Tag: land

  • ಯುವಕರ ಸಾಹಸ – ಭೂಗಳ್ಳರ ಕೈಯಿಂದ ಶಾಲೆಗೆ ಸೇರಿತು ಕೋಟ್ಯಂತರ ಮೌಲ್ಯದ ಜಮೀನು

    ಯುವಕರ ಸಾಹಸ – ಭೂಗಳ್ಳರ ಕೈಯಿಂದ ಶಾಲೆಗೆ ಸೇರಿತು ಕೋಟ್ಯಂತರ ಮೌಲ್ಯದ ಜಮೀನು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಮನೆ ಮಠ, ಸ್ಕೂಲ್ ಕಾಲೇಜು, ಕಂಪನಿಗಳನ್ನು ಮಾಡಿಕೊಂಡು ನಮ್ಮದೇ ಜಾಗ ಇದು ಅಂತಾ ಬೋರ್ಡ್ ಹಾಕಿಕೊಂಡಿರುವವರನ್ನು ನೋಡಿದ್ದೇವೆ. ಆದರೆ ಗ್ರಾಮದ ಯುವಕರು ನಡೆಸಿದ ಪ್ರಯತ್ನದಿಂದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸ್ವತ್ತು ಮತ್ತೆ ಗ್ರಾಮಕ್ಕೆ ಸೇರಿದೆ.

    ಬೆಂಗಳೂರು ಪೂರ್ವ ತಾಲೂಕು, ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡ ಅಗ್ರಹಾರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಮುಂಭಾಗದ ಸುಮಾರು ಹದಿಮೂರುವರೆ ಗುಂಟೆ ಜಾಗವನ್ನು ಅನೇಕರು 20 ವರ್ಷಗಳ ಹಿಂದೆ ಖಾಸಗಿಯವರಿಗೆ ಪರಭಾರೆ ಮಾಡಲಾಗಿತ್ತು. ಗ್ರಾಮದ ಯುವಕರು ಇದು ಸರ್ಕಾರಿ ಜಾಗ ಹೇಗೆ ಖಾಸಗಿಯವರಿಗೆ ಸೇರಿದೆ ಅಂತಾ ಹೋರಾಟಕ್ಕೆ ನಿಂತರು. ಕಂದಾಯ ಇಲಾಖೆಗೆ ಪತ್ರಗಳನ್ನು ಬರೆಯುವ ಮೂಲಕ ಗ್ರಾಮದ ನಕ್ಷೆಯಲ್ಲಿರುವ ಗ್ರಾಮ ಠಾಣಾ ಸ್ವತ್ತನ್ನು ಗುರುತಿಸಿ ಗ್ರಾಮಕ್ಕೆ ಮರಳಿ ನೀಡುವಂತೆ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: ಎಎಸ್‍ಐಗಳಿಂದ ಕಿರಿಯ ಸಹೋದ್ಯೋಗಿಗಳ ಮೇಲೆ ನಡೆಯುತ್ತಿದ್ಯಾ ದಬ್ಬಾಳಿಕೆ?

    ಕಳೆದ ತಿಂಗಳು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಇದು ಸರ್ಕಾರಿ ಸ್ವತ್ತು, ಗ್ರಾಮಠಾಣಾ ವ್ಯಾಪ್ತಿಗೆ ಬರಲಿದೆ ಅಂತಾ, ಗುರುತಿಸಿ ಅಲ್ಲಿ ಅತಿಕ್ರಮಣ ಮಾಡಿಕೊಂಡಿದ್ದವರನ್ನು ತೆರವು ಮಾಡಿಸಿ ಬೋರ್ಡ್ ಹಾಕಿದ್ದಾರೆ. ಸರಿ ಸುಮಾರು 4 ಕೋಟಿಗೂ ಅಧಿಕ ಬೆಲೆ ಬಾಳುವ ಜಾಗವನ್ನು ಗ್ರಾಮಕ್ಕೆ ಮತ್ತೆ ಉಳಿಸಿಕೊಂಡ ಸಂತಸ ಗ್ರಾಮದ ಯುವಕರಿಲ್ಲಿದ್ದು ಇಲ್ಲಿ ಶಾಲಾ ಮಕ್ಕಳಿಗೆ ಆಟದ ಮೈದಾನ, ಲೈಬ್ರರಿ, ಕುಡಿಯುವ ನೀರಿನ ಘಟಕ ಮತ್ತು ಸಮುದಾಯ ಭವನ ಮಾಡುವ ಉದ್ದೇಶವನ್ನು ಯುವಕರು ಹೊಂದಿದ್ದಾರೆ.

    ಗ್ರಾಮದ ಯುವಕರ ಪ್ರಯತ್ನದಿಂದ ಕಂಡವರ ಪಾಲಾಗುತ್ತಿದ್ದ ಗ್ರಾಮದ ಜಾಗ ಉಳಿದಿದೆ. ಇದೇ ರೀತಿ ಸರ್ಕಾರಿ ಜಾಗವನ್ನು ಉಳಿಸುವ ಕೆಲಸ ಪ್ರತಿಯೊಬ್ಬರು ಮಾಡಿದ್ದರೆ ಒತ್ತುವರಿ ಮಾಡುವವರಿಗೆ ಪಾಠ ಕಲಿಸಿದಂತೆ ಆಗಲಿದೆ. ಇದನ್ನೂ ಓದಿ : ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದೇವೆ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಬೇಲಿಯೇ ಎದ್ದು ಹೊಲ ಮೇಯ್ದ ಕಥೆ – ಸರ್ಕಾರಿ ಸಂಸ್ಥೆಗಳಿಂದಲೇ ಕೆರೆ ಗುಳುಂ

    ಬೇಲಿಯೇ ಎದ್ದು ಹೊಲ ಮೇಯ್ದ ಕಥೆ – ಸರ್ಕಾರಿ ಸಂಸ್ಥೆಗಳಿಂದಲೇ ಕೆರೆ ಗುಳುಂ

    ಬೆಂಗಳೂರು: ಉದ್ಯಾನನಗರಿ ಬೆಂಗಳೂರು(Bengaluru) ಕಾಂಕ್ರೀಟ್ ಕಾಡು ಆಗುವ ಭರದಲ್ಲಿ ತನ್ನ ಮೂಲ ಸ್ವರೂಪವನ್ನ ಕಳೆದುಕೊಂಡು ಎಷ್ಟೋ ವರ್ಷಗಳಾಗಿದೆ. ಮಳೆ(Rain) ಅನಾಹುತದ ನಂತ್ರ ಒತ್ತುವರಿ ಬಗ್ಗೆ ವರಿ ಮಾಡಿರೋ ಸರ್ಕಾರ ಕೆರೆ ಒತ್ತುವರಿ(Lake Encroachment) ಪಟ್ಟಿ ಬಿಡುಗಡೆ ಮಾಡಿದೆ. ವಿಪರ್ಯಾಸ ಅಂದರೆ ಖಾಸಗಿಯವರಿಂದ ಆದ ಒತ್ತುವರಿಗಿಂತ ಸರ್ಕಾರಿ ಸಂಸ್ಥೆಗಳಿಂದಲೇ ಆದ ಒತ್ತುವರಿಯೇ ಹೆಚ್ಚು.

    ಮಾಯವಾದ ಕೆರೆಗಳ ಬಹುಪಾಲನ್ನು ಸರ್ಕಾರಿ ಸಂಸ್ಥೆಗಳೇ ನುಂಗಿವೆ. ಜನ, ಖಾಸಗಿಯವರತ್ತ ಬೊಟ್ಟು ಮಾಡುತ್ತಿರುವ ಸರ್ಕಾರ, ತನ್ನಿಂದಲೇ ಆದ ತಪ್ಪುಗಳತ್ತ ನೋಡುತ್ತಿಲ್ಲ. ಅಭಿವೃದ್ಧಿಯ ಹೆಸರಿನಲ್ಲಿ ಕೆರೆಗಳನ್ನೇ ಗುಳುಂ ಮಾಡಿರೋ ಸರ್ಕಾರ, ತಪ್ಪಿತಸ್ಥ ಸ್ಥಾನದಲ್ಲಿ ನಿಂತಿದೆ.. ಈ ಪಟ್ಟಿಯಲ್ಲಿ ಬಿಡಿಎ(BDA), ಬಿಬಿಎಂಪಿ(BBMP), ಸ್ಲಂಬೋರ್ಡ್, ಬಿಎಂಟಿಸಿ, ಗೃಹ ಮಂಡಳಿ, ಕೆಐಎಡಿಬಿ, ರೈಲ್ವೆ ಸೇರಿ ಅನೇಕ ಇಲಾಖೆಗಳಿವೆ. ಇದನ್ನೂ ಓದಿ: ವಿಮಾನದಲ್ಲಿ ಭಾರತಕ್ಕೆ ಬರುತ್ತಿದೆ 8 ಚೀತಾ – ವಿಶೇಷತೆ ಏನು? ತಯಾರಿ ಹೇಗೆ?

    ಅದರಲ್ಲೂ ಬಿಡಿಎ ಒತ್ತುವರಿ ಶೂರ ಎಂದ್ರೆ ತಪ್ಪಲ್ಲ. ಯಾಕೆಂದರೆ ಅತೀ ಹೆಚ್ಚು ಕೆರೆ ಒತ್ತುವರಿ ಬಿಡಿಎನಿಂದಲೇ ಆಗಿದೆ. ಕೋಳಿವಾಡ ಸಮಿತಿ ನೀಡಿದ ವರದಿಯನ್ನೇ ಆಧಾರವಾಗಿರಿಸಿಕೊಂಡು ಬಿಬಿಎಂಪಿ 201 ಕೆರೆಗಳು ಒತ್ತುವರಿ ಆಗಿರೋ ಬಗ್ಗೆ ದಾಖಲೆ ಸಿದ್ದಪಡಿಸಿದೆ

    ಕೆರೆ ನುಂಗಣ್ಣರು ಯಾರು:
    * ಬಿಡಿಎ – 128.5 ಎಕರೆ
    * ಬಿಬಿಎಂಪಿ -85.07 ಎಕರೆ
    * ಸ್ಲಂ ಬೋರ್ಡ್ – 30.12 ಎಕರೆ
    * ಮಾಲಿನ್ಯ ನಿಯಂತ್ರಣ ಮಂಡಳಿ – 15.24
    * ಅರಣ್ಯ – 13.23 ಎಕರೆ
    * ರೈಲ್ವೆ – 12.63 ಎಕರೆ
    * ಖಾಸಗಿಯವರು – 200 ಎಕರೆ

    ಸಿಎಜಿ ವರದಿ ಸಲ್ಲಿಕೆ:
    ಬೆಂಗಳೂರು ರಾಜಕಾಲುವೆ ಒತ್ತುವರಿ ತೆರವು ಸಂಬಂಧ ಸಿಎಜಿ 2020-21ರ ಸಾಲಿನ ವರದಿ ಪ್ರಕಟಿಸಿದೆ. ಈ ವರದಿಯಲ್ಲಿ ಕೋರ್ಟ್ ನಿರ್ದೇಶನವನ್ನು ಬಿಬಿಎಂಪಿ ಗಾಳಿಗೆ ತೂರಿದೆ ಎಂದು ಉಲ್ಲೇಖಿಸಲಾಗಿದೆ. ಮಳೆ ನೀರುಗಾಲುವೆ ವ್ಯವಸ್ಥೆ ಹಾಳಾಗಲು ಬಿಬಿಎಂಪಿ ಕಾರಣ ಎಂದಿದೆ. ಆರ್‍ಎಂಪಿ-2015ರ ಪ್ರಕಾರ ರಾಜಕಾಲುವೆ ಎರಡು ಬದಿಯಲ್ಲಿ ಸ್ಪಷ್ಟವಾಗಿ ಬಫರ್ ಜೋನ್ ಗುರುತು ಮಾಡಬೇಕು. ಆದರೆ ಕೆಎಂಸಿ ಆಕ್ಟ್ 1976ರ ಸೆಕ್ಷನ್ 58 ಪ್ರಕಾರ ಗೊತ್ತು ಮಾಡಿದ ಕಾಲುವೆ ಗಡಿಗಳನ್ನು ಪರಿಶೀಲನೆ ಮಾಡಿದಾಗ, ಅವುಗಳ ನಿರ್ವಹಣೆ ಆಗಿಲ್ಲ ಎನ್ನುವುದು ಗೊತ್ತಾಗಿದೆ. ಬಿಬಿಎಂಪಿಯಿಂದಲೇ ರಾಜ ಕಾಲುವೆ ಬಫರ್ ಜೋನ್ ನಿಯಮ ಪಾಲನೆ ಆಗದಿರುವುದೇ ಅತಿಕ್ರಮಣಕ್ಕೆ ಕಾರಣ ಎಂದು ಸಿಎಜಿ ಹೇಳಿದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ – ನಾಳೆ ಹುಟ್ಟುವ ಮಕ್ಕಳಿಗೆ ಚಿನ್ನದುಂಗುರ ನೀಡಲಿದೆ ಬಿಜೆಪಿ

    ಸಿಎಜಿ ವರದಿಯಲ್ಲಿ ಏನಿದೆ?
    * 2016-2020ರವರೆಗೂ 2,626 ಕಡೆ ರಾಜಕಾಲುವೆ ಒತ್ತುವರಿ
    * 2016-2021ರವರೆಗೂ 1 ಸಾವಿರಕ್ಕೂ ಹೆಚ್ಚು ಒತ್ತುವರಿ ತೆರವು
    * ಅಧಿಕಾರಿಗಳು, ಗುತ್ತಿಗೆದಾರರಿಂದ ಒತ್ತುವರಿ ತೆರವಿನ ನಷ್ಟ ಭರಿಸಿ

    Live Tv
    [brid partner=56869869 player=32851 video=960834 autoplay=true]

  • ಬ್ರಹ್ಮಪುತ್ರ ನದಿ ದಂಡೆ ಬಳಿಯ 330 ಎಕರೆಯಲ್ಲಿರುವ ಅಕ್ರಮ ಮನೆ ತೆರವು!

    ಬ್ರಹ್ಮಪುತ್ರ ನದಿ ದಂಡೆ ಬಳಿಯ 330 ಎಕರೆಯಲ್ಲಿರುವ ಅಕ್ರಮ ಮನೆ ತೆರವು!

    ಗುವಾಹಟಿ: ಬ್ರಹ್ಮಪುತ್ರ ನದಿ ದಂಡೆ ಮೇಲಿರುವ 330 ಎಕರೆ ಭೂಮಿಯಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದ ತೆರವು ಕಾರ್ಯಾಚರಣೆಯು ಒಂದು ಹಂತದಲ್ಲಿ ಮುಗಿದೆ.

    ಅಸ್ಸಾಂನ ಸೋನಿತ್‍ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿರುವ ಬರ್ಚಲ್ಲಾದ 3ನೇ ಚಿಟಲ್ಮರಿ ಪ್ರದೇಶದಲ್ಲಿ ಇರುವ ಮನೆಗಳನ್ನು ಕೆಡವಲು 50 ಜೆಸಿಬಿ, ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಮಿಕರು, ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ.

    ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಅಕ್ರಮ ನಿವಾಸಿಗಳಿಗೆ ತೆರವು ನೋಟಿಸ್‍ನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿರುವ ಜನರೆಲ್ಲರೂ ಆ ಪ್ರದೇಶವನ್ನು ತೊರೆದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಮುಕ್ತವಾಗಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

    ಮುಂಜಾನೆ 5 ಗಂಟೆಯ ಸುಮಾರಿಗೆ ಈ ತೆರವು ಕಾರ್ಯಾಚರಣೆ ಪ್ರಾರಂಭವಾಗಿತ್ತು. ತೆರವುಗೊಳಿಸಬೇಕಾದ ಪ್ರದೇಶವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಒಂದು ಭಾಗವು ಬೆಳಗ್ಗೆ 9 ಗಂಟೆಗೆ ಮುಗಿದಿದೆ ಎಂದರು.

    ಮುನ್ನೆಚ್ಚರಿಕೆ ಕ್ರಮವಾಗಿ ಅಸ್ಸಾಂ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಸೇರಿದಂತೆ ಸುಮಾರು 1,200 ಭದ್ರತಾ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಸರ್ಕಾರಿ ದಾಖಲೆಗಳ ಪ್ರಕಾರ, 299 ಕುಟುಂಬಗಳು ಈ ಪ್ರದೇಶದಲ್ಲಿ ವಾಸಿಸುತ್ತಿದ್ದವು. ಆದರೆ ಅವರಲ್ಲಿ ಶೇಕಡಾ 90 ಕ್ಕೂ ಹೆಚ್ಚು ಕುಟುಂಬಗಳು ಸುಮಾರು 8 ತಿಂಗಳ ಹಿಂದೆ ನೋಟಿಸ್ ಸ್ವೀಕರಿಸಿದ್ದು, ಆಗಲೇ ಈ ಪ್ರದೇಶದಿಂದ ತೊರೆದಿದ್ದಾರೆ. ಇದನ್ನೂ ಓದಿ: ಪ್ರಶ್ನೆಗೆ ಉತ್ತರಿಸಲು ತಡಪಡಿಸಿದ ಜಿಲ್ಲಾಧಿಕಾರಿಗೆ ಸೀತಾರಾಮನ್ ಕ್ಲಾಸ್ – ಕೆಟಿಆರ್ ಆಘಾತ

    ಈ ಬಗ್ಗೆ ಅಲ್ಲಿನ ಕೆಲವು ನಿವಾಸಿಗಳು ಮಾತನಾಡಿ, ನಾವು ದಶಕಗಳಿಂದ ಇಲ್ಲೇ ವಾಸಿಸುತ್ತಿದ್ದೆವು. ನಾವು ಹೊಲಗಳಲ್ಲಿ ಕೆಲಸ ಮಾಡುತ್ತಿದ್ದೆವು ಇದರಿಂದಾಗಿ ನಮಗೆ ಬೇರೆ ಯಾವ ಉದ್ಯೋಗವು ಇಲ್ಲ. ಸರ್ಕಾರದಿಂದ ಯಾವುದೇ ಪುನರ್ವಸತಿ ಕಲ್ಪಿಸಿಲ್ಲ ಅಳಲು ತೋಡಿಕೊಂಡರು. ಇದನ್ನೂ ಓದಿ: ಕೇಳುವಷ್ಟು ಶಾಂತಿ, ಸಹನೆ ಇಲ್ಲವೆಂದ್ರೆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ: ಡಿಕೆಶಿ

    Live Tv
    [brid partner=56869869 player=32851 video=960834 autoplay=true]

  • ಮಲಗಿದ್ದ ಮಹಿಳೆ ಮೇಲೆ ಹೆಡೆ ಎತ್ತಿ ಕುಳಿತ ನಾಗರಹಾವು – ಪವಾಡದ ರೀತಿ ಪಾರು

    ಮಲಗಿದ್ದ ಮಹಿಳೆ ಮೇಲೆ ಹೆಡೆ ಎತ್ತಿ ಕುಳಿತ ನಾಗರಹಾವು – ಪವಾಡದ ರೀತಿ ಪಾರು

    ಕಲಬುರಗಿ: ಎದೆ ಝಲ್ ಎನ್ನಿಸುವಂತಹ ಘಟನೆಯೊಂದು ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ನಾಗರಹಾವು ಎಂದರೆ ಯಾರಿಗೆ ತಾನೇ ಭಯ ಇರುವುದಿಲ್ಲ ಹೇಳಿ. ಒಮ್ಮೆ ನಾಗರ ಹಾವು ಕಚ್ಚಿದರೆ ಪ್ರಾಣ ಉಳಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೆ ಕಲಬುರಗಿಯಲ್ಲಿ ಮಹಿಳೆಯೊಬ್ಬರು ಪವಾಡದ ರೀತಿಯಲ್ಲಿ ನಾಗರ ಹಾವಿನಿಂದ ಪಾರಾಗಿದ್ದಾರೆ.

    ಹೌದು, ಜಮೀನಿನಲ್ಲಿ ಮಲಗಿದ್ದ ಭಾಗಮ್ಮ ಬಡದಾಳ್ ಅವರ ಮೈ ಮೇಲೆ ನಾಗರಹಾವೊಂದು ಎಡೆ ಎತ್ತಿ ಕುಳಿತುಕೊಂಡಿತ್ತು. ಇದನ್ನು ಕಂಡು ಗಾಬರಿಗೊಂಡ ಭಾಗಮ್ಮ ಸ್ಥಳದಿಂದ ಒಂದು ಚೂರು ಸಹ ಕದಡದೇ ಮಲಗಿದ್ದ ಜಾಗದಲ್ಲಿಯೇ ಕಾಪಾಡು ಶ್ರೀಶೈಲ ಮಲ್ಲಯ್ಯ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಡೇಟಿಂಗ್ ಆ್ಯಪ್ ತಂದ ಅವಾಂತರ – ಪ್ರಿಯಕರನನ್ನೇ ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ್ಲು

    ಕೆಲಹೊತ್ತಿನ ನಂತರ ಪವಾಡದ ರೀತಿ ನಾಗರಹಾವು ಮಹಿಳೆಗೆ ಏನನ್ನು ಸಹ ಮಾಡದೇ ಸ್ಥಳದಿಂದ ಕಾಲ್ಕೆತ್ತಿದೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ ಕಾಮಗಾರಿ – ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಪಂಚಾಯತ್‌ನಿಂದ ದೂರು

    Live Tv
    [brid partner=56869869 player=32851 video=960834 autoplay=true]

  • ತಮ್ಮನ ಕಿರುಕುಳ ತಾಳಲಾರದೇ ಅಣ್ಣ ಆತ್ಮಹತ್ಯೆಗೆ ಶರಣು

    ತಮ್ಮನ ಕಿರುಕುಳ ತಾಳಲಾರದೇ ಅಣ್ಣ ಆತ್ಮಹತ್ಯೆಗೆ ಶರಣು

    ಬೆಳಗಾವಿ: ತಮ್ಮನ ಕಿರುಕುಳ ತಾಳಲಾರದೇ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಅಣ್ಣನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಚಗಾಂವ ಗ್ರಾಮದಲ್ಲಿ ನಡೆದಿದೆ.

    ತಾಲೂಕಿನ ಉಚಗಾಂವ ಗ್ರಾಮದ ಶ್ರೀಕಾಂತ ಅಪ್ಪಾಜಿ ಜಾಧವ್(56) ಆತ್ಮಹತ್ಯೆ ಮಾಡಿಕೊಂಡವ. ಮೃತ ಶ್ರೀಕಾಂತ್ ಮತ್ತು ಆತನ ತಮ್ಮ ಮಧುಕರ್ ಜಾಧವ್ ನಡುವೆ ಜಮೀನು ವಿವಾದವಿತ್ತು. ಪದೇ ಪದೇ ಮೃತ ಶ್ರೀಕಾಂತ್ ಜಾಧವ್‍ಗೆ ಅವರ ಸಹೋದರ ಮಧುಕರ್ ಜಾಧವ್ ಕಿರುಕುಳ ನೀಡುತ್ತಿದ್ದನಂತೆ ಇದರಿಂದ ಬೇಸತ್ತು ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಶ್ರೀಕಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾಕತಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ:  ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಇಂದಿನಿಂದ ವಿದ್ಯುತ್‌ ದರ ಏರಿಕೆ

    ಪ್ರಕರಣ ಹಿನ್ನೆಲೆ:
    ಮಧುಕರ್ ಜಾಧವ್ ಮೃತ ಶ್ರೀಕಾಂತ್ ಹಾಗೂ ಅವರ ತಂದೆ ಅಪ್ಪಾಜಿಗೆ ತಿಳಿಸದೇ ನಾಲ್ಕು ವರ್ಷದ ಹಿಂದೆ ಸುಧೀರ್ ಗಡ್ಡೆ ಎಂಬ ಬಿಲ್ಡಪ್‍ಗೆ 28 ಲಕ್ಷ ರೂಪಾಯಿಗೆ 1 ಎಕರೆ 6 ಗುಂಟೆ ಜಮೀನು ಮಾರಾಟ ಮಾಡಿದ್ದನಂತೆ. ಇದು ಗೊತ್ತಾದ ಮೇಲೆ ಮಧುಕರ್ ಜಾಧವ್ ಮೇಲೆ ಶ್ರೀಕಾಂತ್ ಕೇಸ್ ಹಾಕಿದ್ದರು. ನಂತರ ರಾಜಿ ಪಂಚಾಯತಿ ಮಾಡಿ ಸಮಾಧಾನ ಪಡಿಸಲು ಮಧುಕರ್ ಮುಂದಾಗಿದ್ದನಂತೆ. ನಂತರ ಸಬ್ ರಿಜಿಸ್ಟರ್ ಕಡೆ ಹೋಗಿ ಸಹಿ ಮಾಡಿಸಿ ಶ್ರೀಕಾಂತ್‍ಗೆ 6 ಲಕ್ಷ ರೂಪಾಯಿ ಕೊಟ್ಟು ಮಧುಕರ್ ಕೈ ತೊಳೆದುಕೊಂಡು ಬಿಟ್ಟಿದ್ದನು. ಇದನ್ನೂ ಓದಿ:  ನಾಯಿಕಚ್ಚಿ ರೇಬಿಸ್ ಕಾಯಿಲೆಯಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸಾವು

    ನಂತರ ತಮಗಾದ ಮೋಸಕ್ಕೆ ನ್ಯಾಯ ಕೊಡಿಸುವಂತೆ ಗ್ರಾಮದ ಹಿರಿಯರ ಬಳಿ ಶ್ರೀಕಾಂತ್ ಹೋದರೂ ಗ್ರಾಮದ ಹಿರಿಯರ ಮೇಲೆ ಮಧುಕರ್ ಮತ್ತು ಆತನ ಪತ್ನಿ ಗ್ರಾಮ ಪಂಚಾಯತಿ ಸದಸ್ಯೆ ಭಾರತಿ ಒತ್ತಡ ಹಾಕಿದ್ದರಂತೆ. ಇದರಿಂದ ಮನನೊಂದು ನಮ್ಮ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶ್ರೀಕಾಂತ್ ಸುಪುತ್ರ ಸಂತೋಷ್ ಆರೋಪಿಸಿದ್ದಾನೆ. ಈ ಪ್ರಕರಣ ದಾಖಲಿಸಿಕೊಂಡ ಕಾಕತಿ ಪೊಲೀಸರು ತನಿಖೆ ನಡೆಸಿದ್ದಾರೆ.

    Live Tv

  • ಪತ್ನಿ ಜೊತೆ ಜಗಳ – ಮಕ್ಕಳಿಗೆ ಎಗ್‍ರೈಸ್‍ನಲ್ಲಿ ವಿಷ ಹಾಕಿ ಕೊಂದ ತಂದೆ

    ಪತ್ನಿ ಜೊತೆ ಜಗಳ – ಮಕ್ಕಳಿಗೆ ಎಗ್‍ರೈಸ್‍ನಲ್ಲಿ ವಿಷ ಹಾಕಿ ಕೊಂದ ತಂದೆ

    ವಿಜಯಪುರ: ತಂದೆಯೊಬ್ಬ ತನ್ನ ಪತ್ನಿ ಜಮೀನು ಮಾರಲು ಒಪ್ಪದಕ್ಕೆ ಕುಪಿತಗೊಂಡು ಮಕ್ಕಳಿಗೆ ಎಗ್‍ರೈಸ್‍ನಲ್ಲಿ ವಿಷ ಹಾಕಿ ತಿನ್ನಿಸಿದ್ದು, ಪುತ್ರ ಸಾವನ್ನಪ್ಪಿದ ಘಟನೆ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ.

    ಶಿವರಾಜ್ ಅರಸನಾಳ (2) ಹತ್ಯೆಗೀಡಾದ ಮಗು. ಆರೋಪಿ ತಂದೆ ಚಂದ್ರಶೇಖರ್ ಅರಸನಾಳ ಮೈತುಂಬ ಸಾಲಮಾಡಿಕೊಂಡಿದ್ದನು. ಹಾಗಾಗಿ ತನ್ನ ಪತ್ನಿಗೆ ಜಮೀನು ಮಾರಾಟ ಮಾಡುವಂತೆ ಒತ್ತಾಯಸುತ್ತಿದ್ದನು. ಮಾರಾಟ ಮಾಡಲು ಒಪ್ಪದ ಹಿನ್ನಲೆ ಕುಪಿತಗೊಂಡು ಮಕ್ಕಳಿಗೆ ಎಗ್‍ರೈಸ್‍ನಲ್ಲಿ ವಿಷ ಹಾಕಿ ಮಗ ಹಾಗೂ ಮಗಳಿಗೆ ಉಣ್ಣಿಸಿದ್ದಾನೆ. ಇದರ ಪರಿಣಾಮವಾಗಿ ಗಂಡು ಮಗುವೊಂದು ಸಾವನ್ನಪ್ಪಿದ್ದು, ಮಗಳು ರೇಣುಕಾ (5) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವಳ ಸ್ಥಿತಿ ಗಂಭೀರವಾಗಿದೆ.

    ಈಗಾಗಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತಾಳಿಕೋಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಭೂ ವಿವಾದದ ತೀರ್ಪು 108 ವರ್ಷದ ಬಳಿಕ ಪ್ರಕಟ

    ಭೂ ವಿವಾದದ ತೀರ್ಪು 108 ವರ್ಷದ ಬಳಿಕ ಪ್ರಕಟ

    ಪಾಟ್ನಾ: ದೇಶದಲ್ಲಿ ನ್ಯಾಯದಾನ ವಿಳಂಬಕ್ಕೆ ಇದು ಒಂದು ಉದಾಹರಣೆ. ನಾಲ್ಕು ತಲೆಮಾರುಗಳ ಸುದೀರ್ಘ ನಿರೀಕ್ಷಣೆ, ಲೆಕ್ಕವಿಲ್ಲದಷ್ಟು ವಿಚಾರಣೆ. ಎಷ್ಟೋ ವಾದ-ಪ್ರತಿವಾದಗಳ ಭಾರತದ ಅತ್ಯಂತ ಹಳೆಯ ಪ್ರಕರಣ ಎಂದು ಭಾವಿಸಲಾದ ಒಂದು ಭೂವಿವಾದದ ತೀರ್ಪು ಬರೋಬ್ಬರಿ 108 ವರ್ಷದ ಬಳಿಕ ಹೊರಬಿದ್ದಿದೆ.

    ಬಿಹಾರದ ಭೋಜ್‍ಪುರಿ ಜಿಲ್ಲಾ ಕೋರ್ಟ್ ಮೇ 11 ರಂದು ತೀರ್ಪು ನೀಡಿದೆ. ಕೊಯಿಲ್‍ವಾರ್ ಗ್ರಾಮದ ದರ್ಬಾರಿ ಸಿಂಗ್ ಎಂಬುವವರು ಅಜಾರ್ ಖಾನ್ ವಿರುದ್ಧ 1914ರಲ್ಲಿ ಆರಾ ಸಿವಿಲ್ ಕೋರ್ಟ್ ದಾಖಲಿಸಿದ್ದರು. ಈವರೆಗೂ ಎರಡು ಕುಟುಂಬಗಳು ರಾಜಿಗೆ ಮುಂದಾಗಲಿಲ್ಲ. ಈ ವಿವಾದದ ತೀರ್ಪು ಇದೀಗ ಹೊರಬಿದ್ದಿದೆ.

    ತೀರ್ಪಿನ ಪರಿಣಾಮ 91 ವರ್ಷದ ಸರ್ಕಾರದ ವಶದಲ್ಲಿದ್ದ 3 ಎಕರೆ ಭೂಮಿ ಈಗ ದರ್ಬಾರಿ ಸಿಂಗ್ ಕುಟುಂಬದ ನಾಲ್ಕನೇ ತಲೆಮಾರಿನ ವ್ಯಕ್ತಿಗೆ ಹಸ್ತಾಂತರ ಆಗಲಿದೆ

    ಕೋಯಿಲ್‍ವಾರ್ ಗ್ರಾಮದಲ್ಲಿ ಈಗ ಒಂದು ಎಕರೆ ಭೂಮಿ ಬೆಲೆ 5 ಕೋಟಿ ರೂಪಾಯಿ. ಹೀಗಾಗಿ ಸೋತವರು ಹೈಕೋರ್ಟ್, ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಂಭವವೂ ಇದೆ.

  • ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್

    ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್

    ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ತಾಯಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಭೂಮಿ ಕಬಳಿಕೆ ಮಾಡಿದ್ದಾರೆ.

    ಬಿಪಿಎಲ್ ತಾಯಿಗೆ ಮಂಜೂರಾದ ಜಮೀನು ಪಕ್ಕದಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಎಸ್.ಎನ್.ಸಿಟಿ ಮಾಡಿಕೊಂಡಿದ್ದಾರೆ. ಆದರೆ ತಾಯಿ ಮುನಿಯಮ್ಮ ಮಾತ್ರ ಈಗಲೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದ ಸರ್ವೇ ನಂ.256 ರಲ್ಲಿ 3 ಎಕರೆ 10 ಗುಂಟೆ ಸರ್ಕಾರಿ ಜಮೀನನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ತಾಯಿ ಮುನಿಯಮ್ಮ ಹೆಸರಿಗೆ 2018-19ರಲ್ಲಿ ಮಂಜೂರು ಮಾಡಿದ್ದಾರೆ.

    1998 ರಲ್ಲಿಯೇ ಅರ್ಜಿ ಸಲ್ಲಿಸಿದಂತೆ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಸರ್ಕಾರಿ ಭೂಮಿಯನ್ನು ತಮ್ಮ ತಾಯಿ ಹೆಸರಿಗೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಪ್ರಮುಖವಾಗಿ ಭೂಮಿ ಮಂಜೂರು ಮಾಡಿದಾಗ ದರಾಖಾಸ್ತು ಕಮಿಟಿ ಅಧ್ಯಕ್ಷರಾಗಿದ್ದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೋಟಿ ಬೆಲೆ ಬಾಳುವ ಜಮೀನನ್ನು ಕಮಿಟಿಯಲ್ಲಿ ತಮ್ಮ ತಾಯಿ ಹೆಸರಿಗೆ ಮಂಜೂರು ಮಾಡುವುದು ಸ್ವಜನ ಪಕ್ಷಪಾತ. ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

    ಇದಕ್ಕಾಗಿ ಅವರು ದರಖಾಸ್ತು ಕಮಿಟಿಯ ಸದಸ್ಯರನ್ನು ಕೂಡ ಬಳಕೆ ಮಾಡಿಕೊಂಡು ಸರ್ಕಾರಿ ಭೂಮಿಯನ್ನು ಶಾಸಕ ನಾರಾಯಣಸ್ವಾಮಿ ಕಬಳಿಕೆ ಮಾಡಿಕೊಂಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಮುನಿಯಪ್ಪ ಅವರು ಶಾಸಕರಿಂದ ದೂರು ಉಳಿದಿದ್ದು ವಾರ್ಷಿಕ 15 ಸಾವಿರ ಆದಾಯ ಹೊಂದಿದ್ದಾರೆ. ಜೊತೆಗೆ ಅವರು 1998 ರಲ್ಲಿಯೇ ಸಾಗುವಳಿ ಚೀಟಿ ಜೊತೆ ಅರ್ಜಿ ಸಲ್ಲಿಸಿರುವ ದಾಖಲೆಗಳಿವೆ. ಅವರು ಭೂಮಿ ಮಂಜೂರಿಗಾಗಿ ಕೋರಿರುವ ದಾಖಲೆಗಳೆಲ್ಲವೂ ಕೂಡಾ ನ್ಯಾಯ ಬದ್ದವಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

    ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಕಬಳಿಕೆ ಆರೋಪ ಇದೇ ಮೊದಲೇನಲ್ಲ. ಈ ಹಿಂದೆ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಕೂಡ ಗಾಲ್ಫ್ ರೆಸಾರ್ಟ್‍ಗಾಗಿ ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಿದ್ದಾರೆ ಎಂದು ದಾಖಲೆ ಸಮೇತ ಆರೋಪ ಮಾಡಿದ್ದರು. ಆದರೆ ಅದು ಹೈಕೋರ್ಟ್‍ನಲ್ಲಿಯೇ ಇತ್ಯರ್ಥವಾಗಿತ್ತು. ಕೆಲ ತಿಂಗಳ ಹಿಂದೆಯಷ್ಟೇ ಸಂಸದ ಮುನಿಸ್ವಾಮಿ ಕೂಡ ಸರ್ಕಾರಿ ಜಮೀನು ಕಬಳಿಕೆ ಮಾಡಿದ್ದಾರೆ, ಆದರೆ ಇದ್ಯಾವುದು ಕೂಡ ಸಾಬೀತಾಗದೆ ಸುಮ್ಮನಾಗಿದ್ದಾರೆ. ಇದನ್ನೂ ಓದಿ: ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ನಟ ದಿಲೀಪ್ ಸ್ನೇಹಿತ ಅರೆಸ್ಟ್‌

    ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ನಾರಾಯಣಸ್ವಾಮಿ, ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನನ್ನ ಹಾಗೂ ನನ್ನ ತಾಯಿ ಜೊತೆಗೆ ಕೇವಲ ರಕ್ತ ಸಂಬಂಧ ಇದೆ, ಹೊರತು ನಮ್ಮ ನಡುವೆ ಯಾವುದೇ ವ್ಯವಹಾರಿಕ ಸಂಬಂಧ ಹೊಂದಿಲ್ಲ. ನಾವು 1995 ರಲ್ಲಿಯೇ ಅದರಿಂದ ಹೊರ ಬಂದಿದ್ದೇವೆ. ನಾನು ಶಾಸಕನಾಗುವ ಮೊದಲೇ ಅಂದರೆ 1998 ರಲ್ಲಿ ಭೂಮಿ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಭೂಮಿ ಮಂಜೂರು ಮಾಡಲು ಬೇಕಿರುವ ಎಲ್ಲಾ ದಾಖಲೆಗಳು ಸರಿಯಾಗಿರುವ ಕಾರಣ ಭೂಮಿ ಮಂಜೂರು ಮಾಡಲಾಗಿದೆ. ಇದರಲ್ಲಿ ಯಾವುದೇ ಅಕ್ರಮ ಸ್ವಜನ ಪಕ್ಷಪಾತವಿಲ್ಲ ಎನ್ನುತ್ತಿದ್ದಾರೆ.

    ಬಂಗಾರಪೇಟೆ ತಹಶೀಲ್ದಾರ್ ದಯಾನಂದ್ 2021ರ ಏಪ್ರಿಲ್ 26 ರಂದು ಬಂಗಾರಪೇಟೆ ಪೊಲೀಸ್ ಠಾಣೆಗೆ ಶಾಸಕರ ಬಗರ್‌ಹಕುಂ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ದಾಖಲೆಗಳು ನಾಪತ್ತೆಯಾಗಿದೆ ಎಂದು ಕಂದಾಯ ಇಲಾಖೆ ಸಿಬ್ಬಂದಿ ವಿರುದ್ಧವೇ ದೂರು ನೀಡಿರುವುದು ಮತ್ತೊಂದು ಅಂಶ. ಇದು ಶಾಸಕರು ತಮ್ಮ ಪ್ರಭಾವ ಬಳಸಿ ಮೂಲ ದಾಖಲೆಗಳನ್ನು ನಾಪತ್ತೆ ಮಾಡಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡರಾ ಎನ್ನುವ ಅನುಮಾನ ಕೂಡ ಮೂಡಿಬರುತ್ತಿದೆ.

    ಒಟ್ಟಾರೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಕಬಳಿಕೆ ಆರೋಪ ದಾಖಲೆ ಸಹಿತವಾಗಿದ್ದು, ಅದಕ್ಕೆ ಬೇಕಾದ ದಾಖಲೆಗಳು, ಶಾಸಕರ ಪ್ರಭಾವವೂ ಇರಬಹುದು. ಇಲ್ಲಾ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯ ಕೈವಾಡವೂ ಇರಬಹುದು, ನಿಷ್ಪಕ್ಷಪಾತ ತನಿಖೆ ನಡೆದಾಗ ಮಾತ್ರ ಈ ಎಲ್ಲಾ ಆರೋಪಗಳಿಗೆ ಸರಿಯಾದ ಉತ್ತರ ಸಿಗಲಿದೆ.

  • 6.47 ಕೋಟಿ ರೂ. ಮೌಲ್ಯದ 4.28 ಎಕರೆ ಪ್ರದೇಶ ಒತ್ತುವರಿ ತೆರವು: ಜೆ. ಮಂಜುನಾಥ್

    6.47 ಕೋಟಿ ರೂ. ಮೌಲ್ಯದ 4.28 ಎಕರೆ ಪ್ರದೇಶ ಒತ್ತುವರಿ ತೆರವು: ಜೆ. ಮಂಜುನಾಥ್

    ಬೆಂಗಳೂರು: ನಗರ ಜಿಲ್ಲೆಯ 5 ತಾಲೂಕುಗಳಲ್ಲಿ ಸರ್ಕಾರಿ ಜಮೀನುಗಳಾದ ಕೆರೆ, ಕುಂಟೆ, ಗೋಮಾಳ, ಸ್ಮಶಾನ, ರಾಜಕಾಲುವೆ ಮತ್ತು ಇತರೆ ಸರ್ಕಾರಿ ಜಮೀನುಗಳನ್ನು ರಕ್ಷಿಸಲು ಇಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.

    ಬೆಂಗಳೂರು ನಗರ ಜಿಲ್ಲೆಯಲ್ಲಿ 0.11 ವಿಸ್ತೀರ್ಣದ ಒಟ್ಟು ಎರಡು ಸರ್ಕಾರಿ ಕೆರೆಗಳು ಒತ್ತುವರಿಯಾಗಿದ್ದು ಅದರ ಅಂದಾಜು ಸುಮಾರು 55 ಲಕ್ಷ ರೂ. ಮೌಲ್ಯವಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಅಗರ ಗ್ರಾಮದ 0.06 ವಿಸ್ತೀರ್ಣದ 30 ಲಕ್ಷ ರೂ. ಹಾಗೂ ಅನೇಕಲ್ ತಾಲೂಕಿನ ಕಸಬಾ ಹೋಬಳಿಯ ಬ್ಯಾಗಡದೇನಹಳ್ಳಿ ಗ್ರಾಮದ 0.05 ವಿಸ್ತೀರ್ಣದ 25 ಲಕ್ಷ ರೂ. ಮೌಲ್ಯದ ಕೆರಗಳ ಒತ್ತುವರಿ ಮಾಡಿ ತೆರವುಗೊಳಿಸಲಾಗಿದೆ. ಇದನ್ನೂ ಓದಿ: ಸಿಎಂ ದಾವೋಸ್ ಪ್ರವಾಸ ನಾಳೆ ನಿರ್ಧಾರ: ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ಸಂದೇಶ

    ಬೆಂಗಳೂರು ನಗರ ಜಿಲ್ಲೆಯಲ್ಲಿ 1.35 ವಿಸ್ತೀರ್ಣದ ಒಟ್ಟು ಎರಡು ನಕಾಶೆ ದಾರಿ ಒತ್ತುವರಿಯಾಗಿದ್ದು ಅದರ ಅಂದಾಜು ಸುಮಾರು 95 ಲಕ್ಷ ರೂ. ಮೌಲ್ಯವಾಗಿದೆ. ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಗೆರೆಟಗನಬೆಲೆ ಗ್ರಾಮದ 1-20 ವಿಸ್ತೀರ್ಣದ ರೂ.75 ಲಕ್ಷ ಹಾಗೂ ಅತ್ತಿಬೆಲೆ ಹೋಬಳಿಯ ಕೂಡ್ಲೀಪುರ ಗ್ರಾಮದ 0-15 ವಿಸ್ತೀರ್ಣದ 20 ಲಕ್ಷ ರೂ. ಮೌಲ್ಯದ ನಕಾಶೆ ದಾರಿ ಒತ್ತುವರಿ ಮಾಡಿ ತೆರವು ಮಾಡಲಾಗಿದೆ.

    ಯಲಹಂಕ ತಾಲೂಕಿನ ಜಾಲ-1 ಹೋಬಳಿಯ ಹುತ್ತನಹಳ್ಳಿ ಗ್ರಾಮದ 2.00 ವಿಸ್ತೀರ್ಣದ ಸರ್ಕಾರಿ ಗೋಮಾಳ ಒತ್ತುವರಿಯಾಗಿದ್ದು ಅದರ ಅಂದಾಜು ಸುಮಾರು 380 ಲಕ್ಷ ರೂ. ಮೌಲ್ಯದ ಒತ್ತುವರಿ ಮಾಡಿ ತೆರೆವುಗೊಳಿಸಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ನ್ಯಾನಪನಹಳ್ಳಿ ಗ್ರಾಮದ 0-00.08 ವಿಸ್ತೀರ್ಣದ ಸರ್ಕಾರಿ ಗುಂಡುತೋಪು ಒತ್ತುವರಿಯಾಗಿದ್ದು ಅದರ ಅಂದಾಜು ಸುಮಾರು 2.19 ಲಕ್ಷ ರೂ. ಮೌಲ್ಯದ ಒತ್ತುವರಿ ಮಾಡಿ ತೆರವುಗೊಳಿಸಲಾಗಿದೆ. ಇದನ್ನೂ ಓದಿ: ಬಾಹ್ಯಾಕಾಶದಿಂದ ನೆಲಕ್ಕೆ ಅಪ್ಪಳಿಸಿದ ಲೋಹದ ಚೆಂಡುಗಳು – ಮೂರು ಗ್ರಾಮದಲ್ಲಿ ಕಂಪನ

    ಆನೇಕಲ್ ತಾಲೂಕಿನ ಸರ್ಜಾಪುರ ಹೋಬಳಿಯ ದೊಡ್ಡತಿಮ್ಮಸಂದ್ರ ಗ್ರಾಮದ 0-19 ವಿಸ್ತೀರ್ಣದ 100.00 ಲಕ್ಷ ರೂ. ಮೌಲ್ಯದ ಹಾಗೂ ಸರ್ಜಾಪುರ ಹೋಬಳಿಯ ಹಲಸಹಳ್ಳಿ ತಿಪ್ಪಸಂದ್ರ ಗ್ರಾಮದ 0-02 ವಿಸ್ತೀರ್ಣದ 15 ಲಕ್ಷ ರೂ. ಮೌಲ್ಯದ ಸರ್ಕಾರಿ ಖರಾಬು ಒತ್ತುವರಿ ಮಾಡಿ ತೆರೆವುಗೊಳಿಸಲಾಗಿದೆ. ಒಟ್ಟು 6,47,19,000 ಮೌಲ್ಯದ 4.28 ಎ/ಗು ವಿಸ್ತೀರ್ಣದ ಕೆರೆ, ಸರ್ಕಾರಿ ಗೋಮಾಳ, ಗುಂಡು ತೋಪು ಹಾಗೂ ಸರ್ಕಾರಿ ಖರಾಬು ಒತ್ತುವರಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ಹಂಚಿಕೊಂಡರು.

  • ಜಮೀನು ಪರಿಹಾರ ಹಣ ನೀಡಲ್ಲವೆಂದು ಭಾವಿಸಿ ತಂದೆ ಇಟ್ಟಿದ್ದ ಹಣವನ್ನೇ ಎಗರಿಸಿದ ಮಗ

    ಜಮೀನು ಪರಿಹಾರ ಹಣ ನೀಡಲ್ಲವೆಂದು ಭಾವಿಸಿ ತಂದೆ ಇಟ್ಟಿದ್ದ ಹಣವನ್ನೇ ಎಗರಿಸಿದ ಮಗ

    ಹಾಸನ: ತಂದೆಯ 13,20,000 ರೂ. ಹಣವನ್ನು ಮಗನೇ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಹಾಸನದ ದೊಡ್ಡ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಯಗಚಿನಾಲೆ ಕಾಮಗಾರಿಗೆ ಹಾಸನ ತಾಲೂಕಿನ ದೊಡ್ಡ ಆಲದಹಳ್ಳಿ ಗ್ರಾಮದ ರಂಗಸ್ವಾಮಿ ಅವರ 14 ಗುಂಟೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆ ರಂಗಸ್ವಾಮಿಗೆ ಸರ್ಕಾರದಿಂದ 13,20,000 ರೂ. ಹಣವನ್ನು ಪರಿಹಾರವಾಗಿ ನೀಡಲಾಗಿತ್ತು. ಅದಕ್ಕೆ ರಂಗಸ್ವಾಮಿ ತಮ್ಮ ಮೂವರು ಮಕ್ಕಳಿಗೆ ಹಣ ಹಂಚಲು ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಮನೆಯಲ್ಲಿಟ್ಟಿದ್ದರು. ಇದನ್ನೂ ಓದಿ: ಹಿಂದಿ ಬದಲು ಸಂಸ್ಕೃತ ರಾಷ್ಟ್ರ ಭಾಷೆಯಾಗಲಿ: ಕಂಗನಾ ರಣಾವತ್

    ಮೇ.23 ರಂದು ರಂಗಸ್ವಾಮಿ ಮನೆಗೆ ಬೀಗ ಹಾಕಿಕೊಂಡು ದನಗಳನ್ನು ಮೇಯಿಸಲು ತೆರಳಿದ್ದರು. ಈ ವೇಳೆ ಮನೆಯಲ್ಲಿ ಕಳ್ಳತನ ನಡೆದಿತ್ತು. ಪರಿಣಾಮ ರಂಗಸ್ವಾಮಿ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಪ್ರಕರಣ ಭೇದಿಸಲು ಮುಂದಾಗಿದ್ದಾರೆ. ಈ ವೇಳೆ ಕಳ್ಳನ ಸುಳಿವು ಸಿಕ್ಕಿದ್ದು, ದೊಡ್ಡ ಆಲದಹಳ್ಳಿ ಗ್ರಾಮದ ರಂಗನಾಥ ಹಣ ಕಳ್ಳತನ ಮಾಡಿರುವುದಾಗಿ ಪೊಲೀಸರು ರಂಗಸ್ವಾಮಿಗೆ ತಿಳಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿ ಬೇರೆ ಯಾರು ಅಲ್ಲ ರಂಗಸ್ವಾಮಿಯ ಹಿರಿಯ ಮಗನೇ ಆಗಿದ್ದಾನೆ. ಪ್ರಸ್ತುತ ಪೊಲೀಸರು ಬಂಧಿತನಿಂದ 13,20,000 ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ರಂಗನಾಥನನ್ನು ಪೊಲೀಸರು ವಿಚಾರಣೆ ಮಾಡಿದ್ದು, ಜಮೀನು ಹಂಚಿಕೆಯಲ್ಲಿ ನನಗೆ ಮೋಸವಾಗಿದೆ. ಎಲ್ಲ ಹಣ ನನಗೆ ಸೇರಬೇಕು ಹಾಗೂ ತನಗೆ ಹಣ ನೀಡಲ್ಲ ಎಂದು ಭಾವಿಸಿ ಮನೆಯಲ್ಲಿಟ್ಟಿದ್ದ ದುಡ್ಡನ್ನು ಕಳ್ಳತನ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್