Tag: lakshadvipa

  • ಮಂಗ್ಳೂರಿಂದ ನಿರ್ಗಮಿಸುವಾಗ ಪ್ರಧಾನಿ ಮೋದಿಗೆ ಸಂಸದ ನಳಿನ್ ಗಿಫ್ಟ್!

    ಮಂಗ್ಳೂರಿಂದ ನಿರ್ಗಮಿಸುವಾಗ ಪ್ರಧಾನಿ ಮೋದಿಗೆ ಸಂಸದ ನಳಿನ್ ಗಿಫ್ಟ್!

    ಮಂಗಳೂರು: ಲಕ್ಷದ್ವೀಪಕ್ಕೆ ತೆರಳಲೆಂದು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ತಡರಾತ್ರಿ ಮಂಗಳೂರಿಗೆ ಬಂದಿಳಿದಿದ್ದು, ಅಲ್ಲಿಂದ ನಿರ್ಗಮಿಸುವಾಗ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉಡುಗೊರೆಯೊಂದನ್ನು ನೀಡಿದ್ದಾರೆ.

    ಶ್ರೀಕ್ಷೇತ್ರ ಧರ್ಮಸ್ಥಳದಿಂದ ರಚಿತವಾದ ಮೋದಿಯ ಧರ್ಮಸ್ಥಳ ಭೇಟಿಯ ಸಚಿತ್ರ ವರದಿಯ ಪುಸ್ತಕವನ್ನು ಪ್ರಧಾನಿ ಮೋದಿಗೆ ಹಸ್ತಾಂತರಿಸಲಾಗಿದೆ. ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವ ಹೊತ್ತಿಗೆ ಸಂಸದ ನಳಿನ್‍ಕುಮಾರ್ ಕಟೀಲ್ ಪ್ರಧಾನಿಗೆ ಈ ಪುಸ್ತಕ ನೀಡಿದ್ದಾರೆ.

    ಧರ್ಮಸ್ಥಳದಿಂದ ರಚಿತವಾಗಿದ್ದು ಅಂದಾಕ್ಷಣ ಖುಷಿಯಿಂದ ಸ್ವೀಕರಿಸಿದ ಮೋದಿ ಸಂಪೂರ್ಣ ಓದೋದಾಗಿ ಹೇಳಿದ್ದಾರೆ. ಕಳೆದ ಅಕ್ಟೋಬರ್ 29ರಂದು ಧರ್ಮಸ್ಥಳ ಕ್ಕೆ ಭೇಟಿ ನೀಡಿದ ಮೋದಿ ಶ್ರೀ ಕ್ಷೇತ್ರದಲ್ಲಿ ಹೆಗ್ಗಡೆ ಕುಟುಂಬದ ಆತಿಥ್ಯ ಸ್ವೀಕರಿಸಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಉಜಿರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೂಪೇ ಕಾರ್ಡ್ ಬಿಡುಗಡೆಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಪ್ರಧಾನಿಯ ಐತಿಹಾಸಿಕ ಭೇಟಿಯ ಪ್ರತಿಯೊಂದು ಕ್ಷಣವನ್ನು ಪುಸ್ತಕದಲ್ಲಿ ಸಚಿತ್ರ ವರದಿ ಮಾಡಲಾಗಿದ್ದು, ಈಗ ಸ್ವತಃ ನರೇಂದ್ರ ಮೋದಿಯವರಿಗೇ ನೆನಪಿನ ಉಡುಗೊರೆಯಾಗಿ ನೀಡಲಾಗಿದೆ.

    ಸೋಮವಾರ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದ ಮೋದಿ ಬೆಳಗ್ಗೆ 7.30ಕ್ಕೆ ರಸ್ತೆ ಮಾರ್ಗ ಮೂಲಕ ಹೊರಟರು. ಮಂಗಳೂರಿನ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ, ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಲಕ್ಷದ್ವೀಪಕ್ಕೆ ಪ್ರಯಾಣಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕೆಲ ನಿಮಿಷಗಳ ಕಾಲ ತಡೆಹಿಡಿಯಲಾಗಿತ್ತು.

    ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಪ್ರವಾಸಕ್ಕೆ ಎರಡು ವಿಶೇಷ ವಿಮಾನಗಳನ್ನು ರೆಡಿ ಮಾಡಲಾಗಿತ್ತು. ಈ ಪೈಕಿ ಒಂದು ವಿಮಾನದ ಮೂಲಕ ಮೋದಿ ಲಕ್ಷದ್ವೀಪಕ್ಕೆ ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಹಾರಿದ ಕೆಲವೇ ನಿಮಿಷಗಳಲ್ಲಿ ಮತ್ತೊಂದು ವಿಶೇಷ ವಿಮಾನ ಕೂಡ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಿದೆ. ಇತ್ತೀಚೆಗೆ ಓಖಿ ಚಂಡಮಾರುತದಿಂದ ಹಾನಿಗೀಡಾದ ಲಕ್ಷದ್ವೀಪದ ಪ್ರದೇಶಗಳಿಗೆ ಭೇಟಿ ನೀಡಿ, ಪುನರ್ವಸತಿ ಕಾರ್ಯಗಳನ್ನು ವೀಕ್ಷಿಸಲಿದ್ದಾರೆ. ಸಂಜೆ ಅಲ್ಲಿಂದ ತಿರುವನಂತಪುರದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ.

     

  • ರಿಸಲ್ಟ್ ಬರೋ ದಿನವೇ ಮಂಗ್ಳೂರಿಗೆ ಮೋದಿ – ನಾಳೆ ಕರಾವಳಿಯಲ್ಲಿ ಪ್ರಧಾನಿ ವಾಸ್ತವ್ಯ

    ರಿಸಲ್ಟ್ ಬರೋ ದಿನವೇ ಮಂಗ್ಳೂರಿಗೆ ಮೋದಿ – ನಾಳೆ ಕರಾವಳಿಯಲ್ಲಿ ಪ್ರಧಾನಿ ವಾಸ್ತವ್ಯ

    ಮಂಗಳೂರು: ಗುಜರಾತ್ ಚುನಾವಣೆಯ ಫಲಿತಾಂಶದ ದಿನವಾದ ಸೋಮವಾರವೇ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೆ ಆಗಮಿಸಲಿದ್ದಾರೆ.

    ಪ್ರಧಾನಿ ಮೋದಿ ಅವರ ಮಂಗಳೂರು ಭೇಟಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ. ಲಕ್ಷದ್ವೀಪಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 11.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಗರದ ಗೆಟ್ ವೇ ಹೊಟೇಲ್ ಅಥವಾ ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿ ಕೊಲ್ಲೂರಿಗೆ ಭೇಟಿ

    ಡಿ.19ಕ್ಕೆ ಬೆಳಗ್ಗೆ ಸುಮಾರು 7.30ಕ್ಕೆ ಮಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ಲಕ್ಷದ್ವೀಪ್ಕಕ್ಕೆ ತೆರಳಲಿದ್ದಾರೆ. ಲಕ್ಷದ್ವೀಪದಲ್ಲಿ ಪ್ರಧಾನಿಯವರು ಒಖ್ಹಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಲಿದ್ದಾರೆ ಅಂತ ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಧಾನಿಗೆ ಧರ್ಮಾಧಿಕಾರಿ ಮನವಿ

    ಇದನ್ನೂ ಓದಿ: ಧರ್ಮಸ್ಥಳದಲ್ಲಿ ನಮೋ ಮೇನಿಯಾ- ಭಾಷಣದುದ್ದಕ್ಕೂ ಹೆಗ್ಗಡೆ ಅವರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

    ಇದನ್ನೂ ಓದಿ: ಇದು ಎಳನೀರಲ್ಲ ಅಮೃತ ಎಂದು ಕರಾವಳಿಯ ಎಳನೀರಿನ ಸವಿಗೆ ಮನಸೋತ ಮೋದಿ!