Tag: Laurene Powell

  • ಸ್ಟೀವ್‌ ಜಾಬ್ಸ್‌ ಪತ್ನಿ ಅಸ್ವಸ್ಥ – ಸನಾತನದ ಬಗ್ಗೆ ಸಾಕಷ್ಟು ಪ್ರಶ್ನೆ ಕೇಳುತ್ತಿದ್ದಾರೆ ಕಮಲಾ

    ಸ್ಟೀವ್‌ ಜಾಬ್ಸ್‌ ಪತ್ನಿ ಅಸ್ವಸ್ಥ – ಸನಾತನದ ಬಗ್ಗೆ ಸಾಕಷ್ಟು ಪ್ರಶ್ನೆ ಕೇಳುತ್ತಿದ್ದಾರೆ ಕಮಲಾ

    ಪ್ರಯಾಗ್‌ರಾಜ್‌: ಮಹಾಕುಂಭಮೇಳದಲ್ಲಿ (Mahakumbh) ಪಾಲ್ಗೊಂಡಿರುವ ಆಪಲ್ (Apple) ಸಹ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ (Steve Jobs) ಪತ್ನಿ ಲಾರೆನ್ ಪಾವೆಲ್ (Laurene Powell) ಅಸ್ವಸ್ಥಗೊಂಡಿದ್ದಾರೆ.

    ಕಮಲಾ (Kamala) ಎಂದು ಹೆಸರು ಬದಲಿಸಿಕೊಂಡಿರುವ ಲಾರೆನ್ ಪಾವೆಲ್, ಹೊಸ ವಾತಾವರಣದ ಕಾರಣದಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ. ನಿರಂಜನ ಅಖಾಡದ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಕೈಲಾಸನಂದಗಿರಿ ಮಹಾರಾಜ್ ಪ್ರತಿಕ್ರಿಯಿಸಿ, ಈಗ ಅವರು ನನ್ನ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರಿಗೆ ಕೆಲವು ಅಲರ್ಜಿಗಳಿವೆ. ಅವರು ಎಂದಿಗೂ ಇಷ್ಟೊಂದು ಜನದಟ್ಟಣೆಯ ಸ್ಥಳಕ್ಕೆ ಹೋಗಿರಲಿಲ್ಲ. ಚೇತರಿಕೆ ಬಳಿಕ ಅವರು ಅಮೃತಸ್ನಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್‌ ಜಾಬ್ಸ್‌ ಪತ್ನಿ ಲಾರೆನ್ ಇನ್ಮುಂದೆ ʻಕಮಲಾʼ – ಹಿಂದೂ ಹೆಸರು ನಾಮಕರಣ

    ಲಾರೆನ್ ಪಾವೆಲ್ ತುಂಬಾ ಸರಳ ವ್ಯಕ್ತಿಯಾಗಿದ್ದಾರೆ. ಪೂಜೆಯ ಸಮಯದಲ್ಲಿ ಅವರು ನಮ್ಮೊಂದಿಗೆ ಇದ್ದರು. ಅವರು ಸನಾತನ ಧರ್ಮದಕ್ಕೆ ಸಂಬಂಧಿಸಿದಂತೆ ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

     

    ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮಕ್ಕೆ ತೆರಳುವ ಮೊದಲು ಲಾರೆನ್ ಪಾವೆಲ್ ಅವರು ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

    ಜನವರಿ 20 ರಂದು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅಮೆರಿಕಕ್ಕೆ ಹಿಂತಿರುಗುವ ಮೊದಲು ಅವರು ಜನವರಿ 15 ರವರೆಗೆ ನಿರಂಜಿನಿ ಅಖಾರ ಶಿಬಿರದಲ್ಲಿ ಇರುತ್ತಾರೆ ಎಂದು ವರದಿಯಾಗಿದೆ.

     

  • ಕುಂಭಮೇಳದಲ್ಲಿ ಭಾಗಿಯಾಗ್ತಾರೆ ಆ್ಯಪಲ್ ಸಹ-ಸಂಸ್ಥಾಪಕ ಸ್ವೀವ್‌ ಜಾಬ್ಸ್‌ ಪತ್ನಿ

    ಕುಂಭಮೇಳದಲ್ಲಿ ಭಾಗಿಯಾಗ್ತಾರೆ ಆ್ಯಪಲ್ ಸಹ-ಸಂಸ್ಥಾಪಕ ಸ್ವೀವ್‌ ಜಾಬ್ಸ್‌ ಪತ್ನಿ

    ಲಕ್ನೋ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯಲಿರುವ 2025 ರ ಮಹಾ ಕುಂಭಮೇಳದಲ್ಲಿ ದಿವಂಗತ ಆ್ಯಪಲ್ ಸಹ-ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಭಾಗವಹಿಸಲಿದ್ದಾರೆ ಎಂದು ಸ್ವಾಮಿ ಕೈಲಾಶಾನಂದ್ ಜಿ ಮಹಾರಾಜ್ ಬುಧವಾರ ದೃಢಪಡಿಸಿದ್ದಾರೆ.

    ಲಾರೆನ್ ಪೊವೆಲ್ ಅವರಿಗೆ ‘ಕಮಲಾ’ ಎಂಬ ಹಿಂದೂ ಹೆಸರನ್ನು ನೀಡಲಾಗಿದೆ. ಅವರು ತನ್ನ ಗುರುಗಳನ್ನು ಭೇಟಿ ಮಾಡಲು ಇಲ್ಲಿಗೆ ಬರುತ್ತಿದ್ದಾರೆ. ನಾವು ಅವರಿಗೆ ಕಮಲಾ ಎಂದು ಹೆಸರಿಟ್ಟಿದ್ದೇವೆ. ಅವರು ನಮಗೆ ಮಗಳಿದ್ದಂತೆ. ಆಕೆ ಭಾರತಕ್ಕೆ ಎರಡನೇ ಬಾರಿ ಬರುತ್ತಿದ್ದಾರೆ. ಕುಂಭಮೇಳಕ್ಕೆ ಎಲ್ಲರಿಗೂ ಸ್ವಾಗತ ಎಂದು ಮಹಾರಾಜ್ ತಿಳಿಸಿದ್ದಾರೆ.

    ಜಗತ್ತಿನ ಹೆಚ್ಚಿನ ಜನರು ಯಾರೋ ಒಬ್ಬ ಗುರುವಿನ ಮಾರ್ಗದರ್ಶನದಲ್ಲಿದ್ದಾರೆ. ಅನೇಕ ಜನರು ಕುಂಭಮೇಳಕ್ಕೆ ಬರುತ್ತಿದ್ದಾರೆ. ಕೆಲವರು ತಮ್ಮ ವೈಯಕ್ತಿಕ ಕಾರ್ಯಕ್ರಮಕ್ಕಾಗಿ ಬರುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಇದು ಧಾರ್ಮಿಕ ಮೇಳ. ದೇಶ-ವಿದೇಶಗಳಿಂದ ಜನರು ಆಶೀರ್ವಾದ ಪಡೆಯಲು ಮಹಾ ಕುಂಭಕ್ಕೆ ಭೇಟಿ ನೀಡುತ್ತಾರೆ ಎಂದಿದ್ದಾರೆ.

    ಈ ಬಾರಿ ಭಕ್ತರು ದೈವಿಕ ಮತ್ತು ಭವ್ಯವಾದ ಕುಂಭಮೇಳಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭರವಸೆ ನೀಡಿದ್ದಾರೆ. ಪ್ರಯಾಗರಾಜ್‌ನ ದೈವಿಕ, ಭವ್ಯ, ಹಸಿರು ಕುಂಭಕ್ಕೆ ಬಹಳ ದೈವಿಕ ಮತ್ತು ಭವ್ಯವಾದ ಸಿದ್ಧತೆಗಳನ್ನು ಮಾಡಲಾಗಿದೆ. ನಾವು ಜ.13 ಕ್ಕಾಗಿ ಕಾಯುತ್ತಿದ್ದೇವೆ. ಎಲ್ಲರನ್ನು ಸ್ವಾಗತಿಸಲು ಮತ್ತು ಅವರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಸಂಪೂರ್ಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಎಂದು ತಿಳಿಸಿದ್ದಾರೆ.