ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ ಸಿನಿಮಾ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ನಾನಿ ಮೂವತ್ತನೇ ಸಿನಿಮಾ ಇಂದು ಅಧೀಕೃತವಾಗಿ ಲಾಂಚ್ ಆಗಿದೆ. ಕೆಲ ದಿನಗಳ ಹಿಂದೆ ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿಯೊಂದಿಗೆ ಮುಂದಿನ ಸಿನಿಮಾ ಮಾಡೋದಾಗಿ ಮಾಹಿತಿ ಹಂಚಿಕೊಂಡಿತ್ತು. ಆದ್ರೆ ಸಿನಿಮಾ ನಿರ್ದೇಶಕರು, ತಾರಾಬಳಗ, ತಂತ್ರಜ್ಞರು ಯಾವುದರ ಬಗ್ಗೆಯೂ ತಿಳಿಸಿರಲಿಲ್ಲ. ಇದೀಗ ಹೊಸ ವರ್ಷದ ಆರಂಭದ ದಿನ ಚಿತ್ರತಂಡ ವೀಡೀಯೋ ತುಣುಕನ್ನು ಬಿಡುಗಡೆ ಮಾಡುವ ಮೂಲಕ ನಾನಿ ಮೂವತ್ತನೇ ಸಿನಿಮಾವನ್ನು ಅಧೀಕೃತವಾಗಿ ಲಾಂಚ್ ಮಾಡಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.
ನಾನಿ ಮೂವತ್ತನೇ ಸಿನಿಮಾಗೆ ಶೌರ್ಯುವ್ ಆಕ್ಷನ್ ಕಟ್ ಹೇಳುತ್ತಿದ್ದು, ನಿರ್ದೇಶಕನಾಗಿ ಇದು ಇವರ ಮೊದಲ ಸಿನಿಮಾವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂದವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದು, ಚಿತ್ರದ ಟೈಟಲ್ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ಇದನ್ನೂ ಓದಿ: ಪ್ರಿಯಾಗೆ ಕಾಲ್ಗೆಜ್ಜೆ ತೊಡಿಸಿ ಮಂಡಿಯೂರಿ ಪ್ರಪೋಸ್ ಮಾಡಿದ `ಪಾರು’ ನಟ ಸಿದ್ದು
ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಚೆರುಕುರಿ ವೆಂಕಟ ಮೋಹನ್, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ನಾನಿ ಮೂವತ್ತನೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಯುವ ಹಾಗೂ ಪ್ರತಿಭಾವಂತ ತಂತ್ರಜ್ಞರು ಈ ಚಿತ್ರದ ಭಾಗವಾಗಲಿದ್ದು, ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ‘ಜೆರ್ಸಿ’, ‘ಶ್ಯಾಮ್ ಸಿಂಗ ರಾಯ್’ ಸಿನಿಮಾ ನಂತರ ನಾನಿ ಜೊತೆ ಇದು ಇವರ ಮೂರನೇ ಸಿನಿಮಾವಾಗಿದೆ. ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.
Live Tv
[brid partner=56869869 player=32851 video=960834 autoplay=true]
ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಖ್ಯಾತಿಯ ನಟ ಅಜಯ್ ರಾವ್ ಸ್ಯಾಂಡಲ್ ವುಡ್ ಯುವ ನಿರ್ದೇಶಕನೊಂದಿಗೆ ಹೊಸ ಸಿನಿಮಾ ಘೋಷಿಸಿದ್ದಾರೆ. ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದೆ. ಸಖತ್ ಇಂಟ್ರಸ್ಟಿಂಗ್ ಆಗಿರೋ ಟೈಟಲ್ ಟೀಸರ್ ಸಿನಿರಸಿಕರ ಗಮನ ಸೆಳೆಯುತ್ತಿದೆ.
ಈ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಚಿತ್ರದಲ್ಲಿ ವಕೀಲರಾಗಿ ಕಾಣಿಸಿಕೊಳ್ಳುತ್ತಿರುವ ಅಜಯ್ ರಾವ್ ಸಿನಿಮಾವನ್ನು ವಕೀಲರಿಂದಲೇ ಲಾಂಚ್ ಮಾಡಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್
‘ಯುದ್ಧಕಾಂಡ’ ಎಂದಾಗ ಎಲ್ಲರಿಗೂ ನೆನಪಾಗೋದು ಲೆಜೆಂಡರಿ ರವಿ ಸರ್ ಸಿನಿಮಾ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಸರ್ ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಒಳ್ಳೆದಾಗ್ಲಿ ಎಂದು ಆಶೀರ್ವಾದ ಮಾಡಿದ್ರು. ಆದ್ರೆ ಆಗ ಬಂದ ‘ಯುದ್ಧಕಾಂಡ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದು ಅಜಯ್ ರಾವ್ ಮಾಹಿತಿ ಹಂಚಿಕೊಂಡ್ರು.
ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷ ಆಯ್ತು. ನಟನಾಗಿ ಯಶಸ್ಸು, ಸೋಲು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೋ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. ಕೃಷ್ಣ ಲೀಲಾ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ ಎಂದು ಚಿತ್ರರಂಗದ ಜರ್ನಿಯನ್ನು ಮೆಲುಕು ಹಾಕಿದ್ರು ಅಜಯ್ ರಾವ್.
‘ಯುದ್ಧಕಾಂಡ’ ಸಿನಿಮಾವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮಾ ಕ್ಯಾಮೆರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ‘ಯುದ್ಧಕಾಂಡ’ ಚಿತ್ರತಂಡ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್.ಎಸ್.ರಾಜಮೌಳಿ ಅವರ ಬಹುನಿರೀಕ್ಷಿತ ಆರ್ಆರ್ಆರ್ (RRR) ಸಿನಿಮಾದ ಸಾಂಗ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಮಾಲ್ನಲ್ಲಿ ನಡೆಯುತ್ತಿದೆ. ಸಿನಿಮಾ ನಿರ್ದೇಶಕ ರಾಜಮೌಳಿ ಅವರು ಸಿನಿಮಾ ಕುರಿತಾಗಿ ಇಂಟ್ರಸ್ಟಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸಾಂಗ್ ಲಾಂಚ್ಗೆ RRR ನಿರ್ದೇಶಕ ರಾಜಮೌಳಿ ಹಾಗೂ ಪತ್ನಿ ರಮಾ ರಾಜಮೌಳಿ ಕೂಡ ಭಾಗಿಯಾಗಿದ್ದಾರೆ. ಜನವರಿ 7ಕ್ಕೆ ಖಖಖ ಸಿನಿಮಾ ರಿಲೀಸ್ ಆಗುತ್ತಿದೆ. ಲಹರಿ ಸಂಸ್ಥೆಯ ವೇಲು ಸೇರಿದಂತೆ ಕೆಲ ವಿತರಕರು ಹಾಗೂ ನಿರ್ಮಾಪಕರು ಭಾಗಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ರಾಜಮೌಳಿ ಕನ್ನಡದಲ್ಲಿ ಮಾತು ಶುರು ಮಾಡಿದರು. ಎಲ್ಲರೂ ಚೆನ್ನಾಗಿದ್ದೀರಾ? ಎರಡು ವಿಷಯದಲ್ಲಿ ಕ್ಷಮಿಸಬೇಕು. ಒಂದು ಕನ್ನಡದಲ್ಲಿ ಅಷ್ಟಾಗಿ ಮಾತನಾಡಕ್ಕೆ ಬರಲ್ಲ, ನೀವೇ ಅಡ್ಜಸ್ಟ್ ಮಾಡಿಕೊಳ್ಳಬೇಕು. ಕರ್ನಾಟಕದಲ್ಲಿ ನಾನೇ ಬಂದು ಮಾತನಾಡುತ್ತಿದ್ದೇನೆ. ಕರ್ನಾಟಕದಲ್ಲಿ ಮುಂದಿನ ತಿಂಗಳು ಗ್ರ್ಯಾಂಡ್ ಆಗಿ ಟ್ರೇಲರ್ ರಿಲೀಸ್ ಮಾಡಿ, ಎಲ್ಲರಿಗೂ ಸಂದರ್ಶನ ಕೊಡುತ್ತೇನೆ ಎಂದರು.
ಕಂಪ್ಲೀಟ್ ಟೀಮ್ ಜೊತೆಗೆ ಮುಂದಿನ ತಿಂಗಳು ಕರ್ನಾಟಕಕ್ಕೆ ಬರುತ್ತೇವೆ. ಆರ್ಆರ್ಆರ್ ಸಿನಿಮಾದಲ್ಲಿ ಎಲ್ಲಾ ಆ್ಯಕ್ಷನ್ಗಳು ಸೂಪರ್ ಆಗಿದೆ. ಎಮೋಷನಲ್ ದೃಶ್ಯಗಳು ತುಂಬಾ ಇದೆ. ಬ್ಯಾಂಗ್ ಗ್ರೌಂಡ್ ಮ್ಯೂಸಿಕ್ ಸಹ ಚೆನ್ನಾಗಿದೆ. ಇವತ್ತು ನಿಮ್ಮ ಜೊತೆ ಅನುಭವ ಶೇರ್ ಮಾಡಿದಕ್ಕೆ ಖುಷಿಯಾಗುತ್ತಿದೆ ಎಂದು ಸಿನಿಮಾ ಕುರಿತಾಗಿ ಕೆಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಾಂಗ್ ಲಾಂಚ್ ಬಳಿಕ ರಾಜಮೌಳಿ ಅವರು ಅಪ್ಪು ಮನೆಗೆ ತೆರಳಲಿದ್ದಾರೆ.
ಆರ್ಆರ್ಆರ್ ಚಿತ್ರದ ಆಡಿಯೋ ಹಕ್ಕನ್ನು ಲಹರಿ ಹಾಗೂ ಟಿ ಸಿರೀಸ್ ಸಂಸ್ಥೆ ಭಾರೀ ಮೊತ್ತ ನೀಡಿ ಖರೀದಿಸಿದೆ. ಒಟ್ಟು 5 ಭಾಷೆಗಳಲ್ಲಿ ಆರ್ಆರ್ಆರ್ ತೆರೆಕಾಣುತ್ತಿದ್ದು, ಐದೂ ಭಾಷೆಯ ಆಡಿಯೋ ಹಕ್ಕನ್ನು ಲಹರಿ ಹಾಗೂ ಟಿ ಸಿರೀಸ್ ತಮ್ಮ ಜೋಳಿಗೆಗೆ ಹಾಕಿಕೊಂಡಿವೆ. ಬಾಹುಬಲಿ ಚಿತ್ರದ ಆಡಿಯೋ ಹಕ್ಕನ್ನೂ ಇದೇ ಸಂಸ್ಥೆ ದಾಖಲೆ ಮೊತ್ತಕ್ಕೆ ಖರೀದಿಸಿತ್ತು. ಇದೀಗ ಆರ್ಆರ್ಆರ್ ಬಾಹುಬಲಿ ದಾಖಲೆಯನ್ನೂ ಮುರಿದಿದೆ ಎನ್ನಲಾಗುತ್ತಿದೆ.
ಬರೋಬ್ಬರಿ 350 ಕೋಟಿ ರೂಪಾಯಿಗೂ ಅಧಿಕ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಆರ್ಆರ್ಆರ್, ಒಂದು ಐತಿಹಾಸಿಕ ಸಿನಿಮಾ. ಬ್ರಿಟಿಷರು ಹಾಗೂ ಹೈದರಾಬಾದ್ ನಿಜಾಮರ ವಿರುದ್ಧ ಹೋರಾಡಿದ ಅಲ್ಲೂರಿ ಸೀತಾರಾಮರಾಜು ಹಾಗೂ ಕೊಮರಮ್ ಭೀಮ್ ಎಂಬ ಇಬ್ಬರು ಧೀರ ಸ್ವಾತಂತ್ರ್ರ್ಯ ಸೇನಾನಿಗಳ ಜೀವನಾಧಾರಿತ ಚಿತ್ರ. ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ ರಾಮ್ಚರಣ್ ತೇಜ ಹಾಗೂ ಕೊಮರಮ್ ಭೀಮ್ ಪಾತ್ರದಲ್ಲಿ ಜೂನಿಯರ್ ಎನ್ಟಿಆರ್ ನಟಿಸುತ್ತಿದ್ದು, ಬಾಲಿವುಡ್ ಆ್ಯಕ್ಷನ್ ಕಿಂಗ್ ಅಜಯ್ ದೇವ್ಗನ್, ನಟಿ ಆಲಿಯಾ ಭಟ್, ಸಮುತಿರಕಣಿ, ಶ್ರಿಯಾ ಸರಣ್, ಛತ್ರಪತಿ ಶೇಖರ್, ರಾಜೀವ್ ಕನಕಲ ಜೊತೆಗೆ ಆಲಿಸನ್ ಡೂಡಿ, ರೇ ಸ್ಟೀವನ್ಸನ್ ಸೇರಿದಂತೆ ಹಲವು ಹಾಲಿವುಡ್ ಕಲಾವಿದರೂ ಆರ್ಆರ್ಆರ್ ಚಿತ್ರದಲ್ಲಿ ನಟಿಸಿದ್ದಾರೆ.
ಬೆಂಗಳೂರು: ಕ್ರಿಸ್ಮಸ್ ಹಬ್ಬಕ್ಕೆ ಸ್ಪೆಷಲ್ ಆಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಚಿತ್ರದ ಟೈಟಲ್ ಲಾಂಚ್ ಆಗಿದೆ.
ದರ್ಶನ್ ಅಭಿನಯಿಸುತ್ತಿರುವ ಚಿತ್ರಕ್ಕೆ `ರಾಬರ್ಟ್’ ಟೈಟಲ್ ಫಿಕ್ಸ್ ಮಾಡಿದ್ದು, ಚೌಕ ಸಿನಿಮಾ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ `ಡಿ.53′ ಹೆಸರಲ್ಲಿ ಬಿಡುಗಡೆಯಾದ ಥೀಮ್ ಪೋಸ್ಟರ್ ಬಜಾರ್ ನಲ್ಲಿ ಹವಾ ಕ್ರಿಯೇಟ್ ಮಾಡಿಕೊಂಡಿತ್ತು.
`ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು. ರಾವಣನ ಮುಂದೆ ಗೆಲ್ಲೋದು ಗೊತ್ತು’ ಎನ್ನುವ ಖಡಕ್ ಡೈಲಾಗ್ ಅಭಿಮಾನಿಗಳನ್ನು ಹುಚ್ಚೆಬ್ಬಿಸಿತ್ತು. ಇದೀಗ ಟೈಟಲ್ ಪೋಸ್ಟರ್ ಅಭಿಮಾನಿಗಳಿಗೆ ಅಟ್ರ್ಯಾಕ್ಟ್ ಮಾಡುತ್ತಿದೆ.
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ #D53 ಚಿತ್ರಕ್ಕೆ ‘ರಾಬರ್ಟ್’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದೆ. ಉಮಾಪತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ, ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. 2019 ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ ಎಲ್ಲಾ ಕ್ರೈಸ್ತ ಭಾಂದವರಿಗೂ ಕ್ರಿಸ್ಮಸ್ ಹಬ್ಬದ ಹಾರ್ಧಿಕ ಶುಭಾಷಯಗಳು. #Roberrtpic.twitter.com/Ck9l3dBP4f
ಹನುಮಂತನ ಅವತಾರವೆತ್ತಿರುವ ದಾಸ ರಾಮನನ್ನು ಹೆಗಲ ಮೇಲಿರಿಸಿಕೊಂಡು ನಿಂತಿರುವ ಪೋಸ್ಟರ್ ಅಭಿಮಾನಿಗಳನ್ನು ಥ್ರಿಲ್ಲಾಗುವಂತೆ ಮಾಡಿದೆ. `ರಾಬರ್ಟ್’ ಮಾಸ್ ಎಂಟರ್ ಟೈನರ್ ಚಿತ್ರವಾಗಿದ್ದು, ಫೆಬ್ರವರಿಯಿಂದ ಶೂಟಿಂಗ್ ಶುರುವಾಗಲಿದೆ. ಚಿತ್ರದ ನಾಯಕಿ ಸೇರಿದಂತೆ ಓವರ್ ಆಲ್ ಸ್ಟಾರ್ ಇನ್ನು ಅಂತಿಮವಾಗಿಲ್ಲ
ದರ್ಶನ್ ರಾಬರ್ಟ್ ಚಿತ್ರದ ಪೋಸ್ಟರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಾಕಿ ಅದಕ್ಕೆ, “ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ #ಡಿ53 ಚಿತ್ರಕ್ಕೆ `ರಾಬರ್ಟ್’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದೆ. ಉಮಾಪತಿ ಫಿಲ್ಮ್ ಬ್ಯಾನರ್ ಅಡಿಯಲ್ಲಿ, ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. 2019 ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ” ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ತಿಳಿಸಿ ಎಲ್ಲಾ ಕ್ರೈಸ್ತ ಭಾಂದವರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ.
ನವದೆಹಲಿ: ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 94ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.
ನಾಣ್ಯ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಹೊಂದಿದ್ದರು. ಜನ ಸಂಘವನ್ನು ಸ್ಥಾಪಿಸಿದ್ದರು. ಆದರೆ ಪ್ರಜಾಪ್ರಭುತ್ವದ ರಕ್ಷಣೆಯ ಸಂದರ್ಭ ನಿರ್ಮಾಣವಾದಾಗ ವಾಜಪೇಯಿ ಸೇರಿದಂತೆ ಪ್ರಮುಖ ನಾಯಕರು ಜನತಾ ಪಾರ್ಟಿಯನ್ನು ಸೇರಿಕೊಂಡರು. ನಂತರ ಅದನ್ನು ತೊರೆದು ಬಿಜೆಪಿಯನ್ನು ಸ್ಥಾಪಿಸಿಕೊಂಡರು ಎಂದು ಜ್ಞಾಪಿಸಿಕೊಂಡರು.
ವಾಜಪೇಯಿಯವರು ತಮ್ಮ ಪಕ್ಷದ ಸಿದ್ಧಾಂತದ ಮೇಲೆ ಎಂದಿಗೂ ರಾಜಿ ಮಾಡಿಕೊಳ್ಳುತ್ತಿರಲಿಲ್ಲ. ಅವರು ಕಟ್ಟಿದ ಬಿಜೆಪಿ ಇಂದು ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಉತ್ತಮ ಭಾಷಣಕಾರರಾಗಿದ್ದ ಅವರು ಮಾತನಾಡುತ್ತಿದ್ದರೆ, ಇಡೀ ದೇಶವೇ ಕೇಳುತಿತ್ತು ಎಂದು ಹೇಳಿದ್ದಾರೆ.
ಅಟಲ್ ಜೀಯವರ ಆದರ್ಶ ತತ್ವಗಳನ್ನು ಪಾಲಿಸುತ್ತೇನೆ. ಇದೇ ಮಂಗಳವಾರ ವಾಜಪೇಯಿಯವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ.
ದೀರ್ಘ ಅನಾರೋಗ್ಯಕ್ಕೆ ತುತ್ತಾಗಿದ್ದ ಅಟಲ್ ಬಿಹಾರಿ ವಾಜಪೇಯಿಯವರು ಆಗಸ್ಟ್ 16 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಅಜಾತಶತ್ರು ಎಂದೇ ಕರೆಯಿಸಿಕೊಂಡಿದ್ದ ಅವರ ನಿಧನಕ್ಕೆ ದೇಶವೇ ಕಂಬನಿ ಮಿಡಿದಿತ್ತು. 1924ರ ಡಿಸೆಂಬರ್ 25 ರಂದು ಜನಿಸಿದ್ದ ಅವರಿಗೆ ಇದೇ ಮಂಗಳವಾರ 94ನೇ ಹುಟ್ಟುಹಬ್ಬದ ನಿಮಿತ್ತ ಕೇಂದ್ರ ಸರ್ಕಾರ ಅವರ ಸ್ಮರಣಾರ್ಥವಾಗಿ ನಾಣ್ಯ ಬಿಡುಗಡೆಗೊಳಿಸಿದೆ.
ಸಮಾರಂಭಕ್ಕೆ ಅಟಲ್ ಜೀಯವರೊಂದಿಗೆ ದೀರ್ಘ ಕಾಲ ಒಡನಾಟ ಹೊಂದಿದ್ದ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸೇರಿದಂತೆ ಸ್ಪೀಕರ್ ಸುಮಿತ್ರಾ ಮಹಾಜನ್, ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಪ್ರಮುಖ ಗಣ್ಯರು ಆಗಮಿಸಿದ್ದರು.
ನಾಣ್ಯದ ವಿಶೇಷತೆಗಳೇನು?
* ನಾಣ್ಯದ ಒಂದು ಬದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಭಾವಚಿತ್ರ ಹಾಗೂ ಹೆಸರನ್ನು ಇಂಗ್ಲೀಷ್ ಹಾಗೂ ದೇವನಗರಿ ಭಾಷೆಯಲ್ಲಿ ಮುದ್ರಿಸಲಾಗಿದೆ.
* ಅಟಲ್ ಜೀಯವರ ಹುಟ್ಟು ಹಾಗೂ ನಿಧನದ ವರ್ಷವನ್ನು ಭಾವಚಿತ್ರದ ಕೆಳಗೆ ಮುದ್ರಿಸಲಾಗಿದೆ.
* ಸಂಪೂರ್ಣ ನಾಣ್ಯವನ್ನು ಶೇ.50 ರಷ್ಟು ಬೆಳ್ಳಿ, ಶೇ.40 ರಷ್ಟು ತಾಮ್ರ, ಶೇ.5ರಷ್ಟು ನಿಕ್ಕಲ್ ಹಾಗೂ ಶೇ.5ರಷ್ಟು ಜಿಂಕ್ ಬಳಸಿ ನಿರ್ಮಿಸಲಾಗಿದೆ.
* ಒಂದು ನಾಣ್ಯದ ಸಂಪೂರ್ಣ ತೂಕ 135 ಗ್ರಾಂಗಳಷ್ಟು ಹೊಂದಿದೆ.
* ನಾಣ್ಯದ ಮತ್ತೊಂದು ಭಾಗದಲ್ಲಿ ಮೂರು ಸಿಂಹಗಳುಳ್ಳ ಅಶೋಕ ಸ್ತಂಭದ ಚಿಹ್ನೆಯ ಜೊತೆಗೆ ಸತ್ಯಮೇವ ಜಯತೆಯನ್ನು ಮುದ್ರಿಸಲಾಗಿದೆ.
* ನಾಣ್ಯದ ಎಡಬಲದಲ್ಲಿ ದೇವನಗರಿ ಲಿಪಿಯಲ್ಲಿ ಭಾರತ ಎಂದು ಮುದ್ರಿಸಿದ್ದರೆ, ಬಲ ಬದಿಯಲ್ಲಿ ಇಂಡಿಯಾ ಎಂದು ಇಂಗ್ಲೀಷ್ ಭಾಷೆಯಲ್ಲಿ ಮುದ್ರಿಸಲಾಗಿದೆ.
ನವದೆಹಲಿ: ಆಂಡ್ರಾಯ್ಡ್ ಆವೃತ್ತಿಯಲ್ಲಿ ಹೆಸರು ಮಾಡುತ್ತಿರುವ ಹಾನರ್ ತನ್ನ ನೂತನ ಆವೃತ್ತಿಯಾದ ಹಾನರ್ 8ಸಿ ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ನೂತನ ಹಾನರ್ 8ಸಿ ಸ್ಮಾರ್ಟ್ ಫೋನ್ ನಲ್ಲಿ ಸೆಲ್ಫಿಗಾಗಿ 8 ಎಂಪಿ ಎಚ್ಡಿ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 13+2ಎಂಪಿ ಡ್ಯುಯಲ್ ಕ್ಯಾಮೆರಾವಿದೆ. ಮಿಡ್ ನೈಟ್ ಬ್ಲಾಕ್, ಅರೋರ ಬ್ಲ್ಯೂ ಹಾಗೂ ಪ್ಲಾಟಿನಂ ಗೋಲ್ಡ್ ಬಣ್ಣಗಳಲ್ಲಿ ನೂತನ ಫೋನ್ ಲಭ್ಯವಿದೆ. ಡಿಸೆಂಬರ್ 10 ರಿಂದ ಆನ್ಲೈನ್ ಜಾಲತಾಣಗಳಲ್ಲಿ ಲಭ್ಯವಿರಲಿದೆ.
ಬೆಲೆ ಎಷ್ಟು?
4ಜಿಬಿ ರ್ಯಾಮ್/32 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 11,999 ರೂ. 4ಜಿಬಿ ರ್ಯಾಮ್/64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 12,999 ರೂಪಾಯಿಯನ್ನು ನಿಗದಿಪಡಿಸಿದೆ.
ಹಾನರ್ 8ಸಿ ಗುಣ ವೈಶಿಷ್ಟ್ಯಗಳು: ಬಾಡಿ ಮತ್ತು ಡಿಸ್ಪ್ಲೇ:
157.2 X 76 X 7.98 ಮಿ.ಮೀ., 167 ಗ್ರಾಂ ತೂಕ, ಡ್ಯುಯಲ್ ಸಿಮ್(ನ್ಯಾನೋ ಸಿಮ್, ಡ್ಯುಯಲ್ ಸ್ಟ್ಯಾಂಡ್-ಬೈ) ವಿತ್ ಮೆಮೊರಿ ಕಾರ್ಡ್ ಸ್ಲಾಟ್ ಸೌಲಭ್ಯ, 6.26 ಇಂಚಿನ ಐಪಿಸಿ ಎಲ್ಸಿಡಿ ಕೆಪಾಸಿಟೆಟಿವ್ ಟಚ್ ಸ್ಕ್ರೀನ್(720 X 1520 ಪಿಕ್ಸೆಲ್, 19:9 ಅನುಪಾತ 269ಪಿಪಿಐ)
ಪ್ಲಾಟ್ಫಾರಂ ಮತ್ತು ಮೆಮೊರಿ:
ಆಂಡ್ರಾಯ್ಡ್ 8.1 (ಓರಿಯೋ), ಕ್ವಾಲಕಂ ಸ್ನಾಪ್ಡ್ರಾಗನ್ 632, ಆಕ್ಟಾ ಕೋರ್ ಪ್ರೊಸೆಸರ್ 1.8 ಗೀಗಾಹರ್ಟ್ಸ್, ಅಡ್ರಿನೋ 506 ಗ್ರಾಪಿಕ್ ಪ್ರೊಸೆಸರ್, 3ಜಿಬಿ ರ್ಯಾಮ್/32 ಜಿಬಿ ಆಂತರಿಕ ಮೆಮೊರಿ, 4ಜಿಬಿ ರ್ಯಾಮ್/64 ಜಿಬಿ ಆಂತರಿಕ ಮೆಮೊರಿ ಹೊಂದಿದ್ದು, 256 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ಹೊಂದಿದೆ.
ಕ್ಯಾಮೆರಾ ಹಾಗೂ ಇತರೆ ಫೀಚರ್:
ಮುಂಭಾಗ 8 ಎಂಪಿ ಎಚ್ಡಿ ಕ್ಯಾಮೆರಾ, ಹಿಂಭಾಗ 13+2 ಎಂಪಿ ಡ್ಯುಯಲ್ ಕ್ಯಾಮೆರಾ, ಆಟೋ ಮ್ಯಾಟಿಕ್ ಹೆಚ್ಡಿಆರ್ ಜೊತೆಗೆ, ಆಟೋ ಫೋಕಸ್ ಹಾಗೂ ಹೆಚ್ಡಿ ವಿಡಿಯೋ ರೆಕಾರ್ಡಿಂಗ್. ಜೊತೆಗೆ ಫಿಂಗರ್ ಪ್ರಿಂಟ್ ಸೆನ್ಸಾರ್, ಫೋಟೋ ಲಾಕಿಂಗ್, 4,000 ಎಂಎಹೆಚ್ ತೆಗೆಯಲು ಅಸಾಧ್ಯವಾದ ಬ್ಯಾಟರಿ ಸೌಲಭ್ಯವನ್ನು ಹೊಂದಿದೆ.
ಮುಂಬೈ: ಭಾರತೀಯ ಸ್ಪೋರ್ಟ್ಸ್ ಬೈಕ್ ಎಂದೇ ಹೆಸರು ಪಡೆದಿರುವ ಬಜಾಜ್ ಕಂಪನಿಯ ಪಲ್ಸರ್ 150 ಸಿಸಿ ಬೈಕ್ ನೂತನ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.
ಕಳೆದ ಎರಡು ದಶಕಗಳಿಂದ ತನ್ನದೆಯಾದ ಜನಪ್ರಿಯತೆಯನ್ನು ಪಡೆದಿರುವ ಬಜಾಜ್ ಸಂಸ್ಥೆಯು, ತನ್ನ ಪಲ್ಸರ್ ಶ್ರೇಣಿಯ ಬೈಕುಗಳ ಮೂಲಕ ಯುವ ಸಮುದಾಯವನ್ನು ಸೆಳೆಯುವಲ್ಲಿ ಸಫಲವಾಗಿತ್ತು. ಇದೀಗ ತನ್ನ ಪಲ್ಸರ್ 150 ಬೈಕಿನಲ್ಲಿ ಟ್ವಿನ್ ಡಿಸ್ಕ್ ಹಾಗೂ ನೂತನ ವಿನ್ಯಾಸದ ಹೊಸ ಬೈಕನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ.
ಪಲ್ಸರ್ 150 ಟ್ವಿನ್ ಡಿಸ್ಕ್ ವೇರಿಯಂಟ್ ಬೈಕುಗಳು ಬ್ಲಾಕ್ ಬ್ಲೂ, ಬ್ಲಾಕ್ ರೆಡ್ ಮತ್ತು ಬ್ಲಾಕ್ ಕ್ರೋಮ್ ಬಣ್ಣಗಳಲ್ಲಿ ಲಭ್ಯವಿದೆ. ಹೊಸ ಪೇಯಿಂಟ್ ಸ್ಕೀಮ್ ಮತ್ತು ಗ್ರಾಫಿಕ್ಸ್, ಸ್ಪ್ಲಿಟ್ ಸೀಟ್ಸ್ ಹಾಗು ಸ್ಪ್ಲಿಟ್ ಗ್ರ್ಯಾಬ್ ರೈಲ್ಗಳನ್ನು ಹೊಂದಿದೆ. ತನ್ನ ಹಳೆಯ ಮಾದರಿಯ ಪಲ್ಸರ್ 150 ಬೈಕ್ಗಳಿಗಿಂತ ನೂತನವಾಗಿ ಬಿಡುಗಡೆಯಾಗಿರುವ ಪಲ್ಸರ್ 150 ಬೈಕ್ಗಳು ಉದ್ದವಾದ ವೀಲ್ಬೇಸ್ ಅನ್ನು ಹೊಂದಿವೆ. ಇದರ ಜೊತೆ ಬೈಕಿನಲ್ಲಿದ್ದ ನಾಯ್ಸ್ ವೈಬ್ರೇಶನ್ ಹಾರ್ಶ್ನೆಸ್ ಅನ್ನು ಸಹ ಸುಧಾರಿಸಲಾಗಿದೆ.
ನೂತನ ಪಲ್ಸರ್ 150 ಸಿಸಿ ಟ್ವಿನ್ ಬೈಕಿನ ಬೆಲೆ ಪುಣೆಯ ಆನ್ ರೋಡ್ ದರ 96,300 ರೂಪಾಯಿ ಆಗಿದ್ದು, ತನ್ನ ಹಳೆಯ 150ಸಿಸಿ ಟ್ವಿನ್ ಮಾದರಿಗಿಂತ 1,500 ಜಾಸ್ತಿ ಇದೆ. 2019ರ ವೇಳೆಗೆ ಬೈಕುಗಳ ಗ್ರಾಹಕರ ಕೈ ಸೇರಲಿವೆ ಎಂದು ಕಂಪನಿ ತಿಳಿಸಿದೆ.
ನೂತನ ಪಲ್ಸರ್ 150ಸಿಸಿ ಬೈಕಿನ ಗುಣವೈಶಿಷ್ಟ್ಯಗಳು: ಎಂಜಿನ್ ಮತ್ತು ಸಸ್ಪೆನ್ಷನ್:
149.5 ಸಿಸಿ ಏರ್ ಕೂಲ್ಡ್ ಸಿಂಗಲ್ ಸಿಲಿಂಡರ್ ಡಿಟಿಎಸ್-ಐ ಎಂಜಿನ್ ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ 14 ಬಿಎಚ್ಪಿ ಜೊತೆ 13.4 ಎನ್ಎಂ ಟಾರ್ಕ್ ಉತ್ಪಾದಿಸುವ ಶಕ್ತಿ ಹೊಂದಿದೆ. ಫ್ರಂಟ್ ಟೆಲಿಸ್ಕೋಪಿಕ್ ಫೋರ್ಕ್ ಜೊತೆಗೆ ಆ್ಯಂಟಿ ಫ್ರಿಕ್ಷನ್ ಸಸ್ಪೆನ್ಷನ್ ಹೊಂದಿದ್ದು, ಹಿಂದುಗಡೆ ಟ್ವಿನ್ ನೈಟ್ರಾಕ್ಸ್ ಸಸ್ಪೆನ್ಷನ್ ನೀಡಿದೆ.
ಬ್ರೇಕ್ ಹಾಗೂ ಟೈರ್ ಗಳು:
ಮುಂದುಗಡೆ 90/90 ಅಳತೆಯ 17 ಇಂಚಿನ ಟೈರ್ ಹೊಂದಿದ್ದು, 260 ಎಂಎಂ ಡಿಸ್ಕ್ ಬ್ರೇಕ್ ಹೊಂದಿದೆ. ಹಿಂದುಗಡೆ 120/80 ಅಳತೆಯ 17 ಇಂಚಿನ ಟೈರ್ ಹೊಂದಿದ್ದು, 230 ಎಂಎಂ ಡಿಸ್ಕ್ ಬ್ರೇಕ್ ಸಿಸ್ಟಮ್ ಹೊಂದಿದೆ.
ಸುತ್ತಳತೆ ಹಾಗೂ ತೂಕ:
2035ಎಂಎಂ ಉದ್ದ, 765ಎಂಎಂ ಅಗಲ, 1115ಎಂಎಂ ಎತ್ತರ ಹೊಂದಿದ್ದು, ವೀಲ್ಬೇಸ್ 1345ಎಂಎಂ ಇದೆ. ಗ್ರೌಂಡ್ ಕ್ಲಿಯರೆನ್ಸ್ 165 ಎಂಎಂ ಆಗಿದೆ. ಇಂಧನ ಸಾಮಥ್ರ್ಯ 15 ಲೀಟರ್ ಇದ್ದು, ಒಟ್ಟು ತೂಕ 144 ಕೆಜಿ ಇದೆ.
ನವದೆಹಲಿ: ಭಾರತದ ಬಜೆಟ್ ಸ್ಮಾರ್ಟ್ ಫೋನ್ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕ್ಸಿಯೋಮಿಯು ರೆಡ್ಮಿ ನೋಟ್ 6 ಪ್ರೋ ಸ್ಮಾರ್ಟ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ.
ನೂತನ ರೆಡ್ಮಿ ನೋಟ್ 6 ಪ್ರೋ ಆವೃತ್ತಿಯಲ್ಲಿ ಸೆಲ್ಫಿಗಾಗಿ 20+2 ಎಂಪಿ ಹೆಚ್ಡಿಆರ್ ಸೂಪರ್ ಪಿಕ್ಸೆಲ್ ಕ್ಯಾಮೆರಾ, ಹಿಂದುಗಡೆ 12+5 ಎಂಪಿ ಹೆಚ್ಡಿಆರ್ ಜೊತೆಗೆ ಡ್ಯುಯಲ್ ಟೋನ್ ಫ್ಲಾಶ್ ಹೊಂದಿದೆ.
ಎಂಐ ಆನ್ಲೈನ್ ಹಾಗೂ ಆಫ್ಲೈನ್ ಮತ್ತು ಫ್ಲಿಪ್ಕಾರ್ಟ್, ಅಮೆಜಾನ್ ಜಾಲತಾಣಗಳಲ್ಲಿ ಶುಕ್ರವಾರ ಮಧ್ಯಾಹ್ನ 12 ರಿಂದಲೇ ಸಿಗಲಿವೆ. ಇದೇ ದಿನ ಕ್ಸಿಯೋಮಿ ವಿಶೇಷ ಆಫರ್ ನೀಡಿದ್ದು, ನೂತನ ಸ್ಮಾರ್ಟ್ ಫೋನ್ ಗಳ 4ಜಿಬಿ ಹಾಗೂ 6ಜಿಬಿ ರ್ಯಾಮ್ ಗಳ ಮೇಲೆ 1 ಸಾವಿರ ರೂಪಾಯಿಯನ್ನು ಸಹ ಕಡಿತಗೊಳಿಸಿದೆ. ಈ ಆಫರ್ ಶುಕ್ರವಾರ ಖರೀದಿಸುವ ಗ್ರಾಹಕರಿಗೆ ಮಾತ್ರ ಅನ್ವಯಿಸುತ್ತದೆ.
ರೆಡ್ಮಿ ನೋಟ್ 6 ಪ್ರೋ ಗುಣವೈಶಿಷ್ಟ್ಯಗಳು: ಬೆಲೆ ಎಷ್ಟು?
4 ಜಿಬಿ ರ್ಯಾಮ್/64 ಜಿಬಿ ಆಂತರಿಕ ಮೆಮೊರಿಗೆ 13,999 ರೂಪಾಯಿ ಹಾಗೂ 6 ಜಿಬಿ ರ್ಯಾಮ್/64 ಜಿಬಿ ಆಂತರಿಕ ಮೆಮೊರಿಗೆ 15,999 ರೂಪಾಯಿ ಬೆಲೆಯನ್ನು ನಿಗಪಡಿಸಿದ್ದು, ಬ್ಲಾಕ್, ಬ್ಲ್ಯೂ, ರೋಸ್ ಗೋಲ್ಡ್ ಹಾಗೂ ರೆಡ್ ಬಣ್ಣಗಳಲ್ಲಿ ಲಭ್ಯವಿರಲಿದೆ.
ಬಾಡಿ ಮತ್ತು ಡಿಸ್ಪ್ಲೇ:
157.9 X 76.4 X 8.3 ಮಿ.ಮೀ., 182 ಗ್ರಾಂ ತೂಕ, ಹೈಬ್ರಿಡ್ ಡ್ಯುಯಲ್ ಸಿಮ್(ನ್ಯಾನೋ ಸಿಮ್ – ಡ್ಯುಯಲ್ ಸ್ಟ್ಯಾಂಡ್-ಬೈ), 6.26 ಇಂಚಿನ ಐಪಿಸಿ ಎಲ್ಸಿಡಿ ಕೆಪಾಸಿಟೆಟಿವ್ ಟಚ್ ಸ್ಕ್ರೀನ್(1080 X 2280ಪಿಕ್ಸೆಲ್, 19:9 ಅನುಪಾತ 403ಪಿಪಿಐ)
ಪ್ಲಾಟ್ಫಾರಂ ಮತ್ತು ಮೆಮೊರಿ:
ಆಂಡ್ರಾಯ್ಡ್ 8.1 (ಓರಿಯೋ), ಕ್ವಾಲಕಂ ಸ್ನಾಪ್ ಡ್ರಾಗನ್ 636 ಅಕ್ಟಾ ಕೋರ್ ಪ್ರೊಸೆಸರ್, 1.8 ಗೀಗಾಹರ್ಟ್ಸ್ ಸ್ಪೀಡ್, ಅಡ್ರಿನೋ 508 ಗ್ರಾಫಿಕ್ ಪ್ರೋಸೆಸರ್, ಎಂಐ 9.0 ಆವೃತ್ತಿ ಅಪ್ಡೇಟೆಡ್, 4 ಜಿಬಿ ರ್ಯಾಮ್/64 ಜಿಬಿ ಆಂತರಿಕ ಮೆಮೊರಿ ಹಾಗೂ 6 ಜಿಬಿ ರ್ಯಾಮ್/64 ಜಿಬಿ ಆಂತರಿಕ ಮೆಮೊರಿಯನ್ನು ಹೊಂದಿದೆ. ಹೆಚ್ಚುವರಿ 256 ಜಿಬಿ ವರೆಗೆ ವಿಸ್ತರಿಸಬಹುದು.
At #Xiaomi, we have been continuously improving our low-light camera capabilities to provide the best possible results.
With the #RedmiNote6Pro, we’ve introduced a wider aperture. The large 1.4μm sensor allows 25% more light intake, resulting in clearer photos, even in low-light pic.twitter.com/Grq6p5qz3h
ಕ್ಯಾಮೆರಾ ಹಾಗೂ ಇತರೆ ಫೀಚರ್ ಗಳು:
ಮುಂಭಾಗ 20+2 ಎಂಪಿ ಡ್ಯುಯಲ್ ಕ್ಯಾಮೆರಾ ಹೊಂದಿದ್ದು ಸಾಫ್ಟ್ ಟೋನ್ ಸೆಲ್ಫಿ ಕ್ಯಾಮೆರಾ, ಹಿಂದುಗಡೆ 12+5 ಎಂಪಿ ಆಟೋಮ್ಯಾಟಿಕ್ ಹೆಚ್ಡಿಆರ್ ಜೊತೆಗೆ ಹೆಚ್ಡಿ ವಿಡಿಯೋ ರೆಕಾರ್ಡಿಂಗ್ ಹೊಂದಿದೆ. ಫಿಂಗರ್ ಪ್ರಿಂಟ್ ಸೆನ್ಸರ್, ಗೊರಿಲ್ಲಾ ಗ್ಲಾಸ್ ಪ್ರೋಟೆಕ್ಷನ್, ಜೊತೆಗೆ 4,000 ಎಂಎಹೆಚ್ ತೆಗೆಯಲು ಅಸಾಧ್ಯವಾದ ಬ್ಯಾಟರಿ ಸೌಲಭ್ಯವನ್ನು ಹೊಂದಿದೆ.
ಬೆಂಗಳೂರು: ಕನ್ನಡದಲ್ಲಿ ಪ್ರಯೋಗಾತ್ಮಕ ಸಿನಿಮಾಗಳು ಕಡಿಮೆಯಾಗಿವೆ. ನಮ್ಮಲ್ಲಿ ಅಯ್ಯೋ ಅಂತ ಹೇಳಿ ಕನ್ನಡ ಸಿನಿಮಾವನ್ನು ನೋಡುತ್ತಾರೆ ಅಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
ಬೆಂಗಳೂರಿನ ‘ಅನುಕ್ತ’ ಚಿತ್ರ ಲಾಂಚ್ ವೇಳೆ ಮಾತನಾಡಿದ ದರ್ಶನ್, ನಮ್ಮ ಚಿತ್ರರಂಗದಲ್ಲಿ ಕಮರ್ಷಿಯಲ್ ಸಿನಿಮಾ ಕಡಿಮೆ. ನಮ್ಮಲ್ಲಿ ಎಲ್ಲಾ ಭಾಷೆಯವರು ಇದ್ದಾರೆ. ನಮ್ಮ ರಾಜ್ಯಕ್ಕೆ ಬಂದವರಿಗೆ ನಾವು ಅವರ ಭಾಷೆಯಲ್ಲೇ ಮಾತನಾಡುತ್ತೇವೆ. ನಮ್ಮ ಭಾಷೆ ಮಾತನಾಡುತ್ತೇವೆ. ಹಾಗಾಗಿ ನಮಗೆ ಎಲ್ಲ ಭಾಷೆ ಬರುತ್ತದೆ ಎಂದು ಹೇಳಿದರು.
ನಮ್ಮಲ್ಲಿ ಹೇಗೆ ಅಂದರೆ ಎಕ್ಸ್ ಪರಿಮೆಂಟಲ್ ಸಿನಿಮಾ ನೋಡಬೇಕು ಅಂದ್ರೆ ತಮಿಳು ಚಿತ್ರ ನೋಡುತ್ತಾರೆ. ಡಮಲ್ ಡಿಮಿಲ್ ಸಿನಿಮಾ ನೋಡಬೇಕು ಅಂದರೆ ತೆಲುಗು ನೋಡುತ್ತಾರೆ. ಫಾರೀನ್ ಲೋಕೇಷನ್ ಸಿನಿಮಾ ಅಂದರೆ ಹಿಂದಿ ನೋಡುತ್ತಾರೆ. ಆದ್ರೆ ಬೇಜಾರದಾಗ ಕನ್ನಡ ಸಿನಿಮಾ ನೋಡುತ್ತಾರೆ. ಅಯ್ಯೋ ಏನೋ ನೋಡಬೇಕು ಅಂತಾ ಕನ್ನಡ ಸಿನಿಮಾ ನೋಡುತ್ತಾರೆ ಅಂತ ವಿಷಾದ ವ್ಯಕ್ತಪಡಿಸಿದ್ರು.
ಸದ್ಯ ಈಗಿನ ಟ್ರೆಂಡ್ ಬದಲಾಗುತ್ತಿದೆ. ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳು ತುಂಬಾನೆ ಕಡಿಮೆ ಬರುತ್ತಿದೆ. ಪ್ರಯೋಗಾತ್ಮಕ ಚಿತ್ರಗಳು ಕನ್ನಡದಲ್ಲಿ ಆಗಬೇಕು. ನಾನು ಒಳ್ಳೆಯ ಸಿನಿಮಾ ನೋಡಬೇಕು ಎಂದಾಗ ಈ ರೀತಿ ಸಿನಿಮಾ ಮಾಡಬೇಕು. ಆಗ ನಿರ್ಮಾಪಕರಿಗೆ ಒಳ್ಳೆಯದಾಗುತ್ತೆ ಅಂತ ಹೇಳಿದ್ರು.
ನವದೆಹಲಿ: ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು ಮತ್ತೆ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.
ದಶಕಗಳ ಹಿಂದೆ ಬೈಕ್ ಪ್ರಿಯರಲ್ಲಿ ಹುಚ್ಚು ಹಿಡಿಸಿದ್ದ, ಜಾವಾ ಬೈಕುಗಳನ್ನು ಜಾವಾ ಮೋಟಾರ್ ಸೈಕಲ್ ಕಂಪನಿ ಪುನಃ ಮಾರುಕಟ್ಟೆಗೆ ತರುವಲ್ಲಿ ಯಶಸ್ವಿಯಾಗಿದೆ. ಕಂಪನಿ ತನ್ನ ನೂತನ ಜಾವಾ, ಜಾವಾ 42 ಹಾಗೂ ಜಾವಾ ಪೆರಾಕ್ ಮಾದರಿಯ ಮೂರು ಆವೃತ್ತಿಗಳನ್ನು ಗುರುವಾರ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಜಾವಾ ಕಂಪನಿಯು ಗತಕಾಲದ ವೈಭವವನ್ನು ಕಾಪಾಡಲು ತನ್ನ ನೂತನ ಬೈಕುಗಳ ವಿನ್ಯಾಸದಲ್ಲಿ ಅದೇ ಮಾದರಿಯನ್ನು ಉಳಿಸಿಕೊಂಡು ಬಂದಿದೆ. ಬೈಕಿನ ಸ್ಪೀಡೋ ಮೀಟರ್, ಡ್ಯೂಮ್ ನ ಕ್ಲಾಸಿಕ್ ಲುಕ್ ಅನ್ನು ಹಾಗೇ ಉಳಿಸಿ, ಹೊಸದಾಗಿ ಟೂಲ್ ಬಾಕ್ಸ್ ಅನ್ನು ಸೇರಿಸುವ ಮೂಲಕ ಬೈಕಿನ ಅಂದವನ್ನು ಹೆಚ್ಚುವಂತೆ ಮಾಡಿದೆ. ಅಲ್ಲದೇ ಈ ಮೂರು ಬೈಕುಗಳು ಬಿಎಸ್6 ಮಾದರಿಯನ್ನು ಒಳಗೊಂಡಿದೆ.
ಜಾವಾ ಹಾಗೂ ಜಾವಾ 42 ಬೈಕ್ಗಳು ಮಧ್ಯಪ್ರದೇಶದ ಪಿಥಮ್ಪುರ್ ನಲ್ಲಿರುವ ಮಹೀಂದ್ರಾ ಘಟಕದಲ್ಲಿ ತಯಾರಾಗಲಿದ್ದು, 2019ರ ಫೆಬ್ರವರಿಯಲ್ಲಿ ಬೈಕುಗಳು ಟೆಸ್ಟ್ ರೈಡ್ಗೆ ಸಿಗಲಿದೆ. ಫೆಬ್ರವರಿಯ ನಂತರ ಗ್ರಾಹಕರ ಕೈ ಸೇರಲಿವೆ. ಅಲ್ಲದೇ ಜಾವಾ ಪೆರಾಕ್ ಬೈಕ್ 2019ರ ಮಧ್ಯದಲ್ಲಿ ಗ್ರಾಹಕರಿಗೆ ತಲುಪಲಿದೆ ಎಂದು ಹೇಳಲಾಗುತ್ತಿದೆ.
ಜಾವಾ ಬೈಕಿನ ಗುಣವೈಶಿಷ್ಟ್ಯಗಳು:
293ಸಿಸಿ ಲಿಕ್ವಿಡ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ 27 ಬಿಎಚ್ಪಿ ಜೊತೆ 28 ಎನ್ಎಂ ಟಾರ್ಕ್ ಉತ್ಪಾದಿಸುವ ಶಕ್ತಿ ಹೊಂದಿದೆ. ಮುಂಭಾಗ 280 ಎಂಎಂ ಡಿಸ್ಕ್ ಜೊತೆ ಎಬಿಎಸ್ ಬ್ರೇಕ್ ಹೊಂದಿದ್ದರೆ, ಹಿಂದುಗಡೆ 153 ಎಂಎಂ ಡ್ರಮ್ ಬ್ರೇಕ್ ಸಿಸ್ಟಮ್ ಹೊಂದಿದೆ. 14 ಲೀಟರ್ ಸಾಮರ್ಥ್ಯದ ಪೆಟ್ರೋಲ್ ಟ್ಯಾಂಕ್ ಹೊಂದಿದೆ. ಒಟ್ಟಾರೆ ಬೈಕಿನ ತೂಕ 170 ಕೆಜಿ ಯಷ್ಟಿದೆ. ಇದು ಬ್ಲಾಕ್, ಮರೂನ್ ಹಾಗೂ ಗ್ರೇ ಬಣ್ಣಗಳಲ್ಲಿ ಲಭ್ಯವಿರಲಿದೆ.
ಜಾವಾ 42 ಬೈಕಿನ ಗುಣವೈಶಿಷ್ಟ್ಯಗಳು:
293ಸಿಸಿ ಲಿಕ್ವಿಡ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ 27 ಬಿಎಚ್ಪಿ ಜೊತೆ 28 ಎನ್ಎಂ ಟಾರ್ಕ್ ಉತ್ಪಾದಿಸುವ ಶಕ್ತಿ ಹೊಂದಿದೆ. ಮುಂಭಾಗ 280 ಎಂಎಂ ಡಿಸ್ಕ್ ಜೊತೆ ಎಬಿಎಸ್ ಬ್ರೇಕ್ ಹೊಂದಿದ್ದರೆ, ಹಿಂದುಗಡೆ 153 ಎಂಎಂ ಡ್ರಮ್ ಬ್ರೇಕ್ ಸಿಸ್ಟಮ್ ಹೊಂದಿದೆ. 14 ಲೀಟರ್ ಸಾಮರ್ಥ್ಯದ ಪೆಟ್ರೋಲ್ ಟ್ಯಾಂಕ್ ಹೊಂದಿದೆ. ಒಟ್ಟಾರೆ ಬೈಕಿನ ತೂಕ 170 ಕೆಜಿ ಯಷ್ಟಿದೆ. ಇದು ನೆಬ್ಯುಲಾ ಬ್ಲೂ, ಕಾಮೆಟ್ ರೆಡ್, ಸ್ಟರ್ಲೈಟ್ ಬ್ಲೂ, ಲುಮೋಸ್ ಲೈಮ್, ಹ್ಯಾಲೆಸ್ ಟೀಲ್, ಗ್ಯಾಲಕ್ಟಿಕ್ ಗ್ರೀನ್
ಜಾವಾ ಪೆರಾಕ್ ಮಾದರಿ ಗುಣವೈಶಿಷ್ಟ್ಯಗಳು:
334ಸಿಸಿ ಲಿಕ್ವಿಡ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ 30 ಬಿಎಚ್ಪಿ ಯೊಂದಿಗೆ 31 ಎನ್ಎಂ ಟಾರ್ಕ್ ಉತ್ಪಾದಿಸುವ ಶಕ್ತಿ ಹೊಂದಿದೆ. ಮುಂಬಾಗ 280 ಎಂಎಂ ಡಿಸ್ಕ್ ಜೊತೆ ಎಬಿಎಸ್ ಬ್ರೇಕ್ ಹೊಂದಿದ್ದರೆ, ಹಿಂದುಗಡೆ 153 ಎಂಎಂ ಡ್ರಮ್ ಬ್ರೇಕ್ ಸಿಸ್ಟಮ್ ಹೊಂದಿದೆ. 14 ಲೀಟರ್ ಸಾಮರ್ಥ್ಯದ ಪೆಟ್ರೋಲ್ ಟ್ಯಾಂಕ್ ಹೊಂದಿದೆ. ಈ ಪೆರಾಕ್ ಮಾದರಿಯಲ್ಲಿ ದೊಡ್ಡ ಬೋರ್ ಗಳನ್ನು ಬಳಸಲಾಗಿದೆ.
ನೂತನ ಜಾವಾ ಬೈಕುಗಳ ಬೆಲೆ ಎಷ್ಟು?
ನೂತನ ಬೈಕುಗಳಾದ ಜಾವಾ ಮಾದರಿಗೆ 1.64 ಲಕ್ಷ ರೂಪಾಯಿ, ಜಾವಾ 42 ಗೆ 1.55 ಲಕ್ಷ ರೂ. ಹಾಗೂ ಜಾವಾ ಪೆರಾಕ್ ಮಾದರಿಗೆ 1.89 ಲಕ್ಷ ರೂ. ಅಂದಾಜು ಬೆಲೆ ನಿಗದಿಯಾಗಿದೆ.