Tag: Lamp

  • ಬತ್ತಿಯಂತೆ ದೀಪದಲ್ಲಿ ಉರಿಯುವ ಅಪರೂಪದ ಎಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ

    ಬತ್ತಿಯಂತೆ ದೀಪದಲ್ಲಿ ಉರಿಯುವ ಅಪರೂಪದ ಎಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ

    ಮಂಗಳೂರು: ಸಾಮಾನ್ಯವಾಗಿ ದೀಪ ಉರಿಸುವುದಕ್ಕೆ ಹತ್ತಿ ಅಥವಾ ಬಟ್ಟೆಯ ಬತ್ತಿಯನ್ನು ಬಳಸುತ್ತೇವೆ. ಆದರೆ ಹತ್ತಿಯ ಬತ್ತಿಗಿಂತಲೂ ಪ್ರಕಾಶಮಾನವಾಗಿ ಉರಿಯುವ ಎಲೆಯೊಂದು ಕರಾವಳಿಯಲ್ಲಿ ಪತ್ತೆಯಾಗಿದೆ.

    ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರು ನೆಲೆ ನಿಲ್ಲಲು ಕಾಡುಗಳಲ್ಲಿ ಮರದ ಪೊಟರೆಗಳನ್ನು ಬಳಸುತ್ತಿದ್ದರು. ಆಹಾರ ತಯಾರಿಕೆಗೆ, ಮಳೆ ಚಳಿಯಿಂದ ರಕ್ಷಿಸಲು ಕಲ್ಲಿನಿಂದ ಉಜ್ಜಿ ಬೆಂಕಿ ತಯಾರಿಸುತ್ತಿದ್ದರು ಎನ್ನುವುದು ಇತಿಹಾಸ. ಇದೀಗ ಇಂತಹುದೇ ಇತಿಹಾಸ ಸಾರುವ ಪುರಾತನ ಗಿಡವೊಂದು ಪ್ರಕೃತಿಯ ಮಡಿಲಲ್ಲಿ ಪತ್ತೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದ ಜಿನ್ನಪ್ಪ ಎಂಬವರ ರಬ್ಬರ್ ತೋಟದಲ್ಲಿ ಈ ಗಿಡ ಪತ್ತೆಯಾಗಿದೆ. ದೀಪಕ್ಕೆ ಎಣ್ಣೆ ಹಾಕಿ ಹತ್ತಿ ಬತ್ತಿಯ ಬದಲು ಈ ಗಿಡದ ಚಿಗುರೆಲೆಯನ್ನು ಎಣ್ಣೆಯಲ್ಲಿ ಅದ್ದಿ ಬೆಂಕಿ ಹಚ್ಚಿದ್ರೆ ದೀಪದಂತೆ ಉರಿಯುತ್ತದೆ. ಹತ್ತಿಯ ಬತ್ತಿಗಿಂತಲೂ ಪ್ರಕಾಶಮಾನವಾಗಿ ಉರಿಯುವ ಈ ಚಿಗುರೆಲೆಯನ್ನು ನೋಡಿ ಜನ ಆಶ್ಚರ್ಯಚಕಿತರಾಗಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ KSRTC ಬಸ್‍ಗಳಲ್ಲಿ ಮೊಬೈಲ್ ಲೌಡ್ ಸ್ಪೀಕರ್ ಇಟ್ಟು ಸಾಂಗ್, ಸಿನಿಮಾ ನೋಡೋದಕ್ಕೆ ನಿರ್ಬಂಧ

    ಬೆಳದಿಂಗಳ ರಾತ್ರಿಯಲ್ಲಿ ಈ ಗಿಡದ ಎಲೆಯ ಚಿಗುರುಗಳು ಪ್ರಕಾಶಮಾನವಾಗಿ ಮಿಂಚುತಿರುವುದನ್ನು ಜಿನ್ನಪ್ಪರು ಗಮನಿಸಿದ್ದರು. ಹೀಗಾಗಿ ಇದರಲ್ಲಿ ಬೆಳಕಿನ ಅಂಶ ಇರಬಹುದು ಎಂದು ತಿಳಿದು ಇದರ ಚಿಗುರು ತಂದು ಮನೆಯಲ್ಲಿ ಉರಿಸಿದ್ದಾರೆ. ಎಲೆಯ ಚಿಗುರು ನಿರಂತರ ಉರಿಯುವುದನ್ನು ಕಂಡು ಆಶ್ಚರ್ಯಗೊಂಡಿದ್ದಾರೆ. ಅಪರೂಪವಾಗಿ ಕಂಡ ಈ ಗಿಡದ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿದಾಗ ಇದು ಪ್ರಣತಿಪತ್ರ ಗಿಡ ಎಂದು ಗೊತ್ತಾಗಿದೆ. ಮಾನವ ಕಾಡಿನಲ್ಲಿ ಬದುಕಿದ್ದ ಸಂದರ್ಭ ಬೆಂಕಿಗಾಗಿ ಈ ಗಿಡವನ್ನು ಸಹ ಬಳಸುತ್ತಿದ್ದ ಎಂದು ಅಂದಾಜಿಸಲಾಗಿದೆ. ಸಾಮಾನ್ಯವಾಗಿ ದೀಪದಲ್ಲಿ ಹತ್ತಿ ಅಥವಾ ಬಟ್ಟೆಯ ಬತ್ತಿಯನ್ನು ಒಂದೆರಡು ಗಂಟೆ ಉರಿಸಿದಲ್ಲಿ ಬತ್ತಿ ಕರಗಿ ಹೋಗುತ್ತದೆ. ಆದರೆ ಈ ಪ್ರಣತಿಪತ್ರದ ಚಿಗುರು ಎಣ್ಣೆ ಸುರಿಯುತ್ತಿರುವವರೆಗೂ ನಿರಂತರ ಉರಿಯುತ್ತದೆ. ಇದನ್ನೂ ಓದಿ: ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೈಲಿನಿಂದ ಬಿಡುಗಡೆ

    ಪ್ರಣತಿಪತ್ರ ಗಿಡದ ಬದಲಾಗಿ ಇತರೇ ಯಾವುದೇ ಗಿಡದ ಚಿಗುರು ಬಳಸಿದರು ಅದು ಉರಿಯೋದಿಲ್ಲ. ಆದರೆ ಪ್ರಣತಿಪತ್ರ ಗಿಡದ ಚಿಗುರೆಲೆ ನಿರಂತರವಾಗಿ ಉರಿಯುತ್ತದೆ. ಒಟ್ಟಿನಲ್ಲಿ ಅಪರೂಪದಲ್ಲಿ ಕಾಣಸಿಕ್ಕಿರುವ ಈ ಗಿಡದ ವಿಶೇಷ ಗುಣ ಎಲ್ಲರ ಆಶ್ಚರ್ಯ ಮತ್ತು ಕುತೂಹಲಕ್ಕೆ ಕಾರಣವಾಗಿರೋದು ಮಾತ್ರ ಸುಳ್ಳಲ್ಲ.

  • ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್ಲ: ಡಿಸಿ

    ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್ಲ: ಡಿಸಿ

    ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶೀ ಕ್ಷೇತ್ರವೆಂದೇ ಪ್ರತೀತಿಯಾಗಿರೋ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇಗುಲ ಹಾಗೂ ಆವರಣದಲ್ಲಿ ಈ ಬಾರಿ ದೀಪ ಹಚ್ಚುವಂತಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ.

    ನಾಳೆ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಶ್ರೀಭೋಗನಂದೀಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಲಿವೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕೊರೊನಾ ಭೀತಿ ಆತಂಕದಿಂದ ಜಿಲ್ಲಾಡಳಿತ ಕೆಲ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ನಾಳೆ ಬೆಳಗ್ಗೆ 5 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಒಂದು ಬಾರಿಗೆ ದೇವಾಲಯದೊಳಗೆ ಕೇವಲ 300 ಮಂದಿಗಷ್ಟೇ ಪ್ರವೇಶಕ್ಕೆ ಅನುಮತಿಸಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರು ದೇವರ ದರ್ಶನ ಪಡೆಯಬೇಕಿದ್ದು, ಮಾಸ್ಕ್ ಹಾಕಿದರೆ ಮಾತ್ರ ದೇವಾಲಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ.

    ಭಕ್ತರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಪ್ರವೇಶ ಕಲ್ಪಿಸಲಾಗುವುದು. ಮತ್ತೊಂದೆಡೆ ಪ್ರತಿ ವರ್ಷ ಕಾರ್ತಿಕ ಸೋಮವಾರದಂದು ದೇವಾಲಯಕ್ಕೆ ಬರುವ ಭಕ್ತರು ದೇವಾಲಯದೊಳಗೆ ಹಾಗೂ ಕಳೆದ ವರ್ಷದಿಂದ ದೇವಾಲಯದ ಹೊರಭಾಗದಲ್ಲಿ ದೀಪ ಹಚ್ಚಿ ದೇವರಿಗೆ ಆರತಿ ಬೆಳಗಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆದರೆ ಈ ವರ್ಷ ಭಕ್ತರು ದೇವರ ದರ್ಶನ ಪಡೆಯಬಹುದು. ದೀಪದಾರತಿ ಮಾಡಲು ಅವಕಾಶವಿಲ್ಲ ಅಂತ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ.

    ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಭಕ್ತರನ್ನ ನಿಯಂತ್ರಿಸುವ ಸಲುವಾಗಿ ಬ್ಯಾರಿಕೇಡ್, ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗುವುದಾಗಿ ಅಂತ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

  • ಎಸ್‍ಪಿಬಿ ನೆನಪು- ತಿರುವಣ್ಣಾಮಲೈ ದೇವಸ್ಥಾನದಲ್ಲಿ ದೀಪ ಬೆಳಗಿಸಿದ ಇಳಯರಾಜ

    ಎಸ್‍ಪಿಬಿ ನೆನಪು- ತಿರುವಣ್ಣಾಮಲೈ ದೇವಸ್ಥಾನದಲ್ಲಿ ದೀಪ ಬೆಳಗಿಸಿದ ಇಳಯರಾಜ

    ಚೆನ್ನೈ: ತಮ್ಮ ಗೆಳೆಯ, ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನೆನಪಿನಲ್ಲೇ ಇರುವ ಸಂಗೀತ ನಿರ್ದೇಶಕ ಇಳಯರಾಜ, ಶನಿವಾರ ರಾತ್ರಿ ತಿರುವಣ್ಣಾಮಲೈ ದೇವಸ್ಥಾನಕ್ಕೆ ತೆರಳಿ ದೀಪ ಹಚ್ಚಿದ್ದಾರೆ.

    ಸರ್ಕಾರದ ಸೂಚನೆ ಹಿನ್ನೆಲೆ ಇಳಯರಾಜ ತಮ್ಮ ಪ್ರಾಣ ಸ್ನೇಹಿತನ ಅಂತಿಮ ದರ್ಶನದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರ ತಿರುವಣ್ಣಾಮಲೈ ದೇವಸ್ಥಾನದಲ್ಲಿ ದೀಪ ಬೆಳಗಿಸಿ ತಮ್ಮ ಗೆಳೆಯನನ್ನು ನೆನೆದಿದ್ದಾರೆ. ಅಲ್ಲದೆ ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲಿ, ಸದ್ಗತಿ ದೊರೆಯಲಿ ಎಂದು ಇಳಯರಾಜ ಬೇಡಿಕೊಂಡಿದ್ದಾರೆ.

    ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಸೆಪ್ಟೆಂಬರ್ 25ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಅವರ ಅಂತ್ಯ ಸಂಸ್ಕಾರವನ್ನು ಧಾರ್ಮಿಕ ವಿಧಿವಿಧಾನಗಳ ಮೂಲಕ ಹಾಗೂ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಚೆನ್ನೈನ ಫಾರ್ಮ್ ಹೌಸ್‍ನಲ್ಲಿ ಮಾಡಲಾಯಿತು. ಆದರೆ ಬಹುತೇಕ ಗಣ್ಯರು ಎಸ್‍ಪಿಬಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಅದೇ ರೀತಿ ಇಳಯರಾಜ ಸಹ ಹೋಗಲಿಲ್ಲ. ಹೀಗಾಗಿ ದೇವಸ್ಥಾನಕ್ಕೆ ತೆರಳಿ ದೀಪ ಬೆಳಗಿಸಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವಿಡಿಯೋವನ್ನು ತಮ್ಮ ಫೇಸ್ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ.

    இசைஞானி இளையராஜா அவர்கள் திரு SP பாலசுப்ரமணியம் அவர்களின் ஆத்மா சாந்தி அடைய திருவண்ணாமலையில் சற்று முன் மோட்ச தீபம்…

    Posted by Ilaiyaraaja on Saturday, September 26, 2020

    ಸಿನಿಮಾ ರಂಗಕ್ಕೆ ಪ್ರವೇಶ ಮಾಡುವುದಕ್ಕೂ ಮುನ್ನವೇ ಇಳಯರಾಜ ಹಾಗೂ ಎಸ್‍ಪಿಬಿ ಸ್ನೇಹಿತರಾಗಿದ್ದರು. ಅಲ್ಲದೆ ಸಿನಿಮಾ ರಂಗಕ್ಕೆ ಬಂದ ನಂತರ ಇಳಯರಾಜ ನಿರ್ದೇಶನದ ಹಲವು ಸಿನಿಮಾಗಳ ಹಾಡುಗಳನ್ನು ಬಾಲಸುಬ್ರಹ್ಮಣ್ಯಂ ಹಾಡಿದ್ದಾರೆ. ಹೀಗಾಗಿ ಇಳಯರಾಜ ಹಾಗೂ ಎಸ್‍ಪಿಬಿ ಮಧ್ಯೆ ಆಳವಾದ ಸ್ನೇಹವಿತ್ತು.

    ಎಸ್‍ಪಿಬಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಶ್ಚರ್ಯ ವ್ಯಕ್ತಪಡಿಸಿದ್ದ ಇಳಯರಾಜ, ಬಾಲು ನೀನೆಲ್ಲಿಗೆ ಹೋದೆ, ಯಾಕೆ ಹೋದೆ? ಬಾಲು ಬೇಗನೆ ಮರಳಿ ಬಾ, ನಿನಗಾಗಿ ನಾನು ಕಾಯುತ್ತಿದ್ದೇನೆ. ಆದರೆ ನೀನು ಕೇಳುತ್ತಿಲ್ಲ. ನೀನು ಹೋಗಿದ್ದೀಯಾ, ಎಲ್ಲಿಗೆ ಹೋದೆ, ಗಂಧರ್ವರಿಗೆ ಹಾಡು ಹೇಳಲು ಹೋದೆಯಾ? ಈಗ ಜಗತ್ತಿನಲ್ಲಿ ನನಗೆ ಏನನ್ನೂ ನೋಡಲು ಆಗುತ್ತಿಲ್ಲ. ಶಬ್ದಗಳನ್ನು ಕಳೆದುಕೊಂಡಿದ್ದೇನೆ, ಏನು ಹೇಳಬೇಕೋ ನನಗೆ ತೋಚುತ್ತಿಲ್ಲ. ಯಾವುದೇ ದುಃಖಕ್ಕೆ ಒಂದು ಮಿತಿಯಿದೆ. ಆದರೆ ಈ ದುಃಖಕ್ಕೆ ಮಿತಿಯಿಲ್ಲ ಎಂದು ಹೇಳಿದ್ದರು.

  • ಅಯೋಧ್ಯೆ ಭೂಮಿ ಪೂಜೆಗೆ ತಯಾರಾಗ್ತಿದೆ 1.25 ಲಕ್ಷ ಮಣ್ಣಿನ ಹಣತೆಗಳು!

    ಅಯೋಧ್ಯೆ ಭೂಮಿ ಪೂಜೆಗೆ ತಯಾರಾಗ್ತಿದೆ 1.25 ಲಕ್ಷ ಮಣ್ಣಿನ ಹಣತೆಗಳು!

    ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.

    ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

    ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್‍ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಭೂಮಿ ಪೂಜೆಯಂದು ದಯವಿಟ್ಟು ಅಯೋಧ್ಯೆಗೆ ಬರಬೇಡಿ- ಟ್ರಸ್ಟ್ ಮನವಿ

    ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್‍ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.  ಇದನ್ನೂ ಓದಿ: ಅಯೋಧ್ಯೆಗೆ ದಾಳಿ ಮಾಡಲು ಐಎಸ್‍ಐ ಸಂಚು – ಗುಪ್ತಚರ ಇಲಾಖೆ

  • ದೀಪ ಹಚ್ಚಿ ಕೊರೊನಾ ವಿರುದ್ಧ ಹೋರಾಟವನ್ನು ಅರ್ಥಪೂರ್ಣವಾಗಿಸಿ: ಕುಕ್ಕೆ ಸುಬ್ರಹ್ಮಣ್ಯ ಶ್ರೀ

    ದೀಪ ಹಚ್ಚಿ ಕೊರೊನಾ ವಿರುದ್ಧ ಹೋರಾಟವನ್ನು ಅರ್ಥಪೂರ್ಣವಾಗಿಸಿ: ಕುಕ್ಕೆ ಸುಬ್ರಹ್ಮಣ್ಯ ಶ್ರೀ

    ಮಂಗಳೂರು: ಇಂದು ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚಿ ಕೊರೊನಾ ವಿರುದ್ಧ ಹೋರಾಟವನ್ನು ಅರ್ಥಪೂರ್ಣವಾಗಿಸಿ ಎಂದು ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿ ಭಕ್ತರಲ್ಲಿ ಮನವಿ ಮಾಡಿದ್ದಾರೆ.

    ದೀಪವೆಂಬುದು ರೋಗ ಪರಿಹಾರಕ ದಿವ್ಯ ವಸ್ತು, ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕೆಂಬ ತತ್ವ ದೀಪದಲ್ಲಿದೆ ಸ್ವಾಮೀಜಿ ತಿಳಿಸಿದರು. ಜಗತ್ತಿನಲ್ಲಿ ಕೊರೊನಾ ಕಾಯಿಲೆಯಿಂದ ಕತ್ತಲು ಆವರಿಸಿದೆ ಕತ್ತಲು ಓಡಿಸಲು ಇದು ಸಾಂಕೇತಿಕ ಆಚರಣೆ. ಅಗ್ನಿಯಿಂದ ಬೆಳಗುವ ಬೆಳಕು ದೇವತೆಗಳಿಗೆ ಪ್ರಿಯ. 9 ಕುಜನ ಸಂಖ್ಯೆ, ಕುಜ ಅಗ್ನಿತತ್ವದ ಅಧಿದೇವತೆ. ಕುಜನ ಪ್ರತಿನಿಧಿ ಅಗ್ನಿಯ ಮೂಲಕ ಕೊರೊನಾ ರಾಹುವನ್ನು ಓಡಿಸಬೇಕು. ಅದಕ್ಕಾಗಿ ಭಕ್ತರು ಇಂದು ದೀಪ ಹೊತ್ತಿಸಬೇಕು ಎಂದು ವಿದ್ಯಾಪ್ರಸನ್ನ ಸ್ವಾಮೀಜಿ ಭಕ್ತರಲ್ಲಿ ಹೇಳಿದರು.

    ಏಪ್ರಿಲ್ 3ರಂದು ವಿಡಿಯೋ ಸಂದೇಶ ಕಳುಹಿಸಿದ ಮೋದಿ ಅವರು, ಏಪ್ರಿಲ್ 5ಕ್ಕೆ ಎಲ್ಲರೂ ಒಟ್ಟಾಗೋಣ. ಏಪ್ರಿಲ್ 5ಕ್ಕೆ ಮಹಾ ಶಕ್ತಿಯ ಜಾಗೃತಿ ಆಗಬೇಕಿದೆ. ಹೀಗಾಗಿ ರಾತ್ರಿ 9 ಗಂಟೆಗೆ ದೀಪ, ಮೇಣದ ಬತ್ತಿ, ಟಾರ್ಚ್, ಮೊಬೈಲ್ ಟಾರ್ಚ್ ಬೆಳಗಿಸಬೇಕು. ಆ ಬೆಳಕಿನಲ್ಲಿ ನಮ್ಮ ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಳ್ಳಬೇಕು. ನಾವು ಎಲ್ಲರೂ ಒಗ್ಗಟ್ಟಾಗಿದ್ದೇವೆ ಎನ್ನುವ ಸಂಕಲ್ಪ ಮಾಡಬೇಕು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮೋದಿ ಕರೆಕೊಟ್ಟಿದ್ದರು.

  • ಏ.5ರಂದು ರಾತ್ರಿ ಮನೆಯ ಬಾಲ್ಕನಿಯಲ್ಲಿ ದೀಪ ಬೆಳಗಿಸಿ: ಮೋದಿ ಕರೆ

    ಏ.5ರಂದು ರಾತ್ರಿ ಮನೆಯ ಬಾಲ್ಕನಿಯಲ್ಲಿ ದೀಪ ಬೆಳಗಿಸಿ: ಮೋದಿ ಕರೆ

    – 9 ಗಂಟೆಗೆ 9 ನಿಮಿಷ ಲೈಟ್ ಆಫ್ ಮಾಡಿ ದೀಪ ಬೆಳಗಿ

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧ ನಾವೆಲ್ಲರೂ ಒಟ್ಟಾಗಿ ಸೇರಿ ಹೋರಾಡಬಹುದು. ಹೀಗಾಗಿ ಏಪ್ರಿಲ್ 5ಕ್ಕೆ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಎಲ್ಲರೂ ಲೈಟ್ ಆಫ್ ಮಾಡಿ ದೀಪ ಬೆಳಗಿಸಿ ಎಂದು ಪ್ರಧಾನಿ ಮೋದಿ ಅವರು ದೇಶವಾಸಿಗಳಿಗೆ ಸಂದೇಶ ಕೊಟ್ಟಿದ್ದಾರೆ.

    ಇಂದು ಬೆಳಗ್ಗೆ 9 ಗಂಟೆಗೆ ಲೈವ್ ಬಂದ ಪ್ರಧಾನಿ, ದೇಶದ ಎಲ್ಲ ಜನರಿಗೂ ನಮಸ್ಕಾರ, ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಿಸುತ್ತಿದೆ. ಹೀಗಾಗಿ ಲಾಕ್‍ಡೌನ್ ಮಾಡಿ 9 ದಿನ ಆಗಿದೆ. ಎಲ್ಲರೂ ಸಹಕಾರ ಕೊಟ್ಟು ಲಾಕ್‍ಡೌನ್‍ನನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ. ಜನತಾ ಕರ್ಫ್ಯೂಗೂ ಬೆಂಬಲ ಕೊಟ್ಟಿದ್ದೀರಿ. ಸಂಕಷ್ಟದ ಹೊತ್ತಲ್ಲಿ ಸಾಮೂಹಿಕವಾಗಿ ಶಕ್ತಿ ಪ್ರದರ್ಶನವಾಗಿದೆ. ಇದರಿಂದ ಕೊರೊನಾ ವಿರುದ್ಧ ಹೋರಾಡಬಹುದು. ಸರ್ಕಾರ, ಕಾನೂನು ಜನರು ಎಲ್ಲರು ಸೇರಿ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಜನರ ಸಹಕಾರಕ್ಕೆ ಧನ್ಯವಾದ ತಿಳಿಸಿದರು.

    ಕೋಟ್ಯಂತರ ಜನರು ಮನೆಯಲ್ಲಿದ್ದಾರೆ. ಎಲ್ಲರಿಗೂ ಮನೆಯಲ್ಲಿ ಕೂತು ಒಬ್ಬನೇ ಏನು ಮಾಡಬಹುದು ಅನಿಸಬಹುದು. ಮನೆಯಲ್ಲಿ ಹೀಗೆ ಎಷ್ಟು ದಿನ ಕಳೆಯಬೇಕು ಅನಿಸಬಹುದು. ಆದರೆ ಲಾಕ್‍ಡೌನ್ ಮುಖ್ಯ. ಇದು ಒಬ್ಬರ ಹೋರಾಟ ಅಲ್ಲ. ಇದಕ್ಕೆ ಸಾಮೂಹಿಕ ಶಕ್ತಿಯ ಅವಶ್ಯಕತೆ ಇದೆ. ಜನತಾ ಜನಾರ್ದನ ಈಶ್ವರನಾ ರೂಪವಾಗಿದೆ. ಹೀಗಾಗಿ ಅಂದಕಾರದ ನಡುವೆ ನಾವು ಪ್ರಕಾಶಮಾನವಾಗಿರಬೇಕು. ನಮ್ಮ ಬಡವರು ಕೊರೊನಾ ನಿರಾಸೆಯಿಂದ ಸಂಕಷ್ಟ ನಡುವೆ ಆಶಾಕಿರಣವಾಗಿದ್ದಾರೆ. ಆದ್ದರಿಂದ ಕೊರೊನಾ ಅನ್ನೋ ಅಂಧಕಾರದಿಂದ ಬೆಳಕಿನತ್ತ ಹೋಗುತ್ತಿದ್ದೇವೆ ಎಂದರು.

    ಏಪ್ರಿಲ್ 5ಕ್ಕೆ ಎಲ್ಲರೂ ಒಟ್ಟಾಗೋಣ. ಏಪ್ರಿಲ್ 5ಕ್ಕೆ ಮಹಾ ಶಕ್ತಿಯ ಜಾಗೃತಿ ಆಗಬೇಕಿದೆ. ಹೀಗಾಗಿ ರಾತ್ರಿ 9 ಗಂಟೆಗೆ ದೀಪ, ಮೇಣದ ಬತ್ತಿ, ಟಾರ್ಚ್, ಮೊಬೈಲ್ ಟಾರ್ಚ್ ಬೆಳಗಿಸಬೇಕು. ಆ ಬೆಳಕಿನಲ್ಲಿ ನಮ್ಮ ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಳ್ಳಬೇಕು. ನಾವು ಇಬ್ಬರೇ ಇಲ್ಲ, ಎಲ್ಲರೂ ಒಗ್ಗಟಾಗಿದ್ದೇವೆ ಎನ್ನುವ ಸಂಕಲ್ಪ ಮಾಡಬೇಕು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮೋದಿ ಮತ್ತೊಮ್ಮೆ ಜನರಿಗೆ ಕರೆ ಕೊಟ್ಟಿದ್ದಾರೆ.

    ಎಲ್ಲರೂ ಲೈಟ್‍ಆಫ್ ಮಾಡಿ ಬಾಲ್ಕನಿಯಲ್ಲಿ ದೀಪ ಬೆಳಗಿಸಿ. ಕೊರೊನಾ ಓಡಿಸಲು ಸಾಮಾಜಿಕ ಅಂತರವೇ ರಾಮಬಾಣ. ಯಾರೂ ಒಂಟಿಯಲ್ಲ. ನಾವೆಲ್ಲರೂ ಒಂದೇ ಅಂತ ಸಾರೋಣ. 130 ಕೋಟಿ ಜನರ ಮುಖಗಳನ್ನು ನೆನಪಿಸಿಕೊಳ್ಳಿ. ಜೊತೆಗೆ ಗೆಲ್ಲಲು ಆತ್ಮವಿಶ್ವಾಸ ಬೆಳೆಸಿಕೊಳ್ಳಿ, ಉತ್ಸಾಹ ಎನ್ನುವುದು ದೊಡ್ಡ ಬಲ. ನಿಮ್ಮ ಸಹಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ದೇಶವಾಸಿಗಳಿಗೆ ನಮಸ್ಕಾರ ತಿಳಿಸಿದರು.

  • ದೇವರ ದೀಪ ಹಾಸಿಗೆಗೆ ತಗುಲಿ 8ರ ಬಾಲಕಿ ಸಜೀವ ದಹನ

    ದೇವರ ದೀಪ ಹಾಸಿಗೆಗೆ ತಗುಲಿ 8ರ ಬಾಲಕಿ ಸಜೀವ ದಹನ

    ಬೆಳಗಾವಿ: ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಹಾಸಿಗೆಗೆ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 8 ವರ್ಷದ ಬಾಲಕಿ ಸಜೀವ ದಹನವಾಗಿರೋ ದುರಂತ ಘಟನೆ ನಗರದ ಅನಗೋಳದಲ್ಲಿ ನಡೆದಿದೆ.

    ಅನಗೋಳದ ನಿವಾಸಿ ಕಸ್ತೂರಿ(8) ಮೃತ ದುರ್ದೈವಿ. ಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಹಾಸಿಗೆಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಜ್ವಾಲೆ ಇಡೀ ಮನೆಯನ್ನೇ ಆವರಿಸಿ ಹೊತ್ತು ಉರಿದಿದೆ. ಪರಿಣಾಮ ಮನೆಯೊಳಗೆ ಮಲಗಿದ್ದ ಬಾಲಕಿ ಸಜೀವ ದಹನವಾಗಿದ್ದಾಳೆ.

    ತಂದೆ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೆಂಕಿ ಜೋರಾದ ಕಾರಣಕ್ಕೆ ಮಗಳನ್ನು ರಕ್ಷಿಸಲು ಅವರಿಂದ ಸಾಧ್ಯವಾಗಿಲ್ಲ. ತಕ್ಷಣ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದು, ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸುವ ಮುನ್ನವೇ ಬೆಂಕಿ ಕೆನ್ನಾಲಿಗೆಗೆ ಬಾಲಕಿ ಬಲಿಯಾಗಿದ್ದಾಳೆ.

    ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಸ್ಸಿನಲ್ಲಿ ಸುಮಾರು 40 ಕೆ.ಜಿಯ 700 ಬೆಳ್ಳಿ ದೀಪಗಳು ವಶ

    ಬಸ್ಸಿನಲ್ಲಿ ಸುಮಾರು 40 ಕೆ.ಜಿಯ 700 ಬೆಳ್ಳಿ ದೀಪಗಳು ವಶ

    ಬೆಂಗಳೂರು: ಐರಾವತ ಕ್ಲಬ್ ಕ್ಲಾಸ್ ಬಸ್ಸಿನಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 15 ಲಕ್ಷ ಮೌಲ್ಯದ ಬೆಳ್ಳಿ ದೀಪಗಳನ್ನು ವಶಕ್ಕೆ ಪಡೆಯಲಾಗಿದೆ.

    ಕೆಎಸ್‍ಆರ್ ಟಿಸಿ ವಿಶೇಷ ತನಿಖಾ ದಳ ಬೆಳ್ಳಿ ದೀಪಗಳನ್ನ ವಶಕ್ಕೆ ಪಡಿಸಿಕೊಂಡಿದೆ. ಬಸ್ ಡ್ರೈವರ್ ಮತ್ತು ಕಂಡಕ್ಟರ್ ಐರಾವತ ಕ್ಲಬ್ ಕ್ಲಾಸ್ ಬಸ್ಸಿನಲ್ಲಿ ಕರ್ನಾಟಕದಿಂದ ಆಂಧ್ರಗೆ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ಕೆಎಸ್‍ಆರ್ ಟಿಸಿ ತನಿಖಾ ಸಿಬ್ಬಂದಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಅನುಮಾನ ಬಂದ ಹಿನ್ನೆಲೆಯಲ್ಲಿ ಹೊಸಕೋಟೆ ಬಳಿಯ ಟೋಲ್‍ನಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಸ್ಸಿನ ಡಿಕ್ಕಿಯಲ್ಲಿ ನಾಲ್ಕು ಬ್ಯಾಗ್ ನಲ್ಲಿ ಸುಮಾರು 40 ಕೆ.ಜಿ ತೂಕದ 700 ಬೆಳ್ಳಿ ದೀಪಗಳು ಪತ್ತೆಯಾಗಿವೆ. ಇವುಗಳ ಒಟ್ಟು ಮೌಲ್ಯ ಬರೋಬ್ಬರಿ 15 ಲಕ್ಷ ರೂಪಾಯಿ ಎಂದು ವರದಿಯಾಗಿದೆ.

    ಈ ಘಟನೆ ಸಂಬಂಧ ಕೆಎಸ್‍ಆರ್ ಟಿಸಿಯ ಐರಾವತ ಕ್ಲಬ್ ಕ್ಲಾಸ್ ಬಸ್ ಚಾಲಕ, ನಿರ್ವಾಹಕನನ್ನು ಅಮಾನತು ಮಾಡಲಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಈ ಸಂಬಂಧ ತನಿಖೆಯನ್ನ ಮುಂದುವರಿಸಿದ್ದಾರೆ. ಸದ್ಯ ವಶಪಡಿಸಿಕೊಂಡಿದ್ದ ದೀಪಗಳನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಗ್ಗೆ ಕರವೇ ವತಿಯಿಂದ ಪಂಜಿನ ಮೆರವಣಿಗೆ

    ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಗ್ಗೆ ಕರವೇ ವತಿಯಿಂದ ಪಂಜಿನ ಮೆರವಣಿಗೆ

    ಚಿಕ್ಕಬಳ್ಳಾಪುರ: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ನೀಡಿರುವ ಭಾರತ್ ಬಂದ್‍ಗೆ ಚಿಕ್ಕಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ.

    ಬೆಳ್ಳಂ ಬೆಳಗ್ಗೆ ಬೀದಿಗೆ ಇಳಿದಿರೋ ಕರವೇ ಯುವಸೇನೆಯಯ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸುವ ಮೂಲಕ ಭಾರತ್ ಬಂದ್‍ಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ನಗರದ ಬಲಮುರಿ ವೃತ್ತದಿಂದ ಬಿಬಿ ರಸ್ತೆ ಮೂಲಕ ಅಂಬೇಡ್ಕರ್ ವೃತ್ತದವರೆಗೂ ಪ್ರತಿಭಟನಾ ಪಂಜಿನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

    ಪೆಟ್ರೋಲ್ ಹಾಗೂ ಡೀಸಲ್ ಸೇರಿದಂತೆ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದ್ದು, ಪೆಟ್ರೋಲ್ ಡೀಸಲ್ ಬೆಲೆ ಇಳಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಡೂರಿನಲ್ಲಿ ನೀರಿನಲ್ಲಿಯೇ ಬೆಳಗಿತು ದೀಪ – ಸ್ಥಳೀಯರಲ್ಲಿ ಅಚ್ಚರಿ

    ಕಡೂರಿನಲ್ಲಿ ನೀರಿನಲ್ಲಿಯೇ ಬೆಳಗಿತು ದೀಪ – ಸ್ಥಳೀಯರಲ್ಲಿ ಅಚ್ಚರಿ

    ಚಿಕ್ಕಮಗಳೂರು: ನೀರಲ್ಲಿ ದೀಪ ಉರಿಯುತ್ತೆ ಅಂದ್ರೆ ಯಾರೂ ನಂಬೋದಿಲ್ಲ. ಆದರೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಡುಗದಹಳ್ಳಿ ಸೋಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಡೆಯೋ ಎಣ್ಣೆಹೊಳೆ ಪೂಜಾ ಕಾರ್ಯಕ್ರಮದಲ್ಲಿ ನೀರಿನಿಂದಲೇ ದೀಪ ಉರಿಸಿದ್ದಾರೆ.

    12 ವರ್ಷಕ್ಕೊಮ್ಮೆ ನಡೆಯೋ ಈ ಪೂಜಾ ಕಾರ್ಯ ಕಳೆದ ವರ್ಷವೇ ನಡೆದಿತ್ತು. ಅಂದು ಮಳೆ ಬಂದೇ ಬರುತ್ತೆ ಅಂತ ಜನ ಕಾದು ಕೂತಿದ್ದರು. ಆದರೆ ಮಳೆ ಬಂದಿರಲಿಲ್ಲ. ಆದರೆ ಕಳೆದ ಮೂರು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ವೇದಾವತಿ ನದಿ ಮೈದುಂಬಿ ಹರಿದ ಹಿನ್ನೆಲೆಯಲ್ಲಿ ನದಿಗೆ ಪೂಜೆ ಮಾಡಿ ಆ ನೀರಿನಲ್ಲೇ ದೀಪ ಹಚ್ಚಿದ್ದಾರೆ.

    ದೇವರ ಮುಂದಿನ ದೀಪದ ತುಂಬ ಎಣ್ಣೆ ಬದಲು ನೀರನ್ನೇ ಹಾಕಿದ್ದಾರೆ. ನೀರು ಖಾಲಿಯಾಗೋವರೆಗೂ ದೀಪ ಉರಿದಿದೆ. ಈ ಸುಮಧುರ ಘಳಿಗೆಯನ್ನ ಕಂಡ ಸ್ಥಳಿಯರು ಆಶ್ಚರ್ಯಕ್ಕೀಡಾಗಿ ಸೋಮೇಶ್ವರ ಸ್ವಾಮಿಗೆ ಉಘೇ ಎಂದಿದ್ದಾರೆ.