Tag: lakshmivarateertha swamiji

  • ಶಿರೂರು ಶ್ರೀ ಅಸಹಜ ಸಾವು- ನನ್ನನ್ನೂ ಮುಕ್ತವಾಗಿ ವಿಚಾರಣೆ ನಡೆಸಿ ಅಂದ್ರು ಪೇಜಾವರ ಶ್ರೀ

    ಶಿರೂರು ಶ್ರೀ ಅಸಹಜ ಸಾವು- ನನ್ನನ್ನೂ ಮುಕ್ತವಾಗಿ ವಿಚಾರಣೆ ನಡೆಸಿ ಅಂದ್ರು ಪೇಜಾವರ ಶ್ರೀ

    ಉಡುಪಿ: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಕುರಿತು ನನ್ನನ್ನು ಬೇಕಾದರೂ ಪೊಲೀಸರು ವಿಚಾರಣೆ ನಡೆಸಲಿ. ಈ ಕುರಿತು ಮುಕ್ತವಾಗಿ ತನಿಖೆ ಮಾಡಬಹುದು. ಒಟ್ಟಿನಲ್ಲಿ ನಿಷ್ಪಕ್ಷಪಾತ ತನಿಖೆಯಾಗಲಿ ಎಂಬುದೇ ನಮ್ಮ ಆಶಯ ಅಂತ ಪೇಜಾವರ ಶ್ರೀಗಳು ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿರೂರು ಶ್ರೀಗೆ ಮೊದಲಿಂದಲೂ ಅನಾರೋಗ್ಯ ಇತ್ತು. ಹೀಗಾಗಿ ಅವರ ಸಾವು ಕೊಲೆಯಲ್ಲ. ಅವರು ತಮ್ಮ ತಪ್ಪನ್ನು ತಿದ್ದಿಕೊಳ್ಳಬೇಕಿತ್ತು ಅಂದ್ರು. ಇದೇ ವೇಳೆ ಕರಾವಳಿಯ ಸ್ವಾಮೀಜಿಗಳಾದ ಸಂತೋಷ್ ಗುರೂಜಿ, ಕೇಮಾರು ಸ್ವಾಮೀಜಿ, ವಿಶ್ವ ವಿಜಯರು ಸರಿಯಾಗಿ ವಿಚಾರ ಮಾಡಿ ಜವಾಬ್ದಾರಿಯುತ ಹೇಳಿಕೆ ಕೊಡಬೇಕೆಂದು ವಿನಂತಿ ಮಾಡಿಕೊಂಡರು. ಇದನ್ನೂ ಓದಿ: ಶಿರೂರು ಶ್ರೀಗಳಿಗೆ ಮದ್ಯಪಾನ, ಸ್ತ್ರೀ ಸಂಪರ್ಕ ಇದ್ದಿರೋದಕ್ಕೆ ಹೀಗಾಯ್ತೋ ಏನೋ ಗೊತ್ತಿಲ್ಲ: ಪೇಜಾವರ ಶ್ರೀ

    ಮಠದವ್ರಿಂದಲೇ ಕೃತ್ಯ ಶಂಕೆ:
    ಶ್ರೀಗಳ ನಿಧನದಂದು ನಾನು ಉಡುಪಿಯಲ್ಲಿ ಇರಲಿಲ್ಲ. ಅನ್ನಾಹಾರ ವಿಷವಾಗಿದೆಯೋ ಗೊತ್ತಿಲ್ಲ. ಕಿಡ್ನಿ, ಲಿವರ್ ಸಮಸ್ಯೆ ಅಂತ ಕೆಲವರು ಹೇಳುತ್ತಾರೆ. ಮಹಿಳೆ ಜೊತೆ ಜಗಳ ಆಗಿದೆ ಎಂಬ ಊಹಾಪೋಹ ಇದೆ. ಜೊತೆಗಿರುವವರಿಂದ ಸಮಸ್ಯೆಯಾಯ್ತೋ ಗೊತ್ತಿಲ್ಲ. ಪಲಾವ್ ತಿಂದಿರುವ ಬಗ್ಗೆ ಸಹೋದರ ಹೇಳಿದ್ದಾರೆ. ಬೇರೆ ಯಾವ ಮಠದಿಂದ ಯಾವುದೇ ಕೃತ್ಯ ನಡೆದಿಲ್ಲ. ಅವರ ಮಠದವರಿಂದಲೇ ಕೃತ್ಯ ನಡೆದಿರಬಹುದು ಅಂತ ಶಂಕೆ ವ್ಯಕ್ತಪಡಿಸಿದ್ರು.

    ಶಿರೂರು ಸ್ವಾಮೀಜಿಗೆ ಮದ್ಯಪಾನದಿಂದ ಹೀಗಾಯ್ತೋ ಗೊತ್ತಿಲ್ಲ. ವನ ಮಹೋತ್ಸವಕ್ಕೆ ಬಂದ ವಿದ್ಯಾರ್ಥಿಗಳಿಗೂ ಇರಿಸು ಮುರುಸಾಗಿತ್ತು. ಈ ಬಗ್ಗೆ ಕೂಡಾ ಮರಣೋತ್ತರ ಪರೀಕ್ಷೆಯಲ್ಲಿ ಮಾಹಿತಿ ಸಿಗಬಹುದು ಅಂದ್ರು. ಇದನ್ನೂ ಓದಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನಕ್ಕೆ ಟ್ವಿಸ್ಟ್!

    ಸನ್ಯಾಸ ಧರ್ಮ ಪಾಲಿಸಿಲ್ಲ:
    ಶಿರೂರು ಶ್ರೀ ಹಲವಾರು ಒಳ್ಳೆಯ ಕಾರ್ಯ ಮಾಡಿದ್ದಾರೆ. ಸಾಮಾಜಿಕ, ಸಾಂಸ್ಕೃತಿಕ ಕೆಲಸ ಮಾಡಿದ್ದಾರೆ. ಆದ್ರೆ ಅವರು ಸನ್ಯಾಸ ಧರ್ಮ ಪಾಲಿಸಿಲ್ಲ. ಶಿರೂರು ಸ್ವಾಮೀಜಿ ಪುಂಡಾಟಿಕೆ ಮಾಡುತ್ತಿದ್ದರು. ಕೆಲವೊಂದು ದುರ್ವ್ಯಸನಗಳು ಇತ್ತು. ಸ್ತ್ರೀಯರ ಮೇಲಿನ ಆಸಕ್ತಿ ಅವರಿಗೆ ಇತ್ತು. ಈ ಬಗ್ಗೆ ಪರ್ಯಾಯ ಸಭೆಯಲ್ಲೇ ಶ್ರೀಗಳನ್ನು ತಿದ್ದಿಕೊಳ್ಳಲು ಹೇಳಿದ್ದೆ. ಅಲ್ಲದೇ ಹಲವು ಬಾರಿ ವೈಯಕ್ತಿಕವಾಗಿಯೂ ನಾನು ಸಲಹೆ ನೀಡಿದ್ದೇನೆ. ಆದ್ರೆ ಲಕ್ಷ್ಮೀವರರು ಯಾವುದನ್ನೂ ಪಾಲಿಸಿಲ್ಲ ಅಂತ ಹೇಳಿದ್ರು. ಇದನ್ನೂ ಓದಿ: ಎಲ್ಲಿ ಹುಡುಕಿದ್ರೂ ಸ್ವಾಮೀಜಿ ಇಲ್ಲ – ಶಿರೂರು ಮಠದಲ್ಲಿ ರೂಬಿಯ ಮೂಕ ರೋಧನ!

  • ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಉಡುಪಿ: ಶಿರೂರು ಸ್ವಾಮೀಜಿ ಅವರು ತುಳುವಿನಲ್ಲಿ ಮಾತನಾಡಿರುವ ವಾಟ್ಸಪ್ ವಾಯ್ಸ್ ನೋಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಅಜ್ಜರಿಗೆ ಒಂದು ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್ ಆಗುತ್ತೆ. 50 ಲಕ್ಷ ಪಲಿಮಾರು ಸ್ವಾಮೀಜಿಗೆ. 50 ಲಕ್ಷ ಅವರಿಗೆ ಕೊಡಬೇಕಂತೆ ಎಂದು ಮಾತನಾಡಿದ್ದಾರೆ. ಸೋದೆ ಸ್ವಾಮೀಜಿ ವಿಶ್ವವಲ್ಲಭ ತೀರ್ಥಶ್ರಿಗಳ ಹೆಸರು ಪ್ರಸ್ತಾಪ ಮಾಡಿದ್ದಾರೆ.

    ಅವರ ಎಂಟು ಸಾವಿರ ಭಕ್ತರಿಂದ ಪ್ರತಿ ಮನೆಯಿಂದ ಒಂದು ಪವನ್ ಚಿನ್ನ ಒಟ್ಟುಗೂಡಿಸ್ತಾರಂತೆ. ಆದ್ರೆ ಆಡಿಯೋದಲ್ಲಿ ಯಾವುದೂ ಸ್ಪಷ್ಟ ಮಾಹಿತಿ ಇಲ್ಲ. ಯಾವ ಸಂದರ್ಭದಲ್ಲಿ ಯಾರಿಗೆ ಈ ಆಡಿಯೋ ಕಳುಹಿಸಿದ್ದಾರೋ ಎಂಬ ಬಗ್ಗೆ ಮಾಹಿತಿಯಿಲ್ಲ.

    ಪಟ್ಟದ ದೇವರನ್ನು ಮರಳಿ ನೀಡುವ ವಿಚಾರದಲ್ಲಿ ವ್ಯವಹಾರ ಮಾತುಕತೆ ನಡೆದಿತ್ತಾ? ಅಥವಾ ಯಾವುದೊ ಮಹತ್ವದ ಯೋಜನೆಗೆ ಹಣ ಸಂಗ್ರಹಿಸುವ ಬಗ್ಗೆ ನಡೆದ ಮಾತುಕತೆಯೋ ಸ್ಪಷ್ಟವಾಗಿಲ್ಲ. ಆಡಿಯೊದ ಮೂಲ ತನಿಖೆ ಮಾಡಿದ್ರೆ ಸಾಕಷ್ಟು ವಿಚಾರ ಬೆಳಕಿಗೆ ಬರುವ ಸಾಧ್ಯತೆ ಇದೆ.

    ಶಿರೂರು ಶ್ರೀ ವಾಟ್ಸಾಪ್ ವಾಯ್ಸ್ ನೋಟ್:

    ಆಗ ನೋಡಿದೆ ನಿನ್ನ ವಾಟ್ಸಪ್…
    ಭಾರಿ ಖುಷಿ ಆಯ್ತು.
    ಅಜ್ಜರದ್ದು ಒಂದು ಡಿಮ್ಯಾಂಡ್ ಉಂಟು ಮಾರಾಯಾ.
    ಅವರಿಗೆ ಒಂದು ಕೋಟಿ ಕೊಡಬೇಕಂತೆ.
    ಐವತ್ತು ಲಕ್ಷ ಪಲಿಮಾರು ಸ್ವಾಮೀಜಿಗೆ ಕೊಡಬೇಕಂತೆ.
    ಐವತ್ತು ಲಕ್ಷ ಅವರಿಗೆ (ಪೇಜಾವರ?) ಬೇಕಂತೆ.
    ಆಮೇಲೆ ಈ ಮ್ಯಾಟರ್ ಫಿನೀಷ್ ಅಂತೆ.

    ಆಮೇಲೆ ಏನೂಂತ ಅಂದ್ರೆ… ಕರ್ನಾಟಕದಲ್ಲಿ ಸೋದೆ ಮಠದ ಶಿಷ್ಯಂದಿರ ಒಟ್ಟು ಎಂಟು ಸಾವಿರ ಮನೆ ಉಂಟಂತೆ. ಎಂಟು ಸಾವಿರ ಮನೆಗೆ ಒಂದೊಂದು ಮನೆಯಿಂದ ಒಂದೊಂದು ಪವನ್ ಚಿನ್ನ ವ್ಯವಸ್ಥೆ ಮಾಡಿ ಕೊಡುತ್ತೇನೆ ಅಂತ ಹೇಳಿದ್ದಾನೆ. ವಿಶ್ವವಲ್ಲಭ (ಸೋದೆ ಮಠಾಧೀಶರು) ಹೇಳಿದ್ದಾನೆ. ಅದನ್ನು ಇವರು ಬೇಡುತ್ತಿದ್ದಾರೆ.

    ವಿಷಯ ಇವತ್ತು ಬೆಳಗ್ಗೆ ಗೊತ್ತಾಯ್ತು. ಇಷ್ಟೇ ವಿಷಯ, ಎಲ್ಲರಿಗೂ ತಿಳಿಸು ಆಯ್ತಾ ಅಂತ ಹೇಳಿದ್ದಾರೆ.