Tag: law

  • ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು

    ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು

    ನವದೆಹಲಿ: ಮನೆಯಲ್ಲಿ ಕಂತೆ ಕಂತೆ ನೋಟು (Cash) ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನ (Delhi High Court) ಮಾಜಿ ನ್ಯಾ.ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಅವರನ್ನು ವಜಾಗೊಳಿಸುವಂತೆ ಮೂವರು ಹಿರಿಯ ನ್ಯಾಯಾಧೀಶರ ಸಮಿತಿ ಶಿಫಾರಸು ಮಾಡಿದೆ.

    ಕಂತೆ ಕಂತೆ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ನೇಮಿಸಿದ ಸಮಿತಿಯು 55 ಸಾಕ್ಷಿಗಳನ್ನು ಸಂದರ್ಶಿಸಿ ನ್ಯಾಯಮೂರ್ತಿ ವರ್ಮಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡು ಶಿಫಾರಸು ಮಾಡಿದೆ.

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಧಾವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್‌ ಇದ್ದ ಸಮಿತಿ ತನ್ನ ಅಂತಿಮ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದೆ. ಇದನ್ನೂ ಓದಿ:ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

    ನ್ಯಾ. ಯಶವಂತ್ ವರ್ಮಾ ಅವರ ನಿವಾಸದೊಳಗೆ ನೋಟುಗಳ ದೊಡ್ಡ ರಾಶಿ ಇರುವುದನ್ನು ಹಲವು ಮಂದಿ ನೋಡಿದ್ದಾರೆ. ಆದರೆ ವರ್ಮಾ ಅವರು ಎಂದಿಗೂ ದೂರು ದಾಖಲಿಸಿಲ್ಲ ಅಥವಾ ನ್ಯಾಯಾಂಗದ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಈ ನಡವಳಿಕೆಯನ್ನು ಅಸ್ವಾಭಾವಿಕ ಎಂದು ಕರೆದಿರುವ ಸಮಿತಿಯು ಅವರನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿದೆ.

    ನ್ಯಾ. ವರ್ಮಾ ಅವರ ಮಗಳು ಸೇರಿದಂತೆ 55 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಸಮಿತಿ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಯಿಂದ ಕೋಣೆಯ ನೆಲದಾದ್ಯಂತ ಹರಡಿರುವ 500 ರೂ. ನೋಟುಗಳ ದೊಡ್ಡ ರಾಶಿಯನ್ನು ವಿಡಿಯೋ ಮತ್ತು ಫೋಟೋಗಳನ್ನು ಪರಿಶೀಲಿಸಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ನೋಡಿ ನನಗೆ ಆಘಾತ ಮತ್ತು ಆಶ್ಚರ್ಯವಾಯಿತು. ನನ್ನ ಜೀವನದಲ್ಲಿ ಇಷ್ಟೊಂದು ಹಣವನ್ನು ನಾನು ಮೊದಲ ಬಾರಿಗೆ ನೋಡಿದ್ದೇನೆ ಎಂದು ಒಬ್ಬ ಸಾಕ್ಷಿ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ವರ್ಮಾ ಅವರು ಸಮರ್ಥನೀಯ ವಿವರಣೆಯನ್ನು ನೀಡಿಲ್ಲ. ಯಾವುದೇ ಪಿತೂರಿ ಇದ್ದರೆ ಅವರು ದೂರು ದಾಖಲಿಸಿಲ್ಲ ಯಾಕೆ? ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಥವಾ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಮಾಹಿತಿ ನೀಡಿಲ್ಲ ಯಾಕೆ ಎಂದು ಸಮಿತಿ ಪ್ರಶ್ನಿಸಿದೆ.

    ಸಮಿತಿಯೂ ಅಂಕಿತ್ ಸೆಹ್ವಾಗ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಪ್ರದೀಪ್ ಕುಮಾರ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಮನೋಜ್ ಮೆಹ್ಲಾವತ್ (ಸ್ಟೇಷನ್ ಆಫೀಸರ್, ಡಿಎಫ್‌ಎಸ್), ಭನ್ವರ್ ಸಿಂಗ್ (ಚಾಲಕ, ಡಿಎಫ್‌ಎಸ್), ಪ್ರವೀಂದ್ರ ಮಲಿಕ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಸುಮನ್ ಕುಮಾರ್ (ಸಹಾಯಕ ವಿಭಾಗೀಯ ಅಧಿಕಾರಿ, ಡಿಎಫ್‌ಎಸ್), ರಾಜೇಶ್ ಕುಮಾರ್ (ತುಘಲಕ್ ರಸ್ತೆ ಪೊಲೀಸ್ ಠಾಣೆ)  ಸುನಿಲ್ ಕುಮಾರ್ (ಐಸಿಪಿಸಿಆರ್ ಉಸ್ತುವಾರಿ), ರೂಪ್ ಚಂದ್ (ಹೆಡ್ ಕಾನ್ಸ್‌ಟೇಬಲ್), ಮತ್ತು ಉಮೇಶ್ ಮಲಿಕ್ (ಎಸ್‌ಎಚ್‌ಒ, ತುಘಲಕ್ ರಸ್ತೆ ಪೊಲೀಸ್ ಠಾಣೆ) ಅವರನ್ನು ವಿಚಾರಣೆ ನಡೆಸಿದೆ.

  • ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ,ಕೋರ್ಟ್‌ಗಳು ಸೂಪರ್ ಪಾರ್ಲಿಮೆಂಟ್‌ ಆಗಬಾರದು: ಧನಕರ್‌ ಅಸಮಾಧಾನ

    ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ,ಕೋರ್ಟ್‌ಗಳು ಸೂಪರ್ ಪಾರ್ಲಿಮೆಂಟ್‌ ಆಗಬಾರದು: ಧನಕರ್‌ ಅಸಮಾಧಾನ

    ನವದೆಹಲಿ: ಕೋರ್ಟ್‌ಗಳು ಸೂಪರ್ ಪಾರ್ಲಿಮೆಂಟ್‌ ಆಗಬಾರದು. ಈಗ ಕಾರ್ಯಾಂಗ ಮತ್ತು ಶಾಸಕಾಂಗದ ಜಾಗದಲ್ಲಿ ನ್ಯಾಯಾಂಗದ ಪ್ರವೇಶವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ (Vice President Jagdeep Dhankhar) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಉಪರಾಷ್ಟ್ರಪತಿಗಳ ಎನ್‌ಕ್ಲೇವ್‌ನಲ್ಲಿ ರಾಜ್ಯಸಭಾ ಇಂಟರ್ನ್‌ಗಳ ಆರನೇ ಬ್ಯಾಚ್ ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರಪತಿಗಳಿಗೆ (President) ಕೋರ್ಟ್ ನಿರ್ದೇಶನ ನೀಡಲು ಸಾಧ್ಯವಿಲ್ಲ. ಆದರೆ ಇತ್ತೀಚಿನ ತೀರ್ಪಿನ ಮೂಲಕ ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಲಾಗಿದೆ. ನಾವು ಎಲ್ಲಿಗೆ ಹೋಗುತ್ತಿದ್ದೇವೆ? ದೇಶದಲ್ಲಿ ಏನಾಗುತ್ತಿದೆ ಎಂದು ಧನಕರ್‌ ಕಳವಳ ವ್ಯಕ್ತಪಡಿಸಿದರು.

    ನ್ಯಾಯಾಧೀಶರು ಭಾರತದ ರಾಷ್ಟ್ರಪತಿಗಳಿಗೆ ನಿರ್ದೇಶಿಸುವ ಪರಿಸ್ಥಿತಿಯನ್ನು ನಾವು ಹೊಂದಲು ಸಾಧ್ಯವಿಲ್ಲ. ಈ ರೀತಿಯ ನಿರ್ದೇಶನವು ರಾಷ್ಟ್ರದ ಅತ್ಯುನ್ನತ ಕಚೇರಿಯ ಸಾಂವಿಧಾನಿಕ ಅಧಿಕಾರವನ್ನು ದುರ್ಬಲಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: Waqf Act| ಹಿಂದೂಗಳು ಸಲ್ಲಿಸಿದಾಗ ಹೈಕೋರ್ಟ್‌ಗೆ ಹೋಗಿ ಎಂದಿತ್ತು – ಸುಪ್ರೀಂ ವಿಚಾರಣೆಗೆ ಮಾನದಂಡ ಏನು?- ವಕೀಲ ವಿಷ್ಣು ಶಂಕರ್‌ ಜೈನ್‌

     

    ಸಂವಿಧಾನವು (Constitution) ನ್ಯಾಯಾಂಗಕ್ಕೆ ವಿಧಿ 145(3) ಅಡಿಯಲ್ಲಿ ಕಾನೂನನ್ನು ವ್ಯಾಖ್ಯಾನಿಸುವ ಅಧಿಕಾರವನ್ನು ನೀಡುತ್ತದೆ. ಸಂವಿಧಾನಿಕ ಪೀಠದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ನ್ಯಾಯಾಧೀಶರು ಇರಬೇಕಾಗುತ್ತದೆ. ಆದರೆ ನ್ಯಾಯಾಲಯಗಳು ರಾಷ್ಟ್ರಪತಿಗಳಿಗೆ ನಿರ್ದೇಶನಗಳನ್ನು ನೀಡಲು ಅಧಿಕಾರ ನೀಡುವುದಿಲ್ಲ ಎಂದು ಉಪರಾಷ್ಟ್ರಪತಿ ಹೇಳಿದರು.

    ಮಸೂದೆಗಳ ಮೇಲಿನ ನಿರ್ಧಾರಗಳು ಆಳವಾದ ಚಿಂತನೆ ಮತ್ತು ಸಮಾಲೋಚನೆಯನ್ನು ಒಳಗೊಂಡಿರುತ್ತವೆ. ಇಂತಹ ವಿಷಯಗಳಲ್ಲಿ ಗಡುವು ವಿಧಿಸುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ

    ಏನಿದು ಕೇಸ್‌?
    ಶಾಸನಸಭೆ ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕುವ ವಿಚಾರವಾಗಿ ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಅಧಿಕಾರಕ್ಕೆ ಸುಪ್ರೀಂ ಕೋರ್ಟ್‌ (Suprme Court) ಡೆಡ್‌ಲೈನ್‌ ವಿಧಿಸಿ ತೀರ್ಪು ಪ್ರಕಟಿಸಿತ್ತು. ಪರಿಶೀಲನೆಗಾಗಿ ರಾಜ್ಯಪಾಲರಿಂದ ಬಂದ ಮಸೂದೆಗಳ ವಿಚಾರವಾಗಿ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಯವರಿಗೆ ಸುಪ್ರೀಂ ಕೋರ್ಟ್‌ ಕಾಲಮಿತಿ ನಿಗದಿ ಮಾಡಿ ಏಪ್ರಿಲ್‌ 8 ರಂದು ಆದೇಶ ಪ್ರಕಟಿಸಿತ್ತು.

    ರಾಜ್ಯಪಾಲರು ರಾಷ್ಟ್ರಪತಿಯವರ ಪರಿಶೀಲನೆಗಾಗಿ ಯಾವ ದಿನಾಂಕಕ್ಕೆ ಮಸೂದೆಯನ್ನು ಕಳುಹಿಸಲಾಗಿತ್ತೋ, ಆ ದಿನಾಂಕದಿಂದ ಅನ್ವಯವಾಗುವಂತೆ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೋರ್ಟ್‌ ರಾಷ್ಟ್ರಪತಿಯವರಿಗೆ ಹೇಳಿರುವುದು ಇದೇ ಮೊದಲು. ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಮಹಾದೇವನ್ ಅವರನ್ನೊಳಗೊಂಡ ಪೀಠವು ತಮಿಳುನಾಡು ರಾಜ್ಯ ಸರ್ಕಾರ vs ರಾಜ್ಯಪಾಲ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿ ಈ ಮಹತ್ವದ ತೀರ್ಪು ಪ್ರಕಟಿಸಿತ್ತು.

  • ಸಂಸತ್‌ನಲ್ಲಿ ವಕ್ಫ್‌  ತಿದ್ದುಪಡಿ ಮಸೂದೆ ಮಂಡನೆ –  ಮೊದಲು ಏನಿತ್ತು? ಈಗ ಏನು ಬದಲಾಗಿದೆ?

    ಸಂಸತ್‌ನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ – ಮೊದಲು ಏನಿತ್ತು? ಈಗ ಏನು ಬದಲಾಗಿದೆ?

    ನವದೆಹಲಿ: ವಕ್ಫ್ ತಿದ್ದುಪತಿ ಮಸೂದೆ (Waqf bill) ಕುರಿತಾದ ಜಂಟಿ ಸಂಸತ್ ಸಮಿತಿಯ ವರದಿಯನ್ನು ರಾಜ್ಯಸಭೆ (Rajyasabha) ಹಾಗೂ ಲೋಕಸಭೆಯಲ್ಲಿ (LokSabha) ಮಂಡಿಸಲಾಗಿದೆ.

    ರಾಜ್ಯಸಭೆಯಲ್ಲಿ ಜಗದಂಬಿಕಾ ಪಾಲ್ ಸಮಿತಿಯ ವರದಿಯನ್ನು ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಮಂಡಿಸಿದರು. ವರದಿ ಮಂಡನೆ ಆಗುತ್ತಿದ್ದಂತೆ ಕಾಂಗ್ರೆಸ್, ಟಿಎಂಸಿ, ಎಸ್‌ಪಿ ಸೇರಿದಂತೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರು.

    ರಾಜ್ಯಸಭೆಯ ವಿಪಕ್ಷ ನಾಯಕ ಖರ್ಗೆ (Mallikarjun Kharge) ಈ ವರದಿಯನ್ನು ಪ್ರಜಾಪ್ರಭುತ್ವದ ವಿರೋಧಿ, ನಕಲಿ ಎಂದು ಟೀಕಿಸಿದರು. ಸಮಿತಿಯ ಭಾಗವಾಗಿದ್ದ ವಿರೋಧ ಪಕ್ಷದ ಸಂಸದರ ಸಲಹೆಗಳನ್ನು ವರದಿಯಲ್ಲಿ ಸೇರಿಸಿಲ್ಲ. ಹೀಗಾಗಿ ವರದಿಯನ್ನು ಜಂಟಿ ಸಂಸದೀಯ ಸಮಿತಿಗೆ (JPC) ಹಿಂತಿರುಗಿಸಬೇಕು ಎಂದು ಆಗ್ರಹಿಸಿದರು.

    ವಕ್ಫ್ ಮಸೂದೆಯ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ (Jagdambika Pal) ಮಾತನಾಡಿ, 6 ತಿಂಗಳ ಕಾಲ ದೇಶಾದ್ಯಂತ ಸಮಾಲೋಚನೆ ನಡೆಸಿ, ಜೆಪಿಸಿ ತನ್ನ ವರದಿ ಮಂಡಿಸಿದೆ ಎಂದು ತಿಳಿಸಿದರು. ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಇದನ್ನು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದರು.


    ಏನೇನು ಬದಲಾವಣೆ?
    ಮೊದಲು
    1995ರ ವಕ್ಫ್ ಕಾಯ್ದೆಯ ಸೆಕ್ಷನ್ 40 ರ ವಕ್ಫ್ ಮಂಡಳಿಗೆ ಯಾವುದೇ ಆಸ್ತಿಯನ್ನು ಪಡೆಯಲು ಅಧಿಕಾರ ನೀಡುತ್ತದೆ ಮತ್ತು ಆ ಭೂಮಿಯ ಹಕ್ಕುದಾರರು ವಕ್ಫ್‌ ಟ್ರಿಬ್ಯೂನಲ್‌ನಲ್ಲಿ ಮಾತ್ರ ಮೇಲ್ಮನವಿ ಸಲ್ಲಿಸಬಹುದು.

    ಈಗ
    ಮಸೂದೆಯು ಹಕ್ಕುದಾರರಿಗೆ ಟ್ರಿಬ್ಯುನಲ್‌ ಜೊತೆಗೆ ಕಂದಾಯ ನ್ಯಾಯಾಲಯ, ಸಿವಿಲ್ ನ್ಯಾಯಾಲಯ ಅಥವಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುತ್ತದೆ.


    ಮೊದಲು
    ವಕ್ಫ್ ಟ್ರಿಬ್ಯುನಲ್‌ ನಿರ್ಧಾರವು ಅಂತಿಮವೆಂದು ಪರಿಗಣಿಸಲ್ಪಟ್ಟಿದೆ ಮತ್ತು ಅದನ್ನು ಬೇರೆ ಯಾವುದೇ ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ.

    ಈಗ
    ಈ ತಿದ್ದುಪಡಿಯು ವಕ್ಫ್ ನ್ಯಾಯಮಂಡಳಿಯ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುತ್ತದೆ.


    ಮೊದಲು
    ಯಾವುದೇ ಭೂಮಿಯ ಮೇಲೆ ಮಸೀದಿ ಇದ್ದರೆ ಅಥವಾ ಇಸ್ಲಾಮಿಕ್ ಧಾರ್ಮಿಕ ಉದ್ದೇಶಗಳಿಗಾಗಿ ಬಳಸುತ್ತಿದ್ದರೆ ಅದನ್ನು ಸ್ವಯಂಚಾಲಿತವಾಗಿ ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುತ್ತದೆ.

    ಈಗ
    ತಿದ್ದುಪಡಿಯು ಭೂಮಿಯನ್ನು ವಕ್ಫ್‌ಗೆ ದಾನ ಮಾಡದ ಹೊರತು ಅದನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ.



    ಮೊದಲು
    ಮಹಿಳೆಯರು ಮತ್ತು ಇತರ ಧರ್ಮಗಳ ಜನರು ವಕ್ಫ್ ಮಂಡಳಿಯ ಸದಸ್ಯರಾಗಲು ಅವಕಾಶವಿಲ್ಲ.

    ಮೊದಲು
    ಹೊಸ ತಿದ್ದುಪಡಿಯು ವಕ್ಫ್ ಮಂಡಳಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಇತರ ಧರ್ಮಗಳ ಇಬ್ಬರು ಸದಸ್ಯರನ್ನು ಸೇರಿಸಲು ಅವಕಾಶ ನೀಡುತ್ತದೆ.

     

  • ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ

    ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ

    ಬೆಂಗಳೂರು: ನಟ ದರ್ಶನ್ (Darshan) ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್‌ (Photo Shoot) ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (State Commission for Protection of Child Rights) ಮುಂದಾಗಿದೆ.

    ಹೌದು. ದರ್ಶನ್‌ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಈಗ ಪೊಲೀಸ್‌ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.

     

    ಪಬ್ಲಿಕ್‌ ಟಿವಿಗೆ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಪ್ರತಿಕ್ರಿಯಿಸಿ, ಈ ರೀತಿ ಫೋಟೋ ಶೂಟ್‌ ಮಾಡಿಸಿರುವುದು ನಿಜಕ್ಕೂ ಖಂಡನೀಯ. ಹೀಗಾಗಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಈ ಬಗ್ಗೆ ಇವತ್ತು ಪೊಲೀಸ್ ಇಲಾಖೆ ಐಟಿ ಸೆಲ್ ಪತ್ರ ಬರೆಯಲಾಗುತ್ತದೆ. ಫೋಟೋ ಶೂಟ್ ಮಾಡಿಸಿದವರ ಪತ್ತೆ ಮಾಡಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ದರ್ಶನ್‌ ಭೇಟಿಗೆ ಅವಕಾಶ ಸಿಗದೇ ವಾಪಸ್‌ ಆದ ಧನ್ವೀರ್‌

    ಈ ಫೋಟೋ ಶೂಟ್‌ ಪ್ರಕರಣವನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಇದು ಬಾಲ ನ್ಯಾಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಕಾನೂನಿನಡಿ ಯಾವೆಲ್ಲ ಕ್ರಮಗಳಿಗೆ ಸಾಧ್ಯತೆ ಇದೆಯೋ ಅದೆಲ್ಲವನ್ನೂ ಕೈಗೊಳ್ಳುತ್ತೇವೆ ಎಂದರು.

  • ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ – ಇಂದಿನಿಂದ 3 ದೇಶಿ ಕಾನೂನು ಜಾರಿ

    ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ – ಇಂದಿನಿಂದ 3 ದೇಶಿ ಕಾನೂನು ಜಾರಿ

    – ಎಸ್‌ಎಂಎಸ್‌, ವಾಟ್ಸಪ್‌ ಮೂಲಕವೂ ಸಮನ್ಸ್‌
    – ತ್ವರಿತ ನ್ಯಾಯದಾನಕ್ಕೆ ಹೊಸ ಕಾನೂನು ಜಾರಿ

    ನವದೆಹಲಿ: ದೇಶದಲ್ಲಿ ಇಂದಿನಿಂದ ಕಾನೂನು (Law) ಬದಲಾಗಲಿದ್ದು, ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್‌ಪಿಸಿ (Code of Criminal Procedure), ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ (Indian Evidence Act) ಗುಡ್‌ಬೈ ಹೇಳಲಾಗುತ್ತದೆ.

    ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ (Bharatiya Nyaya Sanhita), ಸಿಆರ್‌ಪಿಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (Bharatiya Nagarik Suraksha Sanhita), ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ (Bharatiya Sakshya Adhiniyam) ಜಾರಿಗೆ ಬರುತ್ತಿದೆ.

    ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದೆ. 177 ಕಲಂಗಳನ್ನು ಬದಲಿಸಲಾಗಿದೆ. ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ. ಇದನ್ನೂ ಓದಿ: T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

    ಹಿಂದೆ ಎಷ್ಟಿತ್ತು? ಈಗ ಎಷ್ಟು ಸೆಕ್ಷನ್‌ಗಳು ಇದೆ?
    ಭಾರತೀಯ ದಂಡ ಸಂಹಿತೆ (IPC) 511 ಸೆಕ್ಷನ್‌ ಇದ್ದರೆ ಭಾರತೀಯ ನ್ಯಾಯ ಸಂಹಿತಾ(BNS)-358 ಸೆಕ್ಷನ್‌ಗಳು ಇದೆ.
    ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 484 ಸೆಕ್ಷನ್‌ಗಳು ಇದ್ದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ(BNSS) – 531 ಸೆಕ್ಷನ್‌ಗಳು ಇದೆ.
    ಭಾರತೀಯ ಸಾಕ್ಷ್ಯ ಕಾಯ್ದೆ (IEA) 167 ಸೆಕ್ಷನ್‌ಗಳು ಇದ್ದರೆ ಭಾರತೀಯ ಸಾಕ್ಷ್ಯ ಅಧಿನಿಯಮ (BSA) 170 ಸೆಕ್ಷನ್‌ಗಳು ಇದೆ.

    ಹೊಸ ಕಾನೂನಿನಲ್ಲಿ ಏನು ಬದಲಾವಣೆ?
    * ಪೊಲೀಸ್ ಕಸ್ಟಡಿ ಗರಿಷ್ಠ ಅವಧಿ 14ದಿನದಿಂದ 60 ದಿನಗಳವರೆಗೂ ಹೆಚ್ಚಳ
    * 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳಲ್ಲಿ ದೂರು ನೀಡಿದ 24 ಗಂಟೆಯೊಳಗೆ ಎಫ್‌ಐಆರ್
    * 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳ ತನಿಖೆಯನ್ನು 14 ದಿನದಲ್ಲಿ ಒಂದು ಹಂತಕ್ಕೆ ತರಬೇಕು
    * ಏಳು ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗುವ ಪ್ರಕರಣಗಳಲ್ಲಿ ಫೊರೆನ್ಸಿಕ್ ತನಿಖೆ ಕಡ್ಡಾಯ

    * ಆರ್ಥಿಕ ಅಪರಾಧ ಕೇಸ್‌ಗಳಲ್ಲಿ ಪೊಲೀಸರಿಗೆ ಸ್ಥಿರಾಸ್ತಿ-ಚರಾಸ್ತಿ ಜಪ್ತಿ ಮಾಡುವ ಅಧಿಕಾರ
    * ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು 2 ತಿಂಗಳಲ್ಲಿ ತನಿಖೆ ಮುಗಿಸಬೇಕು
    * ರೇಪ್ ಕೇಸ್‌ಗಳಲ್ಲಿ ಸಂತ್ರಸ್ತೆ ಹೇಳಿಕೆಯನ್ನು ಆಕೆಯ ಸಂಬಂಧಿಕರ ಸಮ್ಮುಖದಲ್ಲಿ ಮಹಿಳಾ ಅಧಿಕಾರಿಯ ಮುಂದೆ ಹೇಳಬೇಕು.

    * ಪೋಕ್ಸೋ ಕೇಸ್‌ಗಳಲ್ಲಿ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಅಧಿಕಾರಿ ಕೂಡ ದಾಖಲಿಸಿಕೊಳ್ಳಬಹುದು
    * ಕ್ರಿಮಿನಲ್ ಕೇಸ್ ವಿಚಾರಣೆ. ಕೋರ್ಟ್ ಗರಿಷ್ಠ 2-3 ವಾಯಿದೆಗಳನ್ನು ಮಾತ್ರ ನೀಡಬೇಕು.
    * ತನಿಖೆ, ಕೋರ್ಟ್ ಸಮನ್ಸ್‌ಗಳನ್ನು ಮಸೇಜ್‌, ವಾಟ್ಸಪ್ ಸೇರಿ ಡಿಜಿಟಲ್ ರೂಪದಲ್ಲಿಯೇ ಕಳಿಸಬಹುದು
    * ಕೇಸ್ ನಮೂದು-ಕೋರ್ಟ್ ವಿಚಾರಣೆವರೆಗೂ ಸಂತ್ರಸ್ತರಿಗೆ ವಾಟ್ಸಪ್ ಮೂಲಕ ಪ್ರತಿಹಂತದ ಮಾಹಿತಿ

    * ರಾಷ್ಟ್ರಮಟ್ಟದ ಡಿಜಿ ಲಾಕರ್‌ನಲ್ಲಿ ಸಾಕ್ಷಿಗಳ ಹೇಳಿಕೆ, ಆಡಿಯೋ, ವೀಡಿಯೋ ಸಾಕ್ಷ್ಯ ಭದ್ರ
    * ರೇಡ್ ಪ್ರಕ್ರಿಯೆಯ ಕಡ್ಡಾಯ ಚಿತ್ರೀಕರಣ. 48 ಗಂಟೆಯಲ್ಲಿ ನ್ಯಾಯಾಲಯಕ್ಕೆ ವರದಿ
    * ಸಂತ್ರಸ್ತರು ಠಾಣೆಗೆ ಹೋಗದೆಯೂ ಆನ್‌ಲೈನ್ ಮೂಲಕ ದೂರು ನೀಡಬಹುದು. ಮಹಿಳೆಯರು, ವಿಕಲಚೇತನರು, ರೋಗಿಗಳು, ಮಕ್ಕಳು, ಹಿರಿಯರು ಠಾಣೆಗೆ ಹೋಗುವ ಅಗತ್ಯವಿಲ್ಲ. ಈ ಐದು ವರ್ಗದ ಮಂದಿ ತಾವಿರುವ ಕಡೆಯೇ ಪೊಲೀಸರನ್ನು ಕರೆಸಬಹುದು.

    * ಯಾವುದೇ ಘಟನೆಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಯಾವ ಠಾಣೆಗಾದ್ರೂ ತಿಳಿಸಬಹುದು.
    * ಝೀರೋ ಎಫ್‌ಐಆರ್; ಠಾಣಾ ವ್ಯಾಪ್ತಿ ಲೆಕ್ಕಿಸದೇ ಯಾವ ಠಾಣೆಗಾದ್ರೂ ದೂರು ಸಲ್ಲಿಸಬಹುದು.
    * ಆರೋಪಿಗಳ ಬಂಧನದ ಬಗ್ಗೆ ಅವರ ಸ್ನೇಹಿತರು, ಕುಟುಂಬ ಸದಸ್ಯರಿಗೆ ಪೊಲೀಸರು ತಿಳಿಸಬೇಕು.
    * ಆರೋಪಿಗಳಿಗೆ, ಸಂತ್ರಸ್ತರಿಗೆ ಎಫ್‌ಐಆರ್ ಕಾಪಿ ಉಚಿತವಾಗಿ ನೀಡಬೇಕು.
    * ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗುವವರಿಗೆ 10 ವರ್ಷಗಳವರೆಗೆ ಶಿಕ್ಷೆ.

     

  • ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು: ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ

    ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು: ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ

    ಬೆಂಗಳೂರು: ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆಯನ್ನು ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು (Law) ಪಾಲಿಸಬೇಕು ಎಂದು ಹೈಕೋರ್ಟ್‌ (High Court) ಸಿದ್ದರಾಮಯ್ಯ (Siddaramaiah) ಮತ್ತು ಇತರ ಕಾಂಗ್ರೆಸ್‌ ನಾಯಕರಿಗೆ ಚಾಟಿ ಬೀಸಿ 10,000 ರೂ. ದಂಡ ವಿಧಿಸಿದೆ.

    ಪ್ರತಿಭಟನೆ (Protest) ನಡೆಸಿ ರಸ್ತೆ ತಡೆ ನಡೆಸಿದ ಕಾಂಗ್ರೆಸ್‌ ನಾಯಕರ (Congress Leaders) ವಿರುದ್ಧ ಕೇಸ್‌ ದಾಖಲಾಗಿತ್ತು. ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ  ಕೋರಿ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಮಾರ್ಚ್‌ 6 ರಂದು ಖುದ್ದು ಸಿದ್ದರಾಮಯ್ಯ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ ಪ್ರಕಟಿಸಿದೆ.

    ಎಲ್ಲಾ ಆರೋಪಿಗಳಿಗೆ 10 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌ ಮಾರ್ಚ್ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ.  ಇದನ್ನೂ ಓದಿ: ತಿಂಡಿ ಮಾಡದ್ದಕ್ಕೆ ತಾಯಿಯನ್ನು ಹತ್ಯೆಗೈದ ಕೇಸ್‍ಗೆ ಟ್ವಿಸ್ಟ್ – ಕೊಲೆ ಮಾಡಿದ್ದು ಮಗನಲ್ಲ, ತಂದೆಯಿಂದಲೇ ಕೃತ್ಯ

    ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪಿಎಸ್ ಐ ಕು.ಜಹಿದಾ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪಿಎಸ್‌ಐ ಆಗಿದ್ದರು. ಪ್ರಕರಣದಲ್ಲಿ ಅವರನ್ನು ಅನಗತ್ಯವಾಗಿ ಎಳೆದು ತಂದು ಪ್ರತಿವಾದಿಯನ್ನಾಗಿ ಕಾಂಗ್ರೆಸ್‌ ಮಾಡಿದ್ದಕ್ಕೆ ನ್ಯಾಯಾಲಯ 10 ಸಾವಿರ ರೂ. ದಂಡ ವಿಧಿಸಿದೆ.

    ಈ ವೇಳೆ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಲು ಸಿದ್ದರಾಮಯ್ಯ ಪರ ವಕೀಲರು ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ಕೋರ್ಟ್‌ ಜನಪ್ರತಿನಿಧಿಗಳಾದವರು ಕಾನೂನು ಪಾಲಿಸಿದರೆ ಜನರು ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಕಷ್ಟವಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕಟು ಪದಗಳನ್ನು ಬಳಸಿ ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಖ್ಯಾತ ಹಾಕಿ ಆಟಗಾರನಿಂದ ಅಪ್ರಾಪ್ತೆಯ ಮೇಲೆ ರೇಪ್‌!

    ಏನಿದು ಪ್ರಕರಣ?
    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ (KS Eshwarappa) ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು . ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಅಡಿ ಹೈಗೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

    ಈ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಜಾಮೀನು ರಹಿತ ಬಂಧನ ವಾರೆಂಟ್ (NBW) ಹಾಗೂ ವಿಶೇಷ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

     

  • ನೀಲಿ ಬಣ್ಣದ ಜೀನ್ಸ್‌ ಬ್ಯಾನ್‌, ಆತ್ಮಹತ್ಯೆಗೈದ್ರೆ ಕುಟುಂಬಕ್ಕೆ ಶಿಕ್ಷೆ – ಉತ್ತರ ಕೊರಿಯಾದಲ್ಲಿದೆ ವಿಚಿತ್ರ ಕಾನೂನುಗಳು

    ನೀಲಿ ಬಣ್ಣದ ಜೀನ್ಸ್‌ ಬ್ಯಾನ್‌, ಆತ್ಮಹತ್ಯೆಗೈದ್ರೆ ಕುಟುಂಬಕ್ಕೆ ಶಿಕ್ಷೆ – ಉತ್ತರ ಕೊರಿಯಾದಲ್ಲಿದೆ ವಿಚಿತ್ರ ಕಾನೂನುಗಳು

    ತ್ತರ ಕೊರಿಯಾ (North Korea) ಎಂದು ಕರೆಯಲ್ಪಡುವ ಡೆಮಾಕ್ರಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾ (DPRK) ಪೂರ್ವ ಏಷ್ಯಾದಲ್ಲಿ ನೆಲೆಗೊಂಡಿರೋ ವಿಶ್ವದಲ್ಲೇ ಅತ್ಯಂತ ದಮನಕಾರಿ ದೇಶ ಎಂಬ ಕುಖ್ಯಾತಿ ಹೊಂದಿದೆ. ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (Kim Jong Un) ಆಳ್ವಿಕೆ ನಡೆಸುತ್ತಿರೋ ಈ ನಿರಂಕುಶ ರಾಷ್ಟ್ರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಾ, ನಾಗರಿಕರ ಮೇಲೆ ವಿಚಿತ್ರ ಕಾನೂನುಗಳನ್ನು ಹೇರುತ್ತಿದೆ.

    ಉತ್ತರ ಕೊರಿಯಾದಲ್ಲಿ ಜನಜೀವನ ಎಷ್ಟೊಂದು ಕಷ್ಟಕರವಾಗಿದೆ ಎಂದರೆ ಅಲ್ಲಿ ಮಾಹಿತಿ, ಚಲನೆ, ವಾಕ್ ಸ್ವಾತಂತ್ರಕ್ಕೆ ನಿರ್ಬಂಧ ಹೇರುತ್ತಲೇ ಬಂದಿದೆ. ಅಲ್ಲಿನ ಸರ್ಕಾರ ಆರ್ಥಿಕತೆ, ಮಾಧ್ಯಮ, ರಾಜಕೀಯ ವ್ಯವಸ್ಥೆ ಸೇರಿದಂತೆ ಸಮಾಜದ ಪ್ರತಿಯೊಂದು ಕ್ಷೇತ್ರವನ್ನು ಅತ್ಯಂತ ಕ್ರೂರ ಹಾಗೂ ಕಟ್ಟುನಿಟ್ಟಿನಿಂದ ನಿಯಂತ್ರಿಸುತ್ತಿದೆ.

    ಸುಮಾರು 2.6 ಕೋಟಿ ಜನಸಂಖ್ಯೆಯಿರೋ ಈ ರಾಷ್ಟ್ರದಲ್ಲಿ ಪ್ರಪಂಚಲ್ಲೇ ಬೇರೆಲ್ಲೂ ಇಲ್ಲದಂತಹ ಹಲವು ವಿಚಿತ್ರ ಕಾನೂನುಗಳಿವೆ. ಮಾನವ ಹಕ್ಕುಗಳನ್ನು ನಿರ್ನಾಮ ಮಾಡಿರೋ ದೇಶದ ಜನತೆ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯ ಹಿಂದಿನಿಂದಲೂ ಕಳವಳ ವ್ಯಕ್ತಪಡಿಸಿದೆ. ಉತ್ತರ ಕೊರಿಯಾದಲ್ಲಿ ಜಾರಿಯಲ್ಲಿರೋ ಕೇಳರಿಯದ ವಿಚಿತ್ರ ಕಾನೂನುಗಳ ಪಟ್ಟಿ ಇಲ್ಲಿದೆ.

    ವಿದೇಶಿ ಹಾಡು, ಚಲನಚಿತ್ರಕ್ಕಿಲ್ಲ ಅನುಮತಿ:
    ಉತ್ತರ ಕೊರಿಯಾದಲ್ಲಿ ವಿದೇಶಿ ಹಾಡು ಕೇಳುವುದು ಅಥವಾ ವಿದೇಶಿ ಚಲನಚಿತ್ರಗಳನ್ನು ವೀಕ್ಷಿಸುವುದು ಕಾನೂನು ಬಾಹಿರವಾಗಿದೆ. ಇವೆರಡನ್ನೂ ಅಲ್ಲಿ ಅಪರಾಧ ಚಟುವಟಿಕೆ ಎಂದು ಪರಿಗಣಿಸಲಾಗುತ್ತದೆ. ಮುಖ್ಯವಾಗಿ ತನ್ನ ಶತ್ರು ರಾಷ್ಟ್ರಗಳಾದ ಅಮೆರಿಕ ಹಾಗೂ ದಕ್ಷಿಣ ಕೊರಿಯಾದ ಯಾವುದೇ ಹಾಡು ಅಥವಾ ಸಿನಿಮಾಗಳನ್ನು ವೀಕ್ಷಿಸಿದ್ದು ಗೊತ್ತಾದಲ್ಲಿ ಆ ವ್ಯಕ್ತಿಗೆ ಮರಣದಂಡನೆ ವಿಧಿಸಲಾಗುತ್ತದೆ. ಜೊತೆಗೆ ಪೋರ್ನ್ ವೀಕ್ಷಿಸುವುದು ಕೂಡಾ ಅಲ್ಲಿ ಮರಣದಂಡನೆಗೆ ಕಾರಣವಾಗಬಹುದು.

    2015ರಲ್ಲಿ ಕಿಮ್ ಜಾಂಗ್ ಉನ್ ದೇಶದಲ್ಲಿ ಕಾನೂನುಬಾಹಿರಗೊಳಿಸಿದ ಎಲ್ಲಾ ಕ್ಯಾಸೆಟ್ ಟೇಪ್‍ಗಳು ಹಾಗೂ ಸಿಡಿಗಳನ್ನು ನಾಶಮಾಡಲು ಆದೇಶಿಸಿದ್ದ. ಸದ್ಯ ಉತ್ತರ ಕೊರಿಯಾದಲ್ಲಿ ಕೇವಲ 3 ಚಾನಲ್‍ಗಳಿಗಷ್ಟೇ ಅನುಮತಿಯಿದೆ. ಅದರಲ್ಲಿ ಪ್ರಸಾರ ಮಾಡುವ ವಿಷಯಗಳನ್ನು ಸರ್ಕಾರವೇ ನಿಯಂತ್ರಿಸುತ್ತದೆ. ಹಾಗೂ ಅಲ್ಲಿ ಯಾವುದೇ ಸರ್ಕಾರ ವಿರೋಧಿ ವಿಷಯಗಳನ್ನು ಪ್ರಸಾರ ಮಾಡುವಂತಿಲ್ಲ. ತನ್ನ ಸರ್ವಾಧಿಕಾರಿ ಅತ್ಯಂತ ಶ್ರೇಷ್ಠ ಎಂಬುದನ್ನಷ್ಟೇ ಅಲ್ಲಿ ಪ್ರದರ್ಶಿಸಲು ಅನುಮತಿಯಿದೆ.

    ಅಂತಾರಾಷ್ಟ್ರೀಯ ಕರೆಗಳು ಅಪರಾಧ:
    ಅಂತಾರಾಷ್ಟ್ರೀಯ ಕರೆಗಳನ್ನು ಮಾಡುವುದನ್ನು ಉತ್ತರ ಕೊರಿಯಾದಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ. ಸ್ಥಳೀಯ ನಾಗರಿಕರು ಮಾತ್ರವಲ್ಲ, ದೇಶದಲ್ಲಿರುವ ವಿದೇಶಿಗರು ಕೂಡಾ ಅಂತಾರಾಷ್ಟ್ರೀಯ ಕರೆ ಮಾಡಲು ಸಾಧ್ಯವಿಲ್ಲ. ಅಲ್ಲಿನ ಎಲ್ಲಾ ಸ್ಥಳೀಯ ಸಿಮ್ ಕಾರ್ಡ್‍ಗಳು ರಾಷ್ಟ್ರದೊಳಗೆ ಮಾತ್ರವೇ ಕರೆ ಮಾಡಲು ಅನುಮತಿಸುತ್ತದೆ. 2007ರಲ್ಲಿ ಕಾರ್ಖಾನೆಯೊಂದರ ನೆಲಮಾಳಿಗೆಯಲ್ಲಿ ಅಕ್ರಮವಾಗಿ ಸ್ಥಾಪಿಸಿದ 13 ಫೋನ್‍ಗಳಲ್ಲಿ ಅಂತಾರಾಷ್ಟ್ರೀಯ ಕರೆಗಳನ್ನು ಮಾಡಿದ ಆರೋಪದ ಮೇಲೆ ಕಾರ್ಖಾನೆಯ ಮಾಲೀಕನನ್ನು ಒಂದೂವರೆ ಲಕ್ಷ ಜನರ ಸಮ್ಮುಖದಲ್ಲಿ ಕ್ರೂರವಾಗಿ ಹತ್ಯೆ ಮಾಡಲಾಗಿತ್ತು.

    ನೀಲಿ ಬಣ್ಣದ ಜೀನ್ಸ್ ಬ್ಯಾನ್:
    ಉತ್ತರ ಕೊರಿಯಾದಲ್ಲಿ ಜನರು ಜೀನ್ಸ್ ಧರಿಸುವುದನ್ನು ಕಾಣೋದೇ ವಿರಳ. ಏಕೆಂದರೆ ಅಲ್ಲಿ ನೀಲಿ ಬಣ್ಣದ ಜೀನ್ಸ್ ಅನ್ನು ನಿಷೇಧಿಸಲಾಗಿದೆ. ನೀಲಿ ಬಣ್ಣದ ಜೀನ್ಸ್ ತನ್ನ ದೇಶದ ಶತ್ರು ಅಮೆರಿಕದ ಪ್ರತೀಕ ಎಂದು ಭಾವಿಸಲಾಗುತ್ತದೆ. ಅಲ್ಲಿ ಕಪ್ಪು ಬಣ್ಣದ ಜೀನ್ಸ್ ಅನ್ನು ಧರಿಸಲು ಮಾತ್ರವೇ ಅವಕಾಶವಿದೆ. ಆದರೆ ಅದು ತನ್ನ ಬಣ್ಣ ಮಾಸದಂತೆ ನಿಭಾಯಿಸಲು ಸಾಧ್ಯವಿರುವವರು ಮಾತ್ರವೇ ಧರಿಸಬಹುದು.

    ಮೀಟಿಂಗ್ ವೇಳೆ ನಿದ್ರೆ ಮಾಡೋದು ಅಪರಾಧ:
    ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನೊಂದಿಗಿನ ಸಭೆಯಲ್ಲಿ ನಿದ್ರೆ ಮಾಡೋದು ಅಥವಾ ತೂಕಡಿಸೋದು ಅಲ್ಲಿ ದೊಡ್ಡ ಅಪರಾಧ ಎಂದು ಪರಿಗಣಿಸಲಾಗುತ್ತದೆ. ಇದು ಮರಣದಂಡನೆಗೆ ಕಾರಣವಾಗಬಹುದಾದ ಅಪರಾಧವಾಗಿದೆ. 2015ರಲ್ಲಿ ಉತ್ತರ ಕೊರಿಯಾದ ರಕ್ಷಣಾ ಸಚಿವ ಹ್ಯೋನ್ ಯೋಂಗ್ ಚೋಲ್ ಸರ್ವಾಧಿಕಾರಿ ಕಿಮ್ ಜಾಂಗ್ ಉನ್‍ನೊಂದಿಗಿನ ಸಭೆ ವೇಳೆ ಪ್ರಜ್ಞಾಹೀನರಾದ ಕಾರಣಕ್ಕೆ ಅವರನ್ನು 100 ಜನರ ಸಮ್ಮುಖದಲ್ಲಿ ಭೀಕರವಾಗಿ ಕೊಲ್ಲಲಾಗಿತ್ತು.

    ಇಂಟೆರ್ನೆಟ್ ನಿರ್ಬಂಧ:
    ಉತ್ತರ ಕೊರಿಯಾದಲ್ಲಿ ‘ಕ್ವಾಂಗ್‍ಮಿಯಂಗ್’ ಹೆಸರಿನ ಏಕೈಕ ಇಂಟರ್ನೆಟ್ ಚಾಲಿತ ಪೋರ್ಟಲ್ ಇದೆ. ಇಲ್ಲಿ ಎಲ್ಲಾ ವಿದೇಶಿ ವೆಬ್‍ಸೈಟ್‍ಗಳನ್ನು ನಿರ್ಬಂಧಿಸಲಾಗಿದ್ದು, ಕೇವಲ 28 ವೆಬ್‍ಸೈಟ್‍ಗಳನ್ನು ಸರ್ಕಾರದ ಮೇಲ್ವಿಚಾರಣೆಯಲ್ಲಿ ಪ್ರವೇಶಿಸಬಹುದು. ಆದರೂ ಇದರ ಬಳಕೆ ದೇಶದ ಪ್ರತಿಯೊಬ್ಬ ಪ್ರಜೆಗೆ ಸಾಧ್ಯವಿಲ್ಲ. ರಾಜಕೀಯ ನಾಯಕರು ಮತ್ತು ಅವರ ಕುಟುಂಬಗಳು, ಗಣ್ಯ ಶಾಲೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಮಿಲಿಟರಿಯ ಸೈಬರ್ ವಾರ್ಫೇರ್ ವಿಭಾಗ ಮಾತ್ರವೇ ಇಂಟರ್ನೆಟ್ ಬಳಕೆಗೆ ಅನುಮತಿಯಿದೆ. ಸಮಾನ್ಯ ಜನರು ತಮ್ಮ ಮೊಬೈಲ್‍ಗಳ ಮೂಲಕವೂ ಇಂಟರ್ನೆಟ್ ಪ್ರವೇಶಿಸಲು ಸಾಧ್ಯವಿಲ್ಲ.

    ಬೈಬಲ್ ಬ್ಯಾನ್:
    ಉತ್ತರ ಕೊರಿಯಾದಲ್ಲಿ ಬೈಬಲ್ ಅನ್ನು ನಿಷೇಧಿಸಲಾಗಿದೆ. ಅಲ್ಲಿ ಬೈಬಲ್ ಅನ್ನು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರತಿನಿಧಿಯಾಗಿ ನೋಡಲಾಗುತ್ತದೆ. ಮಾತ್ರವಲ್ಲದೇ ಅದು ಜನರನ್ನು ಪರಿವರ್ತಿಸುತ್ತದೆ ಎಂಬ ಕಾರಣಕ್ಕೆ ದೇಶಾದ್ಯಂತ ಬೈಬಲ್ ಇಟ್ಟುಕೊಳ್ಳುವುದನ್ನೇ ಬ್ಯಾನ್ ಮಾಡಲಾಗಿದೆ. ಈ ಹಿಂದೆ ಉತ್ತರ ಕೊರಿಯಾದಲ್ಲಿ ಬೈಬಲ್ ಅನ್ನು ಹಂಚುತ್ತಿದ್ದ ಕ್ರೈಸ್ತ ಮಹಿಳೆಯನ್ನು ಕೊಲ್ಲಲಾಗಿತ್ತು. 2014ರಲ್ಲಿ ಅಮೆರಿಕದ ಪ್ರವಾಸಿಯೊಬ್ಬರು ಬೈಬಲ್ ಅನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಕ್ಕೆ 5 ತಿಂಗಳ ಕಾಲ ಜೈಲಿನಲ್ಲಿ ಇಡಲಾಗಿತ್ತು.

    ಬೇಕಿನಿಸಿದಂತೆ ಹೇರ್ ಕಟ್ ಮಾಡಿಸಿಕೊಳ್ಳುವಂತಿಲ್ಲ:
    ಉತ್ತರ ಕೊರಿಯಾದಲ್ಲಿ ಎಲ್ಲಾ ಪುರುಷರು ಹಾಗೂ ಮಹಿಳೆಯರು ಸರ್ಕಾರ ಅಧಿಕೃತಗೊಳಿಸಿರುವ 26 ರೀತಿಯ ಕೇಶವಿನ್ಯಾಸಗಳನ್ನಷ್ಟೇ ಮಾಡಿಕೊಳ್ಳಬಹುದು. ಈ 26 ರೀತಿಯ ಕೇಶವಿನ್ಯಾಸಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕೇಶವಿನ್ಯಾಸಗಳನ್ನು ನಿಷೇಧಿಸಲಾಗಿದೆ. ಕೆಲ ವರ್ಷಗಳ ಹಿಂದೆ ಜನಪ್ರಿಯವಾಗಿದ್ದ ಸ್ಪೈಕ್ಸ್ ಹೇರ್ ಸ್ಟೈಲ್ ಅನ್ನು ಉತ್ತರ ಕೊರಿಯಾದಲ್ಲಿ ಪ್ರತಿಭಟನೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ದೇಶದಲ್ಲಿ ಅನುಮೋದಿಸಿರುವ 26 ಕೇಶವಿನ್ಯಾಸಗಳ ನಿಯಮವನ್ನು ಕಿಮ್ ಜಾಂಗ್ ಉನ್ 2012ರಲ್ಲಿ ಪರಿಚಯಿಸಿದ್ದ. ಆದರೆ ಆತ ತನ್ನ ಹೇರ್ ಸ್ಟೈಲ್ ಅನ್ನು ವಿಶಿಷ್ಟವಾಗಿರಿಸಿಕೊಳ್ಳುವ ಸಲುವಾಗಿ 26 ಕೇಶವಿನ್ಯಾಸಗಳ ಪಟ್ಟಿಯಲ್ಲಿ ಅದನ್ನು ಸೇರಿಸಿಲ್ಲ. ಎಂದರೆ ಉತ್ತರ ಕೊರಿಯಾದ ಯಾವೊಬ್ಬ ಪ್ರಜೆಯೂ ಕಿಮ್ ಜಾಂಗ್ ಉನ್‍ನಂತೆ ಹೇರ್ ಸ್ಟೈಲ್ ಮಾಡುವಂತಿಲ್ಲ.

    ಸರ್ವಾಧಿಕಾರಿ ಕುಟುಂಬಕ್ಕೆ ಅವಮಾನ ಮಾಡಿದ್ರೆ ಧರ್ಮ ನಿಂದನೆ:
    ಕಿಮ್ ಜಾಂಗ್ ಉನ್ ಆಳ್ವಿಕೆಯ ಅಡಿಯಲ್ಲಿ ಪ್ರತಿ ಉತ್ತರ ಕೊರಿಯನ್ನರು ಆತನಿಗೆ ಹಾಗೂ ಆತನ ಕುಟುಂಬ ಮತ್ತು ಸರ್ಕಾರಕ್ಕೆ ನಿಷ್ಠೆ ಮತ್ತು ವಿಧೇಯತೆಯನ್ನು ತೋರಬೇಕು. ಇದನ್ನು ಉಲ್ಲಂಘಿಸಿ ಯಾವುದೇ ರೀತಿಯಲ್ಲಿ ಅವಮಾನ ಮಾಡಿದರೂ ಆ ಅಪರಾಧಿಯನ್ನು ಕಠಿಣವಾಗಿ ಶಿಕ್ಷಿಸಲಾಗುತ್ತದೆ.

    ದೇಶ ತೊರೆಯಲು ಅವಕಾಶವಿಲ್ಲ:
    ಇಷ್ಟೊಂದು ಕಠಿಣ ಕಾನೂನುಗಳಿದ್ದರೂ ಉತ್ತರ ಕೊರಿಯನ್ನು ಯಾಕೆ ಅವೆಲ್ಲದರಿಂದ ತಪ್ಪಿಸಿಕೊಂಡು ಹೊರಬರುವುದಿಲ್ಲ ಎಂದು ವಿದೇಶಿಗರು ಆಶ್ಚರ್ಯಪಡಬಹುದು. ಆದರೆ ಇದು ಅಲ್ಲಿನ ಜನರಿಗೆ ಸಾಧ್ಯವಾಗುವುದೇ ತೀರಾ ವಿರಳ. ಉತ್ತರ ಕೊರಿಯಾದ ನಾಗರಿಕರಿಗೆ ದೇಶವನ್ನು ತೊರೆಯಲು ಅನುಮತಿಸಲಾಗುವುದಿಲ್ಲ. ಅಧಿಕೃತ ದಾಖಲೆಗಳಿಲ್ಲದೆ ಯಾರಾದರೂ ಗಡಿ ದಾಟಲು ಪ್ರಯತ್ನಿಸಿದರೆ ಅವರನ್ನು ಗಡಿ ಕಾವಲುಗಾರರು ಗುಂಡಿಕ್ಕಿ ಕೊಲ್ಲುತ್ತಾರೆ. ಯಾರಾದರೂ ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸಿದರೆ ಅವರಿಗೆ ಮರಣ ದಂಡನೆಯೇ ಮೊದಲ ಶಿಕ್ಷೆಯಾಗುತ್ತದೆ.

    ಉತ್ತರ ಕೊರಿಯಾದಲ್ಲಿದೆ ತನ್ನದೇ ಕ್ಯಾಲೆಂಡರ್‌:
    ಇಡೀ ಪ್ರಪಂಚದಲ್ಲಿ ಈಗ 2023ನೇ ಇಸವಿಯಲ್ಲಿದ್ದರೆ, ಉತ್ತರ ಕೊರಿಯಾದಲ್ಲಿ ಮಾತ್ರ ಪ್ರಸ್ತುತ 112ನೇ ಇಸವಿಯಲ್ಲಿದೆ. ಹೌದು, ಉತ್ತರ ಕೊರಿಯಾದಲ್ಲಿ ವಿಭಿನ್ನವಾದ ಕ್ಯಾಲೆಂಡರ್ ಚಾಲ್ತಿಯಲ್ಲಿದೆ. ‘ಜೂಚೆ’ ಹೆಸರಿನ ಈ ಕ್ಯಾಲೆಂಡರ್ ದೇಶದ ಕ್ರಾಂತಿಕಾರಿ ನಾಯಕ ಕಿಮ್ II ಸುಂಗ್‍ನ ಜನ್ಮದಿನವಾಗಿರುವ 1912ರ ಏಪ್ರಿಲ್ 15ರಿಂದ ಪ್ರಾರಂಭವಾಗುತ್ತದೆ.

    ಜೈಲು ಶಿಕ್ಷೆ:
    ಉತ್ತರ ಕೊರಿಯಾದಲ್ಲಿ ಪ್ರಸ್ತುತ ಸುಮಾರು 2 ಲಕ್ಷ ನಾಗರಿಕರು ಜೈಲಿನಲ್ಲಿದ್ದಾರೆ ಎನ್ನಲಾಗಿದೆ. ಒಬ್ಬ ವ್ಯಕ್ತಿ ಯಾವುದೇ ಅಪರಾಧವನ್ನು ಎಸಗಿದರೆ ಆತನಿಗೆ ಮಾತ್ರವಲ್ಲದೇ ಆತನ 3 ತಲೆಮಾರು ವರೆಗೆ ಶಿಕ್ಷೆ ವಿಧಿಸಲಾಗುತ್ತದೆ. ಉದಾಹರಣೆಗೆ ಒಬ್ಬ ವ್ಯಕ್ತಿ ಅಪರಾಧಿಯಾದರೆ, ಆತನೊಂದಿಗೆ ಆತನ ತಂದೆ, ತಾಯಿ, ಅಜ್ಜ, ಅಜ್ಜಿಯೂ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಒಂದು ವೇಳೆ ಒಬ್ಬ ಕೈದಿ ಜೈಲಿನಿಂದ ತಪ್ಪಿಸಿಕೊಂಡ ಎಂದಾದರೆ ಆತನ ಇಡೀ ಕುಟುಂಬವನ್ನು ಕೊಲ್ಲಲಾಗುತ್ತದೆ.

    ಆತ್ಮಹತ್ಯೆ ಅಲ್ಲಿ ಅಪರಾಧ:
    ಉತ್ತರ ಕೊರಿಯಾದ ಯಾವ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧವಾಗಿದೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆತನಿಗೆ ಶಿಕ್ಷೆ ಹೇಗೆ ಎಂಬ ಗೊಂದಲ ಮೂಡಬಹುದು. ಅಲ್ಲಿ ಆತ್ಮಹತ್ಯೆ ಮಾಡಿಕೊಂಡವನ ಕುಟುಂಬಕ್ಕೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

    ವಿದ್ಯುತ್ ಕಡಿತ:
    ಉತ್ತರ ಕೊರಿಯಾದಲ್ಲಿ ಇಂಧನ ಕೊರತೆಯ ಹಿನ್ನೆಲೆ ಪ್ರತಿ ರಾತ್ರಿಯೂ ಕತ್ತಲೆಯಲ್ಲೇ ಕಳೆಯಬೇಕಾಗಿದೆ. ಏಕೆಂದರೆ ಇಡೀ ದೇಶದಲ್ಲಿ ರಾತ್ರಿಯಿಡೀ ವಿದ್ಯುತ್ ಕಡಿತವಾಗುತ್ತದೆ. ವಿದ್ಯುತ್ ಅನ್ನು ಹೆಚ್ಚು ಬಳಸುವ ಮೈಕ್ರೋವೇವ್ ಅನ್ನು ಬಳಸುವುದು ಅಲ್ಲಿ ಕಾನೂನು ಬಾಹಿರವಾಗಿದೆ. ಇದನ್ನು ಬಳಸಲು ಅಲ್ಲಿ ಅನುಮತಿಯನ್ನೂ ಪಡೆಯಬೇಕು.

    ಕಡ್ಡಾಯ ಮಿಲಿಟರಿ ಸೇವೆ:
    ಉತ್ತರ ಕೊರಿಯಾದಲ್ಲಿ ಪ್ರತಿ ನಾಗರಿಕನಿಗೂ ಮಿಲಿಟರಿ ಸೇವೆ ಕಡ್ಡಾಯವಾಗಿದೆ. ಪುರುಷರು 10 ವರ್ಷ ಹಾಗೂ ಮಹಿಳೆಯರು 7 ವರ್ಷ ಕಡ್ಡಾಯವಾಗಿ ಮಿಲಿಟರಿ ಸೇವೆಯನ್ನು ಸಲ್ಲಿಸಬೇಕಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾನೂನು ವಿವಿಗೆ ಅಹಿಂಸಾ ಚೇತನ್ ಅತಿಥಿ : ಗೋ ಬ್ಯಾಕ್ ಎಚ್ಚರಿಕೆ ಕೊಟ್ಟ ಎಬಿವಿಪಿ

    ಕಾನೂನು ವಿವಿಗೆ ಅಹಿಂಸಾ ಚೇತನ್ ಅತಿಥಿ : ಗೋ ಬ್ಯಾಕ್ ಎಚ್ಚರಿಕೆ ಕೊಟ್ಟ ಎಬಿವಿಪಿ

    ಹುಬ್ಬಳ್ಳಿಯ (Hubli) ಕಾನೂನು ವಿಶ್ವವಿದ್ಯಾಲಯವು ಜೂನ್ 17 ರಂದು ಯುವಜನೋತ್ಸವವನ್ನು ಆಯೋಜನೆ ಮಾಡಿದೆ. ಈ ಕಾರ್ಯಕ್ರಮಕ್ಕೆ ನಟ, ಹೋರಾಟಗಾರ ಅಹಿಂಸಾ ಚೇತನ್ (Chetan Ahimsa) ಅವರನ್ನು ಅತಿಥಿಯನ್ನಾಗಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಕಾನೂನು (Law) ವಿಶ್ವವಿದ್ಯಾಲಯದ ಕುಲಪತಿ ಸಿ. ಬಸವರಾಜ ಅವರು ಇದರ ಅಧ್ಯಕ್ಷತೆಯನ್ನು ವಹಿಸಿದ್ದರೆ, ಚೇತನ್ ಮುಖ್ಯ ಅತಿಥಿ. ಇದನ್ನು ಪ್ರಶ್ನಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ‘ಗೋ ಬ್ಯಾಕ್ ಚೇತನ್’ ಚಳವಳಿ (Protest) ಆರಂಭಿಸುವುದಾಗಿ ಎಚ್ಚರಿಸಿದ್ದಾರೆ.

    ಕಾನೂನು ಗೌರವ ಕೊಡದೇ ಇರುವಂತಹ ವ್ಯಕ್ತಿಯನ್ನು ಕಾನೂನು ವಿಶ್ವ ವಿದ್ಯಾಲಯಕ್ಕೆ (University) ಅತಿಥಿಯಾಗಿ ಕರೆಸುವುದು ಸೂಕ್ತವಲ್ಲ. ಕೂಡಲೇ ಅವರನ್ನು ಅತಿಥಿ ಯಾದಿಯಿಂದ ಕೈಬಿಡಬೇಕು. ಬಿಡದೇ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಕುಲಪತಿಗೆ ಎಬಿವಿಪಿ ಮನವಿ ಸಲ್ಲಿಸಿದೆ. ಒಂದು ವೇಳೆ ಚೇತನ್ ಬಂದರೆ ‘ಗೋ ಬ್ಯಾಕ್’ ಚಳವಳಿಯನ್ನು ಮಾಡುತ್ತೇವೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:ಕನಕದಾಸನಾಗಿ ಕಂಗೊಳಿಸಲಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

    ಈ ಕುರಿತಂತೆ ನಟ ಚೇತನ್ ತಮ್ಮ ಪ್ರತಿಕ್ರಿಯೆಯನ್ನು ಫೇಸ್ ಬುಕ್ ನಲ್ಲಿ ಬರೆದದ್ದು, ಸಮಾನತವಾದಿಗಳಾದ ನಮ್ಮನ್ನು ವಿಚಾರಗಳ ಯುದ್ಧ ಭೂಮಿಯಲ್ಲಿ  ಸಂಘ ಪರಿವಾರದವರಿಗೆ ಸೋಲಿಸಲು ಎಂದಿಗೂ ಸಾಧ್ಯವಿಲ್ಲದ ಕಾರಣ, ಅವರು ನಮ್ಮ ಧ್ವನಿಯನ್ನು ಮೌನಗೊಳಿಸಲು ಪ್ರಯತ್ನಿಸುತ್ತಾರೆ’ ಎಂದು ಬರೆದುಕೊಂಡಿದ್ದಾರೆ.

    ಎಬಿವಿಪಿ ಮನವಿಯನ್ನು ವಿಶ್ವವಿದ್ಯಾಲಯ ಸ್ವೀಕರಿಸಿದ್ದು, ಚೇತನ್ ಅವರನ್ನು ಕಾರ್ಯಕ್ರಮದಿಂದ ಕೈ ಬಿಡುತ್ತಾರಾ ಅಥವಾ ಚೇತನ್ ಅವರಿಗೆ ಮಣೆ ಹಾಕುತ್ತಾರಾ ಎಂದು ಕಾದ ನೋಡಬೇಕು. ಆದರೆ, ಈವರೆಗೂ ಈ ಕುರಿತಂತೆ ಕುಲಪತಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ; 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

    ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ; 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

    ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (J.C.Madhuswamy) ಲೋಕಾರ್ಪಣೆ ಮಾಡಿದರು.

    ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ರಾಜಭಾಷಾ (ವಿಧಾಯೀ) ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯದಿಂದ ಈ ಅಧಿನಿಯಮಗಳ ಕನ್ನಡ ಆವೃತ್ತಿ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಟಿಕೆಟ್‌ – ಡಿಕೆಶಿ ಘೋಷಣೆ

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿನ ಅನುಷ್ಠಾನ ಮತ್ತು ಪಾಲನೆ ಮಾಡಬೇಕಾದರೇ ಅದರ ಅರಿವು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸಿ ಅರ್ಥೈಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಕನ್ನಡಕ್ಕೆ ಭಾಷಾಂತರಗೊಳಿಸಲಾಗಿದೆ ಎಂದರು.

    ಜನಸಾಮಾನ್ಯರಿಗೆ ತಮ್ಮ ಸ್ಥಳೀಯ ಭಾಷೆಗಳಲ್ಲಿ ಕಾನೂನುಗಳನ್ನು ತಿಳಿದುಕೊಳ್ಳಲು ಹಾಗೂ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ ಸರ್ಕಾರದ ಕಚೇರಿಗಳಲ್ಲಿ ಕನ್ನಡದ ಬಳಕೆಯನ್ನು ಸುಗಮಗೊಳಿಸಲು ಈ ಅಧಿನಿಯಮಗಳು ತುಂಬಾ ಸಹಕಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿನಿಯಮಗಳನ್ನು ಭಾಷಾಂತರಿಸುವ ಕೆಲಸ ವ್ಯಾಪಕವಾಗಿ ಆಗಬೇಕಿದೆ ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ ಅನ್ನೋದಕ್ಕೆ ಅಧಿಕಾರಿಗಳ ಬೀದಿ ರಂಪ ಸಾಕ್ಷಿ – ಸುರ್ಜೆವಾಲಾ

    ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಭಾಷಾಂತರಿಸುವುದಕ್ಕೆ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗಿದ್ದು, ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ಜನರು ಕಾಯ್ದೆ, ಕಾನೂನುಗಳನ್ನು ಹೆಚ್ಚೆಚ್ಚು ತಿಳಿದುಕೊಂಡಲ್ಲಿ ಅವುಗಳ ಪರಿಣಾಮಕಾರಿ ಅನುಷ್ಠಾನ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

    ಕರ್ನಾಟಕದ ನ್ಯಾಯಾಲಯಗಳಲ್ಲಿ ಕನ್ನಡದ ತೀರ್ಪುಗಳು ಹೊರಬರಲು ಹಾಗೂ ಆಡಳಿತ ವ್ಯವಹಾರಗಳಲ್ಲಿ ಮತ್ತು ಮೊಕದ್ದಮೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲೂ ಕೂಡ ಕನ್ನಡದ ಬಳಕೆ ಸಮರ್ಪಕವಾಗಿ ಆಗಬೇಕಾಗಿದೆ ಎಂದರು. ಇದನ್ನೂ ಓದಿ: ಸೈಬರ್ ಪ್ರಕರಣ ತಡೆಯಲು ಕಠಿಣ ಕ್ರಮ: ಆರಗ ಜ್ಞಾನೇಂದ್ರ

    ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ರಾಜಭಾಷಾ(ವಿಧಾಯೀ) ಆಯೋಗದ ಅಧ್ಯಕ್ಷರಾದ ಜಿ.ಶ್ರೀಧರ್ ಮಾತನಾಡಿ, ರಾಜಭಾಷಾ ಆಯೋಗವು ಇಲ್ಲಿಯವರೆಗೆ 371 ಕೇಂದ್ರ ಮತ್ತು 219 ರಾಜ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ಪ್ರಕಟಿಸಿದೆ. ಭಾರತ ಸಂವಿಧಾನವನ್ನು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸ್ಥಳೀಯ ಭಾಷೆಯಲ್ಲಿ ಭಾಷಾಂತರಿಸಿ ಜನಸಾಮಾನ್ಯರಿಗೆ ತಲುಪಿಸಿದ ಕೀರ್ತಿ ನಮ್ಮ ಆಯೋಗಕ್ಕೆ ಸಲ್ಲುತ್ತದೆ ಎಂದು ಹೇಳಿದರು.

    ದೇಶದ ಪ್ರಮುಖ ಕಾನೂನುಗಳಾದ ಭಾರತ ದಂಡ ಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆ ಹಾಗೂ ಭಾರತ ಸಾಕ್ಷ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ದ್ವಿಭಾಷೆಯಲ್ಲಿ ಪ್ರಕಟಿಸಲಾಗಿದೆ. ಪರಿಷ್ಕೃತ ಇಂಗ್ಲಿಷ್ ಕನ್ನಡ ಕಾನೂನು ಪದಕೋಶ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ತರಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕೆಲಸ ಎಲ್ಲ ರಾಜ್ಯಗಳಲ್ಲಾಗಿದ್ದರೆ ಸ್ಥಳೀಯ ಭಾಷೆಯಲ್ಲಿ ನ್ಯಾಯಾಲಯ ತೀರ್ಪುಗಳನ್ನು ಪ್ರಕಟಿಸಲು ಸಹಾಯಕವಾಗುತ್ತದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದನ್ನು ಇದೇ ಸಂದರ್ಭದಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ ನಾರಾಯಣ, ಶಾಸಕ ದಿನಕರಶೆಟ್ಟಿ, ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ, ರಾಜಭಾಷಾ(ವಿಧಾಯೀ) ಆಯೋಗದ ಸದಸ್ಯರು ಇದ್ದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಯೋತ್ಪಾದನೆಯನ್ನು ಯಾವುದೇ ಧರ್ಮಕ್ಕೆ ಹೋಲಿಸೋದು ಬೇಡ – ಅಮಿತ್ ಶಾ

    ಭಯೋತ್ಪಾದನೆಯನ್ನು ಯಾವುದೇ ಧರ್ಮಕ್ಕೆ ಹೋಲಿಸೋದು ಬೇಡ – ಅಮಿತ್ ಶಾ

    ನವದೆಹಲಿ: ಭಯೋತ್ಪಾದನೆಯನ್ನು ಅಥವಾ ಭಯೋತ್ಪಾದನೆಯ (Terrorism) ಬೆದರಿಕೆಗಳನ್ನು ಯಾವುದೇ ಧರ್ಮ (Religion) ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ.

    ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಭಯೋತ್ಪಾದನೆ (Terrorism) ಚಟುವಟಿಕೆಗಳಿಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತಲೂ ಅಪಾಯಕಾರಿ. ಹಾಗಾಗಿ ಭಯೋತ್ಪಾದನಾ ಚಟುವಟಿಕೆಗಳನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಜನಾಂಗದ ಗುಂಪಿಗೆ ಹೋಲಿಸಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದೋರ್‌ಗೆ ಬಂದ ತಕ್ಷಣ ರಾಹುಲ್ ಗಾಂಧಿಯನ್ನು ಬಾಂಬ್ ಸ್ಫೋಟಿಸಿ ಕೊಲ್ಲುವ ಬೆದರಿಕೆ

    ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ. ಅಲ್ಲದೆ, ಹಿಂಚಾರ ನಡೆಸಲು, ಯುವಸಮೂಹವನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳೋದು ಹಾಗೂ ತಮ್ಮ ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳಲು ಭಯೋತ್ಪಾದಕರು ನಿರಂತರವಾಗಿ ಹೊಸ – ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ತಮ್ಮ ಗುರುತನ್ನು ಮರೆಮಾಚಲು ಡಾರ್ಕ್‌ನೆಟ್‌ (DrakNet) ಬಳಸುತ್ತಿದ್ದಾರೆ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ

    ಭಯೋತ್ಪಾದನಾ ಬೆದರಿಕೆಗಳು ವಿಶ್ವದ ಶಾಂತಿಗೆ ಭಂಗ ತರುತ್ತವೆ ಅನ್ನೋದ್ರಲ್ಲಿ ಯಾವುದೇ ಸಂದೇಹವಿಲ್ಲ. ಇಂತಹ ಚಟುವಟಿಕೆಗಳ ನಿಧಿಗೆ ಹಣಕಾಸು ಹರಿದು ಬರೋದ್ರಿಂದಲೇ ಚಟುವಟಿಕೆ ಪೋಷಣೆಯಾಗುತ್ತಿದೆ. ಈ ಬೆಳವಣಿಗೆಯು ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ಎಚ್ಚರಿಸಿದ್ದಾರೆ.

    ಭಯೋತ್ಪಾದನೆ ವಿರುದ್ಧ ಹೋರಾಡುವ ನಮ್ಮ ಸಾಮೂಹಿಕ ಸಂಕಲ್ಪವನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಕೆಲವು ದೇಶಗಳು ನಡೆಸುತ್ತಿವೆ. ಇದರ ಹೊರತಾಗಿಯೂ ಭಾರತ ಭಯೋತ್ಪಾದನೆ ನಿಗ್ರಹಿಸಲು ಆರ್ಥಿಕ ವ್ಯವಸ್ಥೆ ಹಾಗೂ ಕಾನೂನು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸಿದೆ ಎಂದು ಶ್ಲಾಘಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]