ಉಪಚುನಾವಣೆಯಲ್ಲಿ ಅಣ್ಣ-ತಮ್ಮಂದಿರ ಕಾಳಗ ಜೋರಾಗಿದೆ. ಅಣ್ಣನ ವಿರುದ್ಧ `ವಿಡಿಯೋ’ ಬಿಟ್ಟು ತಮ್ಮ ಚಮಕ್ ಕೊಟ್ಟಿದ್ದಾರೆ. ಡ್ಯಾನ್ಸ್ ವೀಡಿಯೋ ಮೂಲಕ ರಮೇಶ್ ಜಾರಕಿಹೊಳಿಗೆ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

    ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ಸ್ಪರ್ಧಿಸಿದ್ರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಕಣದಲ್ಲಿದ್ದಾರೆ. ಹೀಗಾಗಿ ಅಣ್ಣ-ತಮ್ಮಂದಿರು ಮಾತಿನ ಏಟು-ಎದರೇಟು ನೀಡುತ್ತಿದ್ದರು. ಈ ಮಧ್ಯೆ ಸತೀಶ್, ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿ ವಿಭಿನ್ನವಾಗಿ ಅಣಕಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

    `ಬಾಲಾ ಬಾಲಾ’ ಹಾಡಿಗೆ ಮೀಮ್ಸ್ ಡ್ಯಾನ್ಸ್ ವೈರಲ್ ಮಾಡಿದ್ದಾರೆ. ಹೀಗೆ ಹೊಸದಾಗಿ ಮಿಮ್ಸ್ ಮಾಡಿ ರಮೇಶ್ ಜಾರಕಿಹೊಳಿ ತಾಳಕ್ಕೆ ಯಾವ ರೀತಿ ಕುಣಿಯಬೇಕೆಂದು ಸತೀಶ್ ಹೇಳಿದ್ದಾರೆ. ಇತ್ತಿಚೇಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಾಡಿಗೆ ರಮೇಶ್ ಕಾರ್ಯವೈಖರಿಯನ್ನು ಹೋಲಿಕೆ ಮಾಡಲಾಗಿದೆ.

    “ಲಖನ್ ನನಗೆ ಮೋಸ ಮಾಡಿದ ಬೆನ್ನಿಗೆ ಚೂರಿ ಹಾಕಿದ ಎಂಬ ರಮೇಶ್ ಮಾತಿಗೆ ತಿರುಗೇಟು ನೀಡಲಾಗಿದೆ. ಲಖನ್ ಬಿಜೆಪಿಯಲ್ಲಿದ್ದು ಕಾಂಗ್ರೆಸ್ಸಿಗೆ ಬಂದಿದ್ದರೆ ಮೋಸ ಅನ್ನಬಹದು. ಲಖನ್ ಜಾರಕಿಹೊಳಿ ಬೆನ್ನಿಗೆ ಚೂರಿ ಹಾಕಿಲ್ಲ. ರಮೇಶ್ ಜಾರಕಿಹೊಳಿ ಹೇಳಿದಂತೆ ಕುಣಿಯಬೇಕು. ಅಂದಾಗ ಮಾತ್ರ ಆತ ಒಳ್ಳೆಯವ ಮತ್ತು ಪ್ರಶಂಸೆಗೆ ಒಳಗಾಗುತ್ತಾನೆ. ರಮೇಶ್ ಗೆ ವಿರೋಧ ಮಾಡಿದರೆ ಯಾವುದೋ ಒಂದು ಹಣೆ ಪಟ್ಟಿ ಕಟ್ಟುತ್ತಾನೆ. ರಮೇಶ್ ಜಾರಕಿಹೊಳಿ ಹೇಳಿದಂತೆ ಕುಣಿಯಬೇಕು. ಯಾವ ರೀತಿ ಕುಣಿಯಬೇಕು ಅಂದ್ರೆ ಈ ಚಿತ್ರದ ರೀತಿ”. ಹೀಗೆ ರಮೇಶ್ ವಿರುದ್ಧ ವಾಗ್ದಾಳಿ ನಡೆಸಿ ಆ ನಂತರ ಮಿಮ್ಸ್ ಗೆ ಲಿಂಕ್ ಮಾಡಲಾಗಿದೆ. ಈ ಮಿಮ್ಸ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

  • ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

    ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

    ಬೆಳಗಾವಿ: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಇಂದು ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

    ಸೋದರರಿಬ್ಬರು ಕಣಕ್ಕೆ ಇಳಿದಿರೋದರಿಂದ ಗೋಕಾಕ್ ಕ್ಷೇತ್ರ ಹೈವೋಲ್ಟೇಜ್ ಕಣವಾಗಿದೆ. ಇಂದು ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್‍ನಿಂದ ಲಖನ್ ಜಾರಕಿಹೊಳಿ ಮತ್ತು ಜೆಡಿಎಸ್ ನಿಂದ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ. ಸೋದರ ಲಖನ್ ಜಾರಕಿಹೊಳಿ ಜೊತೆ ಬಂದ ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

    ಒಂದು ವೇಳೆ ಲಖನ್ ಜಾರಕಿಹೊಳಿ ನಾಮಪತ್ರ ತಿರಸ್ಕøತವಾದ್ರೆ, ಸತೀಶ್ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ತಂತ್ರ ರಚಿಸಿಕೊಂಡಿದೆ ಎನ್ನಲಾಗುತ್ತಿದೆ. ಇತ್ತ ಮೂವರ ಅಭ್ಯರ್ಥಿಗಳ ಹೆಸರಿನ ಕೊನೆಗೆ ‘ಜಾರಕಿಹೊಳಿ’ ಎಂದು ಇರೋದರಿಂದ ಮತದಾರರು ಗೊಂದಲಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಸಹೋದರ ಲಖನ್ ಜೊತೆ ಸತೀಶ್ ಅವರು ನಾಮಪತ್ರ ಸಲ್ಲಿಕೆ ಮಾಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಮಂಡ್ಯ ಲೋಕಸಭಾ ಅಖಾಡದಲ್ಲಿ ಒಂದೇ ಹೆಸರಿನ ನಾಲ್ವರು ಅಭ್ಯರ್ಥಿಗಳು

  • ಯಮಕನಮರಡಿಯಿಂದಲೇ ಸ್ಪರ್ಧಿಸಿ ಸತೀಶ್ ತಾಕತ್ತು ನೋಡುತ್ತೇನೆ – ಜಾರಕಿಹೊಳಿ ಸವಾಲು

    ಯಮಕನಮರಡಿಯಿಂದಲೇ ಸ್ಪರ್ಧಿಸಿ ಸತೀಶ್ ತಾಕತ್ತು ನೋಡುತ್ತೇನೆ – ಜಾರಕಿಹೊಳಿ ಸವಾಲು

    ಬಾಗಲಕೋಟೆ: ನಾನು ಯಮಕನಮರಡಿ ಕ್ಷೇತ್ರದಿಂದ ಸ್ಪರ್ಧಿಸಿ ಸತೀಶ್ ತಾಕತ್ತನ್ನು ನೋಡುತ್ತೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸಹೋದರನಿಗೆ ಸವಾಲು ಹಾಕಿದ್ದಾರೆ.

    ಜಿಲ್ಲೆಯ ಗೋಕಾಕ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿಯನ್ನು ಇಂದು ಭೇಟಿ ಮಾಡುತ್ತೇನೆ. ಯಮಕನಮರಡಿಯಿಂದ ಸ್ಪರ್ಧೆ ಮಾಡದಂತೆ ಹಿರಿಯ ಅಣ್ಣನಾಗಿ ನಾನು ಲಖನ್‍ಗೆ ತಿಳಿ ಹೇಳುತ್ತೇನೆ. ಲಖನ್ ನಿಲುವು ಏನೆಂದು ನನಗೆ ತಿಳಿಯುತ್ತಿಲ್ಲ, ಒಂದೇ ರಾತ್ರಿ ಯಾವ ಜಾದು ಆಯ್ತು ಗೊತ್ತಿಲ್ಲ. ಆದರೆ ಲಖನ್ ಬದಲಾಗಿದ್ದಾನೆ. ಇಂದಿಗೂ ಲಖನ್ ಮೇಲೆ ನನಗೆ ಪ್ರೀತಿ ಇದೆ ಎಂದು ರಮೇಶ್ ಜಾರಕಿಹೊಳಿ ತಮ್ಮನ ಮೇಲೆ ಪ್ರೀತಿ ತೋರಿಸಿದ್ದಾರೆ.

    ನಮ್ಮ ಮೇಲೆ ಯಾವುದೇ ಹಗರಣ ಇಲ್ಲ ಹೀಗಾಗಿ ಅಳಿಯಂದಿರ ಮೇಲೆ ಲಖನ್ ವಾಗ್ದಾಳಿ ಮಾಡುತ್ತಿದ್ದಾರೆ. ಲಖನ್ ಇವತ್ತಿಗೂ ನನ್ನ ಪ್ರೀತಿಯ ತಮ್ಮ. ಹೀಗಾಗಿ ಈ ಚುನಾವಣೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲಿ ಎಂದು ಹೇಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಗೋಕಾಕ್‍ನಲ್ಲಿ ನಿಲ್ಲಲಿ ನಾನೇ ಗೆಲ್ಲಿಸುತ್ತೇನೆ. ಈ ಉಪಚುನಾವಣೆಯಲ್ಲಿ ಲಖನ್ ಸುಮ್ಮನೆ ಇರಲಿ. ಮುಂದಿನ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರ ಬಿಟ್ಟು ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಇದೇ ವೇಳೆ ಸ್ಪಷ್ಟಪಡಿಸಿದರು.

    ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ವಿಶ್ವಾಸ ಇದ್ದು ಕ್ಷೇತ್ರದ ಜನರಿಗೆ ಸ್ವಲ್ಪ ಆತಂಕವಾಗಿದೆ ಅಷ್ಟೇ. ಹೀಗಾಗಿ ಸಭೆ ನಡೆಸುತ್ತಿದ್ದೇನೆ. ತುಘಲಕ್ ರಮೇಶ್ ಕುಮಾರ್ ವಾದದ ಪ್ರಕಾರ ನಾವು ಚುನಾವಣೆಗೆ ನಿಲ್ಲಲು ಬರುವುದಿಲ್ಲ. ಫೆಬ್ರವರಿಯಲ್ಲಿ ವಿಪ್ ಕೊಟ್ಟಿದ್ದಕ್ಕೆ ನಾನು ಅಧಿವೇಶನಕ್ಕೆ ಹಾಜರಾಗಿದ್ದೇನೆ. ಆ ವಿಪ್ ಅಂದಿಗೆ ಮುಕ್ತಾಯವಾಗಿದೆ. ಮಗಳ ಮದುವೆಗೆ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದರು. ಆ ನಂತರ ವಿಪ್ ಉಲ್ಲಂಘನೆ ಮಾಡಿದ್ದಾರೆ ಎಂದು ತಿರುಚಿದ್ದಾರೆ. ಪ್ರಧಾನಿ ಮೋದಿ ಇದ್ದ ಬ್ಯಾನರ್‍ನಲ್ಲಿ ನನ್ನ ಫೋಟೊ ಸೇರಿಸಿ ಕುತಂತ್ರದಿಂದ ಹಲವು ಸಾಕ್ಷಿ ಸಿದ್ಧಪಡಿಸಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಿದ್ದರಾಮಯ್ಯನವರ ಏಜೆಂಟರಂತೆ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.