Tag: Lander

  • ಚಂದ್ರನ ಮೇಲೆ ರೋವರ್ ಚಲಿಸೋದನ್ನು ನೋಡಿದ ನಂತ್ರವೇ ಮನೆಗೆ ತೆರಳಿದೆ: ಕೆ. ಶಿವನ್

    ಚಂದ್ರನ ಮೇಲೆ ರೋವರ್ ಚಲಿಸೋದನ್ನು ನೋಡಿದ ನಂತ್ರವೇ ಮನೆಗೆ ತೆರಳಿದೆ: ಕೆ. ಶಿವನ್

    ಬೆಂಗಳೂರು: ರೋವರ್ (Rover) ಲ್ಯಾಂಡರ್ ನಿಂದ ಹೊರಬಂದು ಚಂದ್ರನ ಮೇಲ್ಮೈ ಮೇಲೆ ಚಲಿಸುವುದನ್ನು ನೋಡಿದ ಬಳಿಕವೇ ನಾನು ತಡರಾತ್ರಿ ನನ್ನ ಮನೆಗೆ ತೆರಳಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಕೆ. ಶಿವನ್ (K Sivan) ಹೇಳಿದ್ದಾರೆ.

    ಚಂದ್ರಯಾನ-3 (Chandrayaan-3) ಯಶಸ್ಸಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆಗೂ ನಮ್ಮ ಪ್ರಾರ್ಥನೆ ಫಲಿಸಿತು. ಚಂದ್ರನ ಮೇಲ್ಮೈ ಮೇಲೆ ಲ್ಯಾಂಡರ್ (Vikram Lander) ಇಳಿದ ನಂತರ ನಾವು ಅಲ್ಲಿಂದ ಕದಲಿಲ್ಲ. ಬದಲಾಗಿ ರೋವರ್ ಲ್ಯಾಂಡರ್ ನಿಂದ ಹೊರಬರುವವರೆಗೂ ನಾನು ನಿಯಂತ್ರಣ ಕೊಠಡಿಯಲ್ಲಿಯೇ ಕುಳಿತಿದ್ದೆ. ಅಲ್ಲದೆ ಚಂದ್ರನ ಮೇಲ್ಮೈ ಮೇಲೆ ರೋವರ್ ಚಲಿಸೋದನ್ನು ನೋಡಿದ ಬಳಿಕವೇ ಮನೆಗೆ ಹೋದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

    ಚಂದ್ರಯಾನ-2 (Chandrayaan-2) ರಲ್ಲಿ ಸಂಭವಿಸಿದ ಸಣ್ಣ ದೋಷದಿಂದಾಗಿ ನಾವು ಸಕ್ಸಸ್ ಕಾಣಲು ಸಾಧ್ಯವಾಗಲಿಲ್ಲ. ಇಲ್ಲದಿದ್ದರೆ ನಾಲ್ಕು ವರ್ಷಗಳ ಹಿಂದೆಯೇ ನಾವು ಚಂದ್ರನ ಮೇಲೆ ಕಾಲಿಡುತ್ತಿದ್ದೆವು. ತಪ್ಪಿನಿಂದ ಪಾಠ ಕಲಿತು ತಿದ್ದಿದ್ದು, ಖುಷಿಯಾಗಿದೆ. 2019ರಲ್ಲಿಯೇ ಚಂದ್ರಯಾನ-3 ಅನ್ನು ಕಾನ್ಫಿಗರ್ ಮಾಡಿದ್ದು, ಮುಂದೆ ಯಾವ ತಪ್ಪನ್ನು ಮಾಡಬಾರದು ಎಂಬುದನ್ನು ಕೂಡ ಅಂದೇ ನಿರ್ಧಾರ ಮಾಡಲಾಗಿತ್ತು. ಆ ಪ್ರಯತ್ನದ ಫಲವನ್ನು ನಿನ್ನೆ ನೋಡಿದೆವು ಎಂದರು. ಇದನ್ನೂ ಓದಿ: Chandrayaan-3: ಚಂದ್ರನ ಅಂಗಳದಲ್ಲಿ 3ನೇ ಹೆಜ್ಜೆ ಇಡಲು ಕ್ಷಣಗಣನೆ; ಚಂದ್ರಯಾನ-1, 2 ಕ್ಕೆ ಹೋಲಿಸಿದ್ರೆ ಚಂದ್ರಯಾನ-3 ಹೇಗೆ ಭಿನ್ನ?

    ಇಸ್ರೋ (ISRO) ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಬುಧವಾರ ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಇಸ್ರೋ ಸಂಜೆ 6:04ರ ಹೊತ್ತಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು. 

    ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ (Soft Landing) ಮಾಡುವುದು ಸಾಧಾರಣ ಸಾಧನೆಯಲ್ಲ. ಚಂದ್ರನ ಮೇಲೆ ತಮ್ಮ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇರಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಏಕೈಕ ನಾಲ್ಕು ದೇಶಗಳ ಸಾಲಿಗೆ ಭಾರತವೂ ಸೇರಿದೆ. ಚಂದ್ರನಲ್ಲಿ ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಯಶಸ್ವಿ ಕಾರ್ಯಾಚರಣೆ ನಡೆಸಿವೆ. ಇದರ ಜೊತೆಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಾಲ್ಕನೇ ದೇಶ ಭಾರತ ಎನಿಸಿಕೊಂಡಿದೆ. ಆದರೆ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಮೊದಲ ದೇಶವಾಗಿ ಭಾರತ ಹೆಸರಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭೂ ಮಾಪಕಿಗೆ ಕೊರೊನಾ- ಮಿನಿ ವಿಧಾನಸೌಧ ಸೀಲ್‍ಡೌನ್

    ಭೂ ಮಾಪಕಿಗೆ ಕೊರೊನಾ- ಮಿನಿ ವಿಧಾನಸೌಧ ಸೀಲ್‍ಡೌನ್

    ಚಾಮರಾಜನಗರ: ಜಿಲ್ಲೆಯ ಮಿನಿ ವಿಧಾನಸೌಧದ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂ ಮಾಪಕಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಮಿನಿವಿಧಾನಸೌಧವನ್ನು ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಇದೇ ಕಟ್ಟಡದಲ್ಲಿ ತಾಲೂಕು ಕಚೇರಿಯು ಇದ್ದು, ಇಂದು ತಾಲೂಕು ಕಚೇರಿ ಮತ್ತು ಮಿನಿ ವಿಧಾನಸೌಧಕ್ಕೆ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆರ್.ರವಿ ಆದೇಶಿಸಿದ್ದಾರೆ. ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷ ವಯಸ್ಸಿನ ಭೂ ಮಾಪಕಿಗೆ ಕಳೆದ ವಾರ ಜ್ವರ ತಲೆನೋವು ಕಾಣಿಸಿಕೊಂಡಿತ್ತು.

    ಖಾಸಗಿ ಕ್ಲಿನಿಕ್‍ನಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ತಲೆನೋವು ಕಡಿಮೆ ಆಗದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ ತೆರೆದಿರುವ ಫೀವರ್ ಕ್ಲಿನಿಕ್‍ಗೆ ಚಿಕಿತ್ಸೆಗೆಂದು ಬಂದಿದ್ದರು. ಈ ವೇಳೆ ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಮವಾರ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ತಾಲೂಕು ಕಚೇರಿ ಮತ್ತು ಮಿನಿ ವಿಧಾನಸೌಧ ಕಟ್ಟಡಕ್ಕೆ ಈಗಾಗಲೇ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ.

    ಇದೀಗ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಜ್ವರ ಹಾಗೂ ತಲೆನೋವು ಇದ್ದು, ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕೊಟ್ಟಿದ್ದರೂ ಸಹ ಮಹಿಳೆ ಪರೀಕ್ಷಾ ವರದಿ ಬರುವ ಮುನ್ನ ಕಚೇರಿಯಲ್ಲಿ ಮೂರ್ನಾಲ್ಕು ದಿನಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೇ ಕೆಲವು ರೈತರ ಜಮೀನುಗಳಿಗೂ ಭೇಟಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಈಕೆಯ ಪ್ರಾಥಮಿಕ ಸಂಪರ್ಕಕ್ಕೆ ಸುಮಾರು 10 ಜನ ಬಂದಿದ್ದು, ಅವರನ್ನೆಲ್ಲಾ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ದ್ವಿತೀಯ ಹಂತದ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಮಹಿಳೆ ವಾಸ ಮಾಡುತ್ತಿದ್ದ ನಗರದ ಭಗೀರಥನಗರ ಹೊಸಬಡಾವಣೆ 5ನೇ ಕ್ರಾಸನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿ ಸಾರ್ವಜನಿಕರ ಓಡಾಟ ನಿರ್ಬಂಧಿಸಲಾಗಿದೆ. ಅಲ್ಲದೆ ಮಹಿಳೆ ವಾಸಿಸುತ್ತಿದ್ದ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ.