Tag: Lashkar-e-Taiba

  • ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದಲ್ಲೂ ನಾಸೀರ್‌ ಕೈವಾಡ
    – ಶಂಕಿತರಿಗೆ ಸಿಮ್‌ ಕಾರ್ಡ್‌ ನೀಡಿದ್ದ ಆರೋಪ; ಏರ್‌ಟೆಲ್‌ ಮಾಜಿ ಉದ್ಯೋಗಿಗೆ ನೋಟಿಸ್‌

    ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು (Bengaluru) ಮತ್ತು ಕೋಲಾರದ (Kolara) 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (NIA) ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್‌ ಪೊಲೀಸ್‌ ಅಧಿಕಾರಿ ಸೇರಿ ಮೂವರು ಶಂಕಿತ ಉಗ್ರರರನ್ನ ಬಂಧಿಸಿದೆ.

    ಶಂಕಿತ ಉಗ್ರರನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಿರುವ ಎನ್‌ಐಎ ಅಧಿಕಾರಿಗಳ ತಂಡ, 14 ದಿನಗಳ ಕಾಲ ಕಸ್ಟಡಿಗೆ ಪಡೆಯಲು ಮುಂದಾಗಿದೆ. ಈ ಮಧ್ಯೆ ಉಗ್ರ ಟಿ.ನಾಸೀರ್ ಕುರಿತು ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳೆದಿದೆ. ಇದನ್ನೂ ಓದಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ- ಬೆಂಗಳೂರಿನಿಂದ ಕಲಬುರಗಿಗೆ ಕರೆತಂದು ಪ್ರಾಣಸ್ನೇಹಿತನ ಹತ್ಯೆ

    ಜೈಲಿನಲ್ಲಿದ್ದುಕೊಂಡೇ ಉಗ್ರ ಕೃತ್ಯಕ್ಕೆ ಸಂಚು
    2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್‌ ಜೈಲಿನಲ್ಲಿದ್ದಾನೆ. ಭಯೋತ್ಪಾದನೆ ಬಗ್ಗೆ ಯುವಜನರ ಮೈಂಡ್‌ ವಾಶ್‌ ಮಾಡೋದ್ರಲ್ಲಿ ನಿಸ್ಸೀಮನಾಗಿದ್ದ ನಾಸೀರ್‌, ಹಲವು ಯುವಜನರನ್ನ ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾನೆ ಎಂದೂ ಸಹ ಎನ್‌ಐಎ ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಅಲ್ಲದೇ ಜೈಲಿನಲ್ಲಿದ್ದುಕೊಂಡೇ ಉಗ್ರ ಚಟುವಟಿಕೆಗಳ ಬಗ್ಗೆ ಪ್ಲ್ಯಾನ್‌ ಮಾಡಿದ್ದ. 2008ರ ಸರಣಿ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ, ರಾಮೇಶ್ವರಂ ಕೆಫೆ ಬ್ಲಾಸ್ಟ್ ಸೇರಿ ಹಲವು ಪ್ರಕರಣಗಳಲ್ಲಿ ನಾಸೀರ್‌ ಕೈವಾಡ ಇದೆ. ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ದೊಡ್ಡಮಟ್ಟದ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಅನ್ನೋದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.

    ಇನ್ನೂ ಉಗ್ರ ಕೃತ್ಯಕ್ಕೆ ನಾಸೀರ್‌ ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಎಂಬ ಯುವಕರ ತಂಡವನ್ನೂ ರೆಡಿ ಮಾಡಿದ್ದ. ಆದ್ರೆ ಜೀವಂತ ಗ್ರೆನೇಡ್‌ಗಳು, ಪಿಸ್ತೂಲ್‌ಗಳು, ಸ್ಫೋಟಕ ವಸ್ತುಗಳ ಸಮೇತ ತಂಡ ಸಿಕ್ಕಿಬಿದ್ದಿತ್ತು. ಈ ಐವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಎನ್‌ಐಎ ಈ ಪ್ರಕರಣದ ಹೊಣೆ ವಹಿಸಿಕೊಂಡಿತು. ಸದ್ಯ ಮೂವರನ್ನು ಬಂಧಿಸಿರುವ ಎನ್‌ಐಎ, ಬಂಧಿತರಿಂದ ಒಂದಷ್ಟು ಹಣ, ಸಂವಹನಕ್ಕೆ ಬಳಸುತ್ತಿದ್ದ ವಾಕಿಟಾಕಿ ಸೇರಿ ಹಲವು ವಸ್ತುಗಳು ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ FIR – ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಪೊಲೀಸರ ಕ್ರಮ

    ಏರ್‌ಟೆಲ್‌ ಮಾಜಿ ಉದ್ಯೋಗಿಗೆ ನೋಟಿಸ್‌
    ಇನ್ನೂ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬಾತನಿಗೆ ಎನ್‌ಐಎ ನೋಟಿಸ್‌ ನೀಡಿದೆ. ಶಂಕಿತರಿಗೆ ಸಿಮ್‌ ಕಾರ್ಡ್‌ ನೀಡಿದ ಆರೋಪದ ಮೇಲೆ ಸತೀಶ್‌ ಗೌಡಗೆ ನೋಟಿಸ್‌ ನೀಡಲಾಗಿದೆ. ಸತೀಶ್‌ ಮನೆಯಲ್ಲಿ ಇಲ್ಲದ ಕಾರಣ ಕಾರಣ ಕುಟುಂಬಸ್ಥರಿಗೆ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಅಧಿಕಾರಿಗಳು. ಮೂರು ವರ್ಷಗಳ ಹಿಂದೆ ಸತೀಶ್‌ಗೌಡ ಏರ್‌ಟೆಲ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈ ಕೆಲಸ ಮಾಡಿರುವುದಾಗಿ ಸಂಶಯ ವ್ಯಕ್ತವಾಗಿದೆ.

  • ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    * ಬೆಂಗಳೂರು, ಕೋಲಾರದಲ್ಲಿ ಎನ್‌ಐಎ ಬೇಟೆ
    * 2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದಲ್ಲಿ ನಡೆದಿತ್ತು ಶೋಧ

    ಬೆಂಗಳೂರು: ಎಲ್‌ಇಟಿ ಭಯೋತ್ಪಾದಕ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಕೋಲಾರದಲ್ಲಿ ಕಾರ್ಯಾಚರಣೆ ನಡೆಸಿದ ಎನ್‌ಐಎ, ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರನ್ನು ಬಂಧಿಸಿದೆ.

    ಬೆಂಗಳೂರಿನ ಪರಪ್ಪನ ಅಗ್ರಹಾರದ ಮನೋವೈದ್ಯ ಡಾ. ನಾಗರಾಜ್, ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಚಾನ್ ಪಾಷಾ ಮತ್ತು ತಲೆಮರೆಸಿಕೊಂಡಿರುವ ಆರೋಪಿಯ ತಾಯಿ ಅನೀಸ್ ಫಾತಿಮಾರನ್ನು ಬಂಧಿಸಲಾಗಿದೆ. ಶೋಧನಾ ಸಮಯದಲ್ಲಿ, ಬಂಧಿತ ಆರೋಪಿಗಳು ಮತ್ತು ಇತರ ಶಂಕಿತರ ಮನೆಗಳಿಂದ ವಿವಿಧ ಡಿಜಿಟಲ್ ಸಾಧನಗಳು, ನಗದು, ಚಿನ್ನ ಮತ್ತು ಅಪರಾಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

    2023 ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೈಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್‌ ಜೈಲಿನಲ್ಲಿದ್ದಾನೆ.

    ಕೋರ್ಟ್‌ಗಳಲ್ಲಿ ಹಣ ಎಕ್ಸ್‌ಚೇಂಜ್ ಮಾಡಲು‌ ಎಎಸ್‌ಐ ಚಾನ್‌ ಪಾಷಾ ಸಹಾಯ ಮಾಡಿದ್ದ. ನಾಸೀರ್ ವೈದ್ಯರಿಂದ ಮೊಬೈಲ್‌ ಪಡೆಯುತ್ತಿದ್ದ. ಜೀವಂತ ಗ್ರೆನೇಡ್‌ ಕೇಸ್‌ನಲ್ಲಿ ಜುನೈದ್‌ ಎಸ್ಕೇಪ್‌ ಆಗಿದ್ದಾನೆ.

  • ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ – ಮುಂಬೈ ದಾಳಿಯ ಸಂಚುಕೋರ ರಾಣಾ ತಪ್ಪೊಪ್ಪಿಗೆ

    ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ – ಮುಂಬೈ ದಾಳಿಯ ಸಂಚುಕೋರ ರಾಣಾ ತಪ್ಪೊಪ್ಪಿಗೆ

    ನವದೆಹಲಿ: ಮುಂಬೈ ದಾಳಿಯ (Mumbai Attack) ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ತಹವ್ವೂರ್ ಹುಸೇನ್ ರಾಣಾ (Tahawwur Rana) 2008 ರ ಕೃತ್ಯದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾನೆ ಮತ್ತು ತಾನು ಪಾಕಿಸ್ತಾನಿ ಸೇನೆಯ (Pakistan Army) ವಿಶ್ವಾಸಾರ್ಹ ಏಜೆಂಟ್ ಎಂದು ಹೇಳಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ದೆಹಲಿಯ ತಿಹಾರ್ ಜೈಲಿನಲ್ಲಿ (Tihar Jail) ರಾಷ್ಟ್ರೀಯ ತನಿಖಾ ದಳದ (NIA) ವಶದಲ್ಲಿರುವ ರಾಣಾನನ್ನು ಮುಂಬೈ ಕ್ರೈಂ ಬ್ರ್ಯಾಂಚ್‌ ವಿಚಾರಣೆಯ ಸಂದರ್ಭದಲ್ಲಿ ತಾನು ಮತ್ತು ತನ್ನ ಸ್ನೇಹಿತ ಮತ್ತು ಸಹಾಯಕ ಡೇವಿಡ್ ಕೋಲ್ಮನ್ ಹೆಡ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ( Lashkar-e-Taiba) ಜೊತೆ ಹಲವಾರು ತರಬೇತಿ ಕಾರ್ಯ ನಡೆಸಿದ್ದೇವೆ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!

     

    ವಿಚಾರಣೆ ವೇಳೆ ಮುಂಬೈನಲ್ಲಿ ತನ್ನ ಸಂಸ್ಥೆಯ ವಲಸೆ ಕೇಂದ್ರವನ್ನು ತೆರೆಯುವ ಆಲೋಚನೆ ಇತ್ತು. ಮುಂಬೈ ದಾಳಿಯ ಸಮಯದಲ್ಲಿ ತಾನು ಮುಂಬೈನಲ್ಲಿದ್ದೆ ಮತ್ತು ಅದು ಭಯೋತ್ಪಾದಕರ ಯೋಜನೆಯ ಭಾಗವಾಗಿತ್ತು ಎಂದು ಹೇಳಿದ್ದಾನೆ. ಇದನ್ನೂ ಓದಿ: ರಾಣಾ ಕರೆತಂದ ವಿಮಾನಕ್ಕೆ ನೀಡಲಾಗಿತ್ತು ಡಮ್ಮಿ ಕೋಡ್‌, ಮಧ್ಯೆ 11 ಗಂಟೆ ಪಿಟ್‌ ಸ್ಟಾಪ್‌!

    ದಾಳಿಗೂ ಮೊದಲು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಂತಹ ಸ್ಥಳಗಳನ್ನು ಪರಿಶೀಲಿಸಿದ್ದೆ. ಮುಂಬೈ  ದಾಳಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಸಹಯೋಗದೊಂದಿಗೆ ನಡೆಸಲಾಗಿದೆ ಎಂದು ರಾಣಾ ಒಪ್ಪಿಕೊಂಡಿದ್ದಾನೆ.

    ಗಲ್ಫ್‌ ಯುದ್ಧದ ಸಮಯದಲ್ಲಿ ಪಾಕಿಸ್ತಾನಿ ಸೇನೆಯು ತನ್ನನ್ನು ಸೌದಿ ಅರೇಬಿಯಾಕ್ಕೆ ಕಳುಹಿಸಿತ್ತು ಎಂದು 64 ವರ್ಷದ ರಾಣಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

  • ಲಷ್ಕರ್ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ – ಭಾರತ ತೀವ್ರ ಆಕ್ಷೇಪ

    ಲಷ್ಕರ್ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ – ಭಾರತ ತೀವ್ರ ಆಕ್ಷೇಪ

    – ಮುಗ್ಧ ವ್ಯಕ್ತಿ, ಧರ್ಮ ಪ್ರಚಾರಕ ಅಂತ ಬಣ್ಣಿಸಿದ ಪಾಕ್ ಸೇನೆ

    ಇಸ್ಲಾಮಾಬಾದ್: ಲಷ್ಕರ್-ಇ-ತೈಬಾ (Lashkar-e-Taiba) ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಪಾಕ್ ಸೇನೆ ಆತ ಒಬ್ಬ ಮುಗ್ಧ ವ್ಯಕ್ತಿ ಹಾಗೂ ಧರ್ಮ ಪ್ರಚಾರಕ ಎಂದು ಸಮರ್ಥನೆ ಮಾಡಿಕೊಂಡಿದೆ.

    ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ ಸಂಘಟನೆಯ ಉಗ್ರ ಸಾವನ್ನಪ್ಪಿದ್ದ. ಆತನ ಅಂತ್ಯಕ್ರಿಯೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಭಯೋತ್ಪಾದಕ ಮಸೂದ್ ಅಜರ್‌ನ ಸಹೋದರ ಅಬ್ದುಲ್ ರೌಫ್ ಅಜರ್ ಹಾಗೂ ಪಾಕಿಸ್ತಾನ ಅಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆಗಿ, ವಿವಾದ ಉಂಟಾಗಿತ್ತು.ಇದನ್ನೂ ಓದಿ: ಭಾರತ-ಪಾಕ್ ʻಕದನ-ವಿರಾಮʼ ಮಾತುಕತೆ – ಇಂದು ಎರಡೂ ದೇಶಗಳ ಡಿಜಿಎಂಒಗಳ ಸಭೆ

    ಫೋಟೋ ವೈರಲ್ ಆದ ಬೆನ್ನಲ್ಲೇ ವಿವಾದ ಕಡಿಮೆ ಮಾಡುವ ಉದ್ದೇಶದಿಂದ ಪತ್ರಿಕಾಗೋಷ್ಠಿ ನಡೆಸಿದ್ದು, ಪಾಕಿಸ್ತಾನದ ಮಿಲಿಟರಿ ವಕ್ತಾರ ಡಿಜಿ ಐಎಸ್‌ಪಿಆರ್ ಮಾತನಾಡಿ, ಆತ ಒಬ್ಬ ಸರಳ, ಮುಗ್ಧ ಕುಟುಂಬದ ವ್ಯಕ್ತಿ, ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾರೆ. ಜೊತೆಗೆ ಅದನ್ನು ಸಾಬೀತುಪಡಿಸಲು ಪಾಕಿಸ್ತಾನ ರಾಷ್ಟ್ರೀಯ ಗುರುತಿನ ಚೀಟಿಯನ್ನು ಕೂಡ ಪ್ರದರ್ಶಿಸಿದ್ದಾರೆ.

    ಆದರೆ ಭಾರತೀಯ ಅಧಿಕಾರಿಗಳ ಮಾಹಿತಿ ಪ್ರಕಾರ, ಅಧಿಕೃತ ದಾಖಲೆಗಳು ಸಂಪೂರ್ಣವಾಗಿ ವಿಭಿನ್ನ ಕಥೆಯನ್ನು ಹೇಳುತ್ತವೆ. `ಆಪರೇಷನ್ ಸಿಂಧೂರ’ ಕುರಿತು ನಡೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾತನಾಡಿ, ಭಾರತ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದ ಭಯೋತ್ಪಾದಕನ ಅಂತ್ಯಕ್ರಿಯೆ ವೇಳೆ ಅಮೆರಿಕದಿಂದ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ಮತ್ತು ಹಿರಿಯ ಎಲ್‌ಇಟಿ ಕಮಾಂಡರ್ ಹಫೀಜ್ ಅಬ್ದುಲ್ ರೌಫ್ ಭಾಗಿಯಾಗಿರುವ ಫೋಟೋವನ್ನು ಬಹಿರಂಗಪಡಿಸಿದರು.

    ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಸರ್ಕಾರಿ ಅಂತ್ಯಕ್ರಿಯೆ ನೀಡುವುದು ಒಂದು ಪದ್ಧತಿಯಾಗಿರಬಹುದು. ಆದರೆ ಈ ಫೋಟೋ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ನಿರಂತರವಾಗಿ ಪೋತ್ಸಾಹ ನೀಡುತ್ತಿದೆ ಎಂದು ಹೈಲೆಟ್ ಮಾಡಿದರು. ಜೊತೆಗೆ ಅಂತ್ಯಕ್ರಿಯೆಯಲ್ಲಿ ಹಾಜರಿದ್ದ ಪಾಕಿಸ್ತಾನದ ಉನ್ನತ ಅಧಿಕಾರಿಗಳ ಹೆಸರುಗಳನ್ನು ಬಿಡುಗಡೆ ಮಾಡಿದ್ದಾರೆ.ಇದನ್ನೂ ಓದಿ: ಯುದ್ಧ ಭೀತಿ ನಡುವೆ ಮತ್ತೊಂದು ಶಾಕ್‌ – ಪಾಕಿಸ್ತಾನದ 51 ಸ್ಥಳಗಳ ಮೇಲೆ ಬಲೂಚ್‌ ಹೋರಾಟಗಾರರಿಂದ ದಾಳಿ

  • ಕಾಶ್ಮೀರದಲ್ಲಿ ಐಇಡಿ ಸ್ಫೋಟಿಸಿ ಮತ್ತೊಬ್ಬ ಉಗ್ರನ ಮನೆ ಉಡೀಸ್!

    ಕಾಶ್ಮೀರದಲ್ಲಿ ಐಇಡಿ ಸ್ಫೋಟಿಸಿ ಮತ್ತೊಬ್ಬ ಉಗ್ರನ ಮನೆ ಉಡೀಸ್!

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ (Pahalgam Terror Attack) ಘಟನೆಗೆ ಸಂಬಂಧಿಸಿದಂತೆ ಐಇಡಿ ಸ್ಫೋಟಿಸಿ ಮತ್ತೊಬ್ಬ ಉಗ್ರನ ಮನೆಯನ್ನು ಭಾರತೀಯ ಸೇನೆ ಉಡೀಸ್ ಮಾಡಿದೆ.

    ಲಷ್ಕರ್ ಎ ತೊಯ್ಬಾ ಉಗ್ರ ಫಾರೂಕ್ ಮನೆಯನ್ನು ಸೇನೆ ಧ್ವಂಸಗೊಳಿಸಿದೆ. ಕುಪ್ವಾರದ ಕಲಾರೂಸ್ ಪ್ರದೇಶದಲ್ಲಿರುವ ಫಾರೂಕ್ ಮನೆಯನ್ನು ಐಇಡಿ ಸ್ಫೋಟಿಸಿ ಛಿದ್ರಛಿದ್ರ ಮಾಡಿದ್ದು, ಇಲ್ಲಿವರೆಗೆ ಒಟ್ಟು 6 ಉಗ್ರರ ಮನೆಯನ್ನು ನಾಶಪಡಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ಘೋಷಣೆ

    ಪಹಲ್ಗಾಮ್ ದಾಳಿಯ ನಂತರ ಪುಲ್ವಾಮಾ, ಶೋಪಿಯಾನ್, ಅನಂತ್‌ನಾಗ್, ಕುಲ್ಗಾಮ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಸ್ಫೋಟಕಗಳನ್ನು ಬಳಸಿ ಆರು ಭಯೋತ್ಪಾದಕರ ಮನೆಗಳನ್ನು ಕೆಡವಲಾಗಿದೆ. ಈ ಎಲ್ಲಾ ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾಗೆ ಸೇರಿದವರಾಗಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ತಡೆಯಲು ಸಾಧ್ಯನಾ? – ಜಲತಜ್ಞ ರಾಜಾರಾವ್ ಹೇಳಿದ್ದೇನು?

    ಫಾರೂಕ್ ಪ್ರಸ್ತುತ ಪಾಕಿಸ್ತಾನದಲ್ಲಿದ್ದು, ಭಾರತದಲ್ಲಿ ತೊಂದರೆ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧ – ಬುಸುಗುಟ್ಟಿದ ಪಾಕ್‌ ಗೃಹ ಸಚಿವ

  • ಎನ್‌ಕೌಂಟರ್‌ಗೆ ಲಷ್ಕರ್‌ ಟಾಪ್‌ ಉಗ್ರ ಬಲಿ

    ಎನ್‌ಕೌಂಟರ್‌ಗೆ ಲಷ್ಕರ್‌ ಟಾಪ್‌ ಉಗ್ರ ಬಲಿ

    ಶ್ರೀನಗರ: ಪಹಲ್ಗಾಮ್‌ ದಾಳಿಯ ನಂತರ ಉಗ್ರರನ್ನು ಮಟ್ಟ ಹಾಕುವ ಕಾರ್ಯಾಚರಣೆ ತೀವ್ರಗೊಂಡಿದ್ದು ಜಮ್ಮು ಕಾಶ್ಮೀರದ (Jammu Kashmir) ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ (Lashkar-e-Taiba) ಟಾಪ್‌ ಕಮಾಂಡರ್‌ನನ್ನು (Top Commander) ಭದ್ರತಾ ಪಡೆಗಳು ಹತ್ಯೆ ಮಾಡಿವೆ.

    ಅಲ್ತಾಫ್ ಲಲ್ಲಿ ಟಾಪ್‌ ಕಮಾಂಡರ್‌ ಆಗಿದ್ದು ಉಗ್ರ ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದ. ಅರಣ್ಯದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ಬೆಳಗ್ಗೆ ಜಂಟಿ ಕಾರ್ಯಾಚರಣೆ ನಡೆಯಿತು. ಈ ಎನ್‌ಕೌಂಟರ್‌ನಲ್ಲಿ ಅಲ್ತಾಫ್‌ ಲಲ್ಲಿ ಹತ್ಯೆಯಾಗಿದ್ದಾನೆ.  ಇದನ್ನೂ ಓದಿ: ಮಂಗಳೂರಲ್ಲಿ ಪಹಲ್ಗಾಮ್ ದಾಳಿ ಸಮರ್ಥಿಸಿಕೊಂಡ ದುಷ್ಟ – ಪೊಲೀಸರಿಂದ ಕಿಡಿಗೇಡಿಗಾಗಿ ಹುಡುಕಾಟ

     

    ಈ ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶ್ರೀನಗರಕ್ಕೆ ಇಂದು ಆಗಮಿಸಿದ್ದು ಅವರಿಗೆ ಕಾರ್ಯಾಚರಣೆಯ ವಿವರ ನೀಡಲಾಯಿತು.

    ಗುರುವಾರ ಬಿಹಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಹಲ್ಗಾಮ್‌ ದಾಳಿ ಮಾಡಿದವರು ಮತ್ತು ದಾಳಿಯ ಹಿಂದೆ ಇರುವವರು ಊಹೆ ಮಾಡದ ರೀತಿ ನಾವು ಪ್ರತಿಕ್ರಿಯೆ ನೀಡುತ್ತೇವೆ ಎಂದು ಗುಡುಗಿದ್ದರು.

  • ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

    ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

    ಮುಂಬೈ: ಹದಿನೈದು ವರ್ಷಗಳ ಹಿಂದೆ ಈ ದಿನ (26/11/2008) ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ (Mumbai Terror Attacks) 166 ಜನ ಬಲಿಯಾಗಿದ್ದರು. 10 ಭಯೋತ್ಪಾದಕರ ಗುಂಪಿನ ಈ ಸಂಘಟಿತ ದಾಳಿ ಭಾರತದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಭಾರೀ ಸಂಚಲನ ಮೂಡಿಸಿತ್ತು. ಈ ಭೀಕರ ದಾಳಿ ನಡೆದು ಅದರ ತೀವ್ರತೆ ಇಂದಿಗೂ ಕಡಿಮೆಯಾಗಿಲ್ಲ. ಕುಟುಂಬಗಳ ರೋಧನೆ, ದಾಳಿಯಿಂದ ಕಲಿತ ಪಾಠಗಳೂ ಇಂದಿಗೂ ಮರೆತಿಲ್ಲ. ಮುಂಬೈ ದಾಳಿಯ ನಂತರ ಪಾಕಿಸ್ತಾನವು ಭಾರತದ (India vs Pakistan) ಪಾಲಿಗೆ ಶತ್ರು ರಾಷ್ಟ್ರವಾಗಿಯೇ ಉಳಿದುಬಿಟ್ಟಿದೆ. ಪ್ರತಿ ವರ್ಷವೂ ನವೆಂಬರ್‌ 26ನೇ ತಾರೀಖು ಬಂದಾಗೆಲ್ಲಾ ಇಡೀ ದೇಶದ ಜನ ಈ ದಾಳಿಯನ್ನ ನೆನೆದು ಶತ್ರು ರಾಷ್ಟ್ರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

    2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (Lashkar-e-Taiba) ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಇದನ್ನೂ ಓದಿ: World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

    ಛತ್ರಪತಿ ಶಿವಾಜಿ ಟರ್ಮಿನಲ್‌ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಈ ಸ್ಥಳಗಳಿಗೆ ಯುರೋಪಿಯನ್ನರು, ಭಾರತೀಯರು ಮತ್ತು ಯಹೂದಿಗಳು ಆಗಾಗ್ಗೆ ಭೇಟಿ ನೀಡುವುದರಿಂದ ಗರಿಷ್ಠ ಪ್ರಮಾಣದಲ್ಲಿ ಜನಸಂದಣಿ ಸೇರುತ್ತಿದ್ದರು. ಇದರ ಬಗ್ಗೆ ಸಮೀಕ್ಷೆ ನಡೆಸಿದ ನಂತರ ಪೂರ್ವನಿಯೋಜಿತ ದಾಳಿ ನಡೆಸಲಾಗಿತ್ತು. ಅಂದು ನಡೆದ ದಾಳಿಗೆ ನೂರಾರು ಆಮಾಯಕ ಜೀವಗಳು ಪ್ರಾಣತೆತ್ತವು.

    ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ 10 ಭಯೋತ್ಪಾದಕರ ಪೈಕಿ 9 ಮಂದಿ ಛತ್ರಪತಿ ಶಿವಾಜಿ ಟರ್ಮಿನಲ್ ರೈಲ್ವೇ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದರು. ಬದುಕುಳಿದಿದ್ದ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ‘ಮೊಹಮ್ಮದ್ ಅಜ್ವಲ್ ಅಮೀರ್ ಕಸಬ್’ಗೆ 2010ರಲ್ಲಿ ಮರಣದಂಡನೆ ವಿಧಿಸಿ. 2012ರಲ್ಲಿ ಪುಣೆಯಲ್ಲಿ ಗಲ್ಲಿಗೇರಿಸಲಾಯಿತು. ಇದನ್ನೂ ಓದಿ: ಮುಂಬೈ ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಅನುಮತಿ

    2008ರ ಈ ದುರಂತಕ್ಕೆ 15 ವರ್ಷಗಳು ಕಳೆದರೂ ಘಟನೆಯ ಭೀಕರತೆ, ಮೃತಪಟ್ಟವರ ನೆನಪು, ಕುಟುಂಬಗಳ ರೋಧನೆ ಇನ್ನೂ ಜೀವಂತ, ಕಲಿತ ಪಾಠಗಳು ಜಾಗತಿಕ ಭದ್ರತೆಗೆ ನಿರ್ಣಾಯಕವಾಗಿವೆ. ಈ ವರ್ಷ ದುರಂತ ಭಯೋತ್ಪಾದನಾ ದಾಳಿಯ 15ನೇ ವಾರ್ಷಿಕೋತ್ಸವ ಗುರುತಿಸುವ ಮೂಲಕ, ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೊಯ್ಯಾ(ಎಲ್‌ಇಟಿ) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಭಾರತ ಸರ್ಕಾರದ ಯಾವುದೇ ಮನವಿ ಇಲ್ಲದೇ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕರಾಚಿಯಲ್ಲಿ ಬೀಡುಬಿಟ್ಟ ಚೀನಾದ ಜಲಾಂತರ್ಗಾಮಿ, ಯುದ್ಧನೌಕೆ – ಭಾರತಕ್ಕೆ ಇದರ ಸಂದೇಶವೇನು?

    ಕ್ರೀಡೆಯ ಮೇಲೂ ದಾಳಿಯ ಕರಾಳತೆ:
    ಸದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಸಂಬಂಧಗಳು ನಡೆಯದಿದ್ದರೂ ಐಸಿಸಿ ಆಯೋಜನೆಗೊಳಿಸುವ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಆದ್ರೆ ಭಾರತ-ಪಾಕ್‌ ತಂಡಗಳು ಮುಖಾಮುಖಿಯಾದಾಗಲೆಲ್ಲ ಈ ದಾಳಿಯನ್ನ ನೆನಪಿಸಿಕೊಳ್ಳುತ್ತಾರೆ. ಅಷ್ಟೇ ಮಾತ್ರವಲ್ಲ ಅದು ಕ್ರೀಡೆಯಲ್ಲ ಯುದ್ಧ ಎಂದು ಜಯಘೋಷ ಹಾಕುತ್ತಾ, ಭಾರತ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶ್ವಕಪ್‌ ಟೂರ್ನಿಯಲ್ಲೂ ಪಾಕಿಸ್ತಾನ ತಂಡ ಭಾರತದ ಎದುರು ಹೀನಾಯ ಸೋಲನುಭವಿಸಿದ್ದು ಕಣ್ಣ ಮುಂದಿದೆ.

  • ಭಾರತೀಯರ ಹತ್ಯೆಗೆ ಈ ಸಂಘಟನೆಯೇ ಹೊಣೆ: ಲಷ್ಕರ್‌-ಎ-ತೊಯ್ಬಾ ಬ್ಯಾನ್‌ ಮಾಡಿದ ಇಸ್ರೇಲ್‌

    ಭಾರತೀಯರ ಹತ್ಯೆಗೆ ಈ ಸಂಘಟನೆಯೇ ಹೊಣೆ: ಲಷ್ಕರ್‌-ಎ-ತೊಯ್ಬಾ ಬ್ಯಾನ್‌ ಮಾಡಿದ ಇಸ್ರೇಲ್‌

    ನವದೆಹಲಿ: ಮುಂಬೈ ಭಯೋತ್ಪಾದನಾ (Mumbai Attack) ದಾಳಿಯಾಗಿ ನವೆಂಬರ್‌ಗೆ 15 ವರ್ಷ. ಈ ಕರಾಳ ದಿನದ ಸ್ಮರಣಾರ್ಥ ಭಯೋತ್ಪಾದಕ ಸಂಘಟನೆ ಲಷ್ಕರ್‌-ಎ-ತೊಯ್ಬಾ ನಿಷೇಧಿಸುವುದಾಗಿ ಇಸ್ರೇಲ್‌ ಘೋಷಿಸಿದೆ. ಮುಂಬೈ ದಾಳಿ ಖಂಡನೀಯ ಎಂದು ಭಯೋತ್ಪಾದಕ ಸಂಘಟನೆ ವಿರುದ್ಧ ಹರಿಹಾಯ್ದಿದೆ.

    ಭಾರತ ಸರ್ಕಾರದ ಯಾವುದೇ ಮನವಿ ಇಲ್ಲದೆ ಈ ಕ್ರಮ ಕೈಗೊಳ್ಳಲಾಗಿದೆ. ಲಷ್ಕರ್-ಎ-ತೈಬಾವನ್ನು (Lashkar-e-Taiba) ಇಸ್ರೇಲಿ ಅಕ್ರಮ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ನಿಯಮಗಳನ್ನು ಪೂರೈಸಿದೆ ಎಂದು ಭಾರತದಲ್ಲಿನ ಇಸ್ರೇಲ್ (Israel) ರಾಯಭಾರ ಕಚೇರಿ ಅಧಿಕೃತ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಖಲಿಸ್ತಾನಿಗಳಿಂದ ಹಿಂದೂ ದೇವಾಲಯಗಳ ಟಾರ್ಗೆಟ್: ಕ್ರಮಕ್ಕೆ ಕೆನಡಾ ಸಂಸದ ಒತ್ತಾಯ

    ಇಸ್ರೇಲ್ ತನ್ನ ಗಡಿಯೊಳಗೆ ಅಥವಾ ಅದರ ಸುತ್ತಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಮಾತ್ರ ಪಟ್ಟಿ ಮಾಡಿದೆ. ನೂರಾರು ಭಾರತೀಯ ನಾಗರಿಕರು ಮತ್ತು ಇತರರ ಹತ್ಯೆಗೆ ಈ ಭಯೋತ್ಪಾದಕ ಸಂಘಟನೆ ಹೊಣೆಯಾಗಿದೆ ಎಂದು ತಿಳಿಸಿದೆ.

    ಭಯೋತ್ಪಾದಕ ಸಂಘಟನೆ ದಾಳಿಯ ಸಂತ್ರಸ್ತರು, ಇಸ್ರೇಲ್‌ ಸೇರಿದಂತೆ ಮುಂಬೈ ದಾಳಿಯಲ್ಲಿ ಬದುಕುಳಿದ ಮತ್ತು ದುಃಖಿತ ಕುಟುಂಬಗಳಿಗೆ ಇಸ್ರೇಲ್‌ ಸಂತಾಪ ಸೂಚಿಸಿದೆ. ಭವಿಷ್ಯದ ಶಾಂತಿಯುತ ಸಮಾಜದ ಭರವಸೆಯಲ್ಲಿ ನಾವು ನಿಮ್ಮೊಂದಿಗೆ ಒಂದಾಗಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ

    2008 ರ ನವೆಂಬರ್‌ನಲ್ಲಿ ಮುಂಬೈನಲ್ಲಿ ಹಲವಾರು ಭಯೋತ್ಪಾದಕ ದಾಳಿಗಳು ನಡೆದಿದ್ದವು. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾಗೆ ಸಂಪರ್ಕ ಹೊಂದಿದ್ದ 10 ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ಶಸ್ತ್ರಸಜ್ಜಿತವಾದ ಭಯೋತ್ಪಾದಕರು ಮುಂಬೈನ ದಕ್ಷಿಣ ಭಾಗದಲ್ಲಿ ಛತ್ರಪತಿ ಶಿವಾಜಿ ರೈಲು ನಿಲ್ದಾಣ, ಜನಪ್ರಿಯ ಲಿಯೋಪೋಲ್ಡ್ ಕೆಫೆ, ಎರಡು ಆಸ್ಪತ್ರೆಗಳು ಮತ್ತು ಥಿಯೇಟರ್ ಸೇರಿದಂತೆ ಹಲವಾರು ಸ್ಥಳಗಳಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು.

  • ಶೋಪಿಯಾನದಲ್ಲಿ ಇಬ್ಬರು ಲಷ್ಕರ್ ಉಗ್ರರ ಎನ್‍ಕೌಂಟರ್

    ಶೋಪಿಯಾನದಲ್ಲಿ ಇಬ್ಬರು ಲಷ್ಕರ್ ಉಗ್ರರ ಎನ್‍ಕೌಂಟರ್

    ಶ್ರೀನಗರ: ಜಮ್ಮು-ಕಾಶ್ಮೀರದ (Jammu- Kashmir) ಶೋಪಿಯಾನ ( Shopian) ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದಿದ್ದು, ಇಬ್ಬರು ಲಷ್ಕರ್-ಎ- ತೈಬಾ (LET) ಉಗ್ರರಿಬ್ಬರನ್ನು ಹತ್ಯೆ ಮಾಡಲಾಗಿದೆ.

    ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ. ಇದರಲ್ಲಿ ಅಬ್ರಾರ್ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದನೆಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

    ಮಂಗಳವಾರ ನಸುಕಿನ ಜಾವ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ತಕ್ಷಣವೇ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಅಲ್ಲದೆ ಎನ್‍ಕೌಂಟರ್ ಮಾಡಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಇದನ್ನೂ ಓದಿ: ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

    ಎನ್‍ಕೌಂಟರ್ ಬಳಿಕವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

    ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

    ಇಸ್ಲಾಮಾಬಾದ್‌: ಭಾರತಕ್ಕೆ (India) ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಉಗ್ರ ಪಾಕಿಸ್ತಾನದ (Pakistan) ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.

    ನಿಷೇಧಿತ ಲಷ್ಕರ್‌-ಇ-ತೊಯ್ಬಾ (Lashkar-e-Taiba) ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ (Qaiser Farooq) ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ.

    ಕರಾಚಿಯ ಬೀದಿಯಲ್ಲಿ ಇತರ ವ್ಯಕ್ತಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಫಾರೂಕ್‌ ಮೇಲೆ ದಾಳಿ ನಡೆದಿದೆ. ಈತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್‌ ಸಯೀದ್‌ನ (Hafiz Saeed) ಆಪ್ತ ಸಹಾಯಕನಾಗಿದ್ದ. ಇದನ್ನೂ ಓದಿ: ಭಾರತಕ್ಕೆ ಬೇಕಿದ್ದ ಮೋಸ್ಟ್‌ ವಾಂಟೆಡ್‌ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ

    ಮಂಗಳವಾರ ಹಫೀಜ್‌ ಸಯೀದ್‌ ಪುತ್ರ ಕಮಾಲುದ್ದೀನ್ ಸಯೀದ್‌ನನ್ನು ಅಪಹರಣ ಮಾಡಲಾಗಿತ್ತು. ಪೇಶಾವರದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಮಾಲುದ್ದೀನ್ ಸಯೀದ್‌ನನ್ನು ಅಪಹರಣ ಮಾಡಿದ್ದರು. ಇಲ್ಲಿಯವರೆಗೆ ಕಮಾಲುದ್ದೀನ್‌ ಸಯೀದ್‌ ಎಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಆತನನ್ನು ಹತ್ಯೆ ಮಾಡಲಾಗಿದೆ ಎಂಬ ವಿಚಾರ ಚರ್ಚೆ ಆಗುತ್ತಿದೆ.

    ಮುಂಬೈ ದಾಳಿ:
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು.

    ಛತ್ರಪತಿ ಶಿವಾಜಿ ಟರ್ಮಿನಸ್ (CST) ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]