Tag: lakhimpur

  • ಬಿಜೆಪಿ ರೈತರನ್ನು ಬೆಂಬಲಿಸಲಿಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

    ಬಿಜೆಪಿ ರೈತರನ್ನು ಬೆಂಬಲಿಸಲಿಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

    ನವದೆಹಲಿ: ಬಿಜೆಪಿ ಸರ್ಕಾರ ರೈತರೊಂದಿಗೆ ನಿಲ್ಲುವ ಬದಲು ಲಖಿಂಪುರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರಿಗೆ ಬೆಂಬಲ ನೀಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದರು.

    ಈ ಬಗ್ಗೆ ಮಾತನಾಡಿ ಲಖಿಂಪುರ ಹತ್ಯಾಕಾಂಡಕ್ಕೆ ಅಜಯ್ ಮಿಶ್ರಾ ಅವರ ಭಾಷಣವೇ ಕಾರಣವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಉನ್ನತ ಹುದ್ದೆಯಲ್ಲಿದ್ದ ಅಧಿಕಾರಿಗಳು ಬೇಜವಾಬ್ದಾರಿಯ ಹೇಳಿಕೆಗಳನ್ನು ನೀಡಬಾರದು. ಸಚಿವರು ಅವರ ಸ್ಥಾನಮಾನಕ್ಕೆ ಹಾಗೂ ಇಲಾಖೆಗೆ ಘನತೆ ತರುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

    ಲಖಿಂಪುರಂನ ನ್ಯಾಯಕ್ಕಾಗಿ ಹೋರಾಟ ಮುಂದುವರಿದಿದೆ. ಸಂತ್ರಸ್ತ ರೈತರ ಕುಟುಂಬದ ಜೊತೆಗೆ ನಾವಿದ್ದೇವೆ. ನ್ಯಾಯಕ್ಕಾಗಿ ಹೋರಾಟ ನಡೆಡಸುತ್ತೇವೆ ಎಂದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದು ಆಪ್ತರ ಮೇಲೆ ಅನುಮಾನ ಪಟ್ಟಿದ್ದಾರಾ ಡಿಕೆಶಿ?

    ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು. ತಮ್ಮ ಸ್ಥಾನಮಾನ ಹಾಗೂ ಹುದ್ದೆಯ ಘನತೆಗೆ ತಕ್ಕ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಹೇಳಿತ್ತು.

    ಲಖಿಂಪುರ ಖೇರಿ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‍ನ ಲಖನೌ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು. ಅಲ್ಲದೆ, ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪ್ರಿಯಾಂಕಾ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಣ್ಣಮ್ಮ ದೇವಿ ಮೆರವಣಿಯಲ್ಲಿ ಹಿಂದೂ, ಮುಸ್ಲಿಂ ಮುಖಂಡರ ಭರ್ಜರಿ ಡಾನ್ಸ್

  • ಕಾಶ್ಮೀರ್‌ ಫೈಲ್ಸ್‌ನಂತೆ ಲಖಿಂಪುರ್‌ ಫೈಲ್ಸ್‌ನ್ನು ಯಾಕೆ ಮಾಡ್ಬಾರ್ದು: ಅಖಿಲೇಶ್ ಯಾದವ್ ಪ್ರಶ್ನೆ

    ಕಾಶ್ಮೀರ್‌ ಫೈಲ್ಸ್‌ನಂತೆ ಲಖಿಂಪುರ್‌ ಫೈಲ್ಸ್‌ನ್ನು ಯಾಕೆ ಮಾಡ್ಬಾರ್ದು: ಅಖಿಲೇಶ್ ಯಾದವ್ ಪ್ರಶ್ನೆ

    ಲಕ್ನೋ: ಕಾಶ್ಮೀರದ ಕುರಿತಾದ ಸಿನೆಮಾ ದಿ ಕಾಶ್ಮೀರ್‌ ಫೈಲ್ಸ್‌ನ್ನು ಮಾಡಬಹುದಾದರೆ, ಲಖಿಂಪುರ್‌ ಫೈಲ್ಸ್‌ನ್ನು ಮಾಡಬಾರದು ಎಂದು ಸಮಾಜವಾದಿ ಪಕ್ಷದ(ಎಸ್‍ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಡೆದ ಹಿಂಸಾಚಾರದ ಕುರಿತು ಸಿನಿಮಾ ಮಾಡಬಹುದಾದರೇ, ಲಖಿಂಪುರದಲ್ಲಿ ಪ್ರತಿಭಟನಾನಿರತ ರೈತರ ಗುಂಪಿನ ಮೇಲೆ ಜೀಪ್ ಹರಿಸಿದ ಘಟನೆ ಮೇಲೆ ಲಖಿಂಪುರ ಫೈಲ್ಸ್‌ಗಳನ್ನು ಏಕೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

    ಕಳೆದ ವರ್ಷ ಅಕ್ಟೋಬರ್ 3ರಂದು, ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ರೈತರ ಮೇಲೆ ಕೇಂದ್ರ ಸಚಿವರೊಬ್ಬರ ಪುತ್ರನ ಜೀಪ್ ಹರಿಸಿದ್ದರು. ಇದರಿಂದಾಗಿ ಲಖಿಂಪುರದಲ್ಲಿ ಹಿಂಸಾಚಾರ ಅಧಿಕವಾಗಿತ್ತು. ಈ ಘಟನೆಯಲ್ಲಿ ನಾಲ್ವರು ರೈತರು ಹಾಗೂ ಪತ್ರಕರ್ತರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ – ಆದಿತ್ಯ ರಾವ್‍ಗೆ 20 ವರ್ಷ ಜೈಲು ಶಿಕ್ಷೆ

    ರಾಜ್ಯದಲ್ಲಿ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಚುನಾವಣೆಯ ಕುರಿತು ಪ್ರತಿಕ್ರಿಯಿಸಿದ ಅವರು, ಮತದಾರರ ಬೆಂಬಲದಿಂದ ಸಮಾಜವಾದಿ ಪಕ್ಷದ ಶೇಕಡಾವಾರು ಮತಗಳು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.

    ನಮಗೆ ನೈತಿಕ ಜಯ ಸಿಕ್ಕಿದೆ. ಭವಿಷ್ಯದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆ ಆಗಲಿದೆ. ಬಿಜೆಪಿಯ ಜಯದ ಹಾದಿಯಲ್ಲಿ ಇನ್ನೂ ಮೂಲಭೂತ ಸಮಸ್ಯೆಗಳಿವೆ. ಯುವಜನರಲ್ಲಿ ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಹೆಚ್ಚುತ್ತಿದೆ. ಅದನ್ನು ರಾಜ್ಯದಲ್ಲಿ ಆಡಳಿತ ಪಕ್ಷವು ಇನ್ನೂ ಪರಿಹರಿಸಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ 47ನೇ ಜನ್ಮದಿನ – ಸಮಾಧಿ ಬಳಿ ಕೇಕ್ ಕತ್ತರಿಸಿದ ದೊಡ್ಮನೆ ಕುಟುಂಬ

    ಉತ್ತರಪ್ರದೇಶ ಚುನಾವಣೆಯಲ್ಲಿ 403 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 255 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‍ಪಿ ಪಕ್ಷ 111 ಸ್ಥಾನಗಳನ್ನು ಪಡೆದುಕೊಂಡಿದೆ.

  • ದೇಶಾದ್ಯಂತ ಸುದ್ದಿಯಾಗಿದ್ದ ಹತ್ರಾಸ್‌, ಲಖೀಂಪುರದಲ್ಲಿ ಬಿಜೆಪಿಗೆ ಮುನ್ನಡೆ

    ದೇಶಾದ್ಯಂತ ಸುದ್ದಿಯಾಗಿದ್ದ ಹತ್ರಾಸ್‌, ಲಖೀಂಪುರದಲ್ಲಿ ಬಿಜೆಪಿಗೆ ಮುನ್ನಡೆ

    ಲಕ್ನೋ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶ ಹತ್ರಾಸ್‌ ಮತ್ತು ಲಖೀಂಪುರ ಜಿಲ್ಲೆಯ ಎಲ್ಲ ಕೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.

    ಗ್ಯಾಂಗ್‌ ರೇಪ್‌ ಪ್ರಕರಣದಿಂದ ಹತ್ರಾಸ್‌, ಕೃಷಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾಚಾರ ಪ್ರಕರಣದಿಂದ ಲಂಖೀಂಪುರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರ ಮತ್ತು ಬಿಜೆಪಿಗೆ ಈ ಪ್ರಕರಣದಿಂದ ಮುಜುಗರವಾಗಿತ್ತು. ಇದನ್ನೂ ಓದಿ: ಉತ್ತರ ಪ್ರದೇಶ ಅಂಚೆ ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ

    ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ಈ ವಿಷಯಗಳು ಚರ್ಚೆ ಆಗಿತ್ತು. ಈ ಎರಡು ಪ್ರಕರಣಗಳಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿತ್ತು. ಆದರೆ ಆರಂಭದ ಮುನ್ನಡೆ ಗಮನಿಸಿದಾಗ ಈ ಚುನಾವಣೆಯಲ್ಲಿ ಮತದಾರ ಈ ವಿಚಾರವನ್ನು ಪರಿಗಣಿಸದೇ ಮತ ಮಾಡಿರುವುದು ಸ್ಪಷ್ಟವಾಗುತ್ತದೆ.

    ಬೆಳಗ್ಗೆ 10 ಗಂಟೆಯ ಟ್ರೆಂಡ್‌ ಪ್ರಕಾರ ಬಿಜೆಪಿ 270, ಎಸ್‌ಪಿ 106, ಬಿಸ್‌ಪಿ 3, ಕಾಂಗ್ರೆಸ್‌ 4, ಇತರರು 5 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇದನ್ನೂ ಓದಿ: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ- ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅದೃಷ್ಟ?

    ಒಟ್ಟು 403 ಕ್ಷೇತ್ರಗಳ ಪೈಕಿ ಬಹುಮತಕ್ಕೆ 203 ಸ್ಥಾನಗಳ ಅಗತ್ಯವಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 312, ಬಿಎಸ್‌ಪಿ 19, ಎಸ್‌ಪಿ+ಕಾಂಗ್ರೆಸ್ 54, ಇತರರು 18 ಸ್ಥಾನವನ್ನು ಗೆದ್ದಿದ್ದರು.

  • ಒಬ್ಬ ಕ್ರಿಮಿನಲ್‍ನ ರಕ್ಷಿಸುತ್ತಿದ್ದೀರಾ – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ

    ಒಬ್ಬ ಕ್ರಿಮಿನಲ್‍ನ ರಕ್ಷಿಸುತ್ತಿದ್ದೀರಾ – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ

    ಲಕ್ನೋ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾರನ್ನು ವಜಾಗೊಳಿಸದ ಕಾರಣ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ಅವರು, ಸರ್ಕಾರ ಅಜಯ್ ಮಿಶ್ರಾ ಟೆನಿ ಅವರನ್ನು ವಜಾಗೊಳಿಸಲು ನಿರಾಕರಿಸಿರುವುದು ಅದರ ನೈತಿಕ ದಿವಾಳಿತನವನ್ನು ಸ್ಪಷ್ಟವಾಗಿ ತೋರಿಸುತ್ತದೆ. ನರೇಂದ್ರ ಮೋದಿ ಅವರೇ ಧರ್ಮನಿಷ್ಠೆಯ ಕನ್ನಡಕ ಮತ್ತು ಧಾರ್ಮಿಕ ಉಡುಪನ್ನು ಧರಿಸುವುದರಿಂದ ನೀವು ಒಬ್ಬ ಅಪರಾಧಿಯನ್ನು ರಕ್ಷಿಸುತ್ತಿದ್ದೀರಾ ಎಂಬ ಸತ್ಯ ಎಂದಿಗೂ ಬದಲಾಗುವುದಿಲ್ಲ. ಅಜಯ್ ಮಿಶ್ರಾ ಟೆನಿ ಅವರನ್ನು ವಜಾಗೊಳಿಸಬೇಕು ಮತ್ತು ಕಾನೂನಿನ ಪ್ರಕಾರ ಆರೋಪಿ ಎಂದು ಗುರುತಿಸಬೇಕೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆದ್ದಾರಿಯಲ್ಲೇ ಹೊತ್ತಿ ಉರಿದ 22 ಮಂದಿ ಪ್ರಯಾಣಿಕರಿದ್ದ ಬಸ್!

    ಲಖಿಂಪುರ ಖೇರಿ ಘಟನೆ ಕುರಿತಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‍ಐಟಿ) ಪ್ರತಿಭಟನಾ ರೈತರ ಹತ್ಯೆಗೆ ಯೋಜಿತ ಸಂಚು ನಡೆದಿದೆ ಎಂದು ತಿಳಿಸಿದ ನಂತರ ಅಜಯ್ ಮಿಶ್ರಾ ಟೆನಿ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ತೆಗೆದುಹಾಕುವ ಒತ್ತಾಯಿಸಲಾಯಿತು. ಅಜಯ್ ಮಿಶ್ರಾ ಪುತ್ರ ಆಶಿಶ್ ಲಖಿಂಪುರ ಖೇರಿ ಪ್ರಕರಣದ ಆರೋಪಿಯಾಗಿದ್ದಾನೆ.

    ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಭೇಟಿ ಮಾಡಲು ಅಜಯ್ ಮಿಶ್ರಾ ಅವರು ತೆರಳಿದ್ದರು. ಈ ವೇಳೆ ಮೂರು ಕೃಷಿ ಕಾನೂನು ಕಾಯ್ದೆಯನ್ನು ವಿರೋಧಿಸಿ ರೈತರು ಕೇಶವ್ ಪ್ರಸಾದ್ ಮೌರ್ಯ ಮತ್ತು ಅಜಯ್ ಮಿಶ್ರಾ ವಿರುದ್ಧ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದ್ದರು. ಇವರ ಜೊತೆಗೆ ಬೆಂಗಾವಲು ವಾಹನಗಳ ಸಾಲಿನಲ್ಲಿದ್ದ ಮಹೀಂದ್ರ ಗಾಡಿಯನ್ನು ರೈತರ ಮೇಲೆ ಹತ್ತಿಸಲಾಗಿದ್ದು, ಇದರಲ್ಲಿ ಸಚಿವನ ಪುತ್ರ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ತಿಳಿಸಿದ್ದರು. ಇದನ್ನೂ ಓದಿ: ತಂದೆ ಸಾವಿನಿಂದ ಮನನೊಂದು 4 ತಿಂಗಳ ಬಳಿಕ ಮಗಳು ಆತ್ಮಹತ್ಯೆ

    ಕಾರು ಹತ್ತಿಸಿದ್ದರಿಂದ ನಾಲ್ವರು ರೈತರು ಪ್ರಾಣ ಕಳೆದುಕೊಂಡಿದ್ದರು. ಅಲ್ಲದೇ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಹಿಂದಿ ಸುದ್ದಿವಾಹಿನಿ ಓರ್ವ ವರದಿಗಾರ ಕೂಡ ಬಲಿಯಾಗಿದ್ದರು.

  • ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ

    ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ

    ಲಕ್ನೋ: ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಡೆಂಗ್ಯೂ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

    ಭಾನುವಾರ ಮಿಶ್ರಾ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ವೈದ್ಯರ ಸಲಹೆಯಂತೆ ಲಖಿಂಪುರ್ ಜೈಲಿನ ಅಧಿಕಾರಿಗಳು ಆಶಿಶ್ ಮಿಶ್ರಾ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಎರಡು ಬಾರಿ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗಲೂ ಡೆಂಗ್ಯೂ ಇರುವುದು ದೃಢಪಟ್ಟಿದೆ.

    ಭದ್ರತೆ ದೃಷ್ಟಿಯಿಂದ ಆಸ್ಪತ್ರೆ ಹೊರಗಡೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಜಿಲ್ಲಾಸ್ಪತ್ರೆಯು ಮೂರನೇ ಬಾರಿಯ ರಕ್ತದ ಮಾದರಿ ಪರೀಕ್ಷೆ ವರದಿಗಾಗಿ ಕಾಯುತ್ತಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಲಖಿಂಪುರ್ ಖೇರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಶೈಲೇಶ್ ಭಾತ್‍ನಗರ್, ಆಶಿಶ್ ಮಿಶ್ರಾ ಅವರ ರಕ್ತದ ಮಾದರಿಯನ್ನು ಮೂರನೇ ಬಾರಿಗೆ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ವರದಿ ಆಧರಿಸಿ ಹೆಚ್ಚಿನ ಚಿಕಿತ್ಸೆ ಅಗತ್ಯತೆ ಕುರಿತು ತಜ್ಞರು ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ.

    ಆಶಿಶ್ ಮಿಶ್ರಾ ಅವರ ವಕೀಲ ಅವದೀಶ್ ಕುಮಾರ್ ಸಿಂಗ್ ಮಾತನಾಡಿ, ಕಳೆದ ಮೂರು ದಿನಗಳಿಂದ ಮಿಶ್ರಾ ಅವರು ಜ್ವರದಿಂದ ಬಳಲುತ್ತಿದ್ದರು. ಭಾನುವಾರ ಪರೀಕ್ಷೆಗಾಗಿ ಅವರ ರಕ್ತದ ಮಾದರಿ ಸಂಗ್ರಹಿಸಲಾಗಿತ್ತು. ವರದಿ ಸ್ವೀಕರಿಸಿದ ನಂತರ ಮಿಶ್ರಾ ಅವರನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು’ ಎಂದು ಹೇಳಿದ್ದಾರೆ. ಇದನ್ನೂ ಓದಿ:  ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!

    ಲಖಿಂಪುರ್ ಖೇರಿ ಅ.3ರಂದು ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಎಂಟು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಇದನ್ನೂ ಓದಿ:  ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

  • ಲಖೀಂಪುರ್ ರೈತರ ಹತ್ಯಾಕಾಂಡ ಪ್ರಕರಣ- ಅಶೀಶ್ ಮಿಶ್ರಾ SIT ವಶಕ್ಕೆ

    ಲಖೀಂಪುರ್ ರೈತರ ಹತ್ಯಾಕಾಂಡ ಪ್ರಕರಣ- ಅಶೀಶ್ ಮಿಶ್ರಾ SIT ವಶಕ್ಕೆ

    ಲಕ್ನೋ: ಲಖೀಂಪುರ್ ರೈತರ ಹತ್ಯಾಕಾಂಡ ಪ್ರಕರಣದಲ್ಲಿ ಕೇಂದ್ರ ಮಂತ್ರಿ ಅಜಯ್ ಮಿಶ್ರಾ ಪುತ್ರ ಅಶೀಶ್ ಮಿಶ್ರಾನನ್ನು  ವಿಶೇಷ ತನಿಖಾ ತಂಡ (ಎಸ್‍ಐಟಿ) ವಶಕ್ಕೆ ಪಡೆದಿದೆ.

    ನಿನ್ನೆ ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದ ಬೆನ್ನಲ್ಲೇ, ಇವತ್ತು ವಿಚಾರಣೆಗೆ ಹಾಜರಾದ ಅಶೀಶ್ ಮಿಶ್ರಾನನ್ನು ವಶಕ್ಕೆ ಪಡೆಯಲಾಗಿದೆ. ಆದರೆ ವಿಚಾರಣೆಯ ಮಾಹಿತಿ ಸೋರಿಕೆ ಆಗೋ ಭಯದಲ್ಲಿ, ಕ್ರೈಂಬ್ರಾಂಚ್ ಕಚೇರಿ ಸುತ್ತಮುತ್ತ ಇಂಟರ್ನೆಟ್ ಸೇವೆ ಬಂದ್ ಮಾಡಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ನಿನ್ನೆ ನನ್ನ ಮಗನಿಗೆ ಆರೋಗ್ಯ ಕೆಟ್ಟಿತ್ತು. ಹೀಗಾಗಿ ವಿಚಾರಣೆಗೆ ಬಂದಿರಲಿಲ್ಲ ಅಷ್ಟೇ. ನೇಪಾಳಕ್ಕೆ ಓಡಿ ಹೋಗಿದ್ದಾನೆ ಅನ್ನೋದೆಲ್ಲಾ ಸುಳ್ಳು. ನನ್ನ ಮಗ ಅಮಾಯಕ ಎಂದು ಕೇಂದ್ರ ಮಂತ್ರಿ ಹೇಳಿದ್ದಾರೆ. ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ- ಯುಪಿ ಸರ್ಕಾರದಿಂದ 45 ಲಕ್ಷ ರೂ.ಪರಿಹಾರ ಘೋಷಣೆ

    ಈ ಮಧ್ಯೆ, ರೈತರ ಹತ್ಯೆ ಬಳಿಕದ ಹಿಂಸಾಚಾರವನ್ನು ರೈತ ಮುಖಂಡ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದು, ರೈತರನ್ನು ಹತ್ಯೆ ಮಾಡಿದಕ್ಕಾಗಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ ಇದು ಕ್ರಿಯೆಗೆ ಪ್ರತಿಕ್ರಿಯೆ ಸಹಜ ಎಂದಿದ್ದಾರೆ. ಇದನ್ನೂ ಓದಿ: ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ

  • ರೈತರ ಬಗ್ಗೆ ಕಾಳಜೀ ಇದೆ ಅಂತಾರೆ, ರಸ್ತೆಗೆ ಬಂದ್ರೆ ಹುಷಾರ್ ಅಂತ ಎಚ್ಚರಿಕೆ ಕೊಡ್ತಾರೆ: ಖರ್ಗೆ ಕಿಡಿ

    ರೈತರ ಬಗ್ಗೆ ಕಾಳಜೀ ಇದೆ ಅಂತಾರೆ, ರಸ್ತೆಗೆ ಬಂದ್ರೆ ಹುಷಾರ್ ಅಂತ ಎಚ್ಚರಿಕೆ ಕೊಡ್ತಾರೆ: ಖರ್ಗೆ ಕಿಡಿ

    – RSS ಮನುಸ್ಮೃತಿಯನ್ನ ಪ್ರತಿಪಾದಿಸುತ್ತಿದೆ
    – ಅಜಯ್ ಮಿಶ್ರಾ ಸಚಿವ ಸ್ಥಾನದಿಂದ ಕೆಳಗಿಳಿಯಲಿ

    ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಾಲ್ಕು ಜನ ರೈತರ ಮೇಲೆ ಗಾಡಿ ಹರಿಸಿ ಕೊಂದಿದ್ದಾರೆ. ಆದರೆ ಕೆಲ ನಾಯಕರು ನಾವು ರೈತರ ಪರ ಅಂತಾರೆ, ಮತ್ತೆ ರೈತರು ರಸ್ತೆ ಮೇಲೆ ಬಂದ್ರೆ ಪಾಠ ಕಲಿಸ್ತೇವೆ ಅಂತ ಯೋಗಿ, ಖಟ್ಟರ್ ರಂತಹ ನಾಯಕರು ರೈತರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಬಗ್ಗೆ ಕಾಳಜೀ ಇದೆ ಅಂತಾರೆ. ಮುಖ್ಯಂಮತ್ರಿಗಳು ಇಂತಹ ಹೇಳಿಕೆ ನೀಡುತ್ತಾರೆ. ರಸ್ತೆಗೆ ಬಂದರೆ ಹುಷಾರು ಎಂದು ಎಚ್ಚರಿಕೆ ನೀಡಿದ್ದಾರೆ, ಒಬ್ಬ ಸಿಎಂ ಮತ್ತು ಗೃಹ ಖಾತೆ ಸಚಿವರು ಇಂತಹ ಬೇದರಿಕೆ ಹಾಕಬಹುದಾ? ಸ್ವತಃ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡುವುದು ಎಷ್ಟು ಸರಿ? ಲಖೀಂಪುರ್ ಘಟನೆ ದೇಶದಲ್ಲೇ ಅಲ್ಲೋಲ, ಕಲ್ಲೋಲ ಉಂಟು ಮಾಡುವ ಘಟನೆಯಾಗಿದ್ದು, ರೈತರ ಮೇಲೆ ಯಾವ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷವಾಗಿ ಯುಪಿ ಹಾಗೂ ಹರಿಯಾಣ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ ಎಂಬುದಕ್ಕೆ ಇದು ಉದಾಹರಣೆ ಎಂದು ಕಿಡಿಕಾರಿದರು.  ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಕೇಂದ್ರ ಸಚಿವರ ಮಗ ಚಳವಳಿ ಮಾಡುತ್ತಿದ್ದ ರೈತರಿಗೆ ನಿಮಗೆಲ್ಲಾ ಪಾಠ ಕಲಿಸುತ್ತಿದ್ದೆ ಎಂದು ಮೊದಲು ವಾರ್ನ್ ಮಾಡಿದ್ದ. ಆನಂತರ ಗಾಡಿ ತಗೆದುಕೊಂಡು ಹೋಗಿ ಗುದ್ದಿದ್ದಾನೆ ಆದರೂ ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವರ ಮಗನನ್ನು ಯಾಕೆ ಅರೆಸ್ಟ್ ಮಾಡ್ತಿಲ್ಲ? ಸಾಂತ್ವಾನ ಹೇಳಲು ಹೋಗುವವರನ್ನು ಅರೆಸ್ಟ್ ಮಾಡಿ ಗೃಹ ಬಂಧನದಲ್ಲಿ ಇಡಲಾಗುತ್ತಿದೆ. ಬೇರೆ ಪಕ್ಷದ ನಾಯಕರು ಭೇಟಿ ಮಾಡಲು ಅವಕಾಶ ಕೊಟ್ಟಿದ್ದಾರೆ, ಅಲ್ಲಿನ ಸಿಎಂಗೆ ಭೇಟಿ ಮಾಡಲು ಅವಕಾಶ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಅವಕಾಶ ನೀಡದೇ ಬಂಧಿಸಲಾಗುತ್ತಿದೆ. ಅಜಯ್ ಮಿಶ್ರಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಕಾರಿನಲ್ಲಿ ಮಂತ್ರಿ ಮಗ ಇದ್ದ. ಅಲ್ಲಿನ ರೈತರೇ ಇದನ್ನು ಹೇಳಿದ್ದಾರೆ. ಆದರೆ ನನ್ನ ಮಗ ಅಲ್ಲಿರಲಿಲ್ಲ ಅಂತ ವಾದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಈ ಘಟನೆ ಬಗ್ಗೆ ಉಳಿದವರು ಬೇರೆ ರೀತಿ ಸತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಇದೆಲ್ಲ ಹೇಗಾಯ್ತು ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸುಪ್ರೀಂಕೋರ್ಟ್ ಸಿಟ್ಟಿಂಗ್ ಜಡ್ಜ್ ಇಂದ ಈ ಘಟನೆ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರುತ್ತದೆ. ನಂತರ ಬಗ್ಗೆ ಮಾತನಾಡಿ ಆರ್‌ಎಸ್‌ಎಸ್‌ ಮನುಸ್ಮೃತಿಯನ್ನು ಪ್ರತಿಪಾದಿಸುತ್ತಿದೆ. ಗೋಲ್ವಾಲ್ಕರ್ ಯಾರು, ಅದರ ಪ್ರತಿಪಾದಕ. ಆರ್‌ಎಸ್‌ಎಸ್‌ ಏನು ಪ್ರತಿಪಾದಿಸುತ್ತದೆ. ಮನುಸ್ಮೃತಿ ಏನು ಪ್ರತಿಪಾದಿಸುತ್ತದೆ ಎಂದು ಪ್ರಶ್ನಿಸಿ ಕಲಬುರಗಿಯಲ್ಲಿ ನನ್ನ ಸೋಲಿಗೆ ಆರ್‌ಎಸ್‌ಎಸ್‌ ಕೂಡ ಒಂದು ಕಾರಣ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ

  • ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ

    ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ

    ಲಕ್ನೋ: ಉತ್ತರಪ್ರದೇಶದಲ್ಲಿ ಕೇಂದ್ರ ಸಚಿವರ ಮಗ ಕಾರು ಹತ್ತಿಸಿ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಲು ನಿರ್ಧರಿಸಿತ್ತು. ಆದರೆ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿ ಭೇಟಿಗೆ ಅವಕಾಶವಿಲ್ಲ ಎಂದಿದೆ.

    ಉತ್ತರ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 144 ಸೆಕ್ಷನ್ ಜಾರಿ ಮಾಡಿದೆ. ಇದಲ್ಲದೆ ಕಾಂಗ್ರೆಸ್ ಪಕ್ಷ, ಬಿಜೆಪಿ ನೇತೃತ್ವದ ಸರ್ಕಾರದ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂದು ರಾಹುಲ್ ಸಹಿತ ಕಾಂಗ್ರೆಸ್ ನಿಯೋಗ ಭೇಟಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಉತ್ತರ ಪ್ರದೇಶ ಸರ್ಕಾರ ಅವಕಾಶ ನಿರಾಕರಿಸಿದೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಈ ಮೊದಲು ಲಖೀಂಪುರ್ ಖೇರಿ ಭೇಟಿಗೆ ಮುಂದಾದ ಪ್ರಿಯಾಂಕಾ ಗಾಂಧಿ ಅವರನ್ನು ಯೋಗಿ ಸರ್ಕಾರ 2 ದಿನ ಗೃಹ ಬಂಧನದಲ್ಲಿಟ್ಟಿದ್ದು, ಪ್ರಿಯಾಂಕಾ ವಿರುದ್ಧ ಎಫ್‍ಐಆರ್ ದಾಖಲಿಸಿದೆ. ಆದರೆ ಪ್ರಿಯಾಂಕಾ ಗೃಹ ಬಂಧನದಲ್ಲಿಟ್ಟಿರುವ ಪೊಲೀಸರ ಕ್ರಮದ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಸ್ವತಃ ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ಮೂಲಕ ವೀಡಿಯೋ ಒಂದನ್ನು ಹರಿಬಿಟ್ಟಿದ್ದಾರೆ. ಇದೀಗ ಸೀತಾಪುರದಲ್ಲಿ ಇಂಟರ್‍ ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

     

  • ಬಿಜೆಪಿ ಮುಖಂಡರು ಯಾರೇ ಸಾಯ್ಲಿ ಕಾಂಗ್ರೆಸ್ಸಿನಿಂದ 1 ಕೋಟಿ ರೂ.: ಬಯ್ಯಾಪೂರ

    ಬಿಜೆಪಿ ಮುಖಂಡರು ಯಾರೇ ಸಾಯ್ಲಿ ಕಾಂಗ್ರೆಸ್ಸಿನಿಂದ 1 ಕೋಟಿ ರೂ.: ಬಯ್ಯಾಪೂರ

    ಕೊಪ್ಪಳ: ಉತ್ತರ ಪ್ರದೇಶದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲಿನ ವಾಹನಗಳು ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹಾಯಿಸಿ ರೈತರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಸರ್ಕಾರ 45 ಲಕ್ಷ ರೂ. ಪರಿಹಾರ ಮಾತ್ರ ನೀಡಿದೆ. ಬಿಜೆಪಿ ಮುಖಂಡರಲ್ಲಿ ಯಾರಾದ್ರೂ ಸಾಯಲಿ ಕಾಂಗ್ರೆಸ್ ಪಕ್ಷದಿಂದ ಒಂದು ಕೋಟಿ ರೂ. ಪರಿಹಾರ ಕೊಡುವುದಾಗಿ ಶಾಸಕ ಅಮರೇಗೌಡ ಪಾಟೀಲ್ ಗುಡುಗಿದ್ದಾರೆ.

    ಉತ್ತರ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಕುಮಾರ ಮಿಶ್ರಾ ಪುತ್ರನ ಕಾರು ಹರಿದು 8 ಜನ ರೈತರ ದುರ್ಮರಣ ಖಂಡಿಸಿ ಕೊಪ್ಪಳದ ಕುಷ್ಟಗಿಯ ಬಸವೇಶ್ವರ ವೃತ್ತದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪಂಜಿನ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದರು. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಬಿಜೆಪಿ ಅತ್ಯಂತ ಕೆಟ್ಟ ಸರ್ಕಾರ ಎಂದು ನಿರೂಪಿಸಿದೆ. ಚಳಿ, ಹಿಮ, ಮಳೆ ಲೆಕ್ಕಿಸದೇ ಹರ್ಯಾಣ, ಪಂಜಾಬ್, ಛತ್ತೀಸಗಢ ರೈತರ ಪ್ರತಿಭಟನೆ ನಡೆಯುತ್ತಿದೆ. ಈ ರೈತರ ಪ್ರತಿಭಟನೆಯಲ್ಲಿ ಕೇಂದ್ರ ಗೃಹಖಾತೆ ರಾಜ್ಯ ಸಚಿವರ ಪುತ್ರನ ಕಾರು ರೈತನ ಮೇಲೆ ಹರಿದು, 8 ಜನ ರೈತರ ಹತ್ಯೆಗೆ ಕಾರಣರಾಗಿದ್ದಾರೆ. ಈ ಸಂಬಂಧ ಆರೋಪಿ ಬಂಧಿಸದೇ 45 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ದೇಶದಲ್ಲಿ ಬಿಜೆಪಿ ತೊಲಗುವರೆಗೂ ಈ ಹೋರಾಟ ನಡೆಯಲಿದೆ ಎಂದರು.

    ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಈ ಪ್ರಕರಣದಲ್ಲಿ ಮಂತ್ರಿ ಮಗನನ್ನು ಬಂಧಿಸಿಲ್ಲ. ಅಲ್ಲದೇ ಪ್ರತಿಭಟನಾ ನಿರತರಾದ ಕಾಂಗ್ರೆಸ್ ಪಕ್ಷದ ಪ್ರಿಯಾಂಕಾ ಗಾಂಧಿ ಅವರನ್ನು ಕೂಡಿ ಹಾಕಿದ್ದು, ಪೊಲೀಸರು ಅವರ ಕೈ, ಮೈ ಮುಟ್ಟಿದ್ದಾರೆ. ಪೊಲೀಸರು ಬಿಜೆಪಿ ಚೇಲಾಗಳಂತೆ ವರ್ತಿಸಿದ್ದಾರೆ ಎಂದು ಹರಿಹಾಯ್ದರು. ಇದಕ್ಕೂ ಮುನ್ನ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಮಲ್ಲಯ್ಯ ವೃತ್ತದಿಂದ ಆರಂಭಿಸಿ, ಮಾರುತಿ ವೃತ್ತ ಬಸವೇಶ್ವರ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಮೃತ ರೈತರಿಗೆ ಒಂದು ನಿಮಿಷದ ಮೌನ ಆಚರಿಸಲಾಯಿತು.

  • ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    ಲಕ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಸೇರಿದ ಮಹೀಂದ್ರ ಥಾರ್ ವಾಹನವನ್ನು ಹತ್ತಿಸಿರುವ ವೀಡಿಯೋ ಈಗ ಸಿಕ್ಕಿದೆ. ಆ ವೀಡಿಯೋದಲ್ಲಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆಯಲ್ಲಿ ತೆರಳ್ತಿದ್ದವರ ಮೇಲೆ ಏಕಾಏಕಿ ವಾಹನವನ್ನು ಹತ್ತಿಸಲಾಗಿದೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ವಿರುದ್ಧ ರೈತರು ಕಪ್ಪು ಬಾವುಟ ಹಿಡಿದು ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇವರ ಜೊತೆಗೆ ಬೆಂಗಾವಲು ವಾಹನಗಳ ಸಾಲಿನಲ್ಲಿದ್ದ ಮಹೀಂದ್ರ ಗಾಡಿಯನ್ನು ರೈತರ ಮೇಲೆ ಹತ್ತಿಸಲಾಗಿದ್ದು, ಇದರಲ್ಲಿ ಸಚಿವನ ಪುತ್ರ ಆಶಿಶ್ ಮಿಶ್ರಾ ಇದ್ದ ಎಂದು ರೈತರು ಈಗಾಗಲೇ ಆರೋಪಿಸಿದ್ದಾರೆ. ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ- ಯುಪಿ ಸರ್ಕಾರದಿಂದ 45 ಲಕ್ಷ ರೂ.ಪರಿಹಾರ ಘೋಷಣೆ

    ಈ ವಾಹನದ ಹಿಂಭಾಗದಲ್ಲಿ ಬಿಜೆಪಿ ಪಕ್ಷದ ಬ್ಯಾನರ್‍ನ್ನೂ ಕಟ್ಟಲಾಗಿತ್ತು. ವಾಹನ ಹೋದ ಬಳಿಕ ಅದರ ಹಿಂದೆಯೇ ಇನ್ನೊಂದು ಕಾರು ಕೂಡಾ ಹಾದು ಹೋಗಿದೆ. ಕಾರು ಹತ್ತಿಸಿದ್ದರಿಂದ ನಾಲ್ವರು ರೈತರು ಪ್ರಾಣ ಕಳೆದುಕೊಂಡರು. ಆ ಬಳಿಕ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಹಿಂದಿ ಸುದ್ದಿವಾಹಿನಿ ಓರ್ವ ವರದಿಗಾರ ಕೂಡಾ ಬಲಿಯಾಗಿದ್ದಾರೆ. ಕೃತ್ಯ ಸಂಬಂಧ ಕೇಂದ್ರ ಸಚಿವನ ಮಗನ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

    ಮೃತ ರೈತರ ಕುಟುಂಬಸ್ಥರಿಗೆ 45 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ರೈತರ ಮೇಲೆ ವಾಹನ ಹತ್ತಿಸಿರುವ ಕೃತ್ಯವನ್ನು ಖಂಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ ಸಿಬಿಐ ತನಿಖೆ ನಡೆಸುವಂತೆ ಕೋರಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‍ಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ